BKS Varma Death: ಜ್ಯೇಷ್ಠ ಕಲಾವಿದ, ವಿದ್ವಾಂಸ ಬಿ.ಕೆ.ಎಸ್. ವರ್ಮಾ ನಿಧನದ ಸುದ್ದಿ ಅತೀವ ದುಃಖ ತಂದಿದೆ: ವಿ. ನಾಗರಾಜ್ - Vistara News

ಕರ್ನಾಟಕ

BKS Varma Death: ಜ್ಯೇಷ್ಠ ಕಲಾವಿದ, ವಿದ್ವಾಂಸ ಬಿ.ಕೆ.ಎಸ್. ವರ್ಮಾ ನಿಧನದ ಸುದ್ದಿ ಅತೀವ ದುಃಖ ತಂದಿದೆ: ವಿ. ನಾಗರಾಜ್

BKS Varma Death: ಬಿ.ಕೆ.ಎಸ್. ವರ್ಮಾ ಅವರು ಕಲೆಯ ಅನೇಕ ಆಯಾಮಗಳನ್ನು ಅನ್ವೇಷಿಸಿದ್ದರು. ಅವರು ಸಾಂಪ್ರದಾಯಿಕವಾದ ಕಲೆಗಳ ಆರಾಧಕರಾಗಿದ್ದರು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ್ ಹೇಳಿದ್ದಾರೆ.

VISTARANEWS.COM


on

BKS Varma Death
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿ.ಕೆ.ಎಸ್. ವರ್ಮಾ ಅವರ ಕಲಾಕೃತಿಗಳ ಉತ್ಕೃಷ್ಟತೆ, ಭಾವಾಭಿವ್ಯಕ್ತಿ ಮತ್ತು ಜೀವಂತಿಕೆಯು ಕಲೆಯ ಮೂಲಕ ದೈವತ್ವದೆಡೆಗೆ ಸಾಗುವ ಮಹತ್ ಸಂಕಲ್ಪದ ಅಭಿವ್ಯಕ್ತಿಯಾಗಿತ್ತು. ಜ್ಯೇಷ್ಠ ಕಲಾವಿದ, ವಿದ್ವಾಂಸ ಬಿ.ಕೆ.ಎಸ್. ವರ್ಮಾ (BKS Varma Death) ಅವರ ನಿಧನದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಲೆಯ ಅನೇಕ ಆಯಾಮಗಳನ್ನು ಅನ್ವೇಷಿಸಿದ್ದ ಅವರು ಸಾಂಪ್ರದಾಯಿಕವಾದ ಕಲೆಗಳ ಆರಾಧಕರಾಗಿದ್ದರು. ಅಷ್ಟೇ ಅಲ್ಲದೆ ಹೊಸ ಪ್ರಯೋಗಗಳಿಗೆ ಸದಾ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತಿದ್ದ ಅವರು ಅತ್ಯಂತ ಸರಳ ಮತ್ತು ಸಾತ್ವಿಕ ವ್ಯಕ್ತಿತ್ವದ ಮೂಲಕ ಜನಮಾನಸದಲ್ಲಿ ವಿಶೇಷ ಸ್ಥಾನ ಪಡೆದಿದ್ದಾರೆ. ದೇಶ ವಿದೇಶಗಳಲ್ಲಿ ಪ್ರದರ್ಶನಗೊಂಡ ಅವರ ಕಲಾಕೃತಿಗಳು ಕಲಾಸಕ್ತರ, ವಿಮರ್ಶಕರ, ಸಹೃದಯ ಸಾಮಾನ್ಯರ ಜನಜೀವನದ ಭಾಗವೇ ಆಗಿ ಹೋಗಿತ್ತು. ಅವರ ಕುಂಚದಲ್ಲಿ ಮೂಡಿಬಂದ ಭುವನೇಶ್ವರಿದೇವಿ, ರಾಘವೇಂದ್ರ ಸ್ವಾಮಿ, ಶಾರದೆ, ಗಣಪತಿ ಮುಂತಾದ ಅತ್ಯದ್ಭುತ ಚಿತ್ರಗಳೇ ಸಾಕ್ಷಿ ಎಂದು ಹೇಳಿದ್ದಾರೆ.

ಇದನ್ನೂ ಓದಿ | BKS Varma Death | ಬಿ.ಕೆ.ಎಸ್‌. ವರ್ಮ ಅವರಿಗೆ ಕೊನೆಗೂ ಗೌರವ ನೀಡಿತ್ತು ಕನ್ನಡ ಸಾಹಿತ್ಯ ಪರಿಷತ್ತು

ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ಅತ್ಯಂತ ಆತ್ಮೀಯ ಒಡನಾಟ ಹೊಂದಿದ್ದ ಅವರು ಸಂಸ್ಕಾರ ಭಾರತಿಯ ಪ್ರಾರಂಭದ ದಿನಗಳಿಂದಲೂ ಚಟುವಟಿಕೆಗಳಿಗೆ ಪ್ರೋತ್ಸಾಹ-ಸಹಕಾರ ನೀಡಿದ್ದರು. ನೃತ್ಯ-ಕಾವ್ಯ-ಕುಂಚ ಎಂಬ ಹೊಸ ಪ್ರಯೋಗವನ್ನೂ ಸಂಸ್ಕಾರ ಭಾರತಿಯಿಂದ ಮಾಡುವುದಕ್ಕೆ ಪ್ರೇರಣೆ ನೀಡಿದವರು. ಅಲ್ಲದೆ ಅದರ ಮಾರ್ಗದರ್ಶಕ ಮಂಡಳಿಯಲ್ಲಿದ್ದು, ಅನೇಕ ಹೊಸ ಕಲಾವಿದರಿಗೆ ಸ್ಫೂರ್ತಿಯಾಗಿ, ಅವರನ್ನು ಕಲಾ ಜಗತ್ತಿಗೆ ಪರಿಚಯಿಸಿದ ಮಹನೀಯರು. ಬಿ.ಕೆ.ಎಸ್ ವರ್ಮಾ ಅವರು ದೈಹಿಕವಾಗಿ ನಮ್ಮೊಂದಿಗೆ ಇರದಿದ್ದರೂ ಅವರ ಕಲಾಕೃತಿಗಳ ಮೂಲಕ ಅಮರರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಕಲಾಭಿಮಾನಿಗಳಿಗೆ ಆ ಭಗವಂತನು ನೀಡಲಿ ಮತ್ತು ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Lok Sabha Election 2024: ಮೋದಿ ಮತ್ತೊಮ್ಮೆ ಎಂಬ ನುಡಿ ಸತ್ಯವಾಗಲಿದೆ: ಎಂಎಲ್‌ಸಿ ಟಿ.ಎ.ಶರವಣ

Lok Sabha Election 2024: ಭಗವಂತ ಮತ್ತು ನಾಡಿನ ಜನತೆಯ ಆಶೀರ್ವಾದ ಮೋದಿಯವರ ಮೇಲಿದೆ. ಈ ಬಾರಿ ದೇಶದ ಸಮಗ್ರ ಅಭಿವೃದ್ಧಿಗಾಗಿ ಎಲ್ಲಾ ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳನ್ನು ಜನರು ಚುನಾಯಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ.

VISTARANEWS.COM


on

Lok Sabha Election 2024
Koo

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಕುಟುಂಬದೊಂದಿಗೆ ಬಸವನಗುಡಿಯ ತ್ಯಾಗರಾಜನಗರದ ಬಿಜಿಎಸ್‌ ಬ್ಲೂಮ್‌ಫೀಲ್ಡ್‌ನ ಮತಗಟ್ಟೆಯಲ್ಲಿ ಶುಕ್ರವಾರ ಮತ ಚಲಾವಣೆ ಮಾಡಿದರು.

ಈ ವೇಳೆ ಮಾತನಾಡಿದ ಟಿ.ಎ.ಶರವಣ ಅವರು, ಈ ಬಾರಿ ಕರ್ನಾಟಕದಲ್ಲಿ 28 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಗೆಲ್ಲಲಿದೆ. ಮೋದಿ ಮತ್ತೊಮ್ಮೆ ಎಂಬ ನುಡಿ ಸತ್ಯವಾಗಲಿದೆ. ಜೆಡಿಎಸ್‌ನ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ನರೇಂದ್ರ ಮೋದಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಕಮಲ ಅರಳಲಿದೆ. ಭಗವಂತ ಮತ್ತು ನಾಡಿನ ಜನತೆಯ ಆಶೀರ್ವಾದ ಮೋದಿಯವರ ಮೇಲಿದೆ. ಈ ಬಾರಿ ದೇಶದ ಸಮಗ್ರ ಅಭಿವೃದ್ಧಿಗಾಗಿ ಎಲ್ಲಾ ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳನ್ನು ಜನರು ಚುನಾಯಿಸುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ | Lok Sabha Election 2024: ಮೂರು ಗಂಟೆವರೆಗೆ ಶೇ.50.93 ವೋಟಿಂಗ್‌; ರಾಜ್ಯದಲ್ಲಿ ಈ ಬಾರಿ ದಾಖಲೆಯ ಮತದಾನವಾಗುತ್ತಾ?

ಕನಕಪುರದಲ್ಲಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ; ಎಚ್‌ಡಿಕೆ ಗಂಭೀರ ಆರೋಪ

Lok Sabha Election 2024 DK brothers distribute Rs 505 in Bengaluru Rural constituency HD Kumaraswamy allegations

ಬೆಂಗಳೂರು: ಈ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬೆಂಗಳೂರು ಗ್ರಾಮಾಂತರ ಕ್ಷೇತ್ರದ (Bangalore Rural Constituency) ಕನಕಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ ಮಾಡಲಾಗುತ್ತಿದೆ. ಈ ಬಗ್ಗೆ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ಕಣ್ಣು ಮುಚ್ಚಿ ಕುಳಿತಿದ್ದು, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ.

ಕೇತಗಾನಹಳ್ಳಿಯಲ್ಲಿ ಕುಟುಂಬ ಸಮೇತ ಬಂದು ಮತಚಲಾಯಿಸಿದ ಎಚ್.ಡಿ. ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿ, ನನಗೆ ಇರುವ ಮಾಹಿತಿ ಪ್ರಕಾರ 14 ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಒಳ್ಳೆಯ ರೀತಿ ಮತದಾನ ನಡೆಯುತ್ತಿದೆ. ಆದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಂದು ಕಪ್ಪು ಚುಕ್ಕೆ ರೀತಿ ಪ್ರಕ್ರಿಯೆಗಳು ನಡೆಯುತ್ತಿವೆ. ನಿನ್ನೆ ಸಹ ಕನಕಪುರದಲ್ಲೂ ಧೈರ್ಯದಿಂದ ಎದರಿಸುವ ವಾತಾವರಣ ನಿರ್ಮಾಣವಾಗಿದೆ. ಆದರೆ, ಕನಕಪುರದ ಸೊರಕಾಯಿ ದೊಡ್ಡಿ ಸೇರಿದಂತೆ ಹಲವು ಕಡೆ ಕಾಂಗ್ರೆಸ್ ತನ್ನ ಹಳೇ ಚಾಳಿಯನ್ನು ಮುಂದುವರಿಸಿದೆ‌. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ, ಮಾಗಡಿ, ಕುಣಿಗಲ್ ಸೇರಿದಂತೆ ಹಲವು ಭಾಗದಲ್ಲಿ ಬೆಳಗಿನ ಜಾವ ಐದು ಗಂಟೆಗೆ ಮನೆ ಮನೆಗೆ ಹೋಗಿ ಗ್ಯಾರಂಟಿ ಕಾರ್ಡ್ ಕೊಟ್ಟು 4 ರಿಂದ 5 ಸಾವಿರ ರೂಪಾಯಿಯ ಕೂಪನ್ ಕೊಟ್ಟಿದ್ದಾರೆ. ಈ ಹಿಂದೆ ಕುಕ್ಕರ್ ಎಲ್ಲ ಕೊಟ್ಟಿದ್ದಾರೆ. ಈಗ ಕಾರ್ಡ್ ಮತ್ತು ಕೂಪನ್ ಕೊಟ್ಟಿದ್ದಾರೆ. ಈಗ ಎಲ್ಲ ಕಡೆ ಇದನ್ನು ಶುರು ಮಾಡಿದ್ದಾರೆ. ಹಾಲಿ ಶಾಸಕರ ಫೋಟೋ ಹಾಕಿ 10 ಸಾವಿರದ ರೂಪಾಯಿಯ ಕೂಪನ್ ಕೊಡುತ್ತಿದ್ದಾರೆ. ಕ್ಯೂ ಆರ್ ಕೋಡ್ ಕೊಡುವ ಚಾಳಿಯನ್ನು ಶುರು ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದರು.

ಚುನಾವಣಾ ಆಯೋಗದ ವಿರುದ್ಧ ಎಚ್‌ಡಿಕೆ ಗರಂ

ಚುನಾವಣಾ ಆಯೋಗವು ಈ ರೀತಿ ಚುನಾವಣೆಯನ್ನು ನಡೆಸುವ ಬದಲು ನೇರವಾಗಿ ಹಣ ಕೊಡುವ ವ್ಯವಸ್ಥೆಯನ್ನು ಜಾರಿಗೆ ತರಬಹುದು. ಆಯಾಯ ಅಭ್ಯರ್ಥಿಗಳು ತಮ್ಮ ಶಕ್ತಿ ಅನುಸಾರ ಹಣ ನೀಡುತ್ತಾರೆ. ದೇಶದಲ್ಲಿ ಈ ರೀತಿಯ ವ್ಯವಸ್ಥೆಯನ್ನು ತಂದರೆ ಒಳ್ಳೆಯದು ಎಂದು ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಇದನ್ನು ಚುನಾವಣಾ ಅಂತ ಕರೆಯುತ್ತಾರಾ? ಪ್ರಜಾಪ್ರಭುತ್ವದ ಹಬ್ಬ ಎಂದು ಹೇಳಲಾಗುತ್ತದೆಯೇ? ದುಡ್ಡು ಇರುವವರಿಗೆ, ಲೂಟಿ ಮಾಡುವವರಿಗೆ ಮಾತ್ರ ಇದು ಹಬ್ಬ. ಜನಸಾಮಾನ್ಯರಿಗೆ ಅಲ್ಲ. ಈ ರೀತಿಯಾಗಿ ಮತ ಪಡೆಯೋದು ಅಂದರೆ ಹೇಗೆ? ಮಹಾನಭಾವರು ಬುದ್ಧಿ ಹೇಳಿದ್ದೇ ಹೇಳಿದ್ದು ಎಂದು ಡಿ.ಕೆ. ಸಹೋದರರ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

ಮತಗಟ್ಟೆ ಮುಂದೆ ಡಿಕೆ ಶಿವಕುಮಾರ್‌ ರಿಯಾಕ್ಷನ್;‌ ಇಲ್ಲಿದೆ ವಿಡಿಯೊ

ಜ್ಯೋತಿಷಿ ಹೇಳಿದಂತೆ ಹಣ ಹಂಚಿಕೆ

ಕನಕಪುರದಲ್ಲಿ ಜ್ಯೋತಿಷಿ ಹೇಳಿದಂತೆ ಹಣ ಹಂಚಿದ್ದಾರೆ. ಯಾರೋ ಶಾಸ್ತ್ರದವರು ಹೇಳಿದ್ದಾರೆ ಎಂದು 505 ರೂಪಾಯಿ, ಮಲೆ ಮಹದೇಶ್ವರ ದೇವರ ಲಾಡು ಮತ್ತು ಗ್ಯಾರಂಟಿ ಕಾರ್ಡ್‌ಗಳನ್ನು ರಾತ್ರಿಯಲ್ಲ ಹಂಚಿದ್ದಾರೆ. ಈ ಬಗ್ಗೆ ನಮ್ಮ ಡಿಸಿ ಮತ್ತು ಚುನಾವಣಾ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮುಕ್ತವಾದ ಚುನಾವಣೆ ನಡೆಯುತ್ತಿಲ್ಲ. ಇವತ್ತು ಸೋಲಿನ ಭೀತಿಯಿಂದ ಕುತಂತ್ರದ ರಾಜಕಾರಣ ಮಾಡುತ್ತಿದ್ದಾರೆ. ಚುನಾವಣಾ ಅಕ್ರಮಗಳ ಮೂಲಕ ಗೆಲ್ಲುತ್ತೇವೆ ಎಂದು ಹೋಗುತ್ತಿದ್ದಾರೆ. ಅಕ್ರಮ ಮಾಡಿದರೂ ಜನತೆ ಬಲಿಯಾಗಿದೆ ನ್ಯಾಯಯುತವಾಗಿ ಮತದಾನ ಮಾಡಿ ಎಂದು ಮನವಿ ಮಾಡುತ್ತೇನೆ. ಚುನಾವಣಾ ಆಯೋಗ ಬಾಗಿಲು ಹಾಕಿಕೊಳ್ಳೋದು ಒಳ್ಳೆಯದು. ಚುನಾವಣಾ ಆಯೋಗ ತನ್ನ ವ್ಯವಸ್ಥೆಯನ್ನು ಬದಲಾವಣೆ ಮಾಡಿಕೊಳ್ಳಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಕಿವಿಮಾತು ಹೇಳಿದರು.

Continue Reading

Lok Sabha Election 2024

Lok Sabha Election 2024 : ವೋಟ್‌ ಮಾಡಲು ಒಂದೂವರೆ ಲಕ್ಷ ರೂ. ಖರ್ಚು; ಲಂಡನ್‌ನಿಂದ ಮಂಡ್ಯಕ್ಕೆ ಬಂದ ಮಹಿಳೆ

Lok Sabha Election 2024 : ಲಂಡನ್‌ನಲ್ಲಿರುವ ಮಹಿಳೆಯೊಬ್ಬರು ಮಂಡ್ಯಕ್ಕೆ ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ. ವೋಟ್‌ ಮಾಡಲೆಂದೇ ಮಂಡ್ಯಕ್ಕೆ ಬಂದ ಮಹಿಳೆಗೆ ವಿಮಾನದ ಖರ್ಚು ಒಂದೂವರೆ ಲಕ್ಷ ರೂ. ಖರ್ಚು ಆಗಿದೆ ಅಂತೆ.

VISTARANEWS.COM


on

By

Lok sabha election 2024
Koo

ಮಂಡ್ಯ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಲಂಡನ್‌ನಿಂದ ಮಂಡ್ಯಕ್ಕೆ ಮಹಿಳೆಯೊಬ್ಬರು ಒಂದೂವರೆ ಲಕ್ಷ ರೂಪಾಯಿ ಖರ್ಚು ಮಾಡಿ ವೋಟ್ ಮಾಡಿದ್ದಾರೆ. ಮಂಡ್ಯದ ಕಾಳೇನಹಳ್ಳಿ ಗ್ರಾಮದ ಸೋನಿಕಾ ಎಂಬಾಕೆ ಲಂಡನ್‌ನಿಂದ ಬಂದು ಕಾಳೇನ ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಇದೇ ವೇಳೆ ಮಾತಾನಾಡಿದ ಸೋನಿಕಾ ಎಲ್ಲೆಡೆ ಬರ ಇದೆ ನಮ್ಮ ರಾಜ್ಯ ಹಾಗೂ ದೇಶಕ್ಕೆ ಒಳ್ಳೆಯದಾಗಬೇಕು. ಮೋದಿ ನಾಯಕತ್ವದಲ್ಲಿ ದೇಶ ಮುನ್ನಡೆಯುತ್ತಿದೆ. ಹಾಗಾಗಿ ಕುಮಾರಸ್ವಾಮಿ ಅವರಿಗೆ ಮತ ಚಲಾಯಿಸಿದ್ದೀನಿ. ನೀವು ಮತದಾನ ಮಾಡಿ, ಮತ ಚಲಾಯಿಸುವುದಕ್ಕಾಗಿಯೇ ನಾನು ಒಂದೂವರೆ ಲಕ್ಷ ರೂ. ಖರ್ಚು ಮಾಡಿಕೊಂಡು ಬಂದಿದ್ದೀನಿ. ಮತದಾನ ನಮ್ಮ ಹಕ್ಕು, ನಿರ್ಲಕ್ಷ್ಯ ಮಾಡದೆ ಉದಾಸೀನತೆ ತೋರದೆ ಮತ ಹಾಕಿ ಎಂದು ಮನವಿ ಮಾಡಿದರು.

ಇದನ್ನೂ ಓದಿ: Lok Sabha Election 2024: 2ನೇ ಬಾರಿಗೆ ಬಂದು ಮತದಾನ ಮಾಡಿದ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು!

ದುಬೈ, ಫಿಲಿಫೈನ್ಸ್‌ನಿಂದ ಬಂದು ಹಕ್ಕು ಚಲಾಯಿಸಿದ ಮತದಾರರು

ಕೋಲಾರ/ಮಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ಬಿರುಸಿನ ಮತದಾನ ನಡೆಯುತ್ತಿದ್ದು, ದುಬೈನಿಂದ ಬಂದು ಕೋಲಾರದ ನಿವಾಸಿಯೊಬ್ಬರು ಮತದಾನ ಮಾಡಿದ್ದಾರೆ. ಕೋಲಾರ ನಿವಾಸಿ ಅಬ್ದುಲ್ ಸುಬಾನ್ ಎಂಬುವವರು ಬ್ಯುಸಿನೆಸ್‌ಗೆಂದು ದುಬೈಗೆ ತೆರಳಿದ್ದರು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಹಕ್ಕು ಚಲಾಯಿಸಲೆಂದು ದುಬೈನಿಂದ ಬಂದಿದ್ದರು. ಕೋಲಾರದ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 117ರಲ್ಲಿ ಮತದಾನ ಮಾಡಿದರು.

ಇತ್ತ ಮಂಗಳೂರಿನ ಉಳಾಯಿಬೆಟ್ಟುವಿನ ಜೀವಿತ ಎಂಬುವವರು ದುಬೈನಿಂದ ಬಂದು ಮತದಾನ ಮಾಡಿದ್ದರು. ನಮ್ಮ ಮತ ನಮ್ಮ ಹಕ್ಕು ಎನ್ನುವ ದೃಷ್ಟಿಯಿಂದ ಮತದಾನ ಮಾಡಲು ಬಂದಿದ್ದಾಗಿ ಜೀವಿತ ತಿಳಿಸಿದರು.

ಚಿತ್ರದುರ್ಗದ ಶಿಕ್ಷಕರ ಕಾಲೋನಿ ನಗರದ ನಿವಾಸಿಯಾಗಿರುವ ಲಿಖಿತ ಅವರು ಫಿಲಿಫೈನ್ಸ್‌ನಿಂದ ಬಂದು ಮತದಾನ ಮಾಡಿದರು. ಫಿಲಿಫೈನ್ಸ್‌ನಲ್ಲಿ ಎಂಬಿಬಿಎಸ್‌ (MBBS) ಓದುತ್ತಿರುವ ಲಿಖಿತ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಬಂದಿದ್ದರು. ಚಿತ್ರದುರ್ಗದ ಜೋಗಿ ಮಟ್ಟಿ ರಸ್ತೆಯಲ್ಲಿರುವ ಮತಗಟ್ಟೆ ಸಂಖ್ಯೆ 230ರಲ್ಲಿ ಮತದಾನ ಮಾಡಿದರು. ಪ್ರತಿ ಬಾರಿ ತಪ್ಪದೆ ಬಂದು ಮತದಾನ ಮಾಡುತ್ತಿರುವುದಾಗಿ ಲಿಖಿತ ತಿಳಿಸಿದರು.

ಇದನ್ನೂ ಓದಿ: Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

ಉಡುಪಿಯಿಂದ ತುಮಕೂರಿಗೆ ಬಂದು ಮತ ಹಾಕಿದ ನ್ಯಾಯಾಧೀಶ

ನ್ಯಾಯಾಧೀಶ ಜೀತು ಆರ್.ಎಸ್ ಅವರು ಉಡುಪಿಯಿಂದ ತುಮಕೂರಿಗೆ ಬಂದು ಮತ ಹಾಕಿದರು. ತುಮಕೂರು ಗ್ರಾಮಾಂತರದ ಕೆ.ಪಾಲಸಂದ್ರದಲ್ಲಿರುವ ಮತಗಟ್ಟೆ ಸಂಖ್ಯೆ 114ರಲ್ಲಿ ಹಕ್ಕು ಚಲಾಯಿಸಿದರು. ನಂತರ ಮಾತನಾಡಿದ ಅವರು ಎಲ್ಲರೂ ಮತದಾನ ಮಾಡುವಂತೆ ಮನವಿ ಮಾಡಿದರು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಸಾಕಷ್ಟು ಜನ ಮಹಾನ್ ಪುರುಷರು ಹೋರಾಡಿದ್ದಾರೆ. ಮತದಾನ ಮಾಡುವ ಮೂಲಕ ನಮಗೆ ಸಿಕ್ಕಿರುವ ಸ್ವಾತಂತ್ರ್ಯವನ್ನ ಸಂಭ್ರಮಿಸಬೇಕು. ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಇಂತಹ ಪ್ರಾತಃಸ್ಮರಣೀಯರನ್ನು ಗೌರವಿಸಬೇಕು ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lok Sabha Election 2024: ಕಾಂಗ್ರೆಸಿಗರಿಗೆ ಚೊಂಬು ಹಿಡಿದು ಅಭ್ಯಾಸವಾಗಿದೆ: ಜೋಶಿ ಗೇಲಿ

Lok Sabha Election 2024: ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ 14 ಕೋಟಿಗೂ ಅಧಿಕ ಶೌಚಗೃಹ ನಿರ್ಮಿಸಿ ಜನರು ಕೈಯಲ್ಲಿ ಚೊಂಬು ಹಿಡಿಯುವುದನ್ನು ನಿಲ್ಲಿಸಿದ್ದಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

VISTARANEWS.COM


on

Lok Sabha Election 2024 union minister pralhad joshi latest statement at hubballi
Koo

ಹುಬ್ಬಳ್ಳಿ: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜನರ ಕೈಗೆ ಚೊಂಬು ಕೊಡೋದನ್ನು ಕಾಂಗ್ರೆಸ್ (Congress) ನಿಲ್ಲಿಸಲಿಲ್ಲ. ಪರಿಣಾಮ ಜನರೂ ಕಾಂಗ್ರೆಸಿಗರ ಕೈಗೆ ಚೊಂಬು ಕೊಡುತ್ತಾ ಬಂದರು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ (Lok Sabha Election 2024) ಮಾಡಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸಿಗರಿಗೆ ಚೊಂಬು ಹಿಡಿದು ಅಡ್ಡಾಡೋದು ಅಭ್ಯಾಸವಾಗಿದೆ ಎಂದು ಟೀಕಿಸಿದರು.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ 14 ಕೋಟಿಗೂ ಅಧಿಕ ಶೌಚಗೃಹ ನಿರ್ಮಿಸಿ ಜನರು ಕೈಯಲ್ಲಿ ಚೊಂಬು ಹಿಡಿಯುವುದನ್ನು ನಿಲ್ಲಿಸಿದ್ದಾರೆ ಎಂದು ಸಚಿವ ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: Lok Sabha Election 2024: ದುಬೈ, ಫಿಲಿಫೈನ್ಸ್‌ನಿಂದ ಬಂದು ಹಕ್ಕು ಚಲಾಯಿಸಿದ ಮತದಾರರು

ಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ರೂ. ಭ್ರಷ್ಟಾಚಾರ ನಡೆಸಿ ದೇಶದ ಪ್ರತಿಯೊಬ್ಬರ ಕೈಗೂ ಚೊಂಬು ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್ ಅವರನ್ನು ಸೋಲಿಸಿದ್ದಲ್ಲದೆ, ಅವರ ವಿರುದ್ಧ ಗೆದ್ದವರಿಗೆ ಪದ್ಮವಿಭೂಷಣ ಕೊಟ್ಟು ಸತ್ಕರಿಸುವ ಮೂಲಕ ದಲಿತರ ಕೈಗೆ ಚೊಂಬು ಕೊಟ್ಟವರು ಕಾಂಗ್ರೆಸ್ಸಿಗರು ಎಂದು ಸಚಿವ ಜೋಶಿ ಹರಿಹಾಯ್ದರು.

ಇದೆಲ್ಲದರ ಪರಿಣಾಮ ಜನರೂ ನಿಮ್ಮ ಕೈಗೆ ಚೊಂಬು ಕೊಟ್ಟು ಕಳಿಸುತ್ತಿದ್ದಾರೆ. ದೇಶದ 20-25 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಈಗ ಎರಡೇ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Lok Sabha Election: ರಾಜ್ಯಾದ್ಯಂತ 1 ಗಂಟೆ ವೇಳೆಗೆ 38.23% ಮತದಾನ; ಎಲ್ಲಿ ಹೆಚ್ಚು? ಎಲ್ಲಿ ಕಡಿಮೆ?

ಚತ್ತಿಸಗಢ, ರಾಜಸ್ಥಾನ, ಮಧ್ಯಪ್ರದೇಶ ಹೀಗೆ ಎಲ್ಲೆಡೆಯೂ ಹೀನಾಯವಾಗಿ ಸೋಲಿಸಿ ವಿರೋಧ ಪಕ್ಷದ ಸ್ಥಾನದಲ್ಲೂ ಕುಳಿತುಕೊಳ್ಳದಂತೆ ಜನ ನಿಮ್ಮ ಕೈಗೆ ಚೊಂಬು ಕೊಟ್ಟಿದ್ದಾರೆ ನೆನಪಿಟ್ಟುಕೊಳ್ಳಿ ಎಂದು ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

Continue Reading

Lok Sabha Election 2024

Lok Sabha Election 2024: 2ನೇ ಬಾರಿಗೆ ಬಂದು ಮತದಾನ ಮಾಡಿದ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು!

Lok Sabha Election 2024: ಅದಮಾರು ಶ್ರೀಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಎರಡು ಬಾರಿ ಮತದಾನ ಮಾಡುವಂತಾಗಿದೆ. ಶುಕ್ರವಾರ ಬೆಳಗ್ಗೆಯೇ ಮತಗಟ್ಟೆ ಮುಂದೆ ಇದ್ದ ಅದಮಾರು ಶ್ರೀಗಳು ಮೊದಲಿಗರಾಗಿ ಮತದಾನ ಮಾಡಿದರು. ನೋಂದಣಿ ಮಾಡಿ, ಕೈಗೆ ಇಂಕ್ ಹಾಕಿಸಿಕೊಂಡು, ಬಟನ್ ಪ್ರೆಸ್ ಮಾಡಿದ್ದರು. ಆದರೆ, ಬೀಪ್‌ ಸೌಂಡ್‌ ಕೇಳಲೇ ಇಲ್ಲ. ಈ ಬಗ್ಗೆ ಮತಗಟ್ಟೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅದಕ್ಕೆ ಅಧಿಕಾರಿಗಳು ಮತದಾನವಾಗಿದೆ ಎಂದು ಉತ್ತರ ಹೇಳಿದ್ದಾರೆ. ಹೀಗಾಗಿ ಅದಮಾರು ಶ್ರೀ ಮತಗಟ್ಟೆಯಿಂದ ವಾಪಾಸ್ ಆಗಿದ್ದರು. ಪುನಃ ಪರಿಶೀಲನೆ ಮಾಡಿದ್ದರಿಂದ ಅವರಿಗೆ ಮತ್ತೊಂದು ಸುತ್ತು ಮತದಾನ ಮಾಡಲು ಅವಕಾಶವನ್ನು ಕಲ್ಪಿಸಲಾಯಿತು.

VISTARANEWS.COM


on

Lok Sabha Election 2024 Sri Vishwapriya Theertha Swamiji of Adamaru Mutt casts his vote for second time
Koo

ಉಡುಪಿ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ (Udupi Chikkamagaluru Lok Sabha constituency) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ, ಉಡುಪಿಯಲ್ಲಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು (Adamaru Mutt Sri Vishwapriya Theertha Swamiji) ಎರಡೆರಡು ಬಾರಿ ಮತ ಚಲಾವಣೆ ಮಾಡಿದ ಪ್ರಸಂಗ ನಡೆದಿದೆ.

ಅದಮಾರು ಶ್ರೀಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಎರಡು ಬಾರಿ ಮತದಾನ ಮಾಡುವಂತಾಗಿದೆ. ಶುಕ್ರವಾರ ಬೆಳಗ್ಗೆಯೇ ಮತಗಟ್ಟೆ ಮುಂದೆ ಇದ್ದ ಅದಮಾರು ಶ್ರೀಗಳು ಮೊದಲಿಗರಾಗಿ ಮತದಾನ ಮಾಡಿದರು. ನೋಂದಣಿ ಮಾಡಿ, ಕೈಗೆ ಇಂಕ್ ಹಾಕಿಸಿಕೊಂಡು, ಬಟನ್ ಪ್ರೆಸ್ ಮಾಡಿದ್ದರು. ಆದರೆ, ಬೀಪ್‌ ಸೌಂಡ್‌ ಕೇಳಲೇ ಇಲ್ಲ. ಈ ಬಗ್ಗೆ ಮತಗಟ್ಟೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅದಕ್ಕೆ ಅಧಿಕಾರಿಗಳು ಮತದಾನವಾಗಿದೆ ಎಂದು ಉತ್ತರ ಹೇಳಿದ್ದಾರೆ. ಹೀಗಾಗಿ ಅದಮಾರು ಶ್ರೀ ಮತಗಟ್ಟೆಯಿಂದ ವಾಪಾಸ್ ಆಗಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ ಬಗ್ಗೆ ಶ್ರೀಗಳ ಶಿಷ್ಯರ ಬೇಸರ

ಬಳಿಕ ಮಾಧ್ಯಮಗಳ ಬಳಿ ಈ ಬಗ್ಗೆ ಅದಮಾರು ಶ್ರೀಗಳು ಮಾಹಿತಿ ನೀಡುತ್ತಿದ್ದಾಗ ಮತಗಟ್ಟೆ ಅಧಿಕಾರಿಗಳು ಸ್ಥಳಕ್ಕೆ ಬಂದು ಶ್ರೀಗಳನ್ನು ಮತ್ತೆ ಒಳಗೆ ಕರೆದು ಮತದಾನ ಮಾಡುವಂತೆ ಹೇಳಿದರು. ಹೀಗಾಗಿ ಅಧಿಕಾರಿಗಳ ಸೂಚನೆ ಬಳಿಕ ಎರಡನೇ ಬಾರಿ ಬಂದು ಶ್ರೀಗಳು ಮತದಾನ ಮಾಡಿದ್ದಾರೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಶ್ರೀಗಳ ಶಿಷ್ಯರು ಬೇಸರ ಹೊರಹಾಕಿದ್ದಾರೆ.

ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯಿಂದ ಮತದಾನ

ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಶುಕ್ರವಾರ ಬೆಳಗ್ಗೆ ಮತಗಟ್ಟೆ ಸಂಖ್ಯೆ 185ರಲ್ಲಿ ಮತದಾನ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ತಮಗೆ ಬೇಕಾಗಿರುವ ಸರ್ಕಾರ ರೂಪಿಸುವ ದೊಡ್ಡ ಬದ್ಧತೆ ಪ್ರಜೆಗಳ ಮೇಲೆ ಇದೆ. ಎಲ್ಲ ಪ್ರಜೆಗಳು ಅವಶ್ಯವಾಗಿ ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ದೂರ ಉಳಿಯಬಾರದು. ಮತದಾನ ಮಾಡಲು ತುಂಬಾ ಹೆಮ್ಮೆ ಅನಿಸುತ್ತಿದೆ. ರಾಮದೇವರ ಪ್ರಾಣ ಪ್ರತಿಷ್ಠೆ ಮಾಡಿದಾಗ ಅನುಭವಿಸಿದ ಧನ್ಯತಾಭಾವವನ್ನು ಈಗಲೂ ಅನುಭವಿಸಿದ್ದೇವೆ. ದೇಶದಲ್ಲಿ ಎಲ್ಲ ಬಗೆಯ ಜನ ಎಲ್ಲ ಕಾಲಕ್ಕೂ ಇರುತ್ತಾರೆ. ನೆಲದ ಸಂಸ್ಕೃತಿಯನ್ನು ಗೌರವಿಸುವ ಸರ್ಕಾರವನ್ನು ರೂಪಿಸುವ ಅವಕಾಶ ನಮಗೆ ಇದೆ.‌ ಸಮಾಜದ ಪ್ರಸಕ್ತ ವಾತಾವರಣವನ್ನು ಅರ್ಥ ಮಾಡಿಕೊಂಡು ಮತದಾನ ಮಾಡಬೇಕು. ನಮಗೆ ಬೇಕಾಗಿರುವ ಸರ್ಕಾರವನ್ನು ರೂಪಿಸಬೇಕು. ರಾಜನಾದವ ಸರಿಯಾಗಿದ್ದರೆ ಕಾಲ ಯಾವತ್ತೂ ಹಾಳಾಗುವುದಿಲ್ಲ. ಈಗ ಪ್ರಜೆಗಳೇ ರಾಜರು ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಚಾಮರಾಜನಗರದಲ್ಲಿ ಮತ ಯಂತ್ರ ಪೀಸ್‌ ಪೀಸ್‌; ಮತಗಟ್ಟೆ ಧ್ವಂಸ, ಲಾಠಿ ಚಾರ್ಜ್‌!

ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿ ಆಡಳಿತ ನಡೆಸುತ್ತಿರುವ ಬಗ್ಗೆ ಪ್ರತಿಪಕ್ಷಗಳ ಆರೋಪದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪೇಜಾವರ ಶ್ರೀಗಳು, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರಧಾನಿ ಇದ್ದಾರೆ ಎಂದಾದರೆ ಅವರು ಸರ್ವಾಧಿಕಾರಿ ಆಗುವುದು ಹೇಗೆ? ಪ್ರಜೆಗಳು ತಮಗೆ ಬೇಕಾದ ಸರ್ಕಾರವನ್ನು ರೂಪಿಸುತ್ತಿದ್ದಾರೆ. ಅದನ್ನು ಆಕ್ಷೇಪಿಸಿದರೆ ಸಾರ್ವಕಾಲಿಕ ಆಕ್ಷೇಪವಾಗುತ್ತದೆ. ಮತದಾನ ಪ್ರಮಾಣ ಕಡಿಮೆ ಆಗಬಾರದು. ವ್ಯವಸ್ಥೆ ನಮಗೆ ಅನುಕೂಲವಾಗಿಲ್ಲ ಅಂತ ದೂರುತ್ತೇವೆ. ಹಾಗಾದರೆ ವ್ಯವಸ್ಥೆಯನ್ನು ಸರಿ ಮಾಡುವುದು ಯಾರು? ಮತದಾನದಿಂದ ದೂರ ಉಳಿದವರು ಈ ದೇಶದ ನಾಗರಿಕರೇ ಅಲ್ಲ. ಅವರಿಗೆ ಸಿಟಿಜನ್‌ಶಿಪ್ ಕೊಡಬಾರದು. ಅದು ಕಠೋರ ನಿಲುವು ಆಗುತ್ತದೆ. ಆದರೆ, ಅವಶ್ಯವಾಗಿ ಬೇಕು. ಸರ್ಕಾರ ನೀಡುವ ಸವಲತ್ತುಗಳನ್ನು ಬಂದ್ ಮಾಡಬೇಕು. ಅವರನ್ನು ದ್ವಿತೀಯ, ತೃತೀಯ ದರ್ಜೆಯ ನಾಗರಿಕರನ್ನಾಗಿ ಪರಿಗಣಿಸಬೇಕು. ಆಗ ಪರಿಸ್ಥಿತಿ ಸುಧಾರಿಸಬಹುದು ಎಂದು ಹೇಳಿದರು.

Continue Reading
Advertisement
Healthcare Tips For Women
ಆರೋಗ್ಯ1 min ago

Healthcare Tips For Women: 30 ವರ್ಷದ ಬಳಿಕ ಮಹಿಳೆಯರು ಮಾಡಿಸಿಕೊಳ್ಳಲೇಬೇಕಾದ ಆರೋಗ್ಯ ಪರೀಕ್ಷೆಗಳಿವು

Lok Sabha Election 2024
ಬೆಂಗಳೂರು7 mins ago

Lok Sabha Election 2024: ಮೋದಿ ಮತ್ತೊಮ್ಮೆ ಎಂಬ ನುಡಿ ಸತ್ಯವಾಗಲಿದೆ: ಎಂಎಲ್‌ಸಿ ಟಿ.ಎ.ಶರವಣ

Lok sabha election 2024
Lok Sabha Election 202419 mins ago

Lok Sabha Election 2024 : ವೋಟ್‌ ಮಾಡಲು ಒಂದೂವರೆ ಲಕ್ಷ ರೂ. ಖರ್ಚು; ಲಂಡನ್‌ನಿಂದ ಮಂಡ್ಯಕ್ಕೆ ಬಂದ ಮಹಿಳೆ

IPL 2024
ಪ್ರಮುಖ ಸುದ್ದಿ23 mins ago

IPL 2024 : ಡೆಲ್ಲಿ ಕ್ಯಾಪಿಟಲ್ಸ್​ ತಂಡ ಸೇರಿದ ಅಫಘಾನಿಸ್ತಾನ ತಂಡದ ಆಟಗಾರ

Lok Sabha Election 2024 union minister pralhad joshi latest statement at hubballi
ಕರ್ನಾಟಕ24 mins ago

Lok Sabha Election 2024: ಕಾಂಗ್ರೆಸಿಗರಿಗೆ ಚೊಂಬು ಹಿಡಿದು ಅಭ್ಯಾಸವಾಗಿದೆ: ಜೋಶಿ ಗೇಲಿ

X Server Down
ದೇಶ24 mins ago

X Server Down: ದೇಶಾದ್ಯಂತ ಎಕ್ಸ್‌ ಜಾಲತಾಣದ ಸರ್ವರ್‌ ಡೌನ್;‌ ನಿಮ್ಮ ಖಾತೆ ಚೆಕ್‌ ಮಾಡಿಕೊಳ್ಳಿ

Lok Sabha Election 2024 Sri Vishwapriya Theertha Swamiji of Adamaru Mutt casts his vote for second time
Lok Sabha Election 202425 mins ago

Lok Sabha Election 2024: 2ನೇ ಬಾರಿಗೆ ಬಂದು ಮತದಾನ ಮಾಡಿದ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು!

Rekha kisses Richa Chadha baby bump at Heeramandi event
ಬಾಲಿವುಡ್30 mins ago

Richa Chadda:  ರಿಚಾ ಚಡ್ಡಾ ಬೇಬಿ ಬಂಪ್‌ಗೆ ಮುತ್ತಿಟ್ಟ ನಟಿ ರೇಖಾ!

Lok sabha election 2024
Lok Sabha Election 202437 mins ago

Lok Sabha Election 2024 : ಟೇಬಲ್ ಕಿತ್ತೆಸೆದು ಬಿಜೆಪಿ ಕಾರ್ಯಕರ್ತನ ಎದೆಗೆ ಒದ್ದ ರೌಡಿಶೀಟರ್‌ ಕಟ್ಟಿಂಗ್ ಸೀನ

Lok Sabha Election 2024
ಕರ್ನಾಟಕ41 mins ago

Lok Sabha Election 2024: ಮೂರು ಗಂಟೆವರೆಗೆ ಶೇ.50.93 ವೋಟಿಂಗ್‌; ರಾಜ್ಯದಲ್ಲಿ ಈ ಬಾರಿ ದಾಖಲೆಯ ಮತದಾನವಾಗುತ್ತಾ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ5 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20246 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20246 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ12 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌