ಉಡುಪಿ
Ayodhya Rama Mandir : ಆಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಕಾರ್ಕಳದಿಂದ ಹೊರಟಿದೆ ನೆಲ್ಲಿಕಾರು ಶಿಲೆ
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ (Ayodhya Rama Mandir) ಕಾರ್ಕಳದ ಈದು ಗ್ರಾಮದಿಂದ ಕಲ್ಲನ್ನು ಒಯ್ಯಲಾಗಿದೆ. ಜಮೀನಿನಲ್ಲಿ ಮಲಗಿದ್ದ ಕಲ್ಲಿಗೆ ಮಂದಿರದ ಭಾಗವಾಗುವ ಯೋಗ ಎನ್ನುತ್ತಾರೆ ಇಲ್ಲಿನ ಜನರು.
ಕಾರ್ಕಳ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ರಾಮ ಮಂದಿರದಲ್ಲಿ (Ayodhya Rama Mandir) ಪ್ರತಿಷ್ಠಾಪನೆಯಾಗುವ ರಾಮ ಲಲ್ಲಾನ ಮೂರ್ತಿಗಾಗಿ ನೇಪಾಳದ ಗಂಡಕಿ ನದಿಯಿಂದ ಸಾಲಿಗ್ರಾಮ ಶಿಲೆಯನ್ನು ತಂದಿರುವುದು ಎಲ್ಲರಿಗೂ ಗೊತ್ತು. ಈ ದೇವಸ್ಥಾನಕ್ಕೆ ನಾನಾ ಕಡೆಗಳಿಂದ ಅತ್ಯಂತ ಜತನದಿಂದ ಆಯ್ದ ಶಿಲೆ ಮತ್ತು ಸಾಮಗ್ರಿಗಳನ್ನೇ ಬಳಸಲಾಗುತ್ತಿದೆ ಎನ್ನುವುದಕ್ಕೆ ಇದೊಂದು ಉದಾಹರಣೆ. ದೇಶದ ನಾನಾ ಭಾಗಗಳಿಂದಲೂ ಆಯ್ದ ಶಿಲೆಗಳು, ಇತರ ವಸ್ತುಗಳು ರವಾನೆಯಾಗುತ್ತಿವೆ. ಅಂತೆಯೇ ಕರಿಕಲ್ಲಿಗಾಗಿ ಅನ್ವರ್ಥ ನಾಮವನ್ನು ಪಡೆದ ಕಾರ್ಕಳದಿಂದಲೂ ಶಿಲೆಯೊಂದನ್ನು ರವಾನಿಸಲಾಗಿದೆ. ಆ ಮೂಲಕ ರಾಮ ಮಂದಿರದ ನಿರ್ಮಾಣದಲ್ಲಿ ಇಲ್ಲಿನ ಶಿಲೆಯೂ ಭಾಗಿಯಾಗುವಂತಾಗಿದೆ.
ಕಾರ್ಕಳ ತಾಲೂಕಿನ ಈದು ಗ್ರಾಮದ ತುಂಗಾ ಪೂಜಾರಿಯವರ ಜಾಗದಲ್ಲಿದ್ದ ನೆಲ್ಲಿಕಾರು ಶಿಲೆಯನ್ನು ಗುರುವಾರ ರಾತ್ರಿ ಬೃಹತ್ ಲಾರಿಯ ಮೂಲಕ ಅಯೋಧ್ಯೆಗೆ ಕಳುಹಿಸಿಕೊಡಲಾಗಿದೆ. ಕೆಲವು ತಿಂಗಳುಗಳ ಹಿಂದೆ ಖ್ಯಾತ ಶಿಲಾ ತಜ್ಞ ಕುಶೀಪ್ ಬನ್ಸಾಲ್ ಅವರು ಈದುವಿಗೆ ಬಂದು ಈ ಶಿಲೆಯನ್ನು ಪರಿಶೀಲಿಸಿದ್ದರು. ದೇಶಾದ್ಯಂತ ನಡೆಯುವ ಶೋಧ ಕಾರ್ಯದ ಭಾಗವಾಗಿ ಇಲ್ಲಿಯೂ ಹುಡುಕಾಟ ನಡೆದಿತ್ತು. ಅವರಿಗೆ ಸ್ಥಳೀಯ ಶಿಲ್ಪಿಗಳು ಮತ್ತು ಬಜರಂಗದಳ ಕಾರ್ಯಕರ್ತರು ನೆರವಾಗಿದ್ದರು.
ಅಯೋಧ್ಯೆಗೆ ರವಾನೆಯಾದ ಶಿಲೆಯು ಸುಮಾರು 9 ಟನ್ ತೂಕವಿದೆ. 7 ಅಡಿ ಅಗಲ ಮತ್ತು 5 ಅಡಿ ದಪ್ಪವಿದೆ. ಕ್ರೇನ್ ಸಹಾಯದಿಂದ ಇದನ್ನು ಲಾರಿಗೆ ಹಾಕಲಾಯಿತು. ಬಳಿಕ ಅದ್ಧೂರಿ ಪೂಜೆಯೊಂದಿಗೆ ಕಳುಹಿಸಿಕೊಡಲಾಯಿತು.
ಕಾರ್ಕಳ ಕಲ್ಲಿಗೇ ಫೇಮಸ್
ಕಾರ್ಕಳದ ಕರಿಕಲ್ಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಪ್ರಸಿದ್ಧಿ ಪಡೆದಿದೆ. ಕರಿಕಲ್ಲಿನ ನಗರಿ ಎಂದು ಕರೆಯಲ್ಪಡುವ ಕಾರ್ಕಳದ ನೆಲ್ಲಿಕಾರಿನ ಶಿಲೆಗಳು ಭಾರಿ ಜನಪ್ರಿಯ. ರಾಷ್ಟ್ರಪತಿ ಭವನದಲ್ಲಿ ಇಡಲಾಗಿರುವ ಕಾರ್ಕಳದ ಬಾಹುಬಲಿ, ಮಾನಸ್ತಂಭದ ಪ್ರತಿಕೃತಿಗಳು ನೆಲ್ಲಿಕಾರು ಶಿಲೆಯಿಂದ ಮಾಡಲಾಗಿದ್ದು. ಕವಿ ಮುದ್ದಣ, ಮಿಥುನ ನಾಗ, ಸೋಮನಾಥ ಪುರದ ದ್ವಾರ , ಗಜಸಿಂಹ, ಗೇಟ್ ವೇ, ಕಲ್ಲಿನ ಕಾರಂಜಿ, ಚೆನ್ನಿಗರಾಯ ದೇವರ ಸೇರಿದಂತೆ ಒಟ್ಟು ಹತ್ತು ವಿಗ್ರಹಗಳನ್ನು ಕರಿಕಲ್ಲಿನಿಂದ ಮಾಡಿ ಇಡಲಾಗಿದೆ. ದೆಹಲಿಯ ಗುರುಗ್ರಾಮ ರಸ್ತೆಯಲ್ಲಿರುವ 15 ಅಡಿ ಎತ್ತರದ ಮಹಾವೀರ ವಿಗ್ರಹವೂ ಕರಿಕಲ್ಲಿನದ್ದೆ. ದೆಹಲಿಯಲ್ಲಿರುವ ಮಹಾವೀರನ ಪ್ರತಿಮೆ, ರಾಜಸ್ಥಾನದ ಅಲ್ವಾರ್ ಚಂದ್ರಪ್ರಭಾ ತೀರ್ಥಂಕರರ ಪ್ರತಿಮೆ, ಗುರುವಾಯೂರಿನ ಶ್ರೀಕೃಷ್ಣ, ಕೆನಡಾದ ಟೊರಂಟೊದಲ್ಲಿರುವ ದೇವೇಂದ್ರ ದೇವರ ವಿಗ್ರಹ, ಜಪಾನ್ ಅವಲೋಹಿತೇಶ್ವರ ಪ್ರತಿಮೆ, ಇಂಗ್ಲೆಂಡ್ನ ಮ್ಯೂಸಿಯಂನಲ್ಲಿರುವ ಕೃಷ್ಣನ ವಿಗ್ರಹವೂ ಕರಿಕಲ್ಲಿನದ್ದೆ. ಇತ್ತೀಚೆಗೆ ಮಲೇಷಿಯಾದಲ್ಲಿ ದುರ್ಗ ವಿಗ್ರಹವನ್ನು ನಿರ್ಮಿಸಲಾಗಿದೆ.
ಕಲ್ಕುಡನ ಪಾದ ಸ್ಪರ್ಶದಿಂದ ಪುನೀತವಾದ ಕಾರ್ಕಳದ ಪುಣ್ಯ ಮಣ್ಣಿನಲ್ಲಿ, ಬ್ರಹ್ಮಬೈದರ್ಕಳ ಆರಾಧನೆ ಮಾಡುವ ಕುಟುಂಬವೊಂದರ ಭೂಮಿಯಲ್ಲಿದ್ದ ತುಳುನಾಡಿನ ಕೃಷ್ಣ ಶಿಲೆಗೆ ಅಯೋಧ್ಯೆಯ ರಾಮ ಮಂದಿರದ ಭಾಗವಾಗುವ ಯೋಗ ಬಂದಿರುವುದು ವಿಶೇಷ ಎನ್ನುತ್ತಾರೆ ಈದುವಿನ ನಾಗರಿಕರು.
ಇದನ್ನೂ ಓದಿ : Ram Mandir: ಅಯೋಧ್ಯೆ ರಾಮಮಂದಿರದ ಗರ್ಭಗುಡಿ ಹೇಗಿದೆ? ಇಲ್ಲಿವೆ ನೂತನ ಫೋಟೊಗಳು
ಉಡುಪಿ
Death News : ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿಯಾಗಿದ್ದ ಮಾಲಿನಿ ಮಲ್ಯ ನಿಧನ
ಜ್ಞಾನಪೀಠ ಪುರಸ್ಕೃತ ಸಾಹಿತಿ ಕೋಟ ಶಿವರಾಮ ಕಾರಂತರ ಆಪ್ತ ಸಹಾಯಕರಾಗಿದ್ದು, ಅವರ ಕೃತಿಗಳ ಕೃತಿಸ್ವಾಮ್ಯ ಹೊಂದಿದ್ದ ಮಾಲಿನಿ ಮಲ್ಯ ಅವರು ನಿಧನರಾಗಿದ್ದಾರೆ (Death News).
ಉಡುಪಿ: ಜ್ಞಾನಪೀಠ ವಿಜೇತ ಸಾಹಿತಿ ಕೋಟ ಶಿವರಾಮ ಕಾರಂತರ ಕೊನೆಗಾಲದವರೆಗೂ ಆಪ್ತ ಸಹಾಯಕಿಯಾಗಿದ್ದ, ತಾನೇ ಸ್ವತಃ ಕಾದಂಬರಿಗಾರ್ತಿಯಾಗಿದ್ದ ಮಾಲಿನಿ ಮಲ್ಯ ನಿಧನರಾಗಿದ್ದಾರೆ (Death News). ಅವರಿಗೆ 72 ವರ್ಷವಾಗಿತ್ತು.
ಕೋಟ ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಅಧ್ಯಕ್ಷೆಯಾಗಿದ್ದ ಅವರು ದೀರ್ಘ ಕಾಲದ ಅಸೌಖ್ಯದ ಬಳಿಕ ಬೆಂಗಳೂರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರು ಕೆಲವು ಕಾಲದಿಂದ ಪಾರ್ಕಿನ್ಸನ್ ರೋಗ ದಿಂದ ಬಳಲುತ್ತಿದ್ದಾರೆ. ಸಾಲಿಗ್ರಾಮದಲ್ಲಿದ್ದ ಮಾಲಿನಿ ಮಲ್ಯ ಅವರನ್ನು ಬಂಧುಗಳು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದರು.
ಭಾರತೀಯ ಜೀವ ವಿಮಾ ನಿಗಮದ ನಿವೃತ್ತ ಉದ್ಯೋಗಿಯಾಗಿದ್ದ ಮಾಲಿನಿ ಮಲ್ಯ ಅವರು ಶಿವರಾಮ ಕಾರಂತರನ್ನು ಕೊನೆಗಾಲದಲ್ಲಿ ತುಂಬಾ ಚೆನ್ನಾಗಿ ನೋಡಿಕೊಂಡಿದ್ದರು. ಕಾರಂತರ ಆರೋಗ್ಯದಿಂದ ಹಿಡಿದು ಅವರ ಎಲ್ಲ ಕೃತಿಗಳ ವಿಚಾರದಲ್ಲೂ ಸಾಕಷ್ಟು ಜಾಗೃತಿಯನ್ನು ಹೊಂದಿದ್ದರು ಮಾಲಿನಿ ಮಲ್ಯ.
ಸಾಲಿಗ್ರಾಮದಲ್ಲಿ ಕಾರಂತ ಸ್ಮೃತಿ ಭವನ ನಿರ್ಮಿಸಿ ವರ್ಷವೂ ಕಾರಂತ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದರು. ಶಿವರಾಮ ಕಾರಂತರ ಬದುಕು ಬರಹಗಳನ್ನು ಕನ್ನಡ ಓದುಗರಿಗೆ ಉಣಬಡಿಸಿದ ಕೀರ್ತಿ ಮಾಲಿನಿ ಮಲ್ಯ ಅವರಿಗೆ ಸಲ್ಲುತ್ತದೆ. ಕಾರಂತರ ವೈಚಾರಿಕ ನೆಲೆ, ಜೀವನ ಪ್ರೀತಿಯನ್ನು ಮತ್ತಷ್ಟು ಅರ್ಥೈಸಿಕೊಳ್ಳುವಲ್ಲಿ ಅವರು ಕೊಡುಗೆ ನೀಡಿದ್ದಾರೆ.
ಮೂಲತಃ ಉಡುಪಿಯವರಾದ ಸ್ವತಃ ಕಾದಂಬರಿಗಾರ್ತಿಯಾಗಿರುವ ಮಾಲಿನಿ ಮಲ್ಯ ಅವರು ಗೊಂದಲಪುರದ ನಿಂದಲರು (ಕಾದಂಬರಿ), ದಾಂಪತ್ಯ ಗಾಥೆ (ಕಿರುಕಾದಂಬರಿ) ಬರೆದಿದ್ದಾರೆ.
ನಾನು ಕಂಡ ಕಾರಂತರು (ವ್ಯಕ್ತಿಚಿತ್ರ), , ಶಿವರಾಮಕಾರಂತರ ಕಿನ್ನರಲೋಕ (ಲೇಖನ ಸಂಗ್ರಹ), ಚಿಣ್ಣರ ಲೋಕದಲ್ಲಿ ಕಾರಂತರು ಭಾಗ 1 ಮತ್ತು 2, ಸಾಹಿತ್ಯೇತರ ಕಾರಂತರು, ಕಾರಂತ ಉವಾಚ, ಶಿವರಾಮ ಕಾರಂತರ ವಾಙ್ಮಯ ವೃತ್ತಾಂತ, ಶಿವರಾಮ ಕಾರಂತರ ಕೃತಿ ಕೈಪಿಡಿ, ಶಿವರಾಮ ಕಾರಂತರ ಲೇಖನಗಳು-8 ಸಂಪುಟಗಳು, ಪಕ್ಷಿಗಳ ಅದ್ಭುತ ಲೋಕ, ಬಾಲಪ್ರಪಂಚ-3’ ಅವರು ರಚಿಸಿದ ಕೃತಿಗಳು.
ಮಾಲಿನಿ ಮಲ್ಯ ಅವರಿಗೆ ಬೆಂಗಳೂರಿನ ಶಾಶ್ವತಿ ಸಂಸ್ಥೆ ’ಸದೋದಿತ ಸಾಹಿತ್ಯ ಪ್ರಶಸ್ತಿ’ ನೀಡಿ ಗೌರವಿಸಿದೆ.
ಶಿವರಾಮ ಕಾರಂತರು ತಮ್ಮ ಕೃತಿಗಳು ಮತ್ತು ಬ್ಯಾಲೆ ಮತ್ತಿತರ ಪ್ರದರ್ಶನ ಕಲೆಗಳ ಹಕ್ಕುಸ್ವಾಮ್ಯವನ್ನು ಮಾಲಿನಿ ಮಲ್ಯ ಅವರಿಗೆ ನೀಡಿದ್ದರು. ಕಾರಂತರ ನಿಧನಾನಂತರ ಅವರ ಕೃತಿಗಳಿಗೆ ಸಂಬಂಧಿಸಿ ಎದುರಾದ ಎಲ್ಲ ಕಾನೂನು ಸಮರಗಳನ್ನು ಮಾಲಿನಿ ಮಲ್ಯ ಅವರೇ ಎದುರಿಸಿದ್ದಾರೆ.
ಇದನ್ನೂ ಓದಿ : Death News: ಸಮಾಜವಾದಿ ಹೋರಾಟಗಾರ ಶಾಂತವೇರಿ ಗೋಪಾಲಗೌಡರ ಅನುಯಾಯಿ ಕಲ್ಲೂರು ನಾರಾಯಣಪ್ಪ ಗೌಡ ನಿಧನ
ಉಡುಪಿ
Accident News: ಚಲಿಸುತ್ತಿದ್ದ ಶಾಲಾ ಬಸ್ನಲ್ಲಿ ಕಾಣಿಸಿಕೊಂಡ ಬೆಂಕಿ; 30 ಮಕ್ಕಳು ಅಪಾಯದಿಂದ ಪಾರು
Accident News: ಬಳ್ಳಾರಿಯಲ್ಲಿ ಚಲಿಸುತ್ತಿದ್ದ ಶಾಲಾ ಬಸ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದಾಗಿ 30 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇತ್ತ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.
ಬಳ್ಳಾರಿ/ ಉಡುಪಿ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಹಾಗೂ ತೆಕ್ಕಲಕೋಟೆ ನಡುವೆ ಶಾಲಾ ಬಸ್ ಚಲಿಸುತ್ತಿದ್ದಾಗ ಏಕಾಏಕಿ ಬೆಂಕಿ (Fire Accident) ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ವಾಹನ ಹೊತ್ತಿ (Accident News) ಉರಿದಿದೆ. ಸಿರುಗುಪ್ಪ ಪಟ್ಟಣದ ವಿಶ್ವಜ್ಯೋತಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್ನಲ್ಲಿ ಸುಮಾರು 30ಕ್ಕೂ ಹೆಚ್ಚು ಮಕ್ಕಳು ಪ್ರಯಾಣಿಸುತ್ತಿದ್ದರು.
ಬಸ್ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಬಸ್ ನಿಲ್ಲಿಸಿ, ಕೂಡಲೇ ಮಕ್ಕಳನ್ನು ಕೆಳಗಿಳಿಸಿದ್ದಾರೆ. ಪರೀಕ್ಷೆ ಬರೆದು ಮನೆಗೆ ವಾಪಸ್ ಕರೆದೊಯ್ಯುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಬಳಿಕ ಮಕ್ಕಳನ್ನು ಬೇರೆ ವಾಹನದಲ್ಲಿ ರವಾನೆ ಮಾಡಲಾಗಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಬಸ್ನಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ತಿಳಿದುಬಂದಿಲ್ಲ.
ಸರಣಿ ಅಪಘಾತದಲ್ಲಿ ಬೈಕ್ ಸವಾರ ಮೃತ್ಯು
ಉಡುಪಿಯ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಣಿ ರಸ್ತೆ ಅಪಘಾತ (Road Accident) ಸಂಭವಿಸಿದೆ. ಕುಂಭಾಶಿ ಪಾಕಶಾಲಾ ಹೋಟೆಲ್ ಸಮೀಪ ಹೋಂಡಾ ಡಿಯೋ ದ್ವಿಚಕ್ರ ವಾಹನ, ಹ್ಯುಂಡೈ ಗ್ಯಾಂಡ್ ಐ10 ಕಾರು ಹಾಗೂ ಬಸ್ನ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಒಬ್ಬ ಸಾವಿಗೀಡಾಗಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ. ದ್ವಿಚಕ್ರ ವಾಹನದಲ್ಲಿದ್ದ ಕೊರವಡಿ ಮಾಣಿಮನೆ ಬೆಟ್ಟು ನಿವಾಸಿ ಪ್ರಶಾಂತ್ ಪೂಜಾರಿ (28) ಹಾಗೂ ವಿಶ್ಲೇಶ್ ಪೂಜಾರಿ (27) ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಪ್ರಶಾಂತ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸ್ಕೂಟರ್ ಗ್ಯಾರೇಜ್ನಲ್ಲಿ ಹೊತ್ತಿಕೊಂಡ ಬೆಂಕಿ
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ದ್ವಿಚಕ್ರ ವಾಹನ ಗ್ಯಾರೇಜ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಜಿಗಣಿ ಎಪಿಸಿ ವೃತ್ತದಲ್ಲಿ ಸ್ಟಿಕ್ಕರ್ ಡಿಸೈನ್ ಅಂಗಡಿ ಹಾಗೂ ಸ್ಕೂಟರ್ ಗ್ಯಾರೇಜ್ ಬೆಂಕಿಗಾಹುತಿ ಆಗಿದೆ.
ಇದನ್ನೂ ಓದಿ: Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ
ಗ್ಯಾರೇಜ್ನಲ್ಲಿ ಹೊತ್ತಿಕೊಂಡ ಬೆಂಕಿಯಿಂದ ಪಕ್ಕದ ಅಂಗಡಿಗೂ ಬೆಂಕಿ ಆವರಿಸಿಕೊಂಡು ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಗೋಪಿ ಎಂಬುವವರಿಗೆ ಸೇರಿದ ಸ್ಕೂಟರ್ ಗ್ಯಾರೇಜ್ ಬೆಂಕಿಗಾಹುತಿಯಾಗಿದ್ದು, ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟೀ ಸ್ಟಾಲ್ನಲ್ಲಿ ಸಿಲಿಂಡರ್ ಸ್ಫೋಟ
ಕೊಪ್ಪಳದ ಕಾರಟಗಿ ತಾಲೂಕಿನ ಬೆನ್ನೂರು ಗ್ರಾಮದಲ್ಲಿ ಟೀ ಸ್ಟಾಲ್ನಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಯಮನೂರಪ್ಪ ಎಂಬವರಿಗೆ ಸೇರಿದ ಟೀ ಸ್ಟಾಲ್ನಲ್ಲಿ ಗ್ಯಾಸ್ ಪೈಪ್ ಲೀಕೇಜ್ ಆಗಿದ್ದು, ಅದು ಸ್ಫೋಟಗೊಂಡಿದೆ. ಸಿಲೆಂಡರ್ ಸ್ಫೋಟಗೊಳ್ಳುತ್ತಲೇ ಜನರೆಲ್ಲ ದಿಕ್ಕಾಪಾಲಾಗಿ ಓಡಿದ್ದಾರೆ. ಸಿಲೆಂಡರ್ ಸ್ಫೋಟಗೊಂಡಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Murder Case: ದೈವದ ಮುಂದೆ ಪಾಂಗಾಳ ಉದ್ಯಮಿ ಶರತ್ ಶೆಟ್ಟಿ ಕೊಲೆ ಕೇಸ್; ಪಾತಾಳದಲ್ಲಿ ಅಡಗಿದ್ದರೂ ಬಿಡಲ್ಲವೆಂದು ಅಭಯ
ಕಾಪು ಠಾಣಾ ವ್ಯಾಪ್ತಿಯ ಪಾಂಗಾಳದ ಉದ್ಯಮಿ ಶರತ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಕುಟುಂಬಸ್ಥರು ದುಷ್ಕರ್ಮಿಗಳ ಪತ್ತೆಗೆ ದೈವದ ಮೊರೆ ಹೋಗಿದ್ದು, ಈ ವೇಳೆ ಕುಟುಂಬಿಕರ ನೋವಿಗೆ ಉತ್ತರಿಸಿದ ಪಂಜುರ್ಲಿ ದೈವವು ಪಾತಾಳದಲ್ಲಿ ಅಡಗಿದ್ದರೂ ಹುಡುಕುವುದಾಗಿ ಅಭಯ ನೀಡಿದೆ.
ಉಡುಪಿ: ಇಲ್ಲಿನ ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಎಂಬುವವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಕುಟುಂಬಸ್ಥರು ಪಂಜುರ್ಲಿ ದೈವದ ಮೊರೆ ಹೋಗಿದ್ದಾರೆ. ವರ್ತೆ ಪಂಜುರ್ಲಿ ನೇಮೋತ್ಸವದಲ್ಲಿ ದೈವದ ಮೊರೆ ಹೋದಾಗ ಕುಟುಂಬಿಕರ ನೋವಿಗೆ ಉತ್ತರಿಸಿದ ದೈವ, ಕೊಲೆಗಡುಕರು ಪಾತಾಳದಲ್ಲಿ ಅಡಗಿದ್ದರೂ ಹುಡುಕುವುದಾಗಿ ಅಭಯ ನೀಡಿದೆ.
ಕಳೆದ ಫೆ.5ರ ಭಾನುವಾರ ರಾತ್ರಿ ರಿಯಲ್ ಎಸ್ಟೇಟ್ ಉದ್ಯಮಿ ಶರತ್ ಶೆಟ್ಟಿ ಅವರ ಹತ್ಯೆ ಮಾಡಲಾಗಿತ್ತು. ಪಾಂಗಾಳದ ಬಬ್ಬುಸ್ವಾಮಿ ದೈವಸ್ಥಾನದ ನೇಮೋತ್ಸವದಲ್ಲಿ ಭಾಗಿಯಾಗಿದ್ದ ಶರತ್ ಮೊಬೈಲ್ ಕರೆ ಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಬಂದಿದ್ದರು.
ಬಳಿಕ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ರಕ್ತದ ಮಡುವಿನಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೊದಮೊದಲು ಅಪಘಾತವಾಗಿರಬಹುದು ಎಂದು ತಿಳಿದಿದ್ದ ಸ್ಥಳೀಯರಿಗೆ, ಜಾಗದಲ್ಲಿ ಪತ್ತೆಯಾದ ಚೂರಿ ನೋಡಿ ಕೊಲೆ ಶಂಕೆ ವ್ಯಕ್ತವಾಗಿತ್ತು. ಎದೆಯ ಭಾಗಕ್ಕೆ ದುಷ್ಕರ್ಮಿಗಳು ಬಲವಾಗಿ ಚೂರಿ ಹಾಕಿದ್ದ ಹಿನ್ನೆಲೆಯಲ್ಲಿ ಶರತ್ ಶೆಟ್ಟಿ ಮೃತಪಟ್ಟಿದ್ದರು.
ಪ್ರಕರಣ ಸಂಬಂಧ ಈಗಾಗಲೇ ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ನೇತೃತ್ವದಲ್ಲಿ ಮೂರು ತಂಡ ರಚಿಸಲಾಗಿದ್ದು, ಒಂದು ತಂಡ ಮಂಗಳೂರಿಗೆ ತೆರಳಿ ತನಿಖೆ ಆರಂಭಿಸಿದೆ. ಇನ್ನೊಂದು ತಂಡ ಶರತ್ ಶೆಟ್ಟಿಯ ಮೊಬೈಲ್ ಮತ್ತು ಹಲವು ಕಡೆ ಸಿಸಿ ಪೂಟೇಜ್ ಆಧರಿಸಿ ಮಾಹಿತಿ ಕಲೆಹಾಕುತ್ತಿದೆ. ಹಲವು ಜನರ ವಿಚಾರಣೆ ನಡೆಸಲಾಗಿದೆ. ಶರತ್ ಶೆಟ್ಟಿ ಭೂ ವ್ಯವಹಾರ ನಡೆಸುತ್ತಿದ್ದ ಕಾರಣ ಹಾಗೂ ವ್ಯವಹಾರದ ತಗಾದೆ ಹಿನ್ನೆಲೆಯಲ್ಲಿ ಕೊಲೆಯಾಗಿರಬಹುದೇ ಎನ್ನುವ ಅನುಮಾನವಿದ್ದು, ಈ ನಿಟ್ಟಿನಲ್ಲಿ ತನಿಖೆಯನ್ನು ಕೈಗೊಳ್ಳಲಾಗಿದೆ.
ಇದನ್ನೂ ಓದಿ: Fraud Case: ಸೋಲಾರ್ ಪ್ಲಾಂಟ್ ಹೆಸರಲ್ಲಿ ಉದ್ಯಮಿಗೆ ಕೋಟಿ ಕೋಟಿ ಪಂಗನಾಮ; ವಂಚಕ ಸೆರೆ
ಸದ್ಯ ಪ್ರಕರಣ ಸಂಬಂಧ ಹಲವು ಆರೋಪಿಗಳ ಬಂಧನವಾಗಿದ್ದರೂ, ಪ್ರಮುಖ ಆರೋಪಿ ಪತ್ತೆ ಆಗಿಲ್ಲ. ಹೀಗಾಗಿ ಕುಟುಂಬಸ್ಥರು ಪಂಜುರ್ಲಿ ದೈವದ ಮೊರೆ ಹೋಗಿದ್ದಾರೆ. ಈ ವೇಳೆ ದೈವ ಅಭಯ ನೀಡಿದ್ದು ಪೊಲೀಸರ ತನಿಖೆಗೆ ಬಲ ನೀಡುವುದಾಗಿ ಹೇಳಿದೆ. ಮಾತ್ರವಲ್ಲದೆ ಪಾತಾಳದಲ್ಲೇ ಅಡಗಿದ್ದರೂ ಹುಡುಕುವುದಾಗಿ ಹೇಳಿದೆ.
ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Drugs in Manipal : ಗಾಂಜಾ ಸೇವನೆ ಆರೋಪ; ಮಣಿಪಾಲದಲ್ಲಿ ಐವರು ವಿದ್ಯಾರ್ಥಿಗಳು ಅರೆಸ್ಟ್
ಕರಾವಳಿಯಲ್ಲಿ ಮಾದಕ ದ್ರವ್ಯಗಳ ಜಾಲ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸುತ್ತಿರುವುದಕ್ಕೆ ಇನ್ನೊಂದು ಸಾಕ್ಷ್ಯ ಸಿಕ್ಕಿದೆ. ಐವರು ವಿದ್ಯಾರ್ಥಿಗಳು ಗಾಂಜಾ ಸೇವಿಸುವಾಗಲೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಉಡುಪಿ: ಮಣಿಪಾಲದಲ್ಲಿ ಗಾಂಜಾ ಸೇವನೆಯ ಆರೋಪದ (Drugs in Manipal) ಮೇರೆಗೆ ಐವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಖಿಲ್ ಎಂ. (22), ತನ್ವೀರ್ ರೆಡ್ಡಿ (25), ಶರಣ್ ಶೆಟ್ಟಿ (22), ರಾಹುಲ್ ಸೀಮಾ (21), ತುಶಾರ್ ಜಿ. (21) ಸದ್ಯ ಪೊಲೀಸ್ ವಶದಲ್ಲಿರುವ ವಿದ್ಯಾರ್ಥಿಗಳು. ಇವರೆಲ್ಲರೂ ಮಣಿಪಾಲದ ಬೇರೆ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು.
ಮಣಿಪಾಲದ ಅಪಾರ್ಟ್ಮೆಂಟ್ ಒಂದರ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪದ ಮೇಲೆ ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ನವೀನ್ ನಾಯ್ಕ, ವಿದ್ಯಾರ್ಥಿಗಳು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಫೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಲಾಗಿತ್ತು. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗಾಂಜಾ ಸೇವಿಸಿರುವುದು ದೃಢಪಟ್ಟಿದ್ದು, ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಮಂಗಳೂರು ಮತ್ತು ಮಣಿಪಾಲದಲ್ಲಿ ದೊಡ್ಡ ಮಟ್ಟದ ದಾಳಿ ನಡೆಸಿದ ಪೊಲೀಸರು ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರೇ ಡ್ರಗ್ಸ್ಗೆ ದಾಸರಾಗಿದ್ದ ಆತಂಕಕಾರಿ ಸಂಗತಿಗಳನ್ನು ಬೆಳಕಿಗೆ ತಂದಿದ್ದರು. ಯುವತಿಯರೂ ಸೇರಿದಂತೆ 20ಕ್ಕೂ ವೈದ್ಯ ವಿದ್ಯಾರ್ಥಿಗಳನ್ನು ಅಂದು ಬಂಧಿಸಲಾಗಿತ್ತು.
ಇದನ್ನೂ ಓದಿ : Manipal Drugs case: ಮಣಿಪಾಲದಲ್ಲಿ ಡ್ರಗ್ಸ್ ವಿರುದ್ಧ ಸಮರ; ಮಾಹೆ ವಿವಿಯ 42 ವಿದ್ಯಾರ್ಥಿಗಳು ಸಸ್ಪೆಂಡ್
-
ಕರ್ನಾಟಕ13 hours ago
Karnataka Election: ಮೇ 10ರಂದು ಕರ್ನಾಟಕ ಚುನಾವಣೆ; ಮೇ 13ಕ್ಕೆ ಫಲಿತಾಂಶ ಎಂದು ಘೋಷಿಸಿದ ಚುನಾವಣಾ ಆಯೋಗ
-
ಕರ್ನಾಟಕ14 hours ago
Karnataka Election 2023 LIVE: ಕರ್ನಾಟಕದಲ್ಲಿ ಮೇ 10ಕ್ಕೆ ಮತದಾನ, 13ಕ್ಕೆ ರಿಸಲ್ಟ್, ಒಂದೇ ಹಂತದ ಎಲೆಕ್ಷನ್
-
ಕರ್ನಾಟಕ17 hours ago
Karnataka Election: ಕರ್ನಾಟಕ ಚುನಾವಣೆ ದಿನಾಂಕ ಇಂದು ಘೋಷಣೆ, ಇಂದಿನಿಂದಲೇ ನೀತಿ ಸಂಹಿತೆ ಜಾರಿ
-
ಕರ್ನಾಟಕ12 hours ago
Karnataka Election: ನೀತಿ ಸಂಹಿತೆಗೆ ಮೊದಲೇ ತುಂಬಿತು ಅಕ್ರಮದ ಪಾತ್ರೆ: 2018ರ ಹಣದ ಹೊಳೆಯನ್ನು ಈಗಲೇ ಮೀರಿಸಿದ ಕರ್ನಾಟಕ !
-
ಪ್ರಮುಖ ಸುದ್ದಿ8 hours ago
UPI transactions : ಯುಪಿಐ ಬಳಕೆ ಗ್ರಾಹಕರಿಗೆ ಸಂಪೂರ್ಣ ಉಚಿತ ಎಂದ ಎನ್ಪಿಸಿಐ, ಹಾಗಾದರೆ 1.1% ಶುಲ್ಕ ಯಾರಿಗೆ?
-
ಗ್ಯಾಜೆಟ್ಸ್9 hours ago
Google: ಗೂಗಲ್ಗೆ 1337 ಕೋಟಿ ರೂ. ದಂಡ, 30 ದಿನದಲ್ಲಿ ಪಾವತಿಸಲು ನ್ಯಾಯಮಂಡಳಿ ಆದೇಶ!
-
ಕರ್ನಾಟಕ12 hours ago
Karnataka Elections 2023 : ವಲಸಿಗ ಸಚಿವರ ಮೇಲೆ ಬೊಮ್ಮಾಯಿ ನಿಗಾ; ಹೆಬ್ಬಾರ್, ಮುನಿರತ್ನ ಕರೆಸಿಕೊಂಡು ಚರ್ಚೆ
-
ಕರ್ನಾಟಕ15 hours ago
Karnataka Elections 2023 : 8 ಸಚಿವರ ಸಹಿತ 35 ಶಾಸಕರಿಗೆ ಸೋಲಿನ ಭೀತಿ, ಈ ಬಾರಿ ಬಿಜೆಪಿಯಲ್ಲಿ 50 ಹೊಸ ಮುಖ?