Adani Group Shares: ಮೋದಿ, ಶಾ ಒಪ್ಪಿಗೆ ಇಲ್ಲದೇ ಎಲ್‌ಐಸಿಯಿಂದ ಅದಾನಿ ಗ್ರೂಪ್‌ ಮೇಲೆ ಹೂಡಿಕೆ ಸಾಧ್ಯವೇ?: ಪ್ರಿಯಾಂಕ್‌ ಖರ್ಗೆ - Vistara News

ಕರ್ನಾಟಕ

Adani Group Shares: ಮೋದಿ, ಶಾ ಒಪ್ಪಿಗೆ ಇಲ್ಲದೇ ಎಲ್‌ಐಸಿಯಿಂದ ಅದಾನಿ ಗ್ರೂಪ್‌ ಮೇಲೆ ಹೂಡಿಕೆ ಸಾಧ್ಯವೇ?: ಪ್ರಿಯಾಂಕ್‌ ಖರ್ಗೆ

Adani Group Shares: ಗೌತಮ್‌ ಅದಾನಿ ನೇತೃತ್ವದ ಕಂಪನಿಯು ವಿದೇಶಗಳಲ್ಲಿ ನಕಲಿ ಕಂಪನಿ ಮಾಡಿ ಗೋಲ್‌ಮಾಲ್‌ ಮಾಡಿದೆ ಎಂದು ಆರೋಪಿಸಿರುವ ರಾಜ್ಯ ಕಾಂಗ್ರೆಸ್‌, ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

VISTARANEWS.COM


on

Can LIC invest in Adani Group Shares without Modi, Shah consent says Priyank Kharge
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ ಮುಗಿಬಿದ್ದಿದ್ದು, ಉದ್ಯಮಿ ಗೌತಮ್‌ ಅದಾನಿ ಗ್ರೂಪ್‌ ಕಂಪನಿ ವಿದೇಶದಲ್ಲಿ ನಕಲಿ ಕಂಪನಿ ತೆರೆದು, ನಕಲಿ ಲೆಕ್ಕಾಚಾರಗಳನ್ನು ತೋರಿಸಿ ಷೇರು ವ್ಯವಹಾರಗಳಲ್ಲಿ ಅಕ್ರಮ ನಡೆಸಿದೆ ಎಂಬ ಆರೋಪವನ್ನು ಇಟ್ಟುಕೊಂಡು ವಾಗ್ದಾಳಿ ನಡೆಸಿರುವ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಹಾಗೂ ಮಾಜಿ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್, ಎಲ್‌ಐಸಿಯಂತಹ ಸಾರ್ವಜನಿಕ ಉದ್ದಿಮೆ ಹಣವನ್ನು ಅದಾನಿ ಕಂಪನಿ ಷೇರುಗಳ (Adani Group Shares) ಮೇಲೆ ಹೂಡಿಕೆ ಮಾಡಿದ್ದು ಹೇಗೆ? ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅನುಮತಿ ಇಲ್ಲದೇ ಇದು ನಡೆಯಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸೆಬಿ ಹಾಗೂ ಜಂಟಿ ಸದನ ಸಮಿತಿ ಮೂಲಕ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಪ್ರಿಯಾಂಕ್ ಖರ್ಗೆ ಹಾಗೂ ಪ್ರೊ. ಬಿ.ಕೆ. ಚಂದ್ರಶೇಖರ್, ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೌತಮ್‌ ಅದಾನಿ ಕಂಪನಿ ವಿರುದ್ಧ ಹರಿಹಾಯ್ದರು.

ಈ ವೇಳೆ ಮಾತನಾಡಿದ ಪ್ರಿಯಾಂಕ್‌ ಖರ್ಗೆ, ಎಲ್ಐಸಿಯಂತಹ ಸಾರ್ವಜನಿಕ ಉದ್ದಿಮೆಯಿಂದ 36,500 ಕೋಟಿ ರೂಪಾಯಿ ಹೂಡಿಕೆ ಮಾಡಿಸಲಾಗಿದೆ. 28 ಕೋಟಿ ಭಾರತೀಯರು ಎಲ್ಐಸಿಯಲ್ಲಿ ಹೂಡಿಕೆ ಮಾಡಿದ್ದಾರೆ. ಈ ಎಲ್‌ಐಸಿಯಿಂದ ಅದಾನಿ ಕಂಪನಿಗೆ ಬಂಡವಾಳವನ್ನು ಹೂಡಿಕೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವರು, ಪ್ರಧಾನಿಗಳ ಅನುಮತಿ ಇಲ್ಲದೆ ಹೂಡಿಕೆ ಅಸಾಧ್ಯ. ಈ ವಿಚಾರದಲ್ಲಿ ಬಿಜೆಪಿಯವರು ಚರ್ಚೆಗೆ ಬರಲು ಸಿದ್ಧರಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Karanataka Election : ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಮಾಡಿದ ಸಿಎಂ ಎಂದರೆ ಸಿದ್ದರಾಮಯ್ಯ ಎಂದ ಬೊಮ್ಮಾಯಿ

ದೇಶದ ಇತಿಹಾಸದಲ್ಲೇ ಮೊದಲು

ಅದಾನಿ ಸಮೂಹ ರಕ್ಷಿಸಲು ಪ್ರಧಾನಿಯೊಬ್ಬರು ಮುಂದಾಗಿರುವುದು ದೇಶದ ಇತಿಹಾಸದಲ್ಲೇ ಮೊದಲು. ಪ್ರಧಾನಮಂತ್ರಿಗಳು ಹಾಗೂ ಅದಾನಿ ಅವರ ಬೆಳವಣಿಗೆ ಏಕಕಾಲದಲ್ಲಿ ಆಗಿದೆ. ಒಬ್ಬ ವ್ಯಕ್ತಿಗಾಗಿ ದೇಶದ ದಿಕ್ಕು ತಪ್ಪಿಸುವುದು ತಪ್ಪು. ಈ ವಿಚಾರದಲ್ಲಿ ಪರಿಣಾಮಕಾರಿ ತನಿಖೆ ಆಗಬೇಕು. ಸರ್ಕಾರ ಹಾಗೂ ಉದ್ಯಮಿಗಳ ತನಿಖೆ ಮಾಡುವ ಅಧಿಕಾರವನ್ನು ನೀಡಬೇಕು ಎಂದು ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.

ಕಳೆದ ಮೂರು ವರ್ಷಗಳಲ್ಲಿ ಅದಾನಿ ಅವರ ಸಮೂಹದ ಆಸ್ತಿ 8200 ಕೋಟಿಯಿಂದ 9.94 ಲಕ್ಷ ಕೋಟಿ ಆಗಲು ಕಾರಣ ಏನು? ನೀವು ವಿಶ್ವದ ಅತಿ ಶ್ರೀಮಂತರನ್ನೇ ತೆಗೆದುಕೊಳ್ಳಿ. ಅವರ ಸಂಪತ್ತು 1, 2 ಬಿಲಿಯನ್ ಆಗಲು 20-30 ವರ್ಷ ಶ್ರಮ ಹಾಕಿರುತ್ತಾರೆ. ಆದರೆ ಕೇವಲ 3 ವರ್ಷಗಳಲ್ಲಿ ಒಂದು ಸಮೂಹದ 7 ಕಂಪನಿಗಳು ಹೇಗೆ ಇಷ್ಟು ದೊಡ್ಡ ಸಂಪತ್ತು ಪಡೆಯಿತು. ಒಬ್ಬ ವ್ಯಕ್ತಿಗಾಗಿ ನೀವು ಅಧಿವೇಶನ ಸಮಯ ಹಾಳು ಮಾಡಲು ಸಿದ್ಧರಿದ್ದೀರಾ? ಎಂದು ಪ್ರಶ್ನಿಸಿದರು.

ಇನ್ನು 80 ಸಾವಿರ ಕೋಟಿ ರೂಪಾಯಿಯನ್ನು ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಲ ಪಡೆದಿದ್ದು, ಇದರಲ್ಲಿ ಸಾರ್ವಜನಿಕರ ಹಣ ಸೇರಿದೆ. ಇದು ಸಾರ್ವಜನಿಕ ಚರ್ಚೆ ಆಗಬೇಕಲ್ಲವೇ? ಕಳೆದ ಮೂರು ದಿನಗಳಿಂದ ಸದನದಲ್ಲಿ ಈ ವಿಚಾರ ಚರ್ಚೆ ಮಾಡಲು ಸಿದ್ಧರಿಲ್ಲ. ಇವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಬಂಡವಾಳಶಾಹಿಗಳಿಗೆ ನೆರವು ನೀಡುವುದು ಮಾತ್ರವಲ್ಲ ಅವರನ್ನು ರಕ್ಷಣೆ ಮಾಡಲು ಸಂಸತ್ತನ್ನು ಬಳಸಿಕೊಳ್ಳುತ್ತಿದ್ದಾರೆ. ಮಾತೆತ್ತಿದರೆ ದೇಶಭಕ್ತಿ ಬಗ್ಗೆ ಮಾತನಾಡುವ ಬಿಜೆಪಿ ಅವರಿಗೆ ನಿಜವಾದ ದೇಶಭಕ್ತಿ ಇದ್ದರೆ, ಅದಾನಿ ಕಂಪನಿಯಲ್ಲಿ ಹೂಡಿಕೆಯಾಗಿರುವ ದೇಶದ 28 ಕೋಟಿ ಜನರ ಹಣ ಹೇಗೆ ರಕ್ಷಣೆ ಮಾಡುತ್ತೀರಿ? ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದರು.

ಹಿಂಡನ್ ಬರ್ಗ್ ರಿಸರ್ಚ್‌ನಿಂದ ಸಾಕಷ್ಟು ತನಿಖಾ ವರದಿ: ಚಂದ್ರಶೇಖರ್

‘ಹಿಂಡನ್ ಬರ್ಗ್ ರಿಸರ್ಚ್‌ ಕಂಪನಿ ಸಾಕಷ್ಟು ತನಿಖಾ ವರದಿಯನ್ನು ನೀಡಿದೆ. 2008ರಲ್ಲಿ ಈ ಕಂಪನಿ ಆರಂಭವಾಗಿದ್ದು, ಇವರು ಷೇರುಪೇಟೆ ಹಾಗೂ ಕಂಪನಿಗಳಲ್ಲಿ ಅಕ್ರಮದ ಬಗ್ಗೆ ತನಿಖೆ ಮಾಡಿ ವರದಿ ನೀಡಲಾಗುತ್ತದೆ. ಈ ಸಂಸ್ಥೆ ಅದಾನಿ ಅವರ ಕಂಪನಿಗೂ ಮುನ್ನ ಒಂದೆರಡು ಕಂಪನಿ ಬಗ್ಗೆ ತನಿಖೆ ಮಾಡಿದೆ. ನಿಕಾಲ್ ಎಂಬ ಕಂಪನಿ ಬಗ್ಗೆ ವರದಿ ಪ್ರಕಟಿಸಿತ್ತು. ಈ ಕಂಪನಿ ಎಲೆಕ್ಟ್ರಿಕ್ ವಾಹನ ನಿರ್ಮಾಣ ಮಾಡುತ್ತೇವೆ. ಕೇವಲ ಸಣ್ಣ ವಾಹನ ಮಾತ್ರವಲ್ಲ ದೊಡ್ಡ ವಾಹನ ತಯಾರಿಸುತ್ತೇವೆ ಎಂದು ಹೇಳಿತ್ತು. ಹೀಗಾಗಿ ಹಿಂಡನ್ ಬರ್ಗ್ ಈ ಕಂಪನಿ ಬಗ್ಗೆ ತನಿಖೆ ಮಾಡಿದ ನಂತರ ಕಂಪನಿಯವರು ತಪ್ಪಿತಸ್ಥರೆಂದು ತೀರ್ಮಾನವಾಗಿ ಜೈಲಿಗೆ ಹೋಗಿದ್ದರು ಎಂದು ಬಿ.ಕೆ. ಚಂದ್ರಶೇಖರ್‌ ಹೇಳಿದರು.

ಇದನ್ನೂ ಓದಿ: Prajadhwani : ಕಾಂಗ್ರೆಸ್‌ನಲ್ಲಿ ಭಿನ್ನಮತ ಒಪ್ಪಿಕೊಂಡ ಮುನಿಯಪ್ಪ, ರಾಜಕೀಯವಾಗಿ ಕೊಂದೇಬಿಟ್ರು ಎಂದ ಸುಧಾಕರ್‌

ಬಿಬಿಸಿ ಪ್ರಕಟಿಸಿದ ಸಾಕ್ಷ್ಯಚಿತ್ರದ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿಯವರು ತೀವ್ರ ವಾಗ್ದಾಳಿ ನಡೆಸಿ, ದೇಶದ ಮೇಲೆ ಹಾಗೂ ಪ್ರಧಾನಿ ಮೇಲಿನ ದಾಳಿ ಎಂದು ಬಣ್ಣಿಸಿತ್ತು. ಇದೊಂದು ಬೇಜವಾಬ್ದಾರಿ ಹೇಳಿಕೆಯಾಗಿದೆ. ಗೌತಮ್ ಅದಾನಿ ಅವರನ್ನು ನಮ್ಮ ಮನೆಯಲ್ಲಿ ಹುಟ್ಟಿದ ಮಗುವನ್ನು ಹೇಗೆ ಮುದ್ದಿನಿಂದ ಬೆಳೆಸುತ್ತಾರೋ ಆ ರೀತಿ ಅವರನ್ನು ಮೋದಿ ಬೆಳೆಸಿದ್ದಾರೆ. ಇದರ ಫಲಿತಾಂಶ ಏನು ಎಂಬುದನ್ನು ಈಗ ನೋಡಬೇಕಾಗಿದೆ ಎಂದರು.

ಮೋದಿ ಅವರು ಆರಂಭದಿಂದಲೂ ಸರ್ಕಾರ ಕೈಗಾರಿಕೋದ್ಯಮಿಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಅವರಿಗೆ ಕಡಿಮೆ ದರದಲ್ಲಿ ಭೂಮಿ, ಸಾಲ ನೀಡುತ್ತಾ ಬಂದಿದ್ದಾರೆ. ಆದರೆ, 1990ರ ನಂತರ ಈ ಪರಿಸ್ಥಿತಿ ಮತ್ತಷ್ಟು ಬದಲಾಯಿತು. ಮೋದಿ ಅವರು ರಾಜಕಾರಣ ಮತ್ತು ಕೈಗಾರಿಕೋದ್ಯಮಿಗಳ ನಡುವಣ ಸಂಬಂಧವನ್ನು ತೀರಾ ಹತ್ತಿರಕ್ಕೆ ತಂದರು. ಕೈಗಾರಿಕೋದ್ಯಮಿಗಳಿಗೆ ನೀಡುವ ನೆರವಿನ ಚೌಕಟ್ಟನ್ನು ಮೋದಿ ದಾಟಿದರು. ಪರಿಣಾಮ ಮೋದಿ ಅವರ ನೇತೃತ್ವದ ಗುಜರಾತಿನ ಸರ್ಕಾರ 1999ರ ನಂತರ ಅಲ್ಲಿ 1 ಚದರ ಕಿ.ಮೀಗೆ 10 ಸಾವಿರ ರೂ ಮೌಲ್ಯವಿದ್ದರೂ ಅದನ್ನು ಕೇವಲ 900 ರೂ ನಂತೆ ಟಾಟಾ ಅವರಿಗೆ ಒಟ್ಟು 1100 ಎಕರೆಯನ್ನು ನೀಡಿದರು. ಈ ಹಣವನ್ನು ಕಂತಿನಲ್ಲಿ ಪಾವತಿಸುವಂತೆ ತಿಳಿಸಿದರು. 20 ಕೋಟಿಯಷ್ಟು ಸ್ಟಾಂಪ್ ಡ್ಯೂಟಿ ಮನ್ನಾ ಮಾಡಿದರು. ಮೌಲ್ಯಾಧಾರಿತ ತೆರಿಗೆಯನ್ನು ಮುಂದೂಡಿದರು. ಅಲ್ಲದೆ ಗುಜರಾತ್ ಸರ್ಕಾರ 2900 ಕೋಟಿ ಮೌಲ್ಯದ ಉದ್ಯಮಕ್ಕೆ 10 ಸಾವಿರ ಕೋಟಿ ಸಾಲ ನೀಡಿದ್ದರು. ಅರಣ್ಯ ಭೂಮಿಯನ್ನು ಕೊಟ್ಟರು. 2013ರಲ್ಲಿ ಸಿಎಜಿ ವರದಿಯಲ್ಲಿ 15 ಸಾವಿರ ಆಡಿಟ್ ಪ್ರಶ್ನೆಗಳನ್ನು ಗುಜರಾತ್ ಸರ್ಕಾರಕ್ಕೆ ನೀಡಲಾಗಿತ್ತು. ಇದಕ್ಕೆ ಆ ಸರ್ಕಾರ ಸರಿಯಾದ ಉತ್ತರ ನೀಡಲಿಲ್ಲ. ಇದು ಗುಜರಾತ್ ಮಾಡೆಲ್ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ಅದಾನಿ ಅವರು 2013ರ ಸೆಪ್ಟೆಂಬರ್ ವೇಳೆಗೆ ಅದಾನಿ ಅವರ ಸಂಪತ್ತು ಅಂಬಾನಿ ಸಂಪತ್ತಿನಷ್ಟಿತ್ತು. ನಂತರ ಮೋದಿ ಅವರು ಅಧಿಕಾರಕ್ಕೆ ಬಂದಾಗ ಒಂದು ವರ್ಷದಲ್ಲಿ 2014ರ ಸೆಪ್ಟೆಂಬರ್ ಅವಧಿಗೆ ಹೆಚ್ಚಾಯಿತು. ಮೋದಿ ಅವರು ಪ್ರಧಾನಿ ಆಗಲಿದ್ದಾರೆ ಎಂದು ಹೇಳಿದ ತಕ್ಷಣವೇ ಅದಾನಿ ಗ್ರೂಪ್ ಷೇರುಗಳು ಗಗನಕ್ಕೇರಿತು. 60 ಸಾವಿರ ಕೋಟಿಗೆ ಸಂಪತ್ತು ಏರಿತ್ತು. ಇವರನ್ನು ರಾತ್ರೋರಾತ್ರಿ ವ್ಯವಹಾರ ಮಾಡುವವರು ಎನ್ನಬಹುದು. ಇವರ ಸಂಪತ್ತು ಹೆಚ್ಚಳಕ್ಕೆ ಮೋದಿ ಹಾಗೂ ಅದಾನಿ ಅವರ ಸಂಬಂಧವೇ ಕಾರಣ ಎಂದು ಮಾಧ್ಯಮಗಳು ತಿಳಿಸಿದವು ಎಂದು ಚಂದ್ರಶೇಖರ್‌ ಹೇಳಿದರು.

ಇದನ್ನೂ ಓದಿ: Karnataka Election | ಬಿಜೆಪಿಯವರೇ ನಳಿನ್‌ ಅವರನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಟ್ಟಿದ್ದಾರೆ ಎಂದ ಬಿ.ಕೆ. ಹರಿಪ್ರಸಾದ್‌

ಬಂಡವಾಳಶಾಹಿಗಳ ಪರವಾಗಿ ಸರ್ಕಾರ ನಿಲ್ಲುವುದು ಅಪಾಯಕಾರಿ. ಹೀಗಾಗಿ ಈ ವಿಚಾರದಲ್ಲಿ ಸೆಬಿ ಮೂಲಕ ತನಿಖೆ ಮಾಡಿಸಬೇಕು ಎಂದು ನಮ್ಮ ನಾಯಕರು ಹೇಳಿದ್ದಾರೆ. ನನ್ನ ಪ್ರಕಾರ ನಿವೃತ್ತ ನ್ಯಾಯಾಧೀಶರು, ಪ್ರತಿಷ್ಠಿತ ಕಾರ್ಪೋರೇಟ್, ಪ್ರಭಾವಿ ವ್ಯಕ್ತಿಗಳನ್ನೊಳಗೊಂಡ ಸಮಿತಿ ರಚಿಸಿ ತನಿಖೆಗೆ ಒಳಪಡಿಸಬೇಕು. ಈ ವಿಚಾರವಾಗಿ ಎಲ್ಲ ವಿರೋಧ ಪಕ್ಷಗಳು ಜಂಟಿ ಸದನ ಸಮಿತಿ ಮೂಲಕ ಮಾಡಿಸಬೇಕು ಎಂದು ಆಗ್ರಹಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading
Advertisement
Rakshit Shetty Richard Anthony Produce By Hombale
ದೇಶ5 hours ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ5 hours ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ5 hours ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ1 day ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ1 day ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ1 day ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ1 day ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ1 day ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest2 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest2 days ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌