Site icon Vistara News

ವಿಸ್ತಾರ ನ್ಯೂಸ್‌ ಕಚೇರಿಗೆ ಬಿ.ಎಸ್‌.ಯಡಿಯೂರಪ್ಪ, ವಿಜಯೇಂದ್ರ ಭೇಟಿ; ಶುಭ ಹಾರೈಕೆ

Feature Final

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವಿಸ್ತಾರ ನ್ಯೂಸ್‌ ಕಚೇರಿಗೆ ಶನಿವಾರ ಭೇಟಿ ನೀಡಿ, ವಿಸ್ತಾರ ನ್ಯೂಸ್‌ ಚಾನೆಲ್‌ಗೆ ಶುಭ ಕೋರಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಹೂಗುಚ್ಛ ನೀಡಿದ ಹರಿಪ್ರಕಾಶ್‌ ಕೋಣೆಮನೆ ಮತ್ತು ಎಚ್‌ ವಿ ಧರ್ಮೇಶ್‌.

ವಿಸ್ತಾರ ನ್ಯೂಸ್ ಸಿಇಒ ಹಾಗೂ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಅವರು ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರಿಗೆ ವಿಸ್ತಾರ ನ್ಯೂಸ್ ಚಾನೆಲ್‌ನ ಕಾರ್ಯನಿರ್ವಹಣೆ,‌ ವೆಬ್‌ಸೈಟ್‌ ಹಾಗೂ ಯುಟ್ಯೂಬ್‌ ಚಾನೆಲ್‌ಗಳ ಬಗ್ಗೆ ಮಾಹಿತಿ ನೀಡಿದರು.

ವಿಸ್ತಾರ ನ್ಯೂಸ್‌ ಚಾನೆಲ್‌ನ ರೂಪುರೇಷೆಗಳನ್ನು ಯಡಿಯೂರಪ್ಪ ಅವರಿಗೆ ಹರಿಪ್ರಕಾಶ್‌ ಕೋಣೆಮನೆ ವಿವರಿಸಿದರು.

ವಿಸ್ತಾರ ಮೀಡಿಯಾ ಚೇರ್ಮನ್‌, ಎಂಡಿ ಎಚ್‌.ವಿ.ಧರ್ಮೇಶ್‌, ನಿರ್ದೇಶಕ ಶ್ರೀನಿವಾಸ್‌ ಎಸ್‌. ಹೆಬ್ಬಾರ್‌ ಮತ್ತು ಕಾರ್ಯ ನಿರ್ವಾಹಕ ಸಂಪಾದಕ ಶರತ್‌ ಎಂ ಎಸ್‌ ಉಪಸ್ಥಿತರಿದ್ದರು.

ಇದನ್ನೂ ಓದಿ | ವಿಸ್ತಾರ ನ್ಯೂಸ್ ಕಚೇರಿಗೆ ಡಿ. ರೂಪ ಭೇಟಿ, ಶುಭ ಹಾರೈಕೆ

Exit mobile version