Site icon Vistara News

Indira Canteen : ಇಂದಿರಾ ಕ್ಯಾಂಟೀನ್‌ಗೆ ಮರುಜೀವ; 188 ಕಡೆ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ

CM Siddaramaiah infront of Indira canteen

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್‌ಗೆ ಮರು ಜೀವ ಸಿಕ್ಕಿದೆ. ಅಲ್ಲಲ್ಲಿ ಸಮರ್ಪಕ ಅನುದಾನ ಇಲ್ಲದೇ ನಿಂತು ಹೋಗಿದ್ದ ಕ್ಯಾಂಟೀನ್‌ಗೆ ಮರು ಚಾಲನೆ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಗುರುವಾರ (ನ. 16) ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಈ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಈಗ ಒಟ್ಟು 154 ಕೋಟಿ ರೂಪಾಯಿ 188 ಇಂದಿರಾ ಕ್ಯಾಂಟೀನ್‌ (Indira Canteen) ಅನ್ನು ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ.

ಈ ಬಗ್ಗೆ ಸಚಿವ ಸಂಪುಟ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌, ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ ಹೊರತುಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಇಂದಿರಾ ಕ್ಯಾಂಟೀನ್ ಕಾಮಗಾರಿ ಮಾಡಲು ಕೆಟಿಪಿಪಿ ಕಾಯಿದೆಯ ಕಾಲಂ 4G ವಿನಾಯಿತಿ ನೀಡಲಾಗಿದೆ. ಬಿಬಿಎಂಪಿ ಹೊರತುಪಡಿಸಿ ನಗರದ ಇತರ ಕಡೆ ಕ್ಯಾಂಟಿನ್ ಮಾಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿಸಿದರು.

ಮೊದಲ ಹಂತದಲ್ಲಿ ನಿರ್ಮಿಸಲಾದ ವಿಧಾನದ ಮಾದರಿಯಲ್ಲಿ ಅನುಮೋದಿತ ವಿನ್ಯಾಸದಲ್ಲಿ ಕ್ಯಾಂಟೀನ್ ನಿರ್ಮಾಣಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಒಟ್ಟು 188 ಇಂದಿರಾ ಕ್ಯಾಂಟೀನ್‌ ಅನ್ನು ನಿರ್ಮಾಣ ಮಾಡಲಿದ್ದೇವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌ ಮಾಹಿತಿ ನೀಡಿದರು.

ಅಕ್ರಮ ಗಣಿಗಾರಿಕೆ ಪ್ರಕರಣ; ವಿಶೇಷ ತನಿಖಾ ತಂಡದ ಅವಧಿ ವಿಸ್ತರಣೆ

ಅಕ್ರಮ ಗಣಿಗಾರಿಕೆ ತನಿಖೆ ಹಾಗೂ ಪ್ರಕರಣ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, ವಿಶೇಷ ತನಿಖಾ ತಂಡದ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಕಳೆದ ಐದು ವರ್ಷಗಳಲ್ಲಿ ದಾಖಲಾಗಿರುವ 127 ಪ್ರಕರಣಗಳಲ್ಲಿ ಇದುವರೆಗೆ ಪ್ರಾಥಮಿಕ ತನಿಖೆ ಸಹ ಆಗಿಲ್ಲ. ಅದಿರು ಮೌಲ್ಯ ಮಾಪನ ವರದಿ ಕೂಡ ಇದುವರೆಗೆ ಸರಿಯಾಗಿ ಸಲ್ಲಿಕೆ ಆಗಿಲ್ಲ. ಈ ಬಗ್ಗೆ ತೀವ್ರ ಅಸಮಾಧಾನವನ್ನು ಹೊರಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಅವಧಿ ಇನ್ನೂ 8 ತಿಂಗಳಿಗೆ ವಿಸ್ತರಣೆ ಮಾಡಲಾಗಿದ್ದು, ತ್ವರಿತಗತಿಯಲ್ಲಿ ತನಿಖಾ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌ ತಿಳಿಸಿದ್ದಾರೆ.

ವಾಣಿಜ್ಯ – ಸಂಸ್ಕೃತಿ ಹೆಸರಲ್ಲಿ ಪ್ರಾಧಿಕಾರ

ವಾಣಿಜ್ಯ ಸಂಸ್ಕೃತಿ ಪ್ರದರ್ಶನ ಕೇಂದ್ರ ಸ್ಥಾಪನೆಗೆ ಹಾಗೂ ಪ್ರಾಧಿಕಾರ ರಚನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಪ್ರಾಧಿಕಾರದ ಬಿಲ್ ಅನ್ನು ಬರುವ ಅಧಿವೇಶನದಲ್ಲಿ ಮಂಡನೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ. 8 ಸಾವಿರ ಕೋಟಿ ರೂ. ಮೌಲ್ಯದ ಜಮೀನು ಇದಾಗಿದ್ದು, ವಾಣಿಜ್ಯ, ಸಂಸ್ಕೃತಿ ಹೆಸರಿನಲ್ಲಿ ಪ್ರಾಧಿಕಾರ ರಚನೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ಎಚ್.ಕೆ. ಪಾಟೀಲ್ ತಿಳಿಸಿದರು.

ಇಂದಿರಾ ಕ್ಯಾಂಟೀನ್‌ಗೆ ಮರುಜೀವ; ರಾಜ್ಯದಲ್ಲಿ 188 ಕಡೆ ನಿರ್ಮಾಣಕ್ಕೆ ಸಚಿವ ಸಂಪುಟದ ಒಪ್ಪಿಗೆ

ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ ಹೊರತುಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಇಂದಿರಾ ಕ್ಯಾಂಟೀನ್ ಕಾಮಗಾರಿ ಮಾಡಲು ಕೆಟಿಪಿಪಿ ಕಾಯಿದೆಯ ಕಾಲಂ 4G ವಿನಾಯಿತಿ ನೀಡಲಾಗಿದೆ. ಬಿಬಿಎಂಪಿ ಹೊರತುಪಡಿಸಿ ನಗರದ ಇತರ ಕಡೆ ಕ್ಯಾಂಟಿನ್ ಮಾಡುವ ತೀರ್ಮಾನಕ್ಕೆ ಬರಲಾಗಿದೆ. ಮೊದಲ ಹಂತದಲ್ಲಿ ನಿರ್ಮಿಸಲಾದ ವಿಧಾನದ ಮಾದರಿಯಲ್ಲಿ ಅನುಮೋದಿತ ವಿನ್ಯಾಸದಲ್ಲಿ ಕ್ಯಾಂಟೀನ್ ನಿರ್ಮಾಣಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಒಟ್ಟು 154 ಕೋಟಿ ರೂಪಾಯಿ 188 ಇಂದಿರಾ ಕ್ಯಾಂಟೀನ್‌ ಅನ್ನು ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಕಚೇರಿಗೆ ಬಂದು ಕೆಲಸ ಮಾಡದಿದ್ರೆ ನೌಕರರ ಬಡ್ತಿ ಕಟ್!: ಅಮೆಜಾನ್ ಘೋಷಣೆ

ಇತರ ಪ್ರಮುಖ ನಿರ್ಣಯಗಳು

Exit mobile version