Site icon Vistara News

BJP Rally: ಫೆ. 7ರಂದು ಬಿಜೆಪಿ ಸಮಾವೇಶ: ಕಾರವಾರಕ್ಕೆ ಆಗಮಿಸಲಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್

BJP Rally karwar

#image_title

ಕಾರವಾರ: ನಗರದ ಮಾಲಾದೇವಿ ಮೈದಾನದಲ್ಲಿ ಫೆ. 7 ರಂದು ಮಧ್ಯಾಹ್ನ 3ಕ್ಕೆ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ (BJP Rally) ಪಾಲ್ಗೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಆಗಮಿಸಲಿದ್ದಾರೆ.

ಕೆಲ ದಿನಗಳಲ್ಲೇ ಚುನಾವಣೆ ಘೋಷಣೆಯಾಗುವ ಹಿನ್ನೆಲೆಯಲ್ಲಿ ಎಲ್ಲ ಪಕ್ಷದ ರಾಜ್ಯ ನಾಯಕರು ಪ್ರವಾಸ ಕೈಗೊಳ್ಳುತ್ತಿದ್ದು, ಚುನಾವಣಾ ತಯಾರಿ ಎಂಬಂತೆ ಕಟೀಲ್ ಕೂಡ ಕಾರವಾರ ಪ್ರವಾಸ ಕೈಗೊಳ್ಳುತ್ತಿದ್ದಾರೆ. ನಗರದಲ್ಲಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಅವರು, ಪಕ್ಷದ ಸಂಘಟನೆಯನ್ನು ಇನ್ನೂ ಚುರುಕುಗೊಳಿಸಲು ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ ಎನ್ನಲಾಗಿದೆ.

ಈ ಸಮಾವೇಶದಲ್ಲಿ ರಾಜ್ಯಾಧ್ಯಕ್ಷರೊಂದಿಗೆ ಜಿಲ್ಲೆಯ ಅನೇಕ ನಾಯಕರು ಸೇರಿದಂತೆ ಗಣ್ಯರು ಕೂಡ ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಎಂಟು ಸಾವಿರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಪ್ರಮುಖರು ಸೇರುವ ನಿರೀಕ್ಷೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: RBI MPC Meet : ಆರ್‌ಬಿಐ ರೆಪೊ ದರ 0.25% ಏರಿಕೆ ಸಾಧ್ಯತೆ, ಸಾಲದ ಇಎಂಐ, ಠೇವಣಿ ದರ ಹೆಚ್ಚಳ ನಿರೀಕ್ಷೆ

ಬಿಜೆಪಿ ಪೂರ್ವಭಾವಿ ಸಭೆ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಅವರು ಕಾರವಾರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಬೂತ್ ಅಧ್ಯಕ್ಷರು ಹಾಗೂ ಬಿಎಲ್‌ಎ 2 ಸಮಾವೇಶದ ಬಗ್ಗೆ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯಾಧ್ಯಕ್ಷರ ಸ್ವಾಗತದ ತಯಾರಿ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಈ ವೇಳೆ ಕಾರವಾರ-ಅಂಕೋಲಾ ಕ್ಷೇತ್ರದ ಎಲ್ಲಾ ಬಿಜೆಪಿ ಮೋರ್ಚಾದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಬಿಎಲ್‌ಎ- 2, ಪಕ್ಷದ ಹಿರಿಯರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಉಪಸ್ಥಿತರಿದ್ದು, ರಾಜ್ಯಾಧ್ಯಕ್ಷರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮುಖಂಡರು ಸಭೆಯಲ್ಲಿ ಕರೆಕೊಟ್ಟರು.

ಇದನ್ನೂ ಓದಿ: Parliament Session: ಸಂಸತ್ತಿನಲ್ಲಿ ಅದಾನಿ ಗಲಾಟೆ, ಕಲಾಪ ಮುಂದೂಡಿಕೆ; ಗಾಂಧಿ ಪ್ರತಿಮೆ ಎದುರು ಪ್ರತಿಪಕ್ಷಗಳ ಪ್ರತಿಭಟನೆ

ಬಿಜೆಪಿಯ ಗ್ರಾಮೀಣ ಪ್ರಭಾರಿ ಗಜಾನನ ಗುನಗಾ, ನಗರ ಪ್ರಭಾರಿ ಆರತಿ ಗೌಡಾ, ಜಿಲ್ಲಾ ಉಪಾಧ್ಯಕ್ಷೆ ನಯನಾ ನೀಲಾವರ, ಬಿಜೆಪಿ ವಿಶೇಷ ಆಹ್ವಾನಿತ ಮನೋಜ ಭಟ್ಟ, ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಉದಯ ಬಶೆಟ್ಟಿ, ಬಿಜೆಪಿ ನಗರಾಧ್ಯಕ್ಷ ನಾಗೇಶ ಕುರ್ಡೇಕರ, ಗ್ರಾಮೀಣ ಅಧ್ಯಕ್ಷ ಸುಭಾಷ್ ಗುನಗಿ ಸೇರಿದಂತೆ ಬಿಜೆಪಿ ನಗರ ಹಾಗೂ ಗ್ರಾಮೀಣ ಮೋರ್ಚಾದ ಎಲ್ಲ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು, ಕಾರವಾರ ನಗರಸಭಾ ಸದಸ್ಯರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಮಂಡಲ ಪ್ರಮುಖರು ಉಪಸ್ಥಿತರಿದ್ದರು.

Exit mobile version