BKS Varma Death: ಜ್ಯೇಷ್ಠ ಕಲಾವಿದ, ವಿದ್ವಾಂಸ ಬಿ.ಕೆ.ಎಸ್. ವರ್ಮಾ ನಿಧನದ ಸುದ್ದಿ ಅತೀವ ದುಃಖ ತಂದಿದೆ: ವಿ. ನಾಗರಾಜ್ - Vistara News

ಕರ್ನಾಟಕ

BKS Varma Death: ಜ್ಯೇಷ್ಠ ಕಲಾವಿದ, ವಿದ್ವಾಂಸ ಬಿ.ಕೆ.ಎಸ್. ವರ್ಮಾ ನಿಧನದ ಸುದ್ದಿ ಅತೀವ ದುಃಖ ತಂದಿದೆ: ವಿ. ನಾಗರಾಜ್

BKS Varma Death: ಬಿ.ಕೆ.ಎಸ್. ವರ್ಮಾ ಅವರು ಕಲೆಯ ಅನೇಕ ಆಯಾಮಗಳನ್ನು ಅನ್ವೇಷಿಸಿದ್ದರು. ಅವರು ಸಾಂಪ್ರದಾಯಿಕವಾದ ಕಲೆಗಳ ಆರಾಧಕರಾಗಿದ್ದರು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ್ ಹೇಳಿದ್ದಾರೆ.

VISTARANEWS.COM


on

BKS Varma Death
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿ.ಕೆ.ಎಸ್. ವರ್ಮಾ ಅವರ ಕಲಾಕೃತಿಗಳ ಉತ್ಕೃಷ್ಟತೆ, ಭಾವಾಭಿವ್ಯಕ್ತಿ ಮತ್ತು ಜೀವಂತಿಕೆಯು ಕಲೆಯ ಮೂಲಕ ದೈವತ್ವದೆಡೆಗೆ ಸಾಗುವ ಮಹತ್ ಸಂಕಲ್ಪದ ಅಭಿವ್ಯಕ್ತಿಯಾಗಿತ್ತು. ಜ್ಯೇಷ್ಠ ಕಲಾವಿದ, ವಿದ್ವಾಂಸ ಬಿ.ಕೆ.ಎಸ್. ವರ್ಮಾ (BKS Varma Death) ಅವರ ನಿಧನದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಲೆಯ ಅನೇಕ ಆಯಾಮಗಳನ್ನು ಅನ್ವೇಷಿಸಿದ್ದ ಅವರು ಸಾಂಪ್ರದಾಯಿಕವಾದ ಕಲೆಗಳ ಆರಾಧಕರಾಗಿದ್ದರು. ಅಷ್ಟೇ ಅಲ್ಲದೆ ಹೊಸ ಪ್ರಯೋಗಗಳಿಗೆ ಸದಾ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತಿದ್ದ ಅವರು ಅತ್ಯಂತ ಸರಳ ಮತ್ತು ಸಾತ್ವಿಕ ವ್ಯಕ್ತಿತ್ವದ ಮೂಲಕ ಜನಮಾನಸದಲ್ಲಿ ವಿಶೇಷ ಸ್ಥಾನ ಪಡೆದಿದ್ದಾರೆ. ದೇಶ ವಿದೇಶಗಳಲ್ಲಿ ಪ್ರದರ್ಶನಗೊಂಡ ಅವರ ಕಲಾಕೃತಿಗಳು ಕಲಾಸಕ್ತರ, ವಿಮರ್ಶಕರ, ಸಹೃದಯ ಸಾಮಾನ್ಯರ ಜನಜೀವನದ ಭಾಗವೇ ಆಗಿ ಹೋಗಿತ್ತು. ಅವರ ಕುಂಚದಲ್ಲಿ ಮೂಡಿಬಂದ ಭುವನೇಶ್ವರಿದೇವಿ, ರಾಘವೇಂದ್ರ ಸ್ವಾಮಿ, ಶಾರದೆ, ಗಣಪತಿ ಮುಂತಾದ ಅತ್ಯದ್ಭುತ ಚಿತ್ರಗಳೇ ಸಾಕ್ಷಿ ಎಂದು ಹೇಳಿದ್ದಾರೆ.

ಇದನ್ನೂ ಓದಿ | BKS Varma Death | ಬಿ.ಕೆ.ಎಸ್‌. ವರ್ಮ ಅವರಿಗೆ ಕೊನೆಗೂ ಗೌರವ ನೀಡಿತ್ತು ಕನ್ನಡ ಸಾಹಿತ್ಯ ಪರಿಷತ್ತು

ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ಅತ್ಯಂತ ಆತ್ಮೀಯ ಒಡನಾಟ ಹೊಂದಿದ್ದ ಅವರು ಸಂಸ್ಕಾರ ಭಾರತಿಯ ಪ್ರಾರಂಭದ ದಿನಗಳಿಂದಲೂ ಚಟುವಟಿಕೆಗಳಿಗೆ ಪ್ರೋತ್ಸಾಹ-ಸಹಕಾರ ನೀಡಿದ್ದರು. ನೃತ್ಯ-ಕಾವ್ಯ-ಕುಂಚ ಎಂಬ ಹೊಸ ಪ್ರಯೋಗವನ್ನೂ ಸಂಸ್ಕಾರ ಭಾರತಿಯಿಂದ ಮಾಡುವುದಕ್ಕೆ ಪ್ರೇರಣೆ ನೀಡಿದವರು. ಅಲ್ಲದೆ ಅದರ ಮಾರ್ಗದರ್ಶಕ ಮಂಡಳಿಯಲ್ಲಿದ್ದು, ಅನೇಕ ಹೊಸ ಕಲಾವಿದರಿಗೆ ಸ್ಫೂರ್ತಿಯಾಗಿ, ಅವರನ್ನು ಕಲಾ ಜಗತ್ತಿಗೆ ಪರಿಚಯಿಸಿದ ಮಹನೀಯರು. ಬಿ.ಕೆ.ಎಸ್ ವರ್ಮಾ ಅವರು ದೈಹಿಕವಾಗಿ ನಮ್ಮೊಂದಿಗೆ ಇರದಿದ್ದರೂ ಅವರ ಕಲಾಕೃತಿಗಳ ಮೂಲಕ ಅಮರರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಕಲಾಭಿಮಾನಿಗಳಿಗೆ ಆ ಭಗವಂತನು ನೀಡಲಿ ಮತ್ತು ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೃಷಿ

Success Story: ಎರಡೇ ತಿಂಗಳಲ್ಲಿ ಆನ್ ಲೈನ್ ಮೂಲಕ 1,800 ಕೆ.ಜಿ. ಮಾವು ಮಾರಿದ ರಾಯಚೂರಿನ ರೈತ!

ರಾಯಚೂರಿನ ಗುಡಿಪಾಡು ಆಂಜನೇಯ (Success Story) ಅವರು ಆನ್‌ಲೈನ್‌ನಲ್ಲಿ ಎರಡು ತಿಂಗಳಲ್ಲಿ 1,800 ಕೆ.ಜಿ. ಮಾವು ಮಾರಾಟ ಮಾಡಿ ಸುದ್ದಿಯಲ್ಲಿದ್ದಾರೆ. ಡಿಪ್ಲೊಮಾ ಪೂರ್ಣಗೊಳಿಸಿರುವ ಆಂಜನೇಯ ಅವರು ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಏಳು ವರ್ಷಗಳ ಕಾಲ ಕೆಲಸ ಮಾಡಿ ಈಗ ಸಂಪೂರ್ಣವಾಗಿ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ಮಾವು ಮಾರಾಟದ ಇವರ ಸಕ್ಸೆಸ್ ಸ್ಟೋರಿ ಇಲ್ಲಿದೆ.

VISTARANEWS.COM


on

By

Success Story
Koo

ಕೃಷಿ ಕೆಲಸಗಳಲ್ಲಿ ಕೇವಲ ಕಷ್ಟ ಪಟ್ಟು ದುಡಿದರೆ ಸಾಲದು, ಬುದ್ದಿವಂತಿಕೆಯೂ ಬೇಕು. ಆಗ ಮಾತ್ರ ಉತ್ತಮ ಆದಾಯ ಗಳಿಸಬಹುದು ಎಂಬುದನ್ನು ರೈತನೊಬ್ಬ (Success Story) ಸಾಬೀತು ಮಾಡಿದ್ದಾನೆ. ಈ ರೈತ ಬೇರೆಯಾರೂ ಅಲ್ಲ ನಮ್ಮ ಕರ್ನಾಟಕದವರೇ (karnataka) ಆಗಿದ್ದಾರೆ. ಮಾವಿನ ಕೃಷಿ (Mango Cultivation) ಮಾಡಿ ರಾಯಚೂರಿನ (Raichur) ಗುಡಿಪಾಡು ಆಂಜನೇಯ (Gudipadu Anjaneya) ಅವರು ಈಗ ಎಲ್ಲೆಡೆ ಸುದ್ದಿ ಮಾಡುತ್ತಿದ್ದಾರೆ. ಗುಡಿಪಾಡು ಆಂಜನೇಯ ಅವರು ಆನ್‌ಲೈನ್‌ನಲ್ಲಿ ಎರಡು ತಿಂಗಳಲ್ಲಿ 1,800 ಕೆ.ಜಿ. ಮಾವು ಮಾರಾಟ ಮಾಡಿ ಸುದ್ದಿಯಾಗುತ್ತಿದ್ದಾರೆ. ಡಿಪ್ಲೊಮಾ ಪೂರ್ಣಗೊಳಿಸಿರುವ ಆಂಜನೇಯ ಅವರು ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಏಳು ವರ್ಷಗಳ ಕಾಲ ಕೆಲಸ ಮಾಡಿದ್ದರು. ಬಳಿಕ ಕೃಷಿಯಲ್ಲಿ ಸಂಪೂರ್ಣವಾಗಿ ತೊಡಗಿಕೊಂಡರು.

Success Story

ತೋಟಗಾರಿಕೆ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಹಣ್ಣು, ತರಕಾರಿ, ಹೂವು, ಅಲಂಕಾರಿಕ ಸಸ್ಯಗಳನ್ನು ಬೆಳೆಯುವ ವಿಜ್ಞಾನ ಮತ್ತು ಕಲೆಯನ್ನು ಕಲಿತು ಆನ್‌ಲೈನ್ ಪೋರ್ಟಲ್ ಮೂಲಕ ಮಾವಿನ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ. ಆಂಜನೇಯ ಅವರು ಆನ್‌ಲೈನ್ ನಲ್ಲಿ ಗ್ರಾಹಕರಿಗೆ ಮಾರಾಟ ಮಾಡುವ ಮಾವಿನ ತಳಿಗಳಲ್ಲಿ ಪ್ರಮುಖವಾದವು ಬನಗನಪಲ್ಲಿ, ಮಲ್ಲಿಕಾ ಮತ್ತು ಕೇಸರಿ ಮಾವುಗಳು. ಇವರು ತಮ್ಮ ಮಾವಿನ ಹಣ್ಣುಗಳ ಮಾರಾಟ ಜಾಲವನ್ನು ರಾಯಚೂರಿನ ಹೊರಗೂ ವಿಸ್ತರಿಸಿದ್ದಾರೆ. ಬೆಂಗಳೂರಿನ ಜಯನಗರ, ವೈಟ್‌ಫೀಲ್ಡ್ ಮತ್ತು ಲಾಲ್ ಬಾಗ್‌ನ ಎಂಇಎಸ್ ಮೈದಾನದಲ್ಲಿ ಮಾವು ಮೇಳದಲ್ಲಿ ಪಾಲ್ಗೊಂಡಿರುವ ಇವರು, ಆನ್ ಲೈನ್ ಮೂಲಕ ರಾಜ್ಯದ ಮೂಲೆಮೂಲೆ ಮಾತ್ರವಲ್ಲ ಹೊರರಾಜ್ಯ, ವಿದೇಶಗಳಿಗೂ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ. ವಿದೇಶಗಳೊಂದಿಗೆ ವ್ಯಾಪಾರ ಸಂಬಂಧಗಳನ್ನು ರೂಪಿಸುವ ಗುರಿ ಹೊಂದಿರುವ ಅವರು ಇತರ ಕೃಷಿಕರಿಗೂ ಪ್ರೇರಣೆಯಾಗಿದ್ದಾರೆ.

ಸಾಕಷ್ಟು ಶ್ರಮ

ಆಂಜನೇಯ ತಮ್ಮ ವ್ಯವಹಾರದ ಆರಂಭದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಸಾಕಷ್ಟು ಶ್ರಮಿಸಿದ್ದಾರೆ. ಅವರು ಗ್ರಾಹಕರ ವಿಳಾಸವನ್ನು ಆನ್‌ಲೈನ್‌ನಲ್ಲಿ ಸಂಗ್ರಹಿಸಿ, ಪ್ರತಿಯೊಂದು ಹಂತವನ್ನು ಅನುಸರಿಸಿ, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಅದನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಮಾರ್ಗಗಳನ್ನು ಹುಡುಕುತ್ತಿದ್ದರು. ಮಾವಿನ ಹಣ್ಣುಗಳನ್ನು ಮಾರಾಟ ಮಾಡುವ ಮೊದಲು, ಆಂಜನೇಯ ಅವರು ಮೋಸಂಬಿ ಮತ್ತು ನಿಂಬೆಯನ್ನು ಮಾರುಕಟ್ಟೆ ಮತ್ತು ಆನ್‌ಲೈನ್‌ನಲ್ಲಿ ಮಾರಾಟ ಮಾಡುತ್ತಿದ್ದರು.

Mango Breeds

ಆನ್ ಲೈನ್ ಪೋರ್ಟಲ್ ಪ್ರಾರಂಭ

ಬಳಿಕ ಆಂಜನೇಯ ಅವರು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಲಿಮಿಟೆಡ್ (KSMDMCL) ಅಂಚೆ ಇಲಾಖೆಯ ಸಹಯೋಗದೊಂದಿಗೆ ತಮ್ಮ ಪೋರ್ಟಲ್ ಅನ್ನು ಪ್ರಾರಂಭಿಸಿದರು. ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಲಿಮಿಟೆಡ್ ಪ್ರಾರಂಭಿಸಿರುವ ಕರ್ ಸಿರಿ ಮ್ಯಾಂಗೋಸ್ (https://www.karsirimangoes.karnataka.gov.in) ವೆಬ್‌ಸೈಟ್ 2022ರಲ್ಲಿ ವಿವಿಧ ಬಗೆಯ ಹಣ್ಣುಗಳಿಗಾಗಿ ಆರ್ಡರ್‌ಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿತು. ಈ‌ ವೆಬ್ ಸೈಟ್ ಮೂಲಕವೇ ಈ ರೈತ ಮಾವು ಮಾರಿ ಲಾಭ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Mysore News: ಮೈಸೂರಿನಲ್ಲಿ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್‌ ವಶ; 1.61 ಲಕ್ಷ ರೂ. ದಂಡ

ಇದು ಗ್ರಾಹಕರ ಮನೆ ಬಾಗಿಲಿಗೆ ಹಣ್ಣುಗಳನ್ನು ತಲುಪಿಸುತ್ತದೆ. ಹಣ್ಣುಗಳ ಚಿತ್ರಗಳು ಮತ್ತು ಹೆಸರುಗಳ ಜೊತೆಗೆ ವೆಬ್‌ಸೈಟ್ ಮಾವಿನ ಸರಬರಾಜಿಗೆ ಕಾರಣರಾದ ರೈತರ ಹೆಸರು ಮತ್ತು ಸಂಖ್ಯೆಗಳನ್ನು ಸಹ ಪ್ರದರ್ಶಿಸುತ್ತದೆ. ಮಾವು ಬೆಳೆಗಾರರಿಗೆ ಈ ವೆಬ್‌ಸೈಟ್ ಆಶಾದಾಯಕವಾಗಿದೆ. ಇದನ್ನು ಬಳಸಿಕೊಂಡೇ ಆಂಜನೇಯ ಅವರು ಎರಡು ತಿಂಗಳಲ್ಲಿ 1,800 ಕೆ.ಜಿ. ಮಾವು ಮಾರಾಟ ಮಾಡಿದ್ದಾರೆ.

Continue Reading

ಬೆಂಗಳೂರು

Chakravarthy Sulibele: ಮೈಸೂರಿನಲ್ಲಿ ಇಂದು ಸಂಜೆ ಚಕ್ರವರ್ತಿ ಸೂಲಿಬೆಲೆಗೆ ವೀರ ಸಾವರ್ಕರ್‌ ಸಮ್ಮಾನ್‌ ಪ್ರಶಸ್ತಿ ಪ್ರದಾನ

Chakravarthy Sulibele: ಮೈಸೂರಿನ ಕಲಾಮಂದಿರದಲ್ಲಿ ಮೇ 28 ಸಂಜೆ 5.30ಕ್ಕೆ ‘ವೀರ ಸಾವರ್ಕರ್ ಸಮ್ಮಾನ್’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯುವ ಜನರಲ್ಲಿ ದೇಶಭಕ್ತಿ ಜಾಗೃತಿ ಜತೆಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

VISTARANEWS.COM


on

chakravarthy sulibele
Koo

ಮೈಸೂರು: ಭಾಷಣ ಹಾಗೂ ಲೇಖನಗಳಿಂದ ಯುವ ಪೀಳಿಗೆಯ ಜನರಲ್ಲಿ ದೇಶಭಕ್ತಿ ಜಾಗೃತಗೊಳಿಸುವ ಕಾರ್ಯದ ಜತೆಗೆ ವಿವಿಧ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿರುವ ಯುವ ಬ್ರಿಗೇಡ್ ಮಾರ್ಗದರ್ಶಕ, ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಅವರು ವೀರ ಸಾವರ್ಕರ್ ಪ್ರತಿಷ್ಠಾನದಿಂದ ನೀಡುವ ‘ವೀರ ಸಾವರ್ಕರ್ ಸಮ್ಮಾನ್’ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇಂದು (ಮೇ 28) ಸಂಜೆ 5.30ಕ್ಕೆ ನಗರದ ಕಲಾಮಂದಿರದಲ್ಲಿ ಆಯೋಜಿಸಿರುವ 141ನೇ ಸಾವರ್ಕರ್‌ ಜಯಂತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವೀರ ಸಾವರ್ಕರ್ ಪ್ರತಿಷ್ಠಾನದ ಸದಸ್ಯ ರಾಕೇಶ್ ಭಟ್ ಅವರು ಮಾಹಿತಿ ನೀಡಿದ್ದಾರೆ. ಪ್ರತಿಷ್ಠಿತ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿಯು ಒಂದು ಲಕ್ಷ ನಗದು, ವೀರ ಸಾವರ್ಕರ್ ಅವರ ಪುತ್ಥಳಿ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಯುವ ಜನರಲ್ಲಿ ದೇಶಭಕ್ತಿ ಜಾಗೃತಿ, ನದಿ ಸ್ವಚ್ಛತೆ, ದೇಗುಲ ಜೀರ್ಣೋದ್ದಾರ, ಗೋಪಾಲನೆ, ಬಡವರಿಗೆ ಮನೆ ನಿರ್ಮಾಣ, ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಸೇರಿ ಸೇವಾ ಕ್ಷೇತ್ರದೆಡೆಗೆ ಆಕರ್ಷಿಸಿ ಯುವ ಬ್ರಿಗೇಡ್ ಸಂಘಟನೆಯನ್ನು ಕಟ್ಟುತ್ತಿರುವ ಚಕ್ರವರ್ತಿ ಸೂಲಿಬೆಲೆ ಅವರಿಗೆ ಈ ವರ್ಷದ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿ – 2024ಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್. ಭೈರಪ್ಪ ಪಾಲ್ಗೊಳ್ಳಲಿದ್ದಾರೆ. ಸುವರ್ಣ ನ್ಯೂಸ್‌ನ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಸಾವರ್ಕರ್ ವೇಷಭೂಷಣ, ಚಿತ್ರಕಲೆ ಹಾಗೂ ರಂಗೋಲಿ ಸ್ಪರ್ಧೆ ನಡೆಯಲಿದೆ. ಈಗಾಗಲೇ ಮೊಬೈಲ್ ಮೂಲಕ ಸಾವರ್ಕರ್ ಕುರಿತು ಮಾಡಿರುವ ರೀಲ್ಸ್‌ಗಳನ್ನು ಪಡೆಯಲಾಗುತ್ತಿದೆ. ಪ್ರತಿ ಸ್ಪರ್ಧೆಯ ವಿಜೇತರಿಗೆ ಪ್ರಥಮ ಬಹುಮಾನವಾಗಿ 5 ಸಾವಿರ ರೂ., ದ್ವಿತೀಯ ಬಹುಮಾನವಾಗಿ 3 ಸಾವಿರ ರೂ., ತೃತೀಯ ಬಹುಮಾನವಾಗಿ 1000 ರೂ. ನಗದು ಬಹುಮಾನದ ಜತೆಗೆ ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ.

ಸಾವರ್ಕರ್ ಕುರಿತು ಅನೇಕ ಅಧ್ಯಯನ ಮಾಡಿ ಕೃತಿ ರಚಿಸಿರುವ ವಿಕ್ರಂ ಸಂಪತ್ ಅವರಿಗೆ ಕಳೆದ ವರ್ಷ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿ- 2023ಯನ್ನು ನೀಡಲಾಗಿತ್ತು. ಸಾವರ್ಕರ್ ಪ್ರತಿಷ್ಠಾನ ಕಾರ್ಯಕ್ರಮಗಳ ಮೂಲಕ ಸಾವರ್ಕರ್ ವಿಚಾರಧಾರೆಯನ್ನು ಜನರ ಮುಂದಿಡುತ್ತಾ ಬಂದಿದೆ. ಸಾವರ್ಕರ್ ರಥಯಾತ್ರೆ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಸಂಚರಿಸಿ ಸಾವರ್ಕರ್ ಕುರಿತ ಮಾಹಿತಿ, ಸಾಹಿತ್ಯ ಹಾಗೂ ಪುಸ್ತಕಗಳ ಮೂಲಕ 10 ಲಕ್ಷಕ್ಕೂ ಅಧಿಕ ಜನರನ್ನು ತಲುಪಿತು, ಸಾವರ್ಕರ್ ಕುರಿತ ಕನ್ನಡದ ನಾಟಕ ಕರಿನೀರ ವೀರ ರಾಜ್ಯಾದ್ಯಂತ ಅನೇಕ ಪ್ರದರ್ಶನ ನಡೆಸಿ ಜನಮನ ಗೆದ್ದಿದೆ, ವಿದ್ಯಾರ್ಥಿಗಳಿಗಾಗಿ ಸಾವರ್ಕರ್ ಪ್ರಬಂಧ, ಭಾಷಣ, ಚಿತ್ರಕಲೆ ಹೀಗೆ ಅನೇಕ ಸ್ಪರ್ಧೆಗಳನ್ನು ಹಲವಾರು ಶಾಲಾ ಕಾಲೇಜು ಗಳಲ್ಲಿ ಆಯೋಜಿಸಿ ಅವರುಗಳಲ್ಲಿ ಸಾವರ್ಕರ್ ವ್ಯಕ್ತಿ ಹಾಗೂ ವಿಚಾರಗಳನ್ನು ಪರಿಚಯಿಸುವ ಕೆಲಸಗಳನ್ನು ಸಾವರ್ಕರ್ ಪ್ರತಿಷ್ಠಾನ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ | ಧವಳ ಧಾರಿಣಿ ಅಂಕಣ: ಗೌತಮ ಬುದ್ಧ; ಭಾರತೀಯ ತತ್ತ್ವಶಾಸ್ತ್ರದ ಮುನ್ನುಡಿ

ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗೆ ರಾಕೇಶ್‌ ಭಟ್ ಮೊ. 99162 21184, ರಜತ್ 63634 43699, ಶಿವಕುಮಾರ್ 86602 19746 ಸಂಪರ್ಕಿಸಬುಹುದು ಎಂದು ಮಾಹಿತಿ ನೀಡಿದ್ದಾರೆ.

Continue Reading

ಚಿನ್ನದ ದರ

Gold Rate Today: ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ; ಬಂಗಾರದ ಮಾರುಕಟ್ಟೆಯಲ್ಲಿ ಇಂದಿನ ಧಾರಣೆ ಹೀಗಿದೆ

Gold Rate Today: ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 24 ಕ್ಯಾರಟ್‌ ಬೆಲೆ ಎಷ್ಟಿದೆ ನೋಡಿ.

VISTARANEWS.COM


on

gold rate today bipasha
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಶುಕ್ರವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಸ್ವಲ್ಪ ಮಟ್ಟಿಗೆ ಏರಿದೆ. ಇಂದು (ಸೋಮವಾರ) 10 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹200 ಹಾಗೂ ₹220 ಏರಿಕೆಯಾಗಿವೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,930 ಮತ್ತು ₹7,29,300 ವೆಚ್ಚವಾಗಲಿದೆ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,00073,080
ಮುಂಬಯಿ66,850 72,930
ಬೆಂಗಳೂರು66,850 72,930
ಚೆನ್ನೈ67,40073,530

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹92, ಎಂಟು ಗ್ರಾಂ ₹736 ಮತ್ತು 10 ಗ್ರಾಂ ₹920ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹9,200 ಮತ್ತು 1 ಕಿಲೋಗ್ರಾಂಗೆ ₹92,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

Continue Reading

ಬೆಂಗಳೂರು

School Reopen: ನಾಳೆಯಿಂದ ಶಾಲೆ ಮರು ಆರಂಭ; ಮೊದಲ ದಿನವೇ ಮಕ್ಕಳಿಗೆ ಸಿಹಿ ಸುದ್ದಿ

School Reopen : ಮೇ 29 ರಿಂದ ರಾಜ್ಯಾದ್ಯಂತ ಪ್ರಾಥಮಿಕ, ಪ್ರೌಢಶಾಲೆಗಳ ಮರು ಆರಂಭವಾಗುತ್ತಿದೆ. ಮೊದಲ ದಿನವೇ ಮಕ್ಕಳಿಗೆ ಶಾಲಾ ಶಿಕ್ಷಣ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ. ವಿದ್ಯಾರ್ಥಿಗಳಿಗೆ ಮೊದಲ ದಿನವೇ ಕ್ಷೀರಭಾಗ್ಯ, ಬಿಸಿಯೂಟ ವಿತರಣೆಗೆ ಆದೇಶ ಹೊರಡಿಸಲಾಗಿದೆ.

VISTARANEWS.COM


on

By

School reopen
Koo

ಬೆಂಗಳೂರು: ಏಪ್ರಿಲ್‌ 11ರಿಂದ ಶುರುವಾಗಿದ್ದ ಬೇಸಿಗೆ ರಜೆಯು ಇಂದಿಗೆ (ಮೇ 28) ಮುಗಿಯುತ್ತಿದ್ದು, ನಾಳೆಯಿಂದ (ಮೇ 29) ರಾಜ್ಯಾದ್ಯಂತ ಪ್ರಾಥಮಿಕ, ಪ್ರೌಢ ಶಾಲೆಗಳು (government schools) ಪುನಾರಂಭಗೊಳ್ಳಲಿವೆ. ಶೈಕ್ಷಣಿಕ ಮಾರ್ಗಸೂಚಿಯಂತೆ ಮಕ್ಕಳನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಕಲ ತಯಾರಿ (school reopen) ಮಾಡಿಕೊಳ್ಳಲಾಗಿದೆ. ಇನ್ನೂ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಎಂಬಂತೆ ಮೊದಲ ದಿನವೇ ಕ್ಷೀರಭಾಗ್ಯ, ಬಿಸಿಯೂಟ ವಿತರಣೆಗೆ ಆದೇಶ ಹೊರಡಿಸಲಾಗಿದೆ.

ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. 2024-25ರ ಸಾಲಿನಲ್ಲಿ ಮೊದಲನೇ ಅವಧಿ ಮೇ 29 ಹಾಗೂ ಎರಡನೇ ಅವಧಿ ಅಕ್ಟೋಬರ್‌ 21ಕ್ಕೆ ಶುರುವಾಗಲಿದೆ. ಅಕ್ಟೋಬರ್‌ 3ರಿಂದ 20ರವರಗೆ ದಸರಾ ರಜೆಯನ್ನು ಘೋಷಣೆ ಮಾಡಲಾಗಿದೆ. ಏಪ್ರಿಲ್‌ 11ರಿಂದ ಬೇಸಿಗೆ ರಜೆ ಶುರುವಾಗಲಿದೆ.

ಇನ್ನೂ 2024-25 ನೇ ಸಾಲಿಗೆ ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ ಎರಡು ಜತೆ ಉಚಿತ ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಖಾಸಗಿ ಶಾಲೆಗಳಿಗೆ ಪಠ್ಯಪುಸ್ತಕಗಳು ಈಗಾಗಲೇ ಸಂಬಂಧಿಸಿದ ತಾಲೂಕುಗಳಿಗೆ ಸರಬರಾಜು ಮಾಡಲಾಗಿದೆ. ಏ.10 ರೊಳಗೆ ಸಂಬಂಧಿಸಿದ ಶಾಲೆಗಳ ಮುಖ್ಯೋಪಾಧ್ಯಾಯರ ಮುಖಾಂತರ ಮಕ್ಕಳಿಗೆ ತಲುಪಿಸಲಾಗಿದೆ. ಶಾಲಾ ಪ್ರಾರಂಭೋತ್ಸವದಂದು ಮಕ್ಕಳು ಸಮವಸ್ತ್ರ ಧರಿಸಿ ಪಠ್ಯಪುಸ್ತಕಗಳೊಂದಿಗೆ ಶಾಲೆಗೆ ಹಾಜರಾಗಲು ಸೂಚಿಸಲಾಗಿದೆ.

ಇದನ್ನೂ ಓದಿ: Deepfake Case: ವಿದ್ಯಾರ್ಥಿನಿಯ ಡೀಪ್‌ ಫೇಕ್‌ ಫೋಟೋ ಸೃಷ್ಟಿ ಮಾಡಿದ ಅದೇ ಶಾಲೆಯ 2 ಹುಡುಗರು ಡಿಬಾರ್

School Reopen

ಶಾಲಾ ದಾಖಲಾತಿಗೆ ಜೂನ್‌ 30 ಕೊನೆ ದಿನ

ವಿದ್ಯಾರ್ಥಿಗಳ ಶಾಲಾ ಪ್ರವೇಶಾತಿಯನ್ನು ಮತ್ತು ದಾಖಲಾತಿಯನ್ನು ಮೇ 31 ರಿಂದ ಶಾಲಾ ಪ್ರಾರಂಭೋತ್ಸವದೊಂದಿಗೆ ಆರಂಭಿಸಿ, ಜೂನ್‌ 30ರಂದು ಮುಕ್ತಾಯಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಕೆಲವು ಮಕ್ಕಳು ನಿರಂತರವಾಗಿ ಶಾಲೆಗೆ ಗೈರು ಹಾಜರಾಗುತ್ತಿರುವುದು ಮತ್ತು ಶಾಲೆಯನ್ನು ಅರ್ಧದಲ್ಲಿಯೇ ಬಿಡುವ ಮಕ್ಕಳನ್ನು ಕಡ್ಡಾಯವಾಗಿ ಹಾಜರಾತಿಗೆ ಕ್ರಮಹಿಸಿಲು ಸೂಚಿಸಲಾಗಿದೆ. ಇದಕ್ಕಾಗಿ ಮೇ 31ರಿಂದ ಜೂನ್‌ 5ರವರಗೆ ಶಾಲಾ ದಾಖಲಾತಿ ಆಂದೋಲವನ್ನು ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Success Story
ಕೃಷಿ4 mins ago

Success Story: ಎರಡೇ ತಿಂಗಳಲ್ಲಿ ಆನ್ ಲೈನ್ ಮೂಲಕ 1,800 ಕೆ.ಜಿ. ಮಾವು ಮಾರಿದ ರಾಯಚೂರಿನ ರೈತ!

Radhika Pandit
ಸ್ಯಾಂಡಲ್ ವುಡ್10 mins ago

Radhika Pandit: ಅಭಿಮಾನಿಗಳ ಪ್ರಶ್ನೆ ಎದುರಿಸಲು ನಟಿ ರಾಧಿಕಾ ಪಂಡಿತ್ ಸಿದ್ಧ; ಹೊಸ ಸಿನಿಮಾ ಘೋಷಿಸ್ತಾರಾ ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ?

chakravarthy sulibele
ಬೆಂಗಳೂರು16 mins ago

Chakravarthy Sulibele: ಮೈಸೂರಿನಲ್ಲಿ ಇಂದು ಸಂಜೆ ಚಕ್ರವರ್ತಿ ಸೂಲಿಬೆಲೆಗೆ ವೀರ ಸಾವರ್ಕರ್‌ ಸಮ್ಮಾನ್‌ ಪ್ರಶಸ್ತಿ ಪ್ರದಾನ

gold rate today bipasha
ಚಿನ್ನದ ದರ16 mins ago

Gold Rate Today: ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ; ಬಂಗಾರದ ಮಾರುಕಟ್ಟೆಯಲ್ಲಿ ಇಂದಿನ ಧಾರಣೆ ಹೀಗಿದೆ

Team India Coach
ಕ್ರೀಡೆ20 mins ago

Team India Coach: ಟೀಮ್​ ಇಂಡಿಯಾದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಪ್ರಧಾನಿ ಮೋದಿ, ಅಮಿತ್ ಶಾ!

Gurmeet Ram Rahim
ದೇಶ23 mins ago

Gurmeet Ram Rahim: 22ವರ್ಷಗಳ ಹಳೆಯ ಕೊಲೆ ಕೇಸ್‌; ಗುರ್ಮೀತ್ ರಾಮ್​ ರಹೀಮ್​ ಖುಲಾಸೆ

School reopen
ಬೆಂಗಳೂರು27 mins ago

School Reopen: ನಾಳೆಯಿಂದ ಶಾಲೆ ಮರು ಆರಂಭ; ಮೊದಲ ದಿನವೇ ಮಕ್ಕಳಿಗೆ ಸಿಹಿ ಸುದ್ದಿ

T20 World Cup 2024
ಕ್ರೀಡೆ1 hour ago

T20 World Cup 2024: ಮಿನಿ ವಿಶ್ವಕಪ್​ ಸಮರದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ದಾಂಡಿಗರಿವರು!

Cyclone Remal
ದೇಶ1 hour ago

Cyclone Remal: ರೆಮಲ್‌ ಚಂಡಮಾರುತದ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ; 16 ಮಂದಿಯನ್ನು ಬಲಿ ಪಡೆದ ಭೀಕರ ಮಳೆ

Prajwal revanna Case
ಪ್ರಮುಖ ಸುದ್ದಿ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೇ 31ರ ಮೊದಲು ಬರಲೇಬೇಕು! ಕಾರಣ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ20 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 week ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌