Site icon Vistara News

Bike Rally: ಯುಗಾದಿ ಪ್ರಯುಕ್ತ ಯಲ್ಲಾಪುರದಲ್ಲಿ ನಡೆದ ಬೈಕ್ ರ‍್ಯಾಲಿಗೆ ಅಭೂತಪೂರ್ವ ಬೆಂಬಲ

Bike Rally yallapur ugadi

#image_title

ಯಲ್ಲಾಪುರ: ಯುಗಾದಿ ಪ್ರಯುಕ್ತ ಯಲ್ಲಾಪುರ ಪಟ್ಟಣದಲ್ಲಿ ಸೋಮವಾರ (ಮಾ.20) ಹಮ್ಮಿಕೊಳ್ಳಲಾದ ಬೈಕ್ ರ‍್ಯಾಲಿಯು (Bike Rally) ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು.

ಪಟ್ಟಣದ ಕಾಳಮ್ಮನಗರ ದೇವಸ್ಥಾನದಿಂದ ಆರಂಭವಾದ ಬೈಕ್ ರ‍್ಯಾಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ, ಗ್ರಾಮ ದೇವಿ ದೇವಸ್ಥಾನದ ಬಳಿ ಮುಕ್ತಾಯಗೊಂಡಿತು. ಸಾವಿರಕ್ಕೂ ಅಧಿಕ ದ್ವಿಚಕ್ರ ವಾಹನಗಳು ಭಗವಾ ಧ್ವಜಗಳೊಂದಿಗೆ ರ‍್ಯಾಲಿಯಲ್ಲಿ ಭಾಗವಹಿದ್ದವು. ಕಳೆದ ಬಾರಿಗಿಂತ ಅಧಿಕ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಯುವತಿಯರು ಸಹ ರ‍್ಯಾಲಿಯಲ್ಲಿ ಭಾಗವಹಿಸಿ ರ‍್ಯಾಲಿಯ ಮೆರುಗು ಹೆಚ್ಚಿಸಿದರು. ರ‍್ಯಾಲಿ ಸಾಗುವ ದಾರಿಯುದ್ದಕ್ಕೂ ಕೇಸರಿ ಧ್ವಜ ಹಾಗೂ ರಂಗೋಲಿ, ತಳಿರು ತೋರಣಗಳಿಂದ ಸಿಂಗರಿಸಿದ್ದರಿಂದ ಸಂಪೂರ್ಣ ಪಟ್ಟಣವು ಕೇಸರಿಮಯವಾಗಿತ್ತು.

ಇದನ್ನೂ ಓದಿ: Shama Sikander: ಪಡ್ಡೆ ಹುಡುಗರ ನಿದ್ದೆ ಕದ್ದ ಶಮಾ, ಬಿಕಿನಿ ಹಾಟ್ ಫೋಟೊ ಫುಲ್ ಹವಾ

ಬೈಕ್ ರ‍್ಯಾಲಿಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್, ಯುಗಾದಿ ಉತ್ಸವ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್, ಪ್ರಮುಖರಾದ ರಾಮು ನಾಯ್ಕ, ಯುವ ಮುಖಂಡ ವಿವೇಕ ಹೆಬ್ಬಾರ್, ಪ್ರಶಾಂತ ಹೆಗಡೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ.ಪಂ. ಸದಸ್ಯರಾದ ಆದಿತ್ಯ ಗುಡಿಗಾರ್, ಸೋಮೇಶ್ವರ್ ನಾಯ್ಕ, ಸತೀಶ ನಾಯ್ಕ, ಪ್ರಮುಖರಾದ ಪ್ರದೀಪ ಯಲ್ಲಾಪುರಕರ್, ರಜತ್ ಬದ್ದಿ, ಮುಂತಾದವರು ಇದ್ದರು. ಪೊಲೀಸ್ ಇಲಾಖೆಯ ಸಿಬ್ಬಂದಿಗಳು ರ‍್ಯಾಲಿಯುದ್ದಕೂ ನಿಗಾ ವಹಿಸಿ, ವಾಹನ ಸಂಚಾರವನ್ನು ಸಮರ್ಪಕವಾಗಿ ನಿರ್ವಹಿಸಿ ರ‍್ಯಾಲಿ ಯಶಸ್ವಿಯಾಗಿ ನೆರವೇರಲು ಸಹಕರಿಸಿದರು.

ಇದನ್ನೂ ಓದಿ: Benefits Of Pongame: ಬಹೂಪಯೋಗಿ ಹೊಂಗೆ: ಏನೇನಿವೆ ಇದರ ಸದ್ಗುಣಗಳು?

Exit mobile version