Congress Guarantee: ಗ್ಯಾರಂಟಿಗಳಿಗಾಗಿ ಎಸ್ಸಿ, ಎಸ್ಟಿ ಅನುದಾನಕ್ಕೆ ಕತ್ತರಿ; ದಲಿತರಿಗೆ ಸರ್ಕಾರದಿಂದ ಮೋಸ ಎಂದ ಬಿಜೆಪಿ - Vistara News

ಕರ್ನಾಟಕ

Congress Guarantee: ಗ್ಯಾರಂಟಿಗಳಿಗಾಗಿ ಎಸ್ಸಿ, ಎಸ್ಟಿ ಅನುದಾನಕ್ಕೆ ಕತ್ತರಿ; ದಲಿತರಿಗೆ ಸರ್ಕಾರದಿಂದ ಮೋಸ ಎಂದ ಬಿಜೆಪಿ

Congress Guarantee: ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ. ಅನುದಾನ ಕಡಿತ ಮಾಡುವ ಮೂಲಕ ದಲಿತರಿಗೆ ಕಾಂಗ್ರೆಸ್‌ ಸರ್ಕಾರ ಮೋಸ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

VISTARANEWS.COM


on

CM Siddaramaiah Meeting
ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ ಪ್ರಗತಿ ಪರಿಶೀಲನೆ ಸಭೆ ನಡೆಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಎಸ್‌ಸಿ-ಎಸ್‌ಟಿ ಜನಾಂಗಕ್ಕಿರುವ ಯೋಜನೆಗಳ ಅನುದಾನ ಕಡಿತ ಮಾಡಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ ಹೊರಹಾಕಿದೆ. 5 ಗ್ಯಾರಂಟಿಗಳ (Congress Guarantee) ಹೆಸರಿನಲ್ಲಿ 75 ಸಾವಿರ ಕೋಟಿ ರೂ.ಗಳನ್ನು ಜನರಿಂದ ರಾಜ್ಯ ಸರ್ಕಾರ ಸುಲಿಗೆ ಮಾಡುವ ಮೂಲಕ ದಲಿತರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದೆ.

ಈ ಬಗ್ಗೆ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿ, ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ.ಗೆ 50 ಸಾವಿರ ಕೋಟಿ ರೂ. ಖರ್ಚು ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದರೆ, ಈಗಾಗಲೇ ಜುಲೈ ತಿಂಗಳು ಮುಗಿದಿದೆ. 50 ಸಾವಿರ ಕೋಟಿ ರೂ. ಜನರಿಗೆ ಕೊಡುವ ಬದಲಿಗೆ 75 ಸಾವಿರ ಕೋಟಿ ರೂ. ಟೋಪಿ ಹಾಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇಂತಹ ಮೋಸದಾಟ ಖಂಡನೀಯ ಎಂದು ಕಿಡಿಕಾರಿದರು.

ಇದನ್ನೂ ಓದಿ | Karnataka politics : ಕೈ ಹೈಕಮಾಂಡ್‌ಗೆ ಸರ್ಕಾರದ ವರ್ಗಾವಣೆ ದಂಧೆ ರಿಪೋರ್ಟ್‌ ಕೊಟ್ಟ ಬಿ.ಕೆ. ಹರಿಪ್ರಸಾದ್!

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆನ್ನೆ ಸಮಾಜ ಕಲ್ಯಾಣ ಇಲಾಖೆಯ ವಿಶೇಷ ಅನುದಾನ ಸಂಬಂಧಿತ ಸಭೆ ಮಾಡಿ, ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ.ಯ 11 ಸಾವಿರ ಕೋಟಿ ರೂ. ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಹೀಗಾದರೆ ದೀನದಲಿತರು, ಬಡವರು, ಶಿಕ್ಷಣ ವಂಚಿತರು, ನಿರುದ್ಯೋಗಿಗಳ ಸ್ಥಿತಿ ಏನಾಗಬೇಕು ಎಂದು ತಿಳಿಸಿದರು.

ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ. ಅನುದಾನದಲ್ಲಿ ಮುಖ್ಯವಾಗಿ ಶಿಕ್ಷಣಕ್ಕೆ ಆದ್ಯತೆ ಕೊಡಬೇಕು. ಉದ್ಯೋಗ ನೀಡಿಕೆ, ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಬೇಕು. ಆರೋಗ್ಯಕ್ಕೆ ಅನುದಾನ ಕೊಡಬೇಕೆಂಬುದೇ ಸಂವಿಧಾನದ ಆಶಯ. ನಮ್ಮ ಸರ್ಕಾರ ಇದ್ದಾಗ ಹಿಂದೆಯೂ ಗಂಗಾ ಕಲ್ಯಾಣ ಯೋಜನೆ, ಭೂಮಿ ಖರೀದಿ, ಮನೆಗಳ ನಿರ್ಮಾಣ, ಹಾಸ್ಟೆಲ್‍ಗಳು, ವಸತಿಶಾಲೆ ನಿರ್ಮಿಸಲು ಅನುದಾನ ನೀಡಿದ್ದೇವೆ. ಈ ಸರ್ಕಾರ ಹಾಸ್ಟೆಲ್ ನಿರ್ಮಾಣ, ವಸತಿ ಶಾಲೆ ನಿರ್ಮಾಣಕ್ಕೆ ಒಂದೇ ಒಂದು ರೂಪಾಯಿ ಇಟ್ಟಿಲ್ಲ ಎಂದು ಟೀಕಿಸಿದರು.

ಎಸ್‍ಸಿ, ಎಸ್‍ಟಿ ಜನಾಂಗಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಶೇ. 24 ಅನುದಾನ ಕೊಡುವ ಶ್ರೇಷ್ಠ ಕೆಲಸ ಮಾಡಿದ್ದಾಗಿ ಸಿದ್ದರಾಮಯ್ಯನವರು ಎದೆ ಬಡಿದುಕೊಳ್ಳುತ್ತಿದ್ದರು. ಆದರೆ, ಈಗ ಅವರು ಮಾಡಿರುವುದಾರೂ ಏನು? 156 ವಸತಿ ಶಾಲೆಯ ಕಟ್ಟಡದ ಕಾಮಗಾರಿ ಕಳೆದ 3 ತಿಂಗಳಿನಿಂದ ನಿಲ್ಲಿಸಿದ್ದಾರೆ. 75 ಹಾಸ್ಟೆಲ್‍ಗಳ ನಿರ್ಮಾಣ ಕಾರ್ಯ ಸ್ಥಗಿತವಾಗಿದೆ. 108 ವಸತಿ ಶಾಲೆಗಳಿಗೆ ಪ್ರತಿ ಶಾಲೆಗೆ 10 ಎಕರೆಯಷ್ಟು ಭೂಮಿಯನ್ನು ನಾವು ನೀಡಿದ್ದೆವು. ಅವುಗಳಿಗೆ ಹಣ ಮಂಜೂರು ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಮಹದೇವಪ್ಪ ಸುಮ್ಮನೆ ರಾಜಕೀಯಕ್ಕೆ ಬಂದವರಲ್ಲ. ಅವರಿಗೆ ದಲಿತ ಸಂಘರ್ಷ ಸಮಿತಿ ಹೋರಾಟದ ಹಿನ್ನೆಲೆ ಇದೆ. ಅವರು ಯಾವುದೇ ಕಾರಣಕ್ಕೂ ಅನುದಾನ ಹೊಂದಾಣಿಕೆಯನ್ನು ಒಪ್ಪಬಾರದು ಎಂದು ಆಗ್ರಹಿಸಿದರು.

ಎಸ್‍ಸಿ, ಎಸ್‍ಟಿ ಜನಾಂಗ ಕಡೆಗಣಿಸಿದರೆ ಹೋರಾಟ

ಬಡವರ ಮಕ್ಕಳಿಗೆ ಓದಲು ಅವಕಾಶ ಮಾಡಿಕೊಡಲು ಹಾಸ್ಟೆಲ್ ನಿರ್ಮಿಸಿಕೊಡಿ, ವಸತಿ ಶಾಲೆಗಳನ್ನು ಪೂರ್ಣಗೊಳಿಸಿ ಬಡವರ ಮಕ್ಕಳಿಗೆ ಅವಕಾಶ ನೀಡಿ. ಹಾಸ್ಟೆಲ್‍ನಲ್ಲಿ ಒಂದು ಕೊಠಡಿಯಲ್ಲಿ 20ರಿಂದ 30 ಹುಡುಗರನ್ನು ಕುರಿ ತುಂಬಿಸಿದಂತೆ ತುಂಬಿಸಿ ಓದಿಸಲು ಸಾಧ್ಯವಿಲ್ಲ. ಅವರಿಗೆ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆ ಸರಿಯಾಗಿಲ್ಲ. 11 ಸಾವಿರ ಕೋಟಿ ಪೈಕಿ 2,500 ಕೋಟಿಯನ್ನು ಹಾಸ್ಟೆಲ್ ಮತ್ತು ವಸತಿ ಶಾಲೆಗೆ ಕೊಡಬೇಕು ಎಂದು ಗೋವಿಂದ ಕಾರಜೋಳ ಅವರು ಆಗ್ರಹಿಸಿದರು.

ಭೂಮಿ ಖರೀದಿಗೆ 2,500 ಕೋಟಿರೂ. , ಗಂಗಾಕಲ್ಯಾಣ ಯೋಜನೆಗೆ 1 ಸಾವಿರ ಕೋಟಿ ರೂ. ಕೊಡಬೇಕು ಎಂದು ಒತ್ತಾಯಿಸಿದ ಅವರು, ಬಸ್ಸಿನಲ್ಲಿ ಪುಕ್ಕಟೆ ಪ್ರಯಾಣ, ಉಚಿತ ವಿದ್ಯುತ್ ನೀಡಿದ್ದಾಗಿ ಹೇಳಿಕೊಂಡು, ಅದನ್ನೆಲ್ಲ ಎಸ್‍ಸಿ, ಎಸ್‍ಟಿ ಖಾತೆಗೆ ಹಾಕುವುದು ಮೋಸದಾಟ ಎಂದು ಹೇಳಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ಎನ್.ರವಿಕುಮಾರ್ ಅವರು ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿ ಯೋಜನೆಗಳಿಗೆ ದಲಿತರ ಏಳಿಗೆ, ಕಲ್ಯಾಣಕ್ಕೋಸ್ಕರ ಮೀಸಲಿಟ್ಟ ಹಣವನ್ನು ಒಂದೆಡೆ ನೀಡುತ್ತಿದೆ. ಅಷ್ಟೂ ಸಾಕಾಗದೆ ಬೆಲೆ ಏರಿಕೆಯ ಬರೆಯನ್ನೂ ಈ ಸರ್ಕಾರ ಹಾಕುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸುಮಾರು 50 ಸಾವಿರ ಕೋಟಿ ರೂಪಾಯಿ ಸಂಗ್ರಹಿಸುವ ಬೃಹತ್ ಯೋಜನೆಯನ್ನು ಸಿದ್ದರಾಮಯ್ಯನವರು ಮಾಡಿದ್ದಾರೆ. ಇದು ಕೊಡುವ ಸರ್ಕಾರ ಅಲ್ಲ- ಕಿತ್ತುಕೊಳ್ಳುವ ಸರ್ಕಾರ ಎಂದು ಕಿಡಿಕಾರಿದರು.

ಇದನ್ನೂ ಓದಿ | Nandini Ghee : ತಿರುಪತಿ ಲಡ್ಡಿನಲ್ಲಿ ತುಪ್ಪ ಇಲ್ಲ; ಕಾಂಗ್ರೆಸ್‌- ಬಿಜೆಪಿ ಆರೋಪ-ಪ್ರತ್ಯಾರೋಪಕ್ಕೆ ಕೊನೆ ಇಲ್ಲ

11 ಸಾವಿರ ಕೋಟಿ ಬೇರೆಡೆಗೆ ವರ್ಗಾಯಿಸಿ ದಲಿತರನ್ನು ವಂಚಿಸಿದ ಸಿದ್ದರಾಮಯ್ಯನವರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ ಅವರು, 34,293 ಕೋಟಿ ತೆಗೆದಿಟ್ಟದ್ದು ಯಾಕೆ ಮತ್ತು ಅದನ್ನು ಬೇರೆ ಉದ್ದೇಶಕ್ಕೆ ಕೊಡುವುದು ಯಾಕೆ ಎಂದು ಪ್ರಶ್ನಿಸಿದರು.

ಸರ್ಕಾರ 11 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ನೀಡುವುದನ್ನು ವಿರೋಧಿಸಿ ಎಸ್‍ಸಿ ಮೋರ್ಚಾ, ಎಸ್‍ಟಿ ಮೋರ್ಚಾ ಸೇರಿದಂತೆ ಬಿಜೆಪಿ ವತಿಯಿಂದ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ಹಮ್ಮಿಕೊಳ್ಳುವುದಾಗಿ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

Prajwal Revanna Case: ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದ್ದು, ಈ ಪ್ರಕರಣದಲ್ಲಿ ಸುಖಾಸುಮ್ಮನೆ ತಮ್ಮ ಕಕ್ಷಿದಾರರನ್ನು ಸಿಲುಕಿಸಲಾಗಿದ್ದು, ಜಾಮೀನು ನೀಡಬೇಕು ಎಂದು ಕೋರಿದರು. ಇದಕ್ಕೆ ಮಧ್ಯಪ್ರವೇಶದ ಮಾಡಿದ ನ್ಯಾಯಾಧೀಶರು, ಆರೋಪಿ ಪೊಲೀಸ್ ವಶದಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ಮಾಡಲು ಹೇಗೆ ಸಾಧ್ಯ? ಎಂದು ನಾಗೇಶ್‌ಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಒಂದು ವೇಳೆ‌ ಬೇಲ್ ನೀಡಿದರೆ ಪೊಲೀಸ್ ಕಸ್ಟಡಿಯನ್ನು ಹೇಗೆ ಮುಂದುವರಿಸಲು ಸಾಧ್ಯ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case HD Revanna gets bail today court asked if there was a chance Hearing adjourned till tomorrow
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive Case) ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಿಎಂ ಎಚ್.ಡಿ. ರೇವಣ್ಣ (HD Revanna) ಅವರಿಗೆ ಮಂಗಳವಾರ (ಮೇ 7) ಕೋರ್ಟ್‌ನಲ್ಲಿ ಸಣ್ಣ ಮಟ್ಟದ ಹಿನ್ನಡೆಯಾಗಿದೆ. ಆರೋಪಿ ಕಸ್ಟಡಿಯಲ್ಲಿರುವಾಗ ಜಾಮೀನು ಅರ್ಜಿ ವಿಚಾರಣೆ ಮಾಡಬಹುದೇ? ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸುವಂತೆ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

ಎಚ್.ಡಿ. ರೇವಣ್ಣ ಪರ ವಕೀಲರು ಜಾಮೀನು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ – ಪ್ರತಿವಾದವನ್ನು ಆಲಿಸಿತು.

ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದ್ದು, ಈ ಪ್ರಕರಣದಲ್ಲಿ ಸುಖಾಸುಮ್ಮನೆ ತಮ್ಮ ಕಕ್ಷಿದಾರರನ್ನು ಸಿಲುಕಿಸಲಾಗಿದ್ದು, ಜಾಮೀನು ನೀಡಬೇಕು ಎಂದು ಕೋರಿದರು. ಇದಕ್ಕೆ ಮಧ್ಯಪ್ರವೇಶದ ಮಾಡಿದ ನ್ಯಾಯಾಧೀಶರು, ಆರೋಪಿ ಪೊಲೀಸ್ ವಶದಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ಮಾಡಲು ಹೇಗೆ ಸಾಧ್ಯ? ಎಂದು ನಾಗೇಶ್‌ಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಒಂದು ವೇಳೆ‌ ಬೇಲ್ ನೀಡಿದರೆ ಪೊಲೀಸ್ ಕಸ್ಟಡಿಯನ್ನು ಹೇಗೆ ಮುಂದುವರಿಸಲು ಸಾಧ್ಯ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದರು.

ಅದಕ್ಕೆ ವಾದ ಮಂಡಿಸಿದ ಸಿ.ವಿ. ನಾಗೇಶ್‌, ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗಲೂ ಜಾಮೀನು ನೀಡಬಹುದು. ಈ ಬಗ್ಗೆ ಇರುವ ಕಾನೂನಿನ ಬಗ್ಗೆ ಹಾಗೂ ಸುಪ್ರೀಂ ಕೋರ್ಟ್‌ನ ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ನ್ಯಾಯಾಲಯದ ಗಮನಕ್ಕೆ ತಂದರು. ಈ ವೇಳೆ ಎಸ್‌ಐಟಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಎಸ್ಐಟಿಯ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ನೋಟಿಸ್ ಜಾರಿ ಮಾಡಿದ್ದು, ಪೊಲೀಸ್ ಕಸ್ಟಡಿಯಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಸಬಹುದೇ ಎಂಬ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದ್ದಾರೆ. ಹೀಗಾಗಿ ವಿಚಾರಣೆಯನ್ನು ನಾಳೆಗೆ (ಮೇ 8) ಮುಂದೂಡಿಕೆ ಮಾಡಲಾಗಿದೆ.

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ

ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ನಿಮ್ಮ ಮೊಬೈಲ್‌ ಅಥವಾ ಲ್ಯಾಪ್‌ಟಾಪ್‌ನಲ್ಲಿದೆಯೇ? ಇದ್ದರೆ ಅದು ದೊಡ್ಡ ಅಪರಾಧವಾಗಿದೆ. ಈಗಲೇ ಅದನ್ನು ಡಿಲೀಟ್‌ ಮಾಡಿಬಿಡಿ. ಒಂದು ವೇಳೆ ನೀವು ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಅಧಿಕೃತ ಪ್ರಕಟಣೆ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಈಗ ದೇಶಾದ್ಯಂತ ವೈರಲ್ ಆಗಿದೆ. ಈಗಾಗಲೇ ಈ ಪ್ರಕರಣ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿಯನ್ನು ರಚನೆ ಮಾಡಿದೆ. ಇನ್ನು ವಿಡಿಯೊದಲ್ಲಿ ಹಾಸನ ಸೇರಿದಂತೆ ಹಲವು ಕಡೆಯ ಮಹಿಳೆಯರು ಇದ್ದಾರೆನ್ನಲಾಗಿದ್ದು, ಅವರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಹೀಗಾಗಿ ಈ ಕೇಸ್‌ ಮತ್ತಷ್ಟು ಜಟಿಲವಾಗಿದೆ.

ಈ ಸಂಬಂಧ ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಪ್ರಕಟಣೆ ನೀಡಿದ್ದು, ಅಶ್ಲೀಲ ವಿಡಿಯೊವನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ‌ ಇಟ್ಟುಕೊಳ್ಳುವುದು ಸಹ ಅಪರಾಧ. ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ ಹಾಗೂ ಪ್ರಸಾರ ಮಾಡುವ ಕೆಲಸವನ್ನು ಮಾಡಿದರೆ, ಅಂಥ ವ್ಯಕ್ತಿಗಳ‌ನ್ನು ಸಂದೇಶ ರಚನೆಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Prajwal Revanna Case Delete vulgar video and avoid legal action says SIT chief

ಇದನ್ನೂ ಓದಿ: Prajwal Revanna Case: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪೋಸ್ಟರ್ ವಾರ್‌

ಡಿಲೀಟ್‌ ಮಾಡಿ ಕಾನೂನು ಕ್ರಮದಿಂದ ಪಾರಾಗಿ

ಅಶ್ಲೀಲ ವಿಡಿಯೊ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಹೀಗೆ ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ.

Continue Reading

ಬೆಂಗಳೂರು

Theft Case : ತಂದೆ ಬೈದಿದ್ದಕ್ಕೆ ಮನೆ ಬಿಟ್ಟು ಆಟೋ ಹತ್ತಿದ ಯುವಕ; 100 ಗ್ರಾಂ ಚಿನ್ನ ಕಸಿದು ಚಾಲಕ ಎಸ್ಕೇಪ್

Theft Case : ಸ್ನೇಹಿತರ ಜತೆ ಸೇರಬೇಡ ಎಂದು ತಂದೆ ಬೈದಿದ್ದಕ್ಕೆ ಸಿಟ್ಟಾದ ಮಗನೊಬ್ಬ ಮನೆ ಬಿಟ್ಟು ಹೋಗಿದ್ದ. ಅಲ್ಲಿಂದ ಮೆಜೆಸ್ಟಿಕ್‌ಗೆ ಹೋಗಲು ಯುವಕ ಆಟೋ ಹತ್ತಿದ್ದ. ಆದರೆ ಖತರ್ನಾಕ್‌ ಚಾಲಕ ಆ ಯುವಕನಿಂದ ಚಿನ್ನಾಭರಣವನ್ನು ದೋಚಿ ಪರಾರಿ ಆದವನು ಸಿಕ್ಕಿಬಿದ್ದಿದ್ದಾನೆ.

VISTARANEWS.COM


on

By

Theft Case In Bengaluru
Koo

ಬೆಂಗಳೂರು: ಕೋಪದಲ್ಲಿ ಮನೆ ಬಿಟ್ಟು ಓಡಿ ಹೋಗುತ್ತಿದ್ದ ಯುವಕನ ಬಳಿಯೇ 100 ಗ್ರಾಂ ಚಿನ್ನಾಭರಣವನ್ನು ಸುಲಿಗೆ ಮಾಡಿ (Theft Case) ಪರಾರಿ ಆಗಿದ್ದ ಆಟೋ ಚಾಲಕನನ್ನು (Auto Driver) ಬಂಧಿಸಲಾಗಿದೆ. ಸಾಧಿಕ್@ ಅನಿಲ್ @ ಅನಿ ಬಂಧಿತ ಆರೋಪಿ.

ಸ್ನೇಹಿತರ ಜತೆಗೆಲ್ಲ ಸೇರಬೇಡ ಎಂದು ಬೈದು ಬುದ್ಧಿ ಮಾತು ಹೇಳಿದ್ದಕ್ಕೆ ತಂದೆ ಮೇಲೆ ಕೋಪಿಸಿಕೊಂಡ ಯುವಕ ಮನೆಯಿಂದ ಹೊರ ನಡೆಸಿದ್ದ. ಈ ಊರು ಬಿಟ್ಟೆ ದೂರ ಹೋಗಬೇಕು ಎಂದುಕೊಂಡ ಯುವಕ ಬಸವೇಶ್ವರನಗರದಿಂದ ಮೆಜೆಸ್ಟಿಕ್‌ಗೆ ಹೋಗಲು ಆಟೋ ಹತ್ತಿದ್ದ.

ಆಟೋ ಹತ್ತಿದ ಕೂಡಲೇ ತನ್ನ ಮೈ ಮೇಲಿದ್ದ ಒಡವೆಗಳನ್ನು ಬ್ಯಾಗ್‌ನಲ್ಲಿ ಇಟ್ಟುಕೊಳ್ಳುತ್ತಿದ್ದ. ಇದೆಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದ ಆಟೋ ಚಾಲಕನ ಬುದ್ಧಿ ಆದಾಗಲೇ ಕ್ರಿಮಿನಲ್‌ ಕಡೆಗೆ ತಿರುಗಿತ್ತು. ಹೇಗಾದರೂ ಮಾಡಿ ಯುವಕನನ್ನು ಯಾಮಾರಿಸಿ ಚಿನ್ನವನ್ನೆಲ್ಲ ದೋಚಬೇಕೆಂದು ಪ್ಲ್ಯಾನ್‌ ಮಾಡಿದ್ದ.

ಅದರಂತೆ ಯುವಕ ರಮೇಶ್ ನಗರ ಸಮೀಪ ಬಂದಾಗ ಮೂತ್ರ ವಿಸರ್ಜನೆಗೆಂದು ಆಟೋ ಇಳಿದಿದ್ದ. ಇದೇ ಸರಿಯಾದ ಸಮಯ ಎಂದುಕೊಂಡ ಆಟೋ ಚಾಲಕ ಯುವಕನ ಕೈಯಿಂದ ಬ್ಯಾಗ್‌ ಕಿತ್ತುಕೊಂಡು ಆತನನ್ನು ತಳ್ಳಿ ಎಸ್ಕೇಪ್ ಆಗಿದ್ದ.

ಇದನ್ನೂ ಓದಿ: Liquid Nitrogen : ಕಾಟನ್ ಕ್ಯಾಂಡಿ ಬಳಿಕ ಕರ್ನಾಟಕದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿಷೇಧ

ಇತ್ತ ಯುವಕ ಈ ವಿಚಾರವನ್ನು ಯಾರಿಗೂ ಹೇಳದೆ ಮತ್ತೊಂದು ಆಟೋ ಹತ್ತಿ ಮೆಜೆಸ್ಟಿಕ್‌ಗೆ ಬಂದಿದ್ದ. ನಂತರ ರೈಲಿನ ಮೂಲಕ ಪುರಿ ಜಗನ್ನಾಥ ದೇವಸ್ಥಾನಕ್ಕೆ ತೆರಳಿದ್ದ. ರಾತ್ರಿಯಾದರೂ ಮಗ ಬಾರದಿದ್ದಾಗ ಆತಂಕಗೊಂಡ ಪೋಷಕರು ಎಲ್ಲ ಕಡೆ ಹುಡುಕಾಡಿದ್ದಾರೆ. ಸಿಗದೆ ಇದ್ದಾಗ ಪೊಲೀಸ್‌ ಮೆಟ್ಟಿಲೇರಿದ್ದಾರೆ. ಅಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ದಾಖಲಿಸಿದ್ದರು. ಇತ್ತ ತನಿಖೆಗಿಳಿದಾಗ ಪೊಲೀಸರಿಗೆ ಯುವಕ ಪುರಿ ಜಗನ್ನಾಥ ದೇವಸ್ಥಾನದ ಬಳಿ ಇರುವುದು ತಿಳಿದು ಬಂದಿದೆ.

ನಂತರ ಪೊಲೀಸರು ಆತನನ್ನು ಕರೆ ತಂದು ಮನೆಯವರಿಗೆ ಒಪ್ಪಿಸಿದ್ದಾರೆ. ಈ ವೇಳೆ ಪೋಷಕರು ಮೈಮೇಲಿದ್ದ ಚಿನ್ನಾಭರಣ ಎಲ್ಲಿ ಎಂದು ಕೇಳಿದಾಗ ಸುಲಿಗೆ ಪ್ರಕರಣ ಬಯಲಿಗೆ ಬಂದಿದೆ. ಆ ಬಳಿಕ ಈ ಬಗ್ಗೆ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಕಳ್ಳತನ ಸಂಬಂಧ ದೂರು ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಸಿಟಿವಿ ಪರಿಶೀಲಿಸಿದಾಗ ವಿದ್ಯಾರಣ್ಯಪುರ ಬಳಿ ಇರುವ ಎಂಎಸ್ ಪಾಳ್ಯದಲ್ಲಿ ಆರೋಪಿಯ‌ನ್ನು ಬಂಧಿಸಲಾಗಿದೆ. ಬಂಧಿತನಿಂದ 6 ಲಕ್ಷಕ್ಕೂ ಹೆಚ್ಚು ಮೌಲ್ಯದ 100 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿನ್ನದ ದರ

Gold Rate Today: ಚಿನ್ನದ ಬೆಲೆ ಗ್ರಾಂಗೆ ₹33 ಏರಿಕೆ; 24 ಕ್ಯಾರಟ್‌ ಬಂಗಾರದ ದರ ಇಂದು ₹7,238

Gold Rate Today: ಇಂದು ಬೆಂಗಳೂರಿನಲ್ಲಿ 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,350 ಮತ್ತು ₹6,63,500 ದರದಲ್ಲಿ ಖರೀದಿಸಬಹುದು. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,380 ಮತ್ತು ₹7,23,800 ವೆಚ್ಚವಾಗಲಿದೆ.

VISTARANEWS.COM


on

Gold rate today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹30 ಹಾಗೂ ₹33 ಏರಿಕೆಯಾಗಿವೆ. ವಾರಾಂತ್ಯದಲ್ಲಿ ಕೂಡ ಚಿನ್ನದ ಬೆಲೆಗಳು ಏರಿಕೆ ಕಂಡಿದ್ದವು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,635ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,080 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,350 ಮತ್ತು ₹6,63,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,238 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,904 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,380 ಮತ್ತು ₹7,23,800 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.50, ಎಂಟು ಗ್ರಾಂ ₹660 ಮತ್ತು 10 ಗ್ರಾಂ ₹825ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,250 ಮತ್ತು 1 ಕಿಲೋಗ್ರಾಂಗೆ ₹82,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,50072,530
ಮುಂಬಯಿ66,350 72,380
ಬೆಂಗಳೂರು66,350 72,380
ಚೆನ್ನೈ66,40072,430

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate Today: ವೀಕೆಂಡ್‌ನಲ್ಲಿ ಬೆಲೆ ಏರಿಕೆ ಕಾಣದ ಚಿನ್ನ, ಈಗಲೇ ಖರೀದಿಸಿದರೆ ಚೆನ್ನ

Continue Reading

ಬೆಂಗಳೂರು

Liquid Nitrogen : ಕಾಟನ್ ಕ್ಯಾಂಡಿ ಬಳಿಕ ಕರ್ನಾಟಕದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿಷೇಧ

Liquid Nitrogen: ಆರೋಗ್ಯಕ್ಕೆ ಕುತ್ತು ತರುವ ಕಾಟನ್‌ ಕ್ಯಾಂಡಿ, ಗೋಬಿ ಮಂಚೂರಿ ಬ್ಯಾನ್‌ ಬಳಿಕ ಇದೀಗ ಆಹಾರದಲ್ಲಿ ಲಿಕ್ವಿಡ್‌ ನೈಟ್ರೋಜನ್‌ ಬಳಕೆಯನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಆದೇಶವನ್ನು ಹೊರಡಿಸಿದೆ. ಆ ಪ್ರಕಾರ ಯಾರಾದರೂ ಲಿಕ್ವಿಡ್‌ ನೈಟ್ರೋಜನ್‌ ಬಳಸಿದ್ರೆ ಜೀವಾವಧಿ ಶಿಕ್ಷೆಯೊಂದಿಗೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

VISTARANEWS.COM


on

By

LIQUID NITROGEN
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆಹಾರ ಪದಾರ್ಥಗಳಲ್ಲಿ ಲಿಕ್ವಿಡ್ ನೈಟ್ರೋಜನ್ (Liquid Nitrogen) ಬಳಕೆ ಮಾಡಿದರೆ 10 ಲಕ್ಷ ರೂ. ದಂಡ, ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ. ಲಿಕ್ವಿಡ್ ನೈಟ್ರೋಜನ್‌ನ ಒಂದು ತುತ್ತು ಜೀವಕ್ಕೆ ಕುತ್ತು ತರಬಹುದು. ಹೀಗಾಗಿ ಕಲರ್ ಕಾಟನ್‌ ಕ್ಯಾಂಡಿ, ಗೋಬಿ ಮಂಚೂರಿ ಬಳಿಕ ಇದೀಗ ರಾಜ್ಯದಲ್ಲಿ ಆಹಾರದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆಯನ್ನು ಬ್ಯಾನ್ ಮಾಡಲಾಗಿದೆ.

ಕೆಲವು ರೆಸ್ಟೋರಂಟ್‌ಗಳಲ್ಲಿ ಫುಡ್‌ ಪ್ರಿಯರನ್ನು ಆಕರ್ಷಿಸಲೆಂದೇ ತರಹೇವಾರಿ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಇತ್ತೀಚೆಗಂತೂ ಆಹಾರ ಪದಾರ್ಥಗಳಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ಹೆಚ್ಚಾಗುತ್ತಿದೆ. ಜನರು ತಮಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಅಪಾಯದ ಬಾಗಿಲು ತಟ್ಟುತ್ತಿದ್ದಾರೆ. ಲಿಕ್ವಿಡ್ ನೈಟ್ರೋಜನ್ ಮೂಲಕ ಸ್ಮೋಕ್‌ ಐಸ್‌ಕ್ರೀಂ, ಸ್ಮೋಕ್‌ ಬಿಸ್ಕತ್ತು, ಬಿಯರ್‌ನಲ್ಲಿ ಬಳಸಲಾಗುತ್ತಿದ್ದು,ಇದು ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದೆ. ಹೀಗಾಗಿ ಲಿಕ್ವಿಡ್ ನೈಟ್ರೋಜನ್ ಬಳಸಿದ ಆಹಾರ ಸೇವಿಸುವ ಮುನ್ನ ಎಚ್ಚರವಾಗಿರಿ.

ಈ ಸ್ಮೋಕಿಂಗ್ ಲಿಕ್ವಿಡ್ ನೈಟ್ರೋಜನ್ ಸೇವನೆಯಿಂದ ಅಂಗಾಂಗಗಳ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ. ಮುಖ್ಯವಾಗಿ ಲಿಕ್ವಿಡ್‌ ನೈಟ್ರೋಜನ್‌ ಸೇವನೆಯಿಂದ ಕರಳು, ಗಂಟಲುಗಳಲ್ಲಿ ಹುಣ್ಣಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿರ್ಬಂಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆದೇಶ ಹೊರಡಿಸಿದೆ. ಲಿಕ್ವಿಡ್ ನೈಟ್ರೋಜನ್ ಬಳಕೆ ಮಾಡಿದರೆ 10 ಲಕ್ಷ ರೂ. ದಂಡ, ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಈಗಾಗಲೇ ಪಕ್ಕದ ತಮಿಳುನಾಡಲ್ಲಿ ಬಿಸ್ಕತ್‌ ಮತ್ತು ಐಸ್‌ಕ್ರೀಮ್‌ನಂತಹ ಆಹಾರ ಪದಾರ್ಥಗಳ ಜತೆ ಲಿಕ್ವಿಡ್‌ ನೈಟ್ರೋಜನ್‌ ನೇರ ಬಳಕೆಯನ್ನು ನಿಷೇಧಿಸಿದೆ. ಇದೀಗ ಕರ್ನಾಟಕದಲ್ಲೂ ಲಿಕ್ವಿಡ್‌ ನೈಟ್ರೋಜನ್‌ ಬಳಕೆಯನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: Cotton Candy Ban : ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ ಬ್ಯಾನ್‌, ಗೋಬಿ ಮಂಚೂರಿಗೂ ಡೇಂಜರ್‌

ಈ ಲಿಕ್ವಿಡ್‌ ನೈಟ್ರೋಜನ್‌ ಅಥವಾ ದ್ರವ ಸಾರಜನಕವನ್ನು ಔಷಧ ಮತ್ತು ರಾಸಾಯನಿಕ ಕಂಪನಿಗಳು ತಮ್ಮ ಉತ್ಪನ್ನಗಳನ್ನು 40 ಡಿಗ್ರಿ ಸೆಂಟಿಗ್ರೇಡ್‌ನಷ್ಟು ತಂಪಾಗಿಸಲು ಬಳಸುತ್ತವೆ. ಅಲ್ಲದೆ, ಫ್ರೀಜ್‌ ಮಾಡುವ ಹಲವು ವಿಧಾನಗಳಲ್ಲಿ ಬಳಸುತ್ತಾರೆ. ಈ ಲಿಕ್ವಿಡ್‌ ನೈಟ್ರೋಜನ್‌ ಸುರಿದರೆ ಥಟ್ಟನೆ ಹಿಗ್ಗಿ ಬಿಳಿಯ ಹೊಗೆಯಂತೆ ಆವಿಯಾಗಿ ಬಿಡುತ್ತದೆ.

ಇನ್ನೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ-2006 ಪ್ರಕಾರ ಲಿಕ್ವಿಡ್‌ ನೈಟ್ರೋಜನ್‌ ಆಹಾರದಲ್ಲಿ ಬಳಸಬಾರದು ಎಂಬುದು ಈ ಮೊದಲಿನಿಂದಲೂ ಇದೆ. ಆದರೂ ಕೆಲವರು ಜನರನ್ನು ಆಕರ್ಷಿಸಲು, ಹೊಸ ಮೆನುವಿಗಾಗಿ ಇದನ್ನು ಬಳಸುತ್ತಿದ್ದಾರೆ. ಇದು ಆರೋಗ್ಯಕ್ಕೆ ಹಾನಿಕಾರಕ. ಇದನ್ನು ಬಳಸುವವರ ವಿರುದ್ಧ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ಆದೇಶದಲ್ಲಿ ಏನಿದೆ?

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ನಿಯಮಗಳು 2011ರಡಿ ಲಿಕ್ವಿಡ್‌ ನೈಟ್ರೋಜನ್‌ ಅನ್ನು ಡೈರಿ ಆಧಾರಿತ ಸಿಹಿತಿಂಡಿಗಳು -ಐಸ್ ಕ್ರೀಮ್‌ನಲ್ಲಿ ಘನೀಕರಣ ಮತ್ತು ಕೂಲಿಂಗ್ (Contact Freezing and Cooling Agent en Dairy- based desserts -Ice Cream) ಗಳ ತಯಾರಿಕೆಯ ಸಮಯದಲ್ಲಿ ಮಾತ್ರ ಬಳಸಲು ಅನುಮತಿ ಇದೆ. ಆದರೆ ಸ್ಮೋಕಿಂಗ್‌ ಬಿಸ್ಕತ್‌, ಡೆಸರ್ಟ್‌ ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ ಉಪಯೋಗಿಸಲು ಅನುಮತಿ ಇಲ್ಲ. ಈ ಲಿಕ್ವಿಡ್‌ ನೈಟ್ರೋಜನ್‌ ಬಳಸಿದ ಆಹಾರ ತಿಂದರೆ ಜೀರ್ಣಾಂಗದ ಭಾಗಗಳಿಗೆ ಹಾನಿಯುಂಟಾಗುತ್ತದೆ.

LIQUID-NITROGEN

ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಲಿಕ್ವಿಡ್‌ ನೈಟ್ರೋಜನ್‌ ಅನ್ನು ತಿನಿಸುಗಳಿಗೆ ಉಪಯೋಗಿಸುವುದನ್ನು ನಿರ್ಬಂಧಿಸಿ ಆದೇಶಿಸಲಾಗಿದೆ. ಉಲ್ಲಂಘನೆಯ ಪ್ರಕರಣಗಳು ಕಂಡು ಬಂದರೆ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಕೇಸ್‌ ದಾಖಲಿಸಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Money Guide
ಮನಿ ಗೈಡ್4 mins ago

Money Guide: ಮಹಿಳಾ ಸಮ್ಮಾನ್‌ ಸರ್ಟಿಫಿಕೆಟ್‌ ಮತ್ತು ಸುಕನ್ಯಾ ಸಮೃದ್ಧಿ; ಇವುಗಳ ಪ್ರಯೋಜನ ಏನೇನು?

Prajwal Revanna Case HD Revanna gets bail today court asked if there was a chance Hearing adjourned till tomorrow
ಕ್ರೈಂ6 mins ago

Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

Rahul Gandhi
ದೇಶ9 mins ago

Rahul Gandhi: ಮೇಲ್ವರ್ಗದವರಿಂದಾಗಿ ಪರೀಕ್ಷೆಗಳಲ್ಲಿ ದಲಿತರು ಫೇಲ್‌; ರಾಹುಲ್‌ ಗಾಂಧಿ ಹೊಸ ವಿವಾದ

5 Day Work in Banks
ವಾಣಿಜ್ಯ21 mins ago

5 Days Work in Banks: ಬ್ಯಾಂಕ್‌ಗಳು ವಾರದಲ್ಲಿ ಐದೇ ದಿನ ಓಪನ್‌ ಇರಲಿವೆ; ಪರ್ಯಾಯ ವ್ಯವಸ್ಥೆಗೆ ಸಜ್ಜಾಗಿ

Theft Case In Bengaluru
ಬೆಂಗಳೂರು33 mins ago

Theft Case : ತಂದೆ ಬೈದಿದ್ದಕ್ಕೆ ಮನೆ ಬಿಟ್ಟು ಆಟೋ ಹತ್ತಿದ ಯುವಕ; 100 ಗ್ರಾಂ ಚಿನ್ನ ಕಸಿದು ಚಾಲಕ ಎಸ್ಕೇಪ್

Salman Khan
ಸಿನಿಮಾ56 mins ago

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; ಐದನೇ ಆರೋಪಿಯ ಬಂಧನ

Dharamsala Stadium
ಕ್ರೀಡೆ60 mins ago

Dharamsala Stadium: ಧರ್ಮಶಾಲಾದಲ್ಲಿ ಅನಾವರಣಗೊಂಡ ದೇಶದ ಮೊದಲ ಹೈಬ್ರಿಡ್‌ ಕ್ರಿಕೆಟ್ ಪಿಚ್​ನ ವಿಶೇಷತೆ ಏನು?

Gold rate today
ಚಿನ್ನದ ದರ1 hour ago

Gold Rate Today: ಚಿನ್ನದ ಬೆಲೆ ಗ್ರಾಂಗೆ ₹33 ಏರಿಕೆ; 24 ಕ್ಯಾರಟ್‌ ಬಂಗಾರದ ದರ ಇಂದು ₹7,238

Narendra Modi
ದೇಶ1 hour ago

Narendra Modi: “ನಾನು ಇಸ್ಲಾಂ ವಿರೋಧಿ ಅಲ್ಲ, ಆದರೆ ಮುಸ್ಲಿಮರು…”; ಕಾಂಗ್ರೆಸ್‌ ಆರೋಪದ ಬಗ್ಗೆ ಮೋದಿ ಹೇಳಿದ್ದೇನು?

Job Alert
ಉದ್ಯೋಗ2 hours ago

Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ18 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ19 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ19 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌