ವಿಧಾನಸೌಧ ರೌಂಡ್ಸ್‌: ಬಿಜೆಪಿ ಸಂಸದರೇ ರಾಜಕಾರಣ ಮಾಡಿ, ಆದರೆ ರಾಜ್ಯದ ಹಿತ ಮಾರಬೇಡಿ! - Vistara News

ಕರ್ನಾಟಕ

ವಿಧಾನಸೌಧ ರೌಂಡ್ಸ್‌: ಬಿಜೆಪಿ ಸಂಸದರೇ ರಾಜಕಾರಣ ಮಾಡಿ, ಆದರೆ ರಾಜ್ಯದ ಹಿತ ಮಾರಬೇಡಿ!

Vidhana Soudha Rounds: ಸಂಸದ ಡಿ.ಕೆ. ಸುರೇಶ್ ಕೊಟ್ಟ ದೇಶ ವಿಭಜನೆ ಹೇಳಿಕೆಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಇನ್ನು ಮಂಡ್ಯ ಕ್ಷೇತ್ರ ಪಡೆಯಲು ಸುಮಲತಾ ದೆಹಲಿಯಲ್ಲಿ ಶತಪ್ರಯತ್ನ ನಡೆಸುತ್ತಿದ್ದಾರೆ. ರಾಜ್ಯಸಭೆಯ ಕಾಂಗ್ರೆಸ್‌ ಟಿಕೆಟ್‌ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

VISTARANEWS.COM


on

BJP MPs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Rounds

| ಮಾರುತಿ ಪಾವಗಡ
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಭಾರಿ ಅನ್ಯಾಯ ಆಗಿದೆ ಅನ್ನೋ ಡಿ.ಕೆ. ಸುರೇಶ್ ಹೇಳಿಕೆ ಒಪ್ಪಬಹುದಾದರೂ, ದೇಶ ವಿಭಜನೆಯ ಮಾತನ್ನು ಯಾರೂ ಒಪ್ಪಲು ಸಾಧ್ಯವೇ ಇಲ್ಲ. ಅನುದಾನ ಅನ್ಯಾಯದ ಬಗ್ಗೆ ರಾಜ್ಯದ ಜನಪ್ರತಿನಿಧಿಗಳು ಕೇಂದ್ರದ ಬಿಜೆಪಿ ನಾಯಕರ ಗಮನ ಸೆಳೆಯಬೇಕಿತ್ತು. ಆದರೆ ಇವರು ಡಿ.ಕೆ. ಸುರೇಶ್ ಹೇಳಿಕೆಯನ್ನಷ್ಟೇ ಹಿಡಿದುಕೊಂಡು ಜಗ್ಗಾಡಿದರು. ಇನ್ನು ಇದೇ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿವರೆಗೂ ತೆಗೆದುಕೊಂಡು ಹೋಗಿ ಧರಣಿ ಮಾಡಿದರು. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರದ ಜತೆ ರಾಜ್ಯಗಳು ಸಂಘರ್ಷ ಮಾಡುವುದಕ್ಕಿಂತಲೂ ಸಹನೆ ಮತ್ತು ಸಮನ್ವಯತೆಯ ದಾರಿಯಲ್ಲಿ ಪರಿಹಾರ ಹುಡುಕಿಕೊಳ್ಳಬೇಕಿತ್ತು ಎಂಬ ಅಭಿಪ್ರಾಯ ವಿಧಾನಸೌಧ (Vidhana Soudha Rounds) ಪಡಸಾಲೆಯಲ್ಲಿ ಪಕ್ಷಾತೀತವಾಗಿ ಕೇಳಿ ಬಂತು.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಭಾರಿ ಅನ್ಯಾಯ ಆಗಿದೆ ಅನ್ನೋ ಡಿ.ಕೆ. ಸುರೇಶ್ ಹೇಳಿಕೆ ಒಪ್ಪಬಹುದಾದರೂ, ದೇಶ ವಿಭಜನೆಯ ಮಾತನ್ನು ಯಾರೂ ಒಪ್ಪಲು ಸಾಧ್ಯವೇ ಇಲ್ಲ. ಅನುದಾನ ಅನ್ಯಾಯದ ಬಗ್ಗೆ ರಾಜ್ಯದ ಜನಪ್ರತಿನಿಧಿಗಳು ಕೇಂದ್ರದ ಬಿಜೆಪಿ ನಾಯಕರ ಗಮನ ಸೆಳೆಯಬೇಕಿತ್ತು. ಆದರೆ ಇವರು ಡಿ.ಕೆ. ಸುರೇಶ್ ಹೇಳಿಕೆಯನ್ನಷ್ಟೇ ಹಿಡಿದುಕೊಂಡು ಜಗ್ಗಾಡಿದರು. ಇನ್ನು ಇದೇ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿವರೆಗೂ ತೆಗೆದುಕೊಂಡು ಹೋಗಿ ಧರಣಿ ಮಾಡಿದರು. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರದ ಜತೆ ರಾಜ್ಯಗಳು ಸಂಘರ್ಷ ಮಾಡುವುದಕ್ಕಿಂತಲೂ ಸಹನೆ ಮತ್ತು ಸಮನ್ವಯತೆಯ ದಾರಿಯಲ್ಲಿ ಪರಿಹಾರ ಹುಡುಕಿಕೊಳ್ಳಬೇಕಿತ್ತು ಎಂಬ ಅಭಿಪ್ರಾಯ ವಿಧಾನಸೌಧ ಪಡಸಾಲೆಯಲ್ಲಿ ಪಕ್ಷಾತೀತವಾಗಿ ಕೇಳಿ ಬಂತು.

ಇದನ್ನೂ ಓದಿ | Nikhil Kumaraswamy : ಅಯ್ಯೋ.. ನಾನು ಮಂಡ್ಯದಿಂದ ಸ್ಪರ್ಧೆ ಮಾಡಲ್ಲ… ಮಾಡಲ್ಲ ಮಾಡಲ್ಲ.. ಎಂದ ನಿಖಿಲ್‌

ತೇಜಸ್ವಿ ಸೂರ್ಯಗೆ ಇನ್ನಷ್ಟು ರಾಜಕೀಯ ಪಕ್ವತೆ ಬೇಕಿದೆ

Tejaswi Soorya

ರಾಜ್ಯಕ್ಕೆ ಅನ್ಯಾಯವಾದಾಗ ನಿಮ್ಮ ಸರ್ಕಾರದ ವಿರುದ್ಧ ನೇರವಾಗಿ ಧ್ವನಿ ಎತ್ತುವುದು ಕಷ್ಟಸಾಧ್ಯವಾದರೂ ಜನಪ್ರತಿನಿಧಿಯಾಗಿ ರಾಜ್ಯಕ್ಕೆ ಮೋಸ ಮಾಡಬಾರದು. ಇವರೆಲ್ಲ ಬಿಜೆಪಿ ಪರವಾಗಿ ಸಂಸತ್‌ನಲ್ಲಿ ವಾದ ಮಂಡಿಸಲು ಆಯ್ಕೆಯಾದ ಬ್ಯಾರಿಸ್ಟರ್‌ಗಳು ಅಂದುಕೊಳ್ಳಬಾರದು. ಬೆಂಗಳೂರಿಗೆ ಹೆಚ್ಚು ಪಾಲು ಸಿಗಬೇಕು ಅನ್ನೋ ಬಿಜೆಪಿಯ ಲಾಜಿಕ್‌ನಲ್ಲಿ ಯಾವುದೇ ಹುರುಳಿಲ್ಲ. 28 ಜನ‌ ಸಂಸದರು, ರಾಜ್ಯ ಸಭಾ ಸದಸ್ಯರು ಇದ್ದೀರಿ. ಸಂಸತ್‌ನಲ್ಲಿ ಮಾತನಾಡಲು ಸಾಧ್ಯವಾಗದಿದ್ರೆ ಕನಿಷ್ಠ ಅಮಿತ್ ಶಾ, ನಿರ್ಮಲಾ ಸೀತಾರಾಮನ್‌ರನ್ನು ಭೇಟಿ ಮಾಡಿಯಾದರೂ ರಾಜ್ಯದ ಪರಿಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ರಾಜ್ಯಕ್ಕೆ ತಂಡ ಕಳುಹಿಸಿ ವರದಿ ಪಡೆದು ಎರಡು ತಿಂಗಳು ಕಳೆದರೂ ಪರಿಹಾರ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ರಾಜ್ಯದ ಜನಪ್ರತಿನಿಧಿಗಳು ಧ್ವನಿ ಎತ್ತದೇ ಸಂಸತ್‌ನಲ್ಲಿ ವಕಾಲತ್ತು ಮಾಡ್ತೀವಿ ಅಂದರೆ ಬೆಂಗಳೂರು ದಕ್ಷಿಣ ಬಿಟ್ಟು ರಾಜ್ಯ ಹೈಕೋರ್ಟ್ ಮತ್ತು ಸಿಟಿ ಸಿವಿಲ್ ಕೋರ್ಟ್‌ನಲ್ಲಿ ವಕೀಲಿ ಕೆಲಸ ಮಾಡುವುದು ಬೆಟರ್. ರಾಜಕಾರಣ ಮಾಡಿ, ಆದ್ರೆ ರಾಜ್ಯದ ಹಿತವನ್ನು ಮಾರಬೇಡಿ.

ಮೈಸೂರಿಗೆ ಎಂಟ್ರಿ ಕೊಟ್ಟ ಶಾ; ಕಾಂಗ್ರೆಸ್‌ ಅಲರ್ಟ್

ಅಮಿತ್ ಶಾ ಗುರಿ 2024ರ ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರ ಗೆಲ್ಲೋದು. ಮೈತ್ರಿಯ ಪಕ್ಷಗಳ ನಡುವೆ ಕೆಲ ಅಸಮಾಧಾನ ಇರೋದು ಅವರ ಗಮನಕ್ಕೆ ಬಂದು ಅದಕ್ಕೆಲ್ಲ ಗುಡ್ ಬೈ ಹೇಳಲು ಸೂಚಿಸಿದ್ದಾರೆ. ರಾಜ್ಯ ಬಿಜೆಪಿ ಆಂತರಿಕ ಸಮಸ್ಯೆಗಳನ್ನು ಬದಿಗೊತ್ತಿ ಒಟ್ಟಾಗಿ ಕೆಲಸ ಮಾಡಿ ಅಂತ ಸೂಚಿಸಿದ್ದಾರೆ. ವಿಜಯೇಂದ್ರ ಜತೆ ಒನ್ ಟು ಒನ್ ಮಾತನಾಡಿ ರಾಜ್ಯದ ನಾಡಿಮಿಡಿತ ಅರಿತಿದ್ದಾರೆ. ರಾಜ್ಯದಲ್ಲಿ ಚರ್ಚೆ ಆಗುತ್ತಿರುವ ಅನುದಾನದ ತಾರತಮ್ಯ ವಿಚಾರವನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಮಾಹಿತಿ ಪಡೆದಿದ್ದಾರೆ. I am with you, go ahead ಅಂತ ವಿಜಯೇಂದ್ರಗೆ ಹೇಳಿದ್ದಾರೆ.

ಸುಮಕ್ಕಳ ಆಟ ನಿಲ್ತಿಲ್ಲ; ಏರುತ್ತಿದೆ ಕುಮಾರಸ್ವಾಮಿ ಟೆನ್ಸನ್

Sumalatha Amabarish

ಬಿಜೆಪಿಯ ಭಾಗವಾಗಿರುವ ಸುಮಲತಾ ಮಂಡ್ಯ ಟಿಕೆಟ್‌ಗೆ ಪಟ್ಟು ಹಿಡಿದು ಕೂತುಬಿಟ್ಟಿದ್ದಾರೆ. ಮಂಡ್ಯದಲ್ಲಿ ಬಿಜೆಪಿಗೆ ಟಿಕೆಟ್ ಕೊಟ್ರೆ ಗೆಲುವು ನಿಶ್ಚಿತ. ಜೆಡಿಎಸ್‌ಗೆ ಕೊಟ್ರೆ ಕುಟುಂಬ ರಾಜಕಾರಣದಿಂದ ಅವರಿಗೆ ಹಿನ್ನಡೆ ಆಗುವ ಸಾಧ್ಯತೆ ಇದೆ. ಜತೆಗೆ ಕಳೆದ ಐದು ವರ್ಷಗಳ ಹಿಂದೆ ಮಂಡ್ಯದಲ್ಲಿ ಇದ್ದ ಬಿಜೆಪಿ ಶಕ್ತಿಗೂ ಈಗ ಇರೋ ಸಂಘಟನೆಯ ಶಕ್ತಿಗೆ ಭಾರಿ ವ್ಯತ್ಯಾಸ ಇದೆ. ಹೀಗಾಗಿ ಈ ಕ್ಷೇತ್ರ ಬಿಜೆಪಿಗೆ ಇರಲಿ ಅನ್ನೋದು ಸುಮಲತಾ ವಾದ. ಇದರ ಹಿಂದೆ ಸುಮಲತಾ ಯೋಚನೆ ಭಾರಿ ದೂರ ಇದೆ. ಮಂಡ್ಯದಲ್ಲಿ ಟಿಕೆಟ್ ಸಿಗದಿದ್ದರೆ ಕೇಂದ್ರ ಬಿಜೆಪಿ ವರಿಷ್ಠರು ಕನಿಷ್ಠ ರಾಜ್ಯಸಭೆಯ ಆಫರ್ ಕೊಡಬಹುದು, ಮಂಡ್ಯದಲ್ಲಿ ಅಸ್ತಿತ್ವ ಉಳಿಸಿಕೊಂಡು ಮುಂದೆ ಅಭಿಷೇಕ ಅಂಬರೀಶ್ ರಾಜಕೀಯ ಭವಿಷ್ಯ ಕಟ್ಟಬಹುದು ಅನ್ನೋ ಲೆಕ್ಕಾಚಾರದಲ್ಲಿ ಸುಮಲತಾ ಇದ್ದಾರೆ. ಸುಮಕ್ಕ ಅವರ ಈ ಲೆಕ್ಕಾಚಾರಕ್ಕೆ ನಡ್ಡಾ, ಅಮಿತ್ ಶಾ ಏನು ಹೇಳ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ.

ಇದನ್ನೂ ಓದಿ | ವಿಧಾನಸೌಧ ರೌಂಡ್ಸ್‌: ಕಾಂಗ್ರೆಸ್‌ಗೆ ʼವಿಭಜನೆʼ ಹೇಳಿಕೆಯ ಕಳಂಕ; ಇನ್ನೂ ಪ್ರತಿಪಕ್ಷ ನಾಯಕನ ಮಟ್ಟಕ್ಕೆ ಏರದ ಅಶೋಕ!

ರಾಜ್ಯಸಭೆ ಟಿಕೆಟ್‌ ಚೇಲಾಗಳಿಗೆ ಮಾತ್ರ!

ಕಾಂಗ್ರೆಸ್ ಅವನತಿ ಶುರುವಾಗಿದ್ದು 2014ರಿಂದ. ಪ್ರತಿ ಬಾರಿ ಪೆಟ್ಟು ತಿಂದ ಮೇಲೂ ಅದು ಎಚ್ಚೆತ್ತುಕೊಳ್ಳಲೇ ಇಲ್ಲ. ಹೀಗಾಗಿ ಮೋದಿ ದಿನೇದಿನೆ ಸ್ಟ್ರಾಂಗ್ ಆಗುತ್ತ ಹೋದರು. ಕಾಂಗ್ರೆಸ್ ಹೈಕಮಾಂಡ್ ವೀಕ್ ಆಗುತ್ತ ಹೋಯಿತು. ಕಾಂಗ್ರೆಸ್‌ನಲ್ಲಿ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುವ ಕೆಲಸ ಇಂದಿಗೂ ಆಗ್ತಿಲ್ಲ. ಪಕ್ಷಕ್ಕೆ ಏನೂ ಕಾಣಿಕೆ ನೀಡದ ನಾಸೀರ್ ಹುಸೇನ್ ಅವರನ್ನು ಮತ್ತೊಮ್ಮೆ ರಾಜ್ಯಸಭಾ ಸದಸ್ಯರನ್ನಾಗಿ ಮಾಡಲು ಮುಂದಾಗಿರುವುದು ಸಾಮಾನ್ಯ ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ. ಇನ್ನು ರಾಜೀವ್ ಗೌಡ, ಆರತಿ ಕೃಷ್ಣ ಅವರು ಸಂಘಟನೆಯಲ್ಲಿ ಏನು ಕಾಣಿಕೆ ಸಲ್ಲಿಸಿದ್ದಾರೆ ಅನ್ನೋ ಪ್ರಶ್ನೆಗಳು ಸಾಮಾನ್ಯ ಕಾರ್ಯಕರ್ತರಿಂದ ಶುರುವಾಗಿವೆ. ಒಟ್ಟಾರೆ ಬೂತ್ ಮಟ್ಟದಲ್ಲಿ ಕೆಲಸ ಮಾಡುವ, ಚುನಾವಣೆಯಲ್ಲಿ ಪಕ್ಷವೇ ಕುಟುಂಬ ಅಂತ ದುಡಿಯುವ ಕಾರ್ಯಕರ್ತರಿಗೆ ಮಣೆ ಹಾಕದೇ ಬರೀ ಚೇಲಾಗಳಿಗೆ ಮಣೆ ಹಾಕಿದ್ರೆ ಹೇಗೆ ಎಂದು ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತುಮಕೂರು

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ 2ನೇ ಸ್ಥಾನ ಪಡೆದ ಹರ್ಷಿತಾಗೆ ಸನ್ಮಾನ

SSLC Result 2024: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಶಿರಾ ನಗರದ ಶ್ರೀ ವಾಸವಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಹರ್ಷಿತ ಡಿ.ಎಂ. ಅವರನ್ನು ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಶಿರಾ ತಾಲೂಕು ಘಟಕ ಹಾಗೂ ಶಿರಾದ ಶ್ರೀ ವಾಸವಿ ವಿದ್ಯಾಸಂಸ್ಥೆಯ ವತಿಯಿಂದ ಗೌರವಿಸಿ, ಸನ್ಮಾನಿಸಲಾಯಿತು.

VISTARANEWS.COM


on

felicitation programme for SSLC student Harshita D M who got 2nd place in the state
Koo

ಶಿರಾ: ಪರೀಕ್ಷೆಯಲ್ಲಿ (SSLC Result 2024) ಹೆಚ್ಚು ಅಂಕ ಪಡೆದು ಶಾಲೆಗೆ ಮತ್ತು ಪಾಲಕರಿಗೆ ಕೀರ್ತಿ ತರುವುದು ಹೆಮ್ಮೆಯ ಸಂಗತಿ. ಜತೆಗೆ ವಿದ್ಯಾರ್ಥಿಗಳ ಯಶಸ್ಸಿಗೆ ಶ್ರಮಿಸಿದ ಶಿಕ್ಷಕ ವೃಂದ ಹಾಗೂ ಪಾಲಕರ ಕಾರ್ಯವೂ ಶ್ಲಾಘನೀಯವಾದುದು ಎಂದು ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಶಿರಾ ತಾಲೂಕು ಘಟಕದ ಅಧ್ಯಕ್ಷ ದೊಡ್ಡ ಸಿದ್ದಪ್ಪ ತಿಳಿಸಿದರು.

ನಗರದ ಶ್ರೀ ವಾಸವಿ ವಿದ್ಯಾಸಂಸ್ಥೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹರ್ಷಿತ ಡಿ.ಎಂ. ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಹರ್ಷಿತ ಡಿ.ಎಂ. ಅವರನ್ನು ಸನ್ಮಾನಿಸಿ, ಬಳಿಕ ಅವರು ಮಾತನಾಡಿದರು.

ದೃಢ ನಿರ್ಧಾರ ಮತ್ತು ಅಚಲವಾದ ನಂಬಿಕೆ ಯಶಸ್ಸಿನ ಮೆಟ್ಟಿಲುಗಳಾಗಿವೆ. ಜೀವನದಲ್ಲಿ ದೃಢ ನಿರ್ಧಾರ ತಗೆದುಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ: Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಶ್ರೀ ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ರಮೇಶ್ ಬಾಬು ಮಾತನಾಡಿ, ನಮ್ಮ ಸಂಸ್ಥೆಯ ವಿದ್ಯಾರ್ಥಿನಿ ಹರ್ಷಿತ ಡಿ.ಎಂ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಜತೆಗೆ ಶಾಲೆಗೆ ಉತ್ತಮ ಫಲಿತಾಂಶ ಬಂದಿರುವುದು ಸಂತಸ ತಂದಿದೆ ಎಂದು ತಿಳಿಸಿದರು.

ಶಿಕ್ಷಕರು ಪ್ರಸಕ್ತ ವರ್ಷದಲ್ಲಿಯೂ ಉತ್ತಮ ಫಲಿತಾಂಶ ನೀಡುವ ಭರವಸೆ ನೀಡಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ: ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

ಈ ಸಂದರ್ಭದಲ್ಲಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಶಿರಾ ತಾಲೂಕು ಕಾರ್ಯದರ್ಶಿ ಕೋಟೆ ಚಂದ್ರಶೇಖರ್, ಖಜಾಂಚಿ ಮಂಜುಶ್ರೀ ಮಹಾಲಿಂಗಪ್ಪ, ವಾಸವಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಸುರೇಶ್ ಬಾಬು, ಕಾರ್ಯದರ್ಶಿ ನಾಗರಾಜ್ ಶೆಟ್ಟಿ, ಖಜಾಂಚಿ ಚಂದ್ರಶೇಖರ್ ಬಾಬು, ನಿರ್ದೇಶಕರುಗಳಾದ ರಚಿತಾ ನಾಗಾರ್ಜುನ್, ಶ್ರೀಕಾಂತ್, ರಾಧಾಕೃಷ್ಣ, ವಿಜಯ್, ಜಗದೀಶ್, ಯಶೋದ ಸುರೇಶ್, ನಾಗಲಕ್ಷ್ಮಿ, ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಜಯನಾರಾಯಣ, ಮಂಜುನಾಥ್ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳ ಪೋಷಕರು, ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ವಿಜಯನಗರ

Vijayanagara News: ವಿಜಯನಗರ ಜಿಲ್ಲೆಗೆ 130 ಕೋಟಿ ರೂ. ಬೆಳೆ ಪರಿಹಾರ: ಡಿಸಿ

Vijayanagara News: ಹೊಸಪೇಟೆ ತಾಲೂಕಿನ 3,880 ರೈತರಿಗೆ 3,45,51,946 ರೂ., ಹಗರಿಬೊಮ್ಮನಹಳ್ಳಿ ತಾಲೂಕಿನ 15,813 ರೈತರಿಗೆ 19,24,12,902 ರೂ., ಕೂಡ್ಲಿಗಿ ತಾಲೂಕಿನ 19,010 ರೈತರಿಗೆ 23,12,23,100 ರೂ., ಕೊಟ್ಟೂರು ತಾಲೂಕಿನ 12,833 ರೈತರಿಗೆ 14,04,56,255 ರೂ., ಹಡಗಲಿ ತಾಲೂಕಿನ 20,925 ರೈತರಿಗೆ 26,93,01,607 ರೂ. ಮತ್ತು ಹರಪನಹಳ್ಳಿ ತಾಲೂಕಿನ 37,082 ರೈತರಿಗೆ 42,28,62,000 ರೂ. ನಂತೆ ವಿಜಯನಗರ ಜಿಲ್ಲೆಯಲ್ಲಿ ತಾಲೂಕುವಾರು ಬೆಳೆ ಪರಿಹಾರ ಮೊತ್ತ ಸಂದಾಯವಾಗಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್‌.ದಿವಾಕರ್‌ ತಿಳಿಸಿದ್ದಾರೆ.

VISTARANEWS.COM


on

130 crore crop compensation amount paid to Vijayanagara district says DC m S Diwakar
ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್‌.ದಿವಾಕರ್‌.
Koo

ಹೊಸಪೇಟೆ: 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಜಯನಗರ ಜಿಲ್ಲೆಯಲ್ಲಿ (Vijayanagara News) ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಈಗಾಗಲೇ ಅರ್ಹ ರೈತರಿಗೆ ಗರಿಷ್ಟ 2000 ರೂ. ವರೆಗೆ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ, ಸರ್ಕಾರದಿಂದ ಆದೇಶಿಸಲಾಗಿದೆ.

ಅದರಂತೆ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ ಪ್ರೂಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದ್ದು, ವಿಜಯನಗರ ಜಿಲ್ಲೆಯಲ್ಲಿ ಈವರೆಗೂ ಹತ್ತು ಹಂತಗಳಲ್ಲಿ ಒಟ್ಟು 1,09,543 ರೈತರಿಗೆ 130,08,07,810 ರೂ. ಇನ್ಪುಟ್ ಸಬ್ಸಿಡಿಯನ್ನು ಜಮಾ ಮಾಡಲು ಅನುಮೋದನೆ ನೀಡಲಾಗಿದ್ದು, ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮಾ ಮಾಡಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

ಬಾಕಿ ಉಳಿದ ಅರ್ಹ ರೈತರಿಗೆ ಹಂತ-ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಶೀಘ್ರದಲ್ಲಿ ಜಮಾ ಮಾಡಲಾಗುವುದು. ಈಗಾಗಲೇ ಅನುಮೋದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯಿತಿಗಳು ಹಾಗೂ ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಸೀಲ್ದಾರರ ಕಚೇರಿಯ ಸೂಚನಾ ಫಲಕಗಳಲ್ಲಿ ಪ್ರಚುರಪಡಿಸಲಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆ ತಾಲೂಕು ಕಚೇರಿ, ಹಗರಿಬೊಮ್ಮನಹಳ್ಳಿ ತಾಲೂಕು ಕಚೇರಿ, ಕೂಡ್ಲಿಗಿ ತಾಲೂಕು ಕಚೇರಿ, ಕೊಟ್ಟೂರು ತಾಲೂಕು ಕಚೇರಿ, ಹಡಗಲಿ ತಾಲೂಕು ಕಚೇರಿ ಮತ್ತು ಹರಪನಹಳ್ಳಿ ತಾಲೂಕು ಕಚೇರಿಗಳಲ್ಲಿನ ಸಹಾಯವಾಣಿಗಳಿಗೆ ಕಚೇರಿ ಸಮಯದಲ್ಲಿ ರೈತರು ಫ್ರೂಟ್ಸ್ ಐಡಿ ಸಂಖ್ಯೆಯೊಂದಿಗೆ ಸಂಬಂಧಪಟ್ಟ ತಾಲೂಕು ಕಚೇರಿಯ ಸಹಾಯವಾಣಿಗೆ ಭೇಟಿ ನೀಡಿ ಬೆಳೆ ಪರಿಹಾರ ಮಾಹಿತಿ ಪಡೆಯಬಹುದಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ಇದನ್ನೂ ಓದಿ: Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

ತಾಲೂಕುವಾರು ಮಾಹಿತಿ

ಹೊಸಪೇಟೆ ತಾಲೂಕಿನ 3,880 ರೈತರಿಗೆ 3,45,51,946 ರೂ., ಹಗರಿಬೊಮ್ಮನಹಳ್ಳಿ ತಾಲೂಕಿನ 15,813 ರೈತರಿಗೆ 19,24,12,902 ರೂ., ಕೂಡ್ಲಿಗಿ ತಾಲೂಕಿನ 19,010 ರೈತರಿಗೆ 23,12,23,100 ರೂ., ಕೊಟ್ಟೂರು ತಾಲೂಕಿನ 12,833 ರೈತರಿಗೆ 14,04,56,255 ರೂ., ಹಡಗಲಿ ತಾಲೂಕಿನ 20,925 ರೈತರಿಗೆ 26,93,01,607 ರೂ. ಮತ್ತು ಹರಪನಹಳ್ಳಿ ತಾಲೂಕಿನ 37,082 ರೈತರಿಗೆ 42,28,62,000 ರೂ. ನಂತೆ ವಿಜಯನಗರ ಜಿಲ್ಲೆಯಲ್ಲಿ ತಾಲೂಕುವಾರು ಬೆಳೆ ಪರಿಹಾರ ಮೊತ್ತ ಸಂದಾಯವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading

ರಾಜಕೀಯ

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: ನನಗೆ ಏಪ್ರಿಲ್20 ರಂದು ಸಿಕ್ಕ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕ ಮಂಜು ಅವರಿಗೆ ಕೊಟ್ಟಿದ್ದೇನೆ. ಏಪ್ರಿಲ್ 21 ರಂದು ಅರಕಲಗೂಡು ಮಾರುತಿ ಕಲ್ಯಾಣ ಮಂಟಪದಲ್ಲಿ ಅವರಿಗೆ ನೀಡಿದ್ದೇನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಡಿಯೊವನ್ನು ವೈರಲ್ ಮಾಡಿದ್ದರ ಹಿಂದೆ ಮಹಾ ನಾಯಕನ ಕೈವಾಡ ಇದೆ ಎಂದು ಹೇಳಿದ್ದರು. ಆ ಮಹಾ ನಾಯಕ ಅರಕಲಗೂಡು ಶಾಸಕರೇ ಇರಬಹುದು ಎಂದು ಪೋಸ್ಟ್ ಮಾಡಿದ್ದಾನೆ. ಸದ್ಯ ನವೀನ್ ಗೌಡ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.

VISTARANEWS.COM


on

Prajwal Revanna Case Naveen Gowda post against MLA A Manju
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಸಿಗುತ್ತಿದೆ. ಪೆನ್‌ಡ್ರೈವ್‌ ಹಂಚಿಕೆಯ ಪ್ರಮುಖ ಆರೋಪ ಹೊತ್ತಿರುವ ನವೀನ್‌ ಗೌಡ ಈ ಸಂಬಂಧ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದು, ಅರಕಲಗೂಡು ಶಾಸಕ ಎ. ಮಂಜು ಮೇಲೆ ಬೊಟ್ಟು ಮಾಡಿದ್ದಾನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳುತ್ತಿರುವ ಮಹಾ ನಾಯಕ ಇವರೇ ಎಂದು ಆರೋಪ ಮಾಡಿದ್ದಾನೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಫೇಸ್‌ಬುಕ್‌ನಲ್ಲಿ ನವೀನ್‌ ಗೌಡ ಹಾಕಿರುವ ಪೋಸ್ಟ್‌ನಲ್ಲಿ ಜೆಡಿಎಸ್‌ ಶಾಸಕ ಎ. ಮಂಜು ವಿರುದ್ಧ ನೇರವಾಗಿ ಆರೋಪ ಮಾಡಿದ್ದಾನೆ. ಆದರೆ, ನವೀನ್‌ ಗೌಡ ಈ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದು, ಅವರಿಗಾಗಿ ಎಸ್‌ಐಟಿಯವರು ಶೋಧ ಕಾರ್ಯ ನಡೆಸುತ್ತಿರುವುದಾಗಿ ಹೇಳಿಕೊಂಡಿದೆ. ಈ ಮಧ್ಯೆ ನವೀನ್‌ ಗೌಡ ಮಾತ್ರ ರಾಜಾರೋಷವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಅನ್ನು ಹಂಚಿಕೊಳ್ಳತೊಡಗಿದ್ದಾನೆ.

ನವೀನ್‌ ಗೌಡನ ಪೋಸ್ಟ್‌ನಲ್ಲೇನಿದೆ?

ನನಗೆ ಏಪ್ರಿಲ್20 ರಂದು ಸಿಕ್ಕ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕ ಮಂಜು ಅವರಿಗೆ ಕೊಟ್ಟಿದ್ದೇನೆ. ಏಪ್ರಿಲ್ 21 ರಂದು ಅರಕಲಗೂಡು ಮಾರುತಿ ಕಲ್ಯಾಣ ಮಂಟಪದಲ್ಲಿ ಅವರಿಗೆ ನೀಡಿದ್ದೇನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಡಿಯೊವನ್ನು ವೈರಲ್ ಮಾಡಿದ್ದರ ಹಿಂದೆ ಮಹಾ ನಾಯಕನ ಕೈವಾಡ ಇದೆ ಎಂದು ಹೇಳಿದ್ದರು. ಆ ಮಹಾ ನಾಯಕ ಅರಕಲಗೂಡು ಶಾಸಕರೇ ಇರಬಹುದು ಎಂದು ಪೋಸ್ಟ್ ಮಾಡಿದ್ದಾನೆ. ಸದ್ಯ ನವೀನ್ ಗೌಡ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.

ಎ. ಮಂಜುಗೂ ಸಂಕಷ್ಟ?

ಈಗಾಗಲೇ ಎಸ್‌ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಮಧ್ಯೆ ಪೆನ್‌ಡ್ರೈವ್‌ ಅನ್ನು ಹಾಸನ ಜಿಲ್ಲಾದ್ಯಂತ ಹಂಚಿಕೆ ಮಾಡಿರುವ ಆರೋಪವನ್ನು ಹೊತ್ತಿರುವ ನವೀನ್‌ ಗೌಡ ಮಾಡಿರುವ ಪೋಸ್ಟ್‌ ಈಗ ಚರ್ಚೆಗೆ ಎಡೆಮಾಡಿ ಕೊಟ್ಟಿದೆ. ಈತನ ಪೋಸ್ಟ್‌ ಅನ್ನು ಆಧಾರವಾಗಿಟ್ಟುಕೊಂಡು ಎಸ್‌ಐಟಿಯವರು ಮುಂದಿನ ಕ್ರಮವನ್ನು ಕೈಗೊಂಡು ಮಂಜು ಅವರನ್ನು ವಿಚಾರಣೆಗೆ ಒಳಪಡಿಸಲಿದ್ದಾರಾ? ಇಲ್ಲವೇ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಿದ್ದಾರಾ? ಅಥವಾ ಈ ಪೋಸ್ಟ್‌ ಅನ್ನು ನವೀನ್‌ ಗೌಡ ಯಾವ ಐಪಿ ಅಡ್ರೆಸ್‌ನಿಂದ ಮಾಡಿದ್ದಾನೆ ಎಂಬುದನ್ನು ತಿಳಿದುಕೊಂಡು ಶೋಧ ಕಾರ್ಯ ನಡೆಸಲಿದ್ದಾರೋ? ಎಂಬುದನ್ನು ನೋಡಬೇಕಿದೆ.

ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

ಇದು ಸೂಕ್ಷ್ಮ ವಿಷಯವಾಗಿದೆ. ಮಾತನಾಡುವಾಗ ಈ ಬಗ್ಗೆ ಎಚ್ಚರಿಕೆ ಇರಬೇಕು. ಬಾಯಿಗೆ ಬಂದಂತೆ ಹೇಳಿಕೆ ನೀಡಿದರೆ ಕಾನೂನು ಪ್ರಕಾರ ನಿಮ್ಮನ್ನೂ ಕರೆಸಿ ವಿಚಾರಣೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರು ಯಾರೋ, ಏನೇನನ್ನೋ ಹೇಳುತ್ತಾರೆ. ಪ್ರತಿಯೊಂದು ಸಾರ್ವಜನಿಕ ಹೇಳಿಕೆಗಳಿಗೆ ನಾವು ಉತ್ತರ ಕೊಡುವುದಕ್ಕೆ ಆಗಲ್ಲ. ಇದು ಗಂಭೀರವಾದ ಪ್ರಕರಣ ಆಗಿರುವುದರಿಂದ ಇದರ ಇನ್ವೆಸ್ಟಿಗೇಶನ್ ಆಗುವವರೆಗೂ ಕೂಡ ಯಾವುದೇ ಮಾಹಿತಿಯನ್ನು ಸಾರ್ವಜನಿಕ ವಲಯಕ್ಕೆ ತಿಳಿಸಲು ಆಗುವುದಿಲ್ಲ. ಈ ಕೇಸ್‌ ಬಗ್ಗೆ ಸಾರ್ವಜನಿಕರಾಗಲೀ ಅಥವಾ ರಾಜಕೀಯ ನಾಯಕರಗಾಲೀ, ಯಾವುದೇ ಹೇಳಿಕೆಗಳನ್ನು ಕೊಡುವಾಗ ಎಚ್ಚರಿಕೆಯಿಂದ ಕೊಡಬೇಕು. ಈ ವಿಚಾರದ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವವರ ಮೇಲೆಯೂ ಕ್ರಮ ಆಗುತ್ತದೆ. ಯಾವುದೇ ರೀತಿಯ ಹೇಳಿಕೆ ಕೊಟ್ಟರೆ 41A ಪ್ರಕಾರ ಅವರನ್ನು ಕೂಡ ವಿಚಾರಣೆಗೆ ಕರೆಯಬೇಕಾಗುತ್ತದೆ. ಎಚ್.ಡಿ. ಕುಮಾರಸ್ವಾಮಿ ಪದೇ ಪದೆ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಈ ವಿಷಯವನ್ನು ಅವರು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಪ್ರಜ್ವಲ್‌ ಬಂಧನಕ್ಕೆ ಎಸ್‌ಐಟಿ ಟೀಂ ವಿದೇಶಕ್ಕೆ ಹೋಗಲ್ಲ

ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ ಎಸ್‌ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗುವ ಅವಕಾಶವಿಲ್ಲ. ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದೇವೆ. ಇಂಟರ್ ಪೋಲ್‌ನವರು ಅವರಿಗೆ ಇನ್ಫಾರ್ಮೇಷನ್ ಕೊಡುತ್ತಾರೆ. ಯಾವ ದೇಶದಲ್ಲಿ ಇದ್ದಾರೆ ಎಂಬುದನ್ನು ಗುರುತಿಸಿ ಸಿಬಿಐಗೆ ಮಾಹಿತಿಯನ್ನು ನೀಡಲಾಗುತ್ತದೆ. ಸಿಬಿಐನವರು ನಮಗೆ ಮಾಹಿತಿಯನ್ನು ನೀಡುತ್ತಾರೆ. ಆಮೇಲೆ ನಮ್ಮ ಏಜನ್ಸಿಗಳಿಗೂ ಈ ಬಗ್ಗೆ ಗೊತ್ತಾಗುತ್ತದೆ ಎಂದು ಡಾ. ಜಿ. ಪರಮೇಶ್ವರ್‌ ವಿವರಿಸಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಎಲ್ಲ ಆಯಾಮಗಳಲ್ಲೂ ತನಿಖೆಯನ್ನು ನಡೆಸಲಾಗುತ್ತದೆ. ಯಾವುದೇ ವಿಚಾರಗಳನ್ನು ಸಾರ್ವಜನಿಕ ವಲಯದಲ್ಲಿ ಹೇಳುವುದಕ್ಕೆ ಆಗುವುದಿಲ್ಲ. ಸದ್ಯ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆಯನ್ನು ನಡೆಸುತ್ತಿದೆ. ತನಿಖೆ ನಡೆಯುತ್ತಿರುವಾಗ ನಾನು ಹೇಳಿಕೆ ಕೊಡುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

ಬಿಜೆಪಿಗೆ ಸೋಲಿನ ಭಯ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಡಿಮೆ ಸ್ಥಾನ ಬರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಾ. ಜಿ. ಪರಮೇಶ್ವರ್‌, ಬಿಜೆಪಿ ನಾಯಕರಿಗೆ ಸೋಲಿನ ಭಯ ಶುರುವಾಗಿದೆ. ಅದಕ್ಕೆ ಪದೇ ಪದೆ ಈ ರೀತಿ ಹೇಳುತ್ತಿದ್ದಾರೆ. ಫಲಿತಾಂಶ ಬಂದ ಮೇಲೆ ನೋಡೋಣ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

ಮೈಸೂರಿನ ಕೆ.ಆರ್. ನಗರದ ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ (HD Revanna) ಅವರು ಕಳೆದ ಮೂರು ದಿನಗಳಿಂದಲೂ ಕುಟುಂಬಸ್ಥರನ್ನು ಭೇಟಿಯಾಗದೆ ಪರದಾಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಾನುವಾರ (ಮೇ 12) ಬೆಳಗ್ಗೆ ವೆಜ್‌ ಪಲಾವ್‌ ಸೇವಿಸಿದ ರೇವಣ್ಣ, ಕಾಫಿ ಕುಡಿದು, ಪೇಪರ್‌ ಓದಿದ್ದಾರೆ. ಕುಟುಂಬಸ್ಥರು, ಆಪ್ತರನ್ನು ಭೇಟಿಯಾಗದ ಕಾರಣ ಪತ್ರಿಕೆಯೇ ಅವರಿಗೆ ಸಂಗಾತಿಯಾದಂತಾಗಿದೆ. ಇದರ ಮಧ್ಯೆಯೇ, ರೇವಣ್ಣ ಅವರಿಗೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ಎಚ್‌.ಡಿ.ರೇವಣ್ಣ ಅವರು ಯಾರನ್ನೂ ಭೇಟಿಯಾಗಲು ಸಾಧ್ಯವಾಗಿಲ್ಲ. ಇದರಿಂದಾಗಿ ಅವರು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಜೈಲಿನ ಬ್ಯಾರಕ್‌ನಲ್ಲಿ ಕೆಲ ಹೊತ್ತು ವಾಕ್‌ ಮಾಡಿದ ರೇವಣ್ಣ, ಬಳಿಕ ದೀರ್ಘ ಅವಧಿಗೆ ಪೇಪರ್‌ ಓದುತ್ತಲೇ ಕುಳಿತಿದ್ದರು ಎಂದು ಜೈಲಿನ ಮೂಲಗಳು ಮಾಹಿತಿ ನೀಡಿವೆ. ರೇವಣ್ಣ ಅವರು ಸೋಮವಾರ (ಮೇ 13) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅವರು ಪರಪ್ಪನ ಅಗ್ರಹಾರದಲ್ಲೇ ಇದ್ದಾರೆ.

ಲೈಂಗಿಕ ದೌರ್ಜನಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಇದಾದ ಬಳಿಕ ಅವರು ಸಲ್ಲಿಸಿದ ರೆಗ್ಯುಲರ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್‌, ಜಾಮೀನು ನೀಡದೆ ಮೇ 13ಕ್ಕೆ ವಿಚಾರಣೆ ಮುಂದೂಡಿತ್ತು. ಹಾಗಾಗಿ, ಸೋಮವಾರ ಮತ್ತೆ ವಿಚಾರಣೆ ನಡೆಯಲಿದ್ದು, ರೇವಣ್ಣ ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

ಭವಾನಿ ರೇವಣ್ಣಗೆ 2ನೇ ನೋಟಿಸ್‌

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೂ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಎರಡನೇ ನೋಟಿಸ್‌ ಜಾರಿ ಮಾಡಿದೆ. ಮೊದಲ ನೋಟಿಸ್ ಉತ್ತರಿಸದ ಹಿನ್ನೆಲೆಯಲ್ಲಿ ಎರಡನೇ ನೋಟಿಸ್ ಜಾರಿ ಮಾಡಲಾಗಿದೆ. ರೇವಣ್ಣ ಮೇಲೆ ಕೇಳಿ ಬಂದಿರುವ ಅಪಹರಣ ಪ್ರಕರಣದಲ್ಲಿ ಕೇಸ್‌ನಲ್ಲಿ ಕುಮ್ಮಕ್ಕು ಕೊಟ್ಟ ಆರೋಪವನ್ನು ಭವಾನಿ ರೇವಣ್ಣ ಹೊತ್ತಿದ್ದಾರೆ. ಈ ಸಂಬಂಧ ಹಲವಾರು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ಸಿದ್ಧವಾಗಿದೆ. ಆದರೆ, ಭವಾನಿ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದಾರೆ. ಈ ಬಾರಿಯೂ ಭವಾನಿ ವಿಚಾರಣೆಗೆ ಹಾಜರಾಗದಿದ್ದರೆ ಎಸ್‌ಐಟಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ.

Continue Reading

ಕರ್ನಾಟಕ

MLC Election: ಪರಿಷತ್‌ ಚುನಾವಣೆಗೂ ಮುನ್ನ ಒಪಿಎಸ್‌ ಮರು ಜಾರಿಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

MLC Election: ವಿಧಾನ ಸಭಾ ಚುನಾವಣೆ ಸಮಯದಲ್ಲಿ ಒಪಿಎಸ್‌ ಜಾರಿ ಮಾಡುವ ಭರವಸೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನೀಡಿತ್ತು. ಇದೀಗ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಒಪಿಎಸ್ ಜಾರಿ ಮಾಡಲು ಚಿಂತನೆ ಮಾಡುತ್ತಿದೆ ಎನ್ನಲಾಗಿದೆ. ಮತ್ತೊಂದೆಡೆ ಕಾಂಗ್ರೆಸ್‌ ನಾಯಕರು ಕೂಡ ಹಳೆಯ ಪಿಂಚಣಿ ಯೋಜನೆ ಮರು ಜಾರಿ ಮಾಡಲು ಸಿಎಂ ಹಾಗೂ ಡಿಸಿಎಂಗೆ ಮನವಿ ಮಾಡುತ್ತಿದ್ದಾರೆ.

VISTARANEWS.COM


on

Koo

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಗೆ (MLC Election) ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರು ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿದ್ದು, ಚುನಾವಣೆಯಲ್ಲಿ (Legislative Council Elections) ಆರೂ ಸ್ಥಾನಗಳನ್ನೂ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್‌ ರೂಪಿಸುತ್ತಿದೆ. ಈ ನಡುವೆ ಮತದಾರರನ್ನು ಸೆಳೆಯಲು ರಾಜ್ಯ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಜಾರಿ ಮಾಡಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ವಿಧಾನ ಸಭಾ ಚುನಾವಣೆ ಸಮಯದಲ್ಲಿ ಒಪಿಎಸ್‌ ಜಾರಿ ಮಾಡುವ ಭರವಸೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನೀಡಿತ್ತು. ಇದೀಗ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಪೂರ್ವ ಭಾವಿ ಸಭೆಯಲ್ಲೂ ಒಪಿಎಸ್ (Old Pension Scheme) ಜಾರಿ ಬಗ್ಗೆ ಚರ್ಚೆಯಾಗಿರುವುದು ಕಂಡುಬಂದಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಪರಿಷತ್‌ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳಾದ ಆಯನೂರು ಮಂಜುನಾಥ್, ಕೆ.ಕೆ. ಮಂಜುನಾಥ್, ಚಂದ್ರಶೇಖರ ಪಾಟೀಲ್, ಶ್ರೀನಿವಾಸ ಹಾಗೂ ರಾಮೋಜಿ,‌ ಮರಿತ್ತಿಬ್ಬೇಗೌಡ ಭಾಗಿಯಾಗಿದ್ದರು. ಈ ವೇಳೆ ಕೆ.ಎಚ್. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ, ತನ್ವೀರ್ ಸೇಠ್, ವಸಂತ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

ಒಪಿಎಸ್ ಮರು ಜಾರಿ ಮಾಡಿದ್ರೆ ಗೆಲುವು ಖಚಿತ

ರಾಜ್ಯದಲ್ಲಿ ಒಪಿಎಸ್ ಮರು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದರೆ ಗೆಲುವು ಖಚಿತ. ಹೀಗಾಗಿ ಒಪಿಎಸ್ ಬಗ್ಗೆ ಸರ್ಕಾರದ ನಿಲುವಿನ ಬಗ್ಗೆ ನೌಕರರಿಗೆ ಮನವರಿಕೆ ಮಾಡಿಕೊಡಿ ಎಂದು ಸಿಎಂ ಬಳಿ ಆಯನೂರು ಮಂಜುನಾಥ್ ಸೇರಿ ಕೈ ಅಭ್ಯರ್ಥಿಗಳು ಸಭೆಯಲ್ಲಿ ಮನವಿ ಮಾಡಿದ್ದಾರೆ. ಹೀಗಾಗಿ ನೌಕರರ ಮತದಾರರನ್ನು ಸೆಳೆಯಲು ಒಪಿಎಸ್‌ ಜಾರಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಲೋಕಸಭಾ ಚುನಾವಣೆ‌ ಬಳಿಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ ಸಜ್ಜಾಗಿದ್ದು, 6 ವಿಧಾನ ಪರಿಷತ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಕೈ ಅಭ್ಯರ್ಥಿಗಳ ಪಟ್ಟಿ

  1. ನೈಋತ್ಯ ಶಿಕ್ಷಕರ ಕ್ಷೇತ್ರ – ಕೆ.ಕೆ. ಮಂಜುನಾಥ್
  2. ದಕ್ಷಿಣ ಶಿಕ್ಷಕರ ಕ್ಷೇತ್ರ – ಮರತಿಬ್ಬೇಗೌಡ
  3. ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿ.ಟಿ.ಶ್ರೀನಿವಾಸ್
  4. ಈಶಾನ್ಯ ಪದವೀಧರ ಕ್ಷೇತ್ರ – ಡಾ.ಚಂದ್ರಶೇಖರ ಪಾಟೀಲ
  5. ನೈಋತ್ಯ ಪದವೀಧರ ಕ್ಷೇತ್ರ – ಆಯನೂರು ಮಂಜುನಾಥ್
  6. ಬೆಂಗಳೂರು ಪದವೀಧರ ಕ್ಷೇತ್ರ – ರಾಮೋಜಿ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ ವೇಳಾಪಟ್ಟಿ

ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಮೇ 16, 2024
ನಾಮಪತ್ರ ಪರಿಶೀಲನೆ: ಮೇ 17, 2024
ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕ: ಮೇ 20, 2024
ಮತದಾನ: ಜೂನ್‌ 03, 2024
ಫಲಿತಾಂಶ: ಜೂನ್‌ 06, 2024

Continue Reading
Advertisement
felicitation programme for SSLC student Harshita D M who got 2nd place in the state
ತುಮಕೂರು9 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ 2ನೇ ಸ್ಥಾನ ಪಡೆದ ಹರ್ಷಿತಾಗೆ ಸನ್ಮಾನ

130 crore crop compensation amount paid to Vijayanagara district says DC m S Diwakar
ವಿಜಯನಗರ11 mins ago

Vijayanagara News: ವಿಜಯನಗರ ಜಿಲ್ಲೆಗೆ 130 ಕೋಟಿ ರೂ. ಬೆಳೆ ಪರಿಹಾರ: ಡಿಸಿ

Prajwal Revanna Case Naveen Gowda post against MLA A Manju
ರಾಜಕೀಯ15 mins ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

ಕರ್ನಾಟಕ28 mins ago

MLC Election: ಪರಿಷತ್‌ ಚುನಾವಣೆಗೂ ಮುನ್ನ ಒಪಿಎಸ್‌ ಮರು ಜಾರಿಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

Queen's Premier League start
ಕ್ರಿಕೆಟ್52 mins ago

Queen’s Premier League: ಕಿರುತೆರೆ ,ಹಿರಿತೆರೆ ಹೆಣ್ಮಕ್ಕಳಿಗಾಗಿ ಶುರುವಾಯ್ತು ಕ್ವೀನ್ಸ್‌ ಪ್ರೀಮಿಯರ್ ಲೀಗ್!

Prajwal Revanna Case What was plan of advocate Devaraje Gowda Why did you leave for Delhi
ಕ್ರೈಂ52 mins ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ವಕೀಲ ದೇವರಾಜೇಗೌಡ ಪ್ಲ್ಯಾನ್‌ ಏನಿತ್ತು? ದೆಹಲಿಗೆ ಹೊರಟಿದ್ದು ಏಕೆ?

Mental Health Awareness Month
ಆರೋಗ್ಯ53 mins ago

Mental Health Awareness Month: ಮಾನಸಿಕ ಆರೋಗ್ಯ ಜಾಗೃತಿ ಮಾಸ; ಮತ್ತೆ ಮಗುವಿನಂತಾಗಲು ಪ್ರಯತ್ನಿಸಿ!

Narendra Modi
ದೇಶ55 mins ago

Narendra Modi: ತಾಯಂದಿರ ದಿನದಂದು ಮೋದಿಗೆ ವಿಶೇಷ ಉಡುಗೊರೆ ಕೊಟ್ಟ ಫ್ಯಾನ್ಸ್; ಏನದು ನೋಡಿ!

Murder case
ಕ್ರೈಂ56 mins ago

Murder Case : ಪತಿಯ ಡೆಡ್ಲಿ ಅಟ್ಯಾಕ್‌ಗೆ ಪತ್ನಿ ಸಾವು; ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

Kannada New Movie Moorane Krishnappa trailer Out
ಸ್ಯಾಂಡಲ್ ವುಡ್1 hour ago

Kannada New Movie: ಮನರಂಜನೆಯ ರಸದೌತಣ ಬಡಿಸಲು ಬಂದ ʻಮೂರನೇ ಕೃಷ್ಣಪ್ಪʼ: ಟ್ರೈಲರ್‌ ಔಟ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Naveen Gowda post against MLA A Manju
ರಾಜಕೀಯ15 mins ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ4 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ5 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ13 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ3 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

ಟ್ರೆಂಡಿಂಗ್‌