JDS National President: ದೇವೇಗೌಡರಿಗೆ ಗೇಟ್‌ ಪಾಸ್‌; ಜೆಡಿಎಸ್‌ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು! - Vistara News

ಕರ್ನಾಟಕ

JDS National President: ದೇವೇಗೌಡರಿಗೆ ಗೇಟ್‌ ಪಾಸ್‌; ಜೆಡಿಎಸ್‌ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು!

JDS President: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್‌ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ. ನಾಣು ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಲಾಗಿತ್ತು. ಆದರೆ, ಬಂಡಾಯವೆದ್ದಿರುವ ಇಬ್ರಾಹಿಂ ಬಣದಿಂದ ಇದೀಗ ನೂತನ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

VISTARANEWS.COM


on

CK Nanu And HD Devegowda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಜೆಪಿ ಜತೆ ಜೆಡಿಎಸ್‌ ಮೈತ್ರಿ ಘೋಷಿಸಿದ ಬಳಿಕ ದಳ ಇಬ್ಭಾಗವಾಗಿದೆ. ಸಿಎಂ ಇಬ್ರಾಹಿಂ ಸೇರಿ ಹಲವು ಅಲ್ಪಸಂಖ್ಯಾತ ಮುಖಂಡರು ದಳಪತಿಗಳ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಆದರೆ, ಇದೀಗ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಎಚ್‌.ಡಿ. ದೇವೇಗೌಡರನ್ನು ನಿರಾಕರಿಸಿರುವ ಬಂಡಾಯ ನಾಯಕರು, ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ (JDS National President) ಸಿ.ಕೆ.ನಾಣು ಅವರನ್ನು ನೇಮಕ ಮಾಡಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಜೆಡಿಎಸ್ ಉಚ್ಚಾಟಿತ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ನೇತೃತ್ವದಲ್ಲಿ ಸೋಮವಾರ ನಡೆದ ಸರ್ವಸದಸ್ಯರ ಸಭೆಯಲ್ಲಿ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಕೇರಳದ ಸಿ.ಕೆ. ನಾಣು ಅವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ನೂತನ ರಾಷ್ಟ್ರೀಯ ಅಧ್ಯಕ್ಷರ ಹೆಸರನ್ನು ತೆಲಂಗಾಣ ಜೆಡಿಎಸ್ ಅಧ್ಯಕ್ಷ ಸೂರಿ ಘೋಷಿಸಿದರು. ಈ ಮೂಲಕ ದೇವೇಗೌಡರಿಗೆ ಸಿ.ಎಂ. ಇಬ್ರಾಹಿಂ ಬಣ ಸೆಡ್ಡು ಹೊಡೆದಿದೆ.

ಇದನ್ನೂ ಓದಿ | Assembly Session : ಸಚಿವ ಜಮೀರ್‌ ಅಹಮದ್ ವಜಾಕ್ಕೆ ಬಿಜೆಪಿ ಪಟ್ಟು;‌ ಸದನದಲ್ಲಿ ಕೋಲಾಹಲ

ನೂತನ ರಾಷ್ಟ್ರೀಯ ಅಧ್ಯಕ್ಷರಿಗೆ ಶುಭಕೋರಿ ಮಾತನಾಡಿದ ಸಿ.ಎಂ. ಇಬ್ರಾಹಿಂ ಅವರು, ದೇವೇಗೌಡರಿಗೆ ಈಗ 92 ವರ್ಷ ವಯಸ್ಸಾಗಿದೆ. ಆದರೆ ಈಗ ಅವರು ತಮ್ಮ ಸಿದ್ಧಾಂತ ಕೈ ಬಿಟ್ಟಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡಲಾಗಿದೆ. ಇದು ನನ್ನ ನಿರ್ಧಾರ ಅಲ್ಲ, ಪಕ್ಷದ ಕೌನ್ಸಿಲ್ ನಿರ್ಧಾರ. ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಅಂದಿನ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿಯವರಿಗೂ ಆಹ್ವಾನ ನೀಡಲಾಗುತ್ತದೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ನಾವು ಇಂಡಿಯಾ ಕೂಟದ ಜತೆ ಇರುತ್ತೇವೆ

ಐದು ಎಂಎಲ್ಎಗಳು ನಮ್ಮ ಜತೆಗೆ ಇದ್ದಾರೆ. ಈಗ ಅವರ ಹೆಸರು ಬಹಿರಂಗ ಮಾಡಲ್ಲ. ಐದು ಶಾಸಕರು 12 ಆಗಬೇಕು, ಅದಕ್ಕಾಗಿ ಕಾಯುತ್ತಿದ್ದೇನೆ. ಲಾಲು ಪ್ರಸಾದ್ ಯಾದವ್ ಮತ್ತು ನಿತೀಶ್ ಜೊತೆಗೆ ಚರ್ಚೆ ಮಾಡಿ‌, ಲೋಕಸಭಾ ಚುನಾವಣೆಯಲ್ಲಿ ಎಲ್ಲಿ ನಾವು ಸ್ಪರ್ಧೆ ಮಾಡಬೇಕು ಅಂತ ತೀರ್ಮಾನ ಮಾಡುತ್ತೇವೆ. ದೇಶದಲ್ಲಿ ಎನ್‌ಡಿಎ, ಇಂಡಿಯಾ ಒಕ್ಕೂಟ ಇದೆ. ನಾವು ಇಂಡಿಯಾ ಜತೆ ಇರಲಿದ್ದೇವೆ ಎಂದು ಘೋಷಣೆ ಇಬ್ರಾಹಿಂ ಮಾಡಿದರು.

ದೇವೇಗೌಡರು ಮಕ್ಕಳ ಹಿತಕ್ಕಾಗಿ ಪಕ್ಷ ಬಲಿ ಕೊಟ್ಟರು, ಸಿದ್ಧಾಂತವನ್ನು ಗಾಳಿಗೆ ತೂರಿದರು. ನಾವು ಮೂರು ಅವಕಾಶ ಕೊಟ್ಟೆವು, ಆದರೆ ನಮ್ಮ‌ ಮಾತು ಕೇಳಲಿಲ್ಲ. ಮೂರು ತಿಂಗಳಲ್ಲಿ ಲೋಕಸಭಾ ಚುನಾವಣೆ ಬರಲಿದೆ. ಲೋಕಸಭೆಯಲ್ಲಿ ಎಲ್ಲೆಲ್ಲಿ ಸ್ಪರ್ಧೆ ಮಾಡಬೇಕು ಎಂಬ ಕುರಿತು ನಿರ್ಧಾರ ಮಾಡಲಿದ್ದೇವೆ. ಸೀಟು ಹಂಚಿಕೆ ಕುರಿತು ರಾಹುಲ್ ಗಾಂಧಿ, ಲಾಲು, ನಿತೀಶ್, ಅಖಿಲೇಶ್ ಯಾದವ್ ಜತೆ ಚರ್ಚೆ ಮಾಡಲಿದ್ದೇವೆ. ರಾಜ್ಯದ ಜನತೆ ಮೇಲೆ‌ ವಿಶ್ವಾಸವಿದೆ. ತತ್ವ ಸಿದ್ಧಾಂತ, ನ್ಯಾಯದ ಪರ ಇರುವ ನಮ್ಮನ್ನು ಜನರು ಬೆಂಬಲಿಸುತ್ತಾರೆ ಎಂದರು.

ಜಯಪ್ರಕಾಶ್ ನಾರಾಯಣರ ಸಿದ್ಧಾಂತದ ಮೇಲೆ ಜನತಾ ಪಕ್ಷ ಕಟ್ಟಲಾಯಿತು. ಎಲ್ಲಾ ರಾಜ್ಯಗಳ ಅಧ್ಯಕ್ಷರ ನೇಮಕ ಅಧಿಕಾರ ನಾಣು ಅವರಿಗೆ ನೀಡಲಾಗಿದೆ. ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಮಾಡಲಾಗುತ್ತದೆ. ಹಲವು ಹಿರಿಯರು ನಮಗೆ ಆದರ್ಶ. ಅದರ್ಶವಾದಿಗಳು ಸತ್ತರೂ ಅವರ ಅದರ್ಶ ಶಾಶ್ವತವಾಗಿ ಇರುತ್ತದೆ. ಕೆಲವರು ಬದುಕಿದ್ದರೂ ಅದರ್ಶ ಬಿಟ್ಟು ಸತ್ತಂತೆ ಇರುತ್ತಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ | ವಿಧಾನಸೌಧ ರೌಂಡ್ಸ್‌: ಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೊ; ಮೆಚ್ಚುಗೆ ಗಳಿಸಿದ ಖಾದರ್‌ ನಡೆ

ನಮಗೇ ಪಕ್ಷದ ಚಿಹ್ನೆ ಸಿಗಬೇಕು

ನಾನು ಹುಟ್ಟಿದ್ದು ಸಿದ್ಧಾಂತಕ್ಕಾಗಿ, ವಾಜಪೇಯಿಯವರು ಮಂತ್ರಿಯಾಗಲು ಕರೆದರು ನಾನು ಹೋಗಲಿಲ್ಲ. ಗವರ್ನರ್ ಆಗಲು ಕರೆದರು ನಾನು ಹೋಗಲಿಲ್ಲ. ದೇವೇಗೌಡರ ಕುಟುಂಬ ಜೇನು ಗೂಡಿಗೆ ಕೈ ಹಾಕಿದೆ. ಕುಟುಂಬದ ಹಿತಕ್ಕೆ ಪಕ್ಷ ಬಲಿ ಮಾಡಿದೆ. ಹೀಗಾಗಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ದೇವೇಗೌಡರನ್ನು ಕೆಳಗಿಳಿಸಲಾಗಿದೆ. ದೇವೇಗೌಡರ ಜಾಗಕ್ಕೆ ಸಿ.ಕೆ. ನಾಣು ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ನಿಜವಾದ ಜನತಾದಳ ಪಕ್ಷ. ನಮ್ಮದು ಸಿದ್ಧಾಂತ ಹೊಂದಿರುವ ಜೆಡಿಎಸ್ ಪಕ್ಷ. ನಮಗೇ ಜೆಡಿಎಸ್ ಪಕ್ಷದ ಚಿಹ್ನೆ ಕೊಡಬೇಕು. ಇಂದಿನ ಬೆಳವಣಿಗಳ ಬಗ್ಗೆ ಚುನಾವಣೆ ಆಯೋಗಕ್ಕೂ ತಿಳಿಸುತ್ತೇವೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Double Decker Flyover : ಬೆಂಗಳೂರಿನ ಮೊದಲ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಕೊನೆಗೂ ಸಿದ್ಧ; ಯಾವಾಗಿಂದ ಸಂಚಾರಕ್ಕೆ ಅವಕಾಶ

Double Decker Flyover: ಹಲವು ವಿಳಂಬಗಳ ನಂತರ ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಕೊನೆಗೂ ಸಿದ್ಧವಾಗಿದೆ. ಹಳದಿ ಮಾರ್ಗವಾದ ಆರ್‌ವಿ ರಸ್ತೆ- ಬೊಮ್ಮಸಂದ್ರದ ಮುಖ್ಯ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ (Namma Metro) ನಡೆಸಲಾಗಿದೆ.

VISTARANEWS.COM


on

By

Bengalurus first double-decker flyover ready
Koo

ಬೆಂಗಳೂರು: ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ (Double Decker Flyover) ಕೊನೆಗೂ ಸಿದ್ಧವಾಗಿದೆ. ರಾಗಿ ಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ ಹಳದಿ ಮಾರ್ಗದ (ಆರ್‌ವಿ ರಸ್ತೆ- ಬೊಮ್ಮಸಂದ್ರ) 3.3 ಕಿ.ಮೀ ಉದ್ದದ ರಸ್ತೆ ಮೇಲ್ಸೇತುವೆ ಪೂರ್ಣಗೊಂಡಿದೆ. ಜೂನ್‌ 15ರಂದು ಅಥವಾ ನಂತರ ರಾಗಿಗುಡ್ಡದಿಂದ ಸಿಎಸ್‌ಬಿ ಒಂದು ಬದಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಆದರೆ ಇದಕ್ಕೂ ಮುನ್ನ ಅಧಿಕಾರಿಗಳು ಅಂತಿಮ ತಪಾಸಣೆ ನಡೆಸಲಿದ್ದಾರೆ. ಕೆಳ ಡೆಕ್ ಅನ್ನು ವಾಹನಗಳ ಸಂಚಾರಕ್ಕೆ ಇದ್ದರೆ, ಮೇಲಿನ ಡೆಕ್ ನಮ್ಮ ಮೆಟ್ರೋಗಾಗಿ ಬಳಕೆ ಮಾಡಲಾಗುತ್ತದೆ.

ಬಿಎಂಆರ್‌ಸಿಎಲ್‌ ಸಿಎಸ್‌ಬಿ ಜಂಕ್ಷನ್‌ನಲ್ಲಿ 5 ಲೂಪ್‌ಗಳು (A,B,C,D ಮತ್ತುE) ಮತ್ತು ರ‍್ಯಾಂಪ್‌ಗಳನ್ನು ನಿರ್ಮಿಸುತ್ತಿದೆ. ಎ,ಬಿ,ಸಿ ಲೂಪ್‌ಗಳು ರಾಗಿಗುಡ್ಡ / ಬಿಟಿಎಂ ಲೇಔಟ್ ಕಡೆಯಿಂದ ಕೆ.ಆರ್.ಪುರಂ ಮತ್ತು ಹೊಸೂರು ರಸ್ತೆಯನ್ನು ಸಂಪರ್ಕಿಸಲು ಸಾಧ್ಯವಾಗುತ್ತದೆ. ಈಗಾಗಲೇ ಎ,ಬಿ, ಸಿ ರ‍್ಯಾಂಪ್‌ಗಳಲ್ಲಿ ಎಲ್ಲಾ ಕಾರ್ಯಗಳು ಪೂರ್ಣಗೊಂಡಿದ್ದು, ಜೂನ್‌ನಲ್ಲಿ ತೆರೆಯುವ ನಿರೀಕ್ಷೆಯಿದೆ. 2025ರ ಜೂನ್ ವೇಳೆಗೆ ಡಿ ಮತ್ತು ಇ ರ‍್ಯಾಂಪ್‌ಗಳು ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಗ್ನಲ್‌ ಫ್ರೀ ಕಾರಿಡಾರ್‌

ಫ್ಲೈಓವರ್‌ ಈಗಿರುವ ರಸ್ತೆಯಿಂದ 8 ಮೀಟರ್ ಎತ್ತರದಲ್ಲಿದ್ದರೆ, ಮೆಟ್ರೋ ವಯಾಡಕ್ಟ್ 16 ಮೀಟರ್ ಎತ್ತರದಲ್ಲಿದೆ. ಈಗಾಗಲೇ ರಸ್ತೆ ಮತ್ತು ಮೆಟ್ರೋ ಸ್ಟ್ರಕ್ಚರ್ಸ್ ಜೈಪುರ, ನಾಗ್ಪುರ ಮತ್ತು ಮುಂಬೈನಂತಹ ನಗರಗಳಲ್ಲಿ ಇವೆ. ರಾಗಿಗುಡ್ಡ ಮತ್ತು ಸಿಎಸ್‌ಬಿ ನಡುವಿನ ವಿಭಾಗವು ಸಿಗ್ನಲ್ ಫ್ರೀ ಕಾರಿಡಾರ್ ಆಗಲಿದೆ. ಇದರಿಂದ ಪೀಕ್‌ ಸಮಯದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ನಿರೀಕ್ಷೆಯಿದೆ. ರಾಗಿಗುಡ್ಡದಿಂದ ಬರುವ ವಾಹನಗಳು ಸಿಗ್ನಲ್ ಇಲ್ಲದೆ ಸಿಎಸ್‌ಬಿ ದಾಟಿ ಎಚ್ಎಸ್ಆರ್ ಲೇಔಟ್ ಮತ್ತು ಹೊಸೂರು ರಸ್ತೆ ಕಡೆಗೆ ತಲುಪಬಹುದಾಗಿದೆ. ಔಟರ್‌ ರಿಂಗ್‌ ರೋಡ್‌ ಮತ್ತು ಹೊಸೂರು ರಸ್ತೆಯನ್ನು ಸೇರುವ ಸಿಎಸ್‌ಬಿ ಜಂಕ್ಷನ್ ಬೆಂಗಳೂರಿನ ಅತ್ಯಂತ ಜನನಿಬಿಡ ಜಂಕ್ಷನ್‌ಗಳಲ್ಲಿ ಒಂದಾಗಿದೆ. ಈ ಜಂಕ್ಷನ್ ಔಟರ್‌ ರಿಂಗ್‌ ರೋಡ್‌ನಲ್ಲಿ ಬ್ಲೂ ಲೈನ್ (ಸಿಎಸ್‌ಬಿ-ಕೆಆರ್ ಪುರಂ) ಮತ್ತು ಯೆಲ್ಲೋ ಲೈನ್ (ಆರ್‌ವಿ ರಸ್ತೆ-ಬೊಮ್ಮಸಂದ್ರ) ಎರಡು ಮೆಟ್ರೋ ನಿಲ್ದಾಣಗಳನ್ನು ಹೊಂದಿದೆ.

ಇದನ್ನೂ ಓದಿ: Road Accident : ಪ್ರತ್ಯೇಕ 5 ಕಡೆಗಳಲ್ಲಿ ಆ್ಯಕ್ಸಿಡೆಂಟ್‌; ಕಾರು ಡಿಕ್ಕಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಸವಾರ ಸಾವು

ಯೆಲ್ಲೋ ಲೈನ್‌ ಕಾರಿಡಾರ್‌ ಟ್ರಯಲ್‌ ರನ್‌

ಜೂನ್‌ 13ರಂದು ಯೆಲ್ಲೋ ಮಾರ್ಗವಾದ ಆರ್‌ವಿರಸ್ತೆ – ಬೊಮ್ಮಸಂದ್ರದ ಮುಖ್ಯ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ನಡೆಸಲಾಗಿದೆ. ಈ ಹಿಂದೆ ಜೂನ್ 7 ರಂದು ನಿಗದಿಯಾಗಿದ್ದ ಪ್ರಾಯೋಗಿಕ ಸಂಚಾರವನ್ನು ತಾಂತ್ರಿಕ ಸಮಸ್ಯೆಗಳಿಂದಾಗಿ ಮುಂದೂಡಲಾಯಿತು. ಇನ್ಫೋಸಿಸ್ ಮತ್ತು ಬಯೋಕಾನ್ ನಂತಹ ಪ್ರಮುಖ ಕಂಪನಿಗಳನ್ನು ಹೊಂದಿರುವ ಬೆಂಗಳೂರಿನ ಟೆಕ್ ಹಬ್ ಎಲೆಕ್ಟ್ರಾನಿಕ್ಸ್ ಸಿಟಿಯನ್ನು ಮೆಟ್ರೋ ಜಾಲಕ್ಕೆ ಸಂಪರ್ಕಿಸುವ ನಿಟ್ಟಿನಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ.

ಆರ್.ವಿ.ರಸ್ತೆ ಮತ್ತು ಬೊಮ್ಮಸಂದ್ರವನ್ನು ಸಂಪರ್ಕಿಸುವ 18.8 ಕಿ.ಮೀ ಹಳದಿ ಮಾರ್ಗವು ಮೊದಲು 2021ರಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಯಿತ್ತು, ಆದರೆ ಬೋಗಿಗಳು ಲಭ್ಯವಿಲ್ಲದ ಕಾರಣ ಬಿಎಂಆರ್‌ಸಿಎಲ್ ಗಡುವನ್ನು 2024 ರ ಡಿಸೆಂಬರ್‌ಗೆ ಮುಂದೂಡಿತು. ಸದ್ಯ ಈ ಮಾರ್ಗವನ್ನು ಸಾರ್ವಜನಿಕರಿಗೆ ತೆರೆಯುವ ಮೊದಲು ರೈಲ್ವೆ ಮಂಡಳಿಯಿಂದ ತಾಂತ್ರಿಕ ಅನುಮೋದನೆ ಮತ್ತು ಮೆಟ್ರೋ ರೈಲು ಸುರಕ್ಷತಾ ಆಯುಕ್ತರಿಂದ (ಸಿಎಂಆರ್ಎಸ್) ಅನುಮೋದನೆ ಸಿಗಬೇಕಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉದ್ಯೋಗ

Job Alert: ಪದವೀಧರರಿಗೆ ಗುಡ್‌ನ್ಯೂಸ್‌; ಪಶುವೈದ್ಯ ಸೇವಾ ಇಲಾಖೆಯಲ್ಲಿದೆ 400 ವೈದ್ಯಾಧಿಕಾರಿ ಹುದ್ದೆ

Job Alert: ಕರ್ನಾಟಕದಲ್ಲೇ ಉದ್ಯೋಗ ನಿರ್ವಹಿಸಬೇಕು ಎನ್ನುವ ಕನಸು ಕಾಣುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಖಾಲಿ ಇರುವ ಬರೋಬ್ಬರಿ 400 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್‌ 14ರಿಂದ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನಾಂಕ ಜೂನ್‌ 24.

VISTARANEWS.COM


on

Job Alert
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಕರ್ನಾಟಕದಲ್ಲೇ ಉದ್ಯೋಗ ನಿರ್ವಹಿಸಬೇಕು ಎನ್ನುವ ಕನಸು ಕಾಣುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ (Animal Husbandry & Veterinary Services Karnataka) ಖಾಲಿ ಇರುವ ಬರೋಬ್ಬರಿ 400 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (AHVS Karnataka Recruitment 2024). ಪಶು ವೈದ್ಯಾಧಿಕಾರಿ ಹುದ್ದೆ ಇದಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಿಸಲಾಗುತ್ತದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್‌ 14ರಿಂದ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನಾಂಕ ಜೂನ್‌ 24 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಒಟ್ಟು 400 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್‌ ಮೀಸಲಿಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ಪಶುವೈದ್ಯಕೀಯ ವಿಜ್ಞಾನ ವಿಶ್ವ ವಿದ್ಯಾನಿಲಯ ಅಥವಾ ಕೃಷಿ ವಿಶ್ವ ವಿದ್ಯಾನಿಲಯದಿಂದ ಬಿ.ವಿ.ಎಸ್‌.ಸಿ. / ಬಿ.ವಿ.ಎಸ್‌.ಸಿ ಆ್ಯಂಡ್‌ ಎಎಚ್‌ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಪ್ರವರ್ಗ 2 ಎ, 2 ಬಿ, ಪ್ರವರ್ಗ 3 ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ 52,640 ರೂ. ಮಾಸಿಕ ವೇತನ ದೊರೆಯಲಿದೆ.

AHVS Karnataka Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (ahvs.karnataka.gov.in).
  • ಹೆಸರು, ಫೋನ್‌ ನಂಬರ್‌ ನೀಡಿ ನಿಮ್ಮ ಹೆಸರು ನೋಂದಾಯಿಸಿ.
  • ಲಾಗಿನ್‌ ಆಗಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊಗಳನ್ನು ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ಮಾಹಿತಿಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನು ಗಮನಿಸಿ

  • ಈ ನೇಮಕಾತಿ ಗುತ್ತಿಗೆ ಆಧಾರದಲ್ಲಿ ನಡೆಯುತ್ತಿದ್ದು, ತಾತ್ಕಾಲಿಕವಾಗಿರುತ್ತದೆ.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕದಲ್ಲಿ ವಾಸವಾಗಿರಬೇಕು.
  • ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಮಾಸಿಕ ವೇತನಕ್ಕಿಂತ ಹೊರತುಪಡಿಸಿ ಬೇರೆ ಭತ್ಯೆ ನೀಡಲಾಗುವುದಿಲ್ಲ.
  • ನಿಯುಕ್ತಿಗೊಳಿಸುವ ಸ್ಥಳದಲ್ಲಿಯೇ ಅಭ್ಯರ್ಥಿಗಳು ಕರ್ತವ್ಯ ನಿರ್ವಹಿಸಬೇಕು.
  • ಉದ್ಯೋಗ ತ್ಯಜಿಸುವುದಿದ್ದರೆ 1 ತಿಂಗಳು ಮುಂಚಿತವಾಗಿಯೇ ತಿಳಿಸಬೇಕು.
  • ಅಭ್ಯರ್ಥಿಗಳು ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲು ಬದ್ಧರಾಗಿರಬೇಕು.

ಹೆಚ್ಚಿನ ಮಾಹಿತಿಗೆ, ಯಾವುದೇ ಸಂಶಯ ನಿವಾರಣೆಗೆ ದೂರವಾಣಿ ಸಂಖ್ಯೆ 080-23414446ಕ್ಕೆ ಕರೆ ಮಾಡಿ.

ಇದನ್ನೂ ಓದಿ: Job Alert: ಎಚ್‌ಎಎಲ್‌ನಲ್ಲಿದೆ ಉದ್ಯೋಗಾವಕಾಶ; ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Continue Reading

ಮಂಡ್ಯ

Drowned in water : ಈಜಲು ಕಾವೇರಿ ನದಿಗಿಳಿದ ಬಾಲಕರಿಬ್ಬರು ಜಲ ಸಮಾಧಿ

Drowned in water : ಕುಟುಂಬ ಸಮೇತ ನಿಮಿಷಾಂಭ ದೇಗುಲಕ್ಕೆಂದು ಬಂದಿದ್ದ ಬಾಲಕರಿಬ್ಬರು ನೀರು ಕಂಡೊಡನೆ ನದಿಗೆ ಇಳಿದಿದ್ದರು. ಆದರೆ ಈಜಲು ಹೋಗಿ ಜಲ ಸಮಾಧಿಯಾಗಿದ್ದಾರೆ.

VISTARANEWS.COM


on

By

Drowned in water
Koo

ಮಂಡ್ಯ: ಕಾವೇರಿ ನದಿಯಲ್ಲಿ (Cauvery River) ಮುಳುಗಿ ಬಾಲಕರಿಬ್ಬರು (Drowned in water) ದುರ್ಮರಣ ಹೊಂದಿದ್ದಾರೆ. ಮೈಸೂರಿನ ಶ್ರೀರಂಗಪಟ್ಟಣದ ಗಂಜಾಮ್ ಸಮೀಪದ ನಿಮಿಷಾಂಭ ದೇಗುಲ (Nimishamba Temple) ಬಳಿ ಘಟನೆ ನಡೆದಿದೆ. ವಿಶಾಲ್ (19), ರೋಹಣ್ (17) ಮೃತ ದುರ್ದೈವಿಗಳು.

ಕಾವೇರಿ ನದಿಯಲ್ಲಿ ವಿಶಾಲ್‌ ಹಾಗೂ ರೋಹಣ್‌ ಈಜಲು ಹೋದ ಈ ದುರ್ಘಟನೆ ನಡೆದಿದೆ. ಬೆಂಗಳೂರು ಮತ್ತು ತಮಿಳುನಾಡು ಮೂಲದ ಯುವಕರು ಮೈಸೂರಿನ ಅಜ್ಜಿ ಮನೆಗೆ ಬಂದಿದ್ದರು. ಕುಟುಂಬಸ್ಥರ ಜತೆ ನಿಮಿಷಾಂಭ ದೇಗುಲಕ್ಕೆ ಬಂದಿದ್ದರು.

ಈ ವೇಳೆ ಈಜಲು ಬಾರದೆ ಇದ್ದರೂ ನೀರಿಗೆ ಇಳಿದಿದ್ದಾರೆ. ಆದರೆ ಕಳೆದೊಂದು ವಾರದಿಂದ ಸುರಿದ ಮಳೆಗೆ ನೀರಿನ ಪ್ರಮಾಣ ಹೆಚ್ಚಾಗಿತ್ತು. ನೀರಿನ ರಭಸಕ್ಕೆ ಯುವಕರಿಬ್ಬರು ಕೊಚ್ಚಿ ಹೋಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ಸ್ಥಳೀಯ ಈಜುಗಾರರ ನೆರವಿನಿಂದ ಶವಗಳನ್ನು ಮೇಲೆಕ್ಕೆತ್ತಿಸಿದ್ದಾರೆ.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಜ್ಜಿ ಮನೆಗೆಂದು ಬಂದವರು ವಾಪಸ್‌ ಹೆಣವಾಗಿ ಹೋಗಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

ಕಾರು ಡಿಕ್ಕಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಸವಾರ ಸಾವು

ಕೋಲಾರದ ಶ್ರೀನಿವಾಸಪುರ ತಾಲೂಕಿನ ಕಲ್ಲೂರು ಗ್ರಾಮದ ಬಳಿ ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲ್ಲೂರು ಗ್ರಾಮದ ನಾಗರಾಜ (50) ಮೃತ ದುರ್ದೈವಿ.

ಚವರ್ಲೈಟ್ ಕಾರು ಹಾಗೂ ಸೂಪರ್ ಎಕ್ಸ್ ಎಲ್ ಸ್ಕೂಟರ್‌ ನಡುವೆ ಅಪಘಾತ ನಡೆದಿದೆ. ನಾಗರಾಜ ಅವರು ಸ್ಕೂಟರ್‌ನಲ್ಲಿ ಮನೆಯಿಂದ ತೋಟದ ಕಡೆಗೆ ಹೊರಟಿದ್ದರು. ಕಾರು ಡಿಕ್ಕಿ ಹೊಡೆದ ರಭಸಕ್ಕೆ ನಾಗರಾಜ ರಸ್ತೆ ಬದಿಯ‌ ಡಿವೈಡರ್‌ ಹಾರಿ ಬಿದ್ದಿದ್ದಾರೆ. ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಕಾರಿಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರರು

ಶಿವಮೊಗ್ಗ ತಾಲೂಕಿನ ಯಡೆಹಳ್ಳಿ ಗ್ರಾಮದ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದ ಕಡೆಯಿಂದ ಹೋಗುತ್ತಿದ್ದ ಕಾರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ.

ಹೊಳೆ ಬೈರನಹಳ್ಳಿ ಗ್ರಾಮದ ಮೂವರು ಯುವಕರು ಒಂದೇ ಬೈಕ್‌ ಹೊರಡುವಾಗ ನಿಯಂತ್ರಣ ತಪ್ಪಿ ಕಾರಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಮೂವರು ಹಾರಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರು. ಕೈ-ಕಾಲುಗಳಿಗೆ ಗಾಯವಾಗಿದ್ದು, ಮೂವರನ್ನು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಾರು ರಿವರ್ಸ್‌ ತೆಗೆಯುವಾಗ ಸ್ಕೂಟಿಗೆ ಡಿಕ್ಕಿ

ಕಾರು ರಿವರ್ಸ್‌ ತೆಗೆಯುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಸ್ಕೂಟಿಗೆ ಡಿಕ್ಕಿಯಾಗಿದೆ. ಸ್ಕೂಟಿಯಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಗರ ಸಂಡೇ ಮಾರ್ಕೆಟ್ ಬಳಿ ಕಾರು ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿದೆ.

ಸ್ಕೂಟಿಯಲ್ಲಿದ್ದ ಎಲಿಜಬೆತ್ ಕಲ್ವಕುರಿ, ಯೇಸುದಾಸ್ ಕಲ್ವಕುರಿ ಎಂಬುವವರಿಗೆ ಗಂಭೀರ ಗಾಯವಾಗಿದೆ. ಮಹಿಳೆಯೊಬ್ಬರು ತಮ್ಮ ಕಾರನ್ನು ರಿವರ್ಸ್‌ ತೆಗೆಯುವಾಗ ಈ ಅವಘಡ ನಡೆದಿದೆ. ಗಾಯಾಳುಗಳು ಧಾರವಾಡ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Darshan Arrested : ರೇಣುಕಾ ಸ್ವಾಮಿಯ ಮರ್ಮಾಂಗಕ್ಕೆ ಬೂಟು ಕಾಲಿನಿಂದ ಒದ್ದಿದ್ದ ದರ್ಶನ್​!

Actor Darshan Arrested : ದರ್ಶನ್​ ಮತ್ತು ಗ್ಯಾಂಗ್​ ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದು ಯರ್ರಾಬಿರ್ರಿ ಹಲ್ಲೆ ಮಾಡಿದ್ದರು. ಹೀಗಾಗಿ ಒಂಟಿ ಮನೆಯಲ್ಲಿಯೇ ಪ್ರಾಣ ಬಿಟ್ಟಿದ್ದರು. ಇದನ್ನು ದರ್ಶನ್ ಒಪ್ಪಿಕೊಂಡಿದ್ದಾರೆ. ನನ್ನ ಗೆಳತಿಗೆ ಮರ್ಮಾಂಗದ ಫೋಟೋ ಕಳುಹಿಸ್ತಿಯಾ ಎಂದು ಬಂದ ದರ್ಶನ್​, ರೇಣುಕಾ ಸ್ವಾಮಿಯ ಕಾಲು ಅಗಲಿಸಿ ಬೂಟುಗಾಲಿನಲ್ಲಿ ಮರ್ಮಾಂಗವನ್ನು ಹೊಸಕಿದ್ದ. ಇದು ರೇಣುಕಾ ಸ್ವಾಮಿಯ ಅರ್ಧ ಪ್ರಾಣವನ್ನು ತೆಗೆದಿತ್ತು.

VISTARANEWS.COM


on

Actor Darshan Arrested
Koo

ಬೆಂಗಳೂರು: ತನ್ನ ಗೆಳತಿ ಪವಿತ್ರಾ ಗೌಡಗೆ ಮರ್ಮಾಂಗದ ಪೋಟೋ ಕಳುಹಿಸಿದ ರೇಣುಕಾ ಸ್ವಾಮಿಯ ಮರ್ಮಾಂಗಕ್ಕೆ ದರ್ಶನ್​ ಸಿಟ್ಟಿನಿಂದ ಬೂಟು ಕಾಲಿನಿಂದ ಒದ್ದಿದ್ದಾರೆ. ದರ್ಶನ್​ ವಿಚಾರಣೆ ವೇಳೆ (Actor Darshan Arrested) ಈ ತಪ್ಪನ್ನು ಒಪ್ಪಿಕೊಂಡಿದ್ದಾರೆ. ರೇಣುಕಾ ಸ್ವಾಮಿಯನ್ನು ಭಯಂಕರವಾಗಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗಿತ್ತು ಮತ್ತು ಪೋಸ್ಟ್​ ಮಾರ್ಟಂ ರಿಪೋರ್ಟ್ ಕೂಡ ಅದನ್ನೇ ಹೇಳಿತ್ತು. ಇದೀಗ ಸ್ವತಃ ದರ್ಶನ್​ ಸಿಟ್ಟಿನ ಭರದಲ್ಲಿ ಮಾಡಿರುವ ಕ್ರೌರ್ಯವನ್ನು ಒಂದೊಂದಾಗಿ ಒಪ್ಪಿಕೊಂಡಿದ್ದಾರೆ.

ದರ್ಶನ್​ ಮತ್ತು ಗ್ಯಾಂಗ್​ ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದು ಯರ್ರಾಬಿರ್ರಿ ಹಲ್ಲೆ ಮಾಡಿದ್ದರು. ಹೀಗಾಗಿ ಒಂಟಿ ಮನೆಯಲ್ಲಿಯೇ ಪ್ರಾಣ ಬಿಟ್ಟಿದ್ದರು. ಇದನ್ನು ದರ್ಶನ್ ಒಪ್ಪಿಕೊಂಡಿದ್ದಾರೆ. ನನ್ನ ಗೆಳತಿಗೆ ಮರ್ಮಾಂಗದ ಫೋಟೋ ಕಳುಹಿಸ್ತಿಯಾ ಎಂದು ಬಂದ ದರ್ಶನ್​, ರೇಣುಕಾ ಸ್ವಾಮಿಯ ಕಾಲು ಅಗಲಿಸಿ ಬೂಟುಗಾಲಿನಲ್ಲಿ ಮರ್ಮಾಂಗವನ್ನು ಹೊಸಕಿದ್ದ. ಇದು ರೇಣುಕಾ ಸ್ವಾಮಿಯ ಅರ್ಧ ಪ್ರಾಣವನ್ನು ತೆಗೆದಿತ್ತು.

ದರ್ಶನ್ ಮತ್ತು ಬಳಗದ ಏಟಿನ ಆಘಾತಕ್ಕೆ ನೆಲದಲ್ಲಿ ಬಿದ್ದಿದ್ದ ರೇಣುಕಾ ಸ್ವಾಮಿ ತಪ್ಪಾಯ್ತು ಎಂದು ದರ್ಶನ್ ಕಾಲು ಹಿಡಿಲು ಹೋಗಿದ್ದರು. ಈ ವೇಳೆ ಇನ್ನಷ್ಟು ಸಿಟ್ಟಿಗೆದ್ದಿದ್ದ ದರ್ಶನ್ ಮುಖದ ಮೇಲೆಯೂ ಹಲ್ಲೆ ಮಾಡಿದ್ದರು. ಒದ್ದ ರಭಸಕ್ಕೆ ರೇಣುಕಾ ಸ್ವಾಮಿಯ ತಲೆ ಗೋಡೌನ್​ನಲ್ಲಿ ನಿಲ್ಲಿಸಿದ್ದ ಟೆಂಪೊಗೆ ತಗುಲಿತ್ತು. ಹೀಗಾಗಿ ಮಂಡೆಗೂ ಸರಿಯಾಗಿ ಪೆಟ್ಟು ಬಿದ್ದಿತ್ತು. ಬಳಿಕ ಮತಿ ತಪ್ಪುವ ತನಕ ಸಿಕ್ಕಾಪಟ್ಟೆ ಹೊಡೆದಿದ್ದರು.

ಆ ಬಳಿಕ ರಿಪೀಸ್​, ದೊಣ್ಣೆ ಸೇರಿದಂತೆ ನಾನಾ ವಸ್ತುಗಳಿಂದ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ. ಹಲವಾರು ಹೊಡೆತಗಳನ್ನು ತಿಂದ ಬಳಿಕ ರೇಣುಕಾಸ್ವಾಮಿ ಸತ್ತಿದ್ದಾರೆ ಎಂಬುದಾಗಿ ಪ್ರದೂಷ್ ಫೋನ್ ಮಾಡಿ ದರ್ಶನ್​ಗೆ ತಿಳಿಸಿದ್ದ. ನಂತರ ಅವರು ವಿನಯ್ ಮಾಲೀಕತ್ವದ ಸ್ಟೋನಿ ಬ್ರೂಕ್ ಹೋಟೆಲ್​ನಲ್ಲಿ ಮೀಟಿಂಗ್ ಮಾಡಿ ಏನು ಮಾಡಬೇಕು ಎಂಬುದನ್ನು ನಿರ್ಧರಿಸಿದ್ದರು.

ನಂತರ ಅವರು ಮೃತದೇಹವನ್ನು ಮೋರಿಗೆ ಎಸೆದು ಸುಮ್ಮನಾಗುವ ಪ್ರಯತ್ನ ಮಾಡಿದ್ದರು. ಆದರೆ, ಮೋರಿಗೆ ಬೀಳದ ದೇಹ ಸೀದಾ ತಟದಲ್ಲಿ ಬಿದ್ದಿತ್ತು.

ರೇಣುಕಾಸ್ವಾಮಿಯನ್ನು ಕೊಂದು ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಫೋನ್‌ ಮಾಡಿದ್ದು ಯಾರಿಗೆ?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಸ್ಟಡಿಯಲ್ಲಿರುವ ನಟ ದರ್ಶನ್‌ (Actor Darshan), ಪವಿತ್ರಾ ಗೌಡ (Pavitra Gowda) ಸೇರಿ ಇತರ ಆರೋಪಿಗಳ ತೀವ್ರ ವಿಚಾರಣೆಯು ನಡೆಯುತ್ತಿದೆ. ಈ ಮಧ್ಯೆ ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಭಾಗಿಯಾಗಿರುವ ಗುಮಾನಿಯು ಶುರುವಾಗಿದೆ.

ಇದನ್ನೂ ಓದಿ :Actor darshan Arrested : ದರ್ಶನ್​ಗೆ ಎಣ್ಣೆ ಹೊಡೆಯಲು, ಸಿಗರೇಟ್​ ಸೇದಲು ಪೊಲೀಸ್​ ಠಾಣೆಗೆ ಶಾಮಿಯಾನ​ವೇ?

ರೇಣುಕಾಸ್ವಾಮಿ ಕೊಲೆಯಾದ ಬಳಿಕ ಆರೋಪಿಗಳು ಒರ್ವ ಪೊಲೀಸ್ ಅಧಿಕಾರಿ ಜತೆಗೆ ಮಾತುಕತೆ ನಡೆಸಿದ್ದರು ಎನ್ನಲಾಗಿದೆ. ಆರ್‌ಆರ್ ನಗರದಲ್ಲಿ ನಡೆದ ಕೊಲೆ ನಂತರ ಮೃತದೇಹವನ್ನು ಕಾಮಾಕ್ಷಿ ಪಾಳ್ಯಕ್ಕೆ ತಂದು ಹಾಕಿದ್ದು ಯಾಕೆ? ಎಲ್ಲಿಯೂ ಜಾಗ ಇಲ್ಲವೆಂದು ಕಾಮಾಕ್ಷಿ ಪಾಳ್ಯಕ್ಕೆ ತಂದು ಹಾಕಿದ್ದರಾ ಎಂಬ ಪ್ರಶ್ನೆ ಉದ್ಭವಿಸುತ್ತದೆ.

ನಮ್ಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡೆಡ್‌ಬಾಡಿ ಹಾಕಬೇಡಿ ಎಂದಿದ್ದರಾ? ಆರೋಪಿಗಳು ಪೊಲೀಸ್‌ ಅಧಿಕಾರಿ ಸೂಚನೆ ಮೇರೆಗೆ ಮೃತದೇಹ ಕಾಮಾಕ್ಷಿಪಾಳ್ಯಕ್ಕೆ ತಂದು ಎಸೆಯಲಾಗಿದೆ. ಮೃತ ದೇಹ ಎಸೆದ ಬಳಿಕ ಸಹ ಪೊಲೀಸ್ ಅಧಿಕಾರಿ ಜತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

Continue Reading
Advertisement
Bengalurus first double-decker flyover ready
ಬೆಂಗಳೂರು5 mins ago

Double Decker Flyover : ಬೆಂಗಳೂರಿನ ಮೊದಲ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಕೊನೆಗೂ ಸಿದ್ಧ; ಯಾವಾಗಿಂದ ಸಂಚಾರಕ್ಕೆ ಅವಕಾಶ

Job Alert
ಉದ್ಯೋಗ6 mins ago

Job Alert: ಪದವೀಧರರಿಗೆ ಗುಡ್‌ನ್ಯೂಸ್‌; ಪಶುವೈದ್ಯ ಸೇವಾ ಇಲಾಖೆಯಲ್ಲಿದೆ 400 ವೈದ್ಯಾಧಿಕಾರಿ ಹುದ್ದೆ

Narendra Modi
ದೇಶ27 mins ago

Narendra Modi: ಕಾಶ್ಮೀರಲ್ಲಿ ಉಗ್ರರ ದಾಳಿ ಬೆನ್ನಲ್ಲೇ ದೋವಲ್‌ ಜತೆ ಮೋದಿ ಸಭೆ; ಉಗ್ರರ ನಿರ್ನಾಮಕ್ಕೆ ಸೂಚನೆ!

Duniya Vijay divorce filed was dismissed
ಸ್ಯಾಂಡಲ್ ವುಡ್34 mins ago

Duniya Vijay: ವಿಚ್ಛೇದನ ಕೋರಿ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ

Drowned in water
ಮಂಡ್ಯ40 mins ago

Drowned in water : ಈಜಲು ಕಾವೇರಿ ನದಿಗಿಳಿದ ಬಾಲಕರಿಬ್ಬರು ಜಲ ಸಮಾಧಿ

Agniveer Scheme
ದೇಶ49 mins ago

Agniveer Scheme: ʼಅಗ್ನಿವೀರ್‌ʼ ಯೋಜನೆಯಲ್ಲಿನ ಈ ಎಲ್ಲ ಬದಲಾವಣೆಗೆ ಭಾರತೀಯ ಸೇನೆ ಸಲಹೆ

Rajal Arora
ಕ್ರೀಡೆ51 mins ago

Rajal Arora: ಟೀಮ್​ ಇಂಡಿಯಾ ಜತೆಗಿರುವ ಏಕೈಕ ಮಹಿಳಾ ಸಿಬ್ಬಂದಿ ಯಾರು? ಇವರ ಕೆಲಸವೇನು?

Jagannath Temple
EXPLAINER60 mins ago

Jagannath Temple: 4 ವರ್ಷದ ಬಳಿಕ ಜಗನ್ನಾಥ ದೇಗುಲದ ಬಾಗಿಲು ಓಪನ್;‌ ಇದಕ್ಕೂ ಬಿಜೆಪಿ ಪ್ರಣಾಳಿಕೆಗೂ ಇದೆ ಸಂಬಂಧ!

Yuva Movie Premier On star Suvarna
ಕಿರುತೆರೆ1 hour ago

Yuva Movie: ಬರ್ತಿದೆ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಮೂವಿ ʻಯುವ; ವೀಕ್ಷಕರಿಗೆ ಬೈಕ್ ಗೆಲ್ಲುವ ಅವಕಾಶ!

Actor Darshan aryvardhan Guruji told RR nagar vasthu
ಸ್ಯಾಂಡಲ್ ವುಡ್2 hours ago

Actor Darshan: ಆರ್ ಆರ್​​ ನಗರ ವಾಸ್ತು ಸರಿಯಿಲ್ಲ, ಕೇಸುಗಳು ಬೀಳ್ತವೆ ಎಂದಿದ್ದರು ಆರ್ಯವರ್ಧನ್​ ಗುರೂಜಿ; ದರ್ಶನ್ ವಿಷಯದಲ್ಲಿ ಸತ್ಯವಾಯ್ತೇ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌