Site icon Vistara News

Karnataka Election | ಅಮಿತ್ ಶಾ ಮೂಲಕ ಮೈಸೂರು ಭಾಗದಲ್ಲಿ ಬಿಜೆಪಿಯ ದಂಡಯಾತ್ರೆ ಆರಂಭ: ಕಟೀಲ್

Nalin kumar Kateel

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೂಲಕ ಬಿಜೆಪಿಯ ದಂಡಯಾತ್ರೆ ಹಳೆ ಮೈಸೂರು ಭಾಗದಿಂದ ಆರಂಭವಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಹೇಳಿದರು(Karnataka Election).

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾದ ಬಿಜೆಪಿ ಬೂತ್ ಅಧ್ಯಕ್ಷರು ಮತ್ತು ಬಿಎಲ್ಎ-2 ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ಮೈಸೂರು ಭಾಗದಲ್ಲಿ ಬಿಜೆಪಿಯ ಕಮಲ ಅರಳಲಿದೆ. ಬೆಂಗಳೂರಲ್ಲಿ ವಿಜಯ ಯಾತ್ರೆ ನಡೆಯಲಿದೆ ಎಂದು ಹೇಳಿದರು.

ಶೇ.60ರಷ್ಟು ಮತವನ್ನು ಪಡೆಯುವುದರ ಮೂಲಕ 150 ಸ್ಥಾನಗಳನ್ನು ಗೆಲ್ಲಲಿದ್ದೇವೆ. ಇದಕ್ಕೆ ಪೂರಕವಾಗಿ ಬಿಜೆಪಿಯ ಜನವರಿ 2ರಿಂದ 12ರ ತನಕ ಬೂತ್ ವಿಜಯ ಅಭಿಯಾನ ಮತ್ತು 21ರಿಂದ 29ರವರೆಗೆ ವಿಜಯ ಸಂಕಲ್ಪ ಯಾತ್ರೆ ನಡೆಯಲಿದೆ ಎಂದು ಅವರು ತಿಳಿಸಿದರು. ಅದೇ ವೇಳೆ, 50 ಲಕ್ಷ ಸದಸ್ಯತ್ವ ಅಭಿಯಾನವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬೂತ್ ಮಟ್ಟದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನೀಡುತ್ತಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಮತದಾರರಿಗೆ ತಿಳಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಇದನ್ನು ಓದಿ | Karnataka Election | ಹಳೆ ಮೈಸೂರು ಭಾಗ ಗೆಲ್ಲಲು ಬಿಜೆಪಿ ನಾಯಕರಿಗೆ 30+ ಟಾಸ್ಕ್ ನೀಡಿದ ಅಮಿತ್ ಶಾ!

Exit mobile version