Site icon Vistara News

Bus Accident | ಕುಂಭಮೇಳಕ್ಕೆ ಬಂದಿದ್ದ ಮಹಿಳೆ ಮೇಲೆ ಹರಿದ ಬಸ್‌; ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವು

bus accident

ಮಂಡ್ಯ: ಕುಂಭಮೇಳಕ್ಕೆ ಬಂದಿದ್ದ ಮಹಿಳೆಯೊಬ್ಬರು ಬಸ್ ಚಕ್ರಕ್ಕೆ ಸಿಲುಕಿ (Bus Accident) ಮೃತಪಟ್ಟ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಬಿಗರಹಳ್ಳಿ ಬಳಿ ನಡೆದಿದೆ. ಸಾಕ್ಷೀಬೀಡು ಗ್ರಾಮದ ಸುಶೀಲಮ್ಮ (55) ಮೃತ ದುರ್ದೈವಿ.

ಸುಶೀಲಮ್ಮ ಕುಂಭಮೇಳಕ್ಕೆಂದು ಬಂದು ವಾಪಸ್‌ ಆಗುವಾಗ ಬಸ್ ಹತ್ತಲು ಹೋಗಿ ಈ ದುರ್ಘಟನೆ ಸಂಭವಿಸಿದೆ. ಬಸ್ ಹತ್ತುವ ಸಂದರ್ಭದಲ್ಲಿ ಸುಶೀಲಮ್ಮ ಆಯತಪ್ಪಿ ಕೆಳಗೆ ಬಿದ್ದಿದ್ದು, ಈ ವೇಳೆ ಬಸ್‌ ಚಕ್ರ ಹರಿದಿದೆ. ಕೂಡಲೇ ತೀವ್ರ ಗಾಯಗೊಂಡ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.

ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ | ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ, ಮಹಿಳೆ ಗಂಭೀರ

Exit mobile version