Site icon Vistara News

Road accident : ಹಿರಿಯೂರು ಬಳಿ ಬಸ್‌, ಟಾಟಾ ಏಸ್‌, ಲಾರಿಗಳ ಸರಣಿ ಅಪಘಾತ; ಒಬ್ಬ ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

Tata ace hiriyur accident

#image_title

ಹಿರಿಯೂರು: ತಾಲೂಕಿನ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆದಿವಾಲ ಬಳಿ ತಡರಾತ್ರಿ ಕೆಎಸ್ಸಾರ್ಟಿಸಿ ಬಸ್, ಟಾಟಾ ಏಸ್, ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿ, ಒಬ್ಬರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಅಪಘಾತಕ್ಕೆ ಒಳಗಾದ ಬಸ್‌

ಮೃತಪಟ್ಟ ವ್ಯಕ್ತಿಯನ್ನು ಗದಗ ಟಾನ್ ನಿವಾಸಿ ಸೈಯದ್ ಮುಜಾಹಿದ್ದೀನ್ (40) ಎಂದು ಗುರುತಿಸಲಾಗಿದೆ. ಇನ್ನು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗದಿಂದ ಬಸ್ ಬೆಂಗಳೂರು ಕಡೆ ಹೋಗುವಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಜಖಂಗೊಂಡಿರುವ ಲಾರಿ

ವಿಷಯ ತಿಳಿದ ತಕ್ಷಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಸಪ್ತಪದಿ ತುಳಿದ ಹತ್ತೇ ದಿನಕ್ಕೆ ಮಸಣ ಸೇರಿದ ನವ ದಂಪತಿ

ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರು ಗ್ರಾಮದ ಬಳಿ ಕಾರು ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ನವ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭೀಕರ ರಸ್ತೆ ಅಪಘಾತ (Road Accident) ನಡೆದಿದ್ದರಿಂದ ಸಪ್ತಪದಿ ತುಳಿದ ಹತ್ತೇ ದಿನಕ್ಕೆ ನವ ದಂಪತಿ ಮಸಣ ಸೇರಿದ್ದಾರೆ.

ಮಹಾರಾಷ್ಟ್ರ ಮೂಲದ ಇಂದ್ರಜಿತ್ ಮೋಹನ್ ಡಮ್ಮನಗಿ (27), ಕಲ್ಯಾಣಿ ಇಂದ್ರಜಿತ್ ಡಮ್ಮಣಗಿ (24) ಮೃತರು. ನವ ದಂಪತಿ ಶನಿವಾರ ಕಾರಿನಲ್ಲಿ ಬಾದಾಮಿಯ ಬನಶಂಕರಿ ದೇವಿ ದರ್ಶನ ಪಡೆದು ಮರಳಿ‌ ಮನೆಗೆ ತೆರಳುವಾಗ ನಿಪ್ಪಾಣಿ- ಮುದೋಳ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರು ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಇಬ್ಬರೂ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : Toll plazas : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಟೋಲ್ ಪ್ಲಾಜಾ ತೆರವು ಸಂಭವ, ಶುಲ್ಕ ಸಂಗ್ರಹ ಹೇಗೆ?

Exit mobile version