ಬಳ್ಳಾರಿಯಲ್ಲಿ ಇಬ್ಬರು ಕಳ್ಳರ ಬಂಧನ; 55 ಗ್ರಾಂ ಚಿನ್ನ, 3 ಲಕ್ಷ ರೂ. ಪೊಲೀಸರ ವಶಕ್ಕೆ - Vistara News

ಕರ್ನಾಟಕ

ಬಳ್ಳಾರಿಯಲ್ಲಿ ಇಬ್ಬರು ಕಳ್ಳರ ಬಂಧನ; 55 ಗ್ರಾಂ ಚಿನ್ನ, 3 ಲಕ್ಷ ರೂ. ಪೊಲೀಸರ ವಶಕ್ಕೆ

ಬಳ್ಳಾರಿಯ ಪಟೇಲ್ ನಗರದಲ್ಲಿ ಇತ್ತೀಚೆಗೆ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು‌ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

ಬಳ್ಳಾರಿಯಲ್ಲಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ನಗರದ ಪಟೇಲ್ ನಗರದಲ್ಲಿ ಇತ್ತೀಚೆಗೆ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು‌ ಪೊಲೀಸರು ಶನಿವಾರ ಬಂಧಿಸಿದ್ದು, ಅವರಿಂದ 3 ಲಕ್ಷ ರೂಪಾಯಿ ನಗದು ಸೇರಿ 2.20 ಲಕ್ಷ ರೂ.‌ ಮೌಲ್ಯದ ೫೫ ಗ್ರಾಂ ಚಿನ್ನಾಭರಣ ಸೇರಿ ಒಟ್ಟು ೫.೨೦ ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ನಗರದ‌ ಕರಿಮಾರೆಮ್ಮ‌ ಕಾಲೊನಿಯ ಹನುಮಂತಪ್ಪ (೨೮), ಗುಗ್ಗರಹಟ್ಟಿ‌ ನಿವಾಸಿ ಚಂದ್ರಮೌಳಿ(೨೭) ಬಂಧಿತ ಆರೋಪಿಗಳು. ಇವರನ್ನು ಪೊಲೀಸರು ನ್ಯಾಯಾಂಗ ‌ಬಂಧನಕ್ಕೆ‌ ಒಪ್ಪಿಸಿದ್ದಾರೆ.

ಸಿಪಿಐ ಸಿದ್ಧರಾಮೇಶ್ವರ ಗಡೇದ್, ಸಿಬ್ಬಂದಿ ಸಿ ಎಚ್ ಸಿ ಜಯರಾಮ, ಎಚ್.ಸಿ.ನಾರಾಯಣ, ಸಿಪಿಸಿಗಳಾದ ಮಾರುತಿ, ತಿಮ್ಮಪ್ಪ ಕಾರ್ಯಕ್ಕೆ ಎಸ್ಪಿ ರಂಜಿತ್ ಕುಮಾರ್ ‌ಬಂಡಾರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Road Accident: ಅಥಣಿ ಘಟನಟ್ಟಿ ಕ್ರಾಸ್ ಬಳಿ ಭೀಕರ ಅಪಘಾತ; ಒಬ್ಬ ಸ್ಥಳದಲ್ಲೇ ಸಾವು, ಮೂವರು ಗಂಭೀರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

Rameswaram cafe: ದೇಶಾದ್ಯಂತ 18 ಕಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಕರ್ನಾಟಕದಲ್ಲಿಯೇ 12 ಕಡೆ ದಾಳಿ ನಡೆಸಲಾಗಿತ್ತು. ಈ ವೇಳೆ ಕೆಲವು ಮಹತ್ವದ ಅಂಶಗಳು ಪತ್ತೆಯಾಗಿದ್ದಲ್ಲದೆ, ಕೆಲವು ಸುಳಿವುಗಳು ಸಹ ಸಿಕ್ಕಿದೆ. ಈಗ ಬಾಂಬ್‌ ಬ್ಲಾಸ್ಟ್‌ನ ಪ್ರಮುಖ ಆರೋಪಿ ಮುಜಾವೀರ್ ಹುಸೇನ್‌ಗೆ ಸಹಕಾರ ನೀಡಿದ ಪ್ರಮುಖ ಸಂಚುಕೋರನಾಗಿರುವ ಮುಜಾಮಿಲ್ ಶರೀಫ್‌ನನ್ನು ಬಂಧಿಸಲಾಗಿದೆ. ಈತ ಅಬ್ದುಲ್ ಮತೀನ್ ತಾಹಾ ಜತೆ ಕೂಡ ಸಂಪರ್ಕವನ್ನು ಹೊಂದಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Rameswaram cafe bomb blast case
Koo

ಬೆಂಗಳೂರು: ವೈಟ್‌ಫೀಲ್ಡ್‌ ಬಳಿಕ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್‌ಗೆ (Rameswaram cafe blast case) ಸಂಬಂಧಪಟ್ಟಂತೆ ಎನ್ಐಎ ಅಧಿಕಾರಿಗಳು (NIA Officers) ಮುಖ್ಯ ಸಂಚುಕೋರನೊಬ್ಬನನ್ನು ಬಂಧಿಸಿದ್ದಾರೆ. ಬಾಂಬರ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ಬಂಧನ ಮಾಡಲಾಗಿದ್ದು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.

ಮುಜಾಮಿಲ್ ಶರೀಫ್ ಬಂಧಿತ ಉಗ್ರ ಎನ್ನಲಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ಮುಜಾವೀರ್ ಹುಸೇನ್ ಜತೆ ಮುಜಾಮಿಲ್ ಶರೀಫ್ ನಿರಂತರ ಸಂಪರ್ಕದಲ್ಲಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ದೇಶಾದ್ಯಂತ 18 ಕಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಕರ್ನಾಟಕದಲ್ಲಿಯೇ 12 ಕಡೆ ದಾಳಿ ನಡೆಸಲಾಗಿತ್ತು. ಈ ವೇಳೆ ಕೆಲವು ಮಹತ್ವದ ಅಂಶಗಳು ಪತ್ತೆಯಾಗಿದ್ದಲ್ಲದೆ, ಕೆಲವು ಸುಳಿವುಗಳು ಸಹ ಸಿಕ್ಕಿದೆ ಎನ್ನಲಾಗಿದೆ. ಮುಜಾವೀರ್ ಹುಸೇನ್‌ಗೆ ಮುಜಾಮಿಲ್ ಶರೀಫ್ ಸಹಕಾರ ನೀಡಿದ್ದ ಅಲ್ಲದೆ, ಅಬ್ದುಲ್ ಮತೀನ್ ತಾಹಾ ಜತೆ ಕೂಡ ಸಂಪರ್ಕವನ್ನು ಹೊಂದಿದ್ದಾನೆ ಎಂದು ತಿಳಿದುಬಂದಿದೆ.

ಗುರುವಾರ ದಾಳಿ ನಡೆಸಿದ್ದ NIA

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಕೇಸ್ ಸಂಬಂಧ ಬುಧವಾರ ಕರ್ನಾಟಕ, ತಮಿಳುನಾಡು ಹಾಗೂ ಕೇರಳದ ಹದಿನೆಂಟು ಕಡೆ ಎನ್‌ಐಎ ತಂಡ ದಾಳಿ ನಡೆಸಿದೆ. ದಾಳಿ ವೇಲೆ ಹಲವು ವಸ್ತುಗಳು ಹಾಗೂ ಭಾರಿ ಪ್ರಮಾಣದ ಹಣ ಸಹ ಸಿಕ್ಕಿದ್ದು, ವಶಕ್ಕೆ ಪಡೆಯಲಾಗಿತ್ತು. ಡಿಜಿಟಲ್ ಡಿವೈಸ್‌ಗಳನ್ನೂ ಸೀಜ್‌ ಮಾಡಲಾಗಿತ್ತು. ಈಗ ಓರ್ವ ಶಂಕಿತನನ್ನು ಸಹ ವಶಕ್ಕೆ ಪಡೆದುಕೊಳ್ಳಲಾಗಿದೆ.

ಬಾಂಬರ್‌ಗೆ ಸಹಾಯ ಮಾಡಿದ್ದ?

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಮಾಡಿದವನಿಗೆ ಮುಜಾಮಿಲ್ ಶರೀಫ್ ಸಹಾಯ ಮಾಡಿದ್ದ. ಆತನ ಓಡಾಟಕ್ಕೆ ಹಾಗೂ ಪರಾರಿಯಾಗಲು ಸಹಾಯ ಮಾಡಿದ್ದ ಎಂಬ ಅಂಶ ತನಿಖೆ ವೇಳೆ ಗೊತ್ತಾಗಿದೆ. ಮುಜಾವೀರ್ ಶಜೀಬ್ ಹುಸೇನ್, ಅಬ್ದುಲ್ ಮತೀನ್ ತಾಹಗೆ ಸಹ ಸಹಾಯ ಮಾಡಿದ್ದ ಎಂದು ತಿಳಿದುಬಂದಿದೆ.

ದೊಡ್ಡ ಮಟ್ಟದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲಾನ್ ಮಾಡಿದ್ದು ಬೆಳಕಿಗೆ ಬಂದಿದೆ. ದಾಳಿ ವೇಳೆ ಹಲವು ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಅಲ್ಲದೆ, ರಾಮೇಶ್ವರಂ ಕೆಫೆಗೆ ಪ್ರಮುಖ ಆರೋಪಿ ಮುಜಾವೀರ್ ಶಜೀಬ್ ಹುಸೇನ್ ಬಾಂಬ್ ಅನ್ನು ತಂದಿದ್ದ. ಈತನಿಗೆ ಅಬ್ದುಲ್ ಮತೀನ್ ತಾಹ, ಮುಜಾಮಿಲ್ ಶರೀಫ್ ಸಹಾಯ ಮಾಡಿದ್ದರು ಎಂಬುದು ಎನ್‌ಐಎಗೆ ತನಿಖೆ ವೇಳೆ ಗೊತ್ತಾಗಿದೆ. ಈ ಮಾಹಿತಿ ಸಿಕ್ಕ ಕೂಡಲೇ ಮುಜಾಮಿಲ್ ಶರೀಫ್‌ನನ್ನು ಬಂಧನ ಮಾಡಲಾಗಿದೆ. ಈಗ ಉಳಿದ ಇಬ್ಬರಿಗಾಗಿ ತೀವ್ರ ಹುಡುಕಾಟವನ್ನು ನಡೆಸಲಾಗಿದೆ.

ಗುರಪ್ಪನಪಾಳ್ಯದಲ್ಲಿ ನೆಲಸಿದ್ದ ಮುಜಾವೀರ್ ಹುಸೇನ್!

ಸುದ್ಗುಂಟೆಪಾಳ್ಯದ ಗುರಪ್ಪನಪಾಳ್ಯದಲ್ಲಿ ಉಗ್ರ ಮುಜಾವೀರ್ ಹುಸೇನ್ ನೆಲಸಿದ್ದ. ಎನ್‌ಐಎ ದಾಳಿ ನಡೆಸಿದಾಗ 10ಕ್ಕೂ ಹೆಚ್ಚು ಜೀವಂತ ಗುಂಡುಗಳು, ಒಂದು ಗನ್, ಡಿಟೋನೇಟರ್ ಹಾಗೂ ಕಚ್ಚಾ ಬಾಂಬ್ ತಯಾರಿಕೆಗೆ ಬೇಕಾದ ವಸ್ತುಗಳನ್ನು ಸೀಜ್‌ ಮಾಡಲಾಗಿತ್ತು. 2020ರಂದು ಎನ್‌ಐಎ ದಾಳಿ ನಡೆಸಿತ್ತು. ಅಂದಿನಿಂದ ಮುಜಾವಿರ್ ಹುಸೇನ್ ತಲೆಮರೆಸಿಕೊಂಡಿದ್ದ. ಸದ್ಯ ಈತನಿಗೆ ಸಹಾಯ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಮುಜಾಮಿಲ್ ಶರೀಫ್‌ನನ್ನು ಬಂಧನ ಮಾಡಲಾಗಿದೆ.

ಇದನ್ನೂ ಓದಿ: Blast In Bengaluru: ರಾಮೇಶ್ವರಂ ಕೆಫೆ ಸ್ಫೋಟ; ಮತ್ತಿಬ್ಬರನ್ನು ಬಂಧಿಸಿದ ಎನ್‌ಐಎ!

ಅಬ್ದುಲ್ ಮತೀನ್ ಜತೆಗೂ ಮುಜಾಮಿಲ್ ಶರೀಫ್ ಸಂಪರ್ಕ

ಮುಜಾಮಿಲ್ ಶರೀಫ್‌ ಇದ್ದ ನಿವಾಸದ ಮೇಲೆ ದಾಳಿ ನಡೆಸಿ ಡಿಜಿಟಲ್ ಡಿವೈಸ್,‌ ನಗದನ್ನು ವಶಕ್ಕೆ ಪಡೆಯಲಾಗಿದೆ. ಈತ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿದ್ದ ಮೋಸ್ಟ್‌ ವಾಂಟೆಡ್‌ ಅಬ್ದುಲ್ ಮತೀನ್ ಜತೆಗೆ ನಿರಂತರ ಸಂಪರ್ಕದಲ್ಲಿದ್ದ. ಅಬ್ದುಲ್ ಮತೀನ್ ನೇರವಾಗಿ ಹೊರದೇಶದ ಹ್ಯಾಂಡ್ಲರ್‌ಗಳ ಜತೆಗೆ ಸಂಪರ್ಕವನ್ನು ಹೊಂದಿದ್ದ. ಅಲ್ಲದೆ, ಶಾರೀಖ್, ಮಾಜ್ ಮುನೀರ್ ಅಹಮದ್ ಮತ್ತು ಸೈಯದ್ ಯಾಸಿನ್ ಜತೆಗೂ ಈತ ಸಂಪರ್ಕ ಸಾಧಿಸಿದ್ದ ಎಂದು ತಿಳಿದುಬಂದಿದೆ.

Rameswaram cafe bomb blast Main conspirator trapped by NIA and Terrorist Abdul mateen taha
ಅಬ್ದುಲ್ ಮತೀನ್ ತಾಹ

ಯಾರು ಈ ಅಬ್ದುಲ್ ಮತೀನ್ ತಾಹ?

ಅಬ್ದುಲ್ ಮತೀನ್ ತಾಹ ಅಲ್ ಹಿಂದ್‌ ಸಂಘಟನೆಯ ಪ್ರಮುಖ ಸದಸ್ಯನಾಗಿದ್ದಾನೆ. ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಸೊಪ್ಪುಗುಡ್ಡೆ ನಿವಾಸಿಯಾಗಿರುವ ಈತ 2020ರಿಂದ ನಾಪತ್ತೆ ಆಗಿದ್ದಾನೆ. ಕಳೆದ ಐದು ವರ್ಷಗಳಿಂದ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಆರಂಭದಲ್ಲಿ ಬ್ರಾಡ್‌ಬ್ಯಾಂಡ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಈತ, ನಂತರ ಫುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಡಾರ್ಕ್‌ವೆಬ್ ಬಳಕೆ ಮಾಡುವುದರಲ್ಲಿ ಈತ ಪರಿಣಿತಿಯನ್ನು ಹೊಂದಿದ್ದ. ಇದರ ಜತೆಗೆ ಕುಕ್ಕರ್ ಬಾಂಬ್ ತಯಾರಿಕೆ ಮಾಡುವುದರಲ್ಲೂ ನಿಪುಣನಾಗಿದ್ದ. ಮ್ಯಾಚ್‌ಸ್ಟಿಕ್‌ನಲ್ಲಿರುವ ಫಾಸ್ಪರಸ್ ಬಳಸಿ ಕುಕ್ಕರ್ ಬಾಂಬ್ ಅನ್ನು ಈತ ತಯಾರಿಸುತ್ತಿದ್ದ. ಇದಲ್ಲದೆ, ಅಲ್ ಹಿಂದ್ ಸಂಘಟನೆ ಸದಸ್ಯರಿಗೆ ಅಡಗುದಾಣ ಕಲ್ಪಿಸುವ ಜವಾಬ್ದಾರಿ ಈತನದ್ದಾಗಿದೆ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್‌ಐಎ ಈಗಾಗಲೇ ಘೋಷಿಸಿದೆ.

Continue Reading

ಕರ್ನಾಟಕ

Parliament Flashback: ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಗೆದ್ದು, ಬಿಜೆಪಿಯಿಂದ ಸ್ಪರ್ಧಿಸಿದಾಗ ಸೋತು ಹೋಗಿದ್ದ ಒಡೆಯರ್‌!

Parliament Flashback: ಮೈಸೂರು ರಾಜ ವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಅವರು ಮೈಸೂರು ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಗೆಲುವು ಸಾಧಿಸಿದ್ದರು. ಒಡೆಯರ್‌ ನಿರಂತರ ಎರಡು ಬಾರಿ ಕಾಂಗ್ರೆಸ್‌ನಿಂದ ಗೆದ್ದು ಮೂರನೇ ಬಾರಿ ಬಿಜೆಪಿ ಟಿಕೆಟ್‌ನಿಂದ ಚುನಾವಣೆ ಕಣಕ್ಕಿಳಿದಾಗ ಸೋತು ಹೋದರು! ಮುಂದೆ ಮತ್ತೆರಡು ಬಾರಿ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದರು!

VISTARANEWS.COM


on

Parliament Flashback
Koo

ಬೆಂಗಳೂರು: ಮೈಸೂರು ರಾಜ ವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ (Maharaja Srikantadatta Narasimharaja Wadiyar) ಮೈಸೂರು ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ (Parliament Flashback) ಗೆಲುವು ಸಾಧಿಸಿದ್ದರು. ಸೋಜಿಗವೆಂದರೆ ಒಡೆಯರ್‌ ನಿರಂತರ ಎರಡು ಬಾರಿ ಕಾಂಗ್ರೆಸ್‌ (Congress)ನಿಂದ ಗೆದ್ದು ಮೂರನೇ ಬಾರಿ ಬಿಜೆಪಿ (BJP) ಟಿಕೆಟ್‌ನಿಂದ ಚುನಾವಣೆ ಕಣಕ್ಕಿಳಿದಾಗ ಸೋತು ಹೋದರು! ಮುಂದೆ ಮತ್ತೆರಡು ಬಾರಿ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದರು!

1984ರಲ್ಲಿ ಮೊದಲ ಬಾರಿ ಸ್ಪರ್ಧೆ

1984ರಲ್ಲಿ ಒಡೆಯರ್‌ ಮೊದಲ ಬಾರಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆದ್ದು ಲೋಕಸಭೆ ಪ್ರವೇಶಿಸಿದರು. 1989ರಲ್ಲಿ ಮತ್ತೊಮ್ಮೆ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದರು.

1991ರಲ್ಲಿ ಕಾಂಗ್ರೆಸ್‌ ಹೈಕಮಾಂಡ್‌, ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸ್‌ ಅವರ ಪುತ್ರಿ ಚಂದ್ರಪ್ರಭಾ ಅರಸ್‌ ಅವರಿಗೆ ಟಿಕೆಟ್‌ ನೀಡಿತು. ಸಿಟ್ಟಿಗೆದ್ದ ಒಡೆಯರ್‌ ಅವರು ಬಿಜೆಪಿಯಿಂದ ಕಣಕ್ಕಿಳಿದರು. ಆದರೆ ಚಂದ್ರಪ್ರಭಾ ಅರಸ್‌ ಎದುರು ಸೋತು ಹೋದರು.

ಮತ್ತೊಮ್ಮೆ ಒಡೆಯರ್‌ಗೆ ಟಿಕೆಟ್‌

1996ರಲ್ಲಿ ಕಾಂಗ್ರೆಸ್‌ ಮತ್ತೊಮ್ಮೆ ಒಡೆಯರ್‌ಗೆ ಟಿಕೆಟ್‌ ನೀಡಿತು. ಆ ಚುನಾವಣೆಯಲ್ಲಿ ಒಡೆಯರ್‌ ಜನತಾ ದಳದ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರನ್ನು ಸೋಲಿಸಿದರು. ಆದರೆ 1998ರಲ್ಲಿ ಕಾಂಗ್ರೆಸ್‌ ಚಿಕ್ಕಮಾದು ಅವರಿಗೆ ಟಿಕೆಟ್‌ ನೀಡಿತು. ಬಿಜೆಪಿ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ ಅವರು ಚಿಕ್ಕಮಾದು ಅವರನ್ನು ಸೋಲಿಸುವ ಮೂಲಕ ಬಿಜೆಪಿ ಮೊದಲ ಬಾರಿ ಮೈಸೂರಿನಲ್ಲಿ ಖಾತೆ ತೆರೆಯಿತು. 2004ರಲ್ಲಿ ಕಾಂಗ್ರೆಸ್‌ ಮತ್ತೆ ಒಡೆಯರ್‌ ಅವರನ್ನು ಕಣಕ್ಕಿಳಿಸಿತು. ಆದರೆ ಬಿಜೆಪಿಯ ವಿಜಯಶಂಕರ್‌ ಅವರು 3,16,442 ಮತಗಳನ್ನು ಪಡೆದು ಎರಡನೇ ಬಾರಿ ಗೆಲುವು ಸಾಧಿಸಿದರು. ಜನತಾ ದಳದಿಂದ ಸ್ಪರ್ಧಿಸಿದ್ದ ಎ.ಎಸ್‌.ಗುರುಸ್ವಾಮಿ 3,06,292 ಮತ ಪಡೆದು ಎರಡನೇ ಸ್ಥಾನ ಪಡೆದರೆ, ಒಡೆಯರ್‌ ಅವರು 2,99,227 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು. ಅಲ್ಲಿಗೆ ಅವರ ಚುನಾವಣಾ ರಾಜಕೀಯ ಅಂತ್ಯವಾಯಿತು.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರನ್ನೇ ಸೋಲಿಸಿದ್ದ ಸಿದ್ದು!

ಲೋಕಸಭೆ ಚುನಾವಣೆಗಳು ಹಲವು ಅಚ್ಚರಿಯ ಫಲಿತಾಂಶಗಳಿಗೆ ಸಾಕ್ಷಿಯಾಗಿವೆ. 1991ರ ಲೋಕಸಭೆ ಚುನಾವಣೆಯಲ್ಲಿ ಬಾಗಲಕೋಟ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು (Ramakrishna Hegde) ಅನಿರೀಕ್ಷಿತ ಫಲಿತಾಂಶ ಕಾಣಬೇಕಾಯಿತು. ಹೆಗಡೆಯವರ ರಾಜಕೀಯ ಜೀವನದಲ್ಲಿ ಈ ಫಲಿತಾಂಶ ಭಾರಿ ಹಿನ್ನಡೆ ಉಂಟು ಮಾಡಿತು.

ಸಿದ್ದು ನ್ಯಾಮಗೌಡ: ಇವರ ಮೂಲ ಹೆಸರು ಸಿದ್ದಪ್ಪ ಭೀಮಪ್ಪ ನ್ಯಾಮಗೌಡ. ಬ್ಯಾರೇಜ್‌ ಸಿದ್ದು ಎಂದೇ ಇವರು ಖ್ಯಾತರಾಗಿದ್ದರು. ರೈತರಿಂದಲೇ 1 ಕೋಟಿ ರೂ. ದೇಣಿಗೆ ಸಂಗ್ರಹಿಸಿ, ಜತೆಗೆ ರೈತರ ಶ್ರಮದಾನದ ಮೂಲಕ ಚಿಕ್ಕಪಡಸಲಗಿ ಗ್ರಾಮದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಿದ ಖ್ಯಾತಿ ಇವರದ್ದು. ಸರ್ಕಾರದ ನೆರವು ಪಡೆಯದೆ ಖಾಸಗಿಯಾಗಿ ನಿರ್ಮಿಸಿದ ದೇಶದ ಮೊದಲ ಅಣೆಕಟ್ಟು ಇದು.

ರಾಷ್ಟ್ರ ಮಟ್ಟದ ಸುದ್ದಿ

30,000 ಎಕರೆ ಭೂಮಿಗೆ ನೀರಾವರಿ, 2.5 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಕೆ ಮತ್ತು 1.5 ಲಕ್ಷ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿಯನ್ನು ಇದು ಹೊಂದಿತ್ತು. ಹಾಗಾಗಿ ಆ ಸಂದರ್ಭದಲ್ಲಿ ಸಿದ್ದು ನ್ಯಾಮಗೌಡ ಅವರು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಲ್ಲಿದ್ದರು.

1991ರ ಲೋಕಸಭೆ ಚುನಾವಣೆಯಲ್ಲಿ ಬಾಗಲಕೋಟ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ಜನತಾ ದಳ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. ಆಗ ಕಾಂಗ್ರೆಸ್‌ ಅಚ್ಚರಿಯ ಅಭ್ಯರ್ಥಿಯನ್ನಾಗಿ ಸಿದ್ದು ನ್ಯಾಮಗೌಡ ಅವರನ್ನು ಕಣಕ್ಕಿಳಿಸಿತು. ಆ ಚುನಾವಣೆಯಲ್ಲಿ ಸಿದ್ದು ನ್ಯಾಮಗೌಡ ಅವರು 2,76,849 (ಶೇ. 46.51) ಮತಗಳನ್ನು ಪಡೆದರೆ, ರಾಮಕೃಷ್ಣ ಹೆಗಡೆ ಅವರಿಗೆ 2,55,645 (ಶೇ.42.05) ಮತಗಳು ಲಭಿಸಿದವು. 21,204 ಮತಗಳ ಅಂತರದಿಂದ ರಾಮಕೃಷ್ಣ ಹೆಗಡೆ ಅವರು ಪರಾಭವ ಅನುಭವಿಸಿದರು.

ಉತ್ತರ ಕರ್ನಾಟಕದಲ್ಲಿ ಜನಪ್ರಿಯರಾಗಿದ್ದ ಹೆಗಡೆ

ರಾಮಕೃಷ್ಣ ಹೆಗಡೆ ಆಗ ಉತ್ತರ ಕರ್ನಾಟಕದಲ್ಲಿ ಅಪಾರ ಜನಪ್ರಿಯತೆ ಪಡೆದಿದ್ದರು. ಆದರೆ ಹೊಸ ಮುಖದ ಎದುರು ಅವರು ಸೋತಿದ್ದು ರಾಷ್ಟ್ರ ಮಟ್ಟದ ಸುದ್ದಿಯಾಯಿತು. ಹೆಗಡೆಯಂಥ ಪ್ರಭಾವಿ ರಾಜಕಾರಣಿಯನ್ನು ಸೋಲಿಸಿದ್ದಕ್ಕಾಗಿ ನ್ಯಾಮಗೌಡ ಅವರಿಗೆ ನರಸಿಂಹ ರಾವ್‌ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಯಿತು. ಆದರೆ ಸಿದ್ದು ನ್ಯಾಮಗೌಡ ಅವರು 1996ರ ಚುನಾವಣೆಯಲ್ಲಿ ಜನತಾ ದಳ ಅಭ್ಯರ್ಥಿ ಎಚ್‌.ವೈ.ಮೇಟಿ (ಈಗ ಕಾಂಗ್ರೆಸ್‌ ಶಾಸಕ) ಎದುರು ಸೋತು ಹೋದರು. ಮುಂದೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕ್ಷೇತ್ರದಿಂದ 2013, 2018ರಲ್ಲಿ ಸಿದ್ದು ನ್ಯಾಮಗೌಡ ಅವರು ಶಾಸಕರಾಗಿ ಆಯ್ಕೆಯಾದರು. 2018ರ ಮೇ 28ರಂದು ಕಾರು ಅಪಘಾತದಲ್ಲಿ ಇವರು ಮೃತಪಟ್ಟರು.

ಇದನ್ನೂ ಓದಿ: Parliament Flashback: ಬೆಂಗಳೂರು ದಕ್ಷಿಣ ಕ್ಷೇತ್ರ ಅಂದರೆ ಕಾಂಗ್ರೆಸ್‌ಗೆ ದುಃಸ್ವಪ್ನ! ಗೆದ್ದಿದ್ದು ಒಮ್ಮೆ ಮಾತ್ರ!

Continue Reading

ಕರ್ನಾಟಕ

Lok Sabha Election 2024: ಮಂಡ್ಯದಲ್ಲಿ ಜೆಡಿಎಸ್-ಬಿಜೆಪಿ ಮುಖಂಡರ ಸಮನ್ವಯ ಸಭೆ ಯಶಸ್ವಿ; ಏ. 4ಕ್ಕೆ ಹೆಚ್ಡಿಕೆ ನಾಮಪತ್ರ ಸಲ್ಲಿಕೆ

Lok Sabha Election 2024: ಮಂಡ್ಯದಲ್ಲಿ ಗುರುವಾರ (ಮಾ. 28) ಜೆಡಿಎಸ್-ಬಿಜೆಪಿ ಮುಖಂಡರ ಸಮನ್ವಯ ಸಭೆ ನಡೆದಿದ್ದು, ಎಚ್.ಡಿ. ಕುಮಾರಸ್ವಾಮಿ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಉಭಯ ಪಕ್ಷಗಳ ನಾಯಕರು ತೀರ್ಮಾನ ಕೈಗೊಂಡರು. ಈ ವೇಳೆ ಮಾತನಾಡಿದ ಎಚ್‌ಡಿಕೆ, ಡಿಸೆಂಬರ್ ಒಳಗಾಗಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇನ್ನು ಮೇಕೆದಾಟು ಯೋಜನೆ ಬಗ್ಗೆಯೂ ಪ್ರಸ್ತಾಪ ಮಾಡಿರುವ ಮಾಜಿ ಸಿಎಂ, ಬಿರಿಯಾನಿ ತಿಂದು ಪಾದಯಾತ್ರೆ ಮಾಡಿದರೆ ಮೇಕೆದಾಟು ಆಗುತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಮಂಡ್ಯ ಹಾಲಿ ಸಂಸದರೆ ಸುಮಲತಾ ಅಂಬರೀಶ್‌ ಅವರು ತಮಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

VISTARANEWS.COM


on

Lok Sabha Election 2024 HD Kumaraswamy to file nomination for Mandya Lok Sabha seat on April 4
Koo

ಮಂಡ್ಯ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಹೈವೋಲ್ಟೇಜ್‌ ಕ್ಷೇತ್ರವಾಗಿರುವ ಮಂಡ್ಯ ಲೋಕಸಭಾ ಚುನಾವಣಾ ಕಣಕ್ಕೆ ಬಿಜೆಪಿ – ಜೆಡಿಎಸ್‌ ಮೈತ್ರಿ (BJP JDS Alliance) ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಧುಮಿಕಿದ್ದಾರೆ. ಈ ವೇಳೆ ಎಚ್‌ಡಿಕೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರ ನೇತೃತ್ವದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು, ಮುಖಂಡರ ಸಮನ್ವಯ ಸಮಿತಿ ಸಭೆ ನಡೆದಿದ್ದು, ಯಶಸ್ವಿಯಾಗಿದೆ. ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡುವ ನಿಟ್ಟಿನಲ್ಲಿ ಎಚ್‌ಡಿಕೆ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಶಪಥ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಆಗಿರುವ ಈ ಮೈತ್ರಿಯೂ ರಾಜ್ಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಲಿದೆ. ನಾನು ಮಂಡ್ಯ ಲೋಕಸಭೆ ಅಭ್ಯರ್ಥಿಯಾಗಿ ಏಪ್ರಿಲ್‌ 4ರಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಪ್ರಕಟಿಸಿದರು.

ಇದನ್ನೂ ಓದಿ: Lok Sabha Election 2024: ಕೋಲಾರ ಕಾಂಗ್ರೆಸ್‌ ಗಲಾಟೆಗೆ ಸಿಎಂ, ಡಿಸಿಎಂ ಟ್ರೀಟ್ಮೆಂಟ್‌! ತಣ್ಣಗಾದ ರಮೇಶ್‌ ಕುಮಾರ್‌, ಮುನಿಯಪ್ಪ ಬಣ

ಈ ಮೈತ್ರಿ ಅತ್ಯಂತ ಸಹಜ ಮೈತ್ರಿಯಾಗಿದೆ. ಈ ಹಿಂದೆ ಜೆಡಿಎಸ್-ಕಾಂಗ್ರೆಸ್‌ ನಡುವೆ ಮೈತ್ರಿಯಾಗಿತ್ತು ನಿಜ. ಅದು ಅಸಹಜ ಮೈತ್ರಿಯಾಗಿತ್ತು. ಅದರ ಪ್ರತಿಫಲವೇನು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಮೈತ್ರಿ ಹೆಸರಿನಲ್ಲಿ ಅವರು ನಮ್ಮ ಬೆನ್ನಿಗೆ ಚೂರಿ ಹಾಕಿದರು. ಜೆಡಿಎಸ್-ಬಿಜೆಪಿ ಮೈತ್ರಿ ಸಹಜ ಮೈತ್ರಿ ಎನ್ನುವುದಕ್ಕೆ ನಿನ್ನೆ ಮೈಸೂರಿನಲ್ಲಿ ಹಾಗೂ ಇಂದು ಮಂಡ್ಯದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಕಂಡು ಬರುತ್ತಿರುವ ಉತ್ಸಾಹವೇ ನಿದರ್ಶನ ಎಂದು ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಈ ಮೈತ್ರಿಯಾಗಿದೆ. ರಾಜ್ಯ ಅಭಿವೃದ್ಧಿಗಾಗಿ ಈ ಮೈತ್ರಿ ನಿರ್ಧಾರ ಕೈಗೊಳ್ಳಲಾಗಿದೆ. ಬಿಜೆಪಿ-ಜೆಡಿಎಸ್‌ ಹಾಲುಜೇನಿನಂತೆ ಕೆಲಸ ಮಾಡಲಿವೆ. ಹಿಂದಿನಿಂದಲೂ ಜೆಡಿಎಸ್‌ ಪಕ್ಷವನ್ನು ಮುಗಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಲೇ ಇದೆ. ಆ ಪಕ್ಷದ ಜತೆ ಸರ್ಕಾರ ಮಾಡಿದ್ದು ನನ್ನ ಅತಿ ಕೆಟ್ಟ ನಿರ್ಧಾರ. ಬಿಜೆಪಿ ಜತೆ ನಾನು ಮಾಡಿದ 20 ತಿಂಗಳ ಆಡಳಿತವನ್ನು ಜನರು ಇಂದಿಗೂ ನೆನೆಯುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.

17 ವರ್ಷ ವನವಾಸ ಅನುಭವಿಸಿದ್ದೇನೆ

ಅಧಿಕಾರ ಹಸ್ತಾಂತರ ಮಾಡಲಿಲ್ಲ ಎಂಬ ಆರೋಪ ನನ್ನ ಮೇಲೆ ಕೆಲವರು ಮಾಡುತ್ತಾರೆ. ನಾನು ಮಾಡದೆ ಇರುವ ತಪ್ಪನ್ನು ನನ್ನ ತಲೆ ಮೇಲೆ ಹೊತ್ತಿದ್ದೇನೆ. 17 ವರ್ಷ ವನವಾಸ ಅನುಭವಿಸಿದ್ದೇನೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿಕ್ಕೆ ಕಾರಣ ಅವರ ಶಕ್ತಿ ಅಲ್ಲ. ಜೆಡಿಎಸ್‌-ಬಿಜೆಪಿ ಹೊಂದಾಣಿಕೆ ಆಗದೆ, ನಮ್ಮಲ್ಲಿದ್ದ ಪೈಪೋಟಿ ಅವರಿಗೆ ಲಾಭವಾಗಿದೆ.
ಕಾಂಗ್ರೆಸ್ ಸರ್ಕಾರ ಬಂದಿದ್ದು ಆಕಸ್ಮಿಕ. ಅದು ಆಕಸ್ಮಿಕ ಸರ್ಕಾರ ಎಂದು ಎಂದು ಅವರು ಕಿಡಿಕಾರಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು‌ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಾಂಧವ್ಯದ ಬಗ್ಗೆ ಕೆಲವರು ಲಘುವಾಗಿ ಮಾತನಾಡುವುದನ್ನು ಕೇಳಿದ್ದೇನೆ. ಗೌಡರು ಮೋದಿಯವರು ಪ್ರಧಾನಿಯಾದರೆ ದೇಶ ಬಿಡುತ್ತೇನೆ ಎಂದಿರಲಿಲ್ಲ. ರಾಜ್ಯಸಭೆಗೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ಆದರೆ ಆ ಬಳಿಕ ಮೋದಿ ಅವರನ್ನು ಭೇಟಿಯಾದ ವೇಳೆ ದೇವೇಗೌಡರಿಗೆ ಅವರು ಕೊಟ್ಟ ಗೌರವವವನ್ನು ಇಡೀ ದೇಶ ನೋಡಿದೆ. ಹೀಗಾಗಿ ಯಾರೂ ಚುನಾವಣೆ ಸಮಯದ ಹೇಳಿಕೆಗಳ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು ಎಂದು ಎಚ್‌.ಡಿ. ಕುಮಾರಸ್ವಾಮಿ ಸಲಹೆ ಮಾಡಿದರು.

ನರೇಂದ್ರ ಮೋದಿ ಅವರು ದೇವೇಗೌಡರನ್ನು ತಂದೆ ಸಮನಾರಾಗಿ ನಡೆಸಿಕೊಳ್ಳುತ್ತಾರೆ. ಆದರೆ, ರಾಜಕೀಯ ಬದುಕು ಕೊಟ್ಟ ಅದೇ ದೇವೇಗೌಡರನ್ನು ಸಿದ್ದರಾಮಯ್ಯ ಹೀಯಾಳಿಸುತ್ತಾರೆ. ಇದು ಸಿದ್ದರಾಮಯ್ಯಗೂ ಮೋದಿ ಅವರಿಗೂ ಇರುವ ವ್ಯತ್ಯಾಸ. ಕಾಂಗ್ರೆಸ್ ಎಷ್ಟೇ ಶ್ರಮವಹಿಸಿದರೂ ಜೆಡಿಎಸ್‌ ಮುಗಿಸಲು ಆಗಲ್ಲ. ರಾಜ್ಯಕ್ಕೆ ಸುಭದ್ರ ಸರ್ಕಾರದ ಅವಶ್ಯಕತೆ ಇದೆ. ದೇಶಕ್ಕೆ ನರೇಂದ್ರ ಮೋದಿ ಆಡಳಿತ ಅನಿವಾರ್ಯ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಒಗ್ಗಟ್ಟಾದರೆ ಐತಿಹಾಸಿಕ ಗೆಲುವು ನಮ್ಮದಾಗಲಿದೆ ಎಂದರು ಕುಮಾರಸ್ವಾಮಿ ಹೇಳಿದರು.

ಡಿಸೆಂಬರ್ ಒಳಗಾಗಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ

ನಾನು ಜೋತ್ಯಿಷ್ಯಕಾರನಲ್ಲ. ಆದರೆ, ಈ ಚುನಾವಣೆ ನಂತರ ಮುಂದಿನ ಡಿಸೆಂಬರ್ ತಿಂಗಳ ಒಳಗಾಗಿ ಕಾಂಗ್ರೆಸ್‌ ಸರ್ಕಾರ ಪತನವಾಗುತ್ತದೆ. ಅದು ತಾನಾಗಿಯೇ ಬಿದ್ದುಹೋಗಲಿದೆ. ನಾನು ಮತ್ತು ವಿಜಯೇಂದ್ರ ಅದಕ್ಕಾಗಿ ಕಷ್ಟಪಡಬೇಕಿಲ್ಲ. ಅವರೇ ಅವರ ಸರಕಾರವನ್ನು ಬೀಳಿಸಿಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದರು.

ಬಿರಿಯಾನಿ ತಿಂದು ಪಾದಯಾತ್ರೆ ಮಾಡಿದರೆ ಮೇಕೆದಾಟು ಆಗುತ್ತಾ?

ಮೇಕೆದಾಟುಗಾಗಿ ಕಾಂಗ್ರೆಸ್‌ನವರು ಪಾದಯಾತ್ರೆ ಮಾಡಿದರು. ಇವತ್ತು ಏನಾಗಿದೆ? ಮೇಕೆದಾಟು ಕಟ್ಟಲು ಅನುಮತಿ ಕೇಳುತ್ತಿದ್ದಾರೆ‌. ಮತ್ತೆ ಆವತ್ತು ಪಾದಯಾತ್ರೆ ಯಾಕೆ ನಡೆಸಿದರು? ನಿಮ್ಮ ಮಿತ್ರಪಕ್ಷ ಡಿಎಂಕೆ ಪ್ರಣಾಳಿಕೆಯಲ್ಲಿ ಮೇಕೆದಾಟು ಕಟ್ಟಲು ಅವಕಾಶ ಕೊಡಲ್ಲ ಎಂದಿದ್ದಾರೆ. ಪೇಪರ್ ಪೆನ್ನು ಕೊಟ್ಟರೆ ನಾಳೆ ಬೆಳಗ್ಗೆ ಮೇಕೆದಾಟು ಮಾಡುತ್ತೇನೆ ಎಂದರಲ್ಲ. ಈಗ ಏನಾಗಿದೆ ನಿಮಗೆ? ಮೇಕೆದಾಟು ಯೋಜನೆ ಮಾಡಿ. ಮೇಕೆದಾಟು ಹೆಸರೇಳಿಕೊಂಡು ರಾಜಕಾರಣ ಮಾಡುವ ದಾರಿದ್ರ್ಯ ದೇವೇಗೌಡರಿಗೆ ಬಂದಿಲ್ಲ. ಪಾದಯಾತ್ರೆಯಿಂದ ನೀರು ತರಲು ಆಗಲ್ಲ ಶಿವಕುಮಾರಣ್ಣ. ಪ್ರಾಧಿಕಾರದಲ್ಲಿ ಸರಿಯಾದ ವಾದ ಮಂಡನೆ ಆಗಬೇಕು‌. ಬಿರಿಯಾನಿ ತಿಂದು ಪಾದಯಾತ್ರೆ ಮಾಡಿದರೆ ಆಗಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮೇಲೆ ಎಚ್.ಡಿ. ಕುಮಾರಸ್ವಾಮಿ ನೇರ ವಾಗ್ದಾಳಿ ನಡೆಸಿದರು.

ಪುಟ್ಟರಾಜು ನನ್ನ ಗಮನಕ್ಕೆ ತಾರದೆ ಘೋಷಣೆ ಮಾಡಿದ್ದಾರೆ

ಎರಡೂ ಪಕ್ಷಗಳ ಕಾರ್ಯಕರ್ತರು, ನಾಯಕರ ಒತ್ತಾಸೆಯೇ ನಾನು ಮಂಡ್ಯದಲ್ಲಿ ಸ್ಪರ್ಧೆ ಮಾಡುವ ನಿರ್ಧಾರ ಕೈಗೊಳ್ಳಲು ಕಾರಣ. ನಾನು ಸ್ಪರ್ಧಿಸುವ ಮಾಡಬೇಕೆಂಬ ಆದೇಶ ಕಾರ್ಯಕರ್ತರಿಂದ ಬಂದಿದೆ. ನಮ್ಮ ಹಳೇ ಸ್ನೇಹಿತರೊಬ್ಬರು ಪುಟ್ಟರಾಜು ಅವರ ಹೆಸರು ಹೇಳಿದ್ದಾರೆ. ಡಿ.ಸಿ. ತಮ್ಮಣ್ಣ ಹಾಗೂ ಸಿ.ಎಸ್. ಪುಟ್ಟರಾಜು ಸ್ಪರ್ಧೆ ಬಗ್ಗೆ ಚರ್ಚೆ ನಡೆದಿತ್ತು. ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಕಾರ್ಯಕರ್ತರ ಅಪೇಕ್ಷೆ ಇದೆ. ಪುಟ್ಟರಾಜು ನನ್ನ ಗಮನಕ್ಕೆ ತಾರದೆ ಮೇಲುಕೋಟೆಯಲ್ಲಿ ಘೋಷಣೆ ಮಾಡಿದ್ದಾರೆ. ನಾನು ಪಲಾಯನವಾದಿಯಲ್ಲ. ಜನರ ಅಪೇಕ್ಷೆಗೆ ತಲೆ ಭಾಗಿ ಬಂದಿದ್ದೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಸುಮಲತಾ ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ

ಸುಮಲತಾ ಅಂಬರೀಶ್‌ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ನಾನು ಮತ್ತು ಅಂಬರೀಶ್ ಸ್ನೇಹಿತರು. ಅದೂ ಎಲ್ಲರಿಗೂ ತಿಳಿದಿರುವ ವಿಚಾರವೇ. ಸುಮಲತಾ ಅವರು ನನಗೆ ಅಂಬರೀಶ್‌ ಅವರೊಂದಿಗೆ ಊಟ ಬಡಿಸಿದ್ದಾರೆ. ನಾವು ಶತ್ರುಗಳಲ್ಲ. ಅವರು ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ಅವರು ನಿರ್ಧಾರ ಮಾಡಿ ಘೋಷಣೆ ಮಾಡುತ್ತಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಬಗ್ಗೆಯೂ ಇದೇ ರೀತಿಯ ಚೇಷ್ಟೆ ಮಾಡುತ್ತಿದ್ದಾರೆ. ಅದೇನೂ ವರ್ಕೌಟ್ ಆಗಲ್ಲ. ಮಂಜುನಾಥ್ ಜನಸಾಮಾನ್ಯರ ಅಭ್ಯರ್ಥಿ. ಏನು ಕುತಂತ್ರ ಮಾಡಿದರು ಪ್ರಯೋಜನವಿಲ್ಲ. ಡಿ.ಕೆ. ಸುರೇಶ್ ಕೆಲಸ ಮಾಡಿದ್ದೀವಿ, ಕೂಲಿ ಕೇಳ್ತಿದ್ದೀವಿ ಅನ್ನೋ ವಿಚಾರ.
ನಾವೇನೂ ದರೋಡೆ ಮಾಡಿದ್ದೀವಾ? ರಾಮನಗರ ಜಿಲ್ಲೆಗೆ ನಾನು ಕಾಲಿಡುವ ಮುಂಚೆ ಯಾವ ಪರಿಸ್ಥಿತಿ ಇತ್ತು.
ನಾನು ಕಾಲಿಟ್ಟ ಬಳಿಕ ಯಾವ ಪರಿಸ್ಥಿತಿ ಇದೆ. ಯಾವ ರೀತಿ ಕಾರ್ಯಕ್ರಮಗಳನ್ನು ಕೊಟ್ಟಿದ್ದೀವಿ. ನಾನು ಮತ್ತು ಯಡಿಯೂರಪ್ಪ ಇದ್ದ ವೇಳೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಮಾಡಿದ್ದೇವು. ಇದಕ್ಕೆ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸಾಕ್ಷಿ ಇದ್ದಾರೆ ಎಂದು ಡಿ.ಕೆ. ಸುರೇಶ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯ ಸಭೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟ್ವೀಟ್‌

ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ. ದೇವೇಗೌಡ, ಮಾಜಿ ಸಚಿವರಾದ ಸಿ.ಎಸ್ ಪುಟ್ಟರಾಜು, ಸಾ.ರಾ.ಮಹೇಶ್, ಡಾ.ನಾರಾಯಣ ಗೌಡ, ಎಸ್.ಎ.ರಾಮದಾಸ್, ಶಾಸಕ ಎಚ್.ಟಿ. ಮಂಜುನಾಥ್, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಕೆ.ಅನ್ನದಾನಿ, ಕೆ.ಟಿ.ಶ್ರೀಕಂಠೇಗೌಡ, ಬಿಜೆಪಿಯ ಶರಣು ತಳ್ಳೀಕೇರಿ, ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಇಂದ್ರೇಶ್, ಬಿ.ಆರ್‌.ರಾಮಚಂದ್ರ, ಕೆ.ಎಸ್.ವಿಜಯ್ ಆನಂದ್ ಸೇರಿದಂತೆ ಎರಡೂ ಪಕ್ಷಗಳ ಅನೇಕ ಮುಖಂಡರು, ಕಾರ್ಯಕರ್ತರು ಸೇರಿದ್ದರು.

Continue Reading

ಬೆಂಗಳೂರು

Hindu Temple: ಜಾತ್ರೆ, ಉತ್ಸವಗಳಲ್ಲಿ ಹಿಂದುಯೇತರರ ಅಂಗಡಿಗೆ ಅನುಮತಿ ನೀಡಬೇಡಿ; ಜಿಲ್ಲಾಧಿಕಾರಿಗೆ ಮನವಿ

Hindu Temple: ದೇವಸ್ಥಾನದ ಪರಿಸರದಲ್ಲಿ ಯಾವುದೇ ಕಾರಣಕ್ಕೂ ಹಿಂದುಯೇತರರಿಗೆ, ನಾಸ್ತಿಕರಿಗೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನಿರಾಕರಿಸಿ ಧರ್ಮದಾಯ ಅಧಿನಿಯಮ ಕಾಯಿದೆಯ ಕಲಂ 29 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಬೆಂಗಳೂರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.

VISTARANEWS.COM


on

bengaluru dc
Koo

ಬೆಂಗಳೂರು: ದೇವಸ್ಥಾನದ (Hindu Temple) ಪಾವಿತ್ರ್ಯವನ್ನು ಕಾಪಾಡಲು ದೇವಸ್ಥಾನದ ಪರಿಸರದಲ್ಲಿ ಯಾವುದೇ ಕಾರಣಕ್ಕೂ ಹಿಂದುಯೇತರರಿಗೆ, ನಾಸ್ತಿಕರಿಗೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನಿರಾಕರಿಸಿ ಧರ್ಮದಾಯ ಅಧಿನಿಯಮ ಕಾಯಿದೆಯ ಕಲಂ 29 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಜಿಲ್ಲಾಧಿಕಾರಿ ಅವರಿಗೆ ಮನವಿ ನೀಡಲಾಯಿತು.

ಮಹಾಸಂಘದ ರಾಜ್ಯ ಸಂಯೋಜಕ ಮೋಹನ್ ಗೌಡ ಅವರು ಮಾತನಾಡಿ, ಹಿಂದೂ ದೇವಸ್ಥಾನಗಳು ಹಿಂದೂ ಧರ್ಮದ ಅತ್ಯಂತ ಪವಿತ್ರವಾದ ಶ್ರದ್ಧಾ ಕೇಂದ್ರ. ದೇವಸ್ಥಾನಗಳಿಗೆ ಅದರದ್ದೇ ಆದ ವಿಶೇಷವಾದ ಆಧ್ಯಾತ್ಮಿಕ, ಧಾರ್ಮಿಕ ಮತ್ತು ಐತಿಹಾಸಿಕ ಹಿನ್ನೆಲೆ ಮತ್ತು ಮಹತ್ವವಿದೆ. ದೇವಸ್ಥಾನಗಳಲ್ಲಿ ಪ್ರತಿನಿತ್ಯ ನಡೆಯುವ ಪೂಜೆ, ಅರ್ಚನೆ, ಹೋಮ-ಹವನ ಮುಂತಾದ ಧಾರ್ಮಿಕ ವಿಧಿಗಳಿಂದ ದೇವಸ್ಥಾನದಲ್ಲಿ, ದೇವತೆಗಳ ಸ್ಥಾನದಲ್ಲಿ ಸಾತ್ವಿಕತೆ ನಿರ್ಮಾಣವಾಗಿರುತ್ತದೆ. ಅದರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಭಕ್ತ, ವಿಶ್ವಸ್ಥರ ಕರ್ತವ್ಯ. ಇದರ ಸಂರಕ್ಷಣೆಗಾಗಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ಅಧಿನಿಯಮ 1997ರ ಕಾಯಿದೆಗೆ 2002ರಲ್ಲಿ ತಿದ್ದುಪಡಿ ಮಾಡಲಾಗಿದೆ ಎಂದರು.

ಈಗ ಮಾರ್ಚ್, ಏಪ್ರಿಲ್‌ನಲ್ಲಿ ಬಹುತೇಕ ಎಲ್ಲ ದೇವಸ್ಥಾನಗಳ ವಾರ್ಷಿಕ ಜಾತ್ರೆಯು ಪ್ರಾರಂಭವಾಗುತ್ತಿದೆ. ಉದಾ: ಬೆಂಗಳೂರು ಕರಗ, ಬನ್ನೇರುಘಟ್ಟ ರಸ್ತೆಯಲ್ಲಿನ ಚಂಪಕ ರಾಮ ದೇವಸ್ಥಾನ ಜಾತ್ರೆ. ಈ ವಾರ್ಷಿಕ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇಂತಹ ಸಂದರ್ಭದಲ್ಲಿ ಕೊಟ್ಯಾಂತರ ರೂಪಾಯಿ ವ್ಯಾಪಾರ ವಹಿವಾಟು ನಡೆಯುತ್ತದೆ. ಇದರ ದುರುಪಯೋಗವನ್ನು ಪಡೆಯಲು ಅನ್ಯ ಸಮುದಾಯದವರು, ದೇವರ ಮೇಲೆ ನಂಬಿಕೆ ಇಲ್ಲದ ನಾಸ್ತಿಕರು ದೇವಸ್ಥಾನದ ಪ್ರಾಂಗಣ, ಪರಿಸರದಲ್ಲಿ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆಯಾಗುವ ರೀತಿಯಲ್ಲಿ ವ್ಯಾಪಾರ ಮಾಡುವುದು ಗಮನಕ್ಕೆ ಬರುತ್ತದೆ. ಇದರಿಂದ ದೇವಸ್ಥಾನದ ಸಾತ್ತ್ವಿಕ ವಾತಾವರಣವು ಹಾಳಾಗುತ್ತದೆ ಎಂದು ಅವರು ಹೇಳಿದರು.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ಅಧಿನಿಯಮ 1997ರ ಕಾಯಿದೆಯ ಕಲಂ 29 (8)ರಲ್ಲಿ ಹಿಂದೂ ದೇವಸ್ಥಾನದ ಸಮೀಪದ ಜಮೀನು, ಕಟ್ಟಡ, ನಿವೇಶನಗಳು ಸೇರಿ ಯಾವುದೇ ಸ್ವತ್ತನ್ನು ಹಿಂದೂಯೇತರರಿಗೆ ನೀಡಬಾರದು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಹಿಂದೂ ದೇವಸ್ಥಾನಗಳ ಜಾಗವನ್ನು ಅಕ್ರಮವಾಗಿ ಕಬಳಿಸಿ, ಅಲ್ಲಿ ಹಿಂದೂಯೇತರರು ಪಾವಿತ್ರ್ಯತೆಗೆ ಧಕ್ಕೆ ತರುವ ರೀತಿಯಲ್ಲಿ ಅಂಗಡಿಯನ್ನು ಹಾಕಿರುವುದು ಗಮನಕ್ಕೆ ಬಂದಿದೆ. ಇಲಾಖೆಯ ಅಧಿಕಾರಿಗಳು ದೇವಸ್ಥಾನಗಳ ಜಾಗದ ಸಂರಕ್ಷಣೆ ಬಗ್ಗೆ ಯಾವುದೇ ಕ್ರಮ ಜರುಗಿಸದಿರುವುದು ಬೇಜವ್ದಾರಿಯನ್ನು ಎತ್ತಿ ತೋರಿಸುತ್ತದೆ ಎಂದು ಮೋಹನ್ ಗೌಡ ಅವರು ತಿಳಿಸಿದರು.

ಈಗಲಾದರೂ ಇಲಾಖೆಯು ಎಚ್ಚೆತ್ತುಕೊಂಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಬರುವ ದೇವಸ್ಥಾನಗಳ ಜಾಗದಲ್ಲಿ ಧಾರ್ಮಿಕ ದತ್ತಿ ಕಾಯಿದೆಗೆ ವಿರುದ್ಧವಾಗಿ ಹಿಂದೂಯೇತರರು ಅಂಗಡಿಯನ್ನು ಹಾಕಿದ್ದರೆ ಕೂಡಲೇ ತೆರವುಗೊಳಿಸಬೇಕು. ತುಂಡು ಗುತ್ತಿಗೆಯನ್ನು ಹಿಂದೂಯೇತರರಿಗೆ ನೀಡಬಾರದು. ಅಷ್ಟೇ ಅಲ್ಲದೇ ಹಿಂದೂ ದೇವಸ್ಥಾನಗಳ ವಾರ್ಷಿಕ ಜಾತ್ರೆಯಲ್ಲಿ ಹಿಂದೂಯೇತರರು, ಹಿಂದೂ ಧಾರ್ಮಿಕ ನಂಬಿಕೆಯನ್ನು ಗೌರವಿಸದವರಿಗೆ ಅಂಗಡಿಯನ್ನು ಹಾಕಲು ಅವಕಾಶ ನೀಡದಂತೆ ವಿಶೇಷ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಧರ್ಮ ದಂಗಲ್‌ | ಮುಸ್ಲಿಂ ವ್ಯಕ್ತಿಯಿಂದ ಹಿಂದು ಹೆಸರಲ್ಲಿ ಅಂಗಡಿ ಆರೋಪ; ಹಿಂದು ಸಂಘಟನೆಗಳ ಆಕ್ರೋಶ, ಪೊಲೀಸ್‌ ದೂರು

ಈ ವೇಳೆ ನ್ಯಾಯವಾದಿ ಪ್ರಸನ್ನ ಡಿ.ಪಿ., ರಾಘವೇಂದ್ರಾಚಾರ್, ಶ್ಯಾಮಸುಂದರ್, ಆರ್ಚಕ ಎಂ. ಭಾಗ್ವತ್, ಹಿಂದೂ ಜನಜಾಗೃತಿ ಸಮಿತಿಯ ನೀಲೇಶ್ವರ ಬಿ.ಎಂ ಮತ್ತಿತರರು ಉಪಸ್ಥಿತರಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rameswaram cafe bomb blast case
ಬೆಂಗಳೂರು3 mins ago

Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

Rajasthan Royals
ಪ್ರಮುಖ ಸುದ್ದಿ15 mins ago

IPL 2024 : ಬದಲಿ ಆಟಗಾರರನ್ನು ಘೋಷಿಸಿದ ರಾಜಸ್ಥಾನ್​ ರಾಯಲ್ಸ್​, ಕೆಕೆಆರ್​​

SBI Debit Cards
ವಾಣಿಜ್ಯ17 mins ago

SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

Rishabh Pant -IPL 2024
ಕ್ರೀಡೆ48 mins ago

Rishabh Pant : ಡೆಲ್ಲಿ ಪರ 100ನೇ ಪಂದ್ಯವಾಡಿದ ರಿಷಭ್ ಪಂತ್​!

Parliament Flashback
ಕರ್ನಾಟಕ1 hour ago

Parliament Flashback: ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಗೆದ್ದು, ಬಿಜೆಪಿಯಿಂದ ಸ್ಪರ್ಧಿಸಿದಾಗ ಸೋತು ಹೋಗಿದ್ದ ಒಡೆಯರ್‌!

Lok Sabha Election 2024 HD Kumaraswamy to file nomination for Mandya Lok Sabha seat on April 4
ಕರ್ನಾಟಕ1 hour ago

Lok Sabha Election 2024: ಮಂಡ್ಯದಲ್ಲಿ ಜೆಡಿಎಸ್-ಬಿಜೆಪಿ ಮುಖಂಡರ ಸಮನ್ವಯ ಸಭೆ ಯಶಸ್ವಿ; ಏ. 4ಕ್ಕೆ ಹೆಚ್ಡಿಕೆ ನಾಮಪತ್ರ ಸಲ್ಲಿಕೆ

IPL 2024- Jayadev Unadkat
ಕ್ರೀಡೆ2 hours ago

IPL 2024 : ಐಪಿಎಲ್ ಇತಿಹಾಸದಲ್ಲಿ ವಿಭಿನ್ನ ಸಾಧನೆ ಮಾಡಿದ ಎಸ್​ಆರ್​​ಎಚ್​​ ಬೌಲರ್​ ಉನಾದ್ಕಟ್​

bengaluru dc
ಬೆಂಗಳೂರು2 hours ago

Hindu Temple: ಜಾತ್ರೆ, ಉತ್ಸವಗಳಲ್ಲಿ ಹಿಂದುಯೇತರರ ಅಂಗಡಿಗೆ ಅನುಮತಿ ನೀಡಬೇಡಿ; ಜಿಲ್ಲಾಧಿಕಾರಿಗೆ ಮನವಿ

minister Lakshmi hebbalkar latest statement
ಬೆಳಗಾವಿ2 hours ago

Belagavi News: ಕರ್ಮಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ? ಶೆಟ್ಟರ್‌ಗೆ ಹೆಬ್ಬಾಳ್ಕರ್ ಪ್ರಶ್ನೆ

Chikkaballapura lok sabha constituency congress ticket aspirants Sivasankar Reddy Veerappa Moily and Raksha Ramayya
Lok Sabha Election 20242 hours ago

Lok Sabha Election 2024: ಕಾಂಗ್ರೆಸ್‌ಗೆ ಚಿಕ್ಕಬಳ್ಳಾಪುರ ಟೆನ್ಶನ್‌; ಟಿಕೆಟ್‌ ಸಿಗದಿದ್ದರೆ ಪಕ್ಷ ತೊರೆಯುವ ಎಚ್ಚರಿಕೆ ಕೊಟ್ಟ ಶಿವಶಂಕರ ರೆಡ್ಡಿ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20247 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20248 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ16 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌