ಕರ್ನಾಟಕ
BS Yediyurappa : ಅಪ್ಪ ಈಗಲೂ 25 ವರ್ಷದ ಯುವಕನಂತೆ, ಬೆಳಗ್ಗೆ 15 ನ್ಯೂಸ್ಪೇಪರ್ ಓದಿ ಆಯ್ತು!; ಮಗಳು ಅರುಣಾ ಅಭಿಮಾನದ ಮಾತು
ನಮ್ಮ ಅಪ್ಪ (BS Yediyurappa) ಇನ್ನೂ 25 ವರ್ಷದ ಯುವಕನ ಹಾಗೆ ಇದ್ದಾರೆ. ಅವರು ಮೆಟ್ಟಿಲು ಹತ್ತುವಾಗ ಪಕ್ಕದ ಕಂಬಿನೇ ಹಿಡ್ಕೊಳ್ಳಲ್ಲ. ಸುಸ್ತು ಅನ್ನೋ ಪದಾನೇ ಅವರ ಬಳಿ ಇಲ್ಲ- ಹೀಗೆ ಅಭಿಮಾನದಿಂದ ಮಾತನಾಡಿದ್ದಾರೆ ಬಿ.ಎಸ್. ಯಡಿಯೂರಪ್ಪ ಅವರ ಮಗಳು ಅರುಣಾದೇವಿ.
ಶಿವಮೊಗ್ಗ: ʻʻಅಪ್ಪ ಈವಾಗಲೂ ಕೂಡಾ ೨೫ ವರ್ಷದ ಯುವಕನಂತೆ ಆಕ್ಟಿವ್ ಆಗಿದ್ದಾರೆ. ಇವತ್ತು ಬೆಳಗ್ಗೆ ಐದು ಗಂಟೆಗೇ ಎದ್ದಿದ್ದಾರೆ. ಅವರು ಇಡೀ ದಿನ ಓಡಾಡಿದರೂ ಏನೂ ಸುಸ್ತಾಗಲ್ಲʼ- ಹೀಗಂತ ಇಂದು (ಫೆ.೨೭) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರ ಪುತ್ರಿ ಅರುಣಾ ಅವರು ಅಭಿಮಾನದಿಂದ ಹೇಳಿಕೊಂಡಿದ್ದಾರೆ.
ಯಡಿಯೂರಪ್ಪ ಅವರ ಕನಸಾದ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮದ ಸಂಭ್ರಮದಲ್ಲಿರುವ ಕುಟುಂಬದ ಒಬ್ಬೊಬ್ಬರೂ ಅಪ್ಪನ ಬಗ್ಗೆ ಅಭಿಮಾನದಿಂದ ಮಾತನಾಡಿದ್ದಾರೆ. ಅರುಣಾ ಅವರಂತೂ ಅಪ್ಪನ ದಿನಚರಿಯನ್ನು ಹೇಳುತ್ತಾ ಹೇಳುತ್ತಾ ಹೆಮ್ಮೆ ಖುಷಿ ಅನುಭವಿಸಿದರು.
ʻʻಅವರನ್ನು ನೋಡಿದರೆ ನಮಗೇ ಆಶ್ಚರ್ಯ ಆಗುತ್ತದೆ. ಅಪ್ಪ ಅವರು ಇನ್ನೂ ೨೫ ವರ್ಷದ ಯುವಕನ ಹಾಗೆ ಇದ್ದಾರೆ. ಈ ಮಾತು ಯಾಕೆ ಹೇಳುತ್ತಿದ್ದೇನೆ ಎಂದರೆ ಅವರು ಇವತ್ತು ಬೆಳಗ್ಗೆ ಐದು ಗಂಟೆಗೇನೇ ಎದ್ದಿದ್ದಾರೆ. ಬೆಳಗ್ಗೆ ಎದ್ದು ೧೫ ನ್ಯೂಸ್ ಪೇಪರ್ ಓದಿ ಆಗಿದೆ. ಆಡಂಬರವೇನೂ ಇಲ್ಲ. ನನ್ನ ಸಹೋದರಿ ಬೆಳಗ್ಗೆ ತಲೆಗೆ ಎಣ್ಣೆ ಇಟ್ಳು ಅಷ್ಟೆ. ಬೇಗ ಶವರ್ಗೆ ಹೋಗಿಬರ್ತೀನಿ. ಆಮೇಲೆ ತುಂಬಾ ಜನ ಮಾತನಾಡಿಸ್ಲಿಕೆ ಬರ್ತಾರೆ, ಪಬ್ಲಿಕನ್ನು ಮೀಟ್ ಮಾಡ್ಬೇಕು ಅಂತ ಹೇಳಿದ್ರು. ತಿಂಡಿ ವಿಚಾರದಲ್ಲಿರಬಹುದು ಎಲ್ಲದರಲ್ಲೂ ಅವರದ್ದು ಈಗಲೂ ೨೫ ವರ್ಷದ ಮನಸ್ಥಿತಿʼʼ ಎಂದು ಹೇಳಿದರು ಅರುಣಾ.
ಸುಸ್ತು ಅನ್ನೋದೇ ಇಲ್ಲ, ಹಾಗೆಲ್ಲ ಹೇಳ್ಬೇಡಿ ಅಂದ್ರಂತೆ ಬಿಎಸ್ವೈ
ಮೊನ್ನೆ ಬೆಂಗಳೂರಿನಲ್ಲಿ ಇಡೀ ದಿನ ಓಡಾಡೋದಿತ್ತು. ಆವಾಗ ನಾವು ʻಸ್ವಲ್ಪ ಕೂತು ರಿಲ್ಯಾಕ್ಸ್ ಮಾಡಿಕೊಂಡು ಹೋಗೋಣʼ ಅಂತ ನಾವು ಹೇಳಿದ್ರೆ, ಇನ್ನು ಹತ್ತು ವರ್ಷ ಆದ್ಮೇಲೆ ಈ ತರದ್ದೆಲ್ಲ ಹೇಳಿ.. ಅಲ್ಲಿವರೆಗೆ ಸುಸ್ತು, ಅದೂ ಇದೂ ಅಂತೆಲ್ಲ ನನಗೆ ಹೇಳಬೇಡಿ, ನಿಮ್ಮ ಬಾಯಲ್ಲಿ ಮಾತು ಬಂದ್ರೂ ನನಗೆ ನಂಗೆ ಇಷ್ಟ ಆಗಲ್ಲ ಅಂದುಬಿಟ್ರು! ನಮ್ ಮನೇಲಿ ಅವರಿಗಾಗಿ ಲಿಫ್ಟ್ ಹಾಕಿಸ್ಕೊಬೇಕು ಅಂತ ಯೋಜನೆ ಮಾಡಿದ್ದೆವು. ಆದರೆ, ಅವರು ಮೆಟ್ಟಿಲು ಹತ್ತೋ ಸ್ಟೈಲ್ ನೋಡಿ ನಮಗೇ ಆಶ್ಚರ್ಯ. ಅವರು ಸ್ಟೇರ್ ಕೇಸ್ ಹಿಡಿಯೋಕೂ ಇಷ್ಟಪಡಲ್ಲ. ಅದು ಅವರ ಎನರ್ಜಿ. ನಾವುಗಳು ನೋಡಿ.. ನನಗೆ ಈಗ ೫೨. ಸ್ಟೇರ್ ಕೇಸ್ ಹತ್ತಬೇಕು ಅಂದರೆ ಹುಷಾರಾಗಿ ಹತ್ತಬೇಕು ಅಂತೆಲ್ಲ ಯೋಚನೆ ಮಾಡ್ತೀವಿ. ಆದರೆ, ಅವರನ್ನು ನೋಡಿ ನಾನು ಅಂದ್ಕೊಳ್ತೇನೆ. ನಮ್ಮ ಮನಸ್ಸಿಗೆ ಯಾವತ್ತು ನಾವೇ ವಯಸ್ಸನ್ನು ತಂದುಕೊಳ್ಬಾರ್ದು, ವೃದ್ಧಾಪ್ಯ ತಂದುಕೊಳ್ಬಾರ್ದು ಅಂತ. ಅಂತ ಯುವಕ ಅವರುʼʼ ಎಂದು ಹೇಳಿದರು ಅರುಣಾದೇವಿ.
ಅವರು ನಮಗೆಲ್ಲ ರೋಲ್ ಮಾಡೆಲ್
ʻʻಅಪ್ಪ ನಮಗೆಲ್ಲ ರೋಲ್ ಮಾಡೆಲ್. ಅವರ ಆಹಾರ ವಿಚಾರ, ಲೈಫ್ ಸ್ಟೈಲ್ ಎಲ್ಲವೂ ಅಷ್ಟೆ. ಅವರು ದೇವರ ಮುಂದೆ ಒಂದು ಹತ್ತು ನಿಮಿಷ ಕುಳಿತರು ಅಂದ್ರೆ ಕಣ್ಣು ಮುಚ್ಚಿ ಎಲ್ಲ ದೇವರನ್ನು ನೆನಪು ಮಾಡಿಕೊಳ್ತಾರೆ. ಅದು ಅವರಿಗೆ ಎನರ್ಜಿ ಕೊಡುತ್ತೆ. ದೇವಸ್ಥಾನಕ್ಕೆ ಹೋದಾಗ ಅರ ಮುಖದಲ್ಲಿರುವ ನೆಮ್ಮದಿ ನೋಡಿದ್ರೇ ಖುಷಿಯಾಗುತ್ತೆ. ಸಾವಿರಾರು ಕಿ.ಮೀ. ಪ್ರಯಾಣ ಮಾಡಿ ಬಂದರೂನೂ ಒಂದು ಸಾರಿ ಮುಖ ತೊಳ್ಕೊಂಡು ಬಂದ್ರೆ ಸಾಕು ಒಳ್ಳೆ ಎಣ್ಣೆ ಸ್ನಾನ ಮಾಡಿದಷ್ಟೂ ಫ್ರೆಶ್ ಆಗ್ತಾರೆ. ಅದು ಅವರ ಎನರ್ಜಿ. ಅವರ ಮನಸ್ಥಿತಿʼʼ ಎನ್ನುವುದು ಅರುಣಾದೇವಿ ಮಾತು.
ಇನ್ನು ಹತ್ತು ವರ್ಷ ರಾಜಕೀಯದಲ್ಲಿರಬೇಕು, ಎಲ್ಲ ಕಡೆ ಓಡಾಡಬೇಕು ಎನ್ನುವುದು ಅವರ ಆಸೆ. ಕೇಂದ್ರದವರು ಅವರಿಗೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ಆ ಎಲ್ಲ ಜವಾಬ್ದಾರಿಗಳನ್ನು ಅವರು ಚೆನ್ನಾಗಿ ನಿಭಾಯಿಸ್ತಾರೆ ಅವರು ಎಂದು ಹೆಮ್ಮೆಯಿಂದ ಹೇಳುತ್ತಾರೆ ಅರುಣಾದೇವಿ.
ಎದ್ದು ನಿಂತು ಸೆಲ್ಯೂಟ್ ಹೊಡೀಬೇಕು ಅನಿಸ್ತು
ಈ ವಿಮಾನ ನಿಲ್ದಾಣ ಅನ್ನೋದು ಒಂದು ದೊಡ್ಡ ಕನಸು. ಮೊನ್ನೆ ಮೊದಲನೇ ಫ್ಳೈಟ್ ಬಂತಲ್ಲ. ಅದು ಎಷ್ಟು ಸಂಭ್ರಮ ಅಂದರೆ, ಬೆಂಗಳೂರಿನಲ್ಲಿ ಆರ್ಕಿಟೆಕ್ಟ್ ಆಗಿರುವ ನನ್ನ ಮಗಳು ಮಾಧುರಿ ಫೋನ್ ಮಾಡಿದ್ಳು. ನಾವು ರಾಷ್ಟ್ರಗೀತೆಗೆ ಎದ್ದು ನಿಂತು ಸೆಲ್ಯೂಟ್ ಹೊಡೀತೀವಲ್ಲ. ಆ ತರದ ಫೀಲ್ ಆಯ್ತು. ಮೈ ಝುಂ ಅನಿಸ್ತು ಅಂತ ಹೇಳಿದ್ಲು. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಬರೋದ್ರಲ್ಲಿ ಅಪ್ಪನಷ್ಟೇ ತಮ್ಮ ರಾಘವೇಂದ್ರನ ರೋಲ್ ಕೂಡಾ ಇದೆ. ಅಪ್ಪ ಡಿಸಿಎಂ ಆದಾಗ, ಸಿಎಂ ಆದಾಗ ಶಿವಮೊಗ್ಗಕ್ಕೆ ಯೋಜನೆಗಳನ್ನು ತರಿಸೋದರಲ್ಲಿ ದೊಡ್ಡ ಕೆಲಸ ಮಾಡಿದ್ದು ರಾಘವೇಂದ್ರ. ತಮ್ಮನನ್ನು ನಾನು ಸಣ್ಣ ವಯಸ್ಸಿನಿಂದಲೇ ನೋಡುತ್ತಿದ್ದೇನೆ. ಅವನು ಫೈಲ್ ಎತ್ತಿಕೊಂಡು ಅಪ್ಪನ ಹತ್ತಿರ ಹೋಗೋರು. ಆಗ ಅಪ್ಪ ಅವರು, ನೋಡು ಆಗಾಗ ಫೈಲ್ ಹಿಡ್ಕೊಂಡು ಬರ್ಬೇಡ, ನಂಗೆ ಕೇವಲ ಶಿವಮೊಗ್ಗ ಒಂದೇ ಇರುವುದಲ್ಲ. ನಾನು ಇಡೀ ರಾಜ್ಯ ನೋಡ್ಕೊಬೇಕು ಅಂತ ಹೇಳುತ್ತಿದ್ದರು. ಆಗ ರಾಘವೇಂದ್ರ ʻಆಯ್ತಣ್ಣʼ ಅಂತ ಹಿಂದೆ ಬರೋರು… ಮತ್ತೆ ಮುಂದಿನ ವಾರ ಫೈಲ್ ಹಿಡಿದುಕೊಂಡು ಹೋಗೋರು. ಯಾಕೆಂದರೆ, ಇಲ್ಲಿನ ಜನರ ಒತ್ತಡ ತುಂಬಾ ಇತ್ತು. ಒಂದ್ಸಾರಿ ವಿಮಾನ ನಿಲ್ದಾಣದ ಕೆಲಸ ಟೆಕ್ನಿಕಲ್ ಸಮಸ್ಯೆಯಿಂದ ನಿಂತಾಗ ನಮಗೆಲ್ಲ ಫುಲ್ ಟೆನ್ಶನ್. ಆಗ ರಾಘವೇಂದ್ರ ಆಗಾಗ ಡೆಲ್ಲಿಗೆ ಹೋಗಿ ಕ್ಲಿಯರ್ ಮಾಡಿಸಿಕೊಂಡು ಬಂದರುʼʼ ಎಂದು ನೆನಪಿಸಿಕೊಂಡರು ಅರುಣಾದೇವಿ.
ಇದನ್ನೂ ಓದಿ : B.S. Yediyurappa Birthday: ಅವತ್ತು ಯಡಿಯೂರಪ್ಪನವರ ಮಾತು ಕೇಳಿ ಕಣ್ಣಲ್ಲಿ ನೀರು ತುಂಬಿ ಬಂದಿತ್ತು: ನಟ ದ್ವಾರಕೀಶ್ ಲೇಖನ
ದಕ್ಷಿಣ ಕನ್ನಡ
Road Accident: ಆಟೋಗೆ ಶಾಲಾ ಬಸ್ ಡಿಕ್ಕಿ, ಐವರ ದುರ್ಮರಣ
ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಛಿದ್ರವಾಗಿದ್ದು, ಆಟೋದಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ.
ಮಂಗಳೂರು: ಶಾಲಾ ಬಸ್ ಹಾಗೂ ಆಟೋ ನಡುವೆ (bus auto accident) ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ರಯಾಣಿಕರು ದುರ್ಮರಣ ಹೊಂದಿದ ಘಟನೆ (Road Accident) ಕೇರಳ- ಕರ್ನಾಟಕ ಗಡಿಭಾಗದಲ್ಲಿ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪ ಈ ದುರ್ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಕಾಸರಗೋಡಿನ ಮೊಗ್ರಾಲ್ ಪುತ್ತೂರು ಎಂಬಲ್ಲಿನ ಆಟೋ ರಿಕ್ಷಾಗೆ ಪೆರ್ಲ ಸಮೀಪದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಛಿದ್ರವಾಗಿದ್ದು, ಆಟೋದಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಸ್ ಪಲ್ಟಿಯಾಗಿ 10 ಜನರಿಗೆ ಗಾಯ
ವಿಜಯನಗರ: ಖಾಸಗಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ವಿಜಯನಗರದ MB ಅಯ್ಯನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಗಾಯಗೊಂಡ ಡ್ರೈವರ್ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನಿಂದ ಕಲ್ಬುರ್ಗಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Road Accident: ಬಿಬಿಎಂಪಿ ಕಸದ ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು
Live News
Bangalore Bandh Live: ಬೆಂಗಳೂರು ಬಂದ್ ಆರಂಭ; ಎಲ್ಲೆಲ್ಲಿ ಏನೇನಾಗ್ತಿದೆ?
ಕಾವೇರಿ ನೀರಿನಲ್ಲಾದ ಅನ್ಯಾಯ ಪ್ರತಿಭಟಿಸಿ ಹಲವು ಸಂಘಟನೆಗಳು ನೀಡಿರುವ ಬೆಂಗಳೂರು ಬಂದ್ಗೆ (Bangalore bandh) ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಎಲ್ಲೆಲ್ಲಿ ಏನಾಗುತ್ತಿದೆ ಎಂಬುದರ ಅಪ್ಡೇಟ್ ಇಲ್ಲಿದೆ. .
ಬೆಂಗಳೂರು: ಕಾವೇರಿ ನೀರಿನಲ್ಲಾದ ಅನ್ಯಾಯ ಪ್ರತಿಭಟಿಸಿ ಹಲವು ಸಂಘಟನೆಗಳು ನೀಡಿರುವ ಬೆಂಗಳೂರು ಬಂದ್ಗೆ (Bangalore bandh) ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಎಲ್ಲೆಲ್ಲಿ ಏನಾಗುತ್ತಿದೆ ಎಂಬುದರ ಅಪ್ಡೇಟ್ ಇಲ್ಲಿದೆ. .
ಕರ್ನಾಟಕ
ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ
Vistara Editorial: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನಕ್ಕೆ ಹೊಸ ಆಯಾಮ ನೀಡುತ್ತಿರುವುದು ಸ್ವಾಗತಾರ್ಹ. ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ.
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸೂಚನೆಯಂತೆ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆದಿದೆ. ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಗದಗ ಮತ್ತು ಬೆಳಗಾವಿ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆದಿದೆ. ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನೆಯಾಗಿವೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ. ʼʼನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ರೀತಿಯ ಪ್ರತಿಕ್ರಿಯೆ ಸಾರ್ವಜನಿಕರಿಂದ ಸಿಕ್ಕಿದೆ. ಅಧಿಕಾರಿಗಳ ಸ್ಪಂದನೆ ಕೂಡ ಸಮಾಧಾನಕರವಾಗಿದೆ. ಇವತ್ತಿನ ಅನುಭವದ ಹಿನ್ನೆಲೆಯಲ್ಲಿ ಮುಂದಿನ ಜನತಾ ದರ್ಶನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆʼʼ ಎನ್ನುವ ಅಭಿಪ್ರಾಯ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳಿಂದ ವ್ಯಕ್ತವಾಗಿದೆ(Vistara Editorial).
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಡಿಪಿ ಸಭೆಗಳನ್ನು ಅತ್ಯಂತ ಗಂಭೀರವಾಗಿ ನಡೆಸುತ್ತಿದ್ದಾರೆ. ಅವರು ಜಿಲ್ಲೆಗಳಿಗೆ ಭೇಟಿ ನೀಡುವಾಗ ಹಲವಾರು ಮಂದಿ ಅವರ ಮುಂದೆ ಅಹವಾಲು ಹೇಳಿಕೊಳ್ಳಲು ಬರುತ್ತಿದ್ದಾರೆ. ಇದನ್ನು ಗಮನಿಸಿದ ಅವರು ಸಿಎಂ ಬಂದಾಗ ಜನರ ದೂರು ನೀಡಲು ಬರುತ್ತಾರೆ ಎಂದರೆ ಅವರಿಗೆ ಹೇಳಿಕೊಳ್ಳಲು ಇದೆ ಎಂದಾಯಿತು. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲೂ ಜನತಾ ದರ್ಶನ ನಡೆಸಬೇಕು ಎಂಬ ಸೂಚನೆಯನ್ನು ನೀಡಿದ್ದರು. ಇತ್ತೀಚೆಗೆ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳ ಮೀಟಿಂಗ್ನಲ್ಲಿ ಈ ಸೂಚನೆ ನೀಡಲಾಗಿತ್ತು. ಇದು ಸಫಲವಾಗಿದೆ ಎನ್ನುವುದಕ್ಕೆ ಇವತ್ತಿನ ದೃಶ್ಯವೇ ಸಾಕ್ಷಿ. ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ ಅಹವಾಲುಗಳಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.
ಜನರಿಗೆ ದೂರುಗಳಿದ್ದೇ ಇರುತ್ತವೆ. ಜನ ಯಾವಾಗ ಮಂತ್ರಿಗಳ ಬಳಿಗೆ ಬರುತ್ತಾರೆ ಎಂಬುದನ್ನೂ ಗಮನಿಸಬೇಕು. ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ನೋಂದಣಿ, ಕಂದಾಯ ಹೀಗೆ ವಿಭಾಗವಾರು ಇಲಾಖೆಗಳಲ್ಲಿ ಕೇಸ್ ವರ್ಕರ್ಗಳು ತಮ್ಮ ಅರ್ಜಿಗಳ ವಿಲೇವಾರಿ ಮಾಡಲು ವಿಫಲರಾದಾಗ, ಮೇಲಧಿಕಾರಿಗಳತ್ತ ಜನ ಎಡತಾಕುವುದು ಸಾಮಾನ್ಯ. ಆದರೆ ಮೇಲಧಿಕಾರಿಗಳು ಇಂಥ ಅರ್ಜಿಗಳನ್ನು ʼಸರಿಯಾದ ರೀತಿಯಲ್ಲಿʼ (through proper channel) ಬರಲಿ ಎಂದು ಮತ್ತೆ ಅದನ್ನು ಕೆಳಗಿನ ಮೇಜುಗಳ ಕಡೆಗೆ ತಳ್ಳುವುದೂ ಸಾಮಾನ್ಯ. ಹೀಗೆ ಪ್ರಭಾವಿಗಳಲ್ಲದ ಜನಸಾಮಾನ್ಯರು ಮೇಜಿನಿಂದ ಮೇಜಿಗೆ ಅಲೆದಾಡುವುದು, ನಾಳೆ ಬಾ ಎಂದು ಹೇಳಿಸಿಕೊಳ್ಳುವುದು ಅತಿ ಸಾಮಾನ್ಯ ದೃಶ್ಯ. ಅನೇಕ ಮಂದಿಯ ಬದುಕು ಹೀಗೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಲೇ ʼತಬರನ ಕಥೆʼಯಂತೆ ಮುಗಿದುಹೋಗುತ್ತದೆ. ಇದೊಂದು ದಃಸ್ವಪ್ನವೇ ಸರಿ. ಇದರಿಂದ ಪಾರಾಗಲು ಸಣ್ಣ ಸಣ್ಣ ವಿಚಾರಗಳಿಗೂ ಜನ ಪುಢಾರಿಗಳ ಮೊರೆ ಹೋಗುತ್ತಾರೆ; ಅಥವಾ ದಲ್ಲಾಳಿಗಳನ್ನು ಹಿಡಿದುಕೊಳ್ಳುತ್ತಾರೆ. ಇವರ ಮೂಲಕ ಕೆಲಸ ಮಾಡಿಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೆ.
ಹೀಗೆ ಸರ್ಕಾರಿ ಕೆಲಸದ ಕೆಂಪು ಪಟ್ಟಿಯ ವಿಳಂಬ ನರಕದಿಂದ ಬೇಸತ್ತ ಜನಸಾಮಾನ್ಯನಿಗೆ, ಪಾರಾಗುವ ಒಂದು ಕಿಂಡಿಯಂತೆ ಜನತಾ ದರ್ಶನ ಕಾಣಿಸಿದರೆ ಆಶ್ಚರ್ಯವಿಲ್ಲ. ನೇರವಾಗಿ ಜಿಲ್ಲಾಧಿಕಾರಿ ಅಥವಾ ಮಂತ್ರಿಗಳಿಗೆ ಅರ್ಜಿ ಸಲ್ಲಿಸಿದರೆ ತಮ್ಮ ಕೆಲಸ ಕೂಡಲೇ ಆಗಬಹುದು ಎಂಬ ಆಸೆ ಅವರಲ್ಲಿ ಮೂಡುವುದು ಸಹಜ. ಹೀಗಾಗಿಯೇ ಇಂಥ ಕಾರ್ಯಕ್ರಮಗಳಿಗೆ ಜನಸ್ಪಂದನ ದೊಡ್ಡ ಪ್ರಮಾಣದಲ್ಲಿ ವ್ಯಕ್ತವಾಗುತ್ತದೆ. ಜನ ಸರ್ಕಾರಿ ಕಚೇರಿಗಳ ಬಾಗಿಲಿಗೆ ಅಲೆದಾಡುವ ಬದಲು, ಜನತಾ ದರ್ಶನದ ಮೂಲಕ ಸರ್ಕಾರವೇ ಜನರ ಬಳಿ ಹೋಗುವುದು ಆಶಾದಾಯಕ. ಈ ಹಿಂದಿನ ಮುಖ್ಯಮಂತ್ರಿಗಳೂ ಇಂಥದೊಂದು ಪ್ರಯತ್ನ ಮಾಡಿದ್ದುಂಟು. ಆದರೆ ಇಷ್ಟೊಂದು ವ್ಯಾಪಕವಾಗಿ ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಮಾಡಿರಲಿಲ್ಲ. ಆ ನಿಟ್ಟಿನಿಂದ ಇದು ಸ್ವಾಗತಾರ್ಹ.
ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ವಂದೇ ಭಾರತ್; ಭಾರತದಲ್ಲಿ ರೈಲು ಕ್ರಾಂತಿ
ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ. ಸ್ವಲ್ಪ ಆಳವಾಗಿ ವಿಮರ್ಶೆ ಮಾಡಿದರೆ, ಜನತಾ ದರ್ಶನಗಳು ಸರ್ಕಾರಗಳ ವೈಫಲ್ಯವನ್ನು ಕಾಣಿಸುವ ಕಾರ್ಯಕ್ರಮವೇ ಹೊರತು ಸಾಫಲ್ಯವನ್ನಲ್ಲ. ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯ ಸಮಯದಲ್ಲಿ ಕೆಲಸ ಆಗುತ್ತಿಲ್ಲ ಅನ್ನುವ ಕಾರಣಕ್ಕಾಗಿ ತಾನೇ ಜನತಾ ದರ್ಶನದ ಸಮಯದಲ್ಲಿ ಅಷ್ಟೊಂದು ಪ್ರಮಾಣದ ಅಹವಾಲುಗಳು ಬರುವುದು? ಮೊದಲು ಗ್ರಾಮ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಜನತೆಗೆ ತಮ್ಮ ಕಚೇರಿಯಲ್ಲಿಯೇ ದರ್ಶನ ಕೊಡಬೇಕು. ಕೆಳಹಂತದ ಅಧಿಕಾರಿಗಳ ಜನತಾ ದರ್ಶನ ಮೊದಲಾಗಲಿ. ಅವರ ಮೇಲೆ ಮೇಲಧಿಕಾರಿಗಳು ನಿಗೂ ಇಡುವುದೂ ಆಗಲಿ. ಹಾಗೇ ಜಿಲ್ಲಾ ಮಟ್ಟದಲ್ಲೇ ಜನತಾ ದರ್ಶನ ಪರಿಣಾಮಕಾರಿಯಾಗಿ ನಡೆದಿದ್ದೇ ಆದಲ್ಲಿ ಜನ ದೂರದ ವಿಧಾನ ಸೌಧದವರೆಗೆ ದೂರುದುಮ್ಮಾನ ಹಿಡಿದುಕೊಂಡು ಮುಖ್ಯಮಂತ್ರಿಗಳನ್ನು ಹುಡುಕಿಕೊಂಡು ಬರುವ ಪ್ರಶ್ನೆಯೇ ಬರುವುದಿಲ್ಲ. ಜನತಾ ದರ್ಶನದ ಅರ್ಜಿಗಳನ್ನೇ ಕಾಲಕಾಲಕ್ಕೆ ವಿಲೇವಾರಿ ಮಾಡುವ ಒಂದು ವ್ಯವಸ್ಥೆ ರೂಪುಗೊಳ್ಳಬೇಕು. ಆಗ ಮಾತ್ರ ಜನತಾ ದರ್ಶನದ ಬಗ್ಗೆ ಜನತೆಯಲ್ಲಿ ವಿಶ್ವಾಸ ಮೂಡಬಹುದು. ಇಲ್ಲದಿದ್ದಲ್ಲಿ ಇದೂ ಹತ್ತರಲ್ಲಿ ಇನ್ನೊಂದು ಎಂಬಂತಾಗುತ್ತದೆ.
ಇನ್ನಷ್ಟು ಸಂಪಾದಕೀಯಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ
Bangalore rain : ಮನೆ ಮುಂದೆ ವಾಕ್ ಮಾಡುತ್ತಿದ್ದಾಗ ಉರುಳಿದ ಮರ; ತಾಯಿ ಮೃತ್ಯು, 5 ವರ್ಷದ ಮಗು ಗಂಭೀರ
Bangalore rain: ಬೆಂಗಳೂರಿನಲ್ಲಿ ಸಂಭವಿಸಿದ ಮಳೆ ದುರಂತದಲ್ಲಿ ತಾಯಿ ಮೃತಪಟ್ಟು, ಪುಟ್ಟ ಕಂದಮ್ಮ ಗಾಯಗೊಂಡಿದ್ದಾಳೆ. ಮರ ಬಿದ್ದು ಈ ದುರಂತ ಸಂಭವಿಸಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ಸಂಜೆ ಸುರಿದ ಮಳೆಗೆ (Bangalore rain) ಮರವೊಂದು ಧರೆಗುರುಳಿ (Tree Falls on mother and daughter) ವಾಕ್ ಮಾಡುತ್ತಿದ್ದ ತಾಯಿ ಮತ್ತು ಮಗುವನ್ನು ಗಾಯಗೊಳಿಸಿದೆ. ತಾಯಿ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟರೆ (Mothrer dead at Hospital), ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ವಿಲ್ಸನ್ ಗಾರ್ಡನ್ 7 ಕ್ರಾಸ್ ನಲ್ಲಿ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ವಿಲ್ಸನ್ ಗಾರ್ಡನ್ (Wilson garden) ನಿವಾಸಿ ಹೇಮಾವತಿ (35) ಎಂದು ಗುರುತಿಸಲಾಗಿದೆ. ಅವರ ಪುಟ್ಟ ಕಂದಮ್ಮ ಐದು ವರ್ಷದ ರಚಿತಾ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಹೇಮಾವತಿ ಮತ್ತು ಮಗಳು ರಚಿತಾ ಸಂಜೆಯ ಹೊತ್ತು ಮನೆಯ ಮುಂದೆ ಪುಟ್ ಪಾತ್ ಮೇಲೆ ತಾಯಿ ಮಗಳು ವಾಕ್ ಮಾಡುತ್ತಿದ್ದಾಗ ಬೃಹತ್ ಮರ ಉರುಳಿದೆ. ಒಂದು ಕಡೆ ಮರದ ಕೊಂಬೆ ಇನ್ನೊಂದು ಕಡೆ ವಿದ್ಯುತ್ ಕಂಬವೂ ಅವರ ಮೇಲೆ ಬಿದ್ದಿದೆ.
ಕೂಡಲೇ ಹೇಮಾವತಿ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ಒಯ್ಯಲಾಯಿತು. ರಚಿತಾಗೆ ತಲೆಗೆ ಗಾಯವಾಗಿದ್ದು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಯಿತು.
ಈ ನಡುವೆ, ಚಿಕಿತ್ಸೆ ಫಲಕಾರಿಯಾಗದೇ ತಾಯಿ ಹೇಮಾವತಿ ನಿಧನರಾಗಿದ್ದಾರೆ. ಅವರು ಸಂಜಯಗಾಂಧಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಬೆಳಗ್ಗೆ ಮರಣೋತ್ತರ ಪರೀಕ್ಷೆ ನಂತರ ಮೃತದೇಹ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರ ಸಾವು
ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರಾಗಿದ್ದು, ಮೃತರಾದವರ ಗುರುತು ಪತ್ತೆಯಾಗಿಲ್ಲ.
ಮೈಸೂರು ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಬೆಂಗಳೂರು ಕಡೆಗೆ ಬರುವ ರಸ್ತೆಗೆ ನುಗ್ಗಿ ಸ್ಯಾಂಟ್ರೋ ಕಾರು ಮತ್ತು ಇತರ ಮೂರು ವಾಹನಗಳಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಸ್ಯಾಂಟ್ರೋ ಚಲಾಯಿಸುತ್ತಿದ್ದ ವ್ಯಕ್ತಿ ಮತ್ತು ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆಗೂ ಗಂಭೀರ ಗಾಯಗಳಾಗಿದ್ದು ಅವರು ಆಸ್ಪತ್ರೆಗೆ ಸಾಗಿಸುವ ಪ್ರಾಣ ಕಳೆದುಕೊಂಡರು.
ಸಂಜೆ ಸುಮಾರು 5.30ರ ಹೊತ್ತಿಗೆ ಅಪಘಾತ ಸಂಭವಿಸಿದ್ದು, ಮೃತರು ಹಾಸನ ಮೂಲದವರೆಂದು ಹೇಳಲಾಗುತ್ತಿದೆ. ಎರಡೂ ಕಾರುಗಳ ಮುಂಭಾಗ ನಜ್ಜುಗುಜ್ಜಾಗಿದೆ. ಇತರ ವಾಹನಗಳಿಗೂ ಹಾನಿಯಾಗಿದೆ.
ಅಪಘಾತದಿಂದಾಗಿ ಹೆದ್ದಾರಿಯಲ್ಲಿ ತುಂಬಾ ಹೊತ್ತು ಟ್ರಾಫಿಕ್ ಜಾಮ್ ಆಗಿತ್ತು.
-
ವಿದೇಶ18 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ಕರ್ನಾಟಕ16 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ದೇಶ11 hours ago
Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’
-
ಕರ್ನಾಟಕ12 hours ago
Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
-
South Cinema15 hours ago
Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ
-
ಅಂಕಣ19 hours ago
ವಿಧಾನಸೌಧ ರೌಂಡ್ಸ್: ಜೆಡಿಎಸ್ಗೆ ಸಂಜೀವಿನಿಯಾದ ಬಿಜೆಪಿ ಮೈತ್ರಿ; ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ?
-
ದೇಶ16 hours ago
Army Jawan: ಯೋಧನ ಮೇಲೆ ಹಲ್ಲೆ ನಡೆಸಿ, ಬೆನ್ನಿನ ಮೇಲೆ ‘ಪಿಎಫ್ಐ’ ಎಂದು ಬರೆದ ದುರುಳರು!
-
ದೇಶ9 hours ago
Lawyer Sara Sunny: ಸುಪ್ರೀಂ ಕೋರ್ಟ್ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ