Site icon Vistara News

ಚಂದ್ರು ಸಾವು ಸಹಜವಲ್ಲ, ಕೊಲೆ ಎಂದ ರೇಣುಕಾಚಾರ್ಯ

renukacharya

ದಾವಣಗೆರೆ: ಸಹೋದರನ ಪುತ್ರ ಚಂದ್ರಶೇಖರ್‌ ಅಪಘಾಥದಲ್ಲಿ ಸಾವನ್ನಪ್ಪಿಲ್ಲ, ಅದು ಕೊಲೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ನನಗೆ ವರ್ಷದ ಹಿಂದೆ ಬೆದರಿಕೆ ಕರೆ ಬಂದಿತ್ತು. ನನಗೆ ಕೊಲೆ ಬೆದರಿಕೆ ಇದೆ ಎಂದು ಇತ್ತೀಚೆಗೂ ನಾನು ಹೇಳಿಕೊಂಡಿದ್ದೆ. ಕ್ಷೇತ್ರದಲ್ಲಿ ಅವನ ಉನ್ನತಿ ಸಹಿಸಲಾಗದೆ ಕೊಲೆ ಮಾಡಿದ್ದಾರೆ. ದೇಹದ ಮೇಲೆ ಒಂದಷ್ಟು ಕಲೆಗಳಿವೆ. ಪೊಲೀಸರು ತನಿಖೆ ಮಾಡುತ್ತಿದ್ದಾರೆ.
ಸರ್ಕಾರ ನಿನ್ನ ಜೊತೆ ಇದೆ, ನ್ಯಾಯ ಸಿಗುತ್ತದೆ ಎಂದು ಸಿಎಂ ಬೊಮ್ಮಾಯಿ ಕೂಡ ಭರವಸೆ ಕೊಟ್ಟಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ನನ್ನ ಮಗನ ಸಾವು ಸಹಜ ಸಾವಲ್ಲ. ನನ್ನ‌ ಮಗ ಕಿಡ್ನಾಪ್ ಆಗಿದ್ದಾನೆ ಎಂದು ಪೊಲೀಸರಿಗೆ ಮೊದಲೇ ಹೇಳಿದ್ದೆ. ಅವನು ನನ್ನ ಜೊತೆ ಕ್ಷೇತ್ರದಲ್ಲಿ ಬೆಂಬಲವಾಗಿದ್ದ, ಜನರ ಪ್ರೀತಿ ಗಳಿಸಿದ್ದ. ಪೊಲೀಸರು ತನಿಖೆ ನಡೆಸಿ ನ್ಯಾಯ ಒದಗಿಸಲಿ ಎಂದು ರೇಣುಕಾಚಾರ್ಯ ಹೇಳಿದ್ದಾರೆ. ಚಂದ್ರಶೇಖರ್‌ನ್ನು ಕೊಲೆ ಮಾಡಿ ನಾಲೆಗೆ ಹಾಕಿದ್ದಾರೆ ಎಂದು ರೇಣುಕಾಚಾರ್ಯ ಕುಟುಂಬ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಇದನ್ನೂ ಓದಿ | ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್‌ ಅಂತ್ಯಸಂಸ್ಕಾರ ಇಂದು ಕುಂದೂರಿನಲ್ಲಿ

Exit mobile version