Site icon Vistara News

Karnataka election 2023: ಯಾದಗಿರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ ಬೃಹತ್‌ ರೋಡ್ ಶೋ

Karnataka election 2023 BJP candidate from Yadagiri constituency Venkatareddy Mudnal big road show

ಯಾದಗಿರಿ: ಸಾರ್ವತ್ರಿಕ ವಿಧಾನಸಭಾ ಚುನಾವಣೆ (Karnataka election 2023) ಹಿನ್ನೆಲೆಯಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ಸೋಮವಾರ ರೋಡ್‌ ಶೋ ನಡೆಸಿ ಮತಯಾಚನೆ ಮಾಡಿದರು.

ಕ್ಷೇತ್ರದ ಮೈಲಾಪುರ ಅಗಸಿಯಿಂದ ಗಾಂಧಿ ವೃತ್ತದವರಗೆ ಬೃಹತ್ ರೋಡ್ ಶೋ ನಡೆಸಿದ ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ, ತಮಗೆ ಮತ ನೀಡಿ ಚುನಾವಣೆಯಲ್ಲಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Karnataka Election 2023: ಮಧ್ಯರಾತ್ರಿವರೆಗೂ ಮೆಟ್ರೋ ಸಂಚಾರ; ಎಲೆಕ್ಷನ್‌ಗಾಗಿ ಈ ನಿರ್ಧಾರ

ರೋಡ್ ಶೋದಲ್ಲಿ ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ, ಮಾಜಿ ಶಾಸಕ ಡಾ. ವೀರಬಸವಂತರೆಡ್ಡಿ ಮುದ್ನಾಳ, ಪಕ್ಷದ ಮುಖಂಡರಾದ ಪ್ರಭಾವತಿ ಕಲಾಲ್‌ ಸೇರಿದಂತೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ರೋಡ್ ಶೋ ಮುನ್ನ ವಾರ್ಡ್‌ಗಳಲ್ಲಿ ಮತಯಾಚನೆ

ರೋಡ್ ಶೋ ನಡೆಸುವ ಮುನ್ನ ಯಾದಗಿರಿ ಕ್ಷೇತ್ರದ ಹಿರೆಅಗಸಿ, ಡಾ.ಬಿ.ಆರ್.ಅಂಬೇಡ್ಕರ್ ನಗರ, ವಾಲ್ಮೀಕಿ ನಗರ ಸೇರಿದಂತೆ ವಿವಿಧ ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ ಭರ್ಜರಿ ಚುನಾವಣಾ ಪ್ರಚಾರ ನಡೆಸಿ ಮತಯಾಚಿಸಿದರು. ಇದೇ ವೇಳೆ ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಪುಷ್ಪ ಅರ್ಪಿಸಿದರು.

ಇದನ್ನೂ ಓದಿ: SSLC Results 2023: ರೈತನ ಮಗ ಈಗ SSLC ಟಾಪರ್‌; ಐಐಟಿ ಸೇರುವುದೇ ಗುರಿ ಎಂದ ಭೀಮನಗೌಡ

ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ ಮಾತನಾಡಿ, ಐದು ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದ್ದು, ಜನರು ಮತ್ತೆ ಆಶೀರ್ವಾದ ಮಾಡಿ ಗೆಲ್ಲಿಸುವಂತೆ ಮನವಿ ಮಾಡಿದರು.

Exit mobile version