Site icon Vistara News

BJP Protest: ಸೆ.25ರಿಂದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಜನಾಂದೋಲನ: ಗೋವಿಂದ ಕಾರಜೋಳ

Ex Minister Govind karjol

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರವು ಎಸ್‍ಸಿ, ಎಸ್‍ಟಿ ಯೋಜನೆಗಳ ಅನುದಾನದಲ್ಲಿ 11,144 ಕೋಟಿ ರೂ. ದುರ್ಬಳಕೆ ಮಾಡಿಕೊಂಡಿದೆ. ಇದರ ವಿರುದ್ಧ ಇಡೀ ರಾಜ್ಯದಲ್ಲಿ ಸೆ. 25ರಿಂದ ಅಕ್ಟೋಬರ್ 10ರವರೆಗೆ ಬಿಜೆಪಿ ವತಿಯಿಂದ ಜನಾಂದೋಲನ (BJP Protest) ನಡೆಯಲಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅನುದಾನವನ್ನು ಎಸ್‍ಸಿ, ಎಸ್‍ಟಿ ಜನಾಂಗಕ್ಕೆ ಬಳಸದೆ ಹೋದರೆ ಎರಡನೇ ಹಂತದಲ್ಲಿ ಜಿಲ್ಲಾ ಸಚಿವರು ಮತ್ತು ಶಾಸಕರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮವನ್ನು ಅಕ್ಟೋಬರ್ 11ರಿಂದ ಅಕ್ಟೋಬರ್ 25ರವರೆಗೆ ಎಲ್ಲ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗುವುದು. ಎಲ್ಲ 224 ಶಾಸಕರ ಮನೆ ಎದುರು, ಜಿಲ್ಲಾ ಸಚಿವರ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ | Karnataka Politics : ಸಿಂಗಲ್‌ ಸೀಟಿಗೂ ದಿಕ್ಕಿಲ್ಲದ ಕಾಂಗ್ರೆಸ್‌ ಕೈಕೈ ಪರಚಿಕೊಳ್ಳುತ್ತಿದೆ; ದಳ ಎದುರೇಟು

ಮೂರನೇ ಹಂತದಲ್ಲಿ ಹರಿಹರದ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾಧಿಯಿಂದ ನವೆಂಬರ್ 2ನೇ ವಾರ ಪಾದಯಾತ್ರೆ ಮಾಡಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಇದರ ನಿಮಿತ್ತ ಪಕ್ಷದ ಸಂಸದರು, ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸದಸ್ಯರು ಸಕ್ರಿಯವಾಗಿ ಆಯಾ ತಾಲ್ಲೂಕುಗಳಲ್ಲಿ, ಜಿಲ್ಲೆಗಳಲ್ಲಿ ಭಾಗವಹಿಸಲು ಕರೆ ನೀಡಿದರು.

Exit mobile version