Site icon Vistara News

ತುಮಕೂರು: ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ 15 ವರ್ಷದ ಬಾಲಕ ಸಾವು

tumkur chethan

ತುಮಕೂರು: ಗಣೇಶಮೂರ್ತಿ ವಿಸರ್ಜನೆ ವೇಳೆ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡ ದಾರುಣ ವಿದ್ಯಮಾನ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ಮುದಿಗೆರೆ ಕಟ್ಟೆಯಲ್ಲಿ ಘಟನೆ ನಡೆದಿದ್ದು, ಭೀಮಸಂದ್ರ ನಿವಾಸಿ ಚೇತನ್‌ (೧೫) ಮೃತ ಬಾಲಕ.

ಗಣೇಶೋತ್ಸವದ ಮೆರವಣಿಗೆಯಲ್ಲಿ ಸಂಭ್ರಮದಿಂದ ಭಾಗವಹಿಸಿದ್ದ ಆತ, ನೀರಿಗೂ ಇಳಿದಿದ್ದ. ಈ ವೇಳೆ ಕಾಲು ಜಾರಿ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾನೆ. ಸ್ಥಳಕ್ಕೆ ಬೆಳ್ಳಾವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐದು ದಿನಗಳ ಕಾಲ ಗಣೇಶನನ್ನು ಇಟ್ಟು ಪೂಜೆ ಮಾಡುವವರು ಭಾನುವಾರ ಸಂಜೆ ಅದ್ಧೂರಿಯಾಗಿ ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ಕೆರೆಗಳಿಗೆ ತೆಗೆದುಕೊಂಡು ಹೋಗಿ ವಿಸರ್ಜನೆ ನಡೆಸಿದರು.

Exit mobile version