Bus Accident: ಮುಂಡರಗಿ ಬಳಿ ಸಾರಿಗೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ - Vistara News

ಕರ್ನಾಟಕ

Bus Accident: ಮುಂಡರಗಿ ಬಳಿ ಸಾರಿಗೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

VISTARANEWS.COM


on

Bus Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಗದಗ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ (Bus Accident) ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಪಾಟಾ ಕಟ್ ಆಗಿದ್ದರಿಂದ ಏಕಾಏಕಿ ಬಸ್‌ ಪಲ್ಟಿಯಾಗಿದೆ.

ಬೆಳ್ಳಟ್ಟಿಯಿಂದ ಮುಂಡರಗಿ ಹೋಗುತ್ತಿದ್ದ ಬಸ್ ಪಲ್ಟಿಯಾಗಿದೆ. ಈ ವೇಳೆ ಪ್ರಯಾಣಿಕರ ಕೂಗಾಟ, ಚೀರಾಟ ಕೇಳಿಬಂದಿದೆ. ಹೀಗಾಗಿ ಗ್ರಾಮಸ್ಥರು ಬಸ್ ಮುಂದಿನ ಗ್ಲಾಸ್ ಒಡೆದು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಸುಸ್ಥಿತಿಯಲ್ಲಿ ಇಲ್ಲದ ಕಾರಣ ಅಪಘಾತವಾಗಿದೆ ಎಂದು ಪ್ರಯಾಣಿಕರ ಆರೋಪಿಸಿದ್ದಾರೆ.

ಇದನ್ನೂ ಓದಿ | Rameshwaram Cafe Blast: ರಾಮೇಶ್ವರಂ ಕೆಫೆ ಬಾಂಬರ್‌ಗಳಿಗೆ 10 ದಿನ ಎನ್‌ಐಎ ಕಸ್ಟಡಿ; ಮತ್ತಷ್ಟು ಗ್ರಿಲ್‌ ಮಾಡಲು ಪೊಲೀಸರು ಸಜ್ಜು

ಮೂರು ಭೀಕರ ರಸ್ತೆ ಅಪಘಾತ; 6 ಮಂದಿ ಸಾವು; ಬಬಲೇಶ್ವರದಲ್ಲಿ 4 ಬಲಿ ಪಡೆದ ಆ್ಯಕ್ಸಿಡೆಂಟ್

vijyapura road accident

ವಿಜಯಪುರ: ರಾಜ್ಯದಲ್ಲಿ ನಿನ್ನೆ ರಾತ್ರಿ ಮೂರು ಕಡೆ ನಡೆದ ಭೀಕರ ರಸ್ತೆ ಅಪಘಾತಗಳಲ್ಲಿ (Road Accident) ಒಟ್ಟು 6 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ವಿಜಯಪುರದಲ್ಲಿ (vijayapura news) ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಹಾಗೂ ಟ್ರಕ್ (car truck collision) ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ವಿಜಯಪುರದಿಂದ ಜಮಖಂಡಿಗೆ ಹೊರಟಿದ್ದ ಕಾರು ಹಾಗೂ ಜಮಖಂಡಿ ಕಡೆಯಿಂದ ವಿಜಯಪುರಕ್ಕೆ ಬರುತ್ತಿದ್ದ ಸಿಮೆಟ್‌ ಸಾಗಿಸುತ್ತಿದ್ದ ಲಾರಿ ಮುಖಾಮುಖಿಯಾಗಿ ಡಿಕ್ಕಿಯಾಗಿವೆ. ಕಾರಿನಲ್ಲಿದ್ದ ನಾಲ್ಕೂ ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತರಲ್ಲಿ ಇಬ್ಬರು ಪುರುಷರು, ಒಬ್ಬ ಮಹಿಳೆ, ಒಬ್ಬ ಬಾಲಕ ಇದ್ದಾರೆ.

ಮೃತರನ್ನು ವಿಜಯಪುರ ಮೂಲದ ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಸುನಿಲಾಲ್ ಪತ್ತಾರ (52), ಪುಷ್ಟಾ ರವಿನಾಥ ಪತ್ತಾರ (40), ಮೇಘರಾಜ ಅರ್ಜುನಸಿಂಗ್ ರಜಪೂತ (12) ಎಂದು ಗುರುತಿಸಲಾಗಿದೆ. ಇವರು ವಿಜಯಪುರದಿಂದ ಜಮಖಂಡಿಯ ದೇವಸ್ಥಾನಕ್ಕೆ KA 28 D 1021 ನಂಬರಿನ ಕಾರಿನಲ್ಲಿ ತೆರಳುತ್ತಿದ್ದರು. ಜಮಖಂಡಿಯಿಂದ ಸಿಮೆಂಟ್ ಲೋಡ್ ಇದ್ದ KA 16 B 6472 ನಂಬರಿನ ಲಾರಿ ವಿಜಯಪುರದತ್ತ ಬರುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿಯಾಗಿದೆ.

ಬಬಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಋಷಿಕೇಶ ಸೋನೆವಣೆ ಹಾಗೂ ಇತರ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ನಿರ್ಲಕ್ಷ್ಯದ ಚಾಲನೆ, ಬೈಕ್ ಸವಾರ ಸಾವು

ಬೆಂಗಳೂರು: ಅಪರಿಚಿತ ವಾಹನ‌ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾದ ಘಟನೆ ರಾಜಧಾನಿಯ (Bangalore news) ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುಖೇಶ್ (22) ಸಾವನ್ನಪ್ಪಿರುವ ಯುವಕ. ನಿನ್ನೆ ರಾತ್ರಿ 9.30ರ ಸುಮಾರಿಗೆ ಬೈಕ್‌ನಲ್ಲಿ ಹೊಸಕೆರೆಹಳ್ಳಿ ನೈಸ್ ರಸ್ತೆಯ ಕಡೆಯಿಂದ ಸೋಂಪುರ ಕ್ಲವರ್ ಲೀಫ್ ಕಡೆಗೆ ಮುಖೇಶ್ ಹೋಗುತ್ತಿದ್ದಾಗ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ.

ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಘಟನಾ ಸ್ಥಳಕ್ಕೆ ಕೆಂಗೇರಿ‌ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕಾರು ಡಿಕ್ಕಿ, ಬೈಕ್‌ ಸವಾರ ಸಾವು

ಧಾರವಾಡ: ಧಾರವಾಡ ಬಳಿ (Dharwad news) ಬೈಕ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೈಕ್ ಸವಾರ ಜಿಲ್ಲಾ ಕಾರಾಗೃಹ ಸಿಬ್ಬಂದಿ ರುದ್ರಪ್ಪ ಸಿದ್ದಣ್ಣವರ ಎಂದು ಗುರುತಿಸಲಾಗಿದೆ.

ಧಾರವಾಡ ತಾಲೂಕಿನ ಗರಗ ಗ್ರಾಮದ ಬಳಿ‌ ನಡೆದ ಘಟನೆಯಿದು. ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಪೇದೆಯಾಗಿ ಕೆಲಸ ಮಾಡುತಿದ್ದ ರುದ್ರಪ್ಪ ಕರ್ತವ್ಯ ಮುಗಿಸಿ ವಾಪಸ್ ತಮ್ಮ ಗ್ರಾಮಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: Honeybee Attack : ಹುಲಿ ‌ಸೆರೆ ಕಾರ್ಯಾಚರಣೆ ವೇಳೆ ಹೆಜ್ಜೇನು ದಾಳಿ; ಬೆದರಿ ಓಡಿ‌ದ ಸಾಕಾನೆ ಭೀಮ

ಬಸ್‌ ಗುದ್ದಿದ ರಭಸಕ್ಕೆ ಅಪ್ಪಚ್ಚಿಯಾದ ಓಮ್ನಿ ಕಾರು; ಮೂವರು ದಾರುಣ ಸಾವು

ಶಿವಮೊಗ್ಗ/ದಾವಣಗೆರೆ: ದಾವಣಗೆರೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ನಂಜುಂಡಪ್ಪ (83), ರಾಕೇಶ್ (27), ದೇವರಾಜ್ (30) ಎಂದು ಗುರುತಿಸಲಾಗಿದೆ. ಈ ಮೂವರು ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹರಮಘಟ್ಟ ಗ್ರಾಮದವರು ಎಂದು ತಿಳಿದು ಬಂದಿದೆ.

ಕೆಎಸ್‌ಆರ್‌ಟಿಸಿ ಬಸ್‌ ಶಿಕಾರಿಪುರದ ಕಡೆಯಿಂದ ಬರುತ್ತಿತ್ತು. ಶಿವಮೊಗ್ಗದ ಕಡೆಯಿಂದ ಹೊರಟಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಬಸ್‌-ಕಾರು ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಕಾರು ಗುರುತು ಸಿಗದಂತೆ ಅಪ್ಪಚ್ಚಿ ಆಗಿತ್ತು. ಡಿಕ್ಕಿ ರಭಸಕ್ಕೆ ಕಾರಿನಲ್ಲಿ ಸಿಲುಕಿದ್ದ ಮೂವರು ಚೆಲ್ಲಾಪಿಲ್ಲಿಯಾಗಿದ್ದರು. ಇನ್ನೂ ಬಸ್ಸಿನ ಮುಂಭಾಗವು ಛಿದ್ರಗೊಂಡಿತ್ತು.

ಘಟನೆಯಲ್ಲಿ ಆರಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ತೀವ್ರ ಗಾಯಗೊಂಡ ಇಬ್ಬರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಣ್ಣ ಪುಟ್ಟ ಗಾಯಗೊಂಡವರನ್ನು ನ್ಯಾಮತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: Road Accident: ಎಲೆಕ್ಷನ್‌ ಡ್ಯೂಟಿಗೆ ಹೋಗುತ್ತಿದ್ದಾಗ ತಮಿಳುನಾಡಲ್ಲಿ ಅಪಘಾತ; ಕರ್ನಾಟಕ ಪೊಲೀಸ್‌ ಸೇರಿ ಇಬ್ಬರ ಸಾವು

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನ್ಯಾಮತಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ನ್ಯಾಮತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

VISTARANEWS.COM


on

ಬಿಡದಿ ಟೌನ್‌ಶಿಪ್‌

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಬೃಹತ್ ಪ್ರತಿಭಟನೆ ರೈತ ಸಂಘಟನೆಗಳ ತೀರ್ಮಾನ

ಬಿಡದಿ ಟೌನ್‌ಶಿಪ್ ಯೋಜನೆಯ ಅಂತಿಮ ಅಧಿಸೂಚನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ, ಯೋಜನೆ ವಿರೋಧಿಸಿ ರೈತರು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ಯೋಜನೆಗಾಗಿ ಭೂಮಿ ನೀಡದಿರಲು ರೈತರು ಒಗ್ಗಟ್ಟಿನ ನಿರ್ಣಯ ಕೈಗೊಂಡಿದ್ದು, ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಮನಗರ ಎಪಿಎಂಸಿ ಆವರಣದ ರೈತಭವನದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಗ್ರಾಮಗಳ ರೈತರು, ಮುಖಂಡರು ಹಾಗೂ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಚರ್ಚಿಸಿದರು.

ಕರ್ನಾಟಕ ರಾಜ್ಯ ರೈತಸಂಘದ ನೇತೃತ್ವದಲ್ಲಿ ಜೂನ್ 22ರಂದು ‘ಭೈರಮಂಗಲ ಚಲೋ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಪ್ರತಿಭಟನೆಯ ಮೂಲಕ ಸರ್ಕಾರದ ಗಮನ ಸೆಳೆದು ಯೋಜನೆ ವಿರುದ್ಧದ ರೈತರ ಅಸಮಾಧಾನವನ್ನು ವ್ಯಕ್ತಪಡಿಸುವ ಉದ್ದೇಶ ಹೊಂದಲಾಗಿದೆ.

ಸಭೆಯಲ್ಲಿ ಮಾತನಾಡಿದ ರೈತ ಮುಖಂಡರು, ರೈತರ ಬದುಕು ಮತ್ತು ಕೃಷಿ ಭೂಮಿಗೆ ಧಕ್ಕೆ ತರುವ ಯಾವುದೇ ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸರ್ಕಾರ ರೈತರ ಅಭಿಪ್ರಾಯವನ್ನು ಗೌರವಿಸಿ ಯೋಜನೆ ಕುರಿತು ಮರುಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ, ರೈತರ ಹೋರಾಟಕ್ಕೆ ವಿಪಕ್ಷಗಳು ಬೆಂಬಲ ಸೂಚಿಸಿರುವುದಾಗಿ ತಿಳಿದುಬಂದಿದೆ. ಕಾರ್ಮಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಕೂಡಾ ಪ್ರತಿಭಟನೆಗೆ ಸಾಥ್ ನೀಡಲು ಮುಂದಾಗಿವೆ ಎನ್ನಲಾಗಿದೆ.

ಜೂನ್ 22ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಸಾವಿರಾರು ರೈತರು ಭಾಗವಹಿಸುವ ನಿರೀಕ್ಷೆಯಿದ್ದು, ರಾಜ್ಯ ಸರ್ಕಾರದ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ರೈತ ಸಂಘಟನೆಗಳು ಸಿದ್ಧತೆ ನಡೆಸಿವೆ.

Also Read: ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

VISTARANEWS.COM


on

ಸಿಎಂ ಡಿಕೆಶಿ

ಸಿಎಂ ಡಿಕೆಶಿ: ಲಂಚ ಕೇಳಿದ್ರೆ ದೂರು ನೀಡಲು ಪೋನ್ ನಂಬರ್ ಡಿಸ್ ಪ್ಲೇ

ಭ್ರಷ್ಟಾಚಾರ ಮುಕ್ತ ಸರ್ಕಾರದ ನಿರ್ಮಾಣವೇ ನನ್ನ ಮೊದಲ ಆದ್ಯತೆ” ಎಂದು ಹೇಳುವ ಮೂಲಕ ಸಿಎಂ ಡಿ.ಕೆ.ಶಿವಕುಮಾರ್‌ ಭ್ರಷ್ಟಾಚಾರದ ವಿರುದ್ಧ ತಮ್ಮ ಸರ್ಕಾರ ಕಠಿಣ ನಿಲುವು ತೆಗೆದುಕೊಳ್ಳಲಿದೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಸಚಿವರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಸಾರ್ವಜನಿಕರಿಗೆ ಸೇವೆ ನೀಡುವ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲೂ ಲಂಚಕ್ಕೆ ಅವಕಾಶ ಇರಬಾರದು ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು (ಡಿಸಿ) ಮತ್ತು ಸಹಾಯಕ ಆಯುಕ್ತರು (ಎಸಿ) ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಿಎಂ ಡಿಕೆಶಿ ಆಡಳಿತದ ಪಾರದರ್ಶಕತೆ ಮತ್ತು ಭ್ರಷ್ಟಾಚಾರ ನಿರ್ಮೂಲನೆ ಕುರಿತು ಮಹತ್ವದ ಸಂದೇಶ ನೀಡಿದ್ದಾರೆ.

ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ಲಂಚ ಕೇಳಿದರೆ ಸಾರ್ವಜನಿಕರು ದೂರು ನೀಡಲು ಅನುಕೂಲವಾಗುವಂತೆ ಪ್ರತಿ ಸರ್ಕಾರಿ ಕಚೇರಿಯಲ್ಲಿ ದೂರು ಸಲ್ಲಿಸಲು ಅಗತ್ಯವಿರುವ ಫೋನ್ ನಂಬರ್‌ಗಳನ್ನು ಸ್ಪಷ್ಟವಾಗಿ ಪ್ರದರ್ಶಿಸುವಂತೆ ಸೂಚಿಸಿದರು.

“ನನಗೆ ಯಾವುದೇ ವೈಯಕ್ತಿಕ ನಿರೀಕ್ಷೆಗಳಿಲ್ಲ. ಜನರಿಗೆ ಸ್ವಚ್ಛ, ಪಾರದರ್ಶಕ ಮತ್ತು ಜನಸ್ನೇಹಿ ಆಡಳಿತ ನೀಡುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಸಿಎಂ ಹೇಳಿದರು.

ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಒಂದೇ ತಂಡದಂತೆ ಕೆಲಸ ಮಾಡಬೇಕು. “ನಾವೆಲ್ಲ ಕರ್ನಾಟಕ ಟೀಂ ಆಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಗಳ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಪರಿಹಾರಕ್ಕೆ ಸಮನ್ವಯ ಅತ್ಯಗತ್ಯ” ಎಂದು ತಿಳಿಸಿದರು.

ಇದೇ ವೇಳೆ, ರಾಜ್ಯದ ಎಲ್ಲ ಜಿಲ್ಲೆಗಳ ಸಮಸ್ಯೆಗಳನ್ನು ಆಲಿಸಲು ತಾವೇ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಸಿಎಂ ಭರವಸೆ ನೀಡಿದರು. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

Also Read: ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

VISTARANEWS.COM


on

ಜೋಸೆಫ್‌ ವಿಜಯ್‌

ಇಂದು ಮಧ್ಯಾಹ್ನ 3ಕ್ಕೆ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲಿರುವ ಜೋಸೆಫ್ ವಿಜಯ್‌

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿಜಯ್‌ ಅವರು ಮೂಕಾಂಬಿಕೆ ಸನ್ನಿಧಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿ. ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿಯೂ ಮೂಕಾಂಬಿಕೆ ದೇವಸ್ಥಾನಕ್ಕೆ ವಿಶೇಷ ಸ್ಥಾನಮಾನವಿದೆ. ಮಾಜಿ ಮುಖ್ಯಮಂತ್ರಿ ಎಂಜಿಆರ್‌ ತಮ್ಮ ಆಡಳಿತ ಅವಧಿಯಲ್ಲಿ ಹಲವು ಬಾರಿ ಕೊಲ್ಲೂರಿಗೆ ಭೇಟಿ ನೀಡಿದ್ದರು. ದೇವಸ್ಥಾನದಲ್ಲಿರುವ ಸುಮಾರು 1 ಕೆ.ಜಿ. ತೂಕದ ಚಿನ್ನದ ಖಡ್ಗವನ್ನು ಎಂಜಿಆರ್‌ ದೇಣಿಗೆಯಾಗಿ ನೀಡಿದ್ದರು ಎಂಬುದು ವಿಶೇಷ.

ಎಂಜಿಆರ್‌ ಬಳಿಕ ಅವರ ರಾಜಕೀಯ ಉತ್ತರಾಧಿಕಾರಿಯಾಗಿದ್ದ ಜಯಲಲಿತಾ ಕೂಡ ಮೂಕಾಂಬಿಕೆ ದೇವಿಯ ಅಪಾರ ಭಕ್ತೆಯಾಗಿದ್ದರು. ರಾಜಕೀಯ ಹಾಗೂ ವೈಯಕ್ತಿಕ ಸವಾಲುಗಳ ಸಮಯದಲ್ಲಿ ಅವರು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಆಪ್ತ ಜ್ಯೋತಿಷಿಗಳ ಸಲಹೆ ಮೇರೆಗೆ ಜಯಲಲಿತಾ ಅವರು ಮೂಕಾಂಬಿಕೆ ಸನ್ನಿಧಿಯಲ್ಲಿ ಚಂಡಿಕಾ ಹೋಮ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದ್ದರು.

ಈಗ ವಿಜಯ್‌ ಅವರ ಭೇಟಿ ಕೂಡ ಇದೇ ಪರಂಪರೆಯ ಮುಂದುವರಿಕೆಯೇ ಅಥವಾ ಕೇವಲ ವೈಯಕ್ತಿಕ ಭಕ್ತಿಯ ಅಭಿವ್ಯಕ್ತಿಯೇ ಎಂಬ ಚರ್ಚೆಗಳು ಜೋರಾಗಿವೆ. ಒಟ್ಟಾರೆ, ತಮಿಳುನಾಡು ರಾಜಕೀಯದ ಪ್ರಮುಖ ನಾಯಕರೊಂದಿಗೆ ಮೂಕಾಂಬಿಕೆ ದೇವಸ್ಥಾನದ ನಂಟು ಮತ್ತೊಮ್ಮೆ ಸುದ್ದಿಯ ಕೇಂದ್ರಬಿಂದುವಾಗಿದೆ.

Also Read: ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

VISTARANEWS.COM


on

ನರೇಂದ್ರ ಮೋದಿ

ನರೇಂದ್ರ ಮೋದಿ ನಾಯಕತ್ವವನ್ನು ಶ್ಲಾಘಿಸಿದ ಕಿಚ್ಚ.

ಸುದೀರ್ಘ ಅವಧಿಗೆ ಭಾರತದ ಚುನಾಯಿತ ಪ್ರಧಾನಮಂತ್ರಿಯಾಗಿ ಹೊಸ ಇತಿಹಾಸ ನಿರ್ಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಟ ಕಿಚ್ಚ ಸುದೀಪ್ ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುದೀಪ್, “12 ವರ್ಷಗಳು ಕಳೆದರೂ ಅದೇ ಉತ್ಸಾಹ, ಅದೇ ಕಾರ್ಯವೇಗ, ಕಿಂಚಿತ್ತೂ ದಣಿವೇ ಇಲ್ಲ” ಎಂದು ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ.

ದೇಶದ ಅಭಿವೃದ್ಧಿ ಮತ್ತು ಜನಸೇವೆಯತ್ತ ಪ್ರಧಾನಿ ಮೋದಿ ತೋರಿರುವ ನಿರಂತರ ಬದ್ಧತೆ ಹಾಗೂ ಸಮರ್ಪಣೆಯನ್ನು ಕೊಂಡಾಡಿರುವ ಸುದೀಪ್, ಈ ಸಾಧನೆ ದೇಶಕ್ಕೆ ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ. ಜೊತೆಗೆ ಪ್ರಧಾನಿ ಮೋದಿ ಅವರ ಮುಂದಿನ ದಿನಗಳಿಗೂ ಯಶಸ್ಸು, ಆರೋಗ್ಯ ಮತ್ತು ಇನ್ನಷ್ಟು ಸಾಧನೆಗಳು ತಮ್ಮದಾಗಲಿ ಎಂದು ಹಾರೈಸಿದ್ದಾರೆ.

ಭಾರತದ ಚುನಾವಣೋತ್ತರ ಪ್ರಧಾನಿಗಳಲ್ಲಿ ನರೇಂದ್ರ ಮೋದಿಯವರು ಸತತವಾಗಿ 4,399 ದಿನಗಳ(ಜೂನ್‌ 10ಕ್ಕೆ) ಕಾಲ ಅಧಿಕಾರದಲ್ಲಿದ್ದು, ನೆಹರೂ ಅವರ 4,398 ದಿನಗಳ ಚುನಾವಣೋತ್ತರ ಪ್ರಧಾನಮಂತ್ರಿ ಅವಧಿಯನ್ನು ಮೀರಿಸಿದ್ದಾರೆ.

ಕಿಚ್ಚ ಸುದೀಪ್ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಗಮನ ಸೆಳೆದಿದ್ದು, ಅನೇಕರು ಪ್ರಧಾನಿ ಮೋದಿ ಅವರ ಐತಿಹಾಸಿಕ ಆಡಳಿತಾವಧಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.

Also Read: ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading
Advertisement
ಬಿಡದಿ ಟೌನ್‌ಶಿಪ್‌
Latest1 day ago

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

ಸಿಎಂ ಡಿಕೆಶಿ
Latest1 day ago

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

ನೀಟ್ 2026 ಪರೀಕ್ಷೆ
Latest3 days ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest3 days ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

ರಾಜ್ಯಸಭೆ
Latest3 days ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest4 days ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ5 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest5 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest5 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest5 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌