BJP's Jaya Vahini Yatra, CM Bommai holds roadshow in Yelahanka, Nelamangala Karnataka Election: ಬಿಜೆಪಿ ಜಯವಾಹಿನಿ ಯಾತ್ರೆ; ಯಲಹಂಕ, ನೆಲಮಂಗಲದಲ್ಲಿ ಸಿಎಂ ಬೊಮ್ಮಾಯಿ ಭರ್ಜರಿ ರೋಡ್‌ ಶೋ - Vistara News

ಕರ್ನಾಟಕ

Karnataka Election: ಬಿಜೆಪಿ ಜಯವಾಹಿನಿ ಯಾತ್ರೆ; ಯಲಹಂಕ, ನೆಲಮಂಗಲದಲ್ಲಿ ಸಿಎಂ ಬೊಮ್ಮಾಯಿ ಭರ್ಜರಿ ರೋಡ್‌ ಶೋ

Karnataka Election: ಬೆಂಗಳೂರಿನ ಚಾಲುಕ್ಯ ಸರ್ಕಲ್‌ನಲ್ಲಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅವರು ʼಜಯವಾಹಿನಿʼ ಯಾತ್ರೆ ಆರಂಭಿಸಿದರು.

VISTARANEWS.COM


on

BJP's Jaya Vahini Yatra, CM Bommai holds roadshow in Yelahanka, Nelamangala
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ (Karnataka Election) ಕಾವು ಜೋರಾಗಿದ್ದು, ವಿವಿಧ ಪಕ್ಷಗಳ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾನುವಾರ ʼಜಯವಾಹಿನಿʼ ಹೆಸರಲ್ಲಿ ಭರ್ಜರಿ ರೋಡ್‌ ಶೋ ಆರಂಭಿಸಿದ್ದು, ಒಂದೇ ದಿನದಲ್ಲಿ 11 ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಹಾಗೆಯೇ ಏ.27ರವರೆಗೆ ರಾಜ್ಯದ ವಿವಿಧೆಡೆ ಸಿಎಂ ಅವರು ರೋಡ್‌ ಶೋ ಮೂಲಕ ಪ್ರಚಾರ ನಡೆಸಲಿದ್ದಾರೆ.

ಬಸವ ಜಯಂತಿ ಹಿನ್ನೆಲೆಯಲ್ಲಿ ನಗರದ ಚಾಲುಕ್ಯ ಸರ್ಕಲ್‌ನಲ್ಲಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅವರು ʼಜಯವಾಹಿನಿʼ ಯಾತ್ರೆ ಹೊರಟರು. ನಂತರ ಮೊದಲಿಗೆ ಯಲಹಂಕದಲ್ಲಿ ಪ್ರಚಾರ ಆರಂಭಿಸಿದ ಅವರು ರಾಜಾನುಕುಂಟೆ, ದೊಡ್ಡಬಳ್ಳಾಪುರ, ನೆಲಮಂಗಲದಲ್ಲಿ ಪ್ರಚಾರ ನಡೆಸಿದರು. ಸಾವಿರಾರು ಕಾರ್ಯಕರ್ತರು ರೋಡ್‌ ಶೋದಲ್ಲಿ ಭಾಗಿಯಾಗಿದ್ದರು. ಅವರಿಗೆ ಆರೋಗ್ಯ ಸಚಿವ ಡಾ.ಸುಧಾಕರ್‌, ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಮತ್ತಿತರರು ಸಾಥ್‌ ನೀಡಿದರು.

ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ, ಅಧರ್ಮ, ಅನೀತಿ: ಸಿಎಂ ಬೊಮ್ಮಾಯಿ

ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ದುರಾಡಳಿತ, ಪಕ್ಷಪಾತ, ಒಡೆದು ಆಳುವ ನೀತಿ, ಅನ್ಯಾಯ, ಅನೀತಿ, ಅಧರ್ಮ. ಆದ್ದರಿಂದ ಈ ನೆಲದಿಂದ ಕಾಂಗ್ರೆಸ್ ಅನ್ನು ಶಾಶ್ವತವಾಗಿ ಕಿತ್ತುಹಾಕಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಯಲಹಂಕ ಮತ್ತು ರಾಜಾನುಕುಂಟೆಯಲ್ಲಿ ನಡೆದ ಜಯವಾಹಿನಿ ಯಾತ್ರೆಯಲ್ಲಿ ಯಲಹಂಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಆರ್. ವಿಶ್ವನಾಥ್ ಪರ ಪ್ರಚಾರ ನಡೆಸಿದ ಅವರು, ಭಾರತೀಯ ಜನತಾ ಪಕ್ಷದ ಜಯವಾಹಿನಿ ಯಾತ್ರೆಯನ್ನು ಯಲಹಂಕದಿಂದ ಶುಭಾರಂಭ ಮಾಡಿದ್ದೇವೆ. ಯಲಹಂಕ ಕ್ಷೇತ್ರ‌ ಅತಿ ಹೆಚ್ಚು ಮತಗಳಿಂದ ಆರಿಸಿ ಬರುವ ಬೆಂಗಳೂರಿನ ನಂಬರ್ ಒನ್ ಕ್ಷೇತ್ರ. ಅದಕ್ಕೆ ಕಾರಣ ಕಳೆದ ಹದಿನೈದು ವರ್ಷದಿಂದ ನಿಮ್ಮ ಸೇವೆ ಮಾಡುತ್ತಿರುವ ಎಸ್.ಆರ್. ವಿಶ್ವನಾಥ್ ಅವರು‌ ಎಂದು ಹೇಳಿದರು.

ಸಿದ್ದರಾಮಯ್ಯ ಅವರದ್ದು ಹಗರಣಗಳ ಸರ್ಕಾರ

2013-18ರ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಪೊಲೀಸ್ ನೇಮಕಾತಿ ಹಗರಣ, ಪ್ರಶ್ನೆಪತ್ರಿಕೆ ಲೀಕ್ ಹಗರಣ, ಶಿಕ್ಷಕ ನೇಮಕಾತಿ ಹಗರಣ, 8000 ಕೋಟಿ ರೂ. ಮೌಲ್ಯದ 843 ಎಕರೆ ರಿಡೂ ಹಗರಣ ನಡೆದಿದೆ. ಈ ಮೂಲಕ ಸಿದ್ದರಾಮಯ್ಯ ಬೆಂಗಳೂರು ಸೇರಿ ರಾಜ್ಯಾದ್ಯಂತ ಲೂಟಿ ಮಾಡಿದ್ದಾರೆ‌. ಇಂತಹ ಕಾಂಗ್ರೆಸ್ ಅನ್ನು ಕಿತ್ತೊಗೆದರೆ ಭ್ರಷ್ಟಾಚಾರವನ್ನು ಕಿತ್ತೊಗೆದಂತೆ ಎಂದು ತಿಳಿಸಿದರು.

ಗ್ಯಾರೆಂಟಿ ಕಾರ್ಡ್ ಗಳಗಂಟಿ

ಜಾತಿ, ಧರ್ಮಗಳ ನಡುವೆ ವಿಷ ಬೀಜ ಬಿತ್ತಿ ಒಡೆಯುವ ಕೆಲಸ ಕಾಂಗ್ರೆಸ್‌ನವರು ಮಾಡಿದ್ದಾರೆ. ಅವರು ಕೊಟ್ಟಿರುವ ಗ್ಯಾರೆಂಟಿ ಕಾರ್ಡ್ ಜೀವ ಇಲ್ಲದ ವಿಸಿಟಿಂಗ್ ಕಾರ್ಡ್ ಇದ್ದಂತೆ. ಅದರಲ್ಲಿ ಉಪ್ಪಿನಕಾಯಿ ಹಾಕುವುದು ಬಿಟ್ಟರೆ ಬೇರೇನೂ ಮಾಡೋಕೆ ಆಗಲ್ಲ. ಚುನಾವಣೆವರೆಗೂ ಅದು ಗ್ಯಾರೆಂಟಿ. ಚುನಾವಣೆ ನಂತರ ಅದು ಗಳಗಂಟಿ. ಆದ್ದರಿಂದ ಕಾಂಗ್ರೆಸ್ ಕಿತ್ತೊಗೆಯಲು ಕೆಂಪೇಗೌಡರು‌ ಮೆಟ್ಟಿದ ಗಂಡು ಭೂಮಿಯಿಂದ ನನ್ನ ಪ್ರಚಾರ ಮಾಡುತ್ತಿದ್ದೇನೆ. ಉತ್ತಮ ಆಡಳಿತವೇ ಬಿಜೆಪಿ ಧ್ಯೇಯವಾಗಿದೆ ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದರು.

ಇದನ್ನೂ ಓದಿ | BJP Karnataka: ಕಾಂಗ್ರೆಸ್‌ಗೆ ಹೋಗಿರುವುದು ಕುಂಡದ ಗಿಡಗಳು; ಹೆಮ್ಮರಗಳು ಬಿಜೆಪಿಯಲ್ಲೇ ಇವೆ ಎಂದ ಸಿಎಂ ಬೊಮ್ಮಾಯಿ

ನೆಲಮಂಗಲ ಮಾದರಿ ಕ್ಷೇತ್ರ ಮಾಡಲು ಬದ್ಧ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಣದ ಹೊಳೆ ಹರಿಸುತ್ತಿದ್ದಾರೆ‌. ಆದರೆ, ನೆಲಮಂಗಲದ ಸ್ವಾಭಿಮಾನಿ ಮತದಾರರು ಬಿಜೆಪಿ ಅಭ್ಯರ್ಥಿ ಸಪ್ತಗಿರಿ ನಾಯಕ್ ಅವರನ್ನು ಗೆಲ್ಲಿಸುವ ಭರವಸೆ ಇದೆ. ನೆಲಮಂಗಲ ಮಾದರಿ ಕ್ಷೇತ್ರವನ್ನಾಗಿ ಮಾಡಲು ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ನೆಲಮಂಗಲದಲ್ಲಿ ಬಿಜೆಪಿ ಅಭ್ಯರ್ಥಿ ಸಪ್ತಗಿರಿ ನಾಯಕ್ ಅವರ ಪರವಾಗಿ ರೋಡ್ ಶೋ ನಡೆಸಿದ ಅವರು, ಕಾಂಗ್ರೆಸ್‌ನವರು ಹತಾಶರಾಗಿ ರಾಜ್ಯದಲ್ಲಿ ಧರ್ಮ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಬ್ರಿಟಿಷರು ಬಿಟ್ಟು ಹೋದ ಬೀಜ ಕಾಂಗ್ರೆಸ್. ಕಾಂಗ್ರೆಸ್ ಅವಧಿಯಲ್ಲಿ ದೇಶವನ್ನು ಲೂಟಿ ಮಾಡಿದ್ದರು. ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದ್ದರು ಎಂದು ಹರಿಹಾಯ್ದರು.

ಏ.27ರವರೆಗೆ ವಿವಿಧೆಡೆ ಜಯವಾಹಿನಿ ಯಾತ್ರೆ

ಭಾನುವಾರ (ಏ.23) ಸಿಎಂ ಬಸವರಾಜ ಬೊಮ್ಮಾಯಿ ಅವರು ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲದಲ್ಲಿ ಪ್ರಚಾರ ನಡೆಸಿದ್ದು, ಇದಾದ ನಂತರ ತುಮಕೂರು ನಗರ, ತುಮಕೂರು ಗ್ರಾಮಾಂತರ, ಗುಬ್ಬಿ, ತಿಪಟೂರು, ಅರಸೀಕೆರೆ, ಕಡೂರು, ಚಿಕ್ಕಮಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ಇನ್ನು ಏ.24ರಂದು ದಾವಣಗೆರೆಯಿಂದ ರೋಡ್‌ ಶೋ ಆರಂಭವಾಗಲಿದ್ದು, ಹರಿಹರ, ರಾಣೆಬೆನ್ನೂರು, ಹಾವೇರಿ, ಬಂಕಾಪುರ, ಸವಣೂರು, ಶಿಗ್ಗಾಂವಿ, ಕುಂದಗೋಳದಲ್ಲಿ ಪ್ರಚಾರ ನಡೆಸಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಇದನ್ನೂ ಓದಿ: Karnataka Election: ʼಹಾವಿನ ಹೆಡೆಯ ಮೇಲಿನ ಕಪ್ಪೆʼಯಂತೆ ಬಿಜೆಪಿ ಲಿಂಗಾಯತ ನಾಯಕರ ಸ್ಥಿತಿ: ಸಿದ್ದರಾಮಯ್ಯ

ಮೂರನೇ ದಿನ ಏ.25ರಂದು ಹುಬ್ಬಳ್ಳಿಯಲ್ಲಿ ಪ್ರಚಾರ ಆರಂಭಿಸಿ, ಕಿತ್ತೂರು, ಖಾನಾಪುರ, ಬೆಳಗಾವಿ, ಬೆಳಗಾವಿ ಗ್ರಾಮೀಣ, ಬೈಲಹೊಂಗಲ, ಸವದತ್ತಿಯಲ್ಲಿ ಪ್ರಚಾರ ನಡೆಸಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಇರಲಿದ್ದಾರೆ. ಬಳಿಕ ಏ.26ರಂದು ಯಮಕನ ಮರಡಿ, ಚಿಕ್ಕೋಡಿ, ನಿಪ್ಪಾಣಿ, ಅರಭಾವಿ, ಗೋಕಾಕ್‌, ಅಥಣಿ, ರಾಯಭಾಗ, ರಾಮದುರ್ಗದಲ್ಲಿ ಪ್ರಚಾರ ನಡೆಸಲಿದ್ದು, ನಂತರ ಏ. 28ರಂದು ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಪ್ರಚಾರ ನಡೆಸಿದ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯನಗರ

Vijayanagara News: ಹೊಸಪೇಟೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

Vijayanagara News: ಹೊಸಪೇಟೆ ನಗರದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಬುಧವಾರ ಜನ ಜಾಗೃತಿ ಜಾಥಾ ಹಾಗೂ ವೇದಿಕೆ ಕಾರ್ಯಕ್ರಮ ಜರುಗಿತು.

VISTARANEWS.COM


on

World Anti Child Labor Day celebration in Hosapete
Koo

ಹೊಸಪೇಟೆ: ಪ್ರತಿ ವರ್ಷ ಜೂನ್ 12ರಂದು ಭಾರತ ಸೇರಿದಂತೆ ವಿಶ್ವಾದ್ಯಂತ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲಾಗುತ್ತಿದೆ. ಅದರಂತೆ ನಾವು ಜಾಗೃತರಾಗಿ ವಿಶ್ವದಾದ್ಯಂತ ಬಾಲ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷೆ ಹೇಮಲತಾ ಬಿ. ಹುಲ್ಲೂರ (Vijayanagara News) ತಿಳಿಸಿದರು.

ಹೊಸಪೇಟೆ ತಾಲೂಕು ಕಾನೂನು ಸೇವಾ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ವಕೀಲರ ಸಂಘ ಹೊಸಪೇಟೆ, ಜಿಲ್ಲಾ ಕಾರ್ಮಿಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಡಾನ್ ಬೋಸ್ಕೋ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಮಕ್ಕಳು ನಮ್ಮ ಆಸ್ತಿಯಾಗಿದ್ದಾರೆ. ಅವರನ್ನು ದುಡಿಮೆಗೆ ಹಚ್ಚದೇ ಅವರಿಗೆ ಸರಿಯಾದ ವಿದ್ಯಾಭ್ಯಾಸ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

ಈ ಮೊದಲು ಬಾಲ ಕಾರ್ಮಿಕರು ಕೃಷಿ ಚಟುವಟಿಕೆಯಲ್ಲಿ ಹೆಚ್ಚು ಕಾಣಸಿಗುತ್ತಿದ್ದರು. ಈಗ ಹೆಚ್ಚಾಗಿ ಗ್ಯಾರೇಜ್, ಹೋಟೆಲ್‌ಗಳಲ್ಲಿ ಕೆಲಸ ಮಾಡುವುದು ರೂಢಿಯಾಗುತ್ತಿದೆ. ಇದಕ್ಕೆ ಕಾರಣ ಬಡತನ ಇರಬಹುದು ಆದರೆ ಯಾವುದೇ ಮಗುವು ಶಿಕ್ಷಣದಿಂದ ವಂಚಿತವಾಗಬಾರದು. ಮಕ್ಕಳು ಸಂವಿಧಾನಬದ್ಧ ಮೂಲಭೂತ ಹಕ್ಕುಗಳಿಗೆ ಬದ್ಧರಾಗಿದ್ದಾರೆ. ಅವರಿಗೆ ಪ್ರತಿಯೊಂದು ಸೌಲಭ್ಯ ಸಿಗುವಂತಾಗಬೇಕು ಎಂದು ಅವರು ಸಲಹೆ ನೀಡಿದರು.

ಬಳಿಕ ಅಪರ ಸಿವಿಲ್ ನ್ಯಾಯಾಧೀಶ ಅಶೋಕ್ ಎಚ್.ಆರ್. ಮಾತನಾಡಿದರು.

ಜಾಥಾ: ಹೊಸಪೇಟೆಯ ಸರ್ದಾರ್ ಪಟೇಲ್ ಸರ್ಕಾರಿ ಪ್ರೌಢಶಾಲೆಯಿಂದ ಆರಂಭವಾದ ಜಾಥಾವು ನಗರದ ವಿವಿಧೆಡೆ ಸಂಚರಿಸಿ ಡಾನ್ ಬೋಸ್ಕೋ ಸಂಸ್ಥೆಗೆ ತಲುಪಿತು.

ಬಳಿಕ ನಗರದ ಡಾನ್ ಬೋಸ್ಕೋ ಸಂಸ್ಥೆಯಲ್ಲಿ ನಡೆದ ವೇದಿಕೆಯ ಕಾರ್ಯಕ್ರಮಕ್ಕೆ ವಿಜಯನಗರ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಡೊಂಬರಮತ್ತೂರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಬಾಲ ಕಾರ್ಮಿಕ ಪದ್ದತಿಯನ್ನು ಹೋಗಲಾಡಿಸುವುದರ ಜತೆಗೆ ಅದರಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಸದಸ್ಯ ಎ.ಕರುಣಾನಿಧಿ ವಿಶೇಷ ಉಪನ್ಯಾಸ ನೀಡಿದರು.

ಇದನ್ನೂ ಓದಿ: Lionel Messi Retirement: ನಿವೃತ್ತಿಯ ಸುಳಿವು ನೀಡಿದ ಲಿಯೋನೆಲ್​ ಮೆಸ್ಸಿ

ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಶಾಂತ್ ನಾಗಲಾಪುರ, 3ನೇ ಅಪರ ಸಿವಿಲ್ ನ್ಯಾಯಾಧೀಶೆ ಚೈತ್ರ ಜೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ವೇತಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ್ ಉಂಕಿ, ಹೊಸಪೇಟೆ ವಕೀಲರ ಸಂಘದ ಅಧ್ಯಕ್ಷ ಕೆ.ಪ್ರಹ್ಲಾದ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ. ಶ್ರೀನಿವಾಸಮೂರ್ತಿ, ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಲಕನ್ ಆರ್. ಮಸುಗುಪ್ಪಿ, ಹೊಸಪೇಟೆ ಪೊಲೀಸ್ ಠಾಣೆಯ ಸಂಚಾರಿ ವಿಭಾಗದ ಪೊಲೀಸ್ ಇನ್ಸಪೆಕ್ಟರ್ ರವೀಂದ್ರ ವೈ.ವಿ., ಡಾನ್ ಬೋಸ್ಕೋ ಸಂಸ್ಥೆಯ ನಿರ್ದೇಶಕ ಪಾ.ರೋಷನ್, ಸಮಾಜ ಕಾರ್ಯ ವಿಭಾಗದ ನಿರ್ದೇಶಕ ಪಾ.ಪ್ರಾನ್ಸಿಸ್ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Actor darshan Arrested : ದರ್ಶನ್‌ಗೆ ಎಣ್ಣೆ ಹೊಡೆಯಲು, ಸಿಗರೇಟ್​ ಸೇದಲು ಠಾಣೆಗೇ ಶಾಮಿಯಾನ ಹಾಕಿದರೆ ಪೊಲೀಸರು?

Actor darshan Arrested : ಪೊಲೀಸ್​ ಠಾಣೆಯ ಲಾಕ್​ಅಪ್​ನಲ್ಲಿರುವವರಿಗೆ ಕಾನೂನು ಪ್ರಕಾರ ಊಟ, ತಿಂಡಿ ಬಿಟ್ಟರೆ ಇನ್ಯಾವುದೂ ಇಲ್ಲ. ಆದರೆ, ಸೆಲೆಬ್ರಿಟಿಗಳು ಹಣ ಬಲ ಬಳಸಿ ಇಂಥದ್ದನ್ನೆಲ್ಲ ಪಡೆದುಕೊಳ್ಳುತ್ತಾರೆ. ಅಂತೆಯೇ ದರ್ಶನ್ ಬಳಗ ಈ ಒಂದು ಐಡಿಯಾ ಮಾಡಿರಬಹುದು ಎನ್ನಲಾಗಿದೆ. ಇಲ್ಲದಿದ್ದರೆ ಸಾಮಾನ್ಯರ ಪೊಲೀಸ್ ಠಾಣೆಯನ್ನು ಟೆಂಟ್ ಶಾಮಿಯಾನಗಳಿಂದ ಮುಚ್ಚುವ ಪ್ರಮೇಯ ಏನಿದೆ ಎಂದು ಜನ ಪ್ರಶ್ನಿಸಿದ್ದಾರೆ.

VISTARANEWS.COM


on

Actor darshan Arrested
Koo

ಬೆಂಗಳೂರು: ಚಿತ್ರದುರ್ಗದ ಮೂಲದ ರೇಣುಕಾ ಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಬಂಧಿಸಿಟ್ಟಿರುವ (Actor darshan Arrested) ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಗೆ ಟೆಂಟ್ ಹಾಕಿ ಮುಚ್ಚಲಾಗಿದೆ! ಪೊಲೀಸರು ಟೆಂಟ್​ ಹಾಕಿದ್ದಕ್ಕೆ ಕಾರಣ ಕೊಟ್ಟಿಲ್ಲ. ಹೀಗಾಗಿ ದರ್ಶನ್​ಗೆ ‘ಸಕಲ ಸೇವೆಗಳನ್ನು’ ನೀಡಲು ಟೆಂಟ್​​ನ ಕವಚ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಬಂಧನವಾದ ದಿನದಿಂದಲೂ ದರ್ಶನ್ ಸರಿಯಾಗಿ ಊಟ ಮಾಡದೇ ಎಣ್ಣೆ ಕೊಡಿ, ಸಿಗರೇಟು ಕೊಡಿ ಎಂದಷ್ಟೇ ಕೇಳುತ್ತಿದ್ದಾರೆ ಎಂಬುದಾಗಿಯೂ ವರದಿಯಾಗಿತ್ತು. ಮೈ ನಡುಕ ಉಂಟಾಗಿದೆ. ಸಿಗರೇಟು ಬೇಕು, ಕುಡಿಯಲು ಎಣ್ಣೆ ಬೇಕು ಎಂದು ಅವರು ಡಿಮ್ಯಾಂಡ್ ಮಾಡುತ್ತಿದ್ದಾರೆ. ತೆರೆದ ಪೊಲೀಸ್​ ಠಾಣೆಯಲ್ಲಿ ಅವರಿಗೆ ಇಂಥ ‘ಅಗತ್ಯ’ ವಸ್ತುಗಳನ್ನು ಕೊಟ್ಟರೆ ಸಾರ್ವಜನಿಕರಿಗೆ ಮತ್ತು ಮಾಧ್ಯಮದವರಿಗೆ ಗೊತ್ತಾದರೆ ಸಮಸ್ಯೆಯಾಗುತ್ತದೆ ಎಂದು ಪೊಲೀಸರು ಟೆಂಟ್​ನ ಐಡಿಯಾ ಮಾಡಿದ್ದಾರೆ.

ಪೊಲೀಸ್​ ಠಾಣೆಯ ಲಾಕ್​ಅಪ್​ನಲ್ಲಿರುವವರಿಗೆ ಕಾನೂನು ಪ್ರಕಾರ ಊಟ, ತಿಂಡಿ ಬಿಟ್ಟರೆ ಇನ್ಯಾವುದೂ ಇಲ್ಲ. ಆದರೆ, ಸೆಲೆಬ್ರಿಟಿಗಳು ಹಣ ಬಲ ಬಳಸಿ ಇಂಥದ್ದನ್ನೆಲ್ಲ ಪಡೆದುಕೊಳ್ಳುತ್ತಾರೆ. ಅಂತೆಯೇ ದರ್ಶನ್ ಬಳಗಕ್ಕೆ ಉಪಕಾರ ಮಾಡಲು ಐಡಿಯಾ ಮಾಡಿರಬಹುದು ಎನ್ನಲಾಗಿದೆ. ಇಲ್ಲದಿದ್ದರೆ ಸಾಮಾನ್ಯರಿಗಾಗಿ ಇರುವ ಪೊಲೀಸ್ ಠಾಣೆಯನ್ನು ಟೆಂಟ್ ಶಾಮಿಯಾನಗಳಿಂದ ಮುಚ್ಚುವ ಪ್ರಮೇಯ ಏನಿದೆ ಎಂದು ಜನ ಪ್ರಶ್ನಿಸಿದ್ದಾರೆ.

ಠಾಣೆಯ ಸುತ್ತಲೂ ಶಾಮಿಯಾನದ ಜತೆಗೆ ಹಾಕುವ ಸೈಡ್​ವಾಲ್​ (ಪರದೆಗಳನ್ನು) ಹಾಕಲಾಗಿದ್ದು, ಪೊಲೀಸ್​ ಠಾಣೆಯನ್ನು ಯಾರಿಗೂ ಕಾಣದಂತೆ ಮಾಡಲಾಗಿದೆ. ಈ ಸ್ಟೇಷನ್​ಗೆ ಯಾರಿಗೂ ಪ್ರವೇಶ ಇಲ್ಲದಂತೆ ಮಾಡಲಾಗಿದೆ. ಸಣ್ಣ ಪುಟ್ಟ ಅಹವಾಲುಗಳನ್ನು ತೆಗೆದುಕೊಂಡು ಬರುವ ಜನರನ್ನು ಶಾಮಿಯಾನದಿಂದ ಮುಚ್ಚಿದ ಗೇಟ್​ನಿಂದಲೇ ಪೊಲೀಸರು ಮಾತನಾಡಿಸಿ ಕಳುಹಿಸುತ್ತಿದ್ದಾರೆ. ಒಟ್ಟಿನಲ್ಲಿ ಸಾರ್ವಜನಿಕರ ಸೇವೆಗೆ ಇರುವ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ದರ್ಶನ್​ ಗ್ಯಾಂಗ್​ಗೆ ರೆಸಾರ್ಟ್ ಆಗಿ ಪರಿವರ್ತನೆಗೊಂಡಿದೆ. ದರ್ಶನ್​ ಬಳಗ ಆ ಠಾಣೆಯಲ್ಲಿ ಇರುವ ತನಕ ಸಾರ್ಜನಿಕರ ಸೇವೆಗೆ ದೊರೆಯುವುದು ಅನುಮಾನ.

ಬೋರ್ಡ್​ ಕಾಣದ ಹಾಗೆ ಶಾಮಿಯಾನ

ಬೋರ್ಡ್​ ಹಾಕಿದ ಅಂದಕ್ಕೆ ಠಾಣೆಯ ಬೋರ್ಡ್​ ಕೂಡ ಕಾಣುತ್ತಿಲ್ಲ. ಅಗತ್ಯಕ್ಕಾಗಿ ಠಾಣೆಗೆ ಬರುವ ಮಂದಿಗೆ ಠಾಣೆ ಎಲ್ಲಿ ಎಂದು ಹುಡುಕುವ ಪರಿಸ್ಥಿತಿ ಶುರುವಾಗಿದೆ. ಹಾಗಾದರೆ ಜನಸಾಮಾನ್ಯರ ಪೊಲೀಸ್​ ಠಾಣೆ ವಿಐಪಿ ಆರೋಪಿಗಳ ಅಡಗುದಾಣವಾಗಿರುವುದು ವಿಪರ್ಯಾಸ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಠಾಣೆಯ ಸುತ್ತ ಮುತ್ತ ನಿಷೇದಾಜ್ಞೆ

ದರ್ಶನ್​ ಬಂಧಿಸಿಟ್ಟಿರುವ ಠಾಣೆಯ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಭಿಮಾನಿಗಳು ಹಾಗೂ ಮಾಧ್ಯಮಗಳ ಕ್ಯಾಮೆರಾಮನ್​ಗಳು ತುಂಬಿಕೊಳ್ಳುತ್ತಿದ್ದ ಜಾಗದಲ್ಲಿ ಈಗ ನಾಲ್ಕು ಮಂದಿಗಿಂತ ಹೆಚ್ಚು ಜನ ಸೇರುವಂತಿಲ್ಲ. ಗುರುವಾರ ನಗರ ಪೊಲೀಶ್​ ಕಮಿಷನರ್ ದಯಾನಂದ್ ಅವರು ಠಾಣೆಗೆ ಭೇಟಿ ನೀಡಿದ್ದರು. ಆ ಬಳಿಕದಿಂದ ಠಾಣೆಯ ಸುತ್ತ ನಿಷೇದಾಜ್ಞೆ ಜಾರಿ ಮಾಡಿ ಪರದೆಯಿಂದ ಮುಚ್ಚಲಾಗಿದೆ.

ಜೂನ್​ 13ರಿಂದ 17ನೇ ದಿನಾಂಕದವರೆಗೂ 144ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಠಾಣಾ ಸುತ್ತ ಮುತ್ತ 200 ಮೀಟರ್ ಸುತ್ತಲೂ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ದರ್ಶನ್ ಅರೆಸ್ಟ್ ಹಿನ್ನೆಲೆ ಠಾಣೆ ಬಳಿ ಅಭಿಮಾನಿಗಳು ಮಿತಿಮೀರಿ ಜಮಾಯಿಸುತ್ತಿದ್ದರು. ಕೆಲವೊಂದು ಬಾರಿ ಲಾಠಿ ಚಾರ್ಜ್​ ಮಾಡಿದ್ದರು. ಹೀಗಾಗಿ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ರಿಂದ ಆದೇಶ ಹೊರಡಿಸಿದ್ದಾರೆ.

ದರ್ಶನ್‌ಗೆ ನೆರವು ಕೊಟ್ಟ ಮತ್ತೊಬ್ಬ ಸ್ಯಾಂಡಲ್‌ವುಡ್‌ ನಟ ಅರೆಸ್ಟ್‌!

ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳನ್ನು ಪಟ್ಟಣಗೆರೆಯ ಶೆಡ್‌ಗೆ ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಆರೋಪಿಗಳನ್ನು ತಂಡಗಳಾಗಿ ವಿಂಗಡಿಸಿ, ಶೆಡ್‌ನ ಪ್ರತಿ ಮೂಲೆಯಲ್ಲೂ ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಲಾಗಿದೆ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಮತ್ತೊಬ್ಬ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಬಂಧಿತನನ್ನು ಪ್ರದೋಶ್ (Paradosh) ಎಂದು ಗುರುತಿಲಾಗಿದ್ದು, ಈತ ಕೂಡ ಸ್ಯಾಂಡಲ್ ವುಡ್ ನಟನಾಗಿದ್ದಾನೆ. ಕನ್ನಡದ ಕೆಲ ಚಿತ್ರಗಳಲ್ಲಿ ಅಭಿನಯ ಮಾಡಿರುವ ಈತ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ A14 ಆರೋಪಿಯಾಗಿದ್ದಾನೆ. ರೇಣುಕಾ ಸ್ವಾಮಿ ಮೃತಪಟ್ಟ ಬಳಿಕ ಗಾಬರಿಗೊಂಡ ದರ್ಶನ್‌ 30 ಲಕ್ಷ ರೂ. ನೀಡಿ ಬಾಡಿಯನ್ನು ಎಲ್ಲಾದರು ಬಿಸಾಕುವಂತೆ ಹೇಳುತ್ತಾರೆ. ಆಗ ತನ್ನ ಆಪ್ತ, ಹೋಟೆಲ್ ಉದ್ಯಮಿ ಪ್ರದೋಶ್‌ ದರ್ಶನ್‌ ಹೇಳಿದಾಗ ಪ್ರದೋಶ್ ಮತ್ತಿತರರು ದೇಹವನ್ನು ಸ್ಕಾರ್ಪಿಯೋ ಕಾರಿನಲ್ಲಿ ಒಯ್ದು ಸುಮ್ಮನಹಳ್ಳಿಯ ಅಪಾರ್ಟ್‌ಮೆಂಟ್ ಒಂದರ ಮುಂಭಾಗದ ಮೋರಿ ಬಳಿ ಎಸೆದು ಹೋಗಿದ್ದಾರೆ.

Continue Reading

ಬೆಂಗಳೂರು

Actor Darshan : ರೇಣುಕಾಸ್ವಾಮಿಯನ್ನು ಕೊಂದು ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಫೋನ್‌ ಮಾಡಿದ್ದು ಯಾರಿಗೆ?

Actor Darshan : ಅಶ್ಲೀಲ ಮಸೇಜ್‌ ಕಳಿಸಿದ್ದಕ್ಕೆ ರೇಣುಕಾಸ್ವಾಮಿಯನ್ನು ಕೊಂದು ಹಾಕಿರುವ ಆರೋಪ ಹೊತ್ತಿರುವ ನಟ ದರ್ಶನ್‌ ಗ್ಯಾಂಗ್‌, ಕೃತ್ಯದ ಬಳಿಕ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಕಾಲ್‌ ಮಾಡಿದ್ದರು ಎನ್ನಲಾಗಿದೆ. ಅವರ ಸೂಚನೆ ಪ್ರಕಾರವೇ ಮೃತದೇಹವನ್ನು ಕಾಮಾಕ್ಷಿಪಾಳ್ಯದಲ್ಲಿ ಬಿಸಾಡಲಾಗಿತ್ತಂತೆ.

VISTARANEWS.COM


on

By

Actor Darshan
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಸ್ಟಡಿಯಲ್ಲಿರುವ ನಟ ದರ್ಶನ್‌ (Actor Darshan), ಪವಿತ್ರಾ ಗೌಡ (Pavitra Gowda) ಸೇರಿ ಇತರ ಆರೋಪಿಗಳ ತೀವ್ರ ವಿಚಾರಣೆಯು ನಡೆಯುತ್ತಿದೆ. ಈ ಮಧ್ಯೆ ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಭಾಗಿಯಾಗಿರುವ ಗುಮಾನಿಯು ಶುರುವಾಗಿದೆ.

ರೇಣುಕಾಸ್ವಾಮಿ ಕೊಲೆಯಾದ ಬಳಿಕ ಆರೋಪಿಗಳು ಒರ್ವ ಪೊಲೀಸ್ ಅಧಿಕಾರಿ ಜತೆಗೆ ಮಾತುಕತೆ ನಡೆಸಿದ್ದರು ಎನ್ನಲಾಗಿದೆ. ಆರ್‌ಆರ್ ನಗರದಲ್ಲಿ ನಡೆದ ಕೊಲೆ ನಂತರ ಮೃತದೇಹವನ್ನು ಕಾಮಾಕ್ಷಿ ಪಾಳ್ಯಕ್ಕೆ ತಂದು ಹಾಕಿದ್ದು ಯಾಕೆ? ಎಲ್ಲಿಯೂ ಜಾಗ ಇಲ್ಲವೆಂದು ಕಾಮಾಕ್ಷಿ ಪಾಳ್ಯಕ್ಕೆ ತಂದು ಹಾಕಿದ್ದರಾ ಎಂಬ ಪ್ರಶ್ನೆ ಉದ್ಭವಿಸುತ್ತದೆ.

ನಮ್ಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡೆಡ್‌ಬಾಡಿ ಹಾಕಬೇಡಿ ಎಂದಿದ್ದರಾ? ಆರೋಪಿಗಳು ಪೊಲೀಸ್‌ ಅಧಿಕಾರಿ ಸೂಚನೆ ಮೇರೆಗೆ ಮೃತದೇಹ ಕಾಮಾಕ್ಷಿಪಾಳ್ಯಕ್ಕೆ ತಂದು ಎಸೆಯಲಾಗಿದೆ. ಮೃತ ದೇಹ ಎಸೆದ ಬಳಿಕ ಸಹ ಪೊಲೀಸ್ ಅಧಿಕಾರಿ ಜತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ದೊಡ್ಡ ಮೊತ್ತಕ್ಕೆ ಡೀಲ್?‌

ದರ್ಶನ್ ಹೆಸರು ಹೊರಬಾರದಂತೆ ದೊಡ್ಡ ಮೊತ್ತಕ್ಕೆ ಮಾತುಕತೆ ನಡೆದಿತ್ತಾ? ಎಂಬ ಶಂಕೆಯು ವ್ಯಕ್ತವಾಗಿದೆ. ಜತೆಗೆ A13 ದೀಪಕ್ ಎಂಬಾತ ಪ್ರಭಾವಿ ರಾಜಕಾರಣಿ ಸಂಬಂಧಿಕನಾಗಿದ್ದಾನೆ. ಹೀಗಾಗಿ ದೀಪಕ್ ಫೋಟೋ ರಿಲೀಸ್ ಮಾಡದೇ ಗೌಪ್ಯತೆ ಕಾಪಾಡೋದಕ್ಕೂ ದೊಡ್ಡ ಮೊತ್ತದ ಹಣ ಡೀಲ್ ನಡೆದಿದೆ ಎನ್ನಲಾಗಿದೆ. ಈತನನ್ನೂ ಕೇಸ್‌ನಿಂದ ಹೊರಗಿಡಲು ಪ್ರಯತ್ನ ನಡೆದಿದ್ದು, ಈತನ ಫೋಟೊ ಸಹ ಹೊರ ಬಾರದಂತೆ ವ್ಯವಸ್ಥೆ ಮಾಡಲಾಗಿದೆ ಎನ್ನಲಾಗಿದೆ. ವ್ಯವಸ್ಥಿತವಾಗಿ ದೀಪಕ್‌ನನ್ನು ಅಪ್ರೂವರ್ ಮಾಡಿಕೊಂಡು ಕೇಸ್‌ನಿಂದ ಕೈ ಬಿಡುವ ಪ್ಲಾನ್ ನಡೆಯುತ್ತಿದೆ ಎಂದು ಪೊಲೀಸರ ತನಿಖೆ ಮೇಲೆ ಹಲವಾರು ಅನುಮಾನ ಮೂಡಿದೆ.

ಇದನ್ನೂ ಓದಿ: Actor Darshan: ಆರಾಧನೆ ಅತಿರೇಕವಾದರೆ ದುರಂತ ಖಚಿತ; ದರ್ಶನ್​ ಬಗ್ಗೆ ರಾಮ್​ಗೋಪಾಲ್ ವರ್ಮಾ ಹೇಳಿದ್ದು ಹೀಗೆ…

ರೇಣುಕಾಸ್ವಾಮಿ ಹತ್ಯೆ ಹೇಗೆ ನಡೆದಿತ್ತು?

ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

Karnataka Rain : ಸತತ ಮಳೆಗೆ (Rain Effect) ಉತ್ತರ ಒಳನಾಡಿನ ಭಾಗ ತತ್ತರಿಸಿ ಹೋಗಿದೆ. ಗಂಟೆ ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ರಾಯಚೂರಿನಲ್ಲಿ ಮಳೆಗೆ ಶಾಲೆಯ ಚಾವಣಿ ಕುಸಿದು ಮಕ್ಕಳು ಗಾಯಗೊಂಡಿದ್ದಾರೆ.

VISTARANEWS.COM


on

By

Karnataka Rain Effect
Koo

ರಾಯಚೂರು: ಮಳೆ ಅವಾಂತರಕ್ಕೆ (Rain Effect) ಶಾಲೆ ಚಾವಣಿ ಕುಸಿದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಪಾತಾಪುರ ಗ್ರಾಮದಲ್ಲಿ (Karnataka Rain)ಘಟನೆ ನಡೆದಿದೆ. ತರಗತಿ ನಡೆಯುತ್ತಿರುವಾಗಲೇ ಏಕಾಏಕಿ ಚಾವಣಿ ಕಳಚಿ ಮಕ್ಕಳ ಬಿದ್ದಿದ್ದು, ತಲೆ, ಕೈಗಳಿಗೆ ಗಾಯವಾಗಿದೆ.

ಪಾತಾಪುರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾವಣಿ ಕುಸಿದು, ವಿದ್ಯಾರ್ಥಿ ಚಂದನಬಸವರಾಜ್‌ ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಈ ಅವಾಂತರ ಸೃಷ್ಟಿಯಾಗಿದೆ.

ಮಕ್ಕಳು ಜೀವ ಭಯದಲ್ಲಿ ಪಾಠ ಕಲಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಿಇಓ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಠಡಿ ಸೋರುತ್ತಿರುವುದರಿಂದ ತಾತ್ಕಾಲಿಕವಾಗಿ ಬೇರೆ ತರಗತಿ ನಡೆಸಲು ಸೂಚಿಸಲಾಗಿದೆ. ತಾತ್ಕಾಲಿಕವಾಗಿ ಗ್ರಾಮದ ಕರಿಲಿಂಗೇಶ್ವರ ದೇವಸ್ಥಾನದಲ್ಲಿ ತರಗತಿ ನಡೆಸಲು ಬಿಇಓ ಸೂಚನೆ ನೀಡಿದ್ದಾರೆ.

ರಾಯಚೂರಿನಲ್ಲಿ ಈಜುಕೊಳವಾದ ಶಾಲೆ ಆವರಣ

ಅಲ್ಪ ಮಳೆಗೆ ಸರಕಾರಿ‌ ಶಾಲೆ ಆವರಣವು ಈಜುಕೊಳವಾಗಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಶಾಲೆ ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಜೀವ ಭಯದಲ್ಲೇ ಮಕ್ಕಳು ಮತ್ತು ಶಿಕ್ಷಕರು ಪಾಠ ಪ್ರವಚನ ಮಾಡಬೇಕಾದ ಪರಿಸ್ಥಿತಿ ನಿರ್ಮಾನವಾಗಿದೆ. ಜಿಟಿ ಜಿಟಿ ಮಳೆಯಿಂದ ಕೊಠಡಿಗಳು ಸೋರುತ್ತಿದೆ. ಜೋರಾಗಿ ಮಳೆ ಬಂದರೆ ನೀರು ನುಗ್ಗುವ ಭೀತಿ ಇದೆ. ಇತ್ತ ಸೋರುತ್ತಿರುವ ಕೊಠಡಿಯಲ್ಲೆ ಮಧ್ಯಾಹ್ನ ಬಿಸಿ ಊಟದ ಆಹಾರ ಧಾನ್ಯಗಳ ಸಂಗ್ರಹ ಮಾಡಲಾಗಿದೆ. ಪಿಡಿಒ, ಬಿಇಓ ಅವರ ಗಮನಕ್ಕೆ ತಂದರು ಪ್ರಯೋಜನೆಯಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: Actor Darshan : ನಟ ದರ್ಶನ್‌ ವಿರುದ್ಧ ಸಿಡಿದೆದ್ದ ಮಂಡ್ಯ ರೈತರು; ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರ

ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಬೈಕ್ ಸವಾರನ ಜೀವ ಉಳಿದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ಹಳ್ಳ, ಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ರಭಸವಾಗಿ ಹರಿಯುತ್ತಿದ್ದ ನೀರಿನಲ್ಲೇ ಹಳ್ಳ ದಾಟಲು ಬೈಕ್‌ ಸವಾರ ಮುಂದಾಗಿದ್ದ. ಈ ವೇಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ, ಇದನ್ನೂ ಗಮನಿಸಿದ ಸ್ಥಳೀಯರು ಕೂಡಲೇ ಸವಾರನನ್ನು ರಕ್ಷಿಸಿದ್ದಾರೆ.

ಜಲಸಮಾಧಿಯಾದ ಬೃಹತ್‌ ಬಾವಿ

ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಮೀನಿನಲ್ಲಿದ್ದ ಬೃಹತ್ ಬಾವಿಯೊಂದು ಜಲಸಮಾಧಿಯಾಗಿದೆ. ಬಾವಿ ಸುತ್ತಲೂ ಕಲ್ಲಿನ ಗೋಡೆ ನಿರ್ಮಿಸಿದರೂ ಬಾವಿ ಕುಸಿದಿದೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಗ್ರಾಮದಲ್ಲಿ ಘಟನೆ ನಡೆದಿದೆ.

14 ಎಕರೆ ಜಮೀನಿಗಾಗಿ 60 ಲಕ್ಷ ರೂ. ಖರ್ಚು ಮಾಡಿ ಜಮೀನಿನಲ್ಲಿ ರೈತ ಸಿದ್ದಪ್ಪ ಸರಬಡಗಿ ಬಾವಿಯನ್ನು ಕಟ್ಟಿಸಿದ್ದರು. ಇದೀಗ ಸಂಪೂರ್ಣವಾಗಿ ಬಾವಿ ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ ಚಿಂತೆಗೀಡಾಗಿದ್ದಾರೆ. 110 ಆಳದ ಬಾವಿಗೆ ಸುತ್ತಲೂ 45 ಅಡಿ ಕಲ್ಲಿನ ಗೋಡೆ ಕಟ್ಟಿಸಲಾಗಿತ್ತು. ಇದೀಗ ಬಾವಿಯೊಳಗೆ 7.5ಎಚ್‌ಪಿ 2 ಮೋಟಾರು ನೀರು ಪಾಲಾಗಿದೆ. ಬಾವಿ ಕುಸಿದಿರುವ ಹಿನ್ನೆಲೆ ಕೃಷಿಗೆ ನೀರು ಪೂರೈಸುವುದು ಹೇಗೆ ಎಂದು ಗೋಳಾಡುತ್ತಿದ್ದಾರೆ. ಕೂಡಲೇ ಸರ್ಕಾರ ಪರಿಹಾರ ಕೊಡಲಿಎಂದು ಆಗ್ರಹಿಸಿದ್ದಾರೆ.

ಒಂದೇ ಮಳೆಗೆ ಭರ್ತಿಯಾದ ಗಾಜನೂರಿನ ತುಂಗಾ ಡ್ಯಾಂ ಭರ್ತಿ

ಒಂದೇ ಮಳೆಗೆ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಡ್ಯಾಂ ಭರ್ತಿಯಾಗಿದೆ. ತುಂಗಾ ಜಲಾಶಯದಲ್ಲಿ ಗರಿಷ್ಠ ನೀರಿನ ಸಂಗ್ರಹ ಮಟ್ಟ 588.24 ಮೀಟರ್‌ ಇದ್ದು, ಈಗಾಗಲೇ ನೀರಿನ ಮಟ್ಟ 588.11 ಮೀ ಬಂದಿದೆ. ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಗೆ ತುಂಗಾ ಜಲಾಶಯವೇ ಆಧಾರವಾಗಿತ್ತು. ಗಾಜನೂರಿನ ತುಂಗಾ ಜಲಾಶಯದ 3.24 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. ಶಿವಮೊಗ್ಗದ ತೀರ್ಥಹಳ್ಳಿ ಹಾಗೂ ಚಿಕ್ಕಮಗಳೂರಿನ ಶೃಂಗೇರಿ ಭಾಗದಲ್ಲಿ ಧಾರಾಕಾರ ಸುರಿದ ಮಳೆಯಿಂದಾಗಿ ತುಂಗಾ ನದಿಯಲ್ಲಿ ಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಭರ್ತಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
World Anti Child Labor Day celebration in Hosapete
ವಿಜಯನಗರ19 mins ago

Vijayanagara News: ಹೊಸಪೇಟೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

Kangana Ranaut
Latest22 mins ago

Kangana Ranaut: ಸಂಸದೆಯಾಗಿರುವ ನಟಿ ಕಂಗನಾ ರಣಾವತ್‌ಗೆ ಸಿಗುವ ಸಂಬಳ, ಇತರ ಸವಲತ್ತುಗಳು ಏನೇನು?

JP Nadda
Latest34 mins ago

JP Nadda: ವೇದಿಕೆ ಮೇಲೆ ಗುಟ್ಕಾ ತಿಂದ ಕೇಂದ್ರ ಆರೋಗ್ಯ ಸಚಿವ ನಡ್ಡಾ? ವಿಡಿಯೊ ನೋಡಿ

Actor darshan Arrested
ಪ್ರಮುಖ ಸುದ್ದಿ41 mins ago

Actor darshan Arrested : ದರ್ಶನ್‌ಗೆ ಎಣ್ಣೆ ಹೊಡೆಯಲು, ಸಿಗರೇಟ್​ ಸೇದಲು ಠಾಣೆಗೇ ಶಾಮಿಯಾನ ಹಾಕಿದರೆ ಪೊಲೀಸರು?

Hamare Baarah Release Supreme Court has imposed a stay
ಬಾಲಿವುಡ್46 mins ago

Hamare Baarah: ಮುಸ್ಲಿಂ ಮಹಿಳೆಯರ ಕುರಿತ ʻಹಮಾರೆ ಬಾರಾʼ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

Stock Market
ವಾಣಿಜ್ಯ48 mins ago

Stock Market: ಷೇರುಪೇಟೆಯಲ್ಲಿ ಗೂಳಿ ಗುಟುರು; ಸೆನ್ಸೆಕ್ಸ್‌, ನಿಫ್ಟಿ ಏರಿಕೆ

Actor Darshan
ಬೆಂಗಳೂರು48 mins ago

Actor Darshan : ರೇಣುಕಾಸ್ವಾಮಿಯನ್ನು ಕೊಂದು ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಫೋನ್‌ ಮಾಡಿದ್ದು ಯಾರಿಗೆ?

Darshan Old Case Coming Out darshan gang
ಕ್ರೈಂ52 mins ago

Actor Darshan: ಬಡಪಾಯಿ ಕಾರ್ಮಿಕರ ಮೇಲೆ ನಾಯಿ ಛೂ ಬಿಟ್ಟು ಹಿಂಸಿಸಿದ್ದ ದರ್ಶನ್‌ & ಗ್ಯಾಂಗ್‌!

IND vs USA
ಕ್ರೀಡೆ1 hour ago

IND vs USA: ಬೆಸ್ಟ್​ ಫೀಲ್ಡಿಂಗ್​ಗೆ 2ನೇ ಚಿನ್ನದ ಪದಕ ಗೆದ್ದ ಮೊಹಮ್ಮದ್ ಸಿರಾಜ್

Actor Darshan case ram gopal varma Reaction
ಸ್ಯಾಂಡಲ್ ವುಡ್1 hour ago

Actor Darshan: ಆರಾಧನೆ ಅತಿರೇಕವಾದರೆ ದುರಂತ ಖಚಿತ; ದರ್ಶನ್​ ಬಗ್ಗೆ ರಾಮ್​ಗೋಪಾಲ್ ವರ್ಮಾ ಹೇಳಿದ್ದು ಹೀಗೆ…

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌