Karnataka Election 2023: ಗುರುರಾಜ ಗಂಟಿಹೊಳೆ ಅಭಿಮಾನಕ್ಕಾಗಿ ಬರಿಗಾಲಲ್ಲೇ ಬಂದು ಮತ ಹಾಕಿದ ಬೈಂದೂರು ಯುವಕರು Vistara News
Connect with us

ಉಡುಪಿ

Karnataka Election 2023: ಗುರುರಾಜ ಗಂಟಿಹೊಳೆ ಅಭಿಮಾನಕ್ಕಾಗಿ ಬರಿಗಾಲಲ್ಲೇ ಬಂದು ಮತ ಹಾಕಿದ ಬೈಂದೂರು ಯುವಕರು

Assembly Election: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಅಭಿಮಾನಿಗಳು ಬರಿಗಾಲಿನಲ್ಲಿ ಬಂದು ಮತದಾನ ಮಾಡಿ ಗಮನ ಸೆಳೆದಿದ್ದಾರೆ.

VISTARANEWS.COM


on

Byndoor youths come barefoot to cast their vote
ಬೈಂದೂರಿನಲ್ಲಿ ಬರಿಗಾಲಿನಲ್ಲಿಯೇ ಮತ ಚಲಾವಣೆ ಮಾಡಿದ ಗುರುರಾಜ ಗಂಟಿಹೊಳೆ ಅಭಿಮಾನಿಗಳು
Koo

ಉಡುಪಿ: ಪ್ರಸಕ್ತ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಹಲವು ವಿಶೇಷತೆಗಳು ಇವೆ. ರಾಜಕೀಯ ಪಕ್ಷಗಳೂ ಸಹ ಹೊಸ ಮುಖಗಳಿಗೆ ಮಣೆ ಹಾಕಿವೆ. ಈ ವೇಳೆ ಬರಿಗಾಲ ಸೇವಕ ಎಂದೇ ಖ್ಯಾತಿ ಹೊಂದಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಅಭಿಮಾನಿಗಳು ಬರಿಗಾಲಿನಲ್ಲಿ ಬಂದು ಮತದಾನ ಮಾಡಿ ಗಮನ ಸೆಳೆದಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಬರಿಗಾಲಿನಲ್ಲಿಯೇ ಚುನಾವಣಾ ಪ್ರಚಾರ ಮಾಡಿದ್ದರು. ಕಾಲೇಜು ಶಿಕ್ಷಣದ ಬಳಿಕ ಬರಿಗಾಲಿನಲ್ಲಿಯೇ ನಡೆಯುತ್ತಿರುವ ಅವರು ಬರಿಗಾಲಿನ ಸಂತ ಎಂದು ಹೆಸರು ಪಡೆದಿದ್ದಾರೆ.

Byndoor youths come barefoot to cast their vote
ಬೈಂದೂರಿನಲ್ಲಿ ಮತಗಟ್ಟೆಗೆ ಬರಿಗಾಲಿನಲ್ಲಿಯೇ ಬಂದು ಮತದಾನ

ಇದನ್ನೂ ಓದಿ: Karnataka Election 2023 Live Updates: ರಾಜ್ಯ ವಿಧಾನಸಭೆ ಚುನಾವಣೆಯ ಕ್ಷಣಕ್ಷಣದ ಸುದ್ದಿ: ರಾಜ್ಯದಲ್ಲಿ ಶೇ. 52.18 ರಷ್ಟು ಹೆಚ್ಚು ಮತದಾನ

ಬರಿಗಾಲಲ್ಲೇ ಬಂದ ಗಂಟಿಹೊಳೆ ಫ್ಯಾನ್ಸ್‌

ಕರೆ ನೀಡಿದ್ದ ಅಣ್ಣಾಮಲೈ

ಈ ಸಂದರ್ಭದಲ್ಲಿ ಬೈಂದೂರಿಗೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ, ಬಿಜೆಪಿ ರಾಜ್ಯ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಅವರು, ಬರಿಗಾಲಿನಲ್ಲಿ ಬಂದು ಮತ ಹಾಕುವಂತೆ ಮನವಿ ಮಾಡಿದ್ದರು. ಅಣ್ಣಾಮಲೈ ಮನವಿಯ ಮೇರೆಗೆ ಬರಿಗಾಲಿನಲ್ಲಿ ಬಂದು ಅಭಿಮಾನಿಗಳು ಮತ ಹಾಕುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಉಡುಪಿ

Viral News: ಶಾಲೆಗೆ ನೀರು ಪೂರೈಸಲು ಹೊರಟಿದ್ದ ಟ್ಯಾಂಕರ್‌ ವಾಪಸ್‌; ನೀರು ಕೊಡ್ಬೇಡ ಎಂದು ಗ್ರಾಪಂ ಅಧ್ಯಕ್ಷ ಅವಾಜ್‌

Govt School: ಶಾಲಾ ಮಕ್ಕಳಿಗೆ ಕುಡಿಯಲು ನೀರು ಕೊಡಿ (Drinking Water) ಎಂದು ಶಿಕ್ಷಕರು ಕೇಳಿದರೆ, ಗ್ರಾಮ ಪಂಚಾಯತ್‌ ಅಧ್ಯಕ್ಷರೊಬ್ಬರು, ಶಾಲೆಗೆ ನೀರು ಕೊಡಬೇಡ ವಾಪಸ್ಸು ಬಾ ಎಂದು ಟ್ಯಾಂಕರ್‌ ಚಾಲಕನನ್ನು ವಾಪಸ್‌ ಕರೆಸಿಕೊಂಡಿದ್ದಾರೆ. ಇದಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು ಆಡಿಯೋ ವೈರಲ್‌ ಆಗಿದೆ.

VISTARANEWS.COM


on

Edited by

water issuse
ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಅಭಾವ
Koo

ಉಡುಪಿ: ಇಲ್ಲಿನ ವಂಡ್ಸೆ ಗ್ರಾಮ ಪಂಚಾಯತ್‌ ಅಧ್ಯಕ್ಷರ ವರ್ತನೆಗೆ ಪಂಚಾಯತ್‌ ಸದಸ್ಯರು ಕಿಡಿಕಾರಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರಿ ಶಾಲಾ ಮಕ್ಕಳಿಗೆ ಕುಡಿಯಲು ನೀರಿಲ್ಲ ಎಂದು ಶಿಕ್ಷಕರು ಪತ್ರವೊಂದನ್ನು ಬರೆದಿದ್ದರು. ಹೀಗಾಗಿ ಪಂಚಾಯತ್‌ ಸದಸ್ಯ ಪ್ರಶಾಂತ್‌ ಪೂಜಾರಿ ಶಾಲೆಗೆ ನೀರಿನ ಟ್ಯಾಂಕರ್‌ ಅನ್ನು ಕಳಿಸಿದ್ದರು. ಆದರೆ ಪಂಚಾಯತ್ ಅಧ್ಯಕ್ಷ, ಟ್ಯಾಂಕರ್‌ ಚಾಲಕನಿಗೆ ಅವಾಜ್‌ ಹಾಕಿ ನೀರು ಕೊಡಬೇಡ ಬಾ ಎಂದು ವಾಪಸ್‌ ಕರೆಸಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಆಡಿಯೊವೊಂದು ಬಹಿರಂಗಗೊಂಡಿದ್ದು, ವೈರಲ್‌ (Viral news) ಆಗಿದೆ.

ಟ್ಯಾಂಕರ್‌ ಚಾಲಕನ ತರಾಟೆ ತೆಗೆದುಕೊಂಡ ಪಂಚಾಯತ್ ಸದಸ್ಯ

ಶಾಲೆಗೆ ನೀರು ತಲುಪಿಸದ ಹಿನ್ನೆಲೆಯಲ್ಲಿ ಚಾಲಕನಿಗೆ ಫೋನ್‌ ಮೂಲಕ ಪಂಚಾಯತ್ ಸದಸ್ಯ ಪ್ರಶಾಂತ್‌ ಪೂಜಾರಿ ತರಾಟೆ ತೆಗೆದುಕೊಂಡಿದ್ದಾರೆ. ಶಾಲೆಗೆ ಯಾಕೆ ನೀರು ಪೂರೈಸಿಲ್ಲ ಎಂದು ಪಂಚಾಯತ್ ಸದಸ್ಯ ಕೇಳಿದಾಗ, ಅಧ್ಯಕ್ಷರು ಶಾಲೆಗೆ ನೀರು ಬಿಟ್ಟರೆ ಬಿಲ್ ಮಾಡುವುದಿಲ್ಲ ಎಂದಿದ್ದಾರೆ. ಹೀಗಿರುವಾಗ ನಾನೇನು ಮಾಡಲಿ ಸರ್‌ ಎಂದು ಅಸಹಾಯಕತೆ ತೋರಿದ್ದಾನೆ. ಚಾಲಕ ಹಾಗೂ ಪಂಚಾಯತ್ ಸದಸ್ಯ ಪ್ರಶಾಂತ್‌ ಪೂಜಾರಿ ನಡುವಿನ ಸಂಭಾಷಣೆಯ ಆಡಿಯೊ ವೈರಲ್‌ ಆಗಿದೆ.

ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ಪಂಚಾಯತ್ ಸದಸ್ಯ

ವಂಡ್ಸೆ ವ್ಯಾಪ್ತಿಗೆ ಬರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 400ಕ್ಕೂ ಹೆಚ್ಚು ಮಕ್ಕಳು ಓದುತ್ತಿದ್ದಾರೆ. ಇತ್ತೀಚೆಗೆ ಶಾಲೆಯಲ್ಲಿ ನೀರಿನ ಅಭಾವ ಉಂಟಾಗಿದೆ. ಹೀಗಾಗಿ ಶಾಲೆಯ ಶಿಕ್ಷಕರು ಶಾಲೆಗೆ ನೀರು ಬೇಕೆಂದು ಗ್ರಾಮ ಪಂಚಾಯತ್‌ಗೆ ಪತ್ರವೊಂದನ್ನು ಬರೆದಿದ್ದರು.

ಶಿಕ್ಷಕರ ಲಿಖಿತ ಪತ್ರಕ್ಕೆ ಸ್ಪಂದಿಸಿದ ಪಂಚಾಯತ್ ಸದಸ್ಯ ಪ್ರಶಾಂತ್‌ ಪೂಜಾರಿ ಪಂಚಾಯತ್ ವತಿಯಿಂದ ಕಳೆದ ಜೂ 7ರಂದು ಮಧ್ಯಾಹ್ನ 12:30ರ ಸುಮಾರಿಗೆ ಶಾಲೆಗೆ ನೀರಿನ ಟ್ಯಾಂಕರ್‌ ಕಳುಹಿಸಿದ್ದರು. ಆದರೆ, ಪಂಚಾಯತ್ ಅಧ್ಯಕ್ಷ ಟ್ಯಾಂಕರ್‌ ಚಾಲಕನಿಗೆ ಫೋನ್‌ ಮಾಡಿ ʻನೀರು ಕೊಡಬೇಡ ವಾಪಸ್‌ ಬಾʼ ಎಂದು ತಿಳಿಸಿದ್ದರಂತೆ.

ನೀರಿನ ಟ್ಯಾಂಕರ್‌

ಹೀಗಾಗಿ ಚಾಲಕ ಶಾಲಾ ಆವರಣದಲ್ಲೇ 2,750 ಲೀಟರ್ ಬ್ಯಾರಲ್‌ ಇರಿಸಿ ವಾಪಸ್‌ ಆಗಿದ್ದಾನೆ. ಬಳಿಕ ಜೂನ್‌ 8ರ ಬೆಳಗ್ಗೆ ಪುನಃ ಪಂಚಾಯತ್‌ ಅಧ್ಯಕ್ಷ, ಟ್ಯಾಂಕರ್ ಚಾಲಕನನ್ನು ಕರೆಸಿ, ಶಾಲೆಗೆ ನೀರು ಕೊಡುವುದು ಬೇಡ, ನೀರು ಕೊಟ್ಟಲ್ಲಿ ನೀರಿನ ಬಿಲ್‌ ಮಾಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Road Accident: ಅಪಘಾತದಲ್ಲಿ ಮೈಸೂರು ಬಿಜೆಪಿ ಮುಖಂಡ ಮರಣ; ಶಿವಮೊಗ್ಗ, ಕೊಡಗಿನಲ್ಲೂ ಹಾರಿಹೋಯ್ತು ಪ್ರಾಣ

ಹೀಗಾಗಿ ಪಂಚಾಯತ್‌ ಅಧ್ಯಕ್ಷರ ಬೇಜವಾಬ್ದಾರಿಗೆ ಬೇಸತ್ತಿರುವ ಪಂಚಾಯತ್ ಸದಸ್ಯ ಪ್ರಶಾಂತ್‌ ಪೂಜಾರಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಪಂಚಾಯತ್‌ ಅಧ್ಯಕ್ಷರು ಶಾಲೆಗೆ ನೀರು ಬಿಡದಂತೆ ಪಿಡಿಒ ಮತ್ತು ನೀರಿನ ಚಾಲಕನಿಗೆ ಧ್ಕಮಿ ಹಾಕಿದ್ದಾರೆ. ಹೀಗಾಗಿ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಜತೆಗೆ ಹರಸಾಹಸ ಪಟ್ಟು ಶಾಲೆಗೆ ನೀರಿನ ವ್ಯವಸ್ಥೆಯನ್ನು ಮಾಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉಡುಪಿ

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

weather Report: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ ಆಗದೇ ಇರುವುದು ತೀವ್ರ ನೀರಿನ ಅಭಾವಕ್ಕೆ ಕಾರಣವಾಗಿದ್ದು, ಮಂಗಳೂರು ವಿಶ್ವವಿದ್ಯಾಲಯವು (Mangalore University) ತನ್ನ ಕಾಲೇಜಿಗೆ ರಜೆಯನ್ನೇ ಘೋಷಿಸಿತ್ತು. ಇದೀಗ ಬಿಪರ್‌ಜಾಯ್‌ ಚಂಡಮಾರುತದಿಂದಾಗಿ (Cyclone Biparjoy) ಎಡಬಿಡದೆ ಮಳೆ (Rain News)ಸುರಿಯುತ್ತಿದೆ.

VISTARANEWS.COM


on

Edited by

Rain in mangalore
ಮಂಗಳೂರಲ್ಲಿ ಮಳೆ ಅಬ್ಬರ
Koo

ಮಂಗಳೂರು/ಬೆಂಗಳೂರು: ಬಿಪರ್‌ಜಾಯ್ ಚಂಡಮಾರುತ ಎಫೆಕ್ಟ್‌ನಿಂದಾಗಿ (Cyclone Biparjoy) ಶುಕ್ರವಾರ (ಜೂ.8) ಮುಂಜಾನೆ ಮಂಗಳೂರಿನಲ್ಲಿ ಬಿಡದೆ ಮಳೆ (Rain News) ಸುರಿಯುತ್ತಿದೆ. ಮುಂಜಾನೆಯೇ ಆರಂಭಗೊಂಡ ಮಳೆಯಿಂದ ಕಛೇರಿಗೆ ತೆರಳುವವರು, ಶಾಲಾ-ಕಾಲೇಜಿಗೆ ಹೋಗುವವರು ಕೊಂಚ (Weather Report) ಪರದಾಡಿದರು.

ಶುಕ್ರವಾರ ಮುಂಜಾನೆ ಮಂಗಳೂರಲ್ಲಿ ಬಿಡದೆ ಸುರಿಯುತ್ತಿರುವ ಮಳೆ

ಜೂನ್‌ 8 ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ವೇಳೆ ವಿದ್ಯುತ್‌ ವ್ಯತ್ಯಯ ಉಂಟಾಗಬಹುದು. ಬಿರುಗಾಳಿ ಸಹಿತ ಮಳೆಯಾಗುವ ಕಾರಣದಿಂದಾಗಿ ಮರದಡಿ ನಿಲ್ಲದಂತೆ ಸೂಚನೆ ನೀಡಲಾಗಿದೆ. ಇನ್ನು ಕರ್ನಾಟಕ ಕರಾವಳಿಯ ಸಮುದ್ರ ತೀರಾದಲ್ಲಿ ಗಾಳಿ ವೇಗವು 45-55 ಕಿ.ಮೀ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಐಎಂಡಿ ಎಚ್ಚರಿಕೆ ನೀಡಿದೆ.

ಬಿಪರ್‌ಜಾಯ್ ಚಂಡಮಾರುತ ಎಫೆಕ್ಟ್‌ನಿಂದಾಗಿ ಉತ್ತರಕನ್ನಡದ ಭಟ್ಕಳ, ಹೊನ್ನಾವರ, ಅಂಕೋಲಾ ತಾಲೂಕುಗಳಲ್ಲಿ ಬೆಳಗ್ಗೆ 9 ಗಂಟೆಯಿಂದ‌ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಬಿಪರ್‌ಜಾಯ್‌ ಚಂಡಮಾರುತ ಹಿನ್ನೆಲೆ ಜೂ.10 ರವರೆಗೆ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಡಲತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದು, ಭಾರೀ ಪ್ರಮಾಣದಲ್ಲಿ ಗಾಳಿ ಬೀಸುತ್ತಿದೆ. ಹೀಗಾಗಿ ತೀರ ಪ್ರದೇಶದ ನಿವಾಸಿಗಳಿಗೆ ಎಚ್ಚರಿಕೆಯಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇತ್ತ ಕುಮಟಾ, ಕಾರವಾರ ತಾಲೂಕಿನಲ್ಲಿ ಬಿಸಿಲಿನ ವಾತಾವರಣ ಇದೆ.

ಬೆಂಗಳೂರಲ್ಲಿ ಕೆಲವೊಮ್ಮೆ ವಾತಾವರಣವು ಬಿಸಿಲಿನಿಂದ ಕೂಡಿದ್ದರೆ ಮಧ್ಯಾಹ್ನದ ವೇಳೆ ಮೋಡ ಕವಿಯಲಿದೆ. ಸಂಜೆ ಅಥವಾ ರಾತ್ರಿಯಂದು ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮೈಸೂರು, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡ, ಗದಗ, ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಲಿದೆ. ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಅಲ್ಲಲ್ಲಿ ವರುಣ ಅಬ್ಬರಿಸಲಿದ್ದಾನೆ.


ಇದನ್ನೂ ಓದಿ:Mother Dairy: ಬಳಕೆದಾರರ ಮೇಲೆ ‘ಮದರ್ ಡೇರಿ’ ಮಮತೆ, ಅಡುಗೆ ಎಣ್ಣೆ ದರದಲ್ಲಿ ಭಾರೀ ಇಳಿಕೆ!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 42 ಡಿ.ಸೆ – 27 ಡಿ.ಸೆ
ಗದಗ: 37 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 35 ಡಿ.ಸೆ – 21 ಡಿ.ಸೆ
ಕಾರವಾರ: 33 ಡಿ.ಸೆ – 27 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಹೊನ್ನಾವರ: 33 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 32 ಡಿ.ಸೆ – 22 ಡಿ.ಸೆ

ಉತ್ತರ ಕನ್ನಡದಲ್ಲಿ ವರುಣಾರ್ಭಟ ಇಲ್ಲಿದೆ ನೋಡಿ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉಡುಪಿ

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

Weather Report: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌ನಿಂದಾಗಿ ರಾಜ್ಯಾದ್ಯಂತ ಇನ್ನೂ ಎರಡು ದಿನ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣ (Rain News) ಗುಡುಗಿದ್ದರೆ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಕೊಂಚ ತಗ್ಗಿದ್ದಾನೆ.

VISTARANEWS.COM


on

Edited by

Rain in koppal
Koo

ಬೆಂಗಳೂರು: ಬಿಪರ್‌ಜಾಯ್‌ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಇನ್ನೆರಡು ದಿನ ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮೈಸೂರು, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡ, ಗದಗ, ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಕೆಲವು ಕಡೆ ವ್ಯಾಪಕ ಮಳೆಯಾಗಲಿದೆ. ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಅಲ್ಲಲ್ಲಿ ವರುಣ ಅಬ್ಬರಿಸಲಿದ್ದಾನೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಮುನ್ನೆಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ಕೂಡ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ರಾಜ್ಯದಲ್ಲಿ ಬುಧವಾರದಂದು ಕರಾವಳಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಯಾದಗಿರಿಯ ಕವಾಡಿಮಟ್ಟಿ ಏ‌ಆರ್‌ಜಿ‌ 6 ಸೆಂ.ಮೀ ಮಳೆಯಾಗಿದೆ. ಕಲಬುರಗಿಯ ಸುಲೇಪೇಟೆ 3 ಸೆಂ.ಮೀ ಹಾಗೂ ಕೋಡ್ಲಾ, ಚಿಂಚೋಳಿ, ಕುಣಿಗಲ್, ಹೆಸರಘಟ್ಟ, ತುಮಕೂರಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಬೆಳ್ತಂಗಡಿ, ಕಾರವಾರ, ಕೋಟ, ಹೊನಾವರ ಹಾಗೂ ಮುಧೋಳೆ, ಅಡಕಿ, ಸೇಡಂ, ಸೈದಾಪುರ, ಬೀದರ್ ಪಿಟಿಒ, ಬೀದರ್, ಹುಮನಾಬಾದ್, ಬಾಳೆಹೊನ್ನೂರು, ಕೊಟ್ಟಿಗೆಹಾರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಗರಿಷ್ಠ ಉಷ್ಣಾಂಶ 41.5 ಡಿಗ್ರಿ ಸೆಲ್ಸಿಯಸ್ ಕಲಬುಗಿರಯಲ್ಲಿ ದಾಖಲಾಗಿದೆ.

Rain News
ಕೊಪ್ಪಳದಲ್ಲಿ ಮಳೆ ಅಬ್ಬರ

ಬಿರುಗಾಳಿ ಮಳೆಗೆ ಕೊಪ್ಪಳ ತತ್ತರ

ಕೊಪ್ಪಳ ತಾಲೂಕಿನ ಕುಟುಗನಹಳ್ಳಿ ಗ್ರಾಮದಲ್ಲಿ ಗುರುವಾರ (ಜೂ. 8) ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಮಳೆಯಿಂದಾಗಿ ಅಸ್ತಮಾ‌ ಕಾಯಿಲೆಗೆ ಔಷಧಿ ಪಡೆಯಲು ಬಂದಿದ್ದ ಜನರು ಪರದಾಡಿದರು. ಕುಟುಗನಹಳ್ಳಿಯಲ್ಲಿ ಅಸ್ತಮಾಕ್ಕೆ ವನಸ್ಪತಿ ಔಷಧಿ ನೀಡಲಾಗುತ್ತಿದೆ. ಔಷಧಿಗಾಗಿ ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಜನರು ಬಂದಿದ್ದಾರೆ. ಮಳೆಗೆ ಕೆಲವರು ಮರದಡಿ ಆಶ್ರಯ ಪಡೆದರೆ, ಹಲವರು ತಾವು ತಂದಿದ್ದ ಕೊಡೆಗಳ ಸಹಾಯವನ್ನು ಪಡೆದಿದ್ದರು. ಜತೆಗೆ ಅಕ್ಕಿ ಚೀಲವನ್ನು ಹಿಡಿದು ಕ್ಯೂನಲ್ಲಿ ನಿಂತಿರುವುದು ಕಂಡು ಬಂತು.

rain News
ಔಷಧಿ ಪಡೆಯಲು ಬಂದಿದ್ದ ಜನರಿಗೆ ಮಳೆಕಾಟ

ಕಾರಿನ ಮೇಲೆ ಉರುಳಿ ಬಿದ್ದ ಮರ

ಕೊಪ್ಪಳ ನಗರ ಹೊರವಲಯದ ವಿಶ್ವತೇಜ ಮೋಟರ್ಸ್ ಬಳಿ ಕಾರಿನ ಮೇಲೆ ಬೃಹತ್‌ ಮರವೊಂದು ಬಿದ್ದಿದೆ. ಡಸ್ಟರ್‌ ಕಾರನ್ನು ಸರ್ವಿಸ್‌ಗಾಗಿ ನಿಲ್ಲಿಸಲಾಗಿತ್ತು. ಭಾರಿ ಗಾಳಿ ಮಳೆಗೆ ಮರವು ಕಾರಿನ ಮೇಲೆ ಬಿದ್ದಿದ್ದು, ಜಖಂಗೊಂಡಿದೆ.

Rain News
ಭಾರಿ ಮಳೆಗೆ ಕಾರಿನ ಮೇಲೆ ಉರುಳಿ ಬಿದ್ದ ಮರ

ಇನ್ನು ಬಿಸಿಲಿನಿಂದ ಕಂಗೆಟ್ಟಿದ್ದ ಮಂಗಳೂರಿನ ಜನರಿಗೆ ವರುಣ ತಂಪೆರೆದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಮಳೆ ಸುರಿಯುತ್ತಿದೆ. ಮಳೆ ಇಲ್ಲದೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿತ್ತು. ಮಳೆಯಿಂದಾಗಿ ಜನರು ಸಂತಸಗೊಂಡಿದ್ದಾರೆ.

ಇದನ್ನೂ ಓದಿ: Monsoon Precaution: ಮಳೆಗಾಲಕ್ಕೆ ಶುರುವಾಯ್ತು ಕ್ಷಣಗಣನೆ; ಈ ಆ್ಯಪ್‌ಗಳು ಈಗ ನಿಮಗೆ ಅತ್ಯಗತ್ಯ

Rain News
ಕೋಲಾರದಲ್ಲಿ ಆಲಿಕಲ್ಲು ಸಹಿತ ಮಳೆ

ಕೋಲಾರದಲ್ಲಿ ಆಲಿಕಲ್ಲು ಮಳೆ

ಕೋಲಾರ ಹಾಗೂ ಶ್ರೀನಿವಾಸಪುರದಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಭಾರಿ ಮಳೆ ಸುರಿದಿದೆ. ಕೆಲವು ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆ ಆಗುತ್ತಿದ್ದು, ತರಕಾರಿ ತೋಟಗಳಿಗೆ ಹಾನಿ ಆಗಿದೆ. ಮಾವು ಬೆಳೆಗಾರರಿಗೆ ಕಾಯಿ ಉದುರುವ ಭೀತಿ ಎದುರಾಗಿದೆ. ಇನ್ನೂ ಎರಡು ದಿನಗಳ‌ ಕಾಲ ಕೋಲಾರ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಇದೆ. ಹೀಗಾಗಿ ರೈತರು ಮುಂಜಾಗ್ರತಾ ಕ್ರಮವನ್ನು ತೆಗೆದು ಕೊಳ್ಳಲು ಕೃಷಿ ವಿಜ್ಞಾನ ಕೇಂದ್ರ ಸೂಚನೆ ನೀಡಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉಡುಪಿ

Weather Report: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ರಾಜ್ಯಾದ್ಯಂತ ಇನ್ನೂ 4 ದಿನ ಜಡಿ ಮಳೆ

Weather Report: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದಾಗಿ ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Edited by

Rain news
ಸಂಗ್ರಹ ಚಿತ್ರ
Koo

ಬೆಂಗಳೂರು: ಬಿಪರ್‌ಜಾಯ್‌ ಸೈಕ್ಲೋನ್‌ (Cyclone Biporjoy) ಎಫೆಕ್ಟ್‌ನಿಂದಾಗಿ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ (Weather Report) ಇರಲಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್‌, ಗದಗ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಬಾಗಲಕೋಟೆ, ಧಾರವಾಡ, ಹಾವೇರಿಯಲ್ಲಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಲ್ಲೂ ಮಳೆಯ ಅಬ್ಬರ ಇರಲಿದೆ. ವಿಜಯನಗರ, ದಾವಣಗೆರೆಯಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ.

ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ತಾಪಮಾನ ಏರಿಕೆ ಮುನ್ಸೂಚನೆ

ಮಳೆ ಎಚ್ಚರಿಕೆಯ ನಡುವೆಯೂ ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಹೆಚ್ಚಾಗುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ಯಿಂದ 60 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣ ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Cyclone Biparjoy: ಬಿಪರ್‌ಜಾಯ್‌ ಚಂಡಮಾರುತ ಭೀತಿ; ಈ ಪದದ ಅರ್ಥ ಏನು? ಮೊದಲು ಎಲ್ಲಿ ಬಳಕೆ?

ಮಂಗಳವಾರ (ಜೂ.6) ಶಿವಮೊಗ್ಗದ ಹೊಳೆಹೊನ್ನೂರು, ಹಾಸನದ ಚನ್ನರಾಯಪಟ್ಟಣದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಕಲಬುರಗಿಯ ಮಹಾಗಾವ್, ಯಾದಗಿರಿಯ ಶೋರಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಗರಿಷ್ಠ ಉಷ್ಣಾಂಶ 39.9 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
western ghats in rain
ಪ್ರಮುಖ ಸುದ್ದಿ6 mins ago

Monsoon Travel: ಮಲೆನಾಡಿನ ಮಳೆಹಾಡಿನ ಹೊಸತನ! ರಾಜ್ಯದ ಈ ಟಾಪ್‌ 5 ತಾಣಗಳಿಗೆ ಮಳೆಯಲ್ಲೊಮ್ಮೆ ಭೇಟಿ ಕೊಡಿ

Monsoon Fashion 2023
ಫ್ಯಾಷನ್50 mins ago

Monsoon Fashion 2023: ಫ್ಯಾಷನ್‌ ಲೋಕಕ್ಕೆ ಲಗ್ಗೆ ಇಟ್ಟ ಮಾನ್ಸೂನ್‌ ಸೀಸನ್‌ ವೈಬ್ರೆಂಟ್‌ ಔಟ್‌ಫಿಟ್ಸ್!

Chamarajanagar oxygen tragedy and Dinesh Gundu Rao
ಆರೋಗ್ಯ53 mins ago

Dinesh Gundu Rao: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ; ರೆಡಿ ಆಗ್ತಿದೆ ಡಿಪಿಆರ್!

Manja Thread dead person
ಕರ್ನಾಟಕ55 mins ago

Manja Thread: ಯಾರೋ ಹಾರಿಸಿದ ಗಾಳಿಪಟದ ಮಾಂಜಾ ದಾರ ತೆಗೆಯಿತು ಅಮಾಯಕನ ಪ್ರಾಣ!

Lock and unlock of aadhar services through online
ತಂತ್ರಜ್ಞಾನ59 mins ago

Aadhaar Services: ಆನ್‌ಲೈನ್ ಮೂಲಕ ಆಧಾರ್ ‘ಲಾಕ್’ ಮತ್ತು ‘ಅನ್‌ಲಾಕ್’ ಮಾಡುವುದು ಹೇಗೆ?

Gujarat High Court On Termination Of Pregnancy
ದೇಶ1 hour ago

17 ವರ್ಷದ ಹೆಣ್ಣುಮಕ್ಕಳು ಮಗು ಹೆರುವ ಕಾಲವಿತ್ತು; ರೇಪ್‌ ಸಂತ್ರಸ್ತೆಯ ಗರ್ಭಪಾತ ಬೇಡವೆಂದ ಹೈಕೋರ್ಟ್

Virat Kohli troll
ಕ್ರಿಕೆಟ್1 hour ago

WTC Final 2023: ಹಣಕ್ಕಾಗಿ ಅಲ್ಲ, ದೇಶಕ್ಕಾಗಿ ಆಡು; ಔಟಾದ ಬಳಿಕ ಊಟದ ಜತೆ ಬೈಗುಳ ತಿಂದ ಕೊಹ್ಲಿ

Appeals to CM not to increase liquor prices
ಕರ್ನಾಟಕ2 hours ago

Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್‌ ಜಾಸ್ತಿ ಮಾಡ್ಬೇಡಿ; BPL ಕಾರ್ಡ್‌ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!

A new country is ready in just Rs 15 lakh and the name is Slowjamastan
ಪ್ರಮುಖ ಸುದ್ದಿ2 hours ago

New Country: ಕೇವಲ 15 ಲಕ್ಷ ರೂ.ನಲ್ಲಿ ರೆಡಿ ಆಯ್ತು ಹೊಸ ದೇಶ, ಹೆಸರು ಸ್ಲೋಜಾಮ್‌ಸ್ತಾನ!

water issuse
ಉಡುಪಿ2 hours ago

Viral News: ಶಾಲೆಗೆ ನೀರು ಪೂರೈಸಲು ಹೊರಟಿದ್ದ ಟ್ಯಾಂಕರ್‌ ವಾಪಸ್‌; ನೀರು ಕೊಡ್ಬೇಡ ಎಂದು ಗ್ರಾಪಂ ಅಧ್ಯಕ್ಷ ಅವಾಜ್‌

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ12 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Cancellation of tenders for 108 ambulances and Dinesh Gundu rao
ಆರೋಗ್ಯ5 hours ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ5 hours ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ5 hours ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ6 hours ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ21 hours ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ23 hours ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ1 day ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ2 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ2 days ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ3 days ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

ಟ್ರೆಂಡಿಂಗ್‌

error: Content is protected !!