ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಸುಳಿವು ನೀಡಿದ ಬಿ.ಎಸ್‌. ಯಡಿಯೂರಪ್ಪ - Vistara News

ಕರ್ನಾಟಕ

ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಸುಳಿವು ನೀಡಿದ ಬಿ.ಎಸ್‌. ಯಡಿಯೂರಪ್ಪ

ಸಿಎಂ ಸ್ಥಾನವನ್ನು ಬದಲಾವಣೆ ಮಾಡುವುದಿಲ್ಲ ಎಂದು ಬಿಜೆಪಿ ವರಿಷ್ಠರು ಹೇಳಿರುವುದರಿಂದ, ರಾಜ್ಯ ಅಧ್ಯಕ್ಷರ ಬದಲಾವಣೆ ಆಗುವ ಸಾಧ್ಯತೆ ಹೆಚ್ಚಾಗಿದೆ ಎಂಬ ಚರ್ಚೆಗಳು ಪಕ್ಷದಲ್ಲಿ ನಡೆಯುತ್ತಿವೆ.

VISTARANEWS.COM


on

gujarat-election-results-BS yediyurappa hopes BJP will win more than one hundred and fourty seats in karnataka
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರನ್ನು ಬದಲಾವಣೆ ಮಾಡಲಾಗುತ್ತದೆಯೇ ಇಲ್ಲವೇ ಎಂಬ ಚರ್ಚೆಗಳ ನಡುವೆಯೇ ಮಾಜಿ ಸಿಎಂ ಹಾಗೂ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ನವದೆಹಲಿಗೆ ತೆರಳಿದ್ದು, ಈ ಕುರಿತು ಚರ್ಚೆಯನ್ನು ಮುಕ್ತವಾಗಿರಿಸಿದ್ದಾರೆ.

ದಿಢೀರನೆ ಗುರುವಾರ ಪ್ರವಾಸ ನಿಗದಿಪಡಿಸಿಕೊಂಡು ನವದೆಹಲಿಗೆ ಆಗಮಿಸಿರುವ ಬಿ.ಎಸ್‌. ಯಡಿಯೂರಪ್ಪ, ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಪ್ರಧಾನಿ ನರೇಂದ್ರ ಮೋದಿಯವರನ್ನು ಸದ್ಯದಲ್ಲಿಯೇ ಭೇಟಿ ಮಾಡುತ್ತಿದ್ದೇನೆ. ರಾತ್ರಿ ಎಂಟು ಗಂಟೆಗೆ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲು ಸಮಯ ನಿಗದಿಯಾಗಿದೆ. ಗೃಹಸಚಿವ ಅಮಿತ್‌ ಷಾ ಅವರ ಭೇಟಿ ಮಾಡುವ ಪ್ರಯತ್ನವೂ ನಡೆಯುತ್ತಿದೆ, ಇನ್ನೂ ಸಮಯ ನಿಗದಿಯಾಗಿಲ್ಲ. ಮೂವರನ್ನೂ ಇಂದೇ ಭೇಟಿ ಮಾಡುವವನಿದ್ದೇನೆ ಎಂದರು.

ಇದನ್ನೂ ಓದಿ | ಅಲುಗಾಡಿದ್ದು ಕಟೀಲ್‌ ಕಾರಲ್ಲ, BJP ರಾಜ್ಯಾಧ್ಯಕ್ಷರ ಸೀಟು: ಸಮಸ್ಯೆ ಪರಿಹಾರಕ್ಕೆ 3 ಆಯ್ಕೆಗಳು

ಇದು ಸೌಹಾರ್ದಯುತ ಭೇಟಿಯೇ ಅಥವಾ ರಾಜಕೀಯ ಚರ್ಚೆ ನಡೆಯಬಹುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಉನ್ನತ ಸ್ಥಾನವನ್ನು ವರಿಷ್ಠರು ನೀಡಿದಾಗ ಅವರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸುವುದು ಕರ್ತವ್ಯ. ಭೇಟಿ ಮಾಡಿದಾಗ ಸಹಜವಾಗಿ ರಾಜಕೀಯ ವಿಚಾರ, ರಾಜ್ಯದಲ್ಲಿ ಸ್ಥಿತಿಗತಿ ಕುರಿತು ಚರ್ಚೆ ನಡೆದೇ ನಡೆಯುತ್ತದೆ ಎಂದರು. ಈ ಮೂಲಕ, ಈ ಭೇಟಿಯ ಮಹತ್ವವನ್ನು ಬಿಚ್ಚಿಟ್ಟರು.

ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಕುರಿತು ಪ್ರತಿಕ್ರಿಯಿಸಿ, ನಾನಂತೂ ಈ ವಿಚಾರವನ್ನು ಮುಂದಿಟ್ಟುಕೊಂಡು ಬಂದಿಲ್ಲ. ಆದರೆ ಚರ್ಚೆಯಾಗಬಹುದೇ ಇಲ್ಲವೇ ಗೊತ್ತಿಲ್ಲ ಎಂದರು. ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದೇ ಇಲ್ಲ ಎಂದು ಖಡಾಖಂಡಿತವಾಗಿ ಯಡಿಯೂರಪ್ಪ ಹೇಳಲಿಲ್ಲ. ಈ ಮೂಲಕ ಕೆಲವೇ ದಿನಗಳಲ್ಲಿ ಯಾವ ಬದಲಾವಣೆಗಳು ಬೇಕಾದರೂ ನಡೆಯಬಹುದು ಎನ್ನಲಾಗಿದೆ.

ಗುರುವಾರವಷ್ಟೆ ಉತ್ತರ ಪ್ರದೇಶ ಹಾಗೂ ತ್ರಿಪುರಾ ಬಿಜೆಪಿ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಬದಲಾವಣೆ ಮಾಡಬೇಕೆ ಬೇಡವೆ ಎಂಬ ಚರ್ಚೆಗಳು ನಡೆಯುತ್ತಿವೆ. ಯಡಿಯೂರಪ್ಪ ಅವರೊಂದಿಗೆ ವರಿಷ್ಠರು ಯಾವ ಮಾತುಕತೆ ನಡೆಸುತ್ತಾರೆ ಎಂಬ ಕುತೂಹಲ ಮೂಡಿದೆ.

ಮಂಗಳೂರಿಗೆ ಬರುವ ವೇಳೆಗೆ ನಿರ್ಧಾರ?

ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್‌ 2ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಒಟ್ಟಿಗೆ ಸೇರಿಸಿ ಸಮಾವೇಶ ನಡೆಸುವ ಕಾರ್ಯಕ್ರಮವಿದೆ. ಸುಮಾರು ಒಂದು ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ.

ಈ ಕಾರ್ಯಕ್ರಮಕ್ಕೆ ಮೋದಿ ಆಗಮಿಸಿದ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಲ್ಲದಿದ್ದರೂ ದಕ್ಷಿಣ ಕನ್ನಡ ಸಂಸದರಾಗಿಯಾದರೂ ನಳಿನ್‌ ಕುಮಾರ್‌ ಕಟೀಲ್‌ ಉಪಸ್ಥಿತಿ ಇರಲೇಬೇಕಾಗುತ್ತದೆ. ಪ್ರವೀಣ್‌ ನೆಟ್ಟಾರು ಹತ್ಯೆಯ ನಂತರ ಪಾರ್ಥಿವ ಶರೀರದ ದರ್ಶನಕ್ಕೆ ಆಗಮಿಸಿದ್ದ ನಳಿನ್‌ಕುಮಾರ್‌ ಕಟೀಲ್‌ ಅವರ ಕಾರನ್ನು ಅಲುಗಾಡಿಸಿದ್ದು ಇಡೀ ಸಂಘಟನೆಯಲ್ಲೇ ಆತಂಕ ಸೃಷ್ಟಿಸಿತ್ತು.

ನಂತರದಲ್ಲಿ ಯುವಮೋರ್ಚಾ ಕಾರ್ಯಕರ್ತರು ಸರಣಿ ರಾಜೀನಾಮೆ ನೀಡಲು ಆರಂಭಿಸಿದ್ದರು. ರಾಜ್ಯ ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದರು. ಇತ್ತೀಚೆಗೆ ಅಂತಹ ಘಟನೆಗಳು ಯಾವುದೂ ನಡೆದಿಲ್ಲವಾದರೂ, ಕಾರ್ಯಕರ್ತರ ಅಸಮಾಧಾನಕ್ಕೆ ಯಾವುದೇ ಪರಿಹಾರ ಸಿಕ್ಕಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಅಧಿಕಾರದಲ್ಲಿರುವವರ ಬದಲಾವಣೆಯಾಗಲಿ ಆಗಿಲ್ಲ. ಸೆಪ್ಟೆಂಬರ್‌ 2ರಂದು ಮೋದಿ ಆಗಮಿಸಿದಾಗ ಇಂತಹ ಘಟನೆಗಳಾಗಲಿ, ಪಕ್ಷದ ನಾಯಕತ್ವದ ವಿರುದ್ಧ ಘೋಷಣೆಗಳಾಗಲಿ ಹೊರಬೀಳದಂತೆ ತಡೆಯುವ ಸವಾಲು ಇದೀಗ ಬಿಜೆಪಿ ನಾಯಕರ ಮೇಲಿದೆ. ಸಿಎಂ ಸ್ಥಾನವನ್ನು ಬದಲಾವಣೆ ಮಾಡುವುದಿಲ್ಲ ಎಂದು ಬಿಜೆಪಿ ವರಿಷ್ಠರು ಹೇಳಿರುವುದರಿಂದ, ರಾಜ್ಯ ಅಧ್ಯಕ್ಷರ ಬದಲಾವಣೆ ಆಗುವ ಸಾಧ್ಯತೆ ಹೆಚ್ಚಾಗಿದೆ ಎಂಬ ಚರ್ಚೆಗಳು ಪಕ್ಷದಲ್ಲಿ ನಡೆಯುತ್ತಿವೆ.

ಇದನ್ನೂ ಓದಿ | Praveen Nettaru | ತಾಕ್ಕತ್ತಿದ್ರೆ ಒಬ್ಬನೇ ಒಬ್ಬ ಕಾರ್ಯಕರ್ತನ ಮುಟ್ಟಿ ನೋಡಿ ಎಂದಿದ್ದ ನಳಿನ್‌ ಕುಮಾರ್‌ ಕಟೀಲ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rave Party: ರೇವ್‌ ಪಾರ್ಟಿ ಕೇಸ್‌ನಲ್ಲಿ ತೆಲುಗು ನಟಿ ಹೇಮಾಗೆ 12 ದಿನ ನ್ಯಾಯಾಂಗ ಬಂಧನ

Rave Party: ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನಡೆದಿದ್ದ ರೇವ್‌ ಪಾರ್ಟಿ ಪ್ರಕರಣದಲ್ಲಿ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಮಾದಕ ವಸ್ತು ಸೇವನೆ ಆರೋಪದಲ್ಲಿ ತೆಲುಗು ನಟಿ ಹೇಮಾ ಅವರನ್ನು ಬಂಧಿಸಲಾಗಿದೆ.

VISTARANEWS.COM


on

Rave Party
Koo

ಬೆಂಗಳೂರು: ರೇವ್‌ ಪಾರ್ಟಿ ಪ್ರಕರಣದಲ್ಲಿ (Rave Party) ಬಂಧನವಾಗಿದ್ದ ತೆಲುಗು ನಟಿ ಹೇಮಾ ಅವರಿಗೆ 12 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು, ನಟಿ ಹೇಮಾ ಅವರನ್ನು ಜೂನ್‌ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದ್ದಾರೆ.

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ಸೋಮವಾರ ಸಂಜೆ ನಟಿ ಹೇಮಾ ಹಾಜರಾಗಿದ್ದರು. ಈ ವೇಳೆ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.

ರೇವ್ ಪಾರ್ಟಿಯಲ್ಲಿ ಮಾದಕ ವಸ್ತು ಸೇವಿಸಿದ ಹಿನ್ನೆಲೆಯಲ್ಲಿ ತೆಲುಗು ನಟಿ ಹೇಮಾ (Telugu actress Hema) ಅವರನ್ನು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದರು. ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾದಾಗ ಅವರನ್ನು ಬಂಧಿಸಲಾಗಿತ್ತು. ವೈದ್ಯಕೀಯ ಪರೀಕ್ಷೆ ಬಳಿಕ ರಾತ್ರಿ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಅವರ ಮುಂದೆ ನಟಿಯನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶೆ, ನಟಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಡ್ರಗ್ಸ್ ಮತ್ತು ರೇವ್ ಪಾರ್ಟಿ ಆಯೋಜನೆಯಲ್ಲಿ ನಟಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗೆಯೇ ತಾವು ಬೇರೆ ಕಡೆ ಇರುವುದಾಗಿ ವಿಡಿಯೊ ಮಾಡಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದರಿಂದ ನಟಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ | Rave Party: ರೇವ್ ಪಾರ್ಟಿ ಪ್ರಕರಣ; ವಿಚಾರಣೆಗೆ ಹಾಜರಾದ ತೆಲುಗು ನಟಿ ಹೇಮಾ ಅರೆಸ್ಟ್‌

ಎಂಡಿಎಂಎ ಸೇವಿಸಿದ್ದ ನಟಿ

ನಟಿ ಹೇಮಾ ಯಾವ ಡ್ರಗ್ಸ್ ಸೇವಿಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಅವರು ಎಂಡಿಎಂಎ ಎಂಬ ಡ್ರಗ್ಸ್ ಅನ್ನು ಸೇವನೆ ಮಾಡಿದ್ದರು ಎಂದು ವರದಿ ಹೇಳುತ್ತಿದೆ. ಮಾತ್ರೆ ರೂಪದಲ್ಲಿ ಇರುವ ಈ ಡ್ರಗ್ಸ್ ಅನ್ನು ಪಾರ್ಟಿಯಲ್ಲಿ ನೀಡಲಾಗಿತ್ತು. ಹೇಮಾ ಅವರು ಈ ಎಂಡಿಎಂಎ ಮಾತ್ರೆಯನ್ನು ತೆಗೆದುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ಸದ್ಯ ಈ ಪಾರ್ಟಿಯನ್ನು ಆಯೋಜನೆ ಮಾಡಿರುವ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆ ಐವರನ್ನು ಈಗ ವಶಕ್ಕೆ ಪಡೆದುಕೊಳ್ಳಲು ಸಿಸಿಬಿ ಅರ್ಜಿ ಸಲ್ಲಿಸಲು ಮುಂದಾಗಿದೆ. ಅವರನ್ನು ಮತ್ತಷ್ಟು ವಿಚಾರಣೆಗೊಳಪಡಿಸಲು ಪ್ಲ್ಯಾನ್‌ ಮಾಡಿದ್ದು, ಈ ಡ್ರಗ್ಸ್‌ಗಳು ಎಲ್ಲಿಂದ ಬಂದವು? ಯಾರು ವಿತರಣೆ ಮಾಡುತ್ತಿದ್ದಾರೆ? ಇದರ ಜಾಲ ಯಾವುದು? ಎಂಬಿತ್ಯಾದಿ ಅಂಶಗಳನ್ನು ಬಯಲಿಗೆಳೆಯಲು ತಯಾರಿ ನಡೆಸಲಾಗಿದೆ.

ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದ ತೆಲುಗು ನಟಿ ಹೇಮಾ!

ರೇವ್‌ ಪಾರ್ಟಿಗೆ ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ ಅವರು ಪೊಲೀಸರ ಮುಂದೆ ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್‌ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.

ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ಸಿಕ್ಕಿರುವ ಕೇಸ್‌ನ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಎರಡು ದಿನ ಎಗ್ಗಿಲ್ಲದೆ ಪಾರ್ಟಿ ನಡೆದಿದೆ. ಹೀಗಾಗಿ ಆ ಜೋಶ್‌ನಲ್ಲಿದ್ದ ನಟಿ ಹೇಮಾ ಅವರು ಪೊಲೀಸರು ದಾಳಿ ಮಾಡಿದ ವೇಳೆ ತಮ್ಮ ಬಗ್ಗೆ ಹೇಳಿಕೊಂಡು ಸರಿಯಾಗಿ ಸಿಕ್ಕಿಬಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ತಾವು ದೊಡ್ಡ ಹಳ್ಳ ತೋಡಿ ಬಚಾವ್‌ ಆಗುತ್ತೇನೆ ಎಂದು ಮಾಡಿದ ಪ್ಲ್ಯಾನ್‌ ಫ್ಲಾಪ್‌ ಆಗಿದ್ದು, ಆ ಹಳ್ಳಕ್ಕೆ ಅವರೇ ಬಿದ್ದಂತೆ ಆಗಿದೆ.

ಇದನ್ನೂ ಓದಿ | Viral News: ಕದಿಯಲು ಬಂದ ಮನೆಯಲ್ಲೇ ನಿದ್ದೆಹೋದ ಕಳ್ಳ; ಪೊಲೀಸರೇ ಎಬ್ಬಿಸಬೇಕಾಯಿತು!

ಅಸಲಿಗೆ ಸಿಸಿಬಿ ಪೊಲೀಸರಿಗೆ ಹೇಮಾ ಒಬ್ಬರು ನಟಿ ಎಂಬುದೇ ಗೊತ್ತಾಗಿರಲಿಲ್ಲ. ಸಾಮಾನ್ಯವಾಗಿ ಎಲ್ಲರನ್ನು ವಿಚಾರಣೆ ನಡೆಸುವಂತೆಯೇ ಹೇಮಾರನ್ನೂ ವಿಚಾರಿಸುತ್ತಿದ್ದರು. ಈ ವೇಳೆ ಪೊಲೀಸರರ ಮುಂದೆ ಹೇಮಾ ನಾನು ದೊಡ್ಡ ನಟಿ ಇದ್ದೇನೆ. ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದೇನೆ ಎಂದು ಹೇಳಿಕೊಂಡಿದ್ದರು. ಆಗ ಪೊಲೀಸರು ಪರಿಶೀಲನೆ ಮಾಡಿದಾಗ ಆಕೆ ನಟಿ ಅನ್ನೋದು ಗೊತ್ತಾಗಿದೆ.

Continue Reading

ಬೆಂಗಳೂರು

Book Release: ಬೆಂಗಳೂರಿನಲ್ಲಿ ಜೂ. 5ರಂದು ಗ್ರಂಥ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ

Book Release: ಕಲಬುರಗಿಯ ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಬೆಂಗಳೂರಿನ ಉದಯ ಪ್ರಕಾಶನದ ಸಹಯೋಗದಲ್ಲಿ ಬೆಂಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜೇಂದ್ರ ಪರಿಷನ್ಮಂದಿರದಲ್ಲಿ ಇದೇ ಜೂ. 6 ರಂದು ಬುಧವಾರ ಸಂಜೆ 5.30ಕ್ಕೆ ಜ್ಞಾನಸಿಂಧು ಚಿದಾನಂದಾವಧೂತರ ವೇದಾಂತ ಕಾವ್ಯ (ಸಂ. ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ) ಗ್ರಂಥ ಲೋಕಾರ್ಪಣೆ ಮತ್ತು ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Grantha Lokarpane and award ceremony on June 5 in Bengaluru
Koo

ಬೆಂಗಳೂರು: ಕಲಬುರಗಿಯ ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಬೆಂಗಳೂರಿನ ಉದಯ ಪ್ರಕಾಶನದ ಸಹಯೋಗದಲ್ಲಿ ಬೆಂಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜೇಂದ್ರ ಪರಿಷನ್ಮಂದಿರದಲ್ಲಿ ಇದೇ ಜೂ. 5ರಂದು ಬುಧವಾರ ಸಂಜೆ 5.30ಕ್ಕೆ ಜ್ಞಾನಸಿಂಧು ಚಿದಾನಂದಾವಧೂತರ ವೇದಾಂತ ಕಾವ್ಯ (ಸಂ.: ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ) ಗ್ರಂಥ ಲೋಕಾರ್ಪಣೆ (Book Release) ಮತ್ತು ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಧಾರವಾಡದ ಚೈತನ್ಯಾಶ್ರಮದ ಶ್ರೀ ದತ್ತಾವಧೂತ ಗುರುಗಳು ಕಾರ್ಯಕ್ರಮದಲ್ಲಿ ಸಾನ್ನಿಧ್ಯ ಮತ್ತು ಗ್ರಂಥ ಲೋಕಾರ್ಪಣೆ ಮಾಡುವರು. ಬೆಂಗಳೂರಿನ ಕರ್ನಾಟಕ ಗಾಂಧಿಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ. ವೂಡೇ ಪಿ. ಕೃಷ್ಣ ಪ್ರಶಸ್ತಿ ಪ್ರದಾನ ಮಾಡುವರು. ಹುಬ್ಬಳ್ಳಿ ಸಿದ್ಧಾರೂಢ ಆಶ್ರಮದ ಟ್ರಸ್ಟಿ ಶಾಮಾನಂದ ಪೂಜೇರಿ ಗ್ರಂಥ ಪರಿಚಯ ಮಾಡುವರು.

ಇದನ್ನೂ ಓದಿ: Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

ಬೆಂಗಳೂರಿನ ಕೃಷ್ಣರಾಜಪುರದಲ್ಲಿರುವ ಸಿಲಿಕಾನ್‌ ಸಿಟಿ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಎಚ್‌.ಎಸ್‌. ಗೋವರ್ಧನ ಅವರು ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಸ್ವೀಕರಿಸುವರು. ಬೆಂಗಳೂರಿನ ವರ್ತೂರಿನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಚಂದ್ರಪ್ಪ, ಪ್ರೊ. ಮಲ್ಲೇಪುರಂ ಪುಸ್ತಕ ಬಹುಮಾನ (ದಿ. ಬಸಲಿಂಗಪ್ಪ ಮಲ್ಕಪ್ಪ ಕಟ್ಟಿ ಸ್ಮರಣಾರ್ಥ) ಸ್ವೀಕರಿಸುವರು.

ಇದನ್ನೂ ಓದಿ: Hornbill Bird: ಗಂಗಾವತಿಯಲ್ಲಿ ‘ಹಾರ್ನ್‌ಬಿಲ್’ ಪಕ್ಷಿ ಪ್ರತ್ಯಕ್ಷ

ಮುಖ್ಯ ಅತಿಥಿಯಾಗಿ ಬೆಂಗಳೂರಿನ ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷ ಪ್ರಕಾಶ್‌ ಕಂಬತ್ತಳ್ಳಿ ಪಾಲ್ಗೊಳ್ಳುವರು. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಗ್ರಂಥ ಸಂಪಾದಕರ ನುಡಿಗಳನ್ನಾಡಲಿದ್ದಾರೆ.

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಿಎಂ ಸಿದ್ದರಾಮಯಯ್ಯ ನೇರ ಹೊಣೆ ಎಂದ ಎಚ್‌ಡಿಕೆ

Valmiki Corporation Scam: ವಾಲ್ಮೀಕಿ ನಿಗಮದ ಹಗರಣದ ತನಿಖೆ ಆಮೆ ವೇಗದಲ್ಲಿದೆ. ಆದರೆ ಹಣ ವರ್ಗಾವಣೆ ಮಾತ್ರ ರಾಕೆಟ್ ವೇಗದಲ್ಲಿ ನಡೆದಿದೆ. ಎಲ್ಲಾ ನಿಗಮ ಮಂಡಳಿ ಹಣ ವ್ಯವಹಾರದ ಬಗ್ಗೆ ತನಿಖೆ ಆಗಲಿ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Corporation Scam) ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಎಲ್ಲವನ್ನೂ ಸಚಿವ ನಾಗೇಂದ್ರ ಅವರ ತಲೆಗೆ ಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಅಕ್ರಮದಲ್ಲಿ ಸರ್ಕಾರದ ಇಡೀ ಸಂಪುಟವೇ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಎಲ್ಲಾ ನಿಗಮ ಮಂಡಳಿಗಳಲ್ಲಿ ಇರುವ ಹಣದ ಬಗ್ಗೆ ಜನರ ಮುಂದೆ ಲೆಕ್ಕ ಇಡಬೇಕು ಎಂದು ಒತ್ತಾಯ ಮಾಡಿದರು.

ನಿಗಮದ ಹಣ ಹಲವಾರು ನಕಲಿ ಖಾತೆಗಳಿಗೆ ವರ್ಗಾವಣೆ ಆಗಿದೆ. ಈ ಬಗ್ಗೆ ದಾಖಲೆಗಳೇ ಬಹಿರಂಗ ಆಗಿವೆ. ಕೇವಲ ತೆಲಂಗಾಣಕ್ಕೆ ಮಾತ್ರ ಈ ಹಣ ಯಾಕೆ ಹೋಯಿತು? ಯಾರು ವರ್ಗಾವಣೆ ಮಾಡಿಸಿದರು? ಇಲ್ಲಿ ಯೂನಿಯನ್ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಅದ ಕೆಲ ಹೊತ್ತಿನಲ್ಲಿ ನಕಲಿ ಬ್ಯಾಂಕ್ ಖಾತೆಗಳಿಂದ ರಾಕೆಟ್ ವೇಗದಲ್ಲಿ ಅಷ್ಟೂ ದೊಡ್ಡ ಮೊತ್ತ ಹಣವನ್ನು ಡ್ರಾ ಮಾಡಲಾಗಿದೆ. ಇದು ಬಹುದೊಡ್ಡ ಅಕ್ರಮ. ಸಿಎಂ ಸೇರಿದಂತೆ ಇಡೀ ಸಂಪುಟವೇ ಶಾಮೀಲಾಗಿದೆ ಎಂದು ಅವರು ನೇರ ಆರೋಪ ಮಾಡಿದರು.

ಇದನ್ನೂ ಓದಿ | PM Narendra Modi: ವಿಕಸಿತ ಭಾರತಕ್ಕೆ ಭದ್ರ ಅಡಿಪಾಯ; ದೇಶದ ಜನತೆಗೆ ಮೋದಿ ಭಾವುಕ ಪತ್ರ

ಕೇವಲ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಮಾತ್ರ ಹಣ ವರ್ಗಾವಣೆ ಆಗಿರಲು ಸಾಧ್ಯವಿಲ್ಲ. ಬೇರೆ ಬೇರೆ ಇಲಾಖೆಗಳ ನಿಗಮ ಮಂಡಳಿಗಳ ಖಾತೆಗಳಿಂದ ಹಣ ವರ್ಗ ಆಗಿರುವ ಸಾಧ್ಯತೆ ಇದೆ. ತೆಲಂಗಾಣ ಚುನಾವಣೆಗೆ ರಾಜ್ಯದಿಂದ ಯಾರೆಲ್ಲ ಉಸ್ತುವಾರಿಗಳು ಇದ್ದರು? ಅದನ್ನೆಲ್ಲ ಗಮನಿಸಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಎಲ್ಲಾ ನಿಗಮ ಮಂಡಳಿ ಹಣ ವ್ಯವಹಾರದ ಬಗ್ಗೆ ತನಿಖೆ ಆಗಲಿ

ಈ ಹಗರಣಕ್ಕೆ ಸಂಬಂಧಿಸಿ 14 ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ. ಆ ಖಾತೆಗಳನ್ನು ತೆರೆದವರು ಯಾರು? ಯಾವೆಲ್ಲ ಕಾಣದ ಕೈಗಳು ಇವುಗಳ ಹಿಂದೆ ಇವೆ? ಎಲ್ಲಾ ಹೊರಗೆ ಬರಬೇಕು ಅಲ್ಲವೇ? ಈ ಸರ್ಕಾರಕ್ಕೆ ನಾಚಿಕೆ ಮಾನ ಮರ್ಯಾದೆ ಎನ್ನುವುದು ಇದೆಯಾ? ಎಲ್ಲಾ ನಿಗಮ ಮಂಡಳಿಗಳ ಹಣದ ವ್ಯವಹಾರದ ಬಗ್ಗೆ ತನಿಖೆ ನಡೆದರೆ ಇನ್ನೆಷ್ಟು ಅಕ್ರಮಗಳು ಹೊರಗೆ ಬರುತ್ತವೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕಳವಳ ವ್ಯಕ್ತಪಡಿಸಿದರು.

ಹಣಕಾಸಿನ ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರೇ ಇದಕ್ಕೆಲ್ಲ ನೇರ ಜವಾಬ್ದಾರಿ ಹೊರಬೇಕು. ಹಗರಣದ ತನಿಖೆ ಬಗ್ಗೆ ಆಮೆ ವೇಗ! ಆದರೆ ಹಣ ವರ್ಗಾವಣೆ ಮಾಡಿಕೊಳ್ಳಲು ರಾಕೆಟ್ ವೇಗ!, ಇದು ಇವರ ಕಾರ್ಯವೈಖರಿ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಇಷ್ಟು ಮೊತ್ತದ ಹಣವನ್ನು ಯಾರ ನಿರ್ದೇಶನದ ಮೇರೆಗೆ ಮಾಡಿದ್ದರು. ನಿಗಮ ಆಡಳಿತ ಮಂಡಳಿ ಸಭೆಯಲ್ಲಿ ಇದೆಲ್ಲಾ ಚರ್ಚೆ ನಡೆದು ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಜನರ ತೆರಿಗೆ ಹಣ, ಅವರ ಬೆವರಿನ ಹಣ. ಜನರ ದುಡ್ಡನ್ನು ಇಷ್ಟು ಸ್ವೇಚ್ಛಾಚಾರವಾಗಿ ಬಳಕೆ ಮಾಡಿಕೊಂಡಿದ್ದಾರೆ. ನಿಮಗೆ ಯಾವ ನೈತಿಕತೆ ಇದೆ ಸಿದ್ದರಾಮಯ್ಯನವರೇ? ಬಡವರ ದುಡ್ಡನ್ನೇ ಕೊಳ್ಳೆ ಹೊಡೆಯೋದು, ಅವರನ್ನು ಉದ್ಧಾರ ಮಾಡುತ್ತಿದ್ದೇವೆ ಎಂದು ನಾಟಕ ಆಡೋದು. ಇದು ಯಾವ ಸೀಮೆ ಅಭಿವೃದ್ಧಿ? ಎಂದು ಅವರು ಖಾರವಾಗಿ ಪ್ರಶ್ನೆ ಮಾಡಿದರು.

ಪ್ರಿಯಾಂಕ್ ಖರ್ಗೆ ಏನು ಹೇಳುತ್ತಾರೆ?

ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬಹಳ ಮಾತನಾಡುತ್ತಾರೆ. ಪ್ರತಿಯೊಂದಕ್ಕೂ ಮುಂದೆ ಬಂದು ಹೇಳಿಕೆ ಕೊಡುತ್ತಾರೆ. ಇದಕ್ಕೂ ಅವರು ಉತ್ತರ ಕೊಡಲಿ. ಯಾರಪ್ಪನ ಮನೆಯ ದುಡ್ಡು ಇದು? ಕೇಂದ್ರ ಸರ್ಕಾರ ದುಡ್ಡು ಕೊಡುತ್ತಿಲ್ಲ ಎಂದು ಹೇಳುತ್ತೀರಿ, ಇನ್ನೊಂದು ಕಡೆ ಇರುವ ಹಣವನ್ನು ಹೀಗೆ ಲೂಟಿ ಮಾಡುತ್ತೀರಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. KRDL ಖರ್ಗೆ ಅವರ ಇಲಾಖೆಗೆ ಸೇರಿದ್ದು. ಅಲ್ಲಿಯೂ ಒಬ್ಬ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರ ಬಗ್ಗೆ ಪ್ರಿಯಾಂಕ್ ಮಾತಾಡ್ತಾರಾ? ಎಂದು ಅವರು ಪ್ರಶ್ನಿಸಿದರು.

ಕಾಂಗ್ರೆಸ್ ಹೈ ಕಮಾಂಡ್ ಮಾಡಿಸಿದೆ

ದೆಹಲಿ ಕಾಂಗ್ರೆಸ್ ಹೈಕಮಾಂಡ್ ಮೂಗಿನ ನೇರದಲ್ಲೇ ಈ ಅಕ್ರಮ ಹಣದ ವರ್ಗಾವಣೆ ನಡೆದಿದೆ. ಹೈಕಮಾಂಡ್ ಸೂಚನೆ ಮೇರೆಗೆ ಹಣ ವರ್ಗಾವಣೆ ಆಗಿದೆ. 200 ಪರ್ಸೆಂಟ್ ಕಾಂಗ್ರೆಸ್‌ನ ಹೈಕಮಾಂಡ್ ಗಮನಕ್ಕೆ ಬಂದೇ ಇದೆಲ್ಲಾ ನಡೆದಿದೆ. ವಿವಿಧ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷ ರಾಜ್ಯದಿಂದಲೇ ಹಣ ಪೂರೈಕೆ ಮಾಡಿದೆ ಎನ್ನುವುದಕ್ಕೆ ಇದೇ ಸಾಕ್ಷ್ಯ ಎಂದು ಅವರು ಕಾಂಗ್ರೆಸ್ ಹೈ ಕಮಾಂಡ್ ಮೇಲೆಯೇ ನೇರ ಆರೋಪ ಮಾಡಿದರು.

ಈಗ ಎಸ್‌ಐಟಿ ರಚನೆ ಮಾಡಿ ಯಾರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಇವರು? ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಮರಣಪತ್ರದಲ್ಲಿ ಸಚಿವ ನಾಗೇಂದ್ರ ಹೆಸರನ್ನೂ ಬರೆದಿಲ್ಲ. 36 ಜನ ಸಚಿವರಿದ್ದಾರೆ, ನಾವು ಯಾರೂ ಅಂತ ಅಂದುಕೊಳ್ಳಬೇಕು ಹಲವಾರು ನಿಗಮ ಮಂಡಳಿಗಳಲ್ಲಿ ಹೀಗೆ ಆಗುತ್ತಿದೆ. ಎಲ್ಲವೂ ತನಿಖೆ ಆಗಬೇಕು ಎಂದು ಅವರು ಒತ್ತಾಯ ಮಾಡಿದರು.

ಇದನ್ನೂ ಓದಿ | Fact Check: ಸೋಲುವ ಭೀತಿಯಲ್ಲಿ ಬ್ಯಾಂಕಾಕ್‌ಗೆ ಹಾರಲು ಸಿದ್ಧರಾದ್ರಾ ರಾಹುಲ್‌ ಗಾಂಧಿ? ವೈರಲ್‌ ಆಗಿರುವ ಬೋರ್ಡಿಂಗ್‌ ಪಾಸ್‌ನ ಅಸಲಿಯತ್ತೇನು?

ಎಸ್‌ಐಟಿಯಿಂದ ಸಾಕ್ಷ್ಯ ನಾಶ

ಹಗರಣದಲ್ಲಿ ಯೂನಿಯನ್ ಬ್ಯಾಂಕ್ ಇರುವುದರಿಂದ ಸಿಬಿಐ ತನಿಖೆ ಆಗಿಯೇ ಆಗುತ್ತದೆ. ಆದರೆ, ರಾಜ್ಯ ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ ರಚನೆ ಮಾಡಿದೆ. ಎಸ್‌ಐಟಿ ಆದರೆ ದಾಖಲೆ ನಾಶ ಮಾಡಬಹುದು, ಕಡತಗಳನ್ನು ಸುಟ್ಟು ಹಾಕಬಹುದು. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್ ಅವರ ಮನೆಯಿಂದ ಪೆನ್‌ಡ್ರೈವ್ ತೆಗೆದುಕೊಂಡು ತೆಗೆದುಕೊಂಡು ಬಂದರಲ್ಲ, ಆ ಪೆನ್ ಡ್ರೈವ್ ಎಲ್ಲಿದೆ ಈಗ? ಯಾಕೋ.. ಈ ಬಾರಿ ಪೆನ್ ಡ್ರೈವ್‌ ಹೆಚ್ಚು ಸದ್ದು ಮಾಡುತ್ತಿದೆ ಎಂದು ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಟಾಂಗ್ ಕೊಟ್ಟರು.

Continue Reading

ಪ್ರಮುಖ ಸುದ್ದಿ

Bagalkot Lok Sabha Constituency: ಬಿಜೆಪಿಯ ಭದ್ರಕೋಟೆ ಭೇದಿಸುವರೇ ಸಂಯುಕ್ತಾ ಪಾಟೀಲ್?

Bagalkot Lok Sabha Constituency: ಬಿಜೆಪಿಯ ಪಿ.ಸಿ. ಗದ್ದಿಗೌಡರ್‌ ಅವರು 2004ರಿಂದಲೂ ಬಾಗಲಕೋಟೆಯ ಸಂಸದರಾಗಿದ್ದಾರೆ. ಇವರು ಈಗ ಸತತ ಐದನೇ ಬಾರಿಗೆ ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದಾರೆ. ಇನ್ನು, ಸಂಯುಕ್ತಾ ಪಾಟೀಲ್‌ ಅವರು ಯುವ ನಾಯಕಿಯಾಗಿದ್ದು, ತಂದೆ ಶಿವಾನಂದ್‌ ಪಾಟೀಲ್‌ ಅವರ ಬಲದಿಂದ ಗೆಲುವು ಸಾಧಿಸುವ ಛಲದೊಂದಿಗೆ ಮುನ್ನುಗ್ಗಿದ್ದಾರೆ. ಇಲ್ಲಿ ಅನುಭವ ವರ್ಸಸ್‌ ಉತ್ಸಾಹ ಎಂಬಂತಾಗಿದೆ.

VISTARANEWS.COM


on

Bagalkot Lok Sabha Constituency
Koo

ಬಾಗಲಕೋಟೆ: 2004ರಿಂದಲೂ ಬಾಗಲಕೋಟೆ ಲೋಕಸಭೇ ಕ್ಷೇತ್ರವು (Bagalkot Lok Sabha Constituency) ಬಿಜೆಪಿಯ ಭದ್ರಕೋಟೆಯಾಗಿದ್ದು, ಸತತ ಐದನೇ ಬಾರಿಗೆ ಗೆಲ್ಲುವ ಉತ್ಸಾಹದೊಂದಿಗೆ ಬಿಜೆಪಿಯ ಪಿ.ಸಿ.ಗದ್ದಿಗೌಡರ್‌ (PC Gaddigoudar) ಕಣಕ್ಕಿಳಿದಿದ್ದಾರೆ. ಇನ್ನು, ಕಾಂಗ್ರೆಸ್‌ನಿಂದ ಯುವ ನಾಯಕಿ, ಸಚಿವ ಶಿವಾನಂದ್‌ ಪಾಟೀಲ್‌ ಅವರ ಪುತ್ರಿ ಸಂಯುಕ್ತಾ ಪಾಟೀಲ್‌ (Samyukta Patil) ಅವರು ಸ್ಪರ್ಧಿಸಿದ್ದು, ಅನುಭವಿ ವರ್ಸಸ್‌ ಯುವ ನಾಯಕಿ ನಡುವಿನ ಸಮರಕ್ಕೆ ಕ್ಷೇತ್ರ ಸಾಕ್ಷಿಯಾಗಿದೆ. ಹಾಗಾಗಿ, ಸಹಜವಾಗಿಯೇ ಫಲಿತಾಂಶದ ಮೇಲೆ ಎಲ್ಲರ ಗಮನವಿದೆ.

ಪಿ.ಸಿ.ಗದ್ದಿಗೌಡರ್‌ ಅವರು 2004ರಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿಯ ಪತಾಕೆ ಹಾರಿಸಿದ್ದು, ಅದಾದ ನಂತರ ಅವರು ತಿರುಗಿ ನೋಡಿಲ್ಲ. ಕ್ಷೇತ್ರದ ಜನರ ಜತೆ ಒಡನಾಟ, ಅಭಿವೃದ್ಧಿ ಯೋಜನೆಗಳು, ಸರಳತೆಯಿಂದ ಮನೆಮಾತಾಗಿರುವ ಇವರಿಗೆ ನರೇಂದ್ರ ಮೋದಿ ಅವರ ಅಲೆಯ ಕೃಪಾಕಟಾಕ್ಷವೂ ಇದೆ. ಅದರಲ್ಲೂ, ಸಂಯುಕ್ತಾ ಪಾಟೀಲ್‌ ಅವರು ಹೊರಗಿನವರು ಎಂಬ ಭಾವನೆ ಜನರಲ್ಲಿರುವುದು ಕೂಡ ಗದ್ದಿಗೌಡರ್‌ ಅವರಿಗೆ ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮತ್ತೊಂದೆಡೆ, ಸಂಯುಕ್ತಾ ಪಾಟೀಲ್‌ ಅವರು ಬಾಗಲಕೋಟೆ ಕ್ಷೇತ್ರದ ಆಡಳಿತ ವಿರೋಧಿ ಅಲೆ, ತಂದೆ ಶಿವಾನಂದ್‌ ಪಾಟೀಲರ ಬಲವಿದೆ. ಪ್ರಚಾರದ ವೇಳೆ ಯುವಕರು, ಅದರಲ್ಲೂ, ಯುವತಿಯರನ್ನು ಸೆಳೆಯುವಲ್ಲಿ ಸಂಯುಕ್ತಾ ಪಾಟೀಲ್‌ ಅವರು ಯಶಸ್ವಿಯಾಗಿದ್ದಾರೆ. ಹೊರಗಿನವಳು ಎಂಬ ಮನೋಭಾವವನ್ನು ತೊಡೆದುಹಾಕಿ, ನಾನೂ ನಿಮ್ಮ ಮನೆಮಗಳು ಎಂಬ ಭಾವನೆಯು ಜನರಲ್ಲಿ ಮೂಡುವಂತೆ ಮಾಡಿದ್ದಾರೆ. ಆ ಮೂಲಕ, ಬಾಗಲಕೋಟೆಯಲ್ಲಿ ಸಂಯುಕ್ತಾ ಪಾಟೀಲ್‌ ಅವರು ಪಿ.ಸಿ.ಗದ್ದಿಗೌಡರ್‌ ಅವರಿಗೆ ತೀವ್ರ ಪೈಪೋಟಿ ನೀಡಿದ್ದಾರೆ.

2019, 2014ರ ಫಲಿತಾಂಶ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಪಿ.ಸಿ.ಗದ್ದಿಗೌಡರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ವೀಣಾ ಕಾಶಪ್ಪನವರ್‌ ಅವರ ವಿರುದ್ಧ 1.68 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲೂ ನರೇಂದ್ರ ಮೋದಿ ಅವರ ಅಲೆಯನ್ನು ಸದ್ಬಳಕೆ ಮಾಡಿಕೊಂಡಿದ್ದ ಪಿ.ಸಿ.ಗದ್ದಿಗೌಡರ್‌ ಅವರು ಕಾಂಗ್ರೆಸ್‌ನ ಅಜಯ್‌ ಕುಮಾರ್‌ ಸರನಾಯ್ಕ ಅವರ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳಿಂದ ಜಯಭೇರಿ ಬಾರಿಸಿದ್ದರು.

ಇದನ್ನೂ ಓದಿ: Dakshina Kannada Lok Sabha Constituency : ದಕ್ಷಿಣ ಕನ್ನಡದಲ್ಲಿ ವಿಜಯ ಅಭಿಯಾನ ಮುಂದುವರಿಸಲು ಬಿಜೆಪಿ ಕಾತರ

Continue Reading
Advertisement
Rave Party
ಕರ್ನಾಟಕ7 mins ago

Rave Party: ರೇವ್‌ ಪಾರ್ಟಿ ಕೇಸ್‌ನಲ್ಲಿ ತೆಲುಗು ನಟಿ ಹೇಮಾಗೆ 12 ದಿನ ನ್ಯಾಯಾಂಗ ಬಂಧನ

K Kavitha
ದೇಶ24 mins ago

K Kavitha: ಬಿಆರ್‌ಎಸ್‌ ನಾಯಕಿ ಕವಿತಾ ಬಂಧನ ಜುಲೈ 3ರವರೆಗೆ ವಿಸ್ತರಣೆ; ಸಾಕ್ಷ್ಯ ನಾಶದ ಆರೋಪ

MS Dhoni Europe Trip
ಕ್ರೀಡೆ34 mins ago

MS Dhoni Europe Trip: ಐಪಿಎಲ್​ ಮುಗಿಸಿ ಕುಟುಂಬದ ಜತೆ ಯುರೋಪ್​ಗೆ ಪ್ರವಾಸ ಹೋದ ಧೋನಿ

Lok Sabha Election Result 2024 Live
ದೇಶ1 hour ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ; ಇಲ್ಲಿದೆ ಪ್ರತಿಕ್ಷಣದ ಮಾಹಿತಿ

Job Alert
ಉದ್ಯೋಗ1 hour ago

Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Viral News
ವೈರಲ್ ನ್ಯೂಸ್1 hour ago

Viral News: ಕದಿಯಲು ಬಂದ ಮನೆಯಲ್ಲೇ ನಿದ್ದೆಹೋದ ಕಳ್ಳ; ಪೊಲೀಸರೇ ಎಬ್ಬಿಸಬೇಕಾಯಿತು!

Grantha Lokarpane and award ceremony on June 5 in Bengaluru
ಬೆಂಗಳೂರು1 hour ago

Book Release: ಬೆಂಗಳೂರಿನಲ್ಲಿ ಜೂ. 5ರಂದು ಗ್ರಂಥ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ

Valmiki Corporation Scam
ಕರ್ನಾಟಕ2 hours ago

Valmiki Corporation Scam: ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಿಎಂ ಸಿದ್ದರಾಮಯಯ್ಯ ನೇರ ಹೊಣೆ ಎಂದ ಎಚ್‌ಡಿಕೆ

T20 World Cup 2024 Prize Money
ಕ್ರೀಡೆ2 hours ago

T20 World Cup 2024 Prize Money: ದಾಖಲೆಯ ಬಹುಮಾನ ಮೊತ್ತ ಘೋಷಿಸಿದ ಐಸಿಸಿ

Bagalkot Lok Sabha Constituency
ಪ್ರಮುಖ ಸುದ್ದಿ2 hours ago

Bagalkot Lok Sabha Constituency: ಬಿಜೆಪಿಯ ಭದ್ರಕೋಟೆ ಭೇದಿಸುವರೇ ಸಂಯುಕ್ತಾ ಪಾಟೀಲ್?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌