Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ - Vistara News

ಆರೋಗ್ಯ

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Karnataka Health Department: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಅನೇಕ ಟೆಂಡರ್‌ಗಳನ್ನು ರದ್ದು ಮಾಡುವ ನಿರ್ಧಾರಕ್ಕೆ ಕಾಂಗ್ರೆಸ್‌ ಸರ್ಕಾರ ಬಂದಿದ್ದು, ಈಗ ಆರೋಗ್ಯ ಇಲಾಖೆಯಲ್ಲಿ ಭಾರಿ ಸರ್ಜರಿಗೆ ಮುಂದಾಗಿದೆ. ಈ ಬಗ್ಗೆ ಸಚಿವ ದಿನೇಶ್‌ ಗುಂಡೂರಾವ್‌ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

VISTARANEWS.COM


on

Cancellation of tenders for 108 ambulances and Dinesh Gundu rao
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನೀಡಲಾಗಿದ್ದ ಗುತ್ತಿಗೆಗಳ ಮೇಲೆ ಈಗಿನ ಕಾಂಗ್ರೆಸ್‌ ಸರ್ಕಾರ ಕಣ್ಣಿಟ್ಟಿದ್ದು, ಒಂದೊಂದೇ ಟೆಂಡರ್‌ಗಳನ್ನು ರದ್ದುಗೊಳಿಸುವತ್ತ ಹೆಜ್ಜೆಯನ್ನಿಡುತ್ತಿದೆ. ಅಲ್ಲದೆ, ಆಗಿನ ಸಚಿವ ಡಾ. ಕೆ. ಸುಧಾಕರ್‌ (Dr K Sudhakar) ತೆಗೆದುಕೊಂಡಿರುವ ಹಲವು ನಿರ್ಧಾರಗಳ ಬಗ್ಗೆಯೂ ತನಿಖೆ ನಡೆಸುವುದಾಗಿ ಈಗಾಗಲೇ ಹೇಳಿಕೊಂಡಿದೆ. ಈಗ ಇದರ ಭಾಗವಾಗಿ 108 ಆಂಬ್ಯುಲೆನ್ಸ್‌ ಹಾಗೂ ಡಯಾಲಿಸಿಸ್‌ ಕೇಂದ್ರಗಳ ಟೆಂಡರ್‌ಗಳನ್ನು ರದ್ದುಗೊಳಿಸಿ ಆದೇಶಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ತಿಳಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಈಗಾಗಲೇ ಕೆಲವು ಟೆಂಡರ್‌ಗಳನ್ನು ರದ್ದುಪಡಿಸಿದ್ದೇವೆ. 108 ಆಂಬ್ಯುಲೆನ್ಸ್‌ ಸೇವೆ ನೀಡಲು ಜಿವಿಕೆಗೆ ನೀಡಿದ್ದ ಗುತ್ತಿಗೆಯನ್ನು ರದ್ದುಪಡಿಸಲಾಗಿದೆ. ಅಲ್ಲದೆ, ರಾಜ್ಯದ ಡಯಾಲಿಸಿಸ್ ಕೇಂದ್ರಗಳಲ್ಲಿ ಅವ್ಯವಸ್ಥೆ ಇದೆ. ಹಾಗಾಗಿ ಡಯಾಲಿಸಿಸ್ ಟೆಂಡರ್ ಅನ್ನು ಸಹ ರದ್ದುಪಡಿಸಲಾಗಿದೆ. ಈಗ ಜರೂರಾಗಿರುವ ಕೆಲಸಗಳನ್ನು ಮಾಡುತ್ತಿದ್ದೇವೆ. ಇಲಾಖೆಯ ಕಾರ್ಯನಿರ್ವಹಣೆ ಬದಲಾವಣೆ ಕೆಲಸ ನಡೆಯುತ್ತಿದೆ. ಅಧಿಕಾರಿಗಳು, ವೈದ್ಯರ ಕಾರ್ಯನಿರ್ವಹಣೆಯನ್ನು ಸರಿಪಡಿಸಬೇಕಿದೆ. ಪಾಲಿಸಿ ವಿಚಾರಗಳನ್ನು ಬದಲಾಯಿಸಬೇಕಿದೆ. ಸಾಮಾನ್ಯ ಜನರಿಗೆ ಗುಣಮಟ್ಟದ ಚಿಕಿತ್ಸೆ ಕೊಡಿಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: Traffic Police:‌ ಒನ್‌ವೇ, ಫುಟ್‌ಪಾತ್‌ನಲ್ಲಿ ಗಾಡಿ ಓಡಿಸ್ಬೇಡಿ, ಹೋದ್ರೆ ಕ್ರಿಮಿನಲ್ ಕೇಸ್ ಬೀಳೋದು ಗ್ಯಾರಂಟಿ!

ಆರೋಗ್ಯ‌ ಇಲಾಖೆಯಲ್ಲಿ ಸುಧಾರಣೆ ತರಲು ಪ್ರಯತ್ನ ಮಾಡುತ್ತಿದ್ದೇವೆ. ಅದರ ಭಾಗವಾಗಿ ಈಗಾಗಲೇ ಕೆಲವು ಟೆಂಡರ್‌ಗಳನ್ನು ಕ್ಯಾನ್ಸಲ್ ಮಾಡಿದ್ದೇವೆ. ಬಾಕಿ ಕೆಲಸಗಳನ್ನು ಆದ್ಯತೆ ಮೇರೆಗೆ ಮಾಡುತ್ತಿದ್ದೇವೆ. ತಜ್ಞರ ಜತೆ ಚರ್ಚೆ ಮಾಡಿ ಸುಧಾರಣೆ ತರುತ್ತೇವೆ. ಗುಣಮಟ್ಟದ ಚಿಕಿತ್ಸೆ, ಗುಣಮಟ್ಟದ ವ್ಯವಸ್ಥೆಯನ್ನು ನಾವು ಕೊಡುವಂತೆ ಮಾಡುತ್ತೇವೆ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.

ಗೃಹಲಕ್ಷ್ಮಿ ಯೋಜನೆ ಬಗ್ಗೆ ದಿನೇಶ್‌ ಗುಂಡೂರಾವ್‌ ಹೇಳಿಕೆ

ಅರ್ಹರಿಗೆ ಗೃಹಲಕ್ಷ್ಮಿ ಯೋಜನೆ ಸಿಗಲಿದೆ

ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೆ ಅಂಥವರಿಗೆ ಗೃಹಲಕ್ಷ್ಮಿ ಯೋಜನೆ ಅನ್ವಯವಾಗುವುದಿಲ್ಲ ಎಂಬ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ದಿನೇಶ್‌ ಗುಂಡೂರಾವ್‌, ಈ ಬಗ್ಗೆ ಸ್ಪಷ್ಟವಾಗಿ ಮಾರ್ಗಸೂಚಿ ಇದೆ. ಅಂಥವರು ಕಡಿಮೆ ಸಂಖ್ಯೆಯಲ್ಲಿದ್ದಾರೆ. ಬೇಡಿಕೆ ಇರುವಂತಹ ಅರ್ಹರಿಗೆ ಯೋಜನೆ ಸಿಗಲಿದೆ. ಜನಸಂಖ್ಯೆ ನೋಡಿದರೆ 1-2 ಪರ್ಸೆಂಟ್ ಮಾತ್ರ ಈ ರೀತಿ ಇರಬಹುದು. ಈ ರೀತಿ ಕಾರ್ಯಕ್ರಮಗಳನ್ನು ಘೋಷಣೆ ಮಾಡುವುದು ಸುಲಭ. ಆದರೆ ಅನುಷ್ಠಾನ ಮಾಡೋದು ಕಷ್ಟ. ಈಗ ಅನುಷ್ಠಾನ ಕೂಡ ಮಾಡಿ ಜನರಿಗೆ ನಾವು ತೋರಿಸಿದ್ದೇವೆ. ಅನುಷ್ಠಾನ ಮಾಡಲ್ಲ ಎಂದು ಕೆಲವರು ನಕರಾತ್ಮಕತೆಯಿಂದ ನೋಡುತ್ತಿದ್ದಾರೆ ಎಂದು ಹೇಳಿದರು.

ದಿನೇಶ್‌ ಗುಂಡೂರಾವ್‌ ಹೇಳಿಕೆಯ ವಿಡಿಯೊ ಇಲ್ಲಿದೆ

ಇದನ್ನೂ ಓದಿ: Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ದಿನೇಶ್‌ ಗುಂಡೂರಾವ್‌, ಜನರಲ್ಲಿ ಕೋಮುವಾದದ ವಿಚಾರವನ್ನು ಹಿಂದಿನ ಬಿಜೆಪಿ ಸರ್ಕಾರದವರು ತುಂಬಿದರು. ಅವರ ಪಕ್ಷದ ಬೆಳವಣಿಗೆಗೆ ಸಿದ್ಧಾಂತ ಬಿತ್ತಲು ನೋಡುತ್ತಿದ್ದಾರೆ. ಮಕ್ಕಳಲ್ಲಿ ತಪ್ಪು ವಿಚಾರಗಳನ್ನು ತಲೆಗೆ ಹಾಕಬಾರದು, ಅದನ್ನು ಒಪ್ಪಲು ಸಾಧ್ಯವಿಲ್ಲ. ಹೀಗಾಗಿ ನಾವು ಇಂತಹ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Speech Fasting: ಸದಾ ವಟವಟ ಮಾತಾಡ್ತಾ ಇರ್ತೀರಾ? ʼಮೌನವ್ರತʼ ಮಾಡಿ, ಆರೋಗ್ಯ ಸುಧಾರಣೆ ನೋಡಿ!

ಮೌನವ್ರತವೆಂದರೆ ಕೆಲವೊಮ್ಮೆ ಹಾಸ್ಯಕ್ಕೆ ವಸ್ತುವಾಗುತ್ತದೆ. ಆದರೆ ಮೌನಕ್ಕೂ ಚಿಕಿತ್ಸಕ ಗುಣವಿದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಇದು ಗುಣವಾಗುವುದಕ್ಕೆ ನೆರವಾಗುತ್ತದೆ. ಹಾಗಾಗಿ ಸದಾ ವಟವಟ ಮಾಡುವವರು ನೀವಾದರೆ, ಆಗೀಗ ಮೌನವ್ರತ ಇರಿಸಿಕೊಳ್ಳಿ (Speech Fasting), ಒಳ್ಳೆಯದು!

VISTARANEWS.COM


on

Speech Fasting
Koo

ಇಡೀ ಜಗತ್ತು ಸಂವಹನದ ಸೂತ್ರದಿಂದ ಬಂಧಿಸಲ್ಪಟ್ಟಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಇರಲಿ, ಮುಖಾಮುಖಿ ಭೇಟಿ ಇರಲಿ, ಅಂತೂ ಸಂವಹನ ನಡೆಯುತ್ತಲೇ ಇರಬೇಕು. ಅದರಲ್ಲೂ ಮಾತಿಗೆ ಕೂತರೆ ಸಾಮಾನ್ಯಕ್ಕೆ ನಿಲ್ಲಿಸುವುದಿಲ್ಲ ನಾವು. ಧ್ವನಿಪೆಟ್ಟಿಗೆಯನ್ನು ಶೋಷಿಸುತ್ತಲೇ ಇರುತ್ತೇವೆ. ನಮ್ಮ ದೇಹದ ಉಳಿದೆಲ್ಲ ಭಾಗಗಳಂತೆ ಧ್ವನಿ ಪೆಟ್ಟಿಗೆಗೂ ವಿಶ್ರಾಂತಿ ಬೇಕಾಗುತ್ತದೆ. ಅವಿಶ್ರಾಂತವಾಗಿ ಅದನ್ನು ದುಡಿಸುತ್ತಿದ್ದರೆ ಧ್ವನಿಪೆಟ್ಟಿಗೆಗೂ ಕಷ್ಟ ತಪ್ಪಿದ್ದಲ್ಲ. ಹಾಗಾಗಿಯೇ ಹಳೆಯ ಜನಗಳು ಹಲವಾರು ವ್ರತಗಳ ಜೊತೆಗೆ ʻಮೌನವ್ರತʼವನ್ನೂ ಆಗೀಗ ಇರಿಸಿಕೊಳ್ಳುತ್ತಿದ್ದರು. ಮೌನವ್ರತ ಎಂಬುದು ಕೆಲವೊಮ್ಮೆ ಹಾಸ್ಯಕ್ಕೆ ವಸ್ತುವಾದರೂ, ಇದರಿಂದ ಆರೋಗ್ಯಕ್ಕೆ ಲಾಭಗಳಿರುವುದು ಹೌದು. ಏನು ಪ್ರಯೋಜನ (Speech Fasting) ಮೌನದಿಂದ?

young woman covering closed mouth with hands.

ಏನು ಹಾಗೆಂದರೆ?

ಯಾವುದೇ ಧಾರ್ಮಿಕ ಆಚರಣೆಯ ಸಲುವಾಗಿ ಮಾಡುವಂಥ ವ್ರತವಲ್ಲ ಇದು. ಇದನ್ನು ʻವೋಕಲ್‌ ರೆಸ್ಟ್‌ʼ ಅಥವಾ ಧ್ವನಿಪೆಟ್ಟಿಗೆಗೆ ನೀಡುವ ವಿಶ್ರಾಂತಿ ಎಂದು ಕರೆಯಲಾಗುತ್ತದೆ. ನಿಗದಿತ ಸಮಯದಲ್ಲಿ ಮಾತನಾಡದೆ, ಧ್ವನಿಪೆಟ್ಟಿಗೆಯನ್ನು ಯಾವುದಕ್ಕೂ ಬಳಸದೆ ಇರುವುದು ಎಂದು ಅರ್ಥ. ಇದರಿಂದ ಧ್ವನಿಪೆಟ್ಟಿಗೆಯ ಸುಸ್ತು, ಆಯಾಸವೆಲ್ಲ ಕಡಿಮೆಯಾಗಿ, ದುರಸ್ತಿಯಾಗಲು ಅನುಕೂಲವಾಗುತ್ತದೆ. ಹಾಡುಗಾರರು, ನಟರು, ಪ್ರವಚನ ನೀಡುವವರು, ಉಪನ್ಯಾಸಕರು ಇತ್ಯಾದಿ ಧ್ವನಿಯನ್ನೇ ಪ್ರಧಾನವಾಗಿ ಬಳಸುವವರು ಈ ತಂತ್ರಗಳನ್ನು ಅಳವಡಿಸಿಕೊಂಡರೆ ಅನುಕೂಲವಾದೀತು. ಹಾಡು, ಮಾತು, ಪಿಸುಮಾತಿಗೂ ಸದಾ ಕಾಲ ಕಂಪಿಸುತ್ತಲೇ ಇರುವ ಧ್ವನಿಪೆಟ್ಟಿಗೆಗೆ ಸುಸ್ತಾಗುತ್ತದೆ. ಇದರಿಂದ ಧ್ವನಿ ಬೀಳುವುದು, ಗಂಟಲು ಉಬ್ಬಿದಂತಾಗಿ ನೋವು ಕಾಣುವುದು ಸಾಮಾನ್ಯ. ಇದರಿಂದ ಧ್ವನಿಪೆಟ್ಟಿಗೆಗೆ ಹಾನಿಯಾಗುತ್ತದೆ. ಅದನ್ನು ವಿಶ್ರಾಂತಿಗೆ ದೂಡಿದಾಗ ಆಗುವ ಅನುಕೂಲಗಳು ಬಹಳಷ್ಟು.

Children speech therapy concept.

ಆರೋಗ್ಯ ಮರಳಿಸುತ್ತದೆ

ದೇಹದ ಯಾವುದೇ ಭಾಗಕ್ಕೂ ಅತಿ ಬಳಕೆಯಿಂದ ಆಯಾಸವಾದರೆ ವಿಶ್ರಾಂತಿ ಅಗತ್ಯವಾಗುತ್ತದೆ. ಹೀಗೆ ಮಾತಿನ ಉಪವಾಸದ ಮೂಲಕ ವಿಶ್ರಾಂತಿ ನೀಡುವುದರಿಂದ ಕಳೆದು ಹೋದ ಆರೋಗ್ಯ ಮರಳು ದೊರೆಯುವುದಕ್ಕೆ ಸಾಧ್ಯ. ಇದು ಧ್ವನಿಪೆಟ್ಟಿಗೆಯ ವಿಷಯದಲ್ಲೂ ಹೌದು. ಧ್ವನಿ ಪೆಟ್ಟಿಗೆಯಲ್ಲಿನ ಊತ, ಕಿರಿಕಿರಿ ಮುಂತಾದವುಗಳನ್ನು ಗುಣಪಡಿಸಬಹುದು.

ಗುಣಮಟ್ಟ ಸುಧಾರಣೆ

ಪದೇಪದೆ ಧ್ವನಿ ಬೀಳುತ್ತಿದ್ದರೆ, ಧ್ವನಿಯ ಗುಣಮಟ್ಟ ಹಾಳಾಗಿದ್ದರೆ, ಶೃತಿಯ ಸಮಸ್ಯೆಯಿದ್ದರೆ, ಸ್ಪಷ್ಟತೆ ಕಡಿಮೆಯಿದ್ದರೆ- ಇಂಥ ಎಲ್ಲ ಸಮಸ್ಯೆಗಳಿಗೆ ಮೌನ ಅಥವಾ ಧ್ವನಿಪೆಟ್ಟಿಗೆಯ ವಿಶ್ರಾಂತಿ ಮದ್ದಾಗಬಲ್ಲದು. ಧ್ವನಿ ಚಿಕಿತ್ಸೆಯಲ್ಲಿ ಮೌನವನ್ನೂ ಒಂದು ಸಾಧನವಾಗಿ ಬಳಸಲಾಗುತ್ತದೆ. ಇದರಿಂದ ಧ್ವನಿಯ ಗುಣಮಟ್ಟವನ್ನು ಗಣನೀಯವಾಗಿ ಸುಧಾರಿಸಲು ಸಾಧ್ಯವಿದೆ.

ಹಾನಿ ಕಡಿಮೆ

ಧ್ವನಿಪೆಟ್ಟಿಗೆಯನ್ನು ಅತಿಯಾಗಿ ಮತ್ತು ಸತತ ಬಳಸುವುದರಿಂದ ಧ್ವನಿಪೆಟ್ಟಿಗೆಯಲ್ಲಿ ನಾಡ್ಯೂಲ್‌ ಅಥವಾ ಪಾಲಿಪ್‌ಗಳು ಕಾಣಿಸಿಕೊಳ್ಳಬಹುದು. ಇದಕ್ಕೆ ಸರಿಯಾಗಿ ಚಿಕಿತ್ಸೆ ತೆಗೆದುಕೊಳ್ಳದಿದ್ದರೆ ಧ್ವನಿಪೆಟ್ಟಿಗೆಗೆ ಹಾನಿ ಆಗುವ ಸಂಭವ ಇರುತ್ತದೆ. ಹಾಗಾಗಿ ಚಿಕಿತ್ಸಕ ಉದ್ದೇಶದಿಂದ ಮೌನ ವಹಿಸುವುದರಿಂದ ಇಂಥ ಹಾನಿಯನ್ನು ಕಡಿಮೆ ಮಾಡಲು ಸಾಧ್ಯವಿದೆ.

Mood Enhancement Dark Chocolate Benefits

ಮಾನಸಿಕ ನೆಮ್ಮದಿ

ಹೊರಗಿನ ವ್ಯವಹಾರವನ್ನು ಕೊಂಚ ನಿಲ್ಲಿಸಿದರೆ, ಒಳಗಿನ ಮನೋವ್ಯಾಪಾರಕ್ಕೆ ತೆರೆದುಕೊಳ್ಳುವುದಕ್ಕೆ ಸಾಧ್ಯ. ನಮ್ಮ ಬಗ್ಗೆ ನಮಗೆ ತಿಳಿಯುವುದಕ್ಕೆ, ನಾವೇನು ಮಾಡುತ್ತಿದ್ದೇವೆ, ಅದನ್ನು ಯಾಕಾಗಿ ಮಾಡುತ್ತಿದ್ದೇವೆ ಎಂಬುದನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಮೌನ ಸಾಧನವಾಗಬಲ್ಲದು. ಮಾನಸಿಕ ನೋವುಗಳನ್ನು ದೂರಮಾಡಿ, ಸಾಂತ್ವನಕ್ಕೆ ನಮ್ಮೊಳಗೇ ಜಾಗ ಮಾಡಿಕೊಡುತ್ತದೆ.

ಇದನ್ನೂ ಓದಿ: Egg Benefits: ನೀವು ಮೊಟ್ಟೆ ಪ್ರಿಯರೆ? ಹಾಗಾದರೆ ಎಷ್ಟು ಮೊಟ್ಟೆ ತಿನ್ನಬಹುದು ಎಂಬುದೂ ಅರಿವಿರಲಿ!

ಹೇಗೆ ಮಾಡಬೇಕು?

ಧ್ವನಿಗೆ ಎಷ್ಟು ಸಮಸ್ಯೆಯಾಗಿದೆ ಎಂಬುದರ ಮೇಲೆ ಎಷ್ಟು ಹೊತ್ತು ವಿಶ್ರಾಂತಿ ನೀಡಬೇಕು ಎಂಬುದನ್ನು ನಿರ್ಧರಿಸಬಹುದು. ದಿನದ ಒಂದಿಷ್ಟು ತಾಸು, ಇಡೀ ದಿನ, ವಾರದಲ್ಲಿ ಪ್ರತಿದಿನದ ಒಂದಿಷ್ಟು ಹೊತ್ತು- ಹೀಗೆ. ಮಾತಾಡುವುದಿಲ್ಲ ಎಂದರೆ ಗುನುಗಬಹುದು, ಪಿಸು ಮಾತಾಡಬಹುದು ಎಂದು ಅರ್ಥವಲ್ಲ, ಧ್ವನಿಪೆಟ್ಟಿಗೆಗೆ ಸಂಪೂರ್ಣ ವಿಶ್ರಾಂತಿ ನೀಡಬೇಕು. ಮೌನ ಮುರಿದ ಹೊತ್ತಿನಲ್ಲೂ ಸಿಕ್ಕಾಪಟ್ಟೆ ಕೂಗುವುದು, ಕಿರುಚುವುದು ಸಲ್ಲದು. ದಿನಕ್ಕೆ 3-4 ಲೀಟರ್‌ ನೀರು ಕುಡಿಯುವುದು ಅಗತ್ಯ. ಇದರಿಂದ ಧ್ವನಿಪೆಟ್ಟಿಗೆಗೆ ಬೇಕಾದ ತೇವವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಕೆಮ್ಮುವುದು, ಕ್ಯಾಕರಿಸುವುದು ಇತ್ಯಾದಿಗಳನ್ನು ಮಾಡುವ ಅಗತ್ಯವಿದ್ದರೆ, ನೆಗಡಿಯ ಸಮಸ್ಯೆಯಿದ್ದರೆ, ಬೆಚ್ಚಗಿನ ಉಪ್ಪು ನೀರಿನಿಂದ ಗಂಟಲನ್ನು ಚೆನ್ನಾಗಿ ಗಾರ್ಗಲ್‌ ಮಾಡುವುದು ಒಳ್ಳೆಯದು.

Continue Reading

ಆರೋಗ್ಯ

Life Expectancy: ಕೊರೊನಾದಿಂದ ನಮ್ಮ ಆಯುಷ್ಯದಲ್ಲಿ 2 ವರ್ಷ ಕಡಿತ; WHO ಭೀಕರ ವರದಿ

Life Expectancy: ಕೊರೊನಾ ಸೋಂಕಿನ ಪರಿಣಾಮವು ಜಗತ್ತಿನಾದ್ಯಂತ ಒಂದೇ ರೀತಿಯಾಗಿ ಪರಿಣಾಮ ಬೀರಿಲ್ಲ. ಆಯಾ ದೇಶ, ಖಂಡಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ಪರಿಣಾಮ ಬೀರಿದೆ. ಅಮೆರಿಕ ಹಾಗೂ ಆಗ್ನೇಯ ಏಷ್ಯಾದ ಜನರ ಸರಾಸರಿ ಜೀವಿತಾವಧಿಯು 3 ವರ್ಷ ಕಡಿಮೆಯಾಗಿದೆ. ಆರೋಗ್ಯಯುತ ಜೀವನವು ಎರಡೂವರೆ ವರ್ಷ ಕಡಿಮೆಯಾಗಿದೆ ಎಂಬುದಾಗಿ ವಿಶ್ವ ಆರೋಗ್ಯ ಸಂಸ್ಥೆಯು ವರದಿ ನೀಡಿದೆ.

VISTARANEWS.COM


on

Life Expectancy
Koo

ನ್ಯೂಯಾರ್ಕ್‌: ಚೀನಾದಲ್ಲಿ ಹರಡಿ, ಜಗತ್ತಿನಾದ್ಯಂತ ಪಸರಿಸಿ, ಕೋಟ್ಯಂತರ ಜನರ ಸಾವಿಗೆ ಕಾರಣವಾದ ಕೊರೊನಾ (Covid 19) ಮಹಾಮಾರಿಯ ಹಾವಳಿ ಕಡಿಮೆಯಾದರೂ ಅದು ಜನರ ಜೀವನದ ಮೇಲೆ ಬೀರುವ ಪರಿಣಾಮವು ಇನ್ನೂ ನಿಂತಿಲ್ಲ. ಕೊರೊನಾ ಲಸಿಕೆ ಪಡೆದವರಿಗೆ ಅಡ್ಡ ಪರಿಣಾಮ, ರೆಮ್ಡಿಸಿವಿರ್‌ ಪಡೆದವರು, ಐಸಿಯುಗೆ ದಾಖಲಾಗಿ ಜೀವಂತವಾಗಿ ಹೊರಬಂದವರು ಒಂದಲ್ಲ ಒಂದು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ಬೆನ್ನಲ್ಲೇ, ವಿಶ್ವ ಆರೋಗ್ಯ ಸಂಸ್ಥೆಯು (WHO) ಭೀಕರ ವರದಿ ಬಿಡುಗಡೆ ಮಾಡಿದ್ದು, ಕೊರೊನಾದಿಂದ ಜಾಗತಿಕವಾಗಿ ಜನರ ಜೀವಿತಾವಧಿಯು (Life Expectancy) 2 ವರ್ಷ ಕಡಿಮೆಯಾಗಿದೆ ಎಂದು ತಿಳಿಸಿದೆ.

“2019ರಿಂದ 2021ರ ಅವಧಿಯಲ್ಲಿ ಕೊರೊನಾ ಮಹಾಮಾರಿಯು ಜಗತ್ತಿನಾದ್ಯಂತ ಭೀಕರ ಪರಿಣಾಮ ಉಂಟುಮಾಡಿತು. ಇದರಿಂದಾಗಿ 2019-21ರ ಅವಧಿಯಲ್ಲಿ ಜಗತ್ತಿನಾದ್ಯಂತ ಮನುಷ್ಯರ ಸರಾಸರಿ ಜೀವಿತಾವಧಿಯು 71.4 ವರ್ಷಕ್ಕೆ ಇಳಿದಿದೆ. ಜನರ ಸರಾಸರಿ ಜೀವಿತಾವಧಿಯು 1.8 ವರ್ಷ ಕಡಿಮೆಯಾಗಿದೆ. ಅಷ್ಟೇ ಅಲ್ಲ, ಇದೇ ಅವಧಿಯಲ್ಲಿ ಜನರ ಆರೋಗ್ಯಯುತ ಜೀವನ ಪ್ರಮಾಣದಲ್ಲೂ 1.5 ವರ್ಷ ಕಡಿಮೆಯಾಗಿದ್ದು, 61.9 ವರ್ಷಕ್ಕೆ ಕುಸಿದಿದೆ” ಎಂಬುದಾಗಿ ಡಬ್ಲ್ಯೂಎಚ್‌ಒ ವರದಿಯಿಂದ ತಿಳಿದುಬಂದಿದೆ.

ಏಷ್ಯಾ ಭಾಗಕ್ಕೇ ತೀವ್ರ ಪರಿಣಾಮ

“ಕೊರೊನಾ ಸೋಂಕಿನ ಪರಿಣಾಮವು ಜಗತ್ತಿನಾದ್ಯಂತ ಒಂದೇ ರೀತಿಯಾಗಿ ಪರಿಣಾಮ ಬೀರಿಲ್ಲ. ಆಯಾ ದೇಶ, ಖಂಡಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ಪರಿಣಾಮ ಬೀರಿದೆ. ಅಮೆರಿಕ ಹಾಗೂ ಆಗ್ನೇಯ ಏಷ್ಯಾದ ಜನರ ಸರಾಸರಿ ಜೀವಿತಾವಧಿಯು 3 ವರ್ಷ ಕಡಿಮೆಯಾಗಿದೆ. ಆರೋಗ್ಯಯುತ ಜೀವನವು ಎರಡೂವರೆ ವರ್ಷ ಕಡಿಮೆಯಾಗಿದೆ. ಇದು ಜಗತ್ತಿನಲ್ಲೇ ಕೊರೊನಾದಿಂದ ಅತಿ ಹೆಚ್ಚು ಪರಿಣಾಮ ಬೀರಿದ ಭಾಗಗಳಾಗಿವೆ. ವೆಸ್ಟರ್ನ್‌ ಪೆಸಿಫಿಕ್‌ ರೀಜನ್‌ನಲ್ಲಿ ಅತಿ ಕಡಿಮೆ ಪರಿಣಾಮ ಬೀರಿದೆ. ಈ ಭಾಗದಲ್ಲಿ ಜನರ ಸರಾಸರಿ ಜೀವಿತಾವಧಿಯು ಶೇ.0.1ರಷ್ಟು ಕಡಿಮೆಯಾಗಿದೆ” ಎಂಬುದಾಗಿ ವರದಿಯಿಂದ ತಿಳಿದುಬಂದಿದೆ.

ಮತ್ತೊಂದು ಸೋಂಕು ಸೃಷ್ಟಿಸಿದ ಚೀನಾ

ಕೊರೊನಾ ಮೂಲಕ ಕೋಟ್ಯಂತರ ಜನರ ಪ್ರಾಣಕ್ಕೆ ಕುತ್ತು ತಂದ ಚೀನಾ ಈಗ ಮತ್ತೊಂದು ಜೈವಿಕ ಯುದ್ಧಕ್ಕೆ ಮುಂದಾಗಿದೆ. ಮಾರಣಾಂತಿಕ ಎಬೋಲಾ ರೂಪಾಂತರಿ ಸೋಂಕನ್ನು (Ebola Mutant Virus) ಚೀನಾದ ವಿಜ್ಞಾನಿಗಳು ಸೃಷ್ಟಿಸಿದ್ದು, ಇದರಿಂದ ಜಗತ್ತಿಗೇ ಆತಂಕ ಎದುರಾಗಿದೆ. ಹೆಬೈ ಮೆಡಿಕಲ್‌ ಯುನಿವರ್ಸಿಟಿಯಲ್ಲಿ ವಿಜ್ಞಾನಿಗಳು ಎಬೋಲಾ ರೂಪಾಂತರಿ ವೈರಸ್‌ಅನ್ನು ಸೃಷ್ಟಿಸಿದ್ದಾರೆ. ಹ್ಯಾಮ್‌ಸ್ಟರ್‌ಗಳಿಗೆ (ಕಿರುಕಡಿಗ-ಇಲಿಯಂತ ಚಿಕ್ಕ ಪ್ರಾಣಿ) ವೈರಸ್‌ ಇಂಜೆಕ್ಟ್‌ ಮಾಡಿದರೆ, ಮೂರೇ ದಿನಗಳಲ್ಲಿ ಅವರು ಸಾಯುತ್ತವೆ ಎಂದು ಸೈನ್ಸ್‌ ಡೈರೆಕ್ಟ್‌ ಜರ್ನಲ್‌ನಲ್ಲಿ ವರದಿ ಪ್ರಕಟವಾಗಿದೆ.

ಇದನ್ನೂ ಓದಿ: Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

Continue Reading

ಆರೋಗ್ಯ

Egg Benefits: ನೀವು ಮೊಟ್ಟೆ ಪ್ರಿಯರೆ? ಹಾಗಾದರೆ ಎಷ್ಟು ಮೊಟ್ಟೆ ತಿನ್ನಬಹುದು ಎಂಬುದೂ ಅರಿವಿರಲಿ!

ಬಹಳಷ್ಟು ಮನೆಗಳಲ್ಲಿ ನಿತ್ಯದ ಬೆಳಗಿನ ಆಹಾರವಾಗಿ ಮೊಟ್ಟೆ ಸೇವನೆ ರೂಢಿಯಲ್ಲಿದೆ. ಬೆಳಗ್ಗೆದ್ದ ಕೂಡಲೇ ಉಪಹಾರಕ್ಕೆ ಮೊಟ್ಟೆಯ ಆಮ್ಲೆಟ್‌ ಬಹಳ ಸರಳವೂ ಸುಲಭವೂ ಆಗಿ ಮಾಡಿಕೊಳ್ಳಬಹುದಾದ್ದರಿಂದ ಅನೇಕರು ಇದನ್ನು ಅವಲಂಬಿಸಿರುತ್ತಾರೆ. ಹೆಚ್ಚು ಶ್ರಮ ಬೇಡದ, ಪೌಷ್ಟಿಕಾಂಶವೂ ಇರುವ ಆಹಾರ ಇದಾದ್ದರಿಂದ ಯಾವ ಯೋಚನೆಯೂ ಇಲ್ಲದೆ, ಮೊಟ್ಟೆಯ (Egg Benefits) ಬಗೆಬಗೆಯ ಆಹಾರಗಳನ್ನು ನಿತ್ಯವೂ ತಯಾರಿಸುತ್ತಾರೆ. ಆದರೆ…

VISTARANEWS.COM


on

Egg Benefits
Koo

ಮೊಟ್ಟೆ ಅತ್ಯಂತ ಪೌಷ್ಟಿಕವಾದ ಆಹಾರಗಳಲ್ಲಿ ಒಂದು ಎಂಬುದರ ಬಗ್ಗೆ ಯಾವ ಅನುಮಾನಗಳೂ ಇಲ್ಲ. ಇದರಲ್ಲಿ ದೇಹಕ್ಕೆ ಅಗತ್ಯವಾದ ಸಾಕಷ್ಟು ಒಳ್ಳೆಯ ಪೋಷಕಾಂಶಗಳು ಇರುವ ಹಾಗೆಯೇ ಕೊಬ್ಬೂ ಇವೆ. ಬಹಳಷ್ಟು ಮನೆಗಳಲ್ಲಿ ನಿತ್ಯದ ಬೆಳಗಿನ ಆಹಾರವಾಗಿ ಮೊಟ್ಟೆ ಸೇವನೆ ರೂಢಿಯಲ್ಲಿದೆ. ಬೆಳಗ್ಗೆದ್ದ ಕೂಡಲೇ ಉಪಹಾರಕ್ಕೆ ಮೊಟ್ಟೆಯ ಆಮ್ಲೆಟ್‌ ಬಹಳ ಸರಳವೂ ಸುಲಭವೂ ಆಗಿ ಮಾಡಿಕೊಳ್ಳಬಹುದಾದ್ದರಿಂದ ಅನೇಕರು ಇದನ್ನು ಅವಲಂಬಿಸಿರುತ್ತಾರೆ. ಹೆಚ್ಚು ಶ್ರಮ ಬೇಡದ, ಪೌಷ್ಟಿಕಾಂಶವೂ ಇರುವ ಆಹಾರ ಇದಾದ್ದರಿಂದ ಯಾವ ಯೋಚನೆಯೂ ಇಲ್ಲದೆ, ಮೊಟ್ಟೆಯ ಬಗೆಬಗೆಯ ಆಹಾರಗಳನ್ನು ನಿತ್ಯವೂ ತಯಾರಿಸುತ್ತಾರೆ. ತೂಕ ಇಳಿಸುವ ಮಂದಿ, ದೇಹದಾರ್ಢ್ಯ ಬಲಪಡಿಸುವ ಮಂದಿ, ಜಿಮ್‌ಗೆ ಹೋಗಿ ವರ್ಕೌಟ್‌ ಮಾಡುವ ಮಂದಿ ಎಲ್ಲರಿಗೂ ಮೊಟ್ಟೆಯೇ ಆರಾಧ್ಯ ದೈವ. ಧಾವಂತದ ಬದುಕಿಗೆ ಹೇಳಿ ಮಾಡಿಸಿದ ಆಹಾರ ಇದಾದರೂ, ಮೊಟ್ಟೆಯನ್ನು ಎಷ್ಟು ತಿನ್ನಬೇಕು, ಹೇಗೆ ತಿನ್ನಬೇಕು ಎಂಬ ಬಗ್ಗೆ ಹೆಚ್ಚು ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಮೊಟ್ಟೆ ಒಳ್ಳೆಯದೆಂದು ಕೇವಲ ಮೊಟ್ಟೆಯೊಂದನ್ನೇ ತಿಂದರೆ ಅದರಿಂದ ಖಂಡಿತ ಅಡ್ಡ ಪರಿಣಾಮಗಳೂ ಆದೀತು ಎಂಬುದನ್ನು ಪ್ರತಿಯೊಬ್ಬರೂ ನೆನಪಿಡಬೇಕು. ಯಾಕೆಂದರೆ ಮೊಟ್ಟೆಯಲ್ಲಿ ಪ್ರೊಟೀನ್‌ ಇರುವಂತೆಯೇ, ನಮ್ಮ ದೇಹದಲ್ಲಿ ಕೊಲೆಸ್ಟೆರಾಲ್‌ ಕೂಡಾ ಹೆಚ್ಚಿಸುವ ಅಪಾಯವಿದೆ. ಹಾಗಾಗಿ ಮೊಟ್ಟೆ ಎಷ್ಟು ತಿನ್ನಬೇಕು, ಹೇಗೆ ತಿನ್ನಬೇಕು ಎಂಬ ಅರಿವು (Egg Benefits) ಅತ್ಯಂತ ಅಗತ್ಯ.

the egg

ಮೊಟ್ಟೆಯಲ್ಲಿ ಏನೇನಿವೆ?

ಪ್ರೊಟೀನ್‌ನ ಜೊತೆಜೊತೆಗೇ, ಪೊಟಾಶಿಯಂ, ನಿಯಾಸಿನ್‌, ರೈಬೋ ಫ್ಲೇವಿನ್‌, ಮೆಗ್ನೀಷಿಯಂ, ಸೋಡಿಯಂ, ಫಾಸ್ಪರಸ್‌, ಕಬ್ಬಿಣಾಂಶ, ಝಿಂಕ್ ಮತ್ತಿತರ ಖನಿಜಾಂಶಗಳೂ, ವಿಟಮಿನ್‌ ಎ, ವಿಟಮಿನ್‌ ಡಿ, ವಿಟಮಿನ್‌ ಬಿ6, ಬಿ12, ಫೋಲಿಕ್‌ ಆಸಿಡ್‌, ಪ್ಯಾಂಟೋಥೆನಿಕ್‌ ಆಸಿಡ್‌, ಥೈಮೀನ್‌ ಇತ್ಯಾದಿಗಳೆಲ್ಲವೂ ಇವೆ. ಇವೆಲ್ಲವುಗಳ ಜೊತೆಗೆ, ಒಂದು ಮೊಟ್ಟೆಯಲ್ಲಿ 180ರಿಂದ 300 ಮಿಲಿಗ್ರಾಂಗಳಷ್ಟು ಕೊಲೆಸ್ಟೆರಾಲ್‌ ಇವೆ. ಇದು ಮೊಟ್ಟೆಯ ಹಳದಿ ಭಾಗವಾದ ಯೋಕ್‌ನಲ್ಲಿರುವುದರಿಂದ ಮೊಟ್ಟೆ ತಿನ್ನುವಾಗ ಇದನ್ನು ನೆನಪಿನಲ್ಲಿಟ್ಟಿರಬೇಕು. ಪ್ರತಿ ದಿನಕ್ಕೆ 300 ಎಂಜಿಗಿಂತ ಹೆಚ್ಚು ಕೊಲೆಸ್ಟೆರಾಲ್‌ ಸೇವನೆ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲವೆಂದು ತಜ್ಞರ ಲೆಕ್ಕಾಚಾರ. ಮೊಟ್ಟೆಯ ಬಿಳಿಲೋಳೆಯಲ್ಲಿ ಯಾವ ಕೊಲೆಸ್ಟೆರಾಲ್‌ ಕೂಡಾ ಇರುವುದರಿಂದ ಇದನ್ನು ಸೇವಿಸುವುದರಿಂದ ತೊಂದರೆಯಿಲ್ಲ. ಆದರೆ ಹಳದಿ ಭಾಗವನ್ನು ಸೇರಿಸಿಕೊಂಡು ನಿತ್ಯವೂ ಆಮ್ಲೆಟ್‌ ಮಾಡಿ ಸೇವಿಸುತ್ತಿದ್ದರೆ ಯೋಚನೆ ಮಾಡಲೇಬೇಕು. ಹೆಚ್ಚು ತಿನ್ನುವುದರಿಂದ ಕೊಲೆಸ್ಟೆರಾಲ್‌ ಅಗತ್ಯಕ್ಕಿಂತ ಹೆಚ್ಚು ದೇಹ ಸೇರಿ, ಹೃದಯದ ಸಮಸ್ಯೆ, ರಕ್ತದೊತ್ತಡ, ಪಾರ್ಶ್ವವಾಯು ಮತ್ತಿತರ ಸಮಸ್ಯೆಗಳು ಬರುವ ಅಪಾಯವೂ ಇವೆ.

Eggs with protein and micronutrients are also healthy for eyes Ophthalmia

ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬಹುದು?

ಆರೋಗ್ಯಕರ ಆಹಾರ ಆಭ್ಯಾಸದ ಪ್ರಕಾರ, ಒಬ್ಬ ವ್ಯಕ್ತಿ ದಿನಕ್ಕೊಂದು ಮೊಟ್ಟೆಯಂತೆ ವಾರದಲ್ಲಿ ಮೂರರಿಂದ ನಾಲ್ಕು ಬಾರಿ ತಿನ್ನಬಹುದು. ಅಂದರೆ ವಾರಕ್ಕೆ ಹೆಚ್ಚೆಂದರೆ ನಾಲ್ಕು ಮೊಟ್ಟೆ ಸೇವನೆ ಆರೋಗ್ಯಕರ. ಮಕ್ಕಳು ದಿನಕ್ಕೊಂದರಂತೆ ಮೊಟ್ಟೆ ಸೇವಿಸಬಹುದು. ಹೃದ್ರೋಗ, ಅತಿಯಾದ ಕೊಲೆಸ್ಟೆರಾಲ್‌ ಇರುವ ಮಂದಿ ವಾರಕ್ಕೆ ಮೂರಕ್ಕಿಂತ ಹೆಚ್ಚು ಮೊಟ್ಟೆ ತಿನ್ನುವುದು ಒಳ್ಳೆಯದಲ್ಲ. ಆದರೆ ಮೊಟ್ಟೆಯ ಹಳದಿ ಭಾಗವನ್ನು ತೆಗೆದು ಕೇವಲ ಬಿಳಿ ಭಾಗವನ್ನು ಮಾತ್ರ ನೀವು ತಿನ್ನುವುದಾದರೆ ಈ ಸಂಖ್ಯೆಯನ್ನು ಅನುಸರಿಸಬೇಕಾಗಿಲ್ಲ.

ಇದನ್ನೂ ಓದಿ: Health Benefits Of Okra: ಬೆಂಡೆಕಾಯಿ ತಿನ್ನುತ್ತೀರಿ ನಿಜ; ಅದರಿಂದಾಗುವ ಪ್ರಯೋಜನಗಳೇನು ಗೊತ್ತಿದೆಯಾ?

Continue Reading

ಆರೋಗ್ಯ

World Thyroid Day: ಇಂದು ವಿಶ್ವ ಥೈರಾಯ್ಡ್‌ ದಿನ; ‘ಗಂಟಲ ಚಿಟ್ಟೆ’ಯ ಬಗ್ಗೆ ಈ ಸಂಗತಿ ನಿಮಗೆ ಗೊತ್ತೆ?

ಥೈರಾಯ್ಡ್‌ ಚೋದಕದ ಅಸಮತೋಲನದ ಸಮಸ್ಯೆ ವಿಶ್ವದೆಲ್ಲೆಡೆ ಯದ್ವಾತದ್ವಾ ಹೆಚ್ಚಿದೆ. ಹಾಗಾಗಿ ಥೈರಾಯ್ಡ್‌ ಆರೋಗ್ಯದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ, ಮೇ 25ರಂದು ವಿಶ್ವ ಥೈರಾಯ್ಡ್‌ ದಿನವನ್ನು (World Thyroid Day) ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಥೈರಾಯ್ಡ್ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

World Thyroid Day
Koo

ಗಂಟಲ ಮುಂಭಾಗದಲ್ಲಿ ಸಣ್ಣ ಚಿಟ್ಟೆಯಂಥ ಗ್ರಂಥಿಯದು- ಹೆಸರು ಥೈರಾಯ್ಡ್‌ ಗ್ರಂಥಿ. ಗ್ರಂಥಿ ಚಿಕ್ಕದಾದರೂ ಅದರ ಕೆಲಸ ದೊಡ್ಡದು. ದೇಹದ ಚಯಾಪಚಯ ನಿರ್ವಹಿಸುವುದು, ಶಕ್ತಿ ಸಂಚಯನ, ಎಲ್ಲ ಚೋದಕಗಳ ಸಮತೋಲನ- ಹೀಗೆ ಒಂದಿಷ್ಟು ಮುಖ್ಯವಾದ ಕಾರ್ಯಗಳನ್ನಿದು ನೋಡಿಕೊಳ್ಳುತ್ತದೆ. ಬೇರೆಯ ಚೋದಕಗಳ ಮೇಲುಸ್ತುವಾರಿ ನೋಡಿಕೊಳ್ಳುವ ಹಾರ್ಮೋನಿನ ಸಮತೋಲನವೇ ತಪ್ಪಬಾರದಲ್ಲ. ಒಂದೊಮ್ಮೆ ತಪ್ಪಿದರೂ, ಅದರಿಂದ ದೇಹದ ಮೇಲಾಗುವ ಲಕ್ಷಣ ಮತ್ತು ಪರಿಣಾಮಗಳನ್ನು ಅರಿತುಕೊಂಡರೆ, ತ್ವರಿತವಾಗಿ ಚಿಕಿತ್ಸೆ ತೆಗೆದುಕೊಳ್ಳುವುದು ಸಾಧ್ಯ.
ಈ ನಿಟ್ಟಿನಲ್ಲಿ, ಥೈರಾಯ್ಡ್‌ ಕುರಿತಾಗಿ ಜನರಲ್ಲಿ ಜಾಗೃತಿ ಹೆಚ್ಚಿಸುವ ಉದ್ದೇಶದಿಂದ ಮೇ ತಿಂಗಳ 25ನೇ ದಿನವನ್ನು ವಿಶ್ವ ಥೈರಾಯ್ಡ್‌ ದಿನವೆಂದು (World Thyroid Day) ಗುರುತಿಸಲಾಗಿದೆ. ಎಂಥ ಲಕ್ಷಣಗಳ ಬಗ್ಗೆ ಜಾಗ್ರತೆ ವಹಿಸಬೇಕು? ಯಾವೆಲ್ಲ ಸಮಸ್ಯೆಗಳು ತಲೆದೋರಿದರೆ ಥೈರಾಯ್ಡ್‌ ಕ್ಷಮತೆಯ ಬಗ್ಗೆ ವೈದ್ಯರಲ್ಲಿ ಸಮಾಲೋಚನೆ ಅಗತ್ಯವಾಗುತ್ತದೆ? ಆರಂಭದಲ್ಲೇ ಈ ಸಮಸ್ಯೆಯನ್ನು ಪತ್ತೆ ಮಾಡಿ, ಚಿಕಿತ್ಸೆ ಪಡೆಯುವುದರ ಲಾಭಗಳೇನು ಎಂಬಿತ್ಯಾದಿ ವಿವರಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.

Weight Loss Tips

ತೂಕದಲ್ಲಿ ವ್ಯತ್ಯಾಸ

ಯಾವುದೇ ಸರಿಯಾದ ಕಾರಣವಿಲ್ಲದಂತೆ ತೂಕದಲ್ಲಿ ವ್ಯತ್ಯಾಸವಾಗುತ್ತಿದೆ ಎಂದಾದರೆ ಎಚ್ಚರ ಅಗತ್ಯ. ಅಂದರೆ, ಆಹಾರ ಅಥವಾ ವ್ಯಾಯಾಮದಲ್ಲಿ ಯಾವುದೇ ವ್ಯತ್ಯಯವಾಗಿಲ್ಲದಿದ್ದರೂ ತೂಕ ಹೆಚ್ಚಿದೆ ಎಂದಾದರೆ ಹೈಪೋಥೈರಾಯ್ಡ್‌ (ಅಂದರೆ ಕಡಿಮೆ ಇಲ್ಲವೇ ಅಸಮರ್ಪಕ ಥೈರಾಯ್ಡ್‌ ಹಾರ್ಮೋನುಗಳು) ಇಲ್ಲವೆಂಬುದನ್ನು ಖಾತ್ರಿ ಪಡಿಸಿಕೊಳ್ಳಿ. ವ್ಯಾಯಾಮ ಹೆಚ್ಚಿಸಿಲ್ಲ, ತಿನ್ನುವುದನ್ನೂ ಕಡಿಮೆ ಮಾಡಿಲ್ಲ ಎಂದಾದರೂ ತೂಕ ಇಳಿಯುತ್ತಿದೆ ಎಂದಾದರೆ ಹೈಪರ್‌ (ಹೆಚ್ಚಿನ) ಥೈರಾಯ್ಡ್‌ ಇದೆಯೇ ಪರೀಕ್ಷಿಸಿಕೊಳ್ಳಿ.

Image Of Mental Health

ಸುಸ್ತು, ಆಯಾಸ

ರಾತ್ರಿಯಿಡೀ ಸರಿಯಾಗಿ ನಿದ್ದೆ ಮಾಡಿದ್ದರೂ ಬೆಳಗ್ಗೆ ಏಳುವಾಗ ಆಯಾಸ ಎನಿಸುತ್ತಿದೆ. ಊಟ-ಉಪಚಾರಗಳು ಸರಿಯಾಗಿಯೇ ಇದ್ದರೂ ಸುಸ್ತು ಬಿಡುತ್ತಿಲ್ಲ ಎಂದಾದರೆ ಥೈರಾಯ್ಡ್‌ ಪರೀಕ್ಷಿಸಿಕೊಳ್ಳುವುದು ಸೂಕ್ತ. ದೇಹದ ಚಯಾಪಚಯದಲ್ಲಿ ಏರಿಳಿತ ಆಗಿದ್ದಕ್ಕಾಗಿ ಕಾಡುವ ಸುಸ್ತು, ಆಯಾಸಗಳಿವು. ಥೈರಾಯ್ಡ್‌ ಏರಿಳಿತದ ಮುಖ್ಯ ಲಕ್ಷಣಗಳಲ್ಲಿ ಇದೂ ಒಂದು.

ಮೂಡ್‌ ಬದಲಾವಣೆ

ಥೈರಾಯ್ಡ್‌ ಅಸಮತೋಲನದಿಂದ ಮಾನಸಿನ ಆರೋಗ್ಯದಲ್ಲೂ ವ್ಯತ್ಯಾಸ ಕಾಣುವುದು ಸಹಜ. ಥೈರಾಯ್ಡ್‌ ಚೋದಕದ ಉತ್ಪಾದನೆ ಕಡಿಮೆಯಾದರೆ ಬೇಸರ, ಖಿನ್ನತೆ, ಶಕ್ತಿ ಸೋರಿದ ಭಾವಗಳು ಕಾಡುತ್ತವೆ. ಥೈರಾಯ್ಡ್‌ ಚೋದಕದ ಉತ್ಪಾದನೆ ಹೆಚ್ಚಾದರೆ, ಆತಂಕ, ಒತ್ತಡ, ಕಿರಿಕಿರಿ, ಕೋಪಗೊಳ್ಳುವ ಕ್ರಿಯೆಗಳು ಹೆಚ್ಚುತ್ತವೆ. ದೈನಂದಿನ ಚಟುವಟಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೂ ಮೂಡ್‌ ಮಾತ್ರ ಬದಲಾಗುತ್ತಿದೆ ಎಂದಾದರೆ ವೈದ್ಯರಲ್ಲಿ ಸಮಾಲೋಚನೆ ಅಗತ್ಯ.

Heart Health Tea Benefits

ಹೃದಯ ಬಡಿತ ಏರುಪೇರು

ಥೈರಾಯ್ಡ್‌ ಏರುಪೇರಾಗುವುದು ನೇರವಾಗಿ ಹೃದಯದ ಬಡಿತದ ಮೇಲೂ ಪರಿಣಾಮ ಬೀರುತ್ತದೆ. ಹೈಪೊ ಥೈರಾಯ್ಡ್‌ ಸಂದರ್ಭದಲ್ಲಿ ಬಡಿತ ನಿಧಾನವಾದರೆ, ಹೈಪರ್‌ ಥೈರಾಯ್ಡ್‌ ಇದ್ದಾಗ ಬಡಿತ ತೀವ್ರವಾಗುತ್ತದೆ. ಇವುಗಳನ್ನು ವೈದ್ಯರ ಮಾಮೂಲಿ ದೈಹಿಕ ತಪಾಸಣೆಯಲ್ಲೂ ಪತ್ತೆ ಮಾಡಬಹುದು. ಬಡಿತ ಜೋರಾಗಿದ್ದು ಅನುಭವಕ್ಕೂ ಬರಬಹುದು. ಹಾಗಾಗನಿ ನಿಯಮಿತವಾಗಿ ವೈದ್ಯರ ತಪಾಸಣೆ ಅಗತ್ಯ.

Hyperthyroidism

ಕುತ್ತಿಗೆ ದಪ್ಪ

ಥೈರಾಯ್ಡ್‌ ಸಮಸ್ಯೆ ಇದ್ದಾಗ ಕುತ್ತಿಗೆಯ ಭಾಗ ಊದಿಕೊಂಡಂತೆ ಕಾಣಬಹುದು. ಅಯೋಡಿನ್‌ ಕೊರತೆಯಾದಾಗ (ಗೊಯಿಟ್ರ್ ರೋಗ), ಥೈರಾಯ್ಡ್‌ ಹಿಗ್ಗಿದಾಗ ಅಥವಾ ಥೈರಾಯ್ಡ್‌ನಲ್ಲಿ ಟ್ಯೂಮರ್‌ಗಳಿದ್ದಾಗ ಕುತ್ತಿಗೆಯ ಭಾಗ ಊದಿಕೊಂಡಂತೆ ಅಥವಾ ದಪ್ಪವಾದಂತೆ ಕಾಣುತ್ತದೆ. ಹೀಗೆ ಕಂಡಾಗಲೂ ವೈದ್ಯರಲ್ಲಿ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ.

ಬಿಸಿ-ತಣ್ಣ ಹೆಚ್ಚು

ಈ ಎರಡೂ ಹೆಚ್ಚಾಗುತ್ತದೆ. ಚಯಾಪಚಯ ಹೆಚ್ಚಿದಾಗ ಅಥವಾ ಕಡಿಮೆಯಾದಾಗ ಉಷ್ಣತೆ ಮತ್ತು ಚಳಿ ಎರಡನ್ನೂ ಸಹಿಸಿಕೊಳ್ಳುವ ಸಾಮರ್ಥ್ಯ ಕಡಿಮೆಯಾಗುತ್ತದೆ. ವಾತಾವರಣದ ಉಷ್ಣತೆಗೆ ವಿರುದ್ಧವಾಗಿ ಚಳಿ ಅಥವಾ ಸೆಕೆಯ ಅನುಭವ ಆಗುತ್ತಿದ್ದರೆ, ಅತಿಯಾಗಿ ಬೆವರುತ್ತಿದ್ದರೆ, ಸೆಕೆ ಅಸಹನೀಯ ಎನಿಸಿದರೆ ಥೈರಾಯ್ಡ್‌ ಪರೀಕ್ಷಿಸಿಕೊಳ್ಳುವುದಕ್ಕೆ ಸಕಾಲ.

ಇದನ್ನೂ ಓದಿ: Fruit Juice Side Effects: ಹಣ್ಣು ತಿಂದರೆ ಒಳ್ಳೆಯದೋ, ಹಣ್ಣಿನ ಜ್ಯೂಸ್‌ ಕುಡಿದರೆ ಒಳ್ಳೆಯದೋ?

ಕೂದಲು, ಚರ್ಮ

ಇವುಗಳಲ್ಲೂ ವ್ಯತ್ಯಾಸ ಕಾಣುತ್ತದೆ. ಹೈಪೊ ಥೈರಾಯ್ಡ್‌ ಇದ್ದಾಗ ಕೂದಲು ಮತ್ತು ಚರ್ಮ ಒಣಗಿ ಒರಟಾಗುತ್ತವೆ. ಕೂದಲು ಉದುರುವುದು ಸಾಮಾನ್ಯ. ಹೈಪರ್‌ ಥೈರಾಯ್ಡ್‌ ಇದ್ದರೆ ಕೂದಲು ಉದುರಿ, ಸಪೂರವಾಗುತ್ತದೆ. ಕೂದಲು ಮತ್ತು ಚರ್ಮದ ಆರೋಗ್ಯ ಸರಿಯಾಗಿರುವುದಕ್ಕೂ ಥೈರಾಯ್ಡ್‌ ಚೋದಕಗಳು ಅಗತ್ಯವಾಗಿ ಬೇಕು.

Continue Reading
Advertisement
K Raghupathi Bhat
ಪ್ರಮುಖ ಸುದ್ದಿ10 seconds ago

K Raghupathi Bhat: ಬಂಡಾಯ ಸ್ಪರ್ಧೆ; ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ

Indigo Flight
ದೇಶ22 mins ago

IndiGo Flight: ಗಾಂಜಾ ಮತ್ತಿನಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಕಿಡಿಗೇಡಿ; ಮುಂದೇನಾಯ್ತು?

Labours fall sick
ಕರ್ನಾಟಕ45 mins ago

Workers Fall Sick: ಹಲ್ಲಿ ಬಿದ್ದ ಆಹಾರ ಸೇವಿಸಿ ಒಬ್ಬ ಕಾರ್ಮಿಕ ತೀವ್ರ ಅಸ್ವಸ್ಥ, ಹಲವರಿಗೆ ವಾಂತಿ-ಭೇದಿ

Natasa Stankovic
ಪ್ರಮುಖ ಸುದ್ದಿ51 mins ago

Natasa Stankovic : ಡೈವೋರ್ಸ್​ ಗಾಸಿಪ್​ ನಡುವೆಯೇ ಬೇರೊಬ್ಬರ ಜತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಪತ್ನಿ

Fire Accident
ದೇಶ57 mins ago

Fire Accident: ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ; ಮಹಿಳೆಯರು, ಮಕ್ಕಳು ಸೇರಿ 7 ಮಂದಿ ದಾರುಣ ಸಾವು

Devotees chant Jai Shri Ram as CM Siddaramaiah enters Dharmasthala temple
ದಕ್ಷಿಣ ಕನ್ನಡ1 hour ago

CM Siddaramaiah: ಸಿದ್ದು, ಡಿಕೆಶಿ ಧರ್ಮಸ್ಥಳ ದೇವಸ್ಥಾನಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಜೈಶ್ರೀರಾಮ್‌, ಮೋದಿ ಕೀ ಜೈ ಘೋಷಣೆ!

IPL 2024
ಪ್ರಮುಖ ಸುದ್ದಿ1 hour ago

IPL 2024 : ಶಿಮ್ರೋನ್ ಹೆಟ್ಮಾಯರ್​ಗೆ ದೊಡ್ಡ ಮೊತ್ತದ ದಂಡ ವಿಧಿಸಿದ ಬಿಸಿಸಿಐ

MLC Chalavadi Narayanaswamy latest statement
ಕರ್ನಾಟಕ1 hour ago

Bengaluru News: ಇದು ಎಷ್ಟು ಪರ್ಸೆಂಟ್ ಸರ್ಕಾರ? ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

BJP Raitha Morcha State President Former MLA A S Patil Nadahalli latest Statement
ಕರ್ನಾಟಕ1 hour ago

Bengaluru News: ರೈತರ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತೇ ಹೋಗಿದೆ; ರೈತ ಮೋರ್ಚಾ ಆಕ್ರೋಶ

Former Minister Araga jnanendra latest statement in Shivamogga
ಶಿವಮೊಗ್ಗ1 hour ago

Araga jnanendra: ಠಾಣೆಗೇ ನುಗ್ಗಿ ಜನ ಪೊಲೀಸರಿಗೆ ಹೊಡೆಯುವಂತಾಗಿದೆ; ಆರಗ ಜ್ಞಾನೇಂದ್ರ ಟೀಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌