Site icon Vistara News

Bike Accident | ಓವರ್ ಟೇಕ್ ಮಾಡುವಾಗ ಲಾರಿಗೆ ಡಿಕ್ಕಿ ಹೊಡೆದು ಇಬ್ಬರು ಬೈಕ್‌ ಸವಾರರ ಸಾವು

Bike Accident

ಉಡುಪಿ: ಓವರ್ ಟೇಕ್ ಮಾಡುವಾಗ ಲಾರಿ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ (Bike Accident) ಘಟನೆ ಬ್ರಹ್ಮಾವರ ಮಂಜುನಾಥ ಪೆಟ್ರೋಲ್ ಬಂಕ್ ಬಳಿಯ ರಾಷ್ಟ್ರೀಯ ಹೆದ್ದಾರಿ-66ರ ಮಂಗಳವಾರ ರಾತ್ರಿ ನಡೆದಿದೆ.

ಸಾಲಿಗ್ರಾಮ ಸಮೀಪದ ನಿವಾಸಿಗಳಾದ ಎಂ.ಜಿ.ಸಮಿತ್ ಕುಮಾರ್ (19) ಮತ್ತು ವಾಗೀಶ್ ಕೆದ್ಲಾಯ(19) ಮೃತರು. ಮೃತ ವಿದ್ಯಾರ್ಥಿಗಳು ಉಡುಪಿಯ ಖಾಸಗಿ ಸಂಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮಂಗಳವಾರ ಸಂಜೆ ಕಾಲೇಜು ಮುಗಿಸಿ ಉಡುಪಿಯಿಂದ ಬೈಕ್‌ನಲ್ಲಿ ವಾಪಾಸ್ಸಾಗುತ್ತಿದ್ದ ವೇಳೆ ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ಕಳೆದುಕೊಂಡು ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Couple drowned | ಕುರಿಗಳ ಮೈ ತೊಳೆಯಲು ಕೆರೆಗೆ ಇಳಿದ ಯುವ ದಂಪತಿ ನೀರಿಗೆ ಬಿದ್ದು ಮೃತ್ಯು

Exit mobile version