Site icon Vistara News

Karnataka Election: ಮೇ 4ರಂದು ಒಂದೇ ದಿನ 7 ಕಡೆ ಬಿ.ವೈ. ವಿಜಯೇಂದ್ರ ಪ್ರಚಾರ; ಎಲ್ಲೆಲ್ಲಿ ಮತಬೇಟೆ? ಇಲ್ಲಿದೆ ಫುಲ್‌ ಡಿಟೇಲ್ಸ್

BY Vijayendra to campaign on May 4 Bagalkot Koppal Ballari Vijayanagar Chitradurga districts Karnataka Election updates

ಬೆಂಗಳೂರು: ಪ್ರಸಕ್ತ ಸಾಲಿನ ವಿಧಾನಸಭಾ ಚುನಾವಣೆಗೆ (Karnataka Election) ದಿನಗಣನೆ ಆರಂಭವಾಗಿದೆ. ರಾಜಕೀಯ ನಾಯಕರು ಸೇರಿದಂತೆ ಪಕ್ಷದ ಮುಖಂಡರು, ಅಭ್ಯರ್ಥಿಗಳು ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇದೇ ವೇಳೆ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಚುನಾವಣಾ ಪ್ರಚಾರ ಸಮಿತಿ ಸದಸ್ಯ, ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ (BY Vijayendra) ಅವರು ರಾಜ್ಯ ಪ್ರವಾಸವನ್ನು ಕೈಗೊಂಡಿದ್ದು, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳ ಹಲವು ಕಡೆ ಮೇ 4ರಂದು ಭೇಟಿ ನೀಡುತ್ತಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ವಿಜಯೇಂದ್ರ ಅವರ ಮೇ 4ರ ಚುನಾವಣಾ ಪ್ರಚಾರದ ವೇಳಾಪಟ್ಟಿ ಇಂತಿದೆ

1. ಬಾಗಲಕೋಟೆ ಜಿಲ್ಲೆಯ ಮುಧೋಳ ವಿಧಾನಸಭಾ ಕ್ಷೇತ್ರಕ್ಕೆ ಬಿ.ವೈ. ವಿಜಯೇಂದ್ರ ಅವರು ಗುರುವಾರ ಬೆಳಗ್ಗೆ 10 ಗಂಟೆಗೆ ಭೇಟಿ ನೀಡಲಿದ್ದು, ಬಿಜೆಪಿ ಅಭ್ಯರ್ಥಿ, ಸಚಿವ ಗೋವಿಂದ ಕಾರಜೋಳ ಅವರ ಪರ ಪ್ರಚಾರ ನಡೆಸಲಿದ್ದಾರೆ.

2. ಅಲ್ಲಿಂದ ಕೊಪ್ಪಳ ಜಿಲ್ಲೆಯ ಕನಕಗಿರಿಗೆ ಭೇಟಿ ನೀಡಲಿರುವ ಬಿ.ವೈ. ವಿಜಯೇಂದ್ರ, ಬೆಳಗ್ಗೆ 11.30ಕ್ಕೆ ಆಯೋಜಿಸಲಾಗಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ದಢೇಸೂಗೂರು ಪರ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ: Karnataka Election : ಬಜರಂಗಿ ಬಗ್ಗೆ ಮಾತಾಡುವ ಕಾಂಗ್ರೆಸಿಗರ ನವರಂಗಿ ಆಟ ಜನರಿಗೆ ಗೊತ್ತು ಎಂದ ಪ್ರತಾಪಸಿಂಹ

3. ಬಳಿಕ ಮಧ್ಯಾಹ್ನ 1 ಗಂಟೆಗೆ ಬಳ್ಳಾರಿಗೆ ಭೇಟಿ ನೀಡಲಿರುವ ಬಿ.ವೈ. ವಿಜಯೇಂದ್ರ, ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿ ಸಚಿವ ಶ್ರೀರಾಮುಲು ಪರ ಮತಯಾಚನೆಯನ್ನು ಮಾಡಲಿದ್ದಾರೆ.

4. ಮಧ್ಯಾಹ್ನ 3 ಗಂಟೆಗೆ ಬಳ್ಳಾರಿ ಜಿಲ್ಲೆಯ ಶಿರಗುಪ್ಪ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಬಿ.ವೈ. ವಿಜಯೇಂದ್ರ, ಅಲ್ಲಿ ಪಕ್ಷದ ಅಭ್ಯರ್ಥಿ ಎಂ.ಎಸ್.‌ ಸೋಮಲಿಂಗಪ್ಪ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ.

5. ಸಂಜೆ 4.30ಕ್ಕೆ ವಿಜಯನಗರ ಜಿಲ್ಲೆಗೆ ಭೇಟಿ ನೀಡಲಿರುವ ಬಿ.ವೈ. ವಿಜಯೇಂದ್ರ ಅವರು ಅಲ್ಲಿ ಬಿಜೆಪಿ ಅಭ್ಯರ್ಥಿ ಕೃಷ್ಣ ನಾಯಕ್‌ ಅವರ ಪರ ಪ್ರಚಾರ ನಡೆಸಲಿದ್ದಾರೆ.

6. ಸಂಜೆ 6 ಗಂಟೆಗೆ ಚಿತ್ರದುರ್ಗಕ್ಕೆ ಭೇಟಿ ನೀಡಲಿರುವ ಬಿ.ವೈ. ವಿಜಯೇಂದ್ರ, ಅಲ್ಲಿ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಜಿ.ಎಚ್.‌ ತಿಪ್ಪಾರೆಡ್ಡಿ ಪರ ಪ್ರಚಾರ ನಡೆಸಲಿದ್ದಾರೆ.

7. ರಾತ್ರಿ 7.15ಕ್ಕೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿಗೆ ಭೇಟಿ ನೀಡಲಿರುವ ಬಿ.ವೈ. ವಿಜಯೇಂದ್ರ, ಅಲ್ಲಿ ಪಕ್ಷದ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್‌ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಒಂದೇ ದಿನ ಏಳು ಕ್ಷೇತ್ರಗಳಲ್ಲಿ ಪ್ರಚಾರ

ಈಗಾಗಲೇ ರಾಜ್ಯದ ಹಲವು ಕಡೆ ಬಿ.ವೈ. ವಿಜಯೇಂದ್ರ ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ. ಒಂದು ಲಿಂಗಾಯತ ಸಮುದಾಯಗಳ ಮತ ಕ್ರೋಡೀಕರಣವಾದರೆ, ಯುವ ನಾಯಕ ಎಂಬ ಕಾರಣಕ್ಕೆ ಯುವಜನತೆಯ ಮತಗಳನ್ನು ಸೆಳೆಯುವ ತಂತ್ರವನ್ನು ಹೂಡಲಾಗುತ್ತಿದೆ. ಈ ನಿಟ್ಟಿನಲ್ಲಿ ಗುರುವಾರ ಒಂದೇ ದಿನ ಬಿ.ವೈ. ವಿಜಯೇಂದ್ರ ಅವರು ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ: Karnataka Election 2023 : ಅಬ್ಬಬ್ಬಾ! ಕಣದಲ್ಲಿವೆ 80ಕ್ಕೂ ಹೆಚ್ಚು ಪಕ್ಷಗಳು!! ಈ ಪಕ್ಷಗಳ ಹೆಸರೇ ವಿಶೇಷವಾಗಿದೆ ನೋಡಿ!

ಟ್ವೀಟ್‌ ಮಾಡಿರುವ ಬಿ.ವೈ. ವಿಜಯೇಂದ್ರ

ಈ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ. “ವಿಧಾನಸಭಾ ಚುನಾವಣೆಯ ಅಂಗವಾಗಿ ಮೇ 4ರ ಗುರುವಾರದಂದು ಮುಧೋಳ, ಕನಕಗಿರಿ, ಬಳ್ಳಾರಿ, ಶಿರುಗುಪ್ಪ, ಹೂವಿನಹಡಗಲಿ, ಚಿತ್ರದುರ್ಗ ಹಾಗೂ ಹಿರಿಯೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

Exit mobile version