Site icon Vistara News

Bus Accident : ತಿರುವಿನಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ

Bus Accident

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಸರ್ಕಾರಿ ಬಸ್‌ವೊಂದು (Bus Accident) ಡಿಕ್ಕಿಯಾದ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸಮೀಪದ ಕುಂಬಾರಗಡಿಗೆ ಎಂಬಲ್ಲಿ (Road Accident) ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ಮಡಿಕೇರಿಯಿಂದ ಸೂರ್ಲಬ್ಬಿ ಮಾರ್ಗವಾಗಿ ಸೋಮವಾರಪೇಟೆಗೆ ತೆರಳುತ್ತಿತ್ತು. ಕುಂಬಾರಗಡಿ ಸಮೀಪ ಬರುತ್ತಿದ್ದಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ಮರಕ್ಕೆ ಡಿಕ್ಕಿಯಾಗದೆ ಮುಂದೆ ಚಲಿಸಿದ್ದರೆ 50 ಅಡಿ ಪ್ರಪಾತಕ್ಕೆ ಉರುಳಿ ಬೀಳುವ ಆತಂಕ ಎದುರಾಗಿತ್ತು.

ಈ ಬಸ್ ನಲ್ಲಿ ಹೆಚ್ಚಾಗಿ ಶಾಲಾ ಮಕ್ಕಳೆ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಎಲ್ಲರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೂರ್ಲಬ್ಬಿ ಈ ಒಂದು ರಸ್ತೆ ಹೆಚ್ಚು ಕಿರಿದಾಗಿದ್ದು ಹೆಚ್ಚು ತಿರುವುಗಳೆ ಈ ರಸ್ತೆಯಲ್ಲಿದೆ. ತಿರುವುಗಳಲ್ಲಿ ಯಾವುದೇ ನಾಮಫಲಕಗಳು ಇಲ್ಲದಿರುವುದು ಹೊಸದಾಗಿ ಬರುವ ಚಾಲಕರಿಗೆ ರಸ್ತೆಯ ಅರಿವಿಲ್ಲದೆ ಈ ರೀತಿಯ ಅಪಘಾತಗಳು ಸಂಭವಿಸುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version