Site icon Vistara News

BJP Karnataka: ಬಿಜೆಪಿಯದ್ದು ಡಬಲ್ ಎಂಜಿನ್; ಕಾಂಗ್ರೆಸ್‍ನದ್ದು ಟ್ರಬಲ್ಡ್ ಎಂಜಿನ್: ಗೌರವ್ ಭಾಟಿಯ ಲೇವಡಿ

bjp karnataka is double engine govt and congress is troubled engine says gaurav bhatia

#image_title

ಬೆಂಗಳೂರು: ಬಿಜೆಪಿಯದು ಡಬಲ್ ಎಂಜಿನ್ ಅಭಿವೃದ್ಧಿಪರ ಸರ್ಕಾರವಾದರೆ ಕಾಂಗ್ರೆಸ್‍ನದು ಟ್ರಬಲ್ಡ್ ಎಂಜಿನ್ ಸರ್ಕಾರ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯ ವಿಶ್ಲೇಷಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮದು ಜನಹಿತ ಬಯಸುವ ಮತ್ತು ಕರ್ನಾಟಕದ ಜನತೆಯ ಆಶಯ ಈಡೇರಿಸುವ ಸರ್ಕಾರ. ಕಾಂಗ್ರೆಸ್ ಪಕ್ಷವು ಅಧಿಕಾರದಾಹದ ಹಿಂದಿದೆ. ಬಿಜೆಪಿಯ ಸರ್ಕಾರ ಜನರ ಸರ್ಕಾರ. ನಮ್ಮ ಸರ್ಕಾರ ರಾಜ್ಯ ಮತ್ತು ದೇಶದ ಅಭಿವೃದ್ಧಿಗೆ ಶ್ರಮಿಸುತ್ತದೆ. ಆದರೆ, ಕಾಂಗ್ರೆಸ್‍ನದು ಪರಿವಾರವಾದದ (ಕುಟುಂಬ) ಸರ್ಕಾರ ಎಂದು ಆರೋಪಿಸಿದರು.

ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಮತ್ತು ಬಸವರಾಜ ಬೊಮ್ಮಾಯಿಯವರ ನೇತೃತ್ವದ ರಾಜ್ಯ ಸರ್ಕಾರ ಸೇರಿ ಡಬಲ್ ಎಂಜಿನ್ ಸರ್ಕಾರಗಳು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಜನರು ಗಮನಿಸಲಿದ್ದಾರೆ. ಡಬಲ್ ಎಂಜಿನ್ ಸರ್ಕಾರಗಳಿಂದಾಗಿ ಕೋವಿಡ್ ಸಾಂಕ್ರಾಮಿಕದ ಅವಧಿಯಲ್ಲೂ ಅಭಿವೃದ್ಧಿ ಕಾರ್ಯಗಳು ಮುಂದುವರಿದವು. ಇನ್ನೊಂದೆಡೆ ಆರೋಗ್ಯ ಸುರಕ್ಷತೆಗೆ ಗರಿಷ್ಠ ಒತ್ತು ಕೊಡಲಾಯಿತು.

ಪ್ರತಿಯೊಬ್ಬ ನಾಗರಿಕನಿಗೂ ಕೋವಿಡ್ ಲಸಿಕೆ ನೀಡುವ ಸಂದರ್ಭ ಬಂದಾಗ ಕಾಂಗ್ರೆಸ್ಸಿಗರು ಅಪಸ್ವರ ಎತ್ತಿದ್ದರು. ಆದರೆ, ಸರ್ಕಾರಗಳ ಬದ್ಧತೆಯಿಂದ 220 ಕೋಟಿ ರೂ. ಲಸಿಕೆಯನ್ನು ನೀಡಲಾಯಿತು. ರಾಜ್ಯದಲ್ಲಿ 12 ಕೋಟಿ ರೂ.ಗೂ ಹೆಚ್ಚು ಲಸಿಕೆ ಕೊಡಲಾಗಿದೆ. ಕೋವಿಡ್ ಲಸಿಕೆ ಸುರಕ್ಷಿತವಲ್ಲ ಎಂದು ಕಾಂಗ್ರೆಸ್ ಹೇಳಿತ್ತು ಎಂದು ಟೀಕಿಸಿದರು.

ಜನರನ್ನು ಹಸಿವಿನಿಂದ ರಕ್ಷಿಸಲು ಪಡಿತರ ಕೊಡಲಾಗಿದ್ದು, ಕರ್ನಾಟಕದ 4 ಕೋಟಿ ಜನರು ಪ್ರಯೋಜನ ಪಡೆದುಕೊಂಡಿದ್ದಾರೆ. ಕರ್ನಾಟಕದಲ್ಲಿ ಜನರು ಬಿಜೆಪಿ ಪರವಾಗಿದ್ದಾರೆ. ಕಮಲ ಚಿಹ್ನೆಯನ್ನು ಮತ್ತೆ ಅಧಿಕಾರಕ್ಕೆ ತರಲಿದ್ದಾರೆ ಎಂದ ಅವರು, ಡಬಲ್ ಎಂಜಿನ್ ಸರ್ಕಾರ ಮತ್ತು ಬಿಜೆಪಿಯೇ ಭರವಸೆ ಎಂಬುದು ಜನರ ವಿಶ್ವಾಸದ ನುಡಿ ಎಂದು ತಿಳಿಸಿದರು.

ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ಎಸ್.ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Exit mobile version