Blackmaling woman : ಸೋಷಿಯಲ್‌ ಮೀಡಿಯಾದಲ್ಲಿ ಚಂದದ ಫೋಟೊ ಹಾಕೋ ಹೆಂಗಸರೇ ಈ ಕಾಮುಕ ಟೆಕ್ಕಿಯ ಟಾರ್ಗೆಟ್‌ - Vistara News

ಕರ್ನಾಟಕ

Blackmaling woman : ಸೋಷಿಯಲ್‌ ಮೀಡಿಯಾದಲ್ಲಿ ಚಂದದ ಫೋಟೊ ಹಾಕೋ ಹೆಂಗಸರೇ ಈ ಕಾಮುಕ ಟೆಕ್ಕಿಯ ಟಾರ್ಗೆಟ್‌

Blackmailing woman : ಸೋಷಿಯಲ್‌ ಮೀಡಿಯಾದಲ್ಲಿ ಚಂದದ ಫೋಟೊ ಹಾಕುವವರು ಗಮನಿಸಬೇಕು, ಯಾರಾದರೂ ಅಂದ ಚಂದ ಹೊಗಳಿದರು ಎಂದ ಮಾತ್ರಕ್ಕೆ ಯಾಮಾರಬೇಡಿ. ಅವರಲ್ಲಿ ಒಳ್ಳೆಯವರೂ ಇರಬಹುದು. ಕೆಟ್ಟವರೂ ಇರಬಹುದು. ಕೆಟ್ಟವರ ಕೈಗೆ ಸಿಕ್ಕಿದರೆ ಕಥೆ ಕೈಲಾಸ!

VISTARANEWS.COM


on

Blackmailer arrested
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಇವನೊಂಥರಾ ವಿಚಿತ್ರ ಕಾಮುಕ. ಇವನಿಗೆ ಮದುವೆಯಾಗದ ಹೆಣ್ಮಕ್ಕಳೆಂದರೆ (Unmarried girls) ಅಲರ್ಜಿ. ಆದರೆ, ಮದುವೆಯಾಗಿರುವ, ಸೋಷಿಯಲ್‌ ಮೀಡಿಯಾದಲ್ಲಿ ಸಕ್ರಿಯರಾಗಿರುವ (Active in Social Media), ಚಂದ ಚಂದದ ಫೋಟೊ ಹಾಕುವ ವಿವಾಹಿತ ಹೆಣ್ಮಕ್ಕಳೇ ಇವನ ಟಾರ್ಗೆಟ್‌ (Married woman his target). ಸೋಷಿಯಲ್‌ ಮೀಡಿಯಾದಲ್ಲಿ ಕನೆಕ್ಟ್‌ ಆಗಿ ಅವರ ಅಂದಚಂದವನ್ನು ಹೊಗಳಿ ಹತ್ತಿರವಾಗುತ್ತಿದ್ದ ಆತ ಮುಂದೇನು ಮಾಡ್ತಿದ್ದ ಅಂತ ಕೇಳಿದರೆ ನೀವು ಬೆಚ್ಚಿ ಬೀಳುತ್ತೀರಿ (Blackmailing woman! ನಿಮಗೆ ಸೋಷಿಯಲ್‌ ಮೀಡಿಯಾದಲ್ಲಿ ಅಟ್ರಾಕ್ಟಿವ್‌ ಫೋಟೊ ಹಾಕಿಕೊಂಡು ಬೇರೆಯವರ ಕಮೆಂಟ್‌, ಹೊಗಳಿಕೆಗೆ ಕಾಯೋ ಮನಸ್ಥಿತಿ ಇದ್ದರೆ ಈ ವರದಿಯನ್ನು ಅವಶ್ಯವಾಗಿ ಓದಲೇಬೇಕು!

ಅವನ ಹೆಸರು ಫೈಸಲ್.‌ ಇವನು ಅಸ್ಸಾಂ ಮೂಲದವನು. ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ (Software Engineer from Assam). ಅಸ್ಸಾಂನಿಂದ ಬಂದು ಬೆಂಗಳೂರಿನಲ್ಲಿ ಆರಾಮವಾಗಿರುವ ಅವನು ಮಾಡಿಕೊಂಡಿರುವ ಇನ್ನೊಂದು ಕೆಲಸವೇನೆಂದರೆ ಫೇಸ್‌ಬುಕ್‌, ಇನ್‌ಸ್ಟಾಗ್ರಾಂನಲ್ಲಿ ಯಾರೆಲ್ಲ ಚಂದದ ಫೋಟೊ ಹಾಕ್ತಾರೆ ಅಂತ ಗಮನಿಸುತ್ತಿದ್ದ. ಮೊದಲು ಅವನು ನೋಡುತ್ತಿದ್ದುದು ಅವರು ಸಿಂಗಲಾ ಅಥವಾ ಮದುವೆಯಾಗಿದೆಯಾ ಅಂತ.

ಮದುವೆಯಾಗಿದ್ದು ಸೋಷಿಯಲ್‌ ಮೀಡಿಯಾದಲ್ಲಿ ಚಂದದ ಫೋಟೊಗಳನ್ನು ಹಾಕುತ್ತಿದ್ದಾರೆ ಎಂದರೆ ಅವರು ಅಪ್ರೆಸಿಯೇಷನ್‌ ಬಯಸುತ್ತಿದ್ದಾರೆ. ಅವರನ್ನು ಬಲೆಗೆ ಹಾಕಿಕೊಳ್ಳುವುದು ಸುಲಭ ಎಂದು ಆತ ಸಂಶೋಧನೆ ಮಾಡಿದ್ದ. ಹಾಗೆ ಫೋಟೊ ಕಂಡ ಕೂಡಲೇ ನಕಲಿ ಅಕೌಂಟ್‌ನಿಂದ ಅವರಿಗೆ ಕನೆಕ್ಟ್‌ ಅಗುತ್ತಿದ್ದ. ಮೊದಲು ಫ್ರೆಂಡ್‌ ರಿಕ್ವೆಸ್ಟ್‌ ಕಳುಹಿಸುತ್ತಿದ್ದ. ಒಮ್ಮೆ ಕನೆಕ್ಟ್‌ ಆದ ಕೂಡಲೇ ಗುಡ್‌ ಮಾರ್ನಿಂಗ್‌, ಗುಡ್‌ನೈಟ್‌ ಮೆಸೇಜ್‌ ಕಳುಹಿಸುತ್ತಿದ್ದ. ಫೋಟೊಗಳ ಗುಣಗಾನ ಮಾಡುತ್ತಿದ್ದ.

Blackmailer arrested

ಇದನ್ನೂ ಓದಿ: Fraud Case : ಚೀಟಿ ಕಟ್ಟಿಸಿಕೊಂಡು ಕೋಟಿಗಟ್ಟಲೆ ಚೀಟಿಂಗ್ ಮಾಡಿದ ಖತರ್ನಾಕ್‌ ಫ್ಯಾಮಿಲಿ

ಒಮ್ಮೆ ಮಾತಿಗೆ ಶುರುವಾಯಿತು ಎಂದರೆ ಹೆಣ್ಮಕ್ಕಳ ಸ್ವಾತಂತ್ಯದ ಬಗ್ಗೆ, ಗಂಡಸರ ದೌರ್ಜನ್ಯದ ಬಗ್ಗೆ ಮಾತನಾಡುತ್ತಿದ್ದ. ಆಗ ಹೆಣ್ಮಕ್ಕಗಳು ಓಪನ್‌ ಅಪ್‌ ಆಗುತ್ತಾರೆ ಅನ್ನೋದನ್ನು ಅವನು ಕಂಡುಕೊಂಡಿದ್ದ. ಎಲ್ಲ ಹೆಂಗಸರು ಅಷ್ಟು ಸುಲಭದಲ್ಲಿ ಸಿಗುವುದಿಲ್ಲ ಎನ್ನುವುದು ಕೂಡಾ ಅವನಿಗೆ ಗೊತ್ತಿತ್ತು. ಹಾಗಾಗಿ ಯಾರು ಮಾತಿಗೆ ಮರುಳಾಗುತ್ತಾರೋ ಅವರ ಜತೆ ಸಲುಗೆ ಮುಂದುವರಿಸುತ್ತಿದ್ದ!

ಹೀಗೆ ಆತ್ಮೀಯತೆ, ಸಾಂತ್ವನದ ಮೂಲಕ ಅವರ ಸ್ನೇಹ ಸಂಪಾದಿಸುತ್ತಿದ್ದ ಆತ ಫ್ರೆಂಡ್‌ ಆಗಿಬಿಡುತ್ತಿದ್ದ. ಬಳಿಕ ಮೀಟ್‌ ಆಗೋಣ ಅನ್ನುತ್ತಿದ್ದ. ಅದರ ನಡುವೆ ಮಾತಿನಲ್ಲಿ Textನಲ್ಲಿ ಕೆರಳಿಸೋ ಆಟ ನಡೆಯುತ್ತಿತ್ತು. ಅದಕ್ಕೆ ಪೂರಕವಾಗಿ ಸ್ಪಂದಿಸುವವರನ್ನೇ ಅವನು ಕರೆಯುತ್ತಿದ್ದ. ಹಾಗೆ ಬಂದವರನ್ನು ತನ್ನ ಖಾಸಗಿ ಜಾಗಕ್ಕೆ ಕರೆದುಕೊಂಡು ಹೋಗಿ ಸರಸದಾಟ ಆಡುತ್ತಿದ್ದ.

ಅಲ್ಲಿನ ಚಟುವಟಿಕೆಗಳನ್ನೆಲ್ಲ ಸರಿಯಾಗಿ, ಯಾರಿಗೂ ಗೊತ್ತಾಗದಂತೆ ರೆಕಾರ್ಡ್‌ ಮಾಡಿಕೊಳ್ಳುತ್ತಿದ್ದ. ತನ್ನ ಕೆಲಸ ಮುಗಿಸಿ ಅವರನ್ನು ಬೀಳ್ಕೊಡುತ್ತಿದ್ದ. ಕೆಲವರು ಆಮೇಲೆ ನಿರಂತರವಾಗಿ ಸಂಪರ್ಕದಲ್ಲಿರುತ್ತಿದ್ದರೆ ಮತ್ತೆ ಕೆಲವರು ಇನ್ನು ಸಾಕು ಅನ್ನುತ್ತಿದ್ದರು. ಅಂಥವರಿಗೆಲ್ಲ ತಾನು ಮಾಡಿಟ್ಟುಕೊಂಡ ವಿಡಿಯೊವನ್ನು ಕಳುಹಿಸಿ ಬಾರದೆ ಇದ್ದರೆ ವೈರಲ್‌ ಮಾಡುತ್ತೇನೆ ಎಂದು ತಣ್ಣಗೆ ಹೆದರಿಸುತ್ತಿದ್ದ. ಕೆಲವು ಕಾಲ ದೈಹಿಕ ಕಾಮನೆಗಳನ್ನು ಈಡೇರಿಸಿಕೊಂಡ ಬಳಿಕ ಶುರುವಾಗುತ್ತಿದ್ದುದೇ ನಿಜವಾದ ಅಸಲಿ ಆಟ. ಹೌದು, ಅವನು ಆಮೇಲೆ ಹಣಕ್ಕಾಗಿ ಬೇಡಿಕೆ ಇಡಲು ಶುರು ಮಾಡುತ್ತಿದ್ದ!

ನಾನು ಇನ್ನು ಮುಂದೆ ನೀನು ಕರೆದಲ್ಲಿಗೆ ಬರಲ್ಲ, ಹಣಾನೂ ಕೊಡಲ್ಲ ಎಂದು ಯಾರಾದರೂ ಹೇಳಿದರೆ ಅವರ ವಿಡಿಯೊಗಳನ್ನು ಅವರಿಗೇ ಕಳುಹಿಸಿ, ಇದನ್ನು ಗಂಡನಿಗೆ ಕಳುಹಿಸುತ್ತೇನೆ, ಫ್ರೆಂಡ್ಸ್‌ಗೆ ಹೇಳುತ್ತೇನೆ ಎಂದು ಬೆದರಿಸುತ್ತಿದ್ದ. ಸಾಕಷ್ಟು ಮಹಿಳೆಯರು ಈತನ ಈ ಜಾಲಕ್ಕೆ ಸಿಲುಕಿ ಮಾನ ಮತ್ತು ಹಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಕೊನೆಗೂ ಸಿಕ್ಕಿಬಿದ್ದ ಕಾಮುಕ

ಇದೀಗ ಎಚ್‌ಎಸ್‌ಆರ್ ಬಡಾವಣೆಯ ಮಹಿಳೆಯೊಬ್ಬರು ಈತನ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅದೇ ಮಹಿಳೆಯ ಮೂಲಕ ಅವನಿಗೆ ಒಂದು ಮೆಸೇಜ್‌ ಕಳುಹಿಸಿದ್ದಾರೆ. ಎಲ್ಲಿಗೆ ಬರಬೇಕು ಹೇಳು ಎಂದು ಕೇಳಿದ್ದಾರೆ.

ಆಗ ಈ ಕಾಮುಕ ಆಕೆಯನ್ನು ಚೆನ್ನೈನ ಒಂದು ಲಾಡ್ಜ್‌ಗೆ ಬರುವುದಕ್ಕೆ ಹೇಳಿದ್ದಾನೆ. ಮಹಿಳೆ ಬರುತ್ತಾಳೆ ಎಂದು ಕಾದು ಕೂತಿದ್ದವನಿಗೆ ಎದುರಾಗಿದ್ದು ಬೆಂಗಳೂರು ಪೊಲೀಸ್‌. ಇದೀಗ ಪೊಲೀಸರು ಆತನನ್ನು ಹಿಡಿದು ಕಟ್ಟಿಹಾಕಿಕೊಂಡು ಬೆಂಗಳೂರಿಗೆ ಬಂದಿದ್ದಾರೆ. ಆತನ ಮೊಬೈಲ್‌ ಚೆಕ್‌ ಮಾಡುವಾಗ ಇನ್ನೂ ಹಲವರಿಗೆ ಆತ ಬ್ಲ್ಯಾಕ್‌ಮೇಲ್‌ ಮಾಡಿದ್ದು ಬಯಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading
Advertisement
Latest18 hours ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest18 hours ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

Latest2 days ago

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

Latest2 days ago

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

Latest2 days ago

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

Latest3 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

Latest3 days ago

ಕೇರಳಂ: ಯುಡಿಎಫ್‌ ಗೆಲುವಿನ ಹಿಂದಿನ ಏಳು ರಣತಂತ್ರ!

Latest3 days ago

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

Latest3 days ago

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

Latest3 days ago

ದ್ರಾವಿಡ ನಾಡಲ್ಲಿ ʼದಳಪತಿʼ ಯುಗಾರಂಭ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌