SC ST Reservation: ಬೋವಿ, ಲಂಬಾಣಿ, ಕೊರಮ, ಕೊರಚ ಜನಾಂಗದವರೂ ಎಸ್‌ಸಿ ಪಟ್ಟಿಯಲ್ಲೇ ಇರುತ್ತಾರೆ: ಸಿಎಂ ಬೊಮ್ಮಾಯಿ Vistara News

ಕರ್ನಾಟಕ

SC ST Reservation: ಬೋವಿ, ಲಂಬಾಣಿ, ಕೊರಮ, ಕೊರಚ ಜನಾಂಗದವರೂ ಎಸ್‌ಸಿ ಪಟ್ಟಿಯಲ್ಲೇ ಇರುತ್ತಾರೆ: ಸಿಎಂ ಬೊಮ್ಮಾಯಿ

CM Basavaraj Bommai: ಎಸ್‌ಸಿ-ಎಸ್‌ಟಿ ಮೀಸಲಾತಿ (SC ST Reservation) ಜಾರಿ ವಿಚಾರಕ್ಕೆ ಸಂಬಂಧಪಟ್ಟಂತೆ ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದವರಿಂದ ಪ್ರತಿಭಟನೆ ಜೋರಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಮನೆ ಕಲ್ಲು, ಚಪ್ಪಲಿ ತೂರಾಟ ನಡೆಸಿರುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಶಾಂತ ರೀತಿಯಲ್ಲಿ ವರ್ತನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

VISTARANEWS.COM


on

C M Basavaraj Bommai at India Today Interview.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಬಳ್ಳಾಪುರ: ಎಸ್‌ಸಿ, ಎಸ್‌ಟಿ ಮೀಸಲಾತಿಗೆ ಸಂಬಂಧಪಟ್ಟಂತೆ ಸದಾಶಿವ ಆಯೋಗದ ಶಿಫಾರಸು ವರದಿಯನ್ನು ನಾವು ಜಾರಿ ಮಾಡಿಲ್ಲ. ಬೋವಿ, ಲಂಬಾಣಿ, ಕೊರಮ, ಕೊರಚ ಎಲ್ಲ ಜನಾಂಗದವರೂ ಎಸ್‌ಸಿ ಪಟ್ಟಿಯಲ್ಲಿ ಇರುತ್ತಾರೆ. ಇವರನ್ನು ಪಟ್ಟಿಯಿಂದ ಕೈಬಿಡುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನೇ ಖುದ್ದು ಆದೇಶ ಮಾಡಿ ಕೇಂದ್ರಕ್ಕೆ ಕಳುಹಿಸಿದ್ದೇನೆ. ಹೀಗಾಗಿ ಯಾವುದೇ ರೀತಿಯಲ್ಲಿ ಗಲಾಟೆ ಮಾಡದೆ ಶಾಂತ ರೀತಿಯಲ್ಲಿ ವರ್ತಿಸಬೇಕು. ಏನೇ ವಿಷಯವಿದ್ದರೂ ಕುಳಿತು ಬಗೆಹರಿಸಿಕೊಳ್ಳೋಣ. ಈ ಬಗ್ಗೆ ಬಂಜಾರ ಸಮುದಾಯದ ಮುಖಂಡರಲ್ಲಿ ನಾನು ವಿನಂತಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸಕ್ಕೆ ಉದ್ರಿಕ್ತರ ಗುಂಪು ಕಲ್ಲು, ಚಪ್ಪಲಿ ತೂರಾಟ ನಡೆಸಿದ ಸಂಬಂಧ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗ ಇರುವ ಮೂರು ಪರ್ಸೆಂಟ್ ಬದಲು ನಾಲ್ಕೂವರೆ ಪರ್ಸೆಂಟ್ ಕೊಟ್ಟಿದ್ದೇವೆ. ಸದಾಶಿವ ಆಯೋಗದ ಶಿಫಾರಸನ್ನು ಜಾರಿಗೆ ತರುವುದು ಬೇಡ ಎಂದು ನಾವು ಸಹ ತೀರ್ಮಾನ ಮಾಡಿದ್ದೇವೆ. ಬೇಡಿಕೆ ಪ್ರಕಾರ ಮಾಡಿದ್ದೇವೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಸಮುದಾಯದ ಹಿತರಕ್ಷಣೆ ಮಾಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಎಸ್‌ಸಿ ಪಟ್ಟಿಗೆ ದಲಿತ ಕ್ರೈಸ್ತರು, ಎಸ್‌ಟಿ ಕೆಟಗರಿಗೆ ಬೋಯಾ, ವಾಲ್ಮೀಕಿ; ನಿರ್ಣಯ ಅಂಗೀಕರಿಸಿದ ಆಂಧ್ರ ವಿಧಾನಸಭೆ

ಬಂಜಾರ ಸಮುದಾಯದವರು ಪ್ರಚೋದನೆಗೆ ಒಳಗಾಗಬಾರದು

ಲಂಬಾಣಿ ತಾಂಡಾದ ಜನರಿಗೆ ಈಗಾಗಲೇ 2 ಲಕ್ಷದ ಹಕ್ಕು ಪತ್ರಗಳನ್ನು ಕೊಟ್ಟಾಗಿದೆ. ನಿಮ್ಮ ಪರವಾಗಿ ಇರುವ ಸರ್ಕಾರ ಬಿಜೆಪಿ ಎಂಬುದನ್ನು ಮರೆಯಬಾರದು. ತಾಂಡಾ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದವರು ಆಗಿನ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ‌ಅವರು. ಆ ಭಾಗದ ತಾಂಡಾಗಳಿಗೆ ಮೂಲಭೂತ ಸೌಲಭ್ಯಗಳನ್ನು ಕೊಟ್ಟವರು ಯಡಿಯೂರಪ್ಪ ಅವರಾಗಿದ್ದಾರೆ. ಹಿಂಸೆಗೆ ಅವಕಾಶ ಇಲ್ಲ. ಏನೇ ವಿಷಯ ಇದ್ದರೂ ಕುಳಿತು ಬಗೆಹರಿಸಿಕೊಳ್ಳೋಣ. ಈ ಗಲಾಟೆ ಹಿಂದೆ ಕಾಂಗ್ರೆಸ್ ಪ್ರಚೋದನೆ ಇದೆ. ಸ್ಥಳೀಯ ಕಾಂಗ್ರೆಸ್ ನಾಯಕರ ಪ್ರಚೋದನೆ ಇದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯ ನೀಡಿದ ಮೇಲೆ ಅವರಿಗೆ ಸಹಿಸಲು ಆಗದೇ ಹಿಂಸೆಗೆ ಪ್ರಚೋದನೆ ನೀಡಿದ್ದಾರೆ. ಆದರೆ, ಬಂಜಾರ ಸಮುದಾಯದವರು ಪ್ರಚೋದನೆಗೆ ಒಳಗಾಗಬಾರದು. ಈ ಸಮುದಾಯದ ರಕ್ಷಣೆಯನ್ನು ಬಿಜೆಪಿ ಹಿಂದೆಯೂ ಮಾಡುತ್ತಿತ್ತು. ಮುಂದೆಯೂ ಮಾಡುತ್ತಿದೆ ಎಂದು ಸಿಎಂ ಭರವಸೆ ನೀಡಿದರು.

ಇದನ್ನೂ ಓದಿ: SC ST Reservation: ಶಿಕಾರಿಪುರದಲ್ಲಿ ಭುಗಿಲೆದ್ದ ಎಸ್‌ಸಿ-ಎಸ್‌ಟಿ ಮೀಸಲಾತಿ ಹೋರಾಟ: ಬಿಎಸ್‌ವೈ ಮನೆ ಮೇಲೆ ಕಲ್ಲು, ಚಪ್ಪಲಿ ತೂರಾಟ

ಬಿ.ಎಸ್.‌ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ವಿಡಿಯೊ

ಕಾಂಗ್ರೆಸ್‌ ಜನರ ಮಧ್ಯೆ ಜಗಳ ಹಚ್ಚುವ ಶಕುನಿ

ತಪ್ಪು ದಾರಿ ಪ್ರಯತ್ನಗಳಿಗೆ ಅವಕಾಶ ಮಾಡಿಕೊಡಬಾರದು. ಕಾಂಗ್ರೆಸ್‌ನವರ ಕುಕೃತ್ಯಕ್ಕೆ ಖಂಡನೆ ಮಾಡುತ್ತೇನೆ. ಸಮಾಜದಲ್ಲಿ ರಾಜಕೀಯ ಲಾಭಕ್ಕಾಗಿ ಹಿಂಸೆಗೆ ಇಳಿಸುವುದು ಶೋಭೆ ತರುವುದಿಲ್ಲ. ಕಾಂಗ್ರೆಸ್‌ ಕ್ಷಮೆಗೆ ಅರ್ಹವಲ್ಲ. ರಾಷ್ಟ್ರೀಯ ಪಕ್ಷ ಮಾಡುವಂತಹ ಕೆಲಸವೂ ಇದಲ್ಲ. ಇದು ಅತ್ಯಂತ ಸಣ್ಣ ಕೆಲಸವಾಗಿದೆ. ಈಗ ಕೆಪಿಸಿಸಿ ರಾಜ್ಯ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೇವಾಲಾ ಏನ್ ಹೇಳುತ್ತಾರೆ. ಜನರ ಮಧ್ಯೆ ಜಗಳ ಹಚ್ಚುವ ಶಕುನಿ ಯಾರು ಅಂದರೆ ಅದುವೇ ಕಾಂಗ್ರೆಸ್ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
1 Comment

1 Comment

  1. Amari Nash

    1 November 2023, 11:53 PM at 11:53 pm

    I like the efforts you have put in this, regards for all the great content.

Leave a Reply

Your email address will not be published. Required fields are marked *

ಕರ್ನಾಟಕ

ಗೋದಾಮಿನಲ್ಲಿ ಯಂತ್ರ ಕುಸಿತ; ಜೋಳದ ಮೂಟೆಗಳಡಿ ಸಿಲುಕಿದ 10 ಕಾರ್ಮಿಕರು

Vijayapura News: ವಿಜಯಪುರ ಕೈಗಾರಿಕಾ ಪ್ರದೇಶದ ರಾಜಗುರು ಇಂಡಸ್ಟ್ರೀಸ್‌ ಗೋದಾಮಿನಲ್ಲಿ ಮೆಕ್ಕೆ ಜೋಳದ ಮೂಟೆ ತುಂಬುವ ಯಂತ್ರ ಕುಸಿದು ಅವಘಡ ನಡೆದಿದೆ.

VISTARANEWS.COM


on

labourers trapped
Koo

ವಿಜಯಪುರ: ಮೆಕ್ಕೆ ಜೋಳದ ಮೂಟೆ ತುಂಬುವ ಯಂತ್ರ ಕುಸಿದು ಮೂಟೆಗಳಡಿ 10ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಘಟನೆ ವಿಜಯಪುರ ಕೈಗಾರಿಕಾ ಪ್ರದೇಶದ (Vijayapura News) ರಾಜಗುರು ಇಂಡಸ್ಟ್ರೀಸ್‌ ಗೋದಾಮಿನಲ್ಲಿ ನಡೆದಿದೆ. ಫುಡ್ ಪ್ರೊಸೆಸಿಂಗ್ ಯುನಿಟ್‌ನಲ್ಲಿ ಸಿಲುಕಿದ ಕಾರ್ಮಿಕರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ.

ಬಿಹಾರ ಮೂಲದ ಕಾರ್ಮಿಕರು ಗೋದಾಮಿನಲ್ಲಿ ಸಿಲುಕಿದ್ದಾರೆ. ಕಳೆದ ಹಲವು ವರ್ಷಗಳಿಂದ ರಾಜಗುರು ಇಂಡಸ್ಟ್ರೀಸ್‌ ಗೋದಾಮಿನಲ್ಲಿ ಇವರು ಕೆಲಸ ಮಾಡುತ್ತಿದ್ದರು. ಕಾರ್ಮಿಕರನ್ನು ರಕ್ಷಿಸಲು 4 ಜೆಸಿಬಿಗಳಿಂದ ಕಳೆದ ಎರಡು ಗಂಟೆಗಳಿಂದ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸ್ಥಳಕ್ಕೆ ಎಸ್‌.ಪಿ. ಋಷಿಕೇಶ ಸೋನಾವಣೆ ಮತ್ತು ತಂಡ ಭೇಟಿ ನೀಡಿ ಪರಿಶೀಲಿಸುತ್ತಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಯೂ ಭಾಗಿಯಾಗಿದ್ದಾರೆ.

ಇದನ್ನೂ ಓದಿ | Bhavani Revanna : ಅದು ನಮ್ಮ ಕಾರಲ್ಲ ಫ್ರೆಂಡ್‌ದು ಎಂದ ರೇವಣ್ಣ; ಭವಾನಿ ತಪ್ಪಿಗೂ ಕ್ಷಮೆ ಕೇಳಿದ್ರು!

ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Car catches fire after hitting bus
ತಡೆಗೋಡೆಗೆ ಡಿಕ್ಕಿ ಹೊಡೆದು ಬಸ್ಸಿನಿಂದ ಕಾರನ್ನು ಬೇರ್ಪಡಿಸಲು ಪ್ರಯತ್ನ

ಬೆಂಗಳೂರು: ಕಾರೊಂದು ಬಿಎಂಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಸುಟ್ಟು ಕರಕಲಾದ ಘಟನೆ (Car Hits bus and catches fire in Bangalore) ಬೆಂಗಳೂರಿನ ಚಂದ್ರಾ ಲೇಔಟ್‌ ಸಮೀಪದ ನಾಗರಬಾವಿ ರಿಂಗ್‌ ರಸ್ತೆಯಲ್ಲಿ (Nagarabavi Ring Road) ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಕಾರು ಬಸ್ಸಿಗೆ ಅಂಟಿಕೊಂಡು ಬಸ್‌ಗೂ ಬೆಂಕಿ ಹತ್ತಿಕೊಂಡಿತ್ತು (video Viral). ಆದರೆ, ಬಸ್‌ನ ಚಾಲಕ ಪ್ರಯಾಣಿಕರನ್ನು ಇಳಿಸಿ ರಕ್ಷಿಸಿದ್ದಲ್ಲದೆ, ಅತ್ಯಂತ ಚಾಲಾಕಿತನ ಮತ್ತು ಸಮಯಪ್ರಜ್ಞೆ ಮೆರೆದು (Time sense of driver) ಬಸ್‌ ನಿಂದ ಕಾರನ್ನು ಬೇರ್ಪಡಿಸಿದ್ದಾರೆ. ಬಸ್‌ ಕೂಡಾ ಸಂಪೂರ್ಣ ಸುಟ್ಟು ಹೋಗುವುದನ್ನು (Fire Accident) ತಪ್ಪಿಸಿದ್ದಾರೆ.

ಸೋಮವಾರ ಬೆಳಗ್ಗೆ 9 ಗಂಟೆಗೆ ಹೊತ್ತಿಗೆ ನಗರದ ಚಂದ್ರಾ ಲೇಔಟ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಯಶವಂತಪುರದಿಂದ ನಾಯಂಡಹಳ್ಳಿ ಕಡೆ ತೆರಳುತ್ತಿದ್ದ ಬಸ್‌ ಚಂದ್ರಾ ಲೇಔಟ್ ಬಳಿ ನಿಂತಿತ್ತು. ಆಗ ಹಿಂಬದಿಯಿಂದ ವೇಗವಾಗಿ ಬಂದ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆಯಿತು. ಅತ್ಯಂತ ರಭಸದಿಂದ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಕ್ಷಣಾರ್ಧದಲ್ಲಿಯೇ ಬೆಂಕಿ ಹತ್ತಿಕೊಂಡಿದೆ. ಆಗ ಕಾರಿನ ಪ್ರಯಾಣಿಕರು ಕೂಡಲೇ ಇಳಿದು ಜೀವ ರಕ್ಷಿಸಿಕೊಂಡರು. (video Viral)

ಅದರ ಜತೆಗೆ ಬಸ್‌ ಚಾಲಕ ಕೂಡಾ ಎಲ್ಲ ಪ್ರಯಾಣಿಕರನ್ನು ಇಳಿಸಿದರು. ಇಷ್ಟರ ನಡುವೆ ಕಾರು ಬಸ್ಸಿಗೆ ಅಂಟಿಕೊಂಡು ಹೊತ್ತಿ ಉರಿಯತೊಡಗಿತ್ತು. ಬಸ್ಸನ್ನು ಸ್ವಲ್ಪ ಮಂದೆ ಕೊಂಡು ಹೋಗಲು ಪ್ರಯತ್ನಿಸಿದಾಗ ಅದು ಅಂಟಿಕೊಂಡಿದ್ದು ಗೊತ್ತಾಯಿತು. ಅದನ್ನು ಹೇಗಾದರೂ ಬೇರ್ಪಡಿಸಬೇಕು ಎಂದು ಯೋಚಿಸಿದ ಬಿಎಂಟಿಸಿ ಚಾಲಕ ಭಾರಿ ಡೇಂಜರಸ್‌ ಪ್ರಯೋಗಕ್ಕೆ ಮುಂದಾದರು.

ಕಾರು ಹೊತ್ತಿ ಉರಿಯುತ್ತಿದ್ದಂತೆಯೇ ಬಸ್ಸನ್ನು ಮುಂದಕ್ಕೆ ಚಲಾಯಿಸಿದರು ಚಾಲಕ. ಬಸ್ಸು ಮುಂದಕ್ಕೆ ಚಲಿಸಿದಾಗ ಕಾರು ಕಳಚಿಕೊಳ್ಳಬಹುದು ಎನ್ನುವುದು ಅವರ ಯೋಚನೆಯಾಗಿತ್ತು. ಆದರೆ, ಅದು ಕಳಚಿಕೊಳ್ಳಲಿಲ್ಲ. ಬದಲಾಗಿ ಗಾಳಿಯ ವೇಗಕ್ಕೆ ಬೆಂಕಿ ಇನ್ನಷ್ಟು ಧಗಧಗಿಸಿತು.

ಈ ವೇಳೆ ಚಾಲಕ ಬಸ್ಸನ್ನು ಸ್ವಲ್ಪ ದೂರ ಹೋಗಿ ನಿಲ್ಲಿಸಿ ಇನ್ನೊಂದು ಪ್ಲ್ಯಾನ್‌ ಮಾಡಿದರು. ಇದೊಂದು ಡಬಲ್‌ ರೋಡ್‌ ಆಗಿದ್ದು, ಒಂದು ಭಾಗದಲ್ಲಿ ತಡೆಗೋಡೆ ಇದೆ. ಚಾಲಕ ಬಸ್ಸನ್ನು ಆ ತಡೆಗೋಡೆಗೆ ಡಿಕ್ಕಿ ಹೊಡೆಸಿ ಕಾರನ್ನು ಕದಲಿಸುವ ಪ್ರಯತ್ನವನ್ನು ಮಾಡಿದರು. ಆದರೆ, ಕಾರು ಬಿಡಿಸಿಕೊಳ್ಳಲೇ ಇಲ್ಲ.

ಇದನ್ನೂ ಓದಿ: ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

ಈ ನಡುವೆ, ಕಾರು ಸುಟ್ಟು ಹೋಗುವ ವೇಗ ಜಾಸ್ತಿಯಾಯಿತು. ಪೆಟ್ರೋಲ್‌ ಟ್ಯಾಂಕ್‌ ಕೂಡಾ ಸಿಡಿಯಿತು. ಬಸ್ಸಿಗೂ ಬೆಂಕಿ ಹತ್ತಿಕೊಳ್ಳುವ ವೇಗ ಜಾಸ್ತಿಯಾಯಿತು. ಇಷ್ಟಾದರೂ ಚಾಲಕ ತನ್ನ ಪ್ರಯತ್ನವನ್ನು ಬಿಡಲಿಲ್ಲ, ವ್ಯವಧಾನವನ್ನು ಕಳೆದುಕೊಳ್ಳಲಿಲ್ಲ.

ಇದು ಡಬಲ್‌ ರೋಡ್‌ ಆಗಿದ್ದರಿಂದ ನಡುವೆ ಸಣ್ಣ ರಸ್ತೆ ವಿಭಾಜಕ ಇತ್ತು. ಇತ್ತು. ಚಾಲಕ ಬಸ್ಸನ್ನು ತಿರುಗಿಸಿ ಆ ತಡೆಗೋಡೆಯ ಮೇಲೆ ಕಾರನ್ನು ಹಾರಿಸಿದ. ಆಗ ಅಂಟಿಕೊಂಡಿದ್ದ ಕಾರು ಕಳಚಿಕೊಂಡಿತು. ಈ ನಡುವೆ, ಕಾರು ಸಂಪೂರ್ಣ ಸುಟ್ಟು ಹೋದರೆ, ಬಸ್‌ ಗೆ ಅಲ್ಲಿದ್ದವರೆಲ್ಲ ಸ್ವಲ್ಪ ಸ್ವಲ್ಪ ನೀರು ತಂದೇ ಸಿಂಪಡಿಸಿ ಬೆಂಕಿ ಆರಿಸಿದರು.

ಬಸ್ಸಿನ ಹಿಂದಿನ ಎರಡು ಸೀಟುಗಳಿಗೆ ಸೀಮಿತವಾಗಿ ಬೆಂಕಿ ಹತ್ತಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಇದು ಸಾಧ್ಯವಾಗಿದೆ. ಅಲ್ಲಿ ಸೇರಿದವರೆಲ್ಲ ಬೆಂಕಿ ಆರಿಸುವಲ್ಲಿ ಚಾಲಕನಿಗೆ ನೆರವಾಗಿದ್ದಲ್ಲದೆ, ಅವರನ್ನು ಹಾಡಿ ಹೊಗಳಿ ಬೆನ್ನು ತಟ್ಟಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ಪೊಲೀಸರು ಹಾಕಿದ್ದ ಕೇಸ್‌ಗೆ ಹೈಕೋರ್ಟ್ ತಡೆಯಾಜ್ಞೆ; ಕಾಫಿನಾಡಿನಲ್ಲಿ ವಕೀಲರ ಸಂಭ್ರಮ

ಕಾಫಿನಾಡಿನಲ್ಲಿ ವಕೀಲರ ಮೇಲೆ ಪೊಲೀಸರು ಹಾಕಿದ್ದ ಕೇಸ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ ಪ್ರಕರಣದಲ್ಲಿ ತಮಗೆ ಮೊದಲ ಜಯ ಸಿಕ್ಕಿದೆ ಎಂದು ಚಿಕ್ಕಮಗಳೂರು ಕೋರ್ಟ್ ಮುಂದೆ ವಕೀಲರು ಸಂಭ್ರಮಾಚರಣೆ ನಡೆಸಿದ್ದಾರೆ.

VISTARANEWS.COM


on

Lawyers celebrate
Koo

ಚಿಕ್ಕಮಗಳೂರು: ವಕೀಲನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವಕೀಲರ ಮೇಲೆ ಪೊಲೀಸರು ಹಾಕಿದ್ದ ಕೇಸ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಕಾಫಿನಾಡಿನಲ್ಲಿ (chikkamagaluru) ವಕೀಲರು ಸಂಭ್ರಮಾಚರಣೆ ನಡೆಸಿದ್ದಾರೆ. ವಕೀಲನ ಮೇಲೆ ಹಲ್ಲೆ ನಡೆಸಿದ ಪೊಲೀಸರ ಬಂಧನಕ್ಕೆ ಆಗ್ರಹಿಸಿ ವಕೀಲರು ಬೃಹತ್‌ ಪ್ರತಿಭಟನೆ ನಡೆಸಿದ್ದರು. ನಂತರ ಪೊಲೀಸರು ಕೂಡ ಪ್ರತಿಭಟನೆ ನಡೆಸಿ, ಐವರು ವಕೀಲರ ಮೇಲೆ ಪ್ರಕರಣ ದಾಖಲಿಸಿದ್ದರು. ಇದೀಗ ಈ ಪ್ರಕರಣಕ್ಕೆ ತಡೆಯಾಜ್ಞೆ ನೀಡಿರುವುದರಿಂದ ಚಿಕ್ಕಮಗಳೂರು ಕೋರ್ಟ್ ಮುಂದೆ ವಕೀಲರು ಸಂಭ್ರಮಿಸಿದ್ದಾರೆ.

ವಕೀಲನ ಪ್ರೀತಮ್‌ ಮೇಲೆ ಹಲ್ಲೆ ಸಂಬಂಧ 6 ಜನ ಪೊಲೀಸರ ಮೇಲೆ ವಕೀಲರು ದೂರು ನೀಡಿದ್ದರು. ನಂತರ ಎಫ್‌ಐಆರ್‌ ದಾಖಲಾಗಿತ್ತು. ಆದರೆ, ಸಿಬ್ಬಂದಿಯನ್ನು ಬಂಧಿಸಬಾರದು ಎಂದು ಪೊಲೀಸರು ಕೂಡ ಪ್ರತಿಭಟನೆ ನಡೆಸಿ, ಐವರು ವಕೀಲರ ಮೇಲೆ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಸುಮೋಟೋ ಕೇಸ್ ದಾಖಲಿಸಿಕೊಂಡಿರುವ ಹೈಕೋರ್ಟ್‌, ವಕೀಲನ ವಿರುದ್ಧದ ಕೇಸ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮಂಗಳವಾರ ವಿಚಾರಣೆ ನಡೆಯಲಿದ್ದು, ಹೈಕೋರ್ಟ್ ತೀರ್ಪಿಗಾಗಿ ವಕೀಲರು ಕಾಯುತ್ತಿದ್ದಾರೆ.

ಇದನ್ನೂ ಓದಿ | PSI Exam: ಪಿಎಸ್‌ಐ ಪರೀಕ್ಷೆ ಮುಂದೂಡಿಕೆ, ಜ. 23ಕ್ಕೆ ಫಿಕ್ಸ್‌: ಗೃಹ ಸಚಿವರ ಘೋಷಣೆ

ಹೈಕೋರ್ಟ್‌ನಲ್ಲಿ ತೀರ್ಪು ಬಂದ ನಂತರ ಮುಂದಿನ ನಿರ್ಧಾರ ಮಾಡಲು ಚಿಕ್ಕಮಗಳೂರು ಬಾರ್ ಕೌನ್ಸಿಲ್ ಹಾಲ್‌ನಲ್ಲಿ ವಕೀಲರು ಸಭೆ ನಡೆಸಿದ್ದು, ತೀರ್ಪಿನ ಬಳಿಕ ಮುಂದಿನ ಹೋರಾಟದ ರೂಪುರೇಷೆ ಕುರಿತು ಚರ್ಚೆ ಮಾಡಿದ್ದಾರೆ.

ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿ.ಸಿ.ಗೆ ದೂರು

ವಕೀಲನ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ಗೆ ಕರ್ನಾಟಕ ಮಾನವ ಹಕ್ಕು ಸಮಿತಿ ಮನವಿ ಸಲ್ಲಿಸಿದೆ. ಜನಸ್ನೇಹಿ ಪೊಲೀಸರು ಮಾಡಿರುವ ಕೃತ್ಯ ಅಪರಾಧ, ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮಕ ಕೈಗೊಳ್ಳಬೇಕು ಎಂದು ಸಮಿತಿ ಆಗ್ರಹಿಸಿದೆ.

ಹಿರಿಯ ಅಧಿಕಾರಿಗಳ ವಿರುದ್ಧ ನಿವೃತ್ತ ಪೊಲೀಸ್‌ ಆಕ್ರೋಶ

ಪೊಲೀಸರಿಗೆ ತೊಂದರೆಯಾದರೆ ಇಡೀ ರಾಜ್ಯಾದ್ಯಂತ ಹೋರಾಟ ನಡೆಯಲಿದೆ. ಎಫ್.ಐ.‌ಆರ್ ಕಾಪಿ ಹರಿದು ಬಿಸಾಡಿದವರ ಮೇಲೆ ಏನು ಕ್ರಮ ಕೈಗೊಂಡಿದ್ದೀರಿ, ಪೊಲೀಸರು ಕೂಡ ಸ್ವಾಭಿಮಾನ ಇರುವವರೇ, ಅನ್ಯಾಯ ಆಗಲು ಬಿಡಲ್ಲ. ಪೊಲೀಸರಿಗೆ ಅನ್ಯಾಯವಾದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ನಿವೃತ್ತ ಪೊಲೀಸ್‌ ಅಧಿಕಾರಿಗಳ ಸಂಘದ ಉಪಾಧ್ಯಕ್ಷ ಅಣ್ಣಯ್ಯ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ | ಚಿಕ್ಕಮಗಳೂರು ಪೊಲೀಸ್-ವಕೀಲರ ಸಂಘರ್ಷ; ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದಿರುವ ಅಣ್ಣಯ್ಯ ಸುದ್ದಿಗೋಷ್ಠಿ ನಡೆಸಲು ಬಂದಾಗ ಅವರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರ ಜತೆ ನಿಲ್ಲದ ಹಿರಿಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ ಅವರು, ಸುದ್ದಿಗೋಷ್ಠಿ ಮಾಡದಂತೆ ನನ್ನನ್ನ ತಡೆದಿದ್ದಾರೆ, ಹೋರಾಟವನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

HD Devegowda : ಕಾಂಗ್ರೆಸ್‌ ನಮ್ಮನ್ನು ದಬ್ಬಿದಾಗ ಮೋದಿ, ಶಾ ಕೈಹಿಡಿದರು ಎಂದ ದೇವೇಗೌಡ್ರು

HD Devegowda : ಕಾಂಗ್ರೆಸ್‌ ನಮ್ಮನ್ನು ಹೊರತಳ್ಳಿದಾಗ ಬಂದು ಆಧರಿಸಿದ್ದು ಮೋದಿ ಮತ್ತು ಅಮಿತ್‌ ಶಾ. ಹಾಗಾಗಿ ಅವರೊಂದಿಗೆ ಮೈತ್ರಿ ಮಾಡಿಕೊಂಡೆವು ಎಂದು ಹೇಳಿದ್ದಾರೆ ಎಚ್‌.ಡಿ ದೇವೇಗೌಡರು.

VISTARANEWS.COM


on

Devegowda PM Narendra Modi
Koo

ಹಾಸನ: ಕಾಂಗ್ರೆಸ್‌ ನೇತೃತ್ವದಲ್ಲಿ ನಲವತ್ತಾರು ಪಕ್ಷಗಳು ಸೇರಿ I.N.D.I.A ಕೂಟ (INDIA BLOCK) ರಚನೆ ಮಾಡಿದಾಗ ನಮ್ಮನ್ನು ಹೊರದಬ್ಬಿದರು. ಈ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಅಮಿತ್‌ ಶಾ (Amit Shah) ನಮ್ಮನ್ನು ಕೈ ಹಿಡಿದರು ಎಂದು ಹೇಳುವ ಮೂಲಕ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ (HD Devegowda) ಅವರು ಬಿಜೆಪಿ ಮತ್ತು ಜೆಡಿಎಸ್‌ (BJP-JDS Coalition) ನಡುವಿನ ಮೈತ್ರಿ ಯಾಕಾಯಿತು ಎಂಬ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಜೆಡಿಎಸ್‌ ಬಗ್ಗೆ, ನಮ್ಮ ಬಗ್ಗೆ ಅವಹೇಳನದ ಭಾವವನ್ನೇ ಹೊಂದಿದ್ದಾರೆ. ಅದೇ ಮೋದಿಯವರು ಪ್ರಧಾನ ಮಂತ್ರಿಯಾಗಿ. ವೈಯಕ್ತಿಕವಾಗಿ ನನ್ನ ಬಗ್ಗೆ ಗೌರವ ಇಟ್ಟುಕೊಂಡಿದ್ದಾರೆ ಎಂದರು.

ʻʻಎನ್‌ಡಿಎಗೆ ಪರ್ಯಾಯವಾಗಿ INDIA ರಚನೆ ಆಗಿದೆ. ಸುಮಾರು 46 ಪ್ರಾದೇಶಿಕ ಪಕ್ಷಗಳ ಕೂಟಕ್ಕೆ ಕಾಂಗ್ರೆಸ್ ನೇತೃತ್ವ ವಹಿಸಿದೆ. ದೇಶವನ್ನು ಆಳಿದಂಥ ಒಂದು ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಮುಂದಾಳತ್ವ ವಹಿಸಿದೆ. ಕುಮಾರಸ್ವಾಮಿ ಅವರು 2018ರಲ್ಲಿ ಮುಖ್ಯಮಂತ್ರಿ ಆದಾಗ ಬಿಜೆಪಿ ಬಿಟ್ಟು ರಾಷ್ಟ್ರದ ಸೆಕ್ಯೂಲರ್ ಪಾರ್ಟಿಗಳ ಎಲ್ಲಾ ಮುಖಂಡರು ಭಾಗಿಯಾಗಿದ್ದರು. ಆದರೆ, INDIA ಕೂಟ ರಚನೆಯಾದಾಗ ನಮ್ಮನ್ನು ಹೊರಗಿಡಲೇಬೇಕು ಎಂದು ತೀರ್ಮಾನ ಮಾಡಿದವರು ಯಾರು? ಕುಮಾರಸ್ವಾಮಿ ಸರ್ಕಾರ ತೆಗಿಲೇಬೇಕು ಎಂದು ತೀರ್ಮಾನ ಮಾಡಿದವರು ಯಾರು?ʼʼ ಎಂದು ಪ್ರಶ್ನಿಸಿದರು ದೇವೇಗೌಡರು.

ನಾವು ನಿತೀಶ್‌ ಕುಮಾರ್‌ ಅವರ ಮೂಲಕ I.N.D.I.A ಸೇರಬೇಕು ಎಂದು ಪ್ರಯತ್ನ ಮಾಡಿದಾಗ ಜೆಡಿಎಸ್‌ ಸೇರ್ಪಡೆಯನ್ನು ನಾವು ಖಂಡತುಂಡವಾಗಿ ವಿರೋಧಿಸುತ್ತೇವೆ ಎಂದು ಹೇಳಿದರು. ಹೀಗೆ ನಮ್ಮನ್ನು ದೂರ ಮಾಡಿದಾಗ ಮೋದಿಯವರು, ಅಮಿತ್ ಶಾ ಅವರು ನಮ್ಮನ್ನು ವೆಲ್ ಕಮ್ ಮಾಡಿದ್ರು ಎಂದು ದೇವೇಗೌಡರು ಹೇಳಿದರು. ಕಾಂಗ್ರೆಸ್ ನಡವಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದ ಮೋದಿ ಮತ್ತು ಶಾ ಅವರು ನಮ್ಮನ್ನು ವೆಲ್ ಕಮ್ ಮಾಡಿದರು ಎಂದು ದೇವೇಗೌಡರು ಹೇಳಿದರು.

ಮುಂದಿನ ದಿನಗಳಲ್ಲಿ ಜೆಡಿಎಸ್‌ ಇರೋದೇ ಇಲ್ಲ. ಅದು‌ ಆಟಕ್ಕಿಲ್ಲ, ಲೆಕ್ಕಕ್ಕೂ ಇಲ್ಲ ಎಂದು ಈಗಲೂ ಬಹಳ ಲಘುವಾಗಿ ಮಾತನಾಡುತ್ತಿದ್ದಾರೆ. ಮುಂದೆ ಕರ್ನಾಟಕದಲ್ಲಿ ಬಿಜೆಪಿ, ಮೋದಿ, ಶಾ ಅವರ ಒಟ್ಟಿಗೆ ಹೋಗ್ತೇವೆ. ಬಿಜೆಪಿಯೊಂದಿಗೆ ಕೈ ಜೋಡಿಸಿ ಕಾಂಗ್ರೆಸ್ ಮುಕ್ತವನ್ನಾಗಿಸಲು ಹೋರಾಟ ಮಾಡೋದು ನಮ್ಮ ಗುರಿ ಎಂದು ಹೇಳಿದರು ದೇವೇಗೌಡರು.

ಮುಗಿಸಿಯೇ ತೀರುತ್ತೇವೆ ಎಂದಾಗ ಉಳಿಸಿಕೊಳ್ಳಬೇಕಲ್ಲ?

ನಮ್ಮ ಪಕ್ಷವನ್ನು ಮುಗಿಸಿಯೇ ತೀರುತ್ತೇವೆ ಎಂದು ಕೆಲವರು ಹಠ ತೊಟ್ಟಿರುವಾಗ ನಮಗೂ ನಮ್ಮ ಪಕ್ಷ ಉಳಿಯಬೇಕು ಎಂದು ಇರುತ್ತದೆ ಅಲ್ವಾ? ರೈತರ, ಬಡವರ, ಗ್ರಾಮೀಣ ಜನರ, ಹಿಂದುಳಿದವರ, ಅಲ್ಪಸಂಖ್ಯಾತರ ಪರವಾಗಿ ನಮ್ಮ ಪಕ್ಷ ನಿಂತಿದೆ. ಅವರೆಲ್ಲ ಸೇರಿ ಪಕ್ಷವನ್ನು ಮುಗಿಸಿಯೇ ಬಿಡುತ್ತೇವೆ ಅಂದಾಗ ಮೋದಿಯವರು ನಮಗೆ ಒಂದು ಅವಕಾಶ ಮಾಡಿಕೊಟ್ಟರು ಎಂದು ದೇವೇಗೌಡರು ಹೇಳಿದರು.

ಮುಂದಿನ ವಾರ ಚುನಾವಣಾ ಮೈತ್ರಿ ಮಾತುಕತೆ ಎಂದ ದೇವೇಗೌಡರು

ಲೋಕಸಭಾ ಚುನಾವಣೆಗೆ ಸಂಬಂಧಿಸಿ ಮುಂದಿನ ವಾರ ಮೈತ್ರಿ ಮಾತುಕತೆ ನಡೆಯಲಿದೆ. ಅಮಿತ್‌ ಶಾ ಅವರು ಲೋಕಸಭಾ ಚುನಾವಣೆ ಸಂಬಂಧ ಮಾತುಕತೆಗೆ ಕರೆಯಬಹುದು. ಕುಮಾರಸ್ವಾಮಿಯವರು ಹೋಗಿ ಮಾತನಾಡಿಕೊಂಡು ಬರ್ತಾರೆ. ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷರ ಜೊತೆಗೂ ಚರ್ಚೆ ಮಾಡುತ್ತಾರೆ. ಅಂತಿಮವಾಗಿ ಕಸಭಾ ಚುನಾವಣೆ ಬಗ್ಗೆ ನಿರ್ಣಯ ಮಾಡ್ತಾರೆ. ನಾವು 28 ಸ್ಥಾನ ಗಳಿಗೆ ಸ್ಪರ್ಧೆ ಮಾಡಲು ಐಕ್ಯತೆಯಿಂದ ಒಮ್ಮತದ ನಿರ್ಧಾರಕ್ಕೆ ಬರ್ತೇವೆ ಎಂದರು ದೇವೇಗೌಡರು ತಿಳಿಸಿದರು.

ಇದನ್ನೂ ಓದಿ: Bhavani Revanna : ಅದು ನಮ್ಮ ಕಾರಲ್ಲ ಫ್ರೆಂಡ್‌ದು ಎಂದ ರೇವಣ್ಣ; ಭವಾನಿ ತಪ್ಪಿಗೂ ಕ್ಷಮೆ ಕೇಳಿದ್ರು!

ತೆಲಂಗಾಣ ಚುನಾವಣೆಯಲ್ಲಿ ರಾಜ್ಯದ ಹಣ ಬಳಕೆಯಾಗಿದೆ ಎಂದು ಆರೋಪಿಸಿದ ಮಾಜಿ ಪ್ರದಾನಿ ದೇವೇಗೌಡರು, ʻʻತೆಲಂಗಾಣದಲ್ಲಿ ಚುನಾವಣೆ ಗೆಲ್ಲಲು ಎಷ್ಟು ಹಣ ಇಲ್ಲಿಂದ‌ ಹೋಗಿದೆ? ಚುನಾವಣಾ ಆಯೋಗ ಎಷ್ಟು ಹಣ ಸೀಝ್ ಮಾಡಿದೆ? ತೆಲಂಗಾಣದಲ್ಲಿ ಕಾಂಗ್ರೆಸ್ ಕರ್ನಾಟಕದ ಹಣ ಹಂಚಿ ಗೆದ್ದಿದೆʼʼ ಎಂದು ಪ್ರಶ್ನಿಸಿದರು.

ಭವಾನಿಗೆ ಆರೋಗ್ಯ ಸರಿಯಿಲ್ಲ ಏನೇನೋ ಮಾತನಾಡಬೇಡಿ

ಭವಾನಿ ರೇವಣ್ಣ ಅವರು ಕಾರಿಗೆ ಬೈಕ್‌ ಡಿಕ್ಕಿಯಾದ ಪ್ರಕರಣ ಮತ್ತು ಅವರ ರೌದ್ರಾವತಾರದ ಬಗ್ಗೆ ಕೇಳಿದಾಗ, ಪಾಪ ಅವರಿಗೆ ಅರೋಗ್ಯ ಸರಿಯಿಲ್ಲ. ಅವರಿಗೆ ಎರಡೂ ಮಂಡಿ ಆಪರೇಷನ್ ಆಗಿದೆ. ಅವರ ಬಗ್ಗೆ ಸುಮ್ಮನೆ ಏನೇನೊ ಮಾತಾಡುತ್ತಾರೆ ಎಂದರು ದೇವೇಗೌಡರು.

Continue Reading

ಕರ್ನಾಟಕ

Teachers Promotion: ದೈಹಿಕ ಶಿಕ್ಷಕರ ಬಡ್ತಿ ಪ್ರಕ್ರಿಯೆ ಆರಂಭಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಒತ್ತಾಯ

Vijayapura News: ವಿಜಯಪುರ ಜಿಲ್ಲೆಯ ದೈಹಿಕ ಶಿಕ್ಷಕರ ಬಡ್ತಿ ಪ್ರಕ್ರಿಯೆಗಳನ್ನು ತಕ್ಷಣ ಆರಂಭಿಸಬೇಕು ಸೇರಿದಂತೆ ವಿವಿಧ ವಿಷಯಗಳ ಕುರಿತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕದ ವತಿಯಿಂದ ಡಿಡಿಪಿಐ ಎನ್.ಎಚ್. ನಾಗೂರ ಅವರನ್ನು ಭೇಟಿ ಮಾಡಿ, ಚರ್ಚಿಸಲಾಯಿತು.

VISTARANEWS.COM


on

Vijayapura News Promotion process of physical education teachers of the district to start immediately Primary School Teachers Association Demand
Koo

ವಿಜಯಪುರ: ಜಿಲ್ಲೆಯ ದೈಹಿಕ ಶಿಕ್ಷಕರ (Physical Education Teachers) ಬಡ್ತಿ ಪ್ರಕ್ರಿಯೆಗಳನ್ನು (Teachers Promotion) ತಕ್ಷಣ ಆರಂಭಿಸಬೇಕು ಎನ್ನುವುದೂ ಸೇರಿದಂತೆ ವಿವಿಧ ವಿಷಯಗಳ ಕುರಿತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ವತಿಯಿಂದ ಡಿಡಿಪಿಐ ಎನ್.ಎಚ್. ನಾಗೂರ ಅವರನ್ನು ಭೇಟಿ ಮಾಡಿ, ಚರ್ಚಿಸಲಾಯಿತು.

ನಗರದ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ಸೋಮವಾರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಡಿಡಿಪಿಐ ಎನ್.ಎಚ್. ನಾಗೂರ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದರು.

ಇದನ್ನೂ ಓದಿ: PSI Exam: ಪಿಎಸ್‌ಐ ಪರೀಕ್ಷೆ ಮುಂದೂಡಿಕೆ, ಜ. 23ಕ್ಕೆ ಫಿಕ್ಸ್‌: ಗೃಹ ಸಚಿವರ ಘೋಷಣೆ

ವಿಜಯಪುರ ಜಿಲ್ಲೆಯ ದೈಹಿಕ ಶಿಕ್ಷಕರ ಬಡ್ತಿ ಪ್ರಕ್ರಿಯೆಗಳನ್ನು ತಕ್ಷಣ ಆರಂಭಿಸಬೇಕು, ಪ್ರಾಥಮಿಕ ಶಾಲೆಯಿಂದ ಮುಖ್ಯ ಗುರುಗಳ ಹುದ್ದೆಗೆ ಬಡ್ತಿ ಕೊಡಲು ಪಟ್ಟಿ ಸಿದ್ದಪಡಿಸಬೇಕು, ಜಿಲ್ಲಾ ಗುರುಭವನ ಹಾಗೂ ಅದಕ್ಕೆ ಸಂಬಂಧಿಸಿದ ಇತರ ಸಿದ್ಧತೆಗಳನ್ನು ಹಾಗೂ ಅದರ ಬಾಕಿ ಉಳಿದ ಕೆಲಸವನ್ನು ಪೂರ್ಣಗೊಳಿಸಬೇಕು ಎಂದು ಕೋರಲಾಯಿತು.

ಇಂಡಿ ತಾಲೂಕು ಶೈಕ್ಷಣಿಕ ಸಮ್ಮೇಳನ ಜತೆಗೆ ರಾಜ್ಯ ಮಟ್ಟದ ಶೈಕ್ಷಣಿಕ ಕಾರ್ಯಗಾರವನ್ನು ವಿಜಯಪುರದಲ್ಲಿ ನಡೆಸುವ ಬಗ್ಗೆ ಸೇರಿದಂತೆ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಅಂಶಗಳು ಕುರಿತು ಚರ್ಚಿಸಲಾಯಿತು.

ಇದನ್ನೂ ಓದಿ: Karnataka Weather : ಮಿಚುಂಗ್ ಚಂಡಮಾರುತ ಎಫೆಕ್ಟ್‌; ನಾಳೆ ಭಾರಿ ಮಳೆ ಸಾಧ್ಯತೆ

ಈ ಸಂದರ್ಭದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ವಿಜಯಪುರ ಜಿಲ್ಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಅರ್ಜುನ ಲಮಾಣಿ, ಹನುಮಂತ ಕೊನದಿ, ಅಲ್ಲಾಭಕ್ಷ ವಾಲಿಕಾರ ಹಾಗೂ ಶಿಕ್ಷಣ ಅಧಿಕಾರಿ ಅಶೋಕ ಲಿಮಕಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Advertisement
Youth Sports
ಕ್ರೀಡೆ4 mins ago

Football Tournament : ರಿಲಯನ್ಸ್ ಫೌಂಡೇಶನ್ ಟ್ರೋಫಿ ಗೆದ್ದ ಸೇಂಟ್​ ಜೋಸೆಪ್ಸ್​ ಕಾಲೇಜು

labourers trapped
ಕರ್ನಾಟಕ6 mins ago

ಗೋದಾಮಿನಲ್ಲಿ ಯಂತ್ರ ಕುಸಿತ; ಜೋಳದ ಮೂಟೆಗಳಡಿ ಸಿಲುಕಿದ 10 ಕಾರ್ಮಿಕರು

Fresh violence in Manipur and 13 people found dead in village
ದೇಶ11 mins ago

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ! ಬಿತ್ತು ಲೀತು ಗ್ರಾಮದಲ್ಲಿ 13 ಜನರ ಹೆಣ

Ravi Bishnoi
ಕ್ರಿಕೆಟ್39 mins ago

Ravi Bishnoi : ರವಿ ಬಿಷ್ಣೋಯಿಯನ್ನು ಕೊಂಡಾಡಿದ ಲೆಜೆಂಡರಿ ಸ್ಪಿನ್ನರ್​

Lawyers celebrate
ಕರ್ನಾಟಕ40 mins ago

ಪೊಲೀಸರು ಹಾಕಿದ್ದ ಕೇಸ್‌ಗೆ ಹೈಕೋರ್ಟ್ ತಡೆಯಾಜ್ಞೆ; ಕಾಫಿನಾಡಿನಲ್ಲಿ ವಕೀಲರ ಸಂಭ್ರಮ

Devegowda PM Narendra Modi
ಕರ್ನಾಟಕ45 mins ago

HD Devegowda : ಕಾಂಗ್ರೆಸ್‌ ನಮ್ಮನ್ನು ದಬ್ಬಿದಾಗ ಮೋದಿ, ಶಾ ಕೈಹಿಡಿದರು ಎಂದ ದೇವೇಗೌಡ್ರು

Vijayapura News Promotion process of physical education teachers of the district to start immediately Primary School Teachers Association Demand
ಕರ್ನಾಟಕ54 mins ago

Teachers Promotion: ದೈಹಿಕ ಶಿಕ್ಷಕರ ಬಡ್ತಿ ಪ್ರಕ್ರಿಯೆ ಆರಂಭಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಒತ್ತಾಯ

India Bloc Meeting
ದೇಶ1 hour ago

ಕಾಂಗ್ರೆಸ್‌ಗೆ ಸೋಲು; ಇಂಡಿಯಾ ಕೂಟದಲ್ಲಿ ತಳಮಳ! ನಾಯಕತ್ವಕ್ಕೆ ಹಲವರ ಗಾಳ!

Neeraj Chopra
ಕ್ರೀಡೆ1 hour ago

Neeraj Chopra: ಬುಮ್ರಾಗೆ ಬೌಲಿಂಗ್ ಟಿಪ್ಸ್ ಕೊಟ್ಟ ಚಿನ್ನದ ಹುಡುಗ ನೀರಜ್​ ಚೋಪ್ರಾ

Dinesh Gooligowda
ಕರ್ನಾಟಕ1 hour ago

ಕಾರ್ಯಾಚರಣೆಗೆ ಅರ್ಜುನ ಬಳಕೆ ಕಾನೂನುಬಾಹಿರ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ದಿನೇಶ್‌ ಗೂಳಿಗೌಡ ಆಗ್ರಹ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ15 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌