cabinet-expansion--18 Ministers name being finalised in delhi Cabinet Expansion : ಸಂಪುಟ ಬಿಕ್ಕಟ್ಟು ವಿಸ್ತರಣೆ; 18 ಸಚಿವರ ಪಟ್ಟಿ ಬಹುತೇಕ ಫೈನಲ್‌, ಯಾರ‍್ಯಾರಿದ್ದಾರೆ? Vistara News
Connect with us

ಕರ್ನಾಟಕ

Cabinet Expansion : ಸಂಪುಟ ಬಿಕ್ಕಟ್ಟು ವಿಸ್ತರಣೆ; 18 ಸಚಿವರ ಪಟ್ಟಿ ಬಹುತೇಕ ಫೈನಲ್‌, ಯಾರ‍್ಯಾರಿದ್ದಾರೆ?

Congress cabinet: ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತುಕತೆಗಳು ನಡೆಯುತ್ತಿವೆ. ಈ ನಡುವೆ 18 ಸಚಿವರ ಹೆಸರು ಅಂತಿಮಗೊಂಡಿರುವ ಮಾಹಿತಿ ಸಿಕ್ಕಿದೆ.

VISTARANEWS.COM


on

Congress cabinet expansion meeting at delhi
ಕಾಂಗ್ರೆಸ್‌ ನಾಯಕರ ಸಭೆ ದಿಲ್ಲಿಯಲ್ಲಿ ನಡೆಯುತ್ತಿದೆ. ಪ್ರಾತಿನಿಧಿಕ ಚಿತ್ರ
Koo

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ (Cabinet Expansion) ಸಂಬಂಧಿಸಿ ದಿಲ್ಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ನಾಯಕರ ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಗೆ ಒಳಗಾಗಿವೆ. ಸುದೀರ್ಘ ಚರ್ಚೆಯ ಸಂದರ್ಭದಲ್ಲಿ ಸಚಿವರಾಗಬಹುದಾದ ಹಲವರ ಹೆಸರು ಚರ್ಚೆಗೆ ಬಂದಿವೆ. ಇದುವರೆಗಿನ ಮಾತುಕತೆಯಲ್ಲಿ 18 ಸಚಿವರ ಹೆಸರು ಫೈನಲ್‌ ಆಗಿದೆ. ಇನ್ನು ಇಬ್ಬರ ಹೆಸರು ಎರಡನೇ ಸುತ್ತಿನ ಚರ್ಚೆ ಬಳಿಕ ಫೈನಲ್‌ ಆಗುವ ನಿರೀಕ್ಷೆ ಇದೆ ಎಂದು ತಿಳಿದುಬಂದಿದೆ.

ಬುಧವಾರ ಸಂಜೆ ಅಧಿವೇಶನ ಮುಗಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರು ದಿಲ್ಲಿಗೆ ಹೋಗಿದ್ದರು. ಅವರನ್ನು ಅನುಸರಿಸಿ ಸುಮಾರು 35ಕ್ಕೂ ಹೆಚ್ಚು ಸಚಿವ ಸ್ಥಾನಾಕಾಂಕ್ಷಿ ಶಾಸಕರು ಕೂಡಾ ದಿಲ್ಲಿಯಲ್ಲಿದ್ದಾರೆ. ಬುಧವಾರ ರಾತ್ರಿಯೇ ಒಂದು ಸುತ್ತಿನ ಸಭೆ ನಡೆಯಲಿದೆ ಎಂದು ಹೇಳಲಾಗಿದ್ದರೂ ಅದು ಗುರುವಾರಕ್ಕೆ ಮುಂದೂಡಲ್ಪಟ್ಟಿತ್ತು. ಗುರುವಾರ ಬೆಳಗ್ಗೆ ಮೊದಲ ಹಂತದ ಮಾತುಕತೆ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರ ಮನೆಯಲ್ಲಿ ಸಭೆ ನಡೆಯುವುದು ಎಂದು ತೀರ್ಮಾನವಾಗಿತ್ತು. ಆದರೆ ಬಳಿಕ ಅದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಗೆ ಶಿಫ್ಟ್‌ ಆಯಿತು. ಅಲ್ಲಿ ಸಚಿವರ ಆಯ್ಕೆ ವಿಚಾರ ಬಂದಾಗ ಪ್ರಮುಖವಾಗಿ ಹಲವು ವಿಚಾರಗಳು ಬಂದವು.

1. ಯುವಕರಿಗೆ ಈ ಬಾರಿ ಮನ್ನಣೆ ನೀಡಬೇಕು ಎಂದು ಒಂದು ಕಡೆಯಾದರೆ, ಹಿರಿಯರನ್ನು ಕಡೆಗಣಿಸೋದು ಸರಿಯಲ್ಲ ಎಂಬುದು ಮತ್ತೊ0ದು ಕಡೆಯ ವಾದ.

2. ಜಾತಿವಾರು, ಪ್ರಾಂತ್ಯವಾರು ಸಚಿವ ಸ್ಥಾನ ನೀಡಬೇಕು ಎಂಬುದು ಒಂದೆಡೆಯಾದರೆ, ಮತ್ತೊಂದೆಡೆ, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದವರಿಗೆ ಸ್ಥಾನ ಮಾನ ನೀಡಬೇಕು ಎಂಬುದು ಇನ್ನೊಂದು ವಾದ.

3. ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿದರೆ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನೆ ಆಗಲಿದೆ. ಹೀಗಾಗಿ ಪಕ್ಷಕ್ಕೆ ಪ್ರಾಮುಖ್ಯತೆ ನೀಡುವವರಿಗೆ ಆದ್ಯತೆ ನೀಡಬೇಕು.

4.ಮುಂಬರುವ ಲೋಕಸಭಾ ಚುನಾವಣೆ ಮನದಲ್ಲಿಟ್ಟುಕೊಂಡು ಸಚಿವ ಸ್ಥಾನ ಹಂಚಿಕೆ ಮಾಡಬೇಕು. ಲೋಕಸಭೆಯಲ್ಲಿ 20+ ಸೀಟ್ ಗೆಲ್ಲಲು ಸಂಘಟನೆ ಮುಖ್ಯ.

ನಾಲ್ಕನೆ ವಾದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಹೆಚ್ಚಿನ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಸಂಭವನೀಯ ಸಚಿವರು, ಅವರ ಜಿಲ್ಲೆ ಮತ್ತು ಸಮುದಾಯದ ವಿವರ

1. ಈಶ್ವರ ಖಂಡ್ರೆ -ಬೀದರ್- ಲಿಂಗಾಯತ
2. ಲಕ್ಷ್ಮೀ ಹೆಬ್ಬಾಳ್ಕರ್ – ಬೆಳಗಾವಿ – ಲಿಂಗಾಯತ
3. ಶಿವಾನಂದ ಪಾಟೀಲ್ – ಬಿಜಾಪುರ- ಲಿಂಗಾಯತ
4. ರಹೀಂ ಖಾನ್ – ಬೀದರ್ – ಮುಸ್ಲಿಂ
5. ಅಜಯ್ ಸಿಂಗ್ – ಕಲಬುರಗಿ – ಸಿಂಗ್
6. ಪುಟ್ಟರಂಗಶೆಟ್ಟಿ – ಚಾಮರಾಜನಗರ – ಉಪ್ಪಾರ
7.ಎಸ್ ಎಸ್ ಮಲ್ಲಿಕಾರ್ಜುನ – ದಾವಣಗೆರೆ – ಲಿಂಗಾಯತ
8. ಬೈರತಿ ಸುರೇಶ್ – ಬೆಂಗಳೂರು -ಕುರುಬ
9. ಬಸವರಾಜ ರಾಯರೆಡ್ಡಿ -ಕೊಪ್ಪಳ- ರೆಡ್ಡಿ ಲಿಂಗಾಯತ
10. ಡಾ. ಮಹಾದೇವಪ್ಪ – ಮೈಸೂರು- ದಲಿತ ಬಲ
11. ಪಿರಿಯಾಪಟ್ಟಣ-ವೆಂಕಟೇಶ್ – ಮೈಸೂರು- ಒಕ್ಕಲಿಗ
12. ಕೃಷ್ಣ ಬೈರೇಗೌಡ – ಬೆಂಗಳೂರು- ಒಕ್ಕಲಿಗ
13. ನರೇಂದ್ರ ಸ್ವಾಮಿ – ಮಂಡ್ಯ- ಎಸ್ಸಿ ಬಲ
14. ಚಿಂತಾಮಣಿ ಸುಧಾಕರ್‌ – ಚಿಕ್ಕಬಳ್ಳಾಪುರ ಜಿಲ್ಲೆ – ರೆಡ್ಡಿ
15. ಹಿರಿಯೂರು ಸುಧಾಕರ್ – ಚಿತ್ರದುರ್ಗ – ಒಕ್ಕಲಿಗ‌
16. ಎಚ್ ಕೆ ಪಾಟೀಲ್ – ಗದಗ – ರೆಡ್ಡಿ ಲಿಂಗಾಯತ
17. ಚಲುವರಾಯಸ್ವಾಮಿ – ಮಂಡ್ಯ – ಒಕ್ಕಲಿಗ
18. ಶಿವರಾಜ ತಂಗಡಗಿ- ಕೊಪ್ಪಳ- ನಾಯಕ

ಬೆಂಗಳೂರು ಅಭಿವೃದ್ಧಿ ಖಾತೆಗಾಗಿ ಸಿಎಂ-ಡಿಸಿಎಂ ಫೈಟ್‌

ಈ ನಡುವೆ ಬೆಂಗಳೂರು ನಗರಾಭಿವೃಧಧಿ ಖಾತೆಗಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ಬಿಗ್‌ ಫೈಟ್‌ ನಡೆಯುತ್ತಿದೆ ಎನ್ನಲಾಗಿದೆ. ಬೆಂಗಳೂರು ಅಭಿವೃದ್ಧಿ ಖಾತೆ ತಮ್ಮ ಬಳಿಯೇ ಇಟ್ಟುಕೊಳ್ಳಲು ಸಿಎಂ ಸಿದ್ದರಾಮಯ್ಯ ಚಿಂತನೆ ಮಾಡಿಕೊಂಡಿದ್ದರೆ ಬೆಂಗಳೂರು ಅಭಿವೃದ್ಧಿ ಖಾತೆ ನನಗೆ ಬೇಕು ಎಂದು ಡಿ.ಕೆ ಶಿವಕುಮಾರ್ ಡಿಮ್ಯಾಂಡ್ ಇಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Karnataka Politics : ಆರೆಸ್ಸೆಸ್‌, ಬಜರಂಗ ಬ್ಯಾನ್‌ ಬಗ್ಗೆ ಚರ್ಚೆಯೇ ನಡೆದಿಲ್ಲ ಎಂದ ಪರಮೇಶ್ವರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

Yadgiri News: ಪರಿಸರ ಸಂರಕ್ಷಣೆಗೆ ಇರಲಿ ಎಲ್ಲರ ಕಾಳಜಿ: ಸಂಗಮೇಶ ಉಪಾಸೆ

Yadgiri News: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಯಾದಗಿರಿ ಜಿಲ್ಲೆಯ ಕನಕ ವೃತ್ತದಲ್ಲಿರುವ ಮಹಾತ್ಮ ಗಾಂಧಿ ಉದ್ಯಾನವನದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು.

VISTARANEWS.COM


on

Edited by

World Environment Day celebration at yadgiri
ಯಾದಗಿರಿಯ ಕನಕ ವೃತ್ತದಲ್ಲಿರುವ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ ಮಾಡಲಾಯಿತು.
Koo

ಯಾದಗಿರಿ: ವಿಶ್ವ ಪರಿಸರ ದಿನಾಚರಣೆಯ (World Environment Day) ಅಂಗವಾಗಿ ಸೋಮವಾರ ಜಿಲ್ಲೆಯ ಕನಕ ವೃತ್ತದಲ್ಲಿರುವ ಮಹಾತ್ಮ ಗಾಂಧಿ (Mahatma Gandhi) ಉದ್ಯಾನವನದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ ಮಾಡಲಾಯಿತು.

ಶಾಂತಿ ಸದನ ಆಂಗ್ಲ ಮಾಧ್ಯಮ ಶಾಲೆ, ಪ್ರತೀಕ್ಷಾ ಸೇವಾ ಸಂಸ್ಥೆ, ನಗರಸಭೆ ಹಾಗೂ ಅರಣ್ಯ ಇಲಾಖೆ, ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಸಂಗಮೇಶ ಉಪಾಸೆ ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಇದನ್ನೂ ಓದಿ: ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್‌ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ

ಬಳಿಕ ಮಾತನಾಡಿದ ಅವರು, ಅರಣ್ಯ ನಾಶದಿಂದ ಈಗ ತಾಪಮಾನ ಹೆಚ್ಚಾಗುತ್ತಿದೆ. ಪ್ರತಿಯೊಬ್ಬರೂ ಪರಿಸರದ ಕಾಳಜಿ ತೊರಬೇಕಿದೆ. ಪ್ರತಿಯೊಬ್ಬರೂ ಮನೆ ಮುಂದೆ ಸಸಿ ನೆಡಬೇಕಿದೆ, ಸಸಿಗಳನ್ನು ನೆಟ್ಟು ಮರ ಗಿಡಗಳನ್ನು ಬೆಳೆಸಿ ಅರಣ್ಯ ಸಂಪತ್ತು ಹೆಚ್ಚಿಸಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಶಾಂತಿ ಸದನ ಶಾಲೆಯ ಕಾರ್ಯದರ್ಶಿ ಬಸವಂತರೆಡ್ಡಿ, ಪ್ರತೀಕ್ಷಾ ಸೇವಾ ಸಂಸ್ಥೆಯ ಅಧ್ಯಕ್ಷ ಸಿದ್ದು ಪಾಟೀಲ, ಶಾಲೆ‌ ಮಕ್ಕಳು ಹಾಗೂ ಪರಿಸರ ಪ್ರೇಮಿಗಳು ಸಸಿಗಳನ್ನು ನೆಟ್ಟರು.

ಇದನ್ನೂ ಓದಿ: Monsoon Forecast 2023 : ಹವಾಮಾನ ಇಲಾಖೆ VS ಸ್ಕೈಮೆಟ್; ಹೇಗಿರಲಿದೆ ಈ ಬಾರಿಯ ಮುಂಗಾರು ಮಳೆ?

ಕಾರ್ಯಕ್ರಮದಲ್ಲಿ ಮುಖಂಡರಾದ ಬಂದಪ್ಪ ಅರಳಿ, ಬನಶಂಕರ ಸಾಹುಕಾರ, ಸಿಎಂ ಶಿವಶರಣಪ್ಪ, ಶರಣು ಇಡ್ಲುರು, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಸುರೇಶ ಶೆಟ್ಟಿ, ಆರೋಗ್ಯ ನಿರೀಕ್ಷಕರಾದ ಶರಣಮ್ಮ, ಸಿದ್ದಾರ್ಥ, ಮಹ್ಮದ್ ಸಲೀಂ, ವಿಶ್ವರಾಧ್ಯ ಗುತ್ತೇದಾರ, ಜ್ಞಾನೇಶ್ವರಿ ನಾಟೇಕಾರ್, ಮಲ್ಲಿಕಾರ್ಜುನ ಹಾಗೂ ಇತರರು ಪಾಲ್ಗೊಂಡಿದ್ದರು.

Continue Reading

ಕರ್ನಾಟಕ

Lok Sabha Election 2024 : ಲೋಕಸಭೆಯಲ್ಲಿ ಕಾಂಗ್ರೆಸ್‌ ಮಣಿಸಲು ಬಿಜೆಪಿ-ಜೆಡಿಎಸ್‌ ಮೈತ್ರಿ ಪ್ರಸ್ತಾಪ!

BJP JDS alliance: ಮುಂದಿನ ವರ್ಷದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್‌ ಅನ್ನು ಮಣಿಸಲು ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌ ಒಂದನ್ನು ಸಿದ್ಧ ಮಾಡಿಕೊಂಡಿದೆ ಎನ್ನಲಾಗಿದ್ದು, ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಂಡು “ಕೈ”ಗೆ ಪೆಟ್ಟುಕೊಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Edited by

New Parliament Buliding and loksabha election 2024
Koo

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ (Congress-JDS) ಮೈತ್ರಿ ಮಾಡಿಕೊಂಡು ಬಿಜೆಪಿ ವಿರುದ್ಧ ಸ್ಪರ್ಧೆ ಮಾಡಿದ್ದವು. ಆದರೆ, ಕೊನೆಯಲ್ಲಿ ಈ ಎರಡೂ ಪಕ್ಷಗಳು ತಲಾ 1 ಸ್ಥಾನವನ್ನು ಗೆದ್ದುಕೊಂಡರೆ ಉಳಿದ 25 + 1 ಸ್ಥಾನವನ್ನು ಬಿಜೆಪಿ ಮತ್ತು ಬೆಂಬಲಿತ ಅಭ್ಯರ್ಥಿಗೆ ಜಯ ಒಲಿದಿತ್ತು. ಆದರೆ, ಈ ಬಾರಿ ಈ ಚಿತ್ರಣವೇ ಉಲ್ಟಾ ಆಗುವ ಲಕ್ಷಣಗಳು ಕಾಣುತ್ತಿದ್ದು, 2024ರ ಲೋಕಸಭಾ ಚುನಾವಣೆಗೆ (Lok Sabha Election 2024) ಕಾಂಗ್ರೆಸ್‌ ಅನ್ನು ಮಣಿಸಲು ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ಲೆಕ್ಕಾಚಾರಗಳೂ ಈ ಪಕ್ಷಗಳಲ್ಲಿ ನಡೆಯುತ್ತಿವೆ ಎಂಬ ಗುಸು ಗುಸು ಪ್ರಾರಂಭವಾಗಿದೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದಿದೆ. 135 ಸ್ಥಾನಗಳನ್ನು ಗೆದ್ದು ಬೀಗಿದೆ. ಅಲ್ಲದೆ, ಈಗಾಗಲೇ ಘೋಷಿಸಿದಂತೆ 5 ಗ್ಯಾರಂಟಿಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಈಗಾಗಲೇ ಆದೇಶವನ್ನೂ ಹೊರಡಿಸಿದೆ. ಜತೆಗೆ ಮುಂದಿನ ಲೋಕಸಭೆ ಚುನಾವಣೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಮುಂದಡಿ ಇಡುತ್ತಿದೆ. ಪ್ರತಿಯೊಂದು ಹೆಜ್ಜೆಯನ್ನೂ ಈ ನಿಟ್ಟಿನಲ್ಲಿ ಇಡಲಾಗುತ್ತಿದೆ. ಹೀಗಾಗಿ ಮುಂದಿನ ವರ್ಷ ಬರುವ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನವನ್ನು ಗೆಲ್ಲುವ ಟಾರ್ಗೆಟ್ ಅನ್ನು ಕೈ ಪಕ್ಷ ಇಟ್ಟುಕೊಂಡಿದೆ.

ಎದುರೇಟು ಕೊಡಲು ಮಾಸ್ಟರ್‌ ಪ್ಲ್ಯಾನ್?

ಕಾಂಗ್ರೆಸ್‌ನ ಈ ಟಾರ್ಗೆಟ್‌ಗೆ ಎದುರೇಟು ಕೊಡಲು ಬಿಜೆಪಿ, ಜೆಡಿಎಸ್ ಪಕ್ಷಗಳ ನಡುವೆ ಮಾತುಕತೆ ನಡೆದಿದೆ. ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಎರಡಂಕಿ ದಾಟದಂತೆ ನೋಡಿಕೊಳ್ಳಲು ಮಾಸ್ಟರ್‌ ಪ್ಲ್ಯಾನ್‌ ಅನ್ನೇ ಹೆಣೆಯಲಾಗಿದೆ. 2019ರಲ್ಲಿ ಒಂದು ಸ್ಥಾನವನ್ನು ಮಾತ್ರ ಗೆದ್ದಿರುವ ಕಾಂಗ್ರೆಸ್, ಈ ಬಾರಿ ಶತಾಯಗತಾಯ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಅಲ್ಲದೆ, ತನ್ನ ಟಾರ್ಗೆಟ್‌ ಕ್ಷೇತ್ರಗಳಲ್ಲಿ ಆ ನಿಟ್ಟಿನಲ್ಲಿ ಕೆಲವು ಸೂಚನೆಗಳನ್ನೂ ನೀಡಿದೆ ಎನ್ನಲಾಗಿದೆ. ಇದನ್ನು ತಡೆಯಲು ಈಗ ಬಿಜೆಪಿ ಪ್ಲ್ಯಾನ್‌ ಮಾಡಿದೆ.

ಇದನ್ನೂ ಓದಿ: Free Electricity: ಹೊರಬಿತ್ತು ಗೃಹ ಜ್ಯೋತಿ ಮಾರ್ಗಸೂಚಿ; ಬಾಡಿಗೆದಾರನಿಗಿಲ್ಲ ಉಚಿತ ವಿದ್ಯುತ್‌?

ಏನಿದೆ ಲೆಕ್ಕಾಚಾರದ ಸೂತ್ರ?

ಹಳೇ ಮೈಸೂರು ಭಾಗದಲ್ಲಿ ಮಾತ್ರ ಜೆಡಿಎಸ್‌ಗೆ ಶಕ್ತಿ ಇದೆ. ಹೀಗಾಗಿ ಇಲ್ಲಿ ಕ್ಷೇತ್ರ ಹಂಚಿಕೆಯ ಸೂತ್ರವನ್ನು ಅನುಸರಿಸಲಾಗುತ್ತಿದೆ. ಅಂದರೆ, ಮಂಡ್ಯ, ಹಾಸನ, ತುಮಕೂರು ಮೂರು ಕ್ಷೇತ್ರ ಬಿಟ್ಟು ಕೊಟ್ಟರೆ ಮೈತ್ರಿಗೆ ಸಿದ್ಧ ಎಂದು ಜೆಡಿಎಸ್ ಹೇಳಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ, ಮೂರು ಕ್ಷೇತ್ರಗಳಲ್ಲಿ ಬಿಜೆಪಿ ತನ್ನದೇ ಆದ ಮತ ಬ್ಯಾಂಕ್ ಅನ್ನು ಹೊಂದಿದೆ. ಹೀಗಾಗಿ ಹೈಕಮಾಂಡ್ ಮಟ್ಟದಲ್ಲಿ ಇದಕ್ಕೆ ಸಮ್ಮತಿ ಸಿಕ್ಕರೆ ಕಾಂಗ್ರೆಸ್‌ಗೆ ಮೈತ್ರಿ ಪಕ್ಷಗಳನ್ನು ಎದುರಿಸುವ ಸವಾಲು ತಲೆದೋರಲಿದೆ.

Continue Reading

ಕರ್ನಾಟಕ

Raichur News: ವಿಶ್ವ ಪರಿಸರ ದಿನಾಚರಣೆಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಕಡಿವಾಣಕ್ಕೆ ವಿಶೇಷ ಜಾಗೃತಿ

Raichur News: ರಾಯಚೂರು ಜಿಲ್ಲೆಯ ರಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸೋಮವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಡುವುದರ ಜತೆಗೆ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಕಡಿವಾಣ ಹಾಕುವ ಕುರಿತು ವಿಶೇಷ ಜಾಗೃತಿ ಮೂಡಿಸಲಾಯಿತು.

VISTARANEWS.COM


on

Edited by

World Environment Day in Raichur district
ರಾಯಚೂರು ಜಿಲ್ಲೆಯ ರಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸೋಮವಾರ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಡುವುದರ ಮೂಲಕ ಆಚರಿಸಲಾಯಿತು.
Koo

ರಾಯಚೂರು: ಜಿಲ್ಲೆಯ ರಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸೋಮವಾರ ವಿಶ್ವ ಪರಿಸರ ದಿನಾಚರಣೆ (World Environment Day) ಅಂಗವಾಗಿ ಸಸಿ ನೆಡುವ‌ ಮೂಲಕ ಪರಿಸರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ, ಗ್ರೀನ್ ರಾಯಚೂರು, ಶಿಲ್ಪಾ ಫೌಂಡೇಶನ್, ಪರ್ಯಾವರಣ ಸಂರಕ್ಷಣ ಗತಿವಿಧಿ ಸಂಸ್ಥೆ, ವಿಸ್ತಾರ ನ್ಯೂಸ್‌ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ನೀರು ಹಾಕುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು. ಇದೇ ವೇಳೆ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಕಡಿವಾಣ ಹಾಕುವ ಬಗ್ಗೆ ಜಾಗೃತಿ ‌ಮೂಡಿಸಲಾಯಿತು.

ಇದನ್ನೂ ಓದಿ: NIRF Ranking 2023 : ಬೆಂಗಳೂರು ಐಐಎಸ್‌ಸಿ ಸೆಕೆಂಡ್‌; ಲಾ ಮತ್ತು ರಿಸರ್ಚ್‌ನಲ್ಲಿ ಬೆಂಗಳೂರು ಫಸ್ಟ್‌

ಪರಿಸರ ಮಾಲಿನ್ಯ ನಿಯಂತ್ರಣ ‌ಮಂಡಳಿಯ ಅಧಿಕಾರಿ ಎಂ. ನತೇಶ್ ಮಾತನಾಡಿ, ವಿದ್ಯಾ‌ರ್ಥಿಗಳು, ಅಧ್ಯಾಪಕರು ಸೇರಿದಂತೆ ಎಲ್ಲರೂ ಸೇರಿ ಪರಿಸರವನ್ನು ಉಳಿಸಬೇಕಿದೆ. ಕಳೆದ ಬಾರಿ ಗ್ರೀನ್ ರಾಯಚೂರು ಸಂಸ್ಥೆಗೆ ಪರಿಸರ ರಾಜ್ಯ ಪ್ರಶಸ್ತಿ ಬಂದಿತ್ತು. ಈ ಬಾರಿ ಸಿಂಧನೂರಿನ ವನಸಿರಿ ಸಂಸ್ಥೆಗೆ ಪರಿಸರ ರಾಜ್ಯ ಪ್ರಶಸ್ತಿ ಲಭಿಸಿದೆ. ರಾಯಚೂರು ಜಿಲ್ಲೆಗೆ ಸತತವಾಗಿ ಎರಡೂ ಬಾರಿ ಪರಿಸರ ರಾಜ್ಯ ಪ್ರಶಸ್ತಿ ಒಲಿದು ಬಂದಿರುವುದು ಹೆಮ್ಮೆಯ ವಿಚಾರ. ಮುಂದಿನ ದಿನಗಳಲ್ಲಿ ರಾಯಚೂರು ಜಿಲ್ಲೆ‌ ಪರಿಸರ ಉಳಿವಿಗೆ ಮಾದರಿ ಆಗುತ್ತದೆ ಎಂಬ ವಿಶ್ವಾಸವಿದೆ ಎಂದರು.

ಗ್ರೀನ್ ರಾಯಚೂರು ಸಂಸ್ಥೆಯ ಗೌರವಾಧ್ಯಕ್ಷ ಕೊಂಡ ಶ್ರೀ ಕೃಷ್ಣಮೂರ್ತಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಮನೆಯ ‌ಮುಂದೆ ಒಂದು ಗಿಡ ನೆಟ್ಟರೆ ಸಾಕು ಪರಿಸರ ಉಳಿಯುತ್ತದೆ ಎಂದ ಅವರು, ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಪ್ಲೇಟ್ ಬದಲು ಸ್ಟಿಲ್ ಪ್ಲೇಟ್ ಜನರಿಗೆ ವಿತರಿಸಿ, ಪ್ಲಾಸ್ಟಿಕ್ ಬ್ಯಾನ್ ಬಗ್ಗೆ ಅರಿವು ಮೂಡಿಸುತ್ತಿರುವುದು ಗಮನಕ್ಕೆ ಬಂದಿತು. ನಮ್ಮಲ್ಲೂ ಏಕೆ ಇದನ್ನು ಅಳವಡಿಕೆ ಮಾಡಬಾರದೆಂದು ವಿಚಾರ ಮಾಡಿ, ಒಂದು ಕಾರ್ಯಕ್ರಮಕ್ಕೆ ಏನೆಲ್ಲ ವಸ್ತುಗಳು ಬೇಕು ಎಂದು ಅಧ್ಯಯನ ಮಾಡಿ, ಈಗ ಅನುಷ್ಠಾನಕ್ಕೆ ತರುವ ಪ್ರಯತ್ನವಾಗಿದೆ ಎಂದರು.

ಇದನ್ನೂ ಓದಿ: Murder Case: ಟೋಲ್‌ ವಿಚಾರಕ್ಕೆ ಕಿರಿಕ್‌; ಹಾಕಿ ಸ್ಟಿಕ್‌ನಿಂದ ಬಡಿದು ಕೊಂದೇಬಿಟ್ಟರು ದುರುಳರು

ಗ್ಲಾಸ್, ಪ್ಲೇಟ್, ಸ್ಪೂನ್ ಉಚಿತವಾಗಿ ವಿತರಣೆ‌ ಮಾಡಲು ಶುರು ಮಾಡಿದ್ದೇವೆ. ಯಾರೇ ಆಗಲಿ ನಮ್ಮನ್ನು ಸಂಪರ್ಕ ಮಾಡಿದರೆ, ಉಚಿತವಾಗಿ ಸ್ಟೀಲ್ ಪ್ಲೇಟ್‌ಗಳನ್ನು ಕೊಟ್ಟು ನಾವೇ ಅದನ್ನು ಮರಳಿ ತರುತ್ತವೆ. ಇದು ಬಡ ಕುಟುಂಬದ‌ ಜನರಿಗೂ ಅನುಕೂಲವಾಗುತ್ತವೆ. ಇನ್ನು ಸಭೆ ಸಮಾರಂಭಗಳಲ್ಲಿ ‌ಪ್ಲಾಸ್ಟಿಕ್ ಪ್ಲೇಟ್ ಬ್ಯಾನ್ ಮಾಡಬೇಕು, ಅದರಲ್ಲಿ ಪ್ಲಾಸ್ಟಿಕ್‌ ಪೇಪರ್ ಇರುತ್ತದೆ ಇದು ಜನರ ಜೀವಕ್ಕೆ ಹಾನಿಯುಂಟು ಮಾಡುತ್ತದೆ ಎಂದು ತಿಳಿಸಿದರು.

ರಿಮ್ಸ್ ನಿರ್ದೇಶಕ ಡಾ.ಬಸವರಾಜ್ ಪೀರಾಪುರ ಮಾತನಾಡಿ, ಪ್ರತಿ ವಿದ್ಯಾರ್ಥಿಗೆ ಒಂದು ಸಸಿ ನೆಡುವ ಮತ್ತು ನಿರ್ವಹಣೆ ‌ಮಾಡುವ ಜವಾಬ್ದಾರಿ ನೀಡಲಾಗಿದೆ. ಈಗಾಗಲೇ ರಿಮ್ಸ್ ಆವರಣದಲ್ಲಿ ಸಾಕಷ್ಟು ಗಿಡ‌ ಮರಗಳನ್ನು ನೆಡಲಾಗಿದೆ. ಹೊರಾಂಗಣಕ್ಕೂ ನಮ್ಮ‌ ಕ್ಯಾಂಪಸ್‌ಗೂ‌ ಹೋಲಿಕೆ‌‌ ಮಾಡಿದರೆ, ನಮ್ಮಲ್ಲಿ‌ ಬಿಸಿಲಿನ ತಾಪಮಾನ ಒಂದು ಡಿಗ್ರಿ ‌ಕಡಿಮೆ ಇರುತ್ತದೆ ಎಂದರು.

ಶಿಲ್ಪಾ ಫೌಂಡೇಶನ್ ಸಂಸ್ಥೆಯ ಮುಖ್ಯಸ್ಥ ವಿಷ್ಣುಕಾಂತ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರೀನ್ ರಾಯಚೂರು ಸಂಸ್ಥೆಯ ಅಧ್ಯಕ್ಷೆ ಸರಸ್ವತಿ ಪರಿಸರ ರಕ್ಷಣೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಇದನ್ನೂ ಓದಿ: Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

ಈ ಸಂದರ್ಭದಲ್ಲಿ ರಾಜೇಂದ್ರ, ವೆಂಕಟೇಶ್, ಸಂದ್ಯಾ ನಾಯ್ಕ್, ಗಿರೀಶ್, ಡಾ. ಅಮರವರ್ಮ ಹಾಗೂ ಇತರರು ಪಾಲ್ಗೊಂಡಿದ್ದರು.

Continue Reading

ಕರ್ನಾಟಕ

World Environment Day : ಕೆರೆ ಉಳಿಸಿ ಮರ ಬೆಳೆಸಿ ಎಂದ ಸಾಲುಮರದ ತಿಮ್ಮಕ್ಕ; ವಿಸ್ತಾರ ಅಭಿಯಾನಕ್ಕೆ ಭಾರಿ ಸ್ಪಂದನೆ

World Environment Day: ಎಲ್ಲೆಡೆ ಪರಿಸರ ದಿನವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗುತ್ತಿದೆ. ಗಿಡ ನೆಡುವ ಕಾರ್ಯಕ್ರಮದ ಜತೆಗೆ ಶಾಲಾ-ಕಾಲೇಜುಗಳಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅರಣ್ಯ ಇಲಾಖೆಯ ರಾಯಭಾರಿ ನಾಡೋಜ ಸಾಲುಮರದ ತಿಮ್ಮಕ್ಕ (Saalumarada Thimmakka) ಕೂಡ ಸಾಥ್‌ ನೀಡಿದ್ದಾರೆ.

VISTARANEWS.COM


on

Edited by

Saalumarada Thimmakka World Environment Day
Koo

ಮೈಸೂರು: ಹಸಿರೇ ಉಸಿರಾಗಿದ್ದು, ಕಾಡು ಬೆಳೆದರಷ್ಟೇ ನಾಡು ಉಳಿಯಲು ಸಾಧ್ಯವಾಗಿದೆ. ಹೀಗಾಗಿ ಕೆರೆ ಉಳಿಸಿ, ಮರ ಬೆಳೆಸಿ. ಗಿಡ ನೆಟ್ಟರೆ ಮರವಾಗುತ್ತದೆ, ನನ್ನಂಥ ಇಳಿ ವಯಸ್ಸಿನವರಿಗೆ ನೆರಳಾಗುತ್ತದೆ ಎಂದು ಅರಣ್ಯ ಇಲಾಖೆಯ ರಾಯಭಾರಿ ನಾಡೋಜ ಸಾಲುಮರದ ತಿಮ್ಮಕ್ಕ (Saalumarada Thimmakka) ತಿಳಿಸಿದರು. ವಿಶ್ವ ಪರಿಸರ ದಿನಾಚರಣೆ (World Environment Day) ಹಿನ್ನೆಲೆ ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು. ಶಾಸಕ ಜಿ.ಡಿ.ಹರೀಶ್‌ಗೌಡ, ಶಿಕ್ಷಕರು, ಮುಖಂಡರು, ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ನನಗೆ ನನ್ನ ಪತಿಗೆ ಏನೂ ಇರಲಿಲ್ಲ. ಆಗ ಮರ ನೆಟ್ಟು ಬೆಳೆಸಿದೆವು. ಈಗ ಎಲ್ಲ ಸೌಲಭ್ಯ, ಸೌಕರ್ಯಗಳೂ ಇವೆ. ಆದಷ್ಟು ಕೆರೆ, ಕಲ್ಯಾಣಿ ಕಟ್ಟಿಸಿ, ಇದರಿಂದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯಲು ನೀರು ಸಿಗುತ್ತದೆ ಎಂದು ಸಲಹೆ ನೀಡಿದರು.

ಮೆಡಿಕಲ್‌ ಕಾಲೇಜಿನಲ್ಲಿ ಪರಿಸರ ಕಾಳಜಿ

ಮೆಡಿಕಲ್‌ ವಿದ್ಯಾರ್ಥಿಗಳ ಪರಿಸರ ಕಾಳಜಿ

ರಾಯಚೂರಿನಲ್ಲಿ ವಿಸ್ತಾರ ನ್ಯೂಸ್ ಪರಿಸರ ಕಾಳಜಿಗೆ ರಿಮ್ಸ್ ಆಸ್ಪತ್ರೆಯ ಮೆಡಿಕಲ್‌ ವಿದ್ಯಾರ್ಥಿಗಳು ಸಾಥ್‌ ನೀಡಿದರು. ಕ್ಯಾಂಪೆಸ್‌ನಲ್ಲಿ ಸಸಿ ನೆಟ್ಟು, ಮೂರು ಜನ ವಿದ್ಯಾರ್ಥಿಗಳಿಗೆ ಒಂದು ಸಸಿ ನಿರ್ವಹಣೆಯ ಜವಾಬ್ದಾರಿ ನೀಡಲಾಯಿತು. ಪರಿಸರ ದಿನದಂದು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಗ್ರೀನ್ ರಾಯಚೂರು, ಶಿಲ್ಪಾ ಫೌಂಡೇಶನ್, ರಿಮ್ಸ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಯುಕ್ತಾಶಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶಾಲಾ ವಿದ್ಯಾರ್ಥಿಗಳ ಪರಿಸರ ದಿನದ ಸಂಭ್ರಮ

ಎಲೆಗಳಿಂದ ತಯಾರಾದ ಸೆಲ್ಫಿ ಬಾಕ್ಸ್‌

ಹಾವೇರಿಯಲ್ಲಿಯು ವಿಸ್ತಾರ ನ್ಯೂಸ್ ಹಾಗೂ ಎಂ ಆರ್ ಎಂ ಶಾಲೆ, ಎಂಆರ್ ಎಂ ಪಿಯು ಕಾಲೇಜು ಸಹಯೋಗದಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು. ನಗರದ ಶಿವಾಜಿನಗರ ನಾಲ್ಕನೇ ಕ್ರಾಸ್‌ನಲ್ಲಿರುವ ಶಾಲೆಯ ಆವರಣದಲ್ಲಿ ಪುಟಾಣಿ ಮಕ್ಕಳು ಸಸಿ ನೆಟ್ಟರು. ಬಳಿಕ ಜಾಥಾ ನಡೆಸಿ ಜನರಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸಿದರು. ವಿಶೇಷ ಎಂದರೆ ಶಾಲಾ ಆವರಣದಲ್ಲಿ ಹಸಿರು ಎಲೆಯಿಂದ ತಯಾರಿಸಿದ್ದ ಸೆಲ್ಫಿ ಬಾಕ್ಸ್‌ನಲ್ಲಿ ನಿಂತು ಫೋಟೊ ಕ್ಲಿಕ್ಕಿಸಿಕೊಂಡರು. ಹಸಿರು ಎಲೆಗಳನ್ನು ಕಟ್ಟಿಕೊಳ್ಳುವ ಮೂಲಕ ಮಕ್ಕಳು ವಿಶಿಷ್ಟವಾಗಿ ಪರಿಸರ ಜಾಗೃತಿ ಮೂಡಿಸಿದ್ದು ಎಲ್ಲರ ಗಮನ ಸೆಳೆಯಿತು.

World Environment Day

ಇತ್ತ ರಾಣೆಬೆನ್ನೂರಿನಲ್ಲಿ ನಗರದ ರೋಟರಿ ಪ್ರೌಢಶಾಲೆಯಲ್ಲಿ ಸಸಿ ನೆಡಲಾಯಿತು. ರೋಟರಿ ಕ್ಲಬ್, ರೋಟರಿ ಆಂಗ್ಲ ಮಾಧ್ಯಮ‌ ಶಾಲೆ , ರೋಟರಿ ವಿಜ್ಞಾನ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಥ್‌ ನೀಡಿದರು. ಶಿಗ್ಗಾವಿಯ ರಂಭಾಪುರಿ ಕಾಲೇಜಿನಲ್ಲೂ ವಿದ್ಯಾರ್ಥಿಗಳು ಸಂಭ್ರಮದಿಂದ ಪರಿಸರ ದಿನವನ್ನು ಆಚರಿಸಿದರು.

World Environment Day

ಇದನ್ನೂ ಓದಿ: Free Electricity: ಹೊರಬಿತ್ತು ಗೃಹ ಜ್ಯೋತಿ ಮಾರ್ಗಸೂಚಿ; ಬಾಡಿಗೆದಾರನಿಗಿಲ್ಲ ಉಚಿತ ವಿದ್ಯುತ್‌?

World Environment Day
ಸಚಿವ ಕೆಎಚ್‌ ಮುನಿಯಪ್ಪರಿಂದ ವಾಟರ್‌ ಪಿಲ್ಟರ್‌ ಪ್ಲಾಂಟ್‌ಗೆ ಚಾಲನೆ

ಗಿಡ ನೆಟ್ಟರು ಸಚಿವ ಕೆ. ಎಚ್ ಮುನಿಯಪ್ಪ

ದೇವನಹಳ್ಳಿ ಪಟ್ಟಣದ ಚಿಕ್ಕಕೆರೆ ಬಳಿ ಪರಿಸರ ದಿನದ ಅಂಗವಾಗಿ ಗಿಡ ನೆಡಲಾಯಿತು. ಬಯೋಮಾ ಎನ್ವಿರಾಲ್ಮೆಂಟ್ ಟ್ರಸ್ಟ್ ಸಹಯೋಗದಿಂದ ನಿರ್ಮಾಣ ಮಾಡಿದ ವಾಟರ್ ಪಿಲ್ಟರ್ ನಿರ್ಮಾಣಕ್ಕೆ ಸಚಿವ ಕೆ.ಎಚ್‌. ಮುನಿಯಪ್ಪ ಚಾಲನೆ ನೀಡಿದರು. ಸಿಎಸ್ಆರ್ ನಿಧಿಯಲ್ಲಿ 60 ಲಕ್ಷ ರೂ. ವೆಚ್ಚ‌ದಲ್ಲಿ ನಿರ್ಮಾಣ ಮಾಡಿದ ವಾಟರ್ ಪ್ಲಾಂಟ್ ಉದ್ಘಾಟನೆ ಮಾಡಿ, ಗಿಡ ನೆಟ್ಟು ನೀರೆರೆದರು. ಕಾರ್ಯಕ್ರಮದಲ್ಲಿ ಭಾಗಿಯಾದ ಎಲ್ಲರಿಗೂ ಒಂದೊಂದು ಗಿಡ ನೆಡುವಂತೆ ಮನವಿ ಮಾಡಿದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
72 Hoorain bollywood film is ready to release in India
ದೇಶ33 mins ago

72 Hoorain: ಕಾಶ್ಮೀರ ಫೈಲ್ಸ್, ಕೇರಳ ಸ್ಟೋರಿ ಬಳಿಕ ಮತ್ತೊಂದು ವಿವಾದಾತ್ಮಕ ಸಿನಿಮಾ ’72 ಹೂರೇ’ ತೆರೆಗೆ ಬರಲು ಸಿದ್ಧ

World Environment Day celebration at yadgiri
ಕರ್ನಾಟಕ39 mins ago

Yadgiri News: ಪರಿಸರ ಸಂರಕ್ಷಣೆಗೆ ಇರಲಿ ಎಲ್ಲರ ಕಾಳಜಿ: ಸಂಗಮೇಶ ಉಪಾಸೆ

New Parliament Buliding and loksabha election 2024
ಕರ್ನಾಟಕ40 mins ago

Lok Sabha Election 2024 : ಲೋಕಸಭೆಯಲ್ಲಿ ಕಾಂಗ್ರೆಸ್‌ ಮಣಿಸಲು ಬಿಜೆಪಿ-ಜೆಡಿಎಸ್‌ ಮೈತ್ರಿ ಪ್ರಸ್ತಾಪ!

World Environment Day in Raichur district
ಕರ್ನಾಟಕ41 mins ago

Raichur News: ವಿಶ್ವ ಪರಿಸರ ದಿನಾಚರಣೆಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಕಡಿವಾಣಕ್ಕೆ ವಿಶೇಷ ಜಾಗೃತಿ

Saalumarada Thimmakka World Environment Day
ಕರ್ನಾಟಕ54 mins ago

World Environment Day : ಕೆರೆ ಉಳಿಸಿ ಮರ ಬೆಳೆಸಿ ಎಂದ ಸಾಲುಮರದ ತಿಮ್ಮಕ್ಕ; ವಿಸ್ತಾರ ಅಭಿಯಾನಕ್ಕೆ ಭಾರಿ ಸ್ಪಂದನೆ

Congratulatory meeting by former minister Araga Jnanedra
ಕರ್ನಾಟಕ59 mins ago

Shivamogga News : ಮತದಾರರ ಸಮಸ್ಯೆಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಕಾರಣ: ಆರಗ ಜ್ಞಾನೇಂದ್ರ

Sakshi Malik
ಕ್ರಿಕೆಟ್1 hour ago

Wrestlers Protest : ಕುಸ್ತಿಪಟುಗಳ ಬಾಯಿ ಮುಚ್ಚಿಸಿದರೇ ಅಮಿತ್​ ಶಾ? ಕೆಲಸಕ್ಕೆ ಮರಳಿದ ಸಾಕ್ಷಿ

World Environment Day celebration at Shirsi Forest College
ಉತ್ತರ ಕನ್ನಡ1 hour ago

Uttara Kannada News : ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಡಾ. ಆರ್. ವಾಸುದೇವ್

Monsoon Forecast 2023
ದೇಶ1 hour ago

Monsoon Forecast 2023 : ಹವಾಮಾನ ಇಲಾಖೆ VS ಸ್ಕೈಮೆಟ್; ಹೇಗಿರಲಿದೆ ಈ ಬಾರಿಯ ಮುಂಗಾರು ಮಳೆ?

Bus accident in aurad
ಕರ್ನಾಟಕ1 hour ago

ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್‌ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Chakravarthy Sulibele and MB Patil
ಕರ್ನಾಟಕ9 hours ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ9 hours ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ15 hours ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

Mangalore Moral Policing News
ಉಡುಪಿ1 day ago

Video: ನಮ್ಮ ನಿದ್ದೆಗೆಡಿಸಿದ್ದಾರೆ; ಮುಸ್ಲಿಮರೊಂದಿಗೆ ಬೀಚ್​​ಗೆ ಬಂದಿದ್ದ ಹುಡುಗಿಯರ ವಿರುದ್ಧ ನಿಂತ ಮಹಿಳೆಯರು

horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸಲೇಬೇಕು!

South facing house vastu
ಭವಿಷ್ಯ2 days ago

Vastu Tips : ದಕ್ಷಿಣ ದಿಕ್ಕಿಗೆ ಬಾಗಿಲಿರುವ ಮನೆ ಕೂಡ ಶುಭವಂತೆ! ಹೌದೇ? ಏನೆನ್ನುತ್ತದೆ ವಾಸ್ತು ಶಾಸ್ತ್ರ?

jackfruit
ಕೃಷಿ2 days ago

Krishi Khajane : ಹುಲುಸಾಗಿ ಹಲಸು ಬೆಳೆಯಿರಿ, ಎಕರೆಗೆ 2.5 ಲಕ್ಷ ಆದಾಯ ಪಡೆಯಿರಿ!

Bus Driver
ಕರ್ನಾಟಕ2 days ago

Viral Video: ಬೆಂಗಳೂರು ಟ್ರಾಫಿಕ್‌ನಲ್ಲೇ ಊಟ ಮಾಡಿ ಮುಗಿಸಿದ ಡ್ರೈವರ್! ಇಲ್ಲಿದೆ ನೋಡಿ ವಿಡಿಯೊ

horoscope today
ಪ್ರಮುಖ ಸುದ್ದಿ3 days ago

Horoscope Today : ಈ ಮೂರು ರಾಶಿಯವರಿಗೆ ಖರ್ಚು ಹೆಚ್ಚು; ಇಂದು ನಿಮ್ಮ ಭವಿಷ್ಯ ಹೀಗಿದೆ

Siddaramaiah
ಕರ್ನಾಟಕ3 days ago

Congress Guarantee : ಹೂ ಈಸ್‌ ಯುವರ್‌ ಯಜಮಾನಿ? ಸಿದ್ದರಾಮಯ್ಯ ಸುದ್ದಿಗೋಷ್ಠಿಯ ತಮಾಷೆ ಪ್ರಸಂಗಗಳು ಇಲ್ಲಿವೆ!

ಟ್ರೆಂಡಿಂಗ್‌

error: Content is protected !!