Site icon Vistara News

Fatal Assault: ಬಸವ ಕಲ್ಯಾಣದಲ್ಲಿ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

BJP leader attacked in Basavakalyan

#image_title

ಬೀದರ್: ಬಸವ ಕಲ್ಯಾಣ ತಾಲೂಕಿನ ಸಸ್ತಾಪೂರ ಬಂಗ್ಲಾದ ಪಂಜಾಬಿ ಡಾಬಾದಲ್ಲಿ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ (Fatal Assault) ನಡೆಸಲಾಗಿದೆ. ಬಿಜೆಪಿ ಎಸ್‌ಸಿ ಮೋರ್ಚಾದ ಮುಖಂಡ ವೀರಣ್ಣ ಹಲಗೆ ಗಾಯಾಳುವಾಗಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ ಯುವಕರ ಗುಂಪಿನಿಂದ ಹರಿತವಾದ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರಿಂದ ವೀರಣ್ಣ ಹಲಗೆ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಬೀದರ್ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಬಸವಕಲ್ಯಾಣ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ದುಷ್ಕರ್ಮಿಗಳ ಬಂಧನಕ್ಕೆ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ | Murder Case: ಮೈಸೂರಲ್ಲಿ ಪತ್ನಿಯ ಅನೈತಿಕ ಸಂಬಂಧಕ್ಕೆ ಬಲಿಯಾದ ಪತಿ; ಪ್ರಿಯಕರನ ಜತೆ ಸೇರಿ ಕೊಂದೇಬಿಟ್ಟಳು

Exit mobile version