3 ವರ್ಷದ ಹೋರಿಗಳ ಅದ್ಧೂರಿ ಹುಟ್ಟುಹಬ್ಬ; 5 ಕೆಜಿ ಕೇಕ್‌ ಕತ್ತರಿಸಿ ಆಚರಣೆ - Vistara News

ಕರ್ನಾಟಕ

3 ವರ್ಷದ ಹೋರಿಗಳ ಅದ್ಧೂರಿ ಹುಟ್ಟುಹಬ್ಬ; 5 ಕೆಜಿ ಕೇಕ್‌ ಕತ್ತರಿಸಿ ಆಚರಣೆ

ಬೆಳಗಾವಿ ತಾಲೂಕಿನ ಬಡಾಲ-ಅಂಕಲಗಿ ಗ್ರಾಮದಲ್ಲಿ ಎರಡು ಹೋರಿಗಳ ಜನ್ಮದಿನವನ್ನು ಮಾಲೀಕ ವಿಜೃಂಭಣೆಯಿಂದ ಆಚರಣೆ ಮಾಡಿದ್ದಾರೆ. ಇದಕ್ಕೆ ಗ್ರಾಮದವರೆಲ್ಲರೂ ಸಾಕ್ಷಿಯಾಗಿದ್ದಾರೆ.

VISTARANEWS.COM


on

ಹುಟ್ಟು ಹಬ್ಬ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ತಾಲೂಕಿನ ಬಡಾಲ-ಅಂಕಲಗಿ ಗ್ರಾಮದಲ್ಲಿ ಮೂರು ವರ್ಷಗಳ ಹೋರಿಗಳ ಹುಟ್ಟುಹಬ್ಬವನ್ನು ಮಾಲೀಕ ಕೇಕ್ ಕತ್ತರಿಸುವ ಮೂಲಕ ಅದ್ಧೂರಿಯಾಗಿ ಆಚರಣೆ ಮಾಡಿದ್ದಾರೆ.

ಬಡಾಲ ಅಂಕಲಗಿ ಗ್ರಾಮದ ರಾಜೇಂದ್ರ ಗುಗ್ಗರಿ ಎಂಬುವವರ ಸಾಯಿ ಮತ್ತು ಸರ್ಜಾ ಎಂಬ ಹೆಸರಿನ ಎರಡು ಹೋರಿಗಳ ಹುಟ್ಟುಹಬ್ಬಕ್ಕಾಗಿ ಐದು ಕೆಜಿ ಕೇಕ್ ತರಿಸಿದ್ದು, ಗ್ರಾಮಸ್ಥರೆದುರು ಗ್ರಾಮದ ಸ್ವಾಮೀಜಿ ನೇತೃತ್ವದಲ್ಲಿ ಕೇಕ್‌ ಕಟ್‌ ಮಾಡುವ ಮೂಲಕ ವಿಜೃಂಭಣೆಯಿಂದ ಆಚರಿಸಲಾಗಿದೆ.

ಕಳೆದ ವರ್ಷ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದಿಂದ ರಾಜೇಂದ್ರ ಹೋರಿಗಳನ್ನು ತಂದಿದ್ದರು. ಬಳಿಕ ಈ ಹೋರಿಗಳು ಒಂದು ವರ್ಷದ ಅವಧಿಯಲ್ಲಿ ವಿವಿಧೆಡೆ ನಡೆದ ಚಕ್ಕಡಿ ಸ್ಪರ್ಧೆಗಳಲ್ಲಿ ಪಾಲ್ಗೊಂಡು, 36 ಬಾರಿ ಪ್ರಥಮ ಸ್ಥಾನ, 15 ಬಾರಿ ದ್ವಿತೀಯ ಸ್ಥಾನ ಪಡೆದು ಈ ಭಾಗದಲ್ಲಿ ಜನಪ್ರಿಯವಾಗಿವೆ.

ಇದನ್ನೂ ಓದಿ | Ganesh Chaturthi 2022 | ಗಣಪತಿ ತಯಾರಿಸುವ ಸಾಫ್ಟ್‌ವೇರ್‌ ಎಂಜಿನಿಯರ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೃಷಿ

Arecanut Price: ಅಡಿಕೆ ಧಾರಣೆ ನಿರೀಕ್ಷೆ ಮೀರಿ ಏರಲಿದೆ! ಇದು ರೈತರ ‘ನಂಬಿಕೆ’ ಮತ್ತು ‘ಅಭಿಪ್ರಾಯ’ಗಳ ಎಕ್ಸಿಟ್ ಪೋಲ್!

Arecanut Price: ಅಡಿಕೆ ಬೆಳೆಗಾರರ ನಿರೀಕ್ಷೆ, ಸಮೀಕ್ಷೆ, ಪರೀಕ್ಷೆಗಳ ಲೆಕ್ಕಾಚಾರಕ್ಕೆ ‘ಯಾಕೆ ಹೀಗೆ ಅನ್ನುವ’ ಪ್ರಶ್ನೆಗೆ ಅಡ್ಡ ಬಂದಿದ್ದು ಈ ಬಾರಿಯ ಲೋಕಸಭಾ ಚುನಾವಣೆ!!ಈಗ ಅದೂ ಮುಗಿದು, ಪಲಿತಾಂಶಕ್ಕೆ ಕಾಯುತ್ತಿರುವಾಗ, ಅಡಿಕೆ ದರ ಮೇಲ್ಮುಖವಾಗಿದೆ. ಪುನಃ ₹.55,000 ಗಡಿ ಸಮೀಪ ಬಂದಿದೆ.
ನೀತಿ ಸಂಹಿತೆಯ ಬ್ಯಾರಿಕೇಡ್‌ಗಳು ತೆರವುಗೊಂಡ ಮೇಲೆ ಅಡಿಕೆ ಧಾರಣೆ ಗಣನೀಯವಾಗಿ ಏರಬಹುದು ಎಂದು ಲೆಕ್ಕಾಚಾರದಲ್ಲಿ ರೈತರು ಕಾಯುತ್ತಿದ್ದಾರೆ.

VISTARANEWS.COM


on

Arecanut Price
Koo

-ಅರವಿಂದ ಸಿಗದಾಳ್, ಮೇಲುಕೊಪ್ಪ
ಬೆಂಗಳೂರು: ಜುಲೈ ಕೊನೆಯಲ್ಲಿ ಬಯಲು ಸೀಮೆಯ ಅಡಿಕೆ ಬರಲು ಪ್ರಾರಂಭವಾಗುವ ಕಾಲ. ಆಗಸ್ಟ್‌ನಿಂದ ಸಹಜವಾಗಿ ಅಡಿಕೆ ಪ್ರಮಾಣ ಮಾರುಕಟ್ಟೆಗೆ ಬರುವುದು ಹೆಚ್ಚುವುದರಿಂದ ಅಡಿಕೆ ಧಾರಣೆ ಇಳಿಯಲು ಪ್ರಾರಂಭವಾಗುತ್ತದೆ. ಕಳೆದ ವರ್ಷ ಜುಲೈ‌ನಲ್ಲಿ ₹ 55,000 ದಾಟಿದ ಅಡಿಕೆ ದರ, ಸೆಪ್ಟೆಂಬರ್‌ನಲ್ಲಿ ₹.50,000 ಕ್ಕಿಂತ ಕೆಳಕ್ಕೆ ಬರಲು ಪ್ರಾರಂಭವಾಯಿತು. ಇಳಿದ ಅಡಿಕೆ ಧಾರಣೆ ₹ 47,000 ದಲ್ಲಿ ಕೆಲಕಾಲ ಸ್ಥಿರತೆಯಲ್ಲಿ ಉಳಿದಿತ್ತು. ಈ ವರ್ಷ ಮೇ ತಿಂಗಳ ಪ್ರಾರಂಭದಲ್ಲಿ ₹ 55,000 ದ ಸಮೀಪಕ್ಕೆ ಏರಿ ಬಂದ ರಾಶಿ ಇಡಿ ಅಡಿಕೆ ಧಾರಣೆ ಮತ್ತೆ ಇಳಿಯುವುದಕ್ಕೆ ಶುರವಾಗಿತ್ತು (Arecanut Price).

ಅಡಿಕೆ ಬೆಳೆಗಾರರ ನಿರೀಕ್ಷೆ, ಸಮೀಕ್ಷೆ, ಪರೀಕ್ಷೆಗಳ ಲೆಕ್ಕಾಚಾರಕ್ಕೆ ‘ಯಾಕೆ ಹೀಗೆ ಅನ್ನುವ’ ಪ್ರಶ್ನೆಗೆ ಅಡ್ಡ ಬಂದಿದ್ದು ಈ ಬಾರಿಯ ಲೋಕಸಭಾ ಚುನಾವಣೆ! ಈಗ ಅದೂ ಮುಗಿದು, ಪಲಿತಾಂಶಕ್ಕೆ ಕಾಯುತ್ತಿರುವಾಗ, ಅಡಿಕೆ ದರ ಮೇಲ್ಮುಖವಾಗಿದೆ. ಪುನಃ ₹ 55,000 ಗಡಿ ಸಮೀಪ ಬಂದಿದೆ.

ನೀತಿ ಸಂಹಿತೆಯ ಬ್ಯಾರಿಕೇಡ್‌ಗಳು ತೆರವುಗೊಂಡ ಮೇಲೆ ಅಡಿಕೆ ಧಾರಣೆ ಗಣನೀಯವಾಗಿ ಏರಬಹುದು ಎಂದು ಲೆಕ್ಕಾಚಾರದಲ್ಲಿ ರೈತರು ಕಾಯುತ್ತಿದ್ದಾರೆ.

ಅಡಿಕೆ ಧಾರಣೆಯ ವಿಚಾರದಲ್ಲಿ ಇರುವ ‘ನಂಬಿಕೆ’ಗಳು

ಅಡಿಕೆ ಧಾರಣೆಯ ಏರಿಕೆಯ ವಿಚಾರದಲ್ಲಿ ಮಲೆನಾಡಿನಲ್ಲಿ ಕೆಲವು ನಂಬಿಕೆಗಳು ಇವೆ. ವೈಜ್ಞಾನಿಕ ವಿಶ್ಲೇಷಣೆಗೆ ಹೊರತಾಗಿದ್ದರೂ, ನಂಬಿಕೆಗಳನ್ನು ಇಟ್ಟುಕೊಂಡೇ ಅನೇಕ ಅಡಿಕೆ ಬೆಳೆಗಾರರು ಇಂದಿಗೂ ವ್ಯವಹಾರ ನೆಡೆಸುತ್ತಾರೆ.
‘ವರ್ಷದ ಯಾವುದೇ ತಿಂಗಳಲ್ಲಿ ಮಂಗಳವಾರ ಅಮವಾಸ್ಯೆ ಬಂದರೆ ಆ ವರ್ಷ ಅಡಿಕೆಗೆ ಅತ್ಯಧಿಕ ಬೆಲೆ’, ‘ಶ್ರಾವಣ ಮಾಸದಲ್ಲಿ ಅಡಿಕೆಗೆ ರೇಟಾಗುವುದು’, ‘ಮುತ್ತುಗದ ಮರದ ನೆತ್ತಿಯಲ್ಲಿ ಮಾತ್ರ ಹೂವಾದರೆ ಅಡಿಕೆ ದರ ಎತ್ತರಕ್ಕೇರುತ್ತದೆ’ ಕಾಡು ಕೋಳಿ ಕಾಡಂಚಿಗೆ ಬಂದು ಕೂಗಿದರೆ. ಅದು ಅಡಿಕ ದರ ಏರುವಿಕೆಯ ಸೂಚನೆಯಂತೆ! ಪಂಚಾಂಗದ ಪ್ರಕಾರ ‘ಕುಜ’ ರಾಜನಾದಾಗ ಅಡಿಕೆ ದರ ನಿರೀಕ್ಷೆ ಮಟ್ಟವನ್ನು ಮೀರಿ ಏರುತ್ತದೆ… ಇತ್ಯಾದಿ ಹತ್ತಾರು ನಂಬಿಕೆಗಳು ಮಲೆನಾಡಿನ ಅಡಿಕೆ ಬೆಳೆಗಾರರಲ್ಲಿವೆ. ಅಡಿಕೆ ಧಾರಣೆಯ ವಿಷಯ ಚರ್ಚೆಗೆ ಬಂದಾಗ ಇಂತಹ ನಂಬಿಕೆಗಳು ಗಾದೆ ಮಾತಿನಂತೆ ಹೊರಗೆ ಬರುತ್ತವೆ.

ಈ ನಂಬಿಕೆಗಳಿಗೆ ಪೂರಕವಾಗಿ ಎಂಬಂತೆ ಹತ್ತು ವರ್ಷಗಳ ಹಿಂದೆ ಅಡಿಕೆ ಧಾರಣೆ ಲಕ್ಷ ರೂ. ದಾಟಿದಾಗ ಪಂಚಾಂಗದ ಪ್ರಕಾರ ಕುಜ ರಾಜನಾಗಿದ್ದನಂತೆ! ಈ ವರ್ಷವೂ ಕುಜನೇ ಅಧಿಪತಿಯಂತೆ. ಅನಿರೀಕ್ಷಿತ ಅಡಿಕೆ ಧಾರಣೆ ಈ ವರ್ಷವೂ ಏರಲಿದೆ ಅನ್ನುವುದು ಜ್ಯೋತಿಷ್ಯ ನಂಬಿಕೆಯ ಅಭಿಪ್ರಾಯ. ಈ ನಂಬಿಕೆಗೆ ಬೇಷರತ್ ಬೆಂಬಲದಂತೆ ಈ ವರ್ಷ ಅನೇಕ ಕಡೆ ಮುತ್ತುಗದ ಮರದ ನೆತ್ತಿಯಲ್ಲಿ ಹೋವು ಅರಳಿತ್ತಂತೆ.

ಏರುಮುಖ ನಿರೀಕ್ಷೆ

ಎಲೆಕ್ಷನ್ ಮುಗಿದ ಮೇಲೆ ಅಡಿಕೆ ವ್ಯವಹಾರದಲ್ಲಿ ದರ ಏರುಮುಖ ಕಾಣಲಿದೆ ಎನ್ನುವುದಕ್ಕೆ ಪೂರಕವಾಗಿ, ಚುನಾವಣೆಯ ಪಲಿತಾಂಶದ ಹಿಂದಿನೆರಡು ದಿನಗಳಲ್ಲಿ ಅಡಿಕೆ ಏರಿಕೆಯ ಗ್ರಾಫ್‌ನ ಬಾಣ! ಕುಜ ಅಡಿಕೆಯ ದರ ಎತ್ತಲಿದ್ದಾನಾ? ಮುತ್ತುಗದ ಹೂವಿನ ಸೂಚನೆ ನಿಜವಾ? ನಂಬಿಕೆಗಳು ಕೆಲಸ ಮಾಡುತ್ತವಾ? ಚುನಾವಣೆಯ ನಂತರ ಅಡಿಕೆಗೆ ಬೇಡಿಕೆ ಹೆಚ್ಚಲಿದೆಯಾ? ಅಡಿಕೆ ಧಾರಣೆಯಲ್ಲಿ ರೈತರ ನಂಬಿಕೆಗಳ ಮತ್ತು ಅಭಿಪ್ರಾಯಗಳ ಎಕ್ಸಿಟ್ ಪೋಲ್ ನಿಜ ಆಗಲಿದೆಯಾ? ಕಾದು ನೋಡೋಣ.

ಇದನ್ನೂ ಓದಿ: Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Continue Reading

ಉತ್ತರ ಕನ್ನಡ

Uttara Kannada News: ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ

Uttara Kannada News: ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮ ಸೋಮವಾರ ನಡೆಯಿತು.

VISTARANEWS.COM


on

First PU Class Commencement Programme at Vishwadarshana College
Koo

ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮ ಸೋಮವಾರ (Uttara Kannada News) ನಡೆಯಿತು.

ವಿಶ್ವದರ್ಶನ ಶಿಕ್ಷಣ ಸಮೂಹದ ಸಿಇಒ ಅಜಯ್ ಭಾರತೀಯ ಕಾರ್ಯಕ್ರಮದಲ್ಲಿ ಮಾತನಾಡಿ, ನಾವು ಮಾಡುವ ಕಾರ್ಯ ಸ್ವಹಿತದ ಜತೆಗೆ ದೇಶದ ಹಿತವನ್ನು ಸಾಧಿಸುವಂತಿರಬೇಕು. ಶಿಕ್ಷಣ ನೀಡಬೇಕಾದ, ಪಡೆಯಬೇಕಾದ ಎಲ್ಲರೂ ರಾಷ್ಟ್ರದ ಘನತೆ, ಗೌರವವನ್ನು ಕಾಪಾಡುವ ಆಲೋಚನೆಯನ್ನು ಸದಾ ಮಾಡುತ್ತಿರಬೇಕು ಎಂದು ಹೇಳಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ. 5ರಂದು ಗ್ರಂಥ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ

ಕಾಲೇಜಿನ ಪ್ರಾಚಾರ್ಯ ಡಿ.ಕೆ. ಗಾಂವ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಿಗಾಗಿ ಸಂಪತ್ತು ಮಾಡುವುದಕ್ಕಿಂತ ಮಕ್ಕಳನ್ನೇ ಸಂಪತ್ತಾಗಿಸುವುದು ಸೂಕ್ತ. ಜ್ಞಾನ ಸಂಪತ್ತಿನಿಂದ ಮಕ್ಕಳನ್ನು ಶ್ರೀಮಂತರಾಗಿಸುವ ಮಾರ್ಗವೇ ಶ್ರೇಷ್ಠವಾದದ್ದು ಆ ಕಾರ್ಯವನ್ನು ವಿಶ್ವದರ್ಶನ ಮಾಡುತ್ತಿದೆ‌ ಎಂದರು.

ಅದಕ್ಕಾಗಿ ನಮ್ಮ ಪಿಯು ಕಾಲೇಜು ಉತ್ತಮ ಮೂಲಸೌಕರ್ಯ ಮತ್ತು ನುರಿತ ಉಪನ್ಯಾಸಕ ವರ್ಗವನ್ನು ಹೊಂದಿದೆ ಎಂದು ಹೇಳಿದರಲ್ಲದೇ, ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಕಾಲೇಜಿನ ಉಪನ್ಯಾಸಕ ವರ್ಗವನ್ನು ಪರಿಚಯಿಸಿ, ಕಾಲೇಜಿನ ವಿಶೇಷತೆಗಳ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಮಾಜಿ ವಿದ್ಯಾರ್ಥಿಗಳಾದ ಅಪೂರ್ವ ಹಾಗೂ ಶ್ರೀಗೌರಿ ಭಟ್, ಕಾಲೇಜಿನಲ್ಲಿ ತಮ್ಮ ಅನುಭವ ಜೀವನಪೂರ್ತಿ ಸ್ಮರಿಸುವಂತದ್ದು ಎಂದು ಅನಿಸಿಕೆ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 42 ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ, ಗೌರವಿಸಲಾಯಿತು.

ಇದನ್ನೂ ಓದಿ: Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

ಶ್ರಾವ್ಯ ಪ್ರಾರ್ಥಿಸಿದಳು. ಉಪನ್ಯಾಸಕ ಗುರುರಾಜ್ ಭಟ್ ನಿರ್ವಹಿಸಿದರು. ಉಪ ಪ್ರಾಂಶುಪಾಲ ನಾಗರಾಜ ಹೆಗಡೆ ವಂದಿಸಿದರು.

Continue Reading

ಉದ್ಯೋಗ

Job News: ಗುಡ್‌ನ್ಯೂಸ್‌; 35 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅನುಮತಿ

Job News: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಪ್ರಸ್ತುತ ಖಾಲಿ ಇರುವ 33,863 ಹುದ್ದೆಗಳಿಗೆ ಮೊದಲ ಹಂತದಲ್ಲಿ ಜಿಲ್ಲಾವಾರು ಮತ್ತು ತಾಲೂಕುವಾರು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

VISTARANEWS.COM


on

Job News
Koo

ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಶೀಘ್ರದಲ್ಲಿಯೇ ಈ ಕುರಿತಾದ ಅಧಿಸೂಚನೆ ಹೊರ ಬೀಳಲಿದೆ (Job News).

ಶಾಲಾ ಶಿಕ್ಷಣ ಇಲಾಖೆ ಈ ಕುರಿತು ಜೂನ್‌ 3ರಂದು ಪ್ರಕಟಣೆ ಹೊರಡಿಸಿದೆ. 2024-25ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅನೇಕ ಬೋಧಕ ಹುದ್ದೆಗಳು ಖಾಲಿ ಇವೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ, ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ-ಇದರಲ್ಲಿ ಯಾವುದು ಮೊದಲೊ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಒಟ್ಟು 35 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಪತ್ರದಲ್ಲಿ ಅನುಮತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಕಟಣೆಯಲ್ಲಿ ಏನಿದೆ?

ಅತಿಥಿ ಶಿಕ್ಷಕರ ಹಾಜರಾತಿಯನ್ನು ಪ್ರತ್ಯೇಕವಾಗಿ ನಿರ್ವಹಿಸಲಾಗುವುದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ 10 ಸಾವಿರ ರೂ. ನಿಗದಿಪಡಿಸಲಾಗಿದೆ ಎಂದು ತಿಳಿಸಲಾಗಿದೆ. ಅಲ್ಲದೆ, ಅತಿಥಿ ಶಿಕ್ಷಕರು ನೇಮಕಗೊಂಡ ಸ್ಥಳಕ್ಕೆ ಮುಂದೆ ಖಾಯಂ ಶಿಕ್ಷಕರು ನಿಯುಕ್ತಿಗೊಂಡರೆ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಕೈ ಬಿಟ್ಟು, ತಾಲೂಕಿನಲ್ಲಿ ಖಾಲಿ ಇರುವ ಇತರ ಕಡೆಗೆ ನೇಮಕ ಮಾಡಲಾಗುವುದು ಎಂದು ಹೇಳಲಾಗಿದೆ.

ಪ್ರಸ್ತುತ ಖಾಲಿ ಇರುವ 33,863 ಹುದ್ದೆಗಳಿಗೆ ಮೊದಲ ಹಂತದಲ್ಲಿ ಜಿಲ್ಲಾವಾರು ಮತ್ತು ತಾಲೂಕುವಾರು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ತಾಲೂಕುವಾರು ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಯ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್‌ ಮಾಡಿ.

ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ

ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ (LinkedIn) ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

2024ರಲ್ಲಿ ಕಂಪನಿಗಳು ಹೊಂದಿಕೊಳ್ಳುವ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದನ್ನು ಮುಂದುವರೆಸುತ್ತಿವೆ. ಹೆಚ್ಚು ಹೊಂದಿಕೊಳ್ಳುವ ಕೆಲಸದ ವ್ಯವಸ್ಥೆಗಳ ಕಡೆಗೆ ಗಮನ ಕೊಡುವ ಟ್ರೆಂಡ್ ಈಗ ನಡೆಯುತ್ತಿದೆ. ಆನ್-ಸೈಟ್ ಹುದ್ದೆಗಳು 15% ರಷ್ಟು ಕಡಿಮೆಯಾಗುತ್ತಿವೆ ಮತ್ತು ವರ್ಷದಿಂದ ವರ್ಷಕ್ಕೆ ಆರಂಭಿಕ ಹಂತದ ಹುದ್ದೆಗಳಿಗೆ 52% ರಷ್ಟು ಹೈಬ್ರಿಡ್ ಸ್ಥಾನಗಳು ಹೆಚ್ಚಾಗುತ್ತಿವೆ. ಈ ಬದಲಾವಣೆಯು ಹೊಸ ಪದವೀಧರರಿಗೆ ಆಯ್ಕೆ ಮಾಡಲು ಮತ್ತು ವೃತ್ತಿ ಜೀವನ ಮುಂದುವರಿಸಲು ವಿಸ್ತಾರವಾದ ಕೆಲಸದ ಅವಕಾಶಗಳನ್ನು ಒದಗಿಸುತ್ತದೆ. ಲಿಂಕ್ಡ್‌ಇನ್‌ನ ಕರಿಯರ್ ಸ್ಟಾರ್ಟರ್ 2024 ವರದಿಯ ಪ್ರಕಾರ, ಯುಟಿಲಿಟೀಸ್ ಕ್ಷೇತ್ರ ಬಹಳ ವೇಗವಾಗಿ ಬೆಳೆಯುತ್ತಿರುವ ಉದ್ಯಮವಾಗಿದ್ದು, ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿರುವ ಯುವ ವೃತ್ತಿಪರರು ಆಯ್ಕೆಗೆ ಪರಿಗಣಿಸಬಹುದಾಗಿದೆ.

ಇದನ್ನೂ ಓದಿ: Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading

ಕರ್ನಾಟಕ

Road Accident: ಕೊಲ್ಹಾಪುರದಲ್ಲಿ ಭೀಕರ ಅಪಘಾತ; ಬೈಕ್‌ಗಳಿಗೆ ಕಾರು ಡಿಕ್ಕಿಯಾಗಿ ಪಲ್ಟಿ, ಮೂವರ ದುರ್ಮರಣ

Road Accident: ಮಹಾರಾಷ್ಟ್ರದ ಕೊಲ್ಹಾಪುರ ನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

VISTARANEWS.COM


on

Road Accident
Koo

ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರ ನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಮೂವರು ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೋಮವಾರ ನಡೆದಿದೆ. ವೇಗವಾಗಿ ಬಂದು ಬೈಕ್ ಸವಾರರ ಮೇಲೆ ಸ್ಯಾಂಟ್ರೋ ಕಾರು ಹರಿದಿದ್ದರಿಂದ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಲ್ಹಾಪುರ ನಗರದ ಸೈಬರ್ ಚೌಕದಲ್ಲಿ ಘಟನೆ ನಡೆದಿದ್ದು, ಅತಿ ವೇಗವಾಗಿ ಬಂದ ಕಾರು ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ನಂತರ ಮುಂದೆ ಹೋಗಿ ಕಾರು ಗೋಡೆಗೆ ಗುದ್ದಿದ್ದರಿಂದ ಚಾಲಕ ಮೃತಪಟ್ಟಿದ್ದಾನೆ. ಭಯಾನಕ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಾರು ಡಿಕ್ಕಿಯಾದ ರಭಸಕ್ಕೆ ಇಬ್ಬರು ಬೈಕ್ ಸವಾರರು ಹಾರಿ ಹೋಗಿ ಬಿದ್ದು ಪ್ರಾಣ ಬಿಟ್ಟಿದ್ದಾರೆ.

ಇನ್ನುಳಿದ ಮೂವರು ಗಾಯಾಗಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನ ಬ್ರೆಕ್ ಫೇಲ್ ಆದ ಹಿನ್ನೆಲೆಯಲ್ಲಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲ್ಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳ್ಳತನ ಆರೋಪ ಹೊರಿಸಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್‌ ಆತ್ಮಹತ್ಯೆ

ಮೈಸೂರು: ಕಳ್ಳತನ ಆರೋಪ ಹೊರಿಸಿದ್ದಾರೆ ಎಂದು ಮನನೊಂದು ಸೆಕ್ಯೂರಿಟಿ ಗಾರ್ಡ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಡದ ತಪ್ಪಿಗೆ ನನ್ನ ಹೊಣೆ ಮಾಡಿದ್ದಾರೆ ಎಂದು ಆರೋಪಿಸಿ, ವಿಡಿಯೊ ಮಾಡಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ | Viral News: ಕದಿಯಲು ಬಂದ ಮನೆಯಲ್ಲೇ ನಿದ್ದೆಹೋದ ಕಳ್ಳ; ಪೊಲೀಸರೇ ಎಬ್ಬಿಸಬೇಕಾಯಿತು!

ಮಹದೇವ ನಗರದ ನಿವಾಸಿ ನಂಜೇಶ್ ಮೃತರು. ಕಲ್ಮಲ್ಲಿ ವ್ಯಾಪ್ತಿಯ ಕೈಗಾರಿಕಾ ಪ್ರದೇಶದ ರೆಹಾನ್ಸ್ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ನಂಜೇಶ್, ಫ್ಯಾಕ್ಟರಿ ಆವರಣದಲ್ಲೇ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾನು ಮಾಡದ ತಪ್ಪಿಗೆ ನನ್ನ ಹೊಣೆ ಮಾಡಿದ್ದಾರೆ. ಹೆಂಡತಿ, ಮಕ್ಕಳಿಗೆ ಕ್ಷಮೆಯಾಚಿಸುವೆ. ಗೋವಿಂದ, ರಾಜು ಹಾಗೂ ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಸಾವಿಗೂ ಮುನ್ನ ವಿಡಿಯೊದಲ್ಲಿ ಆರೋಪಿಸಿದ್ದಾರೆ.

Continue Reading
Advertisement
Mallikarjun Kharge
Lok Sabha Election 20245 hours ago

Mallikarjun Kharge: ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಿ: ಮತ ಎಣಿಕೆ ಸಿಬ್ಬಂದಿಗೆ ಮಲ್ಲಿಕಾರ್ಜುನ ಖರ್ಗೆ ಕರೆ

SA vs SL
ಕ್ರೀಡೆ5 hours ago

SA vs SL: ಲಂಕಾ ದಹನ ಮಾಡಿದ ನೋರ್ಜೆ; ಹರಿಣ ಪಡೆಗೆ 6 ವಿಕೆಟ್​ ಜಯ

Arecanut Price
ಕೃಷಿ5 hours ago

Arecanut Price: ಅಡಿಕೆ ಧಾರಣೆ ನಿರೀಕ್ಷೆ ಮೀರಿ ಏರಲಿದೆ! ಇದು ರೈತರ ‘ನಂಬಿಕೆ’ ಮತ್ತು ‘ಅಭಿಪ್ರಾಯ’ಗಳ ಎಕ್ಸಿಟ್ ಪೋಲ್!

First PU Class Commencement Programme at Vishwadarshana College
ಉತ್ತರ ಕನ್ನಡ6 hours ago

Uttara Kannada News: ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ

Job News
ಉದ್ಯೋಗ6 hours ago

Job News: ಗುಡ್‌ನ್ಯೂಸ್‌; 35 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅನುಮತಿ

Road Accident
ಕರ್ನಾಟಕ7 hours ago

Road Accident: ಕೊಲ್ಹಾಪುರದಲ್ಲಿ ಭೀಕರ ಅಪಘಾತ; ಬೈಕ್‌ಗಳಿಗೆ ಕಾರು ಡಿಕ್ಕಿಯಾಗಿ ಪಲ್ಟಿ, ಮೂವರ ದುರ್ಮರಣ

T20 World Cup 2024
ಕ್ರೀಡೆ7 hours ago

T20 World Cup 2024: ದೂರದರ್ಶನದಲ್ಲಿಯೂ ಪ್ರಸಾರಗೊಳ್ಳಲಿದೆ ಟಿ20 ವಿಶ್ವಕಪ್​ ಪಂದ್ಯಾವಳಿ

Uttara Kannada Lok Sabha Constituency
ಉತ್ತರ ಕನ್ನಡ7 hours ago

Uttara Kannada Lok Sabha Constituency: ಉತ್ತರ ಕನ್ನಡ ಕ್ಷೇತ್ರದಲ್ಲಿ ಈ ಬಾರಿಯೂ ಬಿಜೆಪಿ ಜಯಭೇರಿ?

Dr. K Sudhakar
ಕರ್ನಾಟಕ7 hours ago

Dr. K Sudhakar: ರಾಜ್ಯ ಸರ್ಕಾರದ ಚಿಹ್ನೆ ದುರ್ಬಳಕೆ; ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್

Rave Party
ಕರ್ನಾಟಕ7 hours ago

Rave Party: ರೇವ್‌ ಪಾರ್ಟಿ ಕೇಸ್‌ನಲ್ಲಿ ತೆಲುಗು ನಟಿ ಹೇಮಾಗೆ 12 ದಿನ ನ್ಯಾಯಾಂಗ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ13 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ13 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು7 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌