Site icon Vistara News

Building Collapse: ಕಟ್ಟಡ ತೆರವು ಮಾಡುವಾಗ ಪಿಲ್ಲರ್‌ ಕುಸಿದು ಇಬ್ಬರು ಕೂಲಿ ಕಾರ್ಮಿಕರ ಸಾವು

Two labourers killed as pillar collapses while evacuating building

#image_title

ಬೆಂಗಳೂರು: ಹಳೇ ಕಟ್ಟಡ ತೆರವು ಮಾಡುವ ವೇಳೆ ಪಿಲ್ಲರ್‌ ಕುಸಿದು (Building Collapse) ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಹಾಲಕ್ಷ್ಮಿ ಲೇಔಟ್ 10ನೇ ಕ್ರಾಸ್ ಬಳಿ ಶನಿವಾರ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಇನಾಮ್ ಉಲ್ಲಾ, ಸಿರಾಜ್ ಉಲ್ಲಾ ಮೃತ ಕೂಲಿ ಕಾರ್ಮಿಕರು.

ರಾಜಾಜಿ ನಗರ ಮೆಟ್ರೋ ನಿಲ್ದಾಣ ಬಳಿಯ ಕಟ್ಟಡವನ್ನು ಗುತ್ತಿಗೆದಾರ ಅಬು ಎಂಬುವವರು ತೆರವು ಮಾಡಿಸುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿ ಪಶ್ಚಿಮ ಬಂಗಾಳ ಮೂಲದ ಇಬ್ಬರು ಕೂಲಿ ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಒಟ್ಟು ಆರು ಕೂಲಿ ಕಾರ್ಮಿಕರು ಹಳೇ ಕಟ್ಟಡವನ್ನು ಒಂದು ವಾರದಿಂದ ತೆರವು ಮಾಡುತ್ತಿದ್ದರು. ಸೂಕ್ತ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳದೆ ಕಾಮಗಾರಿ ಕೈಗೊಂಡಿದ್ದರಿಂದ ದುರ್ಘಟನೆ ನಡೆದಿದೆ ಎನ್ನಲಾಗಿದ್ದು, ಮೃತ ದೇಹಗಳನ್ನು ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ | Suicide Case: ಬೆಂಗಳೂರಲ್ಲಿ ರೈಲಿಗೆ ತಲೆ ಕೊಟ್ಟು ಐಟಿ ಇನ್ಸ್‌ಪೆಕ್ಟರ್ ಆತ್ಮಹತ್ಯೆ; ಕೌಟುಂಬಿಕ ಕಲಹ ಶಂಕೆ

Exit mobile version