Site icon Vistara News

Bike Accident | ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಬೈಕ್‌ ಸವಾರರಿಬ್ಬರ ದುರ್ಮರಣ

Bike Accident

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಣ್ಣೂರು ಬಳಿ, ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಬೈಕ್‌ ಸವಾರರಿಬ್ಬರು ಮೃತಪಟ್ಟಿರುವ ಘಟನೆ (Bike Accident) ಬುಧವಾರ ರಾತ್ರಿ ನಡೆದಿದೆ.

ಗೌತಮಪುರ ನಿವಾಸಿಗಳಾದ ಪ್ರದೀಪ್ (25), ದಯಾನಂದ (30) ಮೃತರು. ಆನಂದಪುರದಿಂದ ಸಂತೆಯಿಂದ ತರಕಾರಿ ತೆಗೆದುಕೊಂಡು ಯುವಕರು ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಸೆರೆ
ಶಿವಮೊಗ್ಗ: ಭದ್ರಾವತಿಯ ಗೋಂಧಿ ಚಾನಲ್ ಏರಿಯಾಲ್ಲಿ ಪೊಲೀಸರು ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಡ್ಯಾನಿ ಅಲಿಯಾಸ್ ಸ್ನೇಕ್ ಡ್ಯಾನಿ, ಯಾಸೀನ್ ಸೇರಿ ಮೂವರನ್ನು ಬಂಧಿಸಲಾಗಿದೆ. ಭದ್ರಾವತಿಯ ಹೊಸಮನೆ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳಿಂದ 540 ಗ್ರಾಂ ಗಾಂಜಾ ಹಾಗೂ ಸಾವಿರಾರು ರೂಪಾಯಿ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ | RTPS in Raichur | ಆರ್‌ಟಿಪಿಎಸ್‌ನಲ್ಲಿ 50 ಮೀಟರ್‌ ಎತ್ತರದಿಂದ ಆಯತಪ್ಪಿ ಬಿದ್ದು ಮೂವರು ಕಾರ್ಮಿಕರಿಗೆ ಗಂಭೀರ ಗಾಯ

Exit mobile version