ಸಮವಸ್ತ್ರದಲ್ಲೇ ನೇಣು ಬಿಗಿದುಕೊಂಡ ಬಿಎಂಟಿಸಿ ನೌಕರ: ಡಿಪೋ ಮ್ಯಾನೇಜರ್‌ ಕಿರುಕುಳ ಆರೋಪ - Vistara News

ಕರ್ನಾಟಕ

ಸಮವಸ್ತ್ರದಲ್ಲೇ ನೇಣು ಬಿಗಿದುಕೊಂಡ ಬಿಎಂಟಿಸಿ ನೌಕರ: ಡಿಪೋ ಮ್ಯಾನೇಜರ್‌ ಕಿರುಕುಳ ಆರೋಪ

ಬಿಎಂಟಿಸಿಯ ನೌಕರರೊಬ್ಬರು ತಾವು ಕರ್ತವ್ಯದಲ್ಲಿದ್ದಾಗಲೇ, ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಮಾನಸಿಕ ಕಿರುಕುಳದಿಂದ ಅವರು ನೊಂದಿದ್ದಾರೆ ಎನ್ನಲಾಗಿದೆ.

VISTARANEWS.COM


on

bjp
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಎಂಟಸಿಯ ನೌಕರರೊಬ್ಬರು ಡಿಪೋ ಆವರಣದಲ್ಲಿ ಸಮವಸ್ತ್ರದಲ್ಲೇ ನೇಣಿಗೆ ಶರಣಾಗಿದ್ದಾರೆ. ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಅವರು ಈ ಕೃತ್ಯ ನಡೆಸಿದ್ದಾರೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ.

ಆರ್‌ಆರ್‌ ನಗರ ಡಿಪೋದಲ್ಲಿ ನೌಕರರಾಗಿರುವ ಬಸವಪ್ಪ ಎಂಬವರೇ ಹೀಗೆ ಸಾವಿಗೆ ಶರಣಾದವರು. ಅವರು ಅದೇ ಡಿಪೋದ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ. ಸೋಮವಾರ ಕರ್ತವ್ಯಕ್ಕೆ ಬಂದಿದ್ದ ಅವರು ಆವರಣದಲ್ಲೇ ಇರುವ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಅವರು ಖಾಕಿ ಸಮವಸ್ತ್ರದಲ್ಲೇ ಜೀವ ಕಳೆದುಕೊಂಡಿರುವುದು ಮನ ಕಲಕಿದೆ.

ಬಸವಪ್ಪ ಅವರು ಕಳೆದ ಹಲವು ವರ್ಷಗಳಿಂದ ಬಿಎಂಟಿಸಿಯಲ್ಲಿ ಉದ್ಯೋಗಿಯಾಗಿದ್ದಾರೆ. ಇವರು ಡಿಪೋ ಮ್ಯಾನೇಜರ್‌ ಅವರ ಕಿರುಕುಳದಿಂದ ನೊಂದಿದ್ದರು ಎನ್ನಲಾಗಿದೆ. ಇದರಿಂದಲೇ ಬೇಸತ್ತು ಪ್ರಾಣ ಕಳೆದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಅವರು

ಕರ್ತವ್ಯದಲ್ಲಿ ಇದ್ದಾಗಲೇ ಇಲಾಖಾ ಸಮವಸ್ತ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಮಾನವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಲಾಗಿದೆ. ಆರ್ ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Hassan Pen Drive Case: ಪ್ರಜ್ವಲ್‌, ರೇವಣ್ಣ ಹಾಗೆ ಮಾಡಿಯೇ ಇಲ್ಲ ಎಂದ ದೂರುದಾರೆಯ ಅತ್ತೆ!

Hassan Pen Drive Case: ರೇವಣ್ಣ ಕುಟುಂಬ ತಮ್ಮ ಮೇಲೆ ಯಾವುದೇ ರೀತಿಯ ದೌರ್ಜನ್ಯ ಮಾಡಿಲ್ಲ ಎಂದು ದೂರುದಾರೆಯ ಸಂಬಂಧಿಕರು ಹಾಸನದಲ್ಲಿ ಹೇಳಿದ್ದಾರೆ.

VISTARANEWS.COM


on

Hassan Pen drive case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಎಸಗಿದ್ದಾರೆ (Hassan Pen Drive Case) ಎಂದು ಆರೋಪಿಸಿ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಮಾಜಿ ಸಚಿವ ಎಚ್‌.ಡಿ.ರೇವಣ್ಣ ವಿರುದ್ಧ ಅವರ ಮನೆ ಕೆಲಸದಾಕೆಯೇ ದೂರು ನೀಡಿದ್ದಾಳೆ. ಇದರಿಂದ ತಂದೆ-ಮಗನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ರೇವಣ್ಣ ಕುಟುಂಬ ತಮ್ಮ ಮೇಲೆ ಯಾವುದೇ ರೀತಿಯ ದೌರ್ಜನ್ಯ ಮಾಡಿಲ್ಲ ಎಂದು ದೂರುದಾರೆಯ ಸಂಬಂಧಿಕರು ಹೇಳಿರುವುದು ಕಂಡುಬಂದಿದೆ.

ಹಾಸನ ಅಶ್ಲೀಲ ವಿಡಿಯೊ ಪ್ರಕರಣದ ಬಗ್ಗೆ ದೂರುದಾರೆಯ ಅತ್ತೆ ಗೌರಮ್ಮ ಸುದ್ದಿಗೋಷ್ಠಿ ನಡೆಸಿದ್ದು, ದೂರುದಾರೆಗೆ ಭವಾನಿ ರೇವಣ್ಣನವರೇ ಸಹಾಯ ಮಾಡಿ ಕೆಲಸ ಕೊಡಿಸಿದ್ದರು. ರೇವಣ್ಣನವರ ಕುಟುಂಬ ನಮ್ಮ ಮೇಲೆ ಯಾವುದೇ ದೌರ್ಜನ್ಯ ಮಾಡಿಲ್ಲ. ದೂರುದಾರೆಯನ್ನು ಕರೆದುಕೊಂಡು ಹೋಗಿ ಇರಿಸಿಕೊಳ್ಳಿ ಎಂದು ನಾವೇ ಭವಾನಿ ಅಮ್ಮನವರಿಗೆ ಹೇಳಿದ್ದೆವು. ಅವರು ಯಾವ ದೌರ್ಜನ್ಯವೂ ಮಾಡಿಲ್ಲ ಎಂದು ತಿಳಿಸಿದ್ದಾರೆ.

ರೇವಣ್ಣ ಅವರ ಮನೆಯಲ್ಲಿ ಮಹಿಳೆಯನ್ನು ನಾಲ್ಕು ವರ್ಷ ಕೆಲಸಕ್ಕೆ ಇರಿಸಿಕೊಂಡಿದ್ದರು ಮತ್ತೆ ನಾನು ಅಲ್ಲಿ ಇರೋದಿಲ್ಲ ಅಂತ ಆಕೆ ಹೇಳಿದ್ದಳು. ಐದು ವರ್ಷದಿಂದ ಸಮಸ್ಯೆ ಇಲ್ಲದೇ, ಈಗ ಯಾಕೆ ದೂರು ಕೊಟ್ಟಳು. ಅವರು ಯಾವುದೇ ದೌರ್ಜನ್ಯವೂ ಮಾಡಿಲ್ಲ. ಯಾರದೋ ಒತ್ತಡದಿಂದ ಮಹಿಳೆ ದೂರು ಕೊಟ್ಟಿದ್ದಾಳೆ. ಭವಾನಿ ರೇವಣ್ಣ ನಮಗೆ ಎಲ್ಲಾ ರೀತಿಯ ಸಹಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ.

ದೂರುದಾರೆ ಸಾಲ ಮಾಡಿಕೊಂಡಿದ್ದಾಗ, ಭವಾನಿ ರೇವಣ್ಣನವರೇ ಅವರಿಗೆ ಸಹಾಯ ಮಾಡಿ ಕೆಲಸ ಕೊಡಿಸಿದ್ದರು. ಚುನಾವಣೆ ಸಂದರ್ಭದಲ್ಲಿ ರೇವಣ್ಣನವರ ಕುಟುಂಬಕ್ಕೆ ಕೆಟ್ಟ ಹೆಸರು ತರಲು ಈ‌ ರೀತಿ ಮಾಡಿದ್ದಾರೆ. ಹೊಳೆನರಸೀಪುರ ನಗರ ಠಾಣೆಯಲ್ಲಿ ದೂರು ದಾಖಲಾಗಿರುವುದರಲ್ಲಿ ಸತ್ಯವಿಲ್ಲ. ರೇವಣ್ಣನವರ ಮನೆಯಲ್ಲಿ ಯಾರೂ ಕೂಡ ಹಿಂಸೆ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಯಾವುದೋ ಒತ್ತಡಕ್ಕೆ ಸಿಲುಕಿ ದೂರುದಾರೆ ಈ ರೀತಿ ಮಾತನಾಡುತ್ತಿದ್ದಾಳೆ. ಸರಿಯಾದ ಹೆಂಗಸಾಗಿದ್ದರೆ ಐದು ವರ್ಷದ ಹಿಂದೆಯೇ ಪ್ರಶ್ನೆ ಮಾಡಬೇಕಿತ್ತು. ಅಲ್ಲಿಂದ ಇಲ್ಲಿಯವರೆಗೂ ಯಾವುದೇ ವಿಚಾರ ಪ್ರಸ್ತಾಪ ಮಾಡಿಲ್ಲ. ಈಗ ಯಾವುದೋ ದುರುದ್ದೇಶ ಮತ್ತು ಒತ್ತಡದಿಂದ ಈ ರೀತಿ‌ ಮಾಡಿದ್ದಾರೆ. ಅವರ ದೂರಿನಲ್ಲಿ ಯಾವುದೇ ಸತ್ಯವಿಲ್ಲ, ಸರಿಯಾದ ರೀತಿ ತನಿಖೆ ಆಗಬೇಕು. ಪ್ರಕರಣದಿಂದ ನಮ್ಮ ಹಾಗೂ ರೇವಣ್ಣನವರ ಸಂಬಂಧ ಹಾಳಾಗುವ ಹಾಗೆ ಆಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

Prajwal Revanna Hassan Pen Drive Case What will SIT probe look like

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಜ್ಯ ಸರ್ಕಾರದಿಂದ ರಚನೆಯಾಗಿರುವ ಎಸ್‌ಐಟಿಯಿಂದ ಹೇಗೆ ಸಾಗಲಿದೆ? ಪ್ರಜ್ವಲ್‌ ಮುಂದಿರುವ ಕಾನೂನು ಅವಕಾಶಗಳೇನು ಎಂಬ ಬಗ್ಗೆ ಈಗ ಬಹುವಾಗಿ ಚರ್ಚೆಯಾಗುತ್ತಿದೆ.

ಇದು ಹೈಪ್ರೊಫೈಲ್‌ ಕೇಸ್‌ ಆಗಿದ್ದಲ್ಲದೆ, ಮಹಿಳೆಯರ ಮಾನ, ಮರ್ಯಾದೆಯ ವಿಚಾರವಾಗಿದೆ. ಜತೆಗೆ ದೂರುದಾರರ ರಕ್ಷಣೆಗೂ ಸಂಬಂಧಪಟ್ಟಿದೆ. ಈ ಕಾರಣದಿಂದಾಗಿ ಗೌಪ್ಯತೆಯಿಂದ ಸಂತ್ರಸ್ತೆಯಿಂದ ಸಿಆರ್‌ಪಿಸಿ 164 ಹೇಳಿಕೆಯನ್ನು ದಾಖಲು ಮಾಡಲಾಗುತ್ತದೆ. ಮಹಿಳಾ ಅಧಿಕಾರಿಗಳ ಸಮ್ಮುಖದಲ್ಲಿ ವಿಡಿಯೊ ರೆಕಾರ್ಡ್ ಮಾಡಿಕೊಳ್ಳುವ ಮೂಲಕ ಸಂತ್ರಸ್ತೆಯ ದೂರನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಇನ್ನು ದೂರುದಾರೆ ತನ್ನ ಮೇಲೆ ನಡೆದ ಲೈಂಗಿ ದೌರ್ಜನ್ಯದ ಸ್ಥಳವನ್ನೂ ಮಹಜರು ಮಾಡಲಾಗುತ್ತದೆ. ಹೀಗಾಗಿ ಘಟನೆ ನಡೆದ ಸ್ಥಳಕ್ಕೆ ವಿಶೇಷ ತನಿಖಾ ದಳದ ಅಧಿಕಾರಿಗಳು ಬಂದು ಸಂತ್ರಸ್ತೆ ಹೇಳಿದ ರೀತಿ ಸ್ಥಳ ಇದೆಯೇ ಎಂಬುದನ್ನು ಪರಿಶೀಲನೆ ನಡೆಸುತ್ತಾರೆ.

ಇನ್ನು ಆರೋಪಿತ ಸ್ಥಾನದಲ್ಲಿರುವ ವ್ಯಕ್ತಿಯ ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗುತ್ತದೆ. ಅದರಲ್ಲಿ ಇರುವಂಥ ಡಾಟ ರೀಟ್ರೈವ್‌ ಮಾಡಲಾಗುತ್ತದೆ. ಜತೆಗೆ ಕಾಲ್ ಡಿಟೇಲ್ಸ್‌, ವಿಡಿಯೊ ಕಾಲ್ ಮಾಹಿತಿ ಸೇರಿದಂತೆ ಎಲ್ಲವನ್ನೂ ಕಲೆ ಹಾಕಲಾಗುತ್ತದೆ. ನಂತರ ಕಲೆ ಹಾಕಿದ ಟೆಕ್ನಿಕಲ್ ಎವಿಡೆನ್ಸ್‌ಗಳ ಸಹಿತ ಇನ್ನಿತರ ಸಾಕ್ಷ್ಯಗಳನ್ನು ಎಫ್‌ಎಸ್ಎಲ್‌ಗೆ ರವಾನೆ ಮಾಡಲಾಗುತ್ತದೆ. ಎಫ್.ಎಸ್.ಎಲ್ ವರದಿ ಆಧಾರದ ಮೇಲೆ ತನಿಖೆ ಹಾಗೂ ವಿಚಾರಣೆ ಆರಂಭವಾಗುತ್ತದೆ.

ಆದರೆ, ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಅವರನ್ನು ವಿದೇಶದಿಂದ ಕರೆ ತರುವ ಪ್ರಕ್ರಿಯೆಗೆ ಚಾಲನೆ ನೀಡಬೇಕಾಗುತ್ತದೆ. ಮೊದಲು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್‌ ನೀಡಿ ಕಾಲಾವಕಾಶವನ್ನು ನಿಗದಿ ಮಾಡಬಹುದು. ಅದಾದ ಬಳಿಕವೂ ಹಾಜರಾಗದೇ ಇದ್ದರೆ ಪ್ರಕರಣದ ತನಿಖೆಯ ಗತಿ ಕುಂಠಿತವಾಗುತ್ತದೆ. ಆದರೆ, ಎಸ್‌ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗಿ ಕರೆತರುವ ಸಾಧ್ಯತೆಯೂ ಇದೆ. ಈ ವಿಚಾರವಾಗಿ ಎಸ್‌ಐಟಿ ಯಾವ ತೀರ್ಮಾನವನ್ನು ತೆಗೆದುಕೊಳ್ಳುತ್ತದೆ ಎಂಬುದರ ಮೇಲೆ ಎಲ್ಲವೂ ನಿರ್ಣಯವಾಗುತ್ತದೆ.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಪ್ರಜ್ವಲ್ ರೇವಣ್ಣಗೆ ಇರುವ ಕಾನೂನು ಅವಕಾಶಗಳು?

ಹಾಗಾದರೆ ಈ ಪ್ರಕರಣದಿಂದ ಪಾರಾಗಲು ಪ್ರಜ್ವಲ್‌ ರೇವಣ್ಣ ಅವರಿಗೆ ಕಾನೂನಿನಲ್ಲಿ ಯಾವ ಅವಕಾಶ ಇದೆ ಎಂಬುದನ್ನು ನೋಡುವುದಾದರೆ, ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಬಹುದು. ಅಥವಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಬೇಕು. ಏಳು ವರ್ಷದ ಒಳಗೆ ಶಿಕ್ಷೆ ಇರುವಂತಹ ಪ್ರಕರಣಗಳಿಗೆ ನೋಟಿಸ್‌ ನೀಡಬಹುದು. ಬಂಧನ ಮಾಡಿದರೂ ಜಾಮೀನು ಸಿಗುವಂತಹ ಪ್ರಕರಣ ಇದಾಗಿದ್ದರಿಂದ ಸದ್ಯ ನಿರೀಕ್ಷಣಾ ಜಾಮೀನು ಹಾಗೂ ಎಫ್‌ಐಆರ್ ಅನ್ನೇ ರದ್ದು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಬಹುದಾಗಿದೆ.

Continue Reading

ಕ್ರೈಂ

Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

Hassan Pen Drive Case: ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಅವರನ್ನು ವಿದೇಶದಿಂದ ಕರೆ ತರುವ ಪ್ರಕ್ರಿಯೆಗೆ ಚಾಲನೆ ನೀಡಬೇಕಾಗುತ್ತದೆ. ಮೊದಲು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್‌ ನೀಡಿ ಕಾಲಾವಕಾಶವನ್ನು ನಿಗದಿ ಮಾಡಬಹುದು. ಅದಾದ ಬಳಿಕವೂ ಹಾಜರಾಗದೇ ಇದ್ದರೆ ಪ್ರಕರಣದ ತನಿಖೆಯ ಗತಿ ಕುಂಠಿತವಾಗುತ್ತದೆ. ಆದರೆ, ಎಸ್‌ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗಿ ಕರೆತರುವ ಸಾಧ್ಯತೆಯೂ ಇದೆ.

VISTARANEWS.COM


on

Prajwal Revanna Hassan Pen Drive Case What will SIT probe look like
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಜ್ಯ ಸರ್ಕಾರದಿಂದ ರಚನೆಯಾಗಿರುವ ಎಸ್‌ಐಟಿಯಿಂದ ಹೇಗೆ ಸಾಗಲಿದೆ? ಪ್ರಜ್ವಲ್‌ ಮುಂದಿರುವ ಕಾನೂನು ಅವಕಾಶಗಳೇನು ಎಂಬ ಬಗ್ಗೆ ಈಗ ಬಹುವಾಗಿ ಚರ್ಚೆಯಾಗುತ್ತಿದೆ.

ಇದು ಹೈಪ್ರೊಫೈಲ್‌ ಕೇಸ್‌ ಆಗಿದ್ದಲ್ಲದೆ, ಮಹಿಳೆಯರ ಮಾನ, ಮರ್ಯಾದೆಯ ವಿಚಾರವಾಗಿದೆ. ಜತೆಗೆ ದೂರುದಾರರ ರಕ್ಷಣೆಗೂ ಸಂಬಂಧಪಟ್ಟಿದೆ. ಈ ಕಾರಣದಿಂದಾಗಿ ಗೌಪ್ಯತೆಯಿಂದ ಸಂತ್ರಸ್ತೆಯಿಂದ ಸಿಆರ್‌ಪಿಸಿ 164 ಹೇಳಿಕೆಯನ್ನು ದಾಖಲು ಮಾಡಲಾಗುತ್ತದೆ. ಮಹಿಳಾ ಅಧಿಕಾರಿಗಳ ಸಮ್ಮುಖದಲ್ಲಿ ವಿಡಿಯೊ ರೆಕಾರ್ಡ್ ಮಾಡಿಕೊಳ್ಳುವ ಮೂಲಕ ಸಂತ್ರಸ್ತೆಯ ದೂರನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಇನ್ನು ದೂರುದಾರೆ ತನ್ನ ಮೇಲೆ ನಡೆದ ಲೈಂಗಿ ದೌರ್ಜನ್ಯದ ಸ್ಥಳವನ್ನೂ ಮಹಜರು ಮಾಡಲಾಗುತ್ತದೆ. ಹೀಗಾಗಿ ಘಟನೆ ನಡೆದ ಸ್ಥಳಕ್ಕೆ ವಿಶೇಷ ತನಿಖಾ ದಳದ ಅಧಿಕಾರಿಗಳು ಬಂದು ಸಂತ್ರಸ್ತೆ ಹೇಳಿದ ರೀತಿ ಸ್ಥಳ ಇದೆಯೇ ಎಂಬುದನ್ನು ಪರಿಶೀಲನೆ ನಡೆಸುತ್ತಾರೆ.

ಇನ್ನು ಆರೋಪಿತ ಸ್ಥಾನದಲ್ಲಿರುವ ವ್ಯಕ್ತಿಯ ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗುತ್ತದೆ. ಅದರಲ್ಲಿ ಇರುವಂಥ ಡಾಟ ರೀಟ್ರೈವ್‌ ಮಾಡಲಾಗುತ್ತದೆ. ಜತೆಗೆ ಕಾಲ್ ಡಿಟೇಲ್ಸ್‌, ವಿಡಿಯೊ ಕಾಲ್ ಮಾಹಿತಿ ಸೇರಿದಂತೆ ಎಲ್ಲವನ್ನೂ ಕಲೆ ಹಾಕಲಾಗುತ್ತದೆ. ನಂತರ ಕಲೆ ಹಾಕಿದ ಟೆಕ್ನಿಕಲ್ ಎವಿಡೆನ್ಸ್‌ಗಳ ಸಹಿತ ಇನ್ನಿತರ ಸಾಕ್ಷ್ಯಗಳನ್ನು ಎಫ್‌ಎಸ್ಎಲ್‌ಗೆ ರವಾನೆ ಮಾಡಲಾಗುತ್ತದೆ. ಎಫ್.ಎಸ್.ಎಲ್ ವರದಿ ಆಧಾರದ ಮೇಲೆ ತನಿಖೆ ಹಾಗೂ ವಿಚಾರಣೆ ಆರಂಭವಾಗುತ್ತದೆ.

ಆದರೆ, ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಅವರನ್ನು ವಿದೇಶದಿಂದ ಕರೆ ತರುವ ಪ್ರಕ್ರಿಯೆಗೆ ಚಾಲನೆ ನೀಡಬೇಕಾಗುತ್ತದೆ. ಮೊದಲು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್‌ ನೀಡಿ ಕಾಲಾವಕಾಶವನ್ನು ನಿಗದಿ ಮಾಡಬಹುದು. ಅದಾದ ಬಳಿಕವೂ ಹಾಜರಾಗದೇ ಇದ್ದರೆ ಪ್ರಕರಣದ ತನಿಖೆಯ ಗತಿ ಕುಂಠಿತವಾಗುತ್ತದೆ. ಆದರೆ, ಎಸ್‌ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗಿ ಕರೆತರುವ ಸಾಧ್ಯತೆಯೂ ಇದೆ. ಈ ವಿಚಾರವಾಗಿ ಎಸ್‌ಐಟಿ ಯಾವ ತೀರ್ಮಾನವನ್ನು ತೆಗೆದುಕೊಳ್ಳುತ್ತದೆ ಎಂಬುದರ ಮೇಲೆ ಎಲ್ಲವೂ ನಿರ್ಣಯವಾಗುತ್ತದೆ.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಪ್ರಜ್ವಲ್ ರೇವಣ್ಣಗೆ ಇರುವ ಕಾನೂನು ಅವಕಾಶಗಳು?

ಹಾಗಾದರೆ ಈ ಪ್ರಕರಣದಿಂದ ಪಾರಾಗಲು ಪ್ರಜ್ವಲ್‌ ರೇವಣ್ಣ ಅವರಿಗೆ ಕಾನೂನಿನಲ್ಲಿ ಯಾವ ಅವಕಾಶ ಇದೆ ಎಂಬುದನ್ನು ನೋಡುವುದಾದರೆ, ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಬಹುದು. ಅಥವಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಬೇಕು. ಏಳು ವರ್ಷದ ಒಳಗೆ ಶಿಕ್ಷೆ ಇರುವಂತಹ ಪ್ರಕರಣಗಳಿಗೆ ನೋಟಿಸ್‌ ನೀಡಬಹುದು. ಬಂಧನ ಮಾಡಿದರೂ ಜಾಮೀನು ಸಿಗುವಂತಹ ಪ್ರಕರಣ ಇದಾಗಿದ್ದರಿಂದ ಸದ್ಯ ನಿರೀಕ್ಷಣಾ ಜಾಮೀನು ಹಾಗೂ ಎಫ್‌ಐಆರ್ ಅನ್ನೇ ರದ್ದು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಬಹುದಾಗಿದೆ.

Continue Reading

ಕರ್ನಾಟಕ

Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಬೆಂಗಳೂರಿನ ಐವರು ಪ್ರವಾಸಿಗರ ಸಾವು

Drown in Mekedatu: ಮೇಕೆದಾಟು ಬಳಿ ನೀರಲ್ಲಿ ಈಜಲು ಹೋಗಿದ್ದ ಬೆಂಗಳೂರು ಮೂಲದ ಮೂವರು ಯುವಕರು, ಇಬ್ಬರು ಯುವತಿಯರು ನೀರುಪಾಲಾಗಿದ್ದಾರೆ.

VISTARANEWS.COM


on

Drown in Mekedatu
Koo

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟು ಬಳಿ ಈಜಲು ಹೋಗಿದ್ದ ಐವರು ಪ್ರವಾಸಿಗರು ದಾರುಣವಾಗಿ ಮೃತಪಟ್ಟಿರುವ ಘಟನೆ (Drown in Mekedatu) ಸೋಮವಾರ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು, ಇಬ್ಬರು ಯುವತಿಯರು ನೀರಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ.

ರಾಜಾಜಿನಗರ 2ನೇ ಹಂತದ ಕೆಎಲ್ಇ ಕಾಲೇಜಿನ ವರ್ಷ (20), ಬಿಹಾರ ಮೂಲದ ಮಲ್ಲೇಶ್ವರ ಸರ್ಕಾರಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ಅಭಿಷೇಕ್ (20), ಮಂಡ್ಯ ಮೂಲದ ಚಿಕ್ಕಬಾಣಾವರ ಆರ್.ಆರ್ ಕಾಲೇಜಿನ 2ನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಅರ್ಪಿತಾ ಎನ್.ಎಲ್, ಚಿತ್ರದುರ್ಗ ಮೂಲದ ವಿಜಯನಗರ ಸರ್ಕಾರಿ ಪದವಿ ಕಾಲೇಜಿನ ಬಿಸಿಎ 2ನೇ ವರ್ಷದ ವಿದ್ಯಾರ್ಥಿ ತೇಜಸ್ (21), ಆರ್.ಆರ್ ನಗರದ ಕೆಎಲ್ಇ ಕಾಲೇಜಿನ ನೇಹಾ (19) ಮೃತರು.

5 ಜನರ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರಕ್ಕೆ ತೆಗೆದಿದ್ದಾರೆ. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಅರಣ್ಯಾಧಿಗಳು ಹಾಗೂ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ದಯಾನಂದ ವಿದ್ಯಾಸಾಗರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಾವೇರಿ ನದಿ ದಾಟುವಾಗ ಕಾಲುಜಾರಿ ನೀರಿಗೆ ಬಿದ್ದು ಐವರು ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಒಟ್ಟು 12 ಕಾಲೇಜು ವಿದ್ಯಾರ್ಥಿಗಳು ಟಿಟಿ ವಾಹನದಲ್ಲಿ ಮೇಕೆದಾಟು ನೋಡಲು ಹೋಗಿದ್ದರು. ಸಂಗಮದಲ್ಲಿ ಕೈ ಹಿಡಿದು ಮತ್ತೊಂದು ದಡಕ್ಕೆ ಹೋಗುವಾಗ ದುರ್ಘಟನೆ ನಡೆದಿದೆ.

ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗಳು ಸಾವು

ಕೋಲಾರ: ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಗ್ರಾಮದ ವೃಷಭಾವತಿ ಕರೆಯಲ್ಲಿ ನಡೆದಿದೆ. ಮಜರಾಗೊಲ್ಲಹಳ್ಳಿ ಗ್ರಾಮದಲ್ಲಿ ಮದುವೆ ಕಾರ್ಯಕ್ರಮಕ್ಕೆಂದು ಬಂದಿದ್ದ ತಂದೆ-ಮಗಳು, ಕೆರೆ ಬಳಿ ಸೆಲ್ಫಿ ತೆಗದುಕೊಳ್ಳಲು ಹೋದಾಗ, ಮಗಳು ಕಾಲು ಜಾರಿ ನೀರಗೆ ಬಿದ್ದಿದ್ದಾಳೆ. ಹೀಗಾಗಿ ಮಗಳನ್ನು ರಕ್ಷಿಸಲು ಹೋದ ತಂದೆಯೂ ಮುಳುಗಿದ್ದಾರೆ

ಬೆಂಗಳೂರು ಮೂಲದ ಸಯ್ಯದ್ ಅಯ್ಯೂಬ್ (35) ಹಾಗೂ ಫಾತಿಮಾ (10) ಮೃತ ತಂದೆ, ಮಗಳು. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ | Physical Abuse: ಮದುವೆಗೊಪ್ಪದ ಬಾಲಕಿಯ ಅತ್ಯಾಚಾರ; ಕೆನ್ನೆಯ ಮೇಲೆ ಬಿಸಿ ಕಬ್ಬಿಣದಿಂದ ಪಾಗಲ್‌ ಪ್ರೇಮಿ ಹೆಸರು!

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

ಹುಬ್ಬಳ್ಳಿ: ನೇಹಾ ಹಿರೇಮಠ್‌ ಹತ್ಯೆ ಪ್ರಕರಣದ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ (Love Jihad Case) ಬೆಳಕಿಗೆ ಬಂದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕರೆತಂದಿದ್ದ ಅನ್ಯಕೋಮಿನ ಯುವಕನಿಗೆ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ | Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

ಹುಬ್ಬಳ್ಳಿಯ ಗಬ್ಬೂರನಲ್ಲಿ ಅನ್ಯಕೋಮಿನ ಯುವಕನ ಜತೆ ಬಾಲಕಿ ಇದ್ದಳು. ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಬಾಲಕಿಯನ್ನು ಯುವಕ ಕರೆತಂದಿದ್ದ. ಗಬ್ಬೂರ ಹೋಟೆಲ್‌ನಲ್ಲಿ ಇದ್ದವನನ್ನು ಗಮನಿಸಿ ಸ್ಥಳೀಯರು ಪೊಲೀಸ್ ಸ್ಟೇಷನ್‌ಗೆ ಕರೆದೊಯ್ದಿದ್ದಾರೆ. ಈ ವೇಳೆ ಹಿಂದು ಜಾಗರಣಾ ವೇದಿಕೆ ಮುಖಂಡರು, ಯುವಕನಿಗೆ ಥಳಿಸಿ, ಹುಬ್ಬಳ್ಳಿಯ ಬೇಂಡಿಗೇರಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅಪ್ರಾಪ್ತ ಬಾಲಕಿ ಕಾಣೆಯಾಗಿರುವ ಕುರಿತು ಕೇಸ್ ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

ಕರ್ನಾಟಕ

S M Krishna: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

S M Krishna: ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಆರೋಗ್ಯದಲ್ಲಿ ಏರುಪೇರಾದ ಕಾರಣ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಅವರು ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

VISTARANEWS.COM


on

S M Krishna
Koo

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (91) (S M Krishna) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಏರ್‌ಪೋರ್ಟ್‌ ರೋಡ್‌ನಲ್ಲಿರುವ (Airport Road) ಮಣಿಪಾಲ್‌ ಆಸ್ಪತ್ರೆಗೆ (Manipal Hospital) ಎಸ್‌.ಎಂ.ಕೃಷ್ಣ ಅವರನ್ನು ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಎಸ್.ಎಂ.ಕೃಷ್ಣ ಅವರು ಕಳೆದ 12 ದಿನಗಳ ಹಿಂದೆಯೇ ವಿಠ್ಠಲ್‌ ಮಲ್ಯ ರಸ್ತೆಯಲ್ಲಿರುವ ವೈದೇಹಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆರೋಗ್ಯದಲ್ಲಿ ತೀವ್ರ ಏರುಪೇರಾದ ಕಾರಣ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಸಾಗಿಸಲಾಯಿತು. ಸದ್ಯ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ವೈದೇಹಿ ಆಸ್ಪತ್ರೆಗೆ ದಾಖಲಾದಾಗ ಎರಡು ದಿನಗಳಲ್ಲೇ ಅವರನ್ನು ಡಿಸ್‌ಚಾರ್ಜ್‌ ಮಾಡಲಾಗುತ್ತದೆ ಎಂಬುದಾಗಿ ವೈದ್ಯರು ತಿಳಿಸಿದ್ದರು. ಆದರೆ, ಚೇತರಿಸಿಕೊಳ್ಳದ ಕಾರಣ ಚಿಕಿತ್ಸೆ ಮುಂದುವರಿಸಲಾಗಿತ್ತು ಎಂದು ತಿಳಿದುಬಂದಿದೆ.

Padma Vibhushan SM Krishna has converted bengaluru as IT city says Dinesh Gooligowda

91 ವರ್ಷ ವಯಸ್ಸಿನ ಎಸ್​.ಎಂ.ಕೃಷ್ಣ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದಿದ್ದಾರೆ. ಮೊದಲು ಕಾಂಗ್ರೆಸ್​ನಲ್ಲಿದ್ದು ಕೇಂದ್ರ ಸಚಿವರು, ಕರ್ನಾಟಕ ಮುಖ್ಯಮಂತ್ರಿಯಾಗಿದ್ದ ಎಸ್​.ಎಂ.ಕೃಷ್ಣ, ನಂತರ ಪಕ್ಷ ತನ್ನನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿ 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಎರಡು ವರ್ಷದ ಹಿಂದೆ ಅವರು ನಾಡಪ್ರಭು ಕೆಂಪೇಗೌಡ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿರುವ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಳೆದ ವರ್ಷ ಎಸ್.ಎಂ. ಕೃಷ್ಣ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆದಿದ್ದಾರೆ. “ಸಕ್ರಿಯ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದ ಮಾತ್ರಕ್ಕೆ ನಾನು ಸಂಪೂರ್ಣವಾಗಿ ಸನ್ಯಾಸಿಯಾಗುತ್ತೇನೆ ಎಂದಲ್ಲ, ಪಕ್ಷ ಇಲ್ಲವೇ ನಾಯಕರು ಸಲಹೆ ಕೇಳಿದರೆ ಕೊಡುವುದಾಗಿಯೂ ಅವರು ತಿಳಿಸಿದ್ದರು. ʻʻಮೀಸಲಾತಿ ವಿಚಾರವಾಗಿ ಕೇಳಿದ್ರೆ ಸಲಹೆ ಕೊಡುತ್ತೇನೆ. ನಾನು ಮೇಲೆ ಬಿದ್ದು ಸಲಹೆ ಕೊಡುವುದಿಲ್ಲ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ವಿಚಾರದಲ್ಲಿ ಅವರು ಬಂದು ಸಲಹೆ ಕೇಳಿದರೆ ಕೊಡುತ್ತೇನೆ” ಎಂದಿದ್ದರು.

ಎಸ್.ಎಂ.ಕೃಷ್ಣ ಅವರನ್ನು ಬಿಜೆಪಿ ಕಡೆಗಣಿಸುತ್ತಿದೆ ಎಂಬ ಆರೋಪದ ವಿಚಾರವಾಗಿ ಸುದ್ದಿಗಾರರು ಪ್ರಶ್ನಿಸಿದಾಗ ʻʻನಾನೇ ರಿಟೈಡ್ ಆಗುತ್ತಿರುವಾಗ ಕಡೆಗಣಿಸುವ ಪ್ರಶ್ನೆ ಬರುವುದಿಲ್ಲ. ನಾನೇ ನಿವೃತ್ತಿ ಪಡೆಯುತ್ತಿದ್ದೇನೆʼʼ ಎಂದಿದ್ದರು. ರಾಜಕೀಯದಲ್ಲಿ ಯಾರೂ ಪೆನ್ಶನ್‌ ಕೊಡುವುದಿಲ್ಲ. ಹೀಗಾಗಿ ನನ್ನ ನಿವೃತ್ತಿ ನಿರ್ಧಾರವನ್ನು ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆ ಇಲ್ಲ” ಎಂದಿದ್ದರು.

ಇದನ್ನೂ ಓದಿ: Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Continue Reading
Advertisement
Sex Scandals
Latest7 mins ago

Politicians Scandals : ದೇಶದ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಲೈಂಗಿಕ ಹಗರಣಗಳಿವು!

MS Dhoni
ಕ್ರೀಡೆ7 mins ago

MS Dhoni: ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಆದ ಧೋನಿ ಅಭಿಮಾನಿ

Hassan Pen drive case
ಕರ್ನಾಟಕ22 mins ago

Hassan Pen Drive Case: ಪ್ರಜ್ವಲ್‌, ರೇವಣ್ಣ ಹಾಗೆ ಮಾಡಿಯೇ ಇಲ್ಲ ಎಂದ ದೂರುದಾರೆಯ ಅತ್ತೆ!

Actor Dharmendra not spending enough time with parents
ಸಿನಿಮಾ23 mins ago

Actor Dharmendra: ಪೋಷಕರ ಜತೆ ಸಾಕಷ್ಟು ಸಮಯ ಕಳೆಯಲೇ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ರಾ ನಟ ಧರ್ಮೇಂದ್ರ?

Cleric
ದೇಶ35 mins ago

Cleric: ಮಸೀದಿಯಲ್ಲಿ ಮಲಗಿದ್ದ 30 ವರ್ಷದ ಮೌಲ್ವಿಯನ್ನು ಬಡಿದು ಕೊಂದರು; ಹತ್ಯೆಗೆ ಕಾರಣ?

Congress fears defeat over EVMs Congress will not win a single seat in Karnataka says PM Narendra Modi
ರಾಜಕೀಯ36 mins ago

Narendra Modi: ಪ್ರಧಾನಿ ಮೋದಿ ಅನರ್ಹತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

T20 World Cup 2024
ಕ್ರೀಡೆ45 mins ago

T20 World Cup 2024: ಆಸ್ಟ್ರೇಲಿಯಾದಿಂದ ಹಡಗಿನಲ್ಲೇ 3 ಕ್ರಿಕೆಟ್ ಪಿಚ್ ತಂದ ಅಮೆರಿಕ

Revanth Reddy
ದೇಶ54 mins ago

Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Prajwal Revanna Hassan Pen Drive Case What will SIT probe look like
ಕ್ರೈಂ57 mins ago

Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

Drown in Mekedatu
ಕರ್ನಾಟಕ1 hour ago

Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಬೆಂಗಳೂರಿನ ಐವರು ಪ್ರವಾಸಿಗರ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20244 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202424 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌