Budget 2023 : ಇದು ಬಾಂಬೆ ಪಿಕ್ಚರ್‌ ಎಂದ ಕಾಂಗ್ರೆಸ್‌, ಅಮೃತ ಬಜೆಟ್‌ ಎಂದ ಬಿಜೆಪಿ: ಕೇಂದ್ರ ಬಜೆಟ್‌ ಕುರಿತು ಪ್ರತಿಕ್ರಿಯೆಗಳು ಇಲ್ಲಿವೆ Vistara News

ಕರ್ನಾಟಕ

Budget 2023 : ಇದು ಬಾಂಬೆ ಪಿಕ್ಚರ್‌ ಎಂದ ಕಾಂಗ್ರೆಸ್‌, ಅಮೃತ ಬಜೆಟ್‌ ಎಂದ ಬಿಜೆಪಿ: ಕೇಂದ್ರ ಬಜೆಟ್‌ ಕುರಿತು ಪ್ರತಿಕ್ರಿಯೆಗಳು ಇಲ್ಲಿವೆ

ಕೇಂದ್ರ ಬಜೆಟ್‌ ಕುರಿತು ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

VISTARANEWS.COM


on

budget-2023-reactions from politicians
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Basavaraja bommai

ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ಭದ್ರಾ ಮೇಲ್ದಂಡೆ ಯೋಜನೆಯು ಕರ್ನಾಟಕದ ಪ್ರಮುಖ ನೀರಾವರಿ ಯೋಜನೆ. ಮಧ್ಯ ಕರ್ನಾಟಕದ ಬರಗಾಲ ಪೀಡಿತ, ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕ್ಕಿಂತ ಹೆಕ್ಟರ್ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರಿನ ಮಹತ್ವದ ಯೋಜನೆ ಇದಾಗಿದ್ದು, ಇದರಿಂದ ಬಹಳ ಅನುಕೂಲವಾಗಲಿದೆ. ರಾಷ್ಟ್ರೀಯ ಯೋಜನೆಯಾಗಿ ಮಾಡುವಂತೆ ಮೊದಲೇ ಪ್ತಸ್ತಾವನೆ ಕಳಿಸಿದ್ದೆವು. ಹೀಗಾಗಿ 5300 ಕೋಟಿ ನೀಡಿದ್ದು ಸ್ವಾಗತಾರ್ಹ. ಕರ್ನಾಟಕದ ಹಲವಾರು ಯೋಜನೆಗಳಲ್ಲಿ ಇದು ಮೊದಲು ರಾಷ್ಟ್ರೀಯ ಯೋಜನೆ. ಈ ಯೋಜನೆಗೆ ಇಷ್ಟು ದೊಡ್ಡ ಪ್ರಮಾಣದ ಅನುದಾನ ಘೋಷಣೆ ಮಾಡಿದ್ದು ಸಂತಸದ ಸಂಗತಿ.

CC patil- Jaya mruthyunjaya swameeji

ಸಿ.ಸಿ. ಪಾಟೀಲ್‌, ಲೋಕೋಪಯೋಗಿ ಸಚಿವ
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಘೋಷಿಸಿದ್ದ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮೂಲಮಂತ್ರದ ಆಶಯ ಇಂದು ಕೇಂದ್ರ ಸರ್ಕಾರದ ಮುಂಗಡ ಪತ್ರದಲ್ಲೂ ಸೇರಿರುವುದರಿಂದ ದೇಶದ ಸರ್ವಾಂಗೀಣ ಪ್ರಗತಿಗೆ ಇದು ಮತ್ತಷ್ಟು ಚಾಲನೆ ನೀಡಲಿದೆ. ಬಜೆಟ್ಟಿನಲ್ಲಿ ಘೋಷಿಸಲಾದ ಕಾರ್ಯಕ್ರಮಗಳಿಂದ ಮುಖ್ಯವಾಗಿ ಬಡವರು ಮಧ್ಯಮ ವರ್ಗದವರು, ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಹೆಚ್ಚಿನ ಪ್ರಯೋಜನವಾಗಲಿದೆ.

ಮುರುಗೇಶ್‌ ನಿರಾಣಿ, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ
ಕೋವಿಡ್ ನಂತರವೂ ಭಾರತ ತನ್ನ ಆರ್ಥಿಕತೆಯ ವೇಗದಿಂದಾಗಿ ಜಗತ್ತಿನ ಗಮನ ಸೆಳೆದಿದೆ. ರೈಲ್ವೆ ಇಲಾಖೆಯಲ್ಲಿ ಹೆಚ್ಚಿನ ಹಣ ಹೂಡಿಕೆ, ಯುವ ಉದ್ಯಮಿಗಳು, ಕೃಷಿ ಸ್ಟಾರ್ಟಪ್‍ಗಳಿಗೆ ಉತ್ತೇಜನ, ಪ್ರವಾಸೋದ್ಯಮಕ್ಕೆ ಒತ್ತು ಕೊಟ್ಟಿದ್ದು, ಒಂದು ಜಿಲ್ಲೆ- ಒಂದು ಉತ್ಪನ್ನಕ್ಕೆ ಪ್ರೋತ್ಸಾಹ ಕೊಟ್ಟ ಆಯವ್ಯಯ ಪತ್ರ ಇದಾಗಿದೆ ಎಂದು ತಿಳಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ

ಬಿ.ಎಸ್.‌ ಯಡಿಯೂರಪ್ಪ, ಮಾಜಿ ಸಿಎಂ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಬಜೆಟ್‌, ಭವಿಷ್ಯವನ್ನು ಗಮನದಲ್ಲಿರಿಸಿಕೊಂಡಿದೆ. 2025ಕ್ಕೆ ಭಾರತವನ್ನು 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆಯಾಗಿಸುವತ್ತ ಹೆಜ್ಜೆ ಇಟ್ಟಿದೆ. ಮಧ್ಯಮ ವರ್ಗದ ಕಾಳಜಿಯನ್ನು ಈ ಬಜೆಟ್‌ ಹೊಂದಿದೆ ಹಾಗೂ ಎಲ್ಲ ವರ್ಗದವರಿಗೂ ಒಂದಲ್ಲ ಒಂದು ಅನುಕೂಲವನ್ನು ನೀಡಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ನಾನು ಅಭಿನಂದಿಸುತ್ತೇನೆ.

ಅರುಣ್‌ ಸಿಂಗ್‌, ರಾಜ್ಯ ಬಿಜೆಪಿ ಪ್ರಭಾರಿ
ಅತ್ಯಧಿಕ ಬಂಡವಾಳ ಹೂಡಿಕೆಯೊಂದಿಗೆ ಗಮನಾರ್ಹ ಬೆಳವಣಿಗೆ ಆಧಾರಿತ ಬಜೆಟ್, ಯುವಕರಿಗೆ ನವೀನ ಕೌಶಲ್ಯದ ಯೋಜನೆಗಳು, ಮಧ್ಯಮವರ್ಗಕ್ಕೆ ಅನೇಕ ಪ್ರಯೋಜನಗಳು, ಅಂತ್ಯೋದಯಕ್ಕೆ ಅತಿ ಹೆಚ್ಚಿನ ಆದ್ಯತೆ, ಹಸಿರು ಬೆಳವಣಿಗೆಗೆ ಉತ್ತೇಜನ. ವಿತ್ತಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಅಭಿನಂದನೆಗಳು.

Video song over former cm siddaramaiah

ಸಿದ್ದರಾಮಯ್ಯ, ವಿಧಾನಸಭೆ ಪ್ರತಿಪಕ್ಷ ನಾಯಕ
2022 ರಲ್ಲಿ 16.61 ಲಕ್ಷ ಸಾಲ ಮಾಡ್ತೀವಿ ಎಂದು ಹೇಳಿದ್ರು. 17.55 ಲಕ್ಷ ಸಾಲ ಮಾಡಿದ್ದಾರೆ. ಬಡ್ಡಿ ಕೊಡುವುದೇ 42 ಶೇಕಡಾ ಆಗುತ್ತೆ. ನೂರು ರೂಪಾಯಿ ಆದಾಯದಲ್ಲಿ 42 ರೂಪಾಯಿ ಬಡ್ಡಿಗೆ ಹೋಗುತ್ತೆ. 54.90 ಲಕ್ಷ ಕೋಟಿ ರೂ. ಮನಮೋಹನ್ ಸಿಂಗ್ ಕಾಲದವರೆಗೂ ಆಗಿತ್ತು.. ಇದು ನೆಹರೂ ಕಾಲದಿಂದ ಆದ ಸಾಲ. 1.10 ಲಕ್ಷ ಕೋಟಿ ರೂ. ಮೋದಿ ಸಾಲ ಮಾಡಿದ್ದಾರೆ. ಇದು ಮೋದಿ ಕೊನೆಯ ಬಜೆಟ್. ಮುಂದಿನ ವರ್ಷ ಎಲೆಕ್ಷನ್ ಬಜೆಟ್ ಮಾಡ್ತಾರೆ.
118 ಲಕ್ಷ ಕೋಟಿ ಸಾಲವನ್ನ ಹತ್ತು ವರ್ಷಗಳಲ್ಲಿ ಮಾಡಿದ್ದಾರೆ. ಇದು ಅತ್ಯಂತ ನಿರಾಶಾದಾಯಕ ಬಜೆಟ್.
ಕೃಷಿ, ಗ್ರಾಮೀಣ, ಸಮಾಜ ಕಲ್ಯಾಣ ಇಲಾಖೆಗೆ ಹೆಚ್ಚು ಏನು ಕೊಟ್ಟಿಲ್ಲ. ನರೇಗಾಗೆ ಕಡಿಮೆ ಮಾಡಿದ್ದಾರೆ. ಉದ್ಯೋಗ ಕೊಡುವವರಿಗೆ ಕಡಿತ ಮಾಡಿದ್ದಾರೆ. 29 ಸಾವಿರ ಕೋಟಿ ಖೋತಾ ಮಾಡಿದ್ದಾರೆ. 2022 ನೋಡಿದ್ರೆ 23 ಕ್ಕೆ ಕಡಿಮೆ ಮಾಡಿದ್ದಾರೆ. ರಾಜ್ಯಕ್ಕೆ ಏನೂ ಮಾಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆ ಇನ್ನೂ ಡಿಪಿಆರ್ ಆಗದೇ ಏನು ಮಾಡಲು ಆಗಲ್ಲ. ಕೇಂದ್ರ ಸರ್ಕಾರ ಅನುಮತಿ ಕೊಡದೇ ಏನೂ ಆಗುವುದಿಲ್ಲ. ಇದನ್ನ ರಾಷ್ಟ್ರೀಯ ಯೋಜನೆ ಮಾಡ್ತೀವಿ ಎಂದು ಹೇಳಿದ್ರು. ಅದನ್ನು ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿಲ್ಲ. ನೋಟಿಪಿಕೇಷನ್ ಜಾರಿ ಮಾಡಿದ ಮೇಲೆ ಇದು ಅಪ್ಲೇ ಆಗುತ್ತೆ. ಮೇಕೆದಾಟು ಯೋಜನೆ ಗೆ ಒಂದು ಸಾವಿರ ಕೊಟ್ರು ಏನಾಯಿತು? ಅದು ಡಿಪಿಆರ್ ಸಹ ಆಗಲಿಲ್ಲ. ಇದು ನಾವು ಸಣ್ಣ ಮಕ್ಕಳು ಇದ್ದಾಗ ಬಾಂಬೆ ನೋಡಿ ಅಂತ ಬರ್ತಿದ್ರು. ಹಾಗೇ ಆಗಿದೆ ಇವರ ಅನೌನ್ಸ್ಮೆಂಟ್. ಇದು ಕನ್ನಡಿ ಒಳಗಿನ ಒಂದು ಗಂಟು ಅಷ್ಟೇ.

ಬೈರತಿ ಬಸವರಾಜ್‌, ನಗರಾಭಿವೃದ್ಧಿ ಸಚಿವ
ಕೇಂದ್ರ ಸರ್ಕಾರದ 2023-24ನೇ ಆಯವ್ಯಯದಲ್ಲಿ ಕರ್ನಾಟಕದ ಅಭಿವೃದ್ಧಿಯನ್ನು ದೃಷ್ಠಿಯಲ್ಲಿಟ್ಟುಕೊಂಡಿರುವುದು ನಮ್ಮ ಡಬಲ್ ಇಂಜಿನ್ ಸರ್ಕಾರದ ಕೊಡುಗೆ. ನಮ್ಮ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜೀ ನೇತೃತ್ವದ ಎನ್.ಡಿ.ಎ. ಸರ್ಕಾರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಪರಿಕಲ್ಪನೆಯಲ್ಲಿ ಕೇಂದ್ರದ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಸರ್ವರ ಅಭಿವೃದ್ಧಿಗೆ ಪೂರಕವಾಗಿಯೇ ಬಜೆಟ್ ಮಂಡಿಸಿದ್ದಾರೆ.

ಸಿ.ಟಿ. ರವಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರವು ಈ ಬಜೆಟ್‌ನಲ್ಲಿ 5,300 ಕೋಟಿ ರೂ.ಮೀಸಲಿಟ್ಟಿದೆ. ಈ ಮೂಲಕ ಐದು ದಶಕಗಳ ಬೇಡಿಕೆಯನ್ನು ಈಡೇರಿಸಿದೆ. ಈ ಐತಿಹಾಸಿಕ ಯೋಜನೆಯೂ ರೈತರಿಗೆ ವರದಾನವಾಗಲಿದೆ. ಇಂತಹ ಅತ್ಯುತ್ತಮ ಬಜೆಟ್‌ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಅಭಿನಂದನೆಗಳು.ಎಲ್ಲ ಭಾರತೀಯರ ಆಶೋತ್ತರಗಳ ಕುರಿತೂ ಕಾಳಜಿ ಹೊಂದಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ಗೆ ಅನುಗುಣವಾಗಿದೆ.

ಡಾ. ಕೆ. ಸುಧಾಕರ್‌, ಆರೋಗ್ಯ ಸಚಿವ
2104 ರಿಂದ ದೇಶದಲ್ಲಿ ವಿವಿಧೆಡೆ 157 ಮೆಡಿಕಲ್‌ ಕಾಲೇಜುಗಳನ್ನು ಆರಂಭಿಸಿದ್ದು, ಈ ಕಾಲೇಜುಗಳಲ್ಲಿ 157 ಹೊಸ ನರ್ಸಿಂಗ್‌ ಕಾಲೇಜುಗಳನ್ನು ಆರಂಭಿಸುವುದಾಗಿ ತಿಳಿಸಲಾಗಿದೆ. ಸಿಕಲ್‌ ಸೆಲ್‌ ಅನೀಮಿಯಾದ ನಿವಾರಣೆಗಾಗಿ ಪ್ರತ್ಯೇಕವಾದ ಅಭಿಯಾನ ಆರಂಭಿಸಲಾಗುತ್ತದೆ. ಫಾರ್ಮಾ ಉದ್ಯಮದಲ್ಲಿ ಸಂಶೋಧನೆಗೆ ಪ್ರೋತ್ಸಾಹಿಸಲು ಕಾರ್ಯಕ್ರಮ, ನಿಗದಿತ ಐಸಿಎಂಆರ್‌ ಲ್ಯಾಬ್‌ಗಳಲ್ಲಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಸಂಶೋಧನೆಗೆ ಕಾರ್ಯಕ್ರಮ ರೂಪಿಸುವುದಾಗಿ ಬಜೆಟ್‌ನಲ್ಲಿ ತಿಳಿಸಲಾಗಿದೆ. ಇವು ಆರೋಗ್ಯ ಕ್ಷೇತ್ರಕ್ಕೆ ನೀಡಿರುವ ಉತ್ತಮ ಕೊಡುಗೆಗಳು.

ಎಸ್‌.ಟಿ. ಸೋಮಶೇಖರ್‌, ಸಹಕಾರ ಸಚಿವ
ಕೇಂದ್ರ ಸರ್ಕಾರದ ಈ ಸಾಲಿನ ಬಜೆಟ್‌, ಜನಪರ ಬಜೆಟ್. ಸಮಾಜದ ಎಲ್ಲ ವರ್ಗಗಳ ನಿರೀಕ್ಷೆಯನ್ನು ಪೂರೈಸಲಿದೆ. ಎಲ್ಲರನ್ನೂ ಗಮನದಲ್ಲಿಟ್ಟುಕೊಂಡು ರೂಪಿಸಿದ ಬಜೆಟ್ ಇದಾಗಿದೆ. 7 ಲಕ್ಷದವರೆಗೆ ವೈಯಕ್ತಿಕ ತೆರಿಗೆ ವಿನಾಯ್ತಿ, ಕೃಷಿ ಸಾಲಕ್ಕೆ 20 ಲಕ್ಷ ಕೋಟಿ ರೂ. ಮಿಸಲು, 50 ಹೊಸ ಏರ್ ಪೋರ್ಟ್ ಗಳ ಸ್ಥಾಪನೆ, ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯಗಳ ಸ್ಥಾಪನೆ ಸೇರಿದಂತೆ ಹತ್ತು ಹಲವು ಯೋಜನೆಗಳ ಘೋಷಣೆ ಮಾಡಲಾಗಿದೆ. ಒಟ್ಟಾರೆ ಈ ಬಜೆಟ್ ಎಲ್ಲಾ ವರ್ಗದ ಜನತೆಯನ್ನು ಒಳಗೊಂಡ ಜನಪರ ಬಜೆಟ್.

Ayodhya model rama mandir will be built in ramanagara says ashwathnarayan

ಡಾ. ಸಿ.ಎನ್‌. ಅಶ್ವತ್ಥನಾರಾಯಣ, ಉನ್ನತ ಶಿಕ್ಷಣ ಸಚಿವ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಬಜೆಟ್‌ ರಚನಾತ್ಮಕ ನೀತಿಗಳ ಪ್ರತಿಫಲನವಾಗಿದೆ. ಇದು ಸಮಾಜದ ಆಧಾರಸ್ತಂಭವಾದ ರೈತರು, ದೀನದಲಿತರು, ಮಹಿಳೆಯರು ಕುಶಲಕರ್ಮಿಗಳು, ಯುವಜನರು, ಉದ್ಯಮಿಗಳು ಮತ್ತು ತೆರಿಗೆದಾರರ ಸಬಲೀಕರಣ ಮತ್ತು ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿ ಇಟ್ಟುಕೊಂಡಿದೆ. ಇದರ ಜತೆಯಲ್ಲೇ ಶಿಕ್ಷಣ, ಕೌಶಲ್ಯ, ಮೂಲಸೌಕರ್ಯ ಮತ್ತು ವೈಜ್ಞಾನಿಕ ನಗರೀಕರಣಕ್ಕೆ ಒತ್ತು ಕೊಡುವ ಹೊಸ ದೃಷ್ಟಿಕೋನವೂ ಇದರಲ್ಲಿದೆ.

ವಿ. ಸುನಿಲ್‌ಕುಮಾರ್‌, ಇಂಧನ ಸಚಿವ
ಹಸಿರು ಇಂಧನ ಕ್ಷೇತ್ರವನ್ನು ಆದ್ಯತಾ ವಲಯವಾಗಿ ಗುರುತಿಸಲಾಗಿದ್ದು, ೨೦೩೦ ರ ವೇಳೆಗೆ ೫ ಎಂಎಂಟಿ ಹಸಿರು ಹೈಡ್ರೋಜನ್ ಉತ್ಪಾದನಾ ಗುರಿ ನಿಗದಿ ಮಾಡಲಾಗಿದ್ದು, ೩೫೦೦೦ ಕೋಟಿ ರೂ. ಹೂಡಿಕೆಗೆ ನಿರ್ಧರಿಸಿರುವುದು ಸ್ವಾಗತಾರ್ಹ. ಇದು ರಾಜ್ಯಗಳ ಮೇಲಿನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಬಂಡವಾಳ ಹೂಡಿಕೆ ಮಿತಿಯನ್ನು ೧೦ ಲಕ್ಷ ಕೋಟಿಗೆ ಹೆಚ್ಚಳ‌ ಮಾಡಲಾಗಿದ್ದು, ಇದು ಜಿಡಿಪಿಯ ಶೇ.೩.೩ ರಷ್ಟಾಗುತ್ತದೆ. ಇದು ಭಾರತದ ಬದಲಾದ ಆರ್ಥಿಕ ಶಕ್ತಿಗೆ ನಿದರ್ಶನ ಎಂದು ಹೇಳಿದ್ದಾರೆ. ಕೊರೋನಾ ಕಾಲಘಟದಲ್ಲಿ ದೇಶದ ಯಾವೊಬ್ಬ ಪ್ರಜೆಯೂ ಹಸಿದಿರಬಾರದೆಂಬ ಕಾರಣಕ್ಕೆ ಪಿಎಂ ಗರೀಬ್ ಕಲ್ಯಾಣ ಯೋಜನೆಯಲ್ಲಿ ಉಚಿತವಾಗಿ ಅಕ್ಕಿ ಹಾಗೂ ಧಾನ್ಯ ವಿತರಣೆ ಮಾಡಲಾಗಿತ್ತು. ಮುಂದಿನ ಒಂದು ವರ್ಷದ ಅವಧಿಗೆ ಈ ಯೋಜನೆ ವಿಸ್ತರಣೆ ಮಾಡಿರುವುದು ಕೇಂದ್ರ ಸರ್ಕಾರದ ಮಾತೃ ಹೃದಯದ ಸಂಕೇತ‌.

DK suresh

ಡಿ.ಕೆ ಸುರೇಶ್, ಕಾಂಗ್ರೆಸ್‌ ಸಂಸದ
ಒಂಬತ್ತನೇ ಬಜೆಟ್ ಅನ್ನು ಮೋದಿ ಸರ್ಕಾರ ಮಂಡಿಸಿದೆ. ಸುದೀರ್ಘವಾದ, ಮಾರ್ಮಿಕವಾದ ಬಜೆಟ್ ಮಂಡಿಸಿದ್ದಾರೆ. ಇದು ಅಮೃತ್ ಕಾಲದ ಬಜೆಟ್ ಎಂದರು. ಇದು ಅಮೃತ್ ಕಾಲದ ಅಥಾವ ಅದಾನಿ ಕಾಲದ ಅಥಾವ ಆಮ್ ಅದ್ಮಿ ಬಜೆಟ್‌ನಲ್ಲಿ ಯಾವುದು ಎಂದು ಗೊತ್ತಾಗುತ್ತಿಲ್ಲ. ಕರ್ನಾಟಕ, ದೇಶದ ಯುವಕರು ರೈತರ ಪಾಲಿಗೆ ಏನನ್ನು ಕೊಡದ ಡಬ್ಬಾ ಬಜೆಟ್ ಇದು. ಮೋದಿಯ ಸುಳ್ಳು ಭರವಸೆ ಮುಂದುವರಿದಿದೆ. ಕೃಷಿ ಆದಾಯ ದ್ವಿಗುಣ ಮಾಡ್ತಿವಿ ಎಂದಿದ್ದರು. ಜಿಡಿಪಿ, ತಲಾ ಆದಾಯ ಹೆಚ್ಚಿದೆ ಎಂದು ಹಣಕಾಸು ಸಚಿವರು ಹೇಳಿದರು. ಯಾರ ಆದಾಯ ಹೆಚ್ಚಾಗಿದೆ ಎಂದು ಹೇಳಿಲ್ಲ. ಸಿರಿಧಾನ್ಯಗಳಿಗೆ ಹೊಸ ಹೆಸರಿಟ್ಟು ಅವುಗಳನ್ನು ನೆನಪಿಸಿಕೊಂಡಿದ್ದಾರೆ. ಹೆಸರು ಬದಲಿಸುವ ಪದ್ದತಿ ಮುಂದುವರಿಸಿದ್ದಾರೆ. ಕೊವೀಡ್ ನಿಂದ ತತ್ತರಿಸಿದ ಜನರಿಗೆ ಯಾವುದೇ ಪರಿಹಾರ ನೀಡಿಲ್ಲ. ಕರ್ಮಯೋಗಿ ಯೋಜನೆ ಘೋಷಣೆ ಮಾಡಿದ್ದಾರೆ, ಆದರೆ ಉದ್ಯೋಗ ಸೃಷ್ಟಿಸಿಲ್ಲ. ಹೆಣ್ಣ ಮಕ್ಕಳು ಹಿರಿಯ ನಾಗರಿಕರಿಗೆ ಎರಡು ಲಕ್ಷದ ಬಾಂಡ್ ಮಾಡಿದ್ದಾರೆ. ಆದಾನಿಗೆ ಹಣ ಹೊಂದಾಣಿಕೆ ಮಾಡಲು ಈ ನಿರ್ಧಾರ ಮಾಡಿರಬಹುದು. ಈಗಾಗಲೇ ಎಲ್‌ಐಸಿಯನ್ನು ನಷ್ಟದಲ್ಲಿರುವಂತೆ ಮಾಡಿದೆ. ಅದಕ್ಕಾಗಿ ಹೊಸ ಪ್ಲ್ಯಾನ್ ಮಾಡಿರುವಂತಿದೆ. ಬೆಲೆ ಏರಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಸರಿಪಡಿಸಲು ಏನು ಮಾಡ್ತಿದ್ದಿವಿ ಅಂತಾ ಹೇಳಿಲ್ಲ. ಆದಾಯ ತೆರಿಗೆ ವಿನಾಯಿತಿ ಕೂಡಾ ಚುನಾವಣಾ ರಾಜಕೀಯ ಅಷ್ಟೇ. ಇದೊಂದು ಡಬ್ಬಾ ಬಜೆಟ್, 130 ಕೋಟಿ ಜನರನ್ನು ಮೋಸ ಮಾಡುವ ಶೂನ್ಯ ಬಜೆಟ್.

ಎಲ್. ಹನುಮಂತಯ್ಯ, ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ
ಸಾಮಾನ್ಯ ವ್ಯಕ್ತಿಗೆ ಯಾವ ಅನುಕೂಲ ಆಗಿಲ್ಲ. ಇದು ಆಮ್ ಅದ್ಮಿ ಬಜೆಟ್ ಅಲ್ಲ, ಆದಾಯ ಹೆಚ್ಚಿರುವ ಜನರಿಗೆ ಅನುಕೂಲ ಮಾಡಿಕೊಟ್ಟಿದೆ. ಆದಾಯ ಹೆಚ್ಚು ಮಾಡುವ ಕೆಲಸ ಆಗಿಲ್ಲ. ಮೋದಿ ಅಧಿಕಾರಕ್ಕೆ ಬರುವಾಗ ಉದ್ಯೋಗ ಸೃಷ್ಟಿ ಮಾಡುವ ಭರವಸೆ ನೀಡಿದರು. ಆದರೆ ಅದಕ್ಕೆ ಪೂರಕ ಅಂಶಗಳನ್ನು ಸೇರಿಸಿಲ್ಲ. ಯಾರು ಕಷ್ಟದಲ್ಲಿದ್ದಾರೆ ಅವರಿಗೆ ಪರಿಹಾರ ಕೊಡುವ ಕೆಲಸ ಮಾಡಿಲ್ಲ. ಆದಾಯ ತೆರಿಗೆ ಸ್ಲಾಬ್ ಬದಲು ಮಾಡಿರುವುದು ಬಿಟ್ಟು ಬೇರೇನೂ ಮಾಡಿಲ್ಲ. ಹೀಗಾಗಿ ಇದನ್ನು ಶ್ರೀಮಂತ ಲರ ಬಜೆಟ್ ಎಂದು ಕರೆಯಬಹುದು. ಶಿಕ್ಷಣ ಕ್ಷೇತ್ರ ಪುನರುಜ್ಜೀವನಗೊಳಿಸುವ ಕೆಲಸ ಆಗಿಲ್ಲ. ವಿವಿಗಳಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅವಕಾಶ ನೀಡಿಲ್ಲ. ಕೃಷಿಗೂ ಬಜೆಟ್ ನಲ್ಲಿ ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ. ಬೆಂಬಲ ಬೇಡಿಕೆ ಘೋಷಣೆ ಮಾಡಿಲ್ಲ. ಕೃಷಿ ಕಾರ್ಮಿಕರಿಗೆ ಪೂರಕ ಘೋಷಣೆಗಳಿಲ್ಲ. ಭಾರತದ ಬಡ ಜನರಿಗೆ ಈ ಬಜೆಟ್ ನಿಂದ ಏನು ಸಿಕ್ಕಿಲ್ಲ.

ಎಂ.ಬಿ. ಪಾಟೀಲ್‌, ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ
ಇದು ಘೋಷಣೆಗಳ ಬಜೆಟ್ ಆಗಿದೆ. ಪೆಟ್ರೋಲ್, ಡೀಸೆಲ್ ಗ್ಯಾಸ್, ರಸಗೊಬ್ಬರ ದರ ಕಡಿಮೆ ಆಗಿಲಿದೆ ಅಂತ ಜನರ ನಿರೀಕ್ಷೆ ಇತ್ತು. ಕೊರೊನಾ ಸಮಯದಲ್ಲಿ 20 ಲಕ್ಷ ಕೋಟಿ ಅನೌನ್ಸ್ ಮಾಡಿದ್ದರು. ಕೊರೊನಾದಿಂದ ಸತ್ತವರು, ಕೊರೊನಾ ವಾರಿಯರ್ಸ್ ಗೆ ಕೊಡ್ತೀವಿ ಅಂತ ಹೇಳಿದ್ದರು. ಕೆಲವು ಕಸುಬುದಾರರಿಗೆ ಯಾವುದೂ ಬೆಂಬಲ ಸಿಗಲಿಲ್ಲ. 20 ಲಕ್ಷ ಕೋಟಿ ಯಾರಿಗೂ ಸಿಕ್ಕಿಲ್ಲ. ಅದೇ ರೀತಿಯ ಬಜೆಟ್ ಅಷ್ಟೆ ಇದು. ಎರಡು ಕೋಟಿ ಉದ್ಯೋಗ ಸೃಷ್ಟಿ ಅಂದರು. ಯಾರಿಗೆ ಸಿಕ್ತು ಹಾಗಾದ್ರೆ ಉದ್ಯೋಗ? ಆತ್ಮನಿರ್ಭರ, ಮೇಕ್ ಇನ್ ಇಂಡಿಯ ಅಂತ ಬಹಳ ಚೆನ್ನಾಗಿ ಮಾತಾಡ್ತಾರೆ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಆಗಿದೆಯಾ? 2014 ರವರೆಗೆ 55 ಲಕ್ಷ ಕೋಟಿ ಸಾಲ ಇತ್ತು. 2014-23 ರ ವರೆಗೆ 169 ಲಕ್ಷ ಕೋಟಿ ಸಾಲ ಆಗಿದೆ. ಆದಾಯ ತೆರಿಗೆ ವಿನಾಯ್ತಿ ನೀಡಿದ್ದಾರೆ. ಆಹಾರ ಪದಾರ್ಥ ದರ ಎಲ್ಲವೂ ಜಾಸ್ತಿ ಆಗಿದ್ದಾವೆ. ತೆರಿಗೆ ವಿನಾಯ್ತಿಯಿಂದ ಬಡ, ಮಧ್ಯಮ ವರ್ಗದವರಿಗೆ ಏನು ಲಾಭ? ಮಹಿಳೆಗೆ ಶಕ್ತಿ ತುಂಬುವ ಕೆಲಸ ಆಗಬೇಕಿತ್ತು. ವಿದ್ಯಾರ್ಥಿಗಳಿಗೆ ಏನು ಸಿಕ್ಕದೆ? ಸಬ್ ಕೆ ಸಾಥ್ ಸಬ್ ಕೆ ವಿಕಾಸ್ ಅಂತಾರೆ. ಉದ್ಯೋಗ ಸೃಷ್ಟಿ ಶೂನ್ಯವಾಗಿದೆ. ಅಪ್ಪರ್ ಭದ್ರ ಯೋಜನೆ ನ್ಯಾಷನಲ್ ಪ್ರಾಜೆಕ್ಟ್ ಗೆ ಆಯ್ಕೆಯಾಗಿದೆ. ಹಿಂದಿನ ಸರ್ಕಾರ ಇದ್ದಾಗಲೇ ಎಲ್ಲವೂ ಕ್ಲಿಯರ್ ಆಗಿತ್ತು ಹೀಗಾಗಿ ಹಣ ನೀಡಿದ್ದಾರೆ. ಇದನ್ನು ಸಂಭ್ರಮಿಸ್ತಾ ಇದ್ದಾರೆ ಅಷ್ಟೆ.

ಜೆಡಿಎಸ್‌ ಶರವಣ

ಟಿ.ಎ.ಶರವಣ, ಜೆಡಿಎಸ್‌ ವಿಧಾನ ಪರಿಷತ್ ಸದಸ್ಯ
ಕೇಂದ್ರ ಸರ್ಕಾರದ ಚುನಾವಣೆ ಕಾಲದ ಬಜೆಟ್ನಲ್ಲಿ ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ 5300ಕೋಟಿ ರೂಪಾಯಿ ಬಿಡುಗಡೆ ಮಾಡಿರುವ ಕ್ರಮ ಸ್ವಾಗತಾರ್ಹ ವಾಗಿದೆ. ಆದರೂ ರಾಜ್ಯಕ್ಕೆ ಚುನಾವಣೆ ಕಾಲದಲ್ಲಾದರೂ ಇನ್ನಷ್ಟು ಹೊಸ ಯೋಜನೆಗಳು ಬರಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ.
ಮೂಲಭೂತ ಸೌಕರ್ಯ, ನಿರುದ್ಯೋಗ ನಿವಾರಣೆ, ನಗರಾಭಿವೃದ್ದಿ ವಿಚಾರದಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ಮೀಸಲಿಡಲಾಗಿದೆ ಆದರೂ, ಕರ್ನಾಟಕದ ಬಗ್ಗೆ ಸ್ಪಷ್ಟ ಚಿತ್ರಣವಿಲ್ಲದ ಬಜೆಟ್ ಇದಾಗಿದೆ. ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಮಹದಾಯಿ, ಮೇಕೆದಾಟು ಯೋಜನೆಗಳ ವಿಚಾರದಲ್ಲಿ ಬಜೆಟ್ ಯಾವ ಸ್ಪಂದನೆಯನ್ನು ನೀಡಿಲ್ಲ.
ಈ ನಿಟ್ಟಿನಲ್ಲಿ ರಾಜ್ಯದ ಒತ್ತಡಕ್ಕೆ ಕೇಂದ್ರ ಮಣಿದಿಲ್ಲ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳುವ ರೀತಿ ಡಬಲ್ ಇಂಜಿನ್ ಸರಕಾರದ ಸಾಧನೆ , ಸಮನ್ವಯತೆ ಸುಳ್ಳು ಎನ್ನುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

ನಳಿನ್‌ ಕುಮಾರ್‌ ಕಟೀಲ್‌, ರಾಜ್ಯ ಬಿಜೆಪಿ ಅಧ್ಯಕ್ಷ
ಭಾರತವು ಜಗದ್ವಂದ್ಯ ರಾಷ್ಟ್ರವಾಗಿ ಹೊರಹೊಮ್ಮುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೇಂದ್ರದ ನೂತನ ಬಜೆಟ್‍ನಲ್ಲಿ ಪ್ರಕಟಿಸಲಾಗಿದೆ. ಇದು ಕರ್ನಾಟಕ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಹೊಂದಿದ ಬಜೆಟ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೂಲಸೌಕರ್ಯ ಕ್ಷೇತ್ರದಲ್ಲಿ 10 ಲಕ್ಷ ಕೋಟಿ ಬಂಡವಾಳ ಹೂಡಿಕೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ. ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ಅನುದಾನ ನೀಡಿದ್ದು, ಮನೆಮನೆಗೆ ನಳ್ಳಿ ನೀರು (ಹರ್ ಘರ್ ಜಲ್) ಯೋಜನೆಯ ವೇಗವರ್ಧನೆಗೆ ಕಾರಣ ಆಗಲಿದೆ ಎಂದು ತಿಳಿಸಿದ್ದಾರೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳು.

ಎಂ.ಟಿ.ಬಿ. ನಾಗರಾಜು, ಪೌರಾಡಳಿತ ಸಚಿವ
ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಬಯಲು ಸೀಮೆಯ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ₹ 5,300 ಕೋಟಿ ಅನುದಾನ ಪ್ರಕಟಿಸಿರುವ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು.

ಶಶಿಕಲಾ ಅ ಜೊಲ್ಲೆ, ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ
ಎಲ್ಲಾ ವರ್ಗಗಳ ಅಭ್ಯುದಯಕ್ಕೆ ಅಮೃತ ಸಿಂಚನ ನೀಡುವಂತಹ ಬಜೆಟನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ್ದಾರೆ. ಸಪ್ತ ಪ್ರಮುಖಾಂಶಗಳ ಆಧಾರದ ಮೇಲೆ ಇಂದು ಮಂಡಿಸಲಾಗಿರುವ ಕೇಂದ್ರ ಆಯವ್ಯಯ ಎಲ್ಲಾ ವರ್ಗಗಳ ಅಭಿವೃದ್ದಿಗೆ ಪೂರಕವಾಗಿದೆ. ಮಹಿಳೆಯರ ಸಬಲೀಕರಣಕ್ಕೆ ಹಾಗೂ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಎನ್‌ಡಿಎ ಸರ್ಕಾರ ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಎನ್ನುವ ಪರಿಕಲ್ಪನೆಯನ್ನ ಮುಂದುವರೆಸಿದ್ದು, ಸರ್ವರ ಅಭಿವೃದ್ದಿಗೆ ಪೂರಕವಾದ ಆಯವ್ಯಯ ಮಂಡಿಸಿದ್ದಾರೆ. ದೇಶದಲ್ಲಿ ಮೂಲಸೌಕರ್ಯಗಳ ಅಭಿವೃದ್ದಿಗೆ 10 ಲಕ್ಷ ಕೋಟಿ, ಉದ್ಯೋಗ ಸೃಷ್ಟಿಗೆ 10 ಲಕ್ಷ ಕೋಟಿ ಘೋಷಿಸಿರುವುದು ಸ್ವಾಗತಾರ್ಹ. ಸಾರಿಗೆ ಸಂಪರ್ಕ ಹೆಚ್ಚಳಕ್ಕೆ ಹೆಚ್ಚಿನ ಆದ್ಯತೆ ನೀಡಿರುವುದು ಅಭಿವೃದ್ದಿಗೆ ಇನ್ನಷ್ಟು ಪುಷ್ಟಿ ನೀಡಲಿದೆ.

ಕನಿಷ್ಠ ಬೆಂಬಲ ಬೆಲೆ

ಕುರುಬೂರು ಶಾಂತಕುಮಾರ್‌, ರೈತ ಮುಖಂಡ
ಬಜೆಟ್ ನಲ್ಲಿ ಜೈವಿಕ ಇಂಧನ ಉತ್ಪಾದನೆಗೆ ಹೆಚ್ಚು ಒತ್ತು ನೀಡಿರುವುದು, ಬಡವರಿಗೆ ಒಂದು ವರ್ಷ ಉಚಿತ ಆಹಾರ ವಿತರಣೆ, ಸಿರಿಧಾನ್ಯಗಳ ಉತ್ಪಾದನೆಗೆ ಒತ್ತು ನೀಡಿರುವುದು, ಒಳ್ಳೆಯ ಬೆಳವಣಿಗೆ, ಮಧ್ಯಮ ವರ್ಗಕ್ಕೆ ಸಹಕಾರಿಯಾಗಿದೆ. ಆದರೆ ಕೃಷಿಯಿಂದ ರೈತರ ಮಕ್ಕಳು ವಲಸೆ ಹೋಗುತ್ತಿರುವುದನ್ನು ತಪ್ಪಿಸಲು ಬೇಕಾದ ಯಾವುದೇ ಯೋಜನೆಗಳು ಇಲ್ಲ ,ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಸಿಗುವಂತಹ, ಯೋಜನೆ ಜಾರಿ ಬಗ್ಗೆ ಸ್ಪಷ್ಟ ನಿರ್ಧಾರವೆ ಇಲ್ಲ, ಪ್ರಕಟವಾಗಿಲ್ಲ, ಬಡ್ಡಿ ರಹಿತ ಸಾಲ ನೀಡುವ ಕೃಷಿ ಸಾಲ ನೀತಿಯ ಬಗ್ಗೆಯಾಗಲಿ ಯಾವುದೇ ನಿರ್ಧಾರ ಬಂದಿಲ್ಲ ಕೃಷಿ ಕ್ಷೇತ್ರಕ್ಕೆ ನಿರಾಸದಾಯಕವಾದ ಬಜೆಟ್ ಆಗಿದೆ, ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಕುರುಬೂರ್ ಶಾಂತಕುಮಾರ್ ಬಜೆಟ್ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Complaint to CM : ಸಿಎಂಗೆ ದೂರು ನೀಡಬೇಕೇ? ಈ ನಂಬರ್‌ಗೆ ಕರೆ ಮಾಡಿ!

Complaint to CM : ತಮ್ಮ ಸಮಸ್ಯೆಗಳಿಗೆ ಸರ್ಕಾರಿ ವ್ಯವಸ್ಥೆಯಲ್ಲಿ ಪರಿಹಾರ ಸಿಗದೇ ಇದ್ದಾಗ ನಾಗರಿಕರು ಅನಿವಾರ್ಯವಾಗಿ ಮುಖ್ಯಮಂತ್ರಿಯತ್ತ ದೃಷ್ಟಿ ನೆಡುತ್ತಾರೆ. ಹೇಗಾದರೂ ಮಾಡಿ ಅವರಿಗೊಂದು ದೂರು ಕೊಡಬೇಕು ಎಂದು ಅಂದುಕೊಳ್ಳುತ್ತಾರೆ. ಆದರೆ, ಇದಕ್ಕೆ ಅವರಿಗೆ ಯಾವ ಮಾರ್ಗ ಎಂಬುದು ಮಾತ್ರ ತಿಳಿದಿರುವುದಿಲ್ಲ. ಇದಕ್ಕೆ ಈಗ ಎರಡು ಮಾರ್ಗಗಳು ಇವೆ. ಸಹಾಯವಾಣಿಗೆ ಕರೆ ಮಾಡಿ ದೂರು ನೀಡುವುದು ಸರಳ ಮಾರ್ಗವಾಗಿದೆ.

VISTARANEWS.COM


on

Complaint to CM Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ದೂರು ನೀಡಬೇಕೇ? (Complaint to CM) ಇದಕ್ಕಾಗಿ ನೀವು ಜನತಾ ದರ್ಶನಕ್ಕೆ (Janatha Darshan) ಹೋಗಬೇಕೆಂದೇನೂ ಇಲ್ಲ. ನೀವು ಕುಳಿತಲ್ಲಿಯೇ ದೂರು ದಾಖಲು ಮಾಡಬಹುದು. ಅದಕ್ಕೆ ಇದೊಂದು ನಂಬರ್‌ಗೆ ಕರೆ ಮಾಡಿದರೆ ಸಾಕು ನಿಮ್ಮ ದೂರನ್ನು ದಾಖಲಿಸಿಕೊಳ್ಳಲಾಗುತ್ತದೆ.

ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದರೆ ತುಸು ಕಷ್ಟವನ್ನೇ ಪಡಬೇಕು. ರೈತರಿಗೆ ಒಂದು ಖಾತೆ ಮಾಡಿಸಿಕೊಳ್ಳಲೋ, ರಸ್ತೆ ಸಮಸ್ಯೆಯೋ ಅದೇ ದೊಡ್ಡದಾಗಿರುತ್ತದೆ. ಆದರೆ, ಇದಕ್ಕೆ ಅಧಿಕಾರಿಗಳು ಸೊಪ್ಪು ಹಾಕುವುದಿಲ್ಲ. ಇನ್ನು ಮಹಿಳೆಯರಿಗೆ, ವೃದ್ಧರಿಗೆ ಸೇರಿದಂತೆ ನಾಗರಿಕರಿಗೆ ಒಂದಲ್ಲ ಒಂದು ಸಮಸ್ಯೆಗಳು ಇದ್ದೇ ಇರುತ್ತವೆ. ಇದಕ್ಕೆ ಸರ್ಕಾರಿ ವ್ಯವಸ್ಥೆಯಲ್ಲಿ ಪರಿಹಾರ ಸಿಗದೇ ಇದ್ದಾಗ ಅನಿವಾರ್ಯವಾಗಿ ಮುಖ್ಯಮಂತ್ರಿಯತ್ತ ದೃಷ್ಟಿ ನೆಡುತ್ತಾರೆ. ಹೇಗಾದರೂ ಮಾಡಿ ಅವರಿಗೊಂದು ದೂರು ಕೊಡಬೇಕು ಎಂದು ಅಂದುಕೊಳ್ಳುತ್ತಾರೆ. ಆದರೆ, ಇದಕ್ಕೆ ಅವರಿಗೆ ಯಾವ ಮಾರ್ಗ ಎಂಬುದು ಮಾತ್ರ ತಿಳಿದಿರುವುದಿಲ್ಲ. ಇದಕ್ಕೆ ಈಗ ಎರಡು ಮಾರ್ಗಗಳು ಇವೆ. ಒಂದೋ ಸಿಎಂ ನಡೆಸುವ ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸಿ ದೂರು ಸಲ್ಲಿಸುವುದು, ಇಲ್ಲವೇ 1902 ಸಹಾಯವಾಣಿಗೆ (Helpline Number) ಕರೆ ಮಾಡಿ ಜನತಾ ದರ್ಶನದ ಅಡಿ ದೂರನ್ನು ದಾಖಲಿಸುವುದನ್ನು ಮಾಡಬಹುದಾಗಿದೆ. ಹೀಗೆ ಮಾಡಿದರೂ ನೇರವಾಗಿಯೇ ಸಿಎಂಗೆ ದೂರು ದಾಖಲಿಸಿದಂತೆ ಆಗುತ್ತದೆ.

ಕರೆ ಮಾಡಿ ಸಿಎಂಗೆ ಹೀಗೆ ದೂರು ನೀಡಿ!

1902 ಸಹಾಯವಾಣಿಯನ್ನು ರಾಜ್ಯ ಸರ್ಕಾರ ಈಗಾಗಲೇ ತೆರೆದಿದೆ. ಜನತಾ ದರ್ಶನಕ್ಕೆ ದೂರದ ಊರಿನಿಂದ ಹೋಗಲು ಆಗದವರು, ತೀವ್ರ ಸಮಸ್ಯೆ ಎದುರಿಸುತ್ತಿರುವವರು ಯಾರಾದರೂ ಇದ್ದರೆ ಸಿಎಂ ಗಮನಕ್ಕೆ ತರುವ ಸಂಬಂಧ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಸಾಕು. ಅಲ್ಲಿ ನಿಮ್ಮ ಸಮಸ್ಯೆಗಳನ್ನು ಹೇಳಬೇಕು. ಅವರು ನಿಮ್ಮ ಅಹವಾಲುಗಳನ್ನು ಆಧರಿಸಿ ಅದನ್ನು ಜನತಾ ದರ್ಶನ ಕೆಟಗರಿ ಅಡಿ ದೂರು ದಾಖಲು ಮಾಡಿಕೊಳ್ಳುತ್ತಾರೆ.

ಹೀಗೆ ದೂರು ದಾಖಲು ಮಾಡುವಾಗ ನಿಮ್ಮ ಸಮಸ್ಯೆ, ವಿಳಾಸ, ಮೊಬೈಲ್‌ ಸಂಖ್ಯೆಯನ್ನು ಪಡೆದು ಅದರಲ್ಲಿ ನಮೂದು ಮಾಡಲಾಗುತ್ತದೆ. ಈ ದೂರು ಸಿಎಂ ಜನತಾ ದರ್ಶನ ಕೆಟಗರಿ ಮೂಲಕ ಸಂಬಂಧಪಟ್ಟ ಇಲಾಖೆಗೆ ರವಾನೆ ಮಾಡಲಾಗುತ್ತದೆ. ಆದರೆ, ಮುಂದಿನ ಹಂತದ ಬಗ್ಗೆ ಸ್ಪಷ್ಟತೆಯನ್ನು ನೀಡಲಾಗಿಲ್ಲ.

ಮುಂದಿನ ಕ್ರಮ ಏನು?

ಒಂದು ವೇಳೆ 1092 ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಾದರೆ ನಿಮಗೊಂದು ಐಡಿ ಸಂಖ್ಯೆಯನ್ನು ನೀಡಲಾಗುತ್ತದೆ. ನೀವು ದಾಖಲು ಮಾಡಲಾದ ದೂರು ಸಿಎಂ ಕಾರ್ಯಾಲಯಕ್ಕೆ ಹೋಗುತ್ತದೆ. ಅಲ್ಲಿಂದ ಮುಂದಿನ ಪ್ರಕ್ರಿಯೆ ಏನು? ನಿಮ್ಮ ದೂರಿನ ಸ್ಥಿತಿ-ಗತಿ ಏನಾಯಿತು ಎಂಬ ಬಗ್ಗೆ ತಿಳಿಯಬೇಕು ಎಂದಿದ್ದರೆ, ಜನಸ್ಪಂದನ ಪೋರ್ಟಲ್‌ ಅಥವಾ ಜನಸ್ಪಂದನ ಪಿಜಿಆರ್‌ಎಸ್‌ ಪೋರ್ಟಲ್‌ಗೆ ಭೇಟಿ ನೀಡಿ ಅಲ್ಲಿ “ಸಿಪಿಗ್ರಾಮ್ಸ್‌ ಕುಂದುಕೊರತೆ ಸ್ಥಿತಿಯನ್ನು ಪರಿಶೀಲಿಸಿ ಆಯ್ಕೆ ಮೇಲೆ ಕ್ಲಿಕ್‌ ಮಾಡಬೇಕು. ಬಳಿಕ ನಿಮ್ಮ ಸಿಪಿಗ್ರಾಮ್ಸ್‌ ಗ್ರೀವಿಯನ್ಸ್‌ ನಂಬರ್‌ (CPGRAMS Grievance Number) ಅಥವಾ ನಿಮ್ಮ ನೋಂದಾಯಿತ ಮೊಬೈಲ್‌ ಸಂಖ್ಯೆಯನ್ನು ನಮೂದು ಮಾಡಿದರೆ ಅಲ್ಲಿ ಅಹವಾಲು ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸುತ್ತದೆ. ಇಲ್ಲವೇ ನೇರವಾಗಿ 1902 ಸಂಖ್ಯೆಗೆ ಕರೆ ಮಾಡಿದರೆ ನಿಮಗೆ ಅಲ್ಲಿನ ಸಿಬ್ಬಂದಿ ಸಹ ಅಹವಾಲಿನ ಸ್ಟೇಟಸ್‌ ಬಗ್ಗೆ ತಿಳಿಸಿಕೊಡಲಿದ್ದಾರೆ.

ಪ್ರಕ್ರಿಯೆ ಹೇಗಿರಲಿದೆ?

ಸಾರ್ವಜನಿಕರಿಂದ ಮುದ್ದಾಂ/ಆನ್‌ಲೈನ್‌ನಲ್ಲಿ ಸ್ವೀಕೃತವಾಗುವ ಕುಂದುಕೊರತೆ/ಅಹವಾಲುಗಳನ್ನು ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ದಾಖಲಿಸಿ, ಸ್ವೀಕೃತಿಯನ್ನು ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಸ್ವೀಕೃತಿ ಸಂಖ್ಯೆ ಬಳಸಿ ತಮ್ಮ ಕುಂದುಕೊರತೆ/ಅಹವಾಲಿನ ಸ್ಥಿತಿಗತಿಯನ್ನು ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ಅಥವಾ 1902 ಸಂಖ್ಯೆಗೆ ಕರೆಮಾಡಿ ತಿಳಿದುಕೊಳ್ಳಬಹುದು.

ಇದನ್ನೂ ಓದಿ: Gruha Lakshmi : ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ಲವೇ? ಹಾಗಾದರೆ ದೂರು ಕೊಡೋಕೆ ರೆಡಿ ಆಗಿ!

ಎಪಿಐ ಮೂಲಕ ನಿರ್ವಹಣೆ

ಸ್ವೀಕರಿಸಲಾದ ಕುಂದುಕೊರತೆ/ಅಹವಾಲುಗಳನ್ನು ವಿಷಯದ ಆಧಾರದಲ್ಲಿ ಸಂಬಂಧಿಸಿದ ಇಲಾಖೆಗಳ/ಅಧೀನ ಸಂಸ್ಥೆಗಳ ಅಧಿಕಾರಿಗಳ ಲಾಗಿನ್‌ಗಳಿಗೆ ತಕ್ಷಣ ರವಾನಿಸಲಾಗುತ್ತದೆ. ಮುಖ್ಯಮಂತ್ರಿಗಳ ಜನತಾದರ್ಶನದಲ್ಲಿ ಸ್ವೀಕೃತವಾದ ಕುಂದುಕೊರತೆ/ಅಹವಾಲುಗಳನ್ನು ಸ್ವಯಂಚಾಲಿತವಾಗಿ ಸಂಬಂಧಪಟ್ಟ ಇಲಾಖಾ ಕಾರ್ಯದರ್ಶಿಗಳ ಇ-ಆಫೀಸ್‌ ಲಾಗಿನ್‌ಗೆ ಕಳುಹಿಸುವ ವ್ಯವಸ್ಥೆ ಅಳವಡಿಸಲಾಗಿದೆ. ಇ-ಆಫೀಸ್‌ನಲ್ಲಿ ಸದರಿ ಕಡತದ ಪ್ರತಿ ಹಂತದ ಚಲನೆಯನ್ನು API ಮೂಲಕ ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಗೆ ಒದಗಿಸಲಾಗುತ್ತದೆ. ಸ್ವೀಕೃತವಾದ ಅಹವಾಲುಗಳ ಪ್ರಗತಿ ಪರಿಶೀಲಿಸಲು ಪ್ರತ್ಯೇಕ ಡ್ಯಾಶ್‌ಬೋರ್ಡ್‌ ಅಭಿವೃದ್ಧಿಪಡಿಸಲಾಗಿದೆ. ಈ ಡ್ಯಾಶ್‌ಬೋರ್ಡ್‌ನಲ್ಲಿ ಇಲಾಖಾ/ಜಿಲ್ಲಾವಾರು ಸ್ವೀಕೃತವಾದ ಕುಂದುಕೊರತೆ ಮತ್ತು ಅಹವಾಲುಗಳ ಸಂಖ್ಯೆ, ವಿಲೇ ಮಾಡಲಾದ ಮತ್ತು ಬಾಕಿ ಉಳಿದಿರುವ ಕುಂದುಕೊರತೆ ಮತ್ತು ಅಹವಾಲುಗಳ ವಿವರ ಲಭ್ಯವಿದೆ.

Continue Reading

ಉಡುಪಿ

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Rain News : ಇನ್ನೆರಡು ದಿನಗಳು ಹಗುರ ಮಳೆಯೊಂದಿಗೆ ಥಂಡಿ ಗಾಳಿಯು ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

women enjoying in rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಡಿ. 4-5ರಂದು ಮಳೆಯ ಸಿಂಚನವಾಗಲಿದ್ದು, ಪ್ರತಿ ಗಂಟೆಗೆ 30 ಕಿ.ಮೀ ವೇಗದಲ್ಲಿ ನೆಲಗಾಳಿಯು ಬೀಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು, ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗಲಿದೆ.

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಉಳಿದೆಡೆ ಒಣ ಹವೆ ಇರಲಿದೆ. ಕರಾವಳಿಯಲ್ಲಿ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಇರಲಿದ್ದು, ಉತ್ತರ ಕನ್ನಡದಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Cocktail finger ring : ಬ್ರೈಡಲ್‌ ಜ್ಯುವೆಲರಿ ಫ್ಯಾಷನ್‌ನಲ್ಲಿ ಎಥ್ನಿಕ್‌ ಕಾಕ್‌ಟೈಲ್‌ ಉಂಗುರಗಳ ಕಲರವ

ಕನಿಷ್ಠ ತಾಪಮಾನ ಏರಿಕೆ

ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಕೆಲವೆಡೆ ಚಳಿಯು ಮೈ ನಡುಗಿಸಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 27 ಡಿ.ಸೆ -18 ಡಿ.ಸೆ
ಮಂಗಳೂರು: 36 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 18 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

ಧಾರವಾಡದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಧಾರವಾಡದ ಕೊಪ್ಪದಕೇರಿಯ ಶಿವಾಲಯದ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ.

VISTARANEWS.COM


on

Crime news
Koo

ಧಾರವಾಡ: ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ (Murder Case) ಮಾಡಿರುವ ಘಟನೆ ಧಾರವಾಡದ ಕೊಪ್ಪದಕೇರಿಯ ಶಿವಾಲಯದ ಬಳಿ ನಡೆದಿದೆ. ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ನಿಂಗಪ್ಪ ಹಡಪದ (60) ಹತ್ಯೆಗೀಡಾದ ವ್ಯಕ್ತಿ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಉಪನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗೋಕರ್ಣ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು

drown in sea

ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ (Drown in Sea) ನಡೆದಿದೆ. ಇದೇ ವೇಳೆ ಗಂಭೀರಗೊಂಡ ಮತ್ತೊಬ್ಬ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | ತಮ್ಮ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸುಟ್ಟು ಹಾಕಿ ಎಂದ ಭವಾನಿ ರೇವಣ್ಣ! ವಿಡಿಯೊ ನೋಡಿ

ಕಲಬುರಗಿ ಮೂಲದ ಅಭಿಷೇಕ್, ಆಕಾಶ್ ಮೃತ ಪ್ರವಾಸಿಗರು. ಕಲಬುರಗಿಯಿಂದ ಐವರು ಸ್ನೇಹಿತರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು. ಸಮುದ್ರದಲ್ಲಿ ಮೂವರು ಈಜಲು ತೆರಳಿದ್ದಾಗ ಅಲೆಗಳಿಗೆ ಸಿಲುಕಿ ಮುಳುಗಿದ್ದರು. ಈ ವೇಳೆ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ಒಬ್ಬನನ್ನು ರಕ್ಷಣೆ ಮಾಡಲಾಗಿದೆ. ಗಂಭೀರಗೊಂಡ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

ಕರ್ನಾಟಕ

ತಮ್ಮ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸುಟ್ಟು ಹಾಕಿ ಎಂದ ಭವಾನಿ ರೇವಣ್ಣ! ವಿಡಿಯೊ ನೋಡಿ

ಅಪಘಾತ ನಡೆದಾಗ ಬೈಕ್‌ ಸವಾರನನ್ನು ಸಂತೈಸುವುದು ಬಿಟ್ಟು ಹಿಗ್ಗಾಮುಗ್ಗಾ ಬೈಯುವ ಮೂಲಕ ಮಾನವೀಯತೆ ಮರೆತ ಭವಾನಿ ರೇವಣ್ಣ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

Bhavani Revanna
Koo

ಮೈಸೂರು: ಕಾರಿಗೆ ಡಿಕ್ಕಿ ಹೊಡೆದ ಬೈಕ್ ಚಾಲಕನನ್ನು ಭವಾನಿ ರೇವಣ್ಣ (Bhavani Revanna) ತರಾಟೆಗೆ ತೆಗೆದುಕೊಂಡ ಘಟನೆ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಹೊರವಲಯದಲ್ಲಿ ನಡೆದಿದೆ. ಅಪಘಾತ ನಡೆದಾಗ ಬೈಕ್‌ ಸವಾರನನ್ನು ಸಂತೈಸುವುದು ಬಿಟ್ಟು ಹಿಗ್ಗಾಮುಗ್ಗಾ ಬೈದಿರುವ ಭವಾನಿ ರೇವಣ್ಣ, ಬೈಕ್‌ ಸುಟ್ಟು ಹಾಕಿ ಎಂದು ಆಕ್ರೋಶ ಹೊರಹಾಕಿರುವುದು ಕಂಡುಬಂದಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಹೊರವಲಯದಲ್ಲಿ ಅಪಘಾತ ನಡೆದಿದೆ. ಹಾಸನ – ಕೆ.ಆರ್.ನಗರ ರಸ್ತೆಯಲ್ಲಿ ಬರುತ್ತಿದ್ದಾಗ ಭವಾನಿ ರೇವಣ್ಣ ಕಾರಿಗೆ ಬೈಕ್‌ ಸವಾರರೊಬ್ಬರು ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಅಕ್ಕಾ ಕಾರು ಸೈಡಿಗೆ ಹಾಕಿ ಅಂದಿದ್ದಕ್ಕೆ ಕಿಡಿಕಾರಿರುವ ಭವಾನಿ ರೇವಣ್ಣ, ನನ್ನ ಕಾರಿಗೆ ಡ್ಯಾಮೇಜ್‌ ಆಗಿದೆ. ರಿಪೇರಿ ಮಾಡಿಸೋಕೆ 50 ಲಕ್ಷ ರೂ. ಹಣ ಬೇಕು. ಯಾರಾದರೂ ನ್ಯಾಯ ಮಾತನಾಡುವವರು ಐವತ್ತು ಲಕ್ಷ ಹಣ ಕೊಟ್ಟು ಮಾತನಾಡಿ. ಒಂದೂವರೆ ಕೋಟಿ ರೂಪಾಯಿ ಗಾಡಿ ಇದು ಎಂದು ದರ್ಪ ತೋರಿದ್ದಾರೆ.

ಸಾಲಿಗ್ರಾಮ ಠಾಣೆಯ ಇನ್ಸ್‌ಪೆಕ್ಟರ್‌ನ ಕರೀರಿ, ತಗೊಂಡು ಹೋಗಿ ಇವನನ್ನು ಒಳಗೆ ಹಾಕಲಿ, ಸಾಯಂಗಿದ್ರೆ ಬಸ್ಸಿಗೆ ಸಿಕ್ಕಿ ಸಾಯಬೇಕಿತ್ತು. ಸಾಯೋಕೆ ನನ್ ಕಾರೇ ಬೇಕಿತ್ತಾ? ಅವನು ಸತ್ತೋಗ್ತಾನೆ ಅಂತ ಅವನ ಬಗ್ಗೆ ಯಾಕೆ ಯೋಚನೆ ಮಾಡ್ತೀಯಾ? ಒಂದೂವರೆ ಕೋಟಿ ರೂಪಾಯಿ ಕಾರು ಬಗ್ಗೆ ಯೋಚನೆ ಮಾಡು ಎಂದಿರುವ ಭವಾನಿ ರೇವಣ್ಣ, ಬೈಕ್ ಸವಾರನ‌ನ್ನು ನಿಲ್ಲಿಸಿ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ.

ಇದನ್ನೂ ಓದಿ | ಚಿಕ್ಕಮಗಳೂರು ಪೊಲೀಸ್-ವಕೀಲರ ಸಂಘರ್ಷ; ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಅಪಘಾತದಲ್ಲಿ ಗಾಯಗೊಂಡವನನ್ನು ಸಂತೈಸುವುದು ಬಿಟ್ಟು ಹಿಗ್ಗಾಮುಗ್ಗಾ ಬೈಯುವ ಮೂಲಕ ಭವಾನಿ ರೇವಣ್ಣ ಮಾನವೀಯತೆ ಮರೆತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Ishwar Sahu
ದೇಶ22 mins ago

ಮುಸ್ಲಿಮರಿಂದ ಹತ್ಯೆಗೀಡಾದ ಯುವಕನ ತಂದೆ 7 ಬಾರಿಯ ಕಾಂಗ್ರೆಸ್ ಶಾಸಕನನ್ನು ಸೋಲಿಸಿದರು!

Jyothi Reddy CEO of American Company
ಅಂಕಣ26 mins ago

Raja Marga Column : ಅನ್ನಕ್ಕಾಗಿ ಕಲ್ಲು ಒಡೆಯೋ ಕೆಲಸ ಮಾಡ್ತಿದ್ದ ಆಕೆ ಈಗ ಅಮೆರಿಕನ್‌ ಕಂಪನಿ ಸಿಇಓ!

Venkataramana Reddy
ದೇಶ54 mins ago

ತೆಲಂಗಾಣದಲ್ಲಿ ಹಾಲಿ, ಭಾವಿ ಸಿಎಂಗಳನ್ನೇ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ; ಯಾರಿವರು?

Complaint to CM Siddaramaiah
ಕರ್ನಾಟಕ1 hour ago

Complaint to CM : ಸಿಎಂಗೆ ದೂರು ನೀಡಬೇಕೇ? ಈ ನಂಬರ್‌ಗೆ ಕರೆ ಮಾಡಿ!

women enjoying in rain
ಉಡುಪಿ1 hour ago

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Mizoram Election Result
ದೇಶ2 hours ago

Mizoram Election Result: ಮಿಜೋರಾಂ ಫಲಿತಾಂಶಕ್ಕೆ ಕ್ಷಣಗಣನೆ; ಯಾರಿಗೆ ಗೆಲುವು?

4 state election results shows us that, freebies are not the way for win elections
ದೇಶ2 hours ago

ವಿಸ್ತಾರ ಸಂಪಾದಕೀಯ: ವಿಧಾನಸಭೆ ಚುನಾವಣೆ ಫಲಿತಾಂಶ; ‘ಗ್ಯಾರಂಟಿ’ಯೇ ಅಂತಿಮವಲ್ಲ!

ead your daily horoscope predictions for december 4th 2023
ಪ್ರಮುಖ ಸುದ್ದಿ3 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Sphoorti Salu
ಸುವಚನ3 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Mizoram Election Result will be announced on December 4, 2023
ದೇಶ7 hours ago

Mizoram Election Result: ಇಂದು ಮಿಜೋರಾಂ ಎಲೆಕ್ಷನ್ ರಿಸಲ್ಟ್; ಮತ ಎಣಿಕೆ ಒಂದು ದಿನ ಮುಂದೂಡಿದ್ದೇಕೆ?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ3 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ20 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌