BJP Protest | ಪಾಕ್‌ ಸಚಿವ ಭುಟ್ಟೋ ವಿರುದ್ಧ ರಾಜ್ಯಾದ್ಯಂತ ಆಕ್ರೋಶ; ಕ್ಷಮೆಯಾಚನೆಗೆ ಒತ್ತಾಯ - Vistara News

ಉತ್ತರ ಕನ್ನಡ

BJP Protest | ಪಾಕ್‌ ಸಚಿವ ಭುಟ್ಟೋ ವಿರುದ್ಧ ರಾಜ್ಯಾದ್ಯಂತ ಆಕ್ರೋಶ; ಕ್ಷಮೆಯಾಚನೆಗೆ ಒತ್ತಾಯ

ಪ್ರಧಾನಿ ನರೇಂದ್ರ ಮೋದಿ ಕಟುಕ ಎಂದು ಹೇಳಿಕೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ವಿರುದ್ಧ ಬಿಜೆಪಿ ಕಾರ್ಯಕರ್ತರು ತಿರುಗಿ ಬಿದ್ದಿದ್ದಾರೆ. ರಸ್ತೆ ತಡೆದು, ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ (BJP Protest) ಹೊರಹಾಕಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ʻಕಟುಕʼ ಎಂದು ಹೇಳಿರುವುದಕ್ಕೆ ದೇಶಾದ್ಯಂತ ವ್ಯಾಪಕ ವಿರೋಧ, ಟೀಕೆಗಳು ವ್ಯಕ್ತವಾಗಿವೆ. ಈ ಹೇಳಿಕೆ ವಿರುದ್ಧ ಬಿಜೆಪಿ ಕಾರ್ಯಕರ್ತರು (BJP Protest) ಕೆಂಡಕಾರಿದ್ದು, ರಾಜ್ಯಾದ್ಯಂತ ಯುವ ಮೋರ್ಚಾ ಕಾರ್ಯಕರ್ತರು ತೀವ್ರವಾಗಿ ಪ್ರತಿಭಟಿಸಿದ್ದಾರೆ.

ಡಿಕೆಶಿ, ಭುಟ್ಟೋ ಹೇಳಿಕೆಗೆ ಬಿಜೆಪಿ ಕಿಡಿ
ಶಿವಮೊಗ್ಗದಲ್ಲೂ ಪ್ರತಿಭಟನೆ ಬಿಸಿ ಜೋರಾಗಿದ್ದು, ಪ್ರಧಾನಿ ಮೋದಿ ವಿರುದ್ಧದ ಬಿಲಾವಲ್ ಭುಟ್ಟೋ ಹೇಳಿಕೆಯನ್ನು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಖಂಡಿಸಿದ್ದು, ಉಗ್ರರ ಪರ ಡಿ.ಕೆ ಶಿವಕುಮಾರ್‌ ಹೇಳಿಕೆಗೂ ವಿರೋಧ ವ್ಯಕ್ತಪಡಿಸಲಾಗಿದೆ. ನಗರದ ಶಿವಪ್ಪನಾಯಕ ವೃತ್ತದಲ್ಲಿ ಕುಕ್ಕರ್ ಬ್ಲಾಸ್ಟ್‌ನ ರೂವಾರಿ ಶಾರಿಕ್‌ ಕೃತ್ಯವನ್ನು ಡಿಕೆಶಿ ಬೆಂಬಲಿಸಿದ್ದಾರೆಂದು ಆರೋಪಿಸಿದರು. ಇದು ವ್ಯಕ್ತಿಯ ಮಾನಸಿಕತೆ ಅಲ್ಲ, ಒಂದು ಪಕ್ಷ ಹಾಗೂ ಆ ದೇಶದ ಮಾನಸಿಕತೆ ಎಂದು ಟೀಕಿಸಿದರು. ಡಿ.ಕೆ. ಶಿವಕುಮಾರ್ ಶಾಸಕತ್ವವನ್ನು ರದ್ದುಪಡಿಸಿ, ಯುಎಪಿಎ ಕಾಯ್ದೆಯಡಿ ಬಂಧಿಸಲು ಒತ್ತಾಯಿಸಿದರು.

ಇತ್ತ ಪಾಕಿಸ್ತಾನ ವಿದೇಶಾಂಗ ಸಚಿವರ ಹೇಳಿಕೆಯು ಆ ದೇಶದ ಮಾನಸಿಕತೆಯನ್ನು ತೋರಿಸುತ್ತಿದೆ. ಬಿಲಾವಲ್ ಭುಟ್ಟೋ ಕೂಡಲೇ ಪ್ರಧಾನಿ ಮೋದಿ ಕ್ಷಮೆ ಕೇಳಬೇಕೆಂದು ಪ್ರತಿಭಟನಾಕಾರರ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಸೇರಿ ಕೆ.ಈ. ಕಾಂತೇಶ್, ಭಾನುಪ್ರಕಾಶ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.

ಪ್ರತಿಕೃತಿಗೆ ಚಪ್ಪಲಿ ಏಟು, ದಹನ
ಪಾಕಿಸ್ತಾನದ ಸಚಿವ ಭುಟ್ಟೋ ಪ್ರತಿಕೃತಿಗೆ ಚಪ್ಪಲಿ ಏಟು ಕೊಟ್ಟು ಪ್ರತಿಕೃತಿಯನ್ನು ದಹನ ಮಾಡಲಾಯಿತು. ವಿಜಯನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನದ ಸಚಿವ ಭುಟ್ಟೋ ಜರ್ದಾರಿ ಮೋದಿ ಬಗ್ಗೆ ಹಗುರವಾಗಿ ಮಾತನಾಡಿದ್ದು ಸರಿಯಲ್ಲ. ಕೂಡಲೇ ಕ್ಷಮೆಯಾಚಿಸಬೇಕೆಂದರು. ವಿಜಯನಗರದ ಹೊಸಪೇಟೆಯಲ್ಲಿಯೂ ಬಿಜೆಪಿ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದರು. ಬಿಜೆಪಿ ಮಹಿಳಾ ನಾಯಕಿ ಕವಿತಾ ಈಶ್ವರ್ ಸಿಂಗ್ ಸಾಥ್‌ ನೀಡಿದರು.

ಜನರ ದಿಕ್ಕು ತಪ್ಪಿಸಲು ಇಂತಹ ಹೇಳಿಕೆಗಳು
ರಾಯಚೂರಿನ ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಪಾಕ್ ಸಚಿವರ ಹೇಳಿಕೆಯನ್ನು ಖಂಡಿಸಿದರು. ಈ ಹೇಳಿಕೆಯನ್ನು ಪಕ್ಷಾತೀತವಾಗಿ ನಾವೆಲ್ಲರೂ ಖಂಡಿಸುತ್ತೇವೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನಪ್ರಿಯತೆ ನೋಡಿ ಪಾಕ್ ಕಂಗಾಲಾಗಿದೆ. ಆರ್ಥಿಕ ಮತ್ತು ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಜನರ ದಿಕ್ಕು ತಪ್ಪಿಸಲು ಇಂತಹ ಹೇಳಿಕೆ ಕೊಡುತ್ತಿದ್ದಾರೆ. ಇಂತಹ ಹೇಳಿಕೆ ಕೊಟ್ಟರೆ ಮುಂದೆ ಪರಿಣಾಮ ನೆಟ್ಟಗೆ ಇರುವುದಿಲ್ಲ ಎಂದು ಶಾಸಕ ಶಿವರಾಜ್ ಪಾಟೀಲ್ ಕಿಡಿಕಾರಿದರು.

ಇತ್ತ ಧಾರವಾಡದ ವಿವೇಕಾನಂದ ವೃತ್ತದಲ್ಲಿ ಪಾಕಿಸ್ತಾನ ಧ್ವಜ ಹಾಗೂ ಪಾಕ್‌ ಮಂತ್ರಿ ಭುಟ್ಟೋ ಭಾವಚಿತ್ರ ತುಳಿದು‌ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಬಳ್ಳಾಫುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಕೊಪ್ಪಳದ ಬಸವೇಶ್ವರ ಸರ್ಕಲ್‌ನಲ್ಲೂ ಪಾಕಿಸ್ತಾನದ ವಿರುದ್ಧದ ಪ್ರತಿಭಟನೆ ಜೋರಾಗಿತ್ತು. ಬಿಲಾವಲ್ ಭುಟ್ಟೋ ಭಾವಚಿತ್ರಕ್ಕೆ ಉಗಿದ ಕಾರ್ಯಕರ್ತರು, ಬಳಿಕ ಪ್ರತಿಕೃತಿ ದಹಿಸಿ ಆಕ್ರೋಶವನ್ನು ಹೊರಹಾಕಿದರು. ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳ್ಳಾರಿಯಲ್ಲೂ ಬಿಜೆಪಿ ಕಾರ್ಯಕರ್ತರು ಭುಟ್ಟೋ ಪ್ರತಿಕೃತಿ‌ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಪಾಕ್‌ ಮಂತ್ರಿಗೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಬೀದರ್‌ನ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಸಿ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಅವರ ಪ್ರತಿಕೃತಿ ಸುಟ್ಟು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವಾನಂದ ‌ಮಂಠಾಳಕರ್ ಸೇರಿದಂತೆ ಬಿಜೆಪಿ ಜಿಲ್ಲಾ ಮುಖಂಡರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಭುಟ್ಟೋ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ
ಕಾರವಾರದಲ್ಲಿ ನಗರದ ಸುಭಾಷ್ ವೃತ್ತದಲ್ಲಿ ಪಾಕ್ ಸಚಿವ ಭುಟ್ಟೋ ಅವಹೇಳನಕಾರಿ ಹೇಳಿಕೆ ಖಂಡಿಸಲಾಯಿತು. ಭಾವಚಿತ್ರ ಹಿಡಿದು ಧಿಕ್ಕಾರ ಕೂಗಿ ಭುಟ್ಟೋ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.

ದಾವಣಗೆರೆಯ ಜಯದೇವ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಾಕ್ ಸಚಿವ ಬಿಲಾವಲ್ ಭುಟ್ಟೋ ವಿರುದ್ಧ ಆಕ್ರೋಶ ಹೊರಹಾಕಿದ್ದು, ಜತೆಗೆ ಡಿಕೆಶಿ ಹೇಳಿಕೆಯನ್ನು ಖಂಡಿಸಲಾಯಿತು. ಭಯೋತ್ಪಾದಕರನ್ನು ಬೆಂಬಲಿಸಿದ ಡಿಕೆಶಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ದೇಶದಲ್ಲಿ ಭಯೋತ್ಪಾದಕರನ್ನು ಪೋಷಿಸುತ್ತಿರುವುದು ಕಾಂಗ್ರೆಸ್ ಎಂದು ಆಕ್ರೋಶ ಹೊರಹಾಕಿದರು. ಪಾಕ್ ಸಚಿವ ಭುಟ್ಟೋ ಹಾಗೂ ಡಿಕೆಶಿ ಭಾವಚಿತ್ರವನ್ನು ಕಾಲಲ್ಲಿ ತುಳಿದು, ಬೆಂಕಿ ಹಚ್ಚಿ ಕಿಡಿಕಾರಿದರು.

ಹೆದ್ದಾರಿ ತಡೆದು ಪ್ರತಿಭಟನೆ
ಮೋದಿ ವಿರುದ್ಧ ಬಿಲಾವಲ್ ಭುಟ್ಟೋ ಹೇಳಿಕೆ ಖಂಡಿಸಿ ಮಂಡ್ಯದಲ್ಲಿ ರಸ್ತೆಗಿಳಿದು ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಮಂಡ್ಯದ ಸಂಜಯ್ ವೃತ್ತದಲ್ಲಿ ಮಾನವ ಸರಪಳಿ ಮೂಲಕ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟಿಸಿದ್ದಾರೆ. ಬಳಿಕ ಬಿಲಾವಲ್ ಭುಟ್ಟೋ ಭಾವಚಿತ್ರ ಸುಡಲಾಗಿದೆ.

ಇದನ್ನೂ ಓದಿ | BJP Protest | ಭುಟ್ಟೋ ʻಕಟುಕʼ ಹೇಳಿಕೆಗೆ ಬಿಜೆಪಿ ಕೆಂಡ; ಬೆಂಗಳೂರು ಸೇರಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Rain News : ಮೇ 7ರಂದು ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೊಂದು ವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಹಾಸನ/ಬೆಂಗಳೂರು: ಮಂಗಳವಾರ ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಭಾರಿ ಆಲಿಕಲ್ಲು ಮಳೆಗೆ ಚಿಕ್ಕಮಗಳೂರು ನಗರ ನಿವಾಸಿಗಳು ಥಂಡಾ ಹೊಡೆದಿದ್ದಾರೆ. ಮಳೆಯಿಲ್ಲದೆ ಕಾದ ಕಾವಲಿಯಂತಾಗಿದ್ದ ಕಾಫಿನಾಡಿನಲ್ಲಿ ಕಳೆದೊಂದು ಗಂಟೆಯಿಂದ ಭಯಂಕರ ಮಳೆ ಸುರಿಯುತ್ತಿದೆ.

ರಸ್ತೆಯಲ್ಲಿ ಅರ್ಧ ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. 41 ಡಿಗ್ರಿ ತಲುಪುತ್ತಿದ್ದ ಬಿಸಿಲ ತಾಪಮಾನಕ್ಕೆ ಜನ ಹೈರಾಣಾಗಿದ್ದರು. ಧಾರಾಕಾರ ಮಳೆ ಕಂಡು ರೈತರು, ಬೆಳೆಗಾರರು ಸಂತಸಗೊಂಡರು. ಇನ್ನೂ ಆಲಿಕಲ್ಲು ಕೈಯಲ್ಲಿ ಹಿಡಿದು ಖುಷಿ ಪಟ್ಟರು.

Karnataka weather Forecast

ಹಾಸನದಲ್ಲೂ ಧಾರಾಕಾರ ಮಳೆ

ಹಾಸನ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಹಾಸನ, ಹೊಳೆನರಸೀಪುರ, ಅರಸೀಕೆರೆ ಭಾಗಗಳಲ್ಲಿ ಭಾರಿ ಗಾಳಿಯೊಂದಿಗೆ ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ. ಅರಸೀಕೆರೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಜೋರಾಗಿ ಆಲಿಕಲ್ಲು ಬೀಳುತ್ತಿರುವುದರಿಂದ ಸವಾರರು ಬೈಕ್‌ ನಿಲ್ಲಿಸಿ ರಸ್ತೆ ಬದಿ ನಿಲ್ಲುವಂತಾಯಿತು. ಬಿಸಿಲಿನಿಂದ ಕಂಗಾಲಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

ಮಂಗಳವಾರ ಸಂಜೆಗೆ ಲಘು ಮಳೆ ಎಚ್ಚರಿಕೆ

ಮೇ 7ರ ಸಂಜೆಗೆ ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ತುಮಕೂರು, ಉಡುಪಿಯಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಮುಂಜಾನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಗುಡುಗು ಮಿಂಚು ಜತೆಗೆ ಮಳೆಯಾಗಲಿದೆ. ಈ ವೇಳೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ಮತ್ತು 22 ಡಿ.ಸೆ ಇರಲಿದೆ.

ಇನ್ನೂ ಕೊಡಗು, ಮೈಸೂರು, ಮಂಡ್ಯ, ಹಾಸನ, ಕೋಲಾರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 40-50 ಕಿಮೀ) ಹಗುರದಿಂದ ಶುರುವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ವಿಜಯನಗರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ಇಂದು ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ; ಸಂಜೆಗೆ ಭಾರಿ ವರ್ಷಧಾರೆ

Karnataka Weather Forecast : ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮಳೆಯು (Rain News) ಅಬ್ಬರಿಸಲಿದೆ. ಜೋರಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಗುಡುಗು ಸಹಿತ ಮಳೆಯಾಗಲಿದ್ದು, ಬಿರುಗಾಳಿಯು ಜತೆಗೆ ಇರಲಿದೆ. ಹೀಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಗೆ ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ.

ಆಲಿಕಲ್ಲು ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗುಡುಗು ಸಹಿತ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ. ಮಲೆನಾಡಿನಲ್ಲಿ ಮಾಯವಾಗಿದ್ದ ಮಳೆಯು ಮತ್ತೆ ಹಾಜರಾತಿ ಹಾಕಿದೆ. ಮಲೆನಾಡಿನ ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಕೆಲವೆಡೆ ಭಾರೀ ಮಳೆಯೊಂದಿಗೆ ಅಬ್ಬರಿಸಲಿದೆ.

ಕರಾವಳಿಯಲ್ಲೂ ಮಳೆಯಿಲ್ಲದೇ ತಾಪಮಾನ ಹೆಚ್ಚಾಗಿತ್ತು. ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬಳ್ಳಾರಿಯಲ್ಲೂ ಮಳೆ ಅಬ್ಬರಿಸಲಿದೆ. ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ.

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದೊಂದಿಗೆ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

ಮಳೆ ನಡುವೆಯೂ ಈ ಜಿಲ್ಲೆಗಳಿಗೆ ಹೀಟ್‌ ವೇವ್‌

ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಹೀಟ್‌ ವೇವ್‌ ಎಚ್ಚರಿಕೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ಏ.7ರಂದು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾದ್ಯತೆ ಇದೆ.

ಶಾಖ ತರಂಗಕ್ಕೆ ಈ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಎಚ್ಚರಿಕೆ

ವಿಜಯನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯ ಜಿಲ್ಲೆಗಳಲ್ಲಿ ತಾಪಮಾನ ದುಪ್ಪಟ್ಟು ಆಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Lok Sabha Election 2024: ಲೋಕಸಭಾ ಚುನಾವಣೆಗೆ ಯಲ್ಲಾಪುರದಲ್ಲಿ ಸಕಲ ಸಿದ್ಧತೆ: ಅಜ್ಜಪ್ಪ ಸೊಗಲದ

Lok Sabha Election 2024: ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 233 ಮತಗಟ್ಟೆಗಳಿದ್ದು, 93961 ಪುರುಷ ಹಾಗೂ 92784 ಮಹಿಳೆಯರು ಸೇರಿ ಒಟ್ಟು 186745 ಮತದಾರಿದ್ದಾರೆ. ಈ ಪೈಕಿ 5065 ಯುವ ಮತದಾರರು ಮೇ 7 ರಂದು ಮಂಗಳವಾರ ಮತಚಲಾಯಿಸಲಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಅಜ್ಜಪ್ಪ ಸೊಗಲದ ತಿಳಿಸಿದ್ದಾರೆ.

VISTARANEWS.COM


on

All preparations in Yallapur assembly constituency for Lok Sabha election says Ajjappa Sogalada
Koo

ಯಲ್ಲಾಪುರ: ಲೋಕಸಭಾ ಚುನಾವಣೆಯ (Lok Sabha Election 2024) 2ನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಅಜ್ಜಪ್ಪ ಸೊಗಲದ ತಿಳಿಸಿದರು.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

ಈ ಕುರಿತು ಮಾಹಿತಿ ನೀಡಿ ಮಾತನಾಡಿದ ಅವರು, ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 233 ಮತಗಟ್ಟೆಗಳಿದ್ದು, 93961 ಪುರುಷ ಹಾಗೂ 92784 ಮಹಿಳೆಯರು ಸೇರಿ ಒಟ್ಟು 186745 ಮತದಾರಿದ್ದಾರೆ. ಈ ಪೈಕಿ 5065 ಯುವ ಮತದಾರರು ಮೇ 7ರಂದು ಮಂಗಳವಾರ ಮತ ಚಲಾಯಿಸಲಿದ್ದಾರೆ.

ಚುನಾವಣಾ ಕರ್ತವ್ಯಕ್ಕಾಗಿ 932 ಮತಗಟ್ಟೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, 233 ಗ್ರೂಪ್‌ ಡಿ ನೌಕರರು ಹಾಗೂ 414 ಪೊಲೀಸ್‌ ಸಿಬ್ಬಂದಿಗಳು ಸೇರಿದಂತೆ 1579 ಸಿಬ್ಬಂದಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಸಿಬ್ಬಂದಿಗಳಿಗಾಗಿ 37 ಕೆ.ಎಸ್‌.ಆರ್‌.ಟಿ.ಸಿ. ಬಸ್‌ ಸೇರಿದಂತೆ ಒಟ್ಟು 69 ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Kodagu News: ಸೋಮವಾರಪೇಟೆಯಲ್ಲಿ ಮರ ಬಿದ್ದು ಕಾರ್ಮಿಕ ಸಾವು

ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಮಸ್ಟರಿಂಗ್‌ ಹಾಗೂ ಡಿ-ಮಸ್ಟರಿಂಗ್‌ ಕೇಂದ್ರವನ್ನು ಮಾಡಲಾಗಿದ್ದು, ಸೋಮವಾರ ಮಧ್ಯಾಹ್ನ ಸಿಬ್ಬಂದಿಗಳು, ಇವಿಎಂ ಮತಯಂತ್ರದೊಂದಿಗೆ ತಮಗೆ ನಿಯೋಜಿಸಲಾದ ಮತಗಟ್ಟೆಯ ಕಡೆಗೆ ತೆರಳಿದರು.

Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

ಗಂಗಾವತಿ: ಲೋಕಸಭಾ ಚುನಾವಣೆ-2024 ಹಿನ್ನೆಲೆಯಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಮತದಾನದ ಮಹತ್ವ ಅರಿತಿರುವ ದಂಪತಿ, ದುಬೈನಿಂದ ಗಂಗಾವತಿಗೆ ಮತದಾನಕ್ಕಾಗಿ ಆಗಮಿಸಿದ್ದಾರೆ.

ನಗರದ ಎಪಿಎಂಸಿ ಸಮೀಪದ ನಿವಾಸಿಯಾಗಿರುವ ಉದ್ಯಮಿ ಆರ್ಹಾಳ ಶರಣಪ್ಪ ಅವರ ಪುತ್ರಿ ಐಶ್ವರ್ಯ ಗೌಡರ್ ಮತ್ತು ಅಳಿಯ ಕಿರಣ್ ಪಾಟೀಲ್ ದಂಪತಿ ದುಬೈನಲ್ಲಿ ನೆಲೆಸಿದ್ದಾರೆ, ಲೋಕಸಭಾ ಚುನಾವಣೆಗೆ ಮತದಾನ ಮಾಡುವ ಉದ್ದೇಶಕ್ಕಾಗಿಯೇ ದುಬೈನಿಂದ ಗಂಗಾವತಿಗೆ ಆಗಮಿಸಿದ್ದಾರೆ.

ಕಿರಣ್ ಪಾಟೀಲ್ ಕೂಡ ಗಂಗಾವತಿಯ ಕುವೆಂಪು ಬಡಾವಣೆಯ ನಿವಾಸಿಯಾಗಿದ್ದು, ಕಳೆದ ಒಂದೂವರೆ ವರ್ಷದಿಂದ ದುಬೈನಲ್ಲಿ ನೆಲೆಸಿದ್ದಾರೆ. ಕಳೆದ ಡಿಸಂಬರ್‌ನಲ್ಲಿ ಐಶ್ವರ್ಯ ಮತ್ತು ಕಿರಣ್ ಪಾಟೀಲ್‌ಗೆ ವಿವಾಹವಾಗಿದ್ದು, ಇಬ್ಬರೂ ದುಬೈನಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಇಲ್ಲಿನ ಎಪಿಎಂಸಿ ಮುಂಭಾಗದ ಟಿಎಪಿಸಿಎಂಎಸ್‌ನ ಮತಗಟ್ಟೆಯಲ್ಲಿ ಐಶ್ವರ್ಯ ಮತದಾನ ಮಾಡಲಿದ್ದು, ಬೆಂಡರವಾಡಿಯ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಕಿರಣ್ ಪಾಟೀಲ್ ಮತದಾನ ಮಾಡಲಿದ್ದಾರೆ. ಮತದಾನದ ಬಳಿಕ ಈ ದಂಪತಿ ಮತ್ತೆ ದುಬೈಗೆ ತೆರಳಲಿದ್ದಾರೆ.

ಇದನ್ನೂ ಓದಿ: Weight Loss Tips Kannada: ಈ ಐದರಲ್ಲಿ ಒಂದು ಜ್ಯೂಸ್‌ ಕುಡಿಯುತ್ತಿದ್ದರೂ ಸಾಕು, ನಿಮ್ಮ ದೇಹ ತೂಕ ಇಳಿಯುತ್ತದೆ!

`ಭಾರತ ಬದಲಾಗುತ್ತಿದ್ದು, ಅಭಿವೃದ್ಧಿಗೆ ವೇಗ ಸಿಕ್ಕಿದೆ. ವಿದೇಶಗಳಲ್ಲೂ ಭಾರತದ ಬಗ್ಗೆ ಗೌರವ ಭಾವ ಮೂಡಿದೆ. ಹೀಗಾಗಿ ಭಾರತದ ಪ್ರಜೆಗಳೆಂದು ಹೇಳಿಕೊಳ್ಳಲು ನಮಗೆ ಹೆಮ್ಮೆ ಎನಿಸುತ್ತಿದೆ. ಭಾರತದ ಪೌರರಾಗಿ ಮತದಾನ ಮಾಡಲು ಬಂದಿದ್ದಾಗಿ ಐಶ್ವರ್ಯ ಮತ್ತು ಕಿರಣ್ ದಂಪತಿ ತಿಳಿಸಿದ್ದಾರೆ.

Continue Reading

ಮಳೆ

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Rain News : ಬೆಂಗಳೂರಲ್ಲಿ ಎರಡು ದಿನಗಳಿಂದ ಕಾಣೆಯಾಗಿದ್ದ, ಸೋಮವಾರ (ಮೇ.6) ಸಂಜೆ ಆಗುತ್ತಿದ್ದಂತೆ ಮಳೆಯು (Bengaluru Rains) ಮತ್ತೆ ಅಬ್ಬರಿಸಿದೆ. ಭಾರಿ ಗಾಳಿಯೊಂದಿಗೆ ಗುಡುಗು, ಸಿಡಿಲಿನ ಮಳೆಯಾಗಿದೆ. ಇನ್ನೊಂದು ವಾರ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯಾದ್ಯಂದ ಬಿಡುವು ಕೊಟ್ಟ ಮಳೆರಾಯ ಮತ್ತೆ ಅಬ್ಬರಿಸಲು ಸಜ್ಜಾಗುತ್ತಿದ್ದಾನೆ. ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನತೆಗೆ ಸಂಜೆ ಆಗುತ್ತಿದ್ದಂತೆ ಮಳೆಯು ಧರೆಗಿಳಿದಿತ್ತು. ಬೆಂಗಳೂರು (Benagluru Rains), ದೇವನಹಳ್ಳಿ, ಏರ್‌ಪೋರ್ಟ್‌ ಸುತ್ತಮುತ್ತ ಜೋರು ಗಾಳಿಯೊಂದಿಗೆ ಮಳೆ ಶುರುವಾಯಿತು. ಆಗಾಗ ಗುಡುಗು ಸಿಡಿಲು ಬಂದು ಹೋಗಿತ್ತು. ಇನ್ನೊಂದು ವಾರ ಬಿರುಗಾಳಿ ಜತೆಗೆ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸಚನೆಯನ್ನು (Karnataka Weather Forecast) ನೀಡಿದೆ.

ಆನೇಕಲ್‌ನ ವಣಕನಹಳ್ಳಿ, ಸೋಲೂರು ಗೊಮ್ಮಾಳಾಪುರ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಕಳೆದ ಅರ್ಧ ಗಂಟೆಯಿಂದ ಮಳೆಯು ಸುರಿಯುತ್ತಿದ್ದು, ಕಾದ ಕೆಂಡವಾಗಿದ್ದ ವಾತಾವರಣ ತಂಪಾಗಿದೆ. ಬೆಂಗಳೂರು ನಗರದ ವಿಧಾನಸೌಧ, ಚಾಲುಕ್ಯ ಸರ್ಕಲ್, ಆನಂದ್ ರಾವ್ ಸರ್ಕಲ್, ಮೆಜೆಸ್ಟಿಕ್ ಸೇರಿ ಶಿವಾಜಿನಗರ, ಕೆಂಗೇರಿ ಅಸುಪಾಸು ಮಳೆಯಾಗುತ್ತಿದೆ. ಇನ್ನೂ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಮಳೆಯಲ್ಲಿ ಸಿಲುಕಿಕೊಂಡರು. ಇತ್ತ ದಿಢೀರ್‌ ಮಳೆಗೆ ಬಸ್‌ ನಿಲ್ದಾಣ, ಸೇತುವೆ ಕೆಳಗೆ ಆಶ್ರಯಿಸಿದರು.

ಇದನ್ನೂ ಓದಿ: Summer Holiday Fashion: ಸೀಸನ್‌ ಟ್ರೆಂಡ್‌ನ ಟಾಪ್‌ ಲಿಸ್ಟ್‌ನಲ್ಲಿ ಸಮ್ಮರ್‌ ಹಾಲಿಡೇ ಫ್ಯಾಷನ್‌

ದೇವನಹಳ್ಳಿ ಸುತ್ತಮುತ್ತ ತುಂತುರು ಮಳೆ

ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನತೆಗೆ ಸ್ವಲ್ಪ ಮಟ್ಟಿಗೆ ವರುಣ ತಂಪೆರದಿದ್ದಾನೆ. ಮಳೆ ಆರಂಭವಾಗುತ್ತಿದ್ದಂತೆ ಜನರು ತಮ್ಮ ಮೊಬೈಲ್‌ಗಳಲ್ಲಿ ಮಳೆ ಸೆರೆ ಹಿಡಿಯಲು ಮುಂದಾದ ದೃಶ್ಯ ಕಂಡು ಬಂತು.

ಮೇ 10ರವರೆಗೆ ಮಳೆಯಾರ್ಭಟ

ಚಾಮರಾಜನಗರ ಮತ್ತು ರಾಮನಗರದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಒಂದು ಅಥವಾ ಎರಡು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಮೈಸೂರು ಮತ್ತು ಮಂಡ್ಯದಲ್ಲೂ ಕೆಲವೆಡೆ ವ್ಯಾಪಕ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ ನೀಡಲಿದೆ.

ಮತದಾನಕ್ಕೆ ಮಳೆ ಅಡ್ಡಿ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಹೀಗಾಗಿ ಮತದಾನಕ್ಕೆ ಮಳೆರಾಯ ಅಡ್ಡಿಯಾಗಲಿದ್ದನ್ನಾ ಎಂಬ ಅನುಮಾನವಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case HD Revanna suffers heartburn and gastric problems Shift to hospital
ರಾಜಕೀಯ6 mins ago

Prajwal Revanna Case: ಎಚ್.ಡಿ. ರೇವಣ್ಣಗೆ ಎದೆ ಉರಿ, ಗ್ಯಾಸ್ಟ್ರಿಕ್‌ ತೊಂದರೆ; ಆಸ್ಪತ್ರೆಗೆ ಶಿಫ್ಟ್

Lok Sabha Election 2024
Lok Sabha Election 20248 mins ago

Lok Sabha Election 2024: ಕೈಗಳಿಲ್ಲದಿದ್ದರೂ ಮತದಾನ ಮಾಡಿ ಮಾದರಿಯಾದ ಅಂಕಿತ್ ಸೋನಿ

Met Gala 2024
ಫ್ಯಾಷನ್13 mins ago

Met Gala 2024: ಮೆಟ್ ಗಾಲಾದಲ್ಲಿ 200 ಕ್ಯಾರಟ್ ವಜ್ರ ಧರಿಸಿ ಗಮನ ಸೆಳೆದ ಸುಧಾ ರೆಡ್ಡಿ! ಯಾರಿವರು?

IPL 2024: KKR's Flight to Kolkata Unexpectedly Diverted Mid-Air
ಪ್ರಮುಖ ಸುದ್ದಿ19 mins ago

IPL 2024 : ಗುರಿ ಬಿಟ್ಟು ಬೇರೆ ಕಡೆಗೆ ಪ್ರಯಾಣಿಸಿದ ಕೆಕೆಆರ್​ ಆಟಗಾರರಿದ್ದ ವಿಮಾನ!

Akshaya Tritiya 2024
ಧಾರ್ಮಿಕ20 mins ago

Akshaya Tritiya 2024: ಅಕ್ಷಯ ತೃತೀಯದಂದು ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವುದು?

Kulgam
ದೇಶ31 mins ago

Kulgam: ಪೂಂಚ್‌ ದಾಳಿಗೆ ಸೇನೆ ಸೇಡು; ಒಬ್ಬ ಲಷ್ಕರ್‌ ಕಮಾಂಡರ್‌ ಸೇರಿ ಮೂವರು ಉಗ್ರರ ಖತಂ

Lok Sabha Election
Latest46 mins ago

Lok Sabha Election : ರಾಜಕೀಯಕ್ಕಾಗಿ ದ್ವೇಷ ಸೃಷ್ಟಿ; ಬಿಜೆಪಿ ವಿರುದ್ಧ ವಿಡಿಯೊ ಮೂಲಕ ಟೀಕೆ ಮಾಡಿದ ಸೋನಿಯಾ ಗಾಂಧಿ

guava leaves benefits
ಆರೋಗ್ಯ57 mins ago

Guava Leaves Benefits: ಕೇವಲ ಸೀಬೆ ಹಣ್ಣಲ್ಲ, ಎಲೆಯಿಂದಲೂ ಎಷ್ಟೊಂದು ಪ್ರಯೋಜನಗಳು!

t20 world cup
ಕ್ರೀಡೆ1 hour ago

T20 World Cup : ಕೊಹ್ಲಿಯನ್ನು ಎದುರಿಸಲು ಪ್ಲ್ಯಾನ್​ ರೆಡಿ ಇದೆ ಎಂದ ಬಾಬರ್ ಅಜಮ್​

Lok Sabha Election 2024
ಪ್ರಮುಖ ಸುದ್ದಿ1 hour ago

Lok Sabha Election 2024: ಸಂಜೆ 5ಗಂಟೆವರೆಗೆ ಶೇ.66.05 ವೋಟಿಂಗ್‌; ಚಿಕ್ಕೋಡಿಯಲ್ಲಿ ಅತಿ ಹೆಚ್ಚು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ3 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 day ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

ಟ್ರೆಂಡಿಂಗ್‌