Site icon Vistara News

Cabinet Meeting | ಸಾಲಕ್ಕೆ ಖಾತರಿ, ಕೆರೆಗಳಿಗೆ ನೀರು, ವಿವಿ ಅನುದಾನಕ್ಕೆ ಸಂಪುಟ ಒಪ್ಪಿಗೆ

Multi Speciality Hospital

ಬೆಂಗಳೂರು: ಎಸ್‌ಸಿ ಎಸ್‌ಟಿ ಮೀಸಲು ಹೆಚ್ಚಳವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಕರ್ನಾಟಕ ಸರ್ಕಾರ, ಸಿದ್ಧಿ ಸಿರಿ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆ, ಕರ್ನಾಟಕ ಕೃಷಿ ಸೇವೆಗಳ ನೇಮಕಾತಿಗೆ ತಿದ್ದುಪಡಿ, 296 ಪಶು ಚಿಕಿತ್ಸಾ ಘಟಕಗಳ ನಿರ್ವಹಣೆಗೆ ಗುತ್ತಿಗೆ, ಕಾಗವಾಡ ತಾಲೂಕಿನ 23 ಕೆರೆಗಳಿಗೆ ನೀರು ತುಂಬುವ ಯೋಜನೆಗೆ ಅನುಮತಿ ಸೇರಿದಂತೆ ಅನೇಕ ನಿರ್ಧಾರಗಳನ್ನು ರಾಜ್ಯ ಸಚಿವ ಸಂಪುಟ ಸಭೆ(Cabinet Meeting)ಯಲ್ಲಿ ತೆಗೆದುಕೊಳ್ಳಲಾಗಿದೆ.

ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರಗಳ ಬಗ್ಗೆ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಾಧ್ಯಮಗಳ ಮಾಹಿತಿ ನೀಡಿದರು.

ಸಂಪುಟ ಕೈಗೊಂಡ ಇತರ ನಿರ್ಧಾರಗಳೇನು?

ಬಹುಗ್ರಾಮ ಕುಡಿಯುವ ನೀರು
ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಯೋಜನೆಯಡಿ ಬಾನಗುಂದಿ ೨೬೦ ಹಳ್ಳಿಗಳಿಗೆ ೨೬೦ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಒಟ್ಟಾರೆ ರಾಜ್ಯ ಸಚಿವ ಸಂಪುಟವು ೨೪ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಹಿರಿಯೂರಿನ ೩೦೦ ವಸತಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, 592 ಕೋಟಿ ರೂ. ಅನುದಾನು ನೀಡಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Exit mobile version