Site icon Vistara News

Car Accident | ಅಭಿನವ ಕಾಡಸಿದ್ದೇಶ್ವರ ಮರಡಿಮಠದ ಸ್ವಾಮೀಜಿ ಕಾರು ನಜ್ಜುಗುಜ್ಜು

car accident

ಬಾಗಲಕೋಟೆ: ಚಾಲಕನ ನಿಯಂತ್ರಣ ತಪ್ಪಿ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಕಾರು ಅಪಘಾತವಾಗಿದೆ. ಗುಳೇದಗುಡ್ಡ ತಾಲ್ಲೂಕಿನ ತೋಗುಣಸಿ ತಾಂಡಾದ ಬಳಿ ಮಂಗಳವಾರ ಬೆಳಗ್ಗೆ 7.30ರ ಸುಮಾರಿಗೆ (Car Accident) ಘಟನೆ ನಡೆದಿದೆ.

ಗದಗ ಜಿಲ್ಲೆ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ಕಾಡಸಿದ್ದೇಶ್ವರ ಮರಡಿಮಠದ ಅಭಿನವ ಸ್ವಾಮೀಜಿ ಅವರು ಕಾರಿನಲ್ಲಿ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ನೀಲಗಿರಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ಪೂರ್ಣ ನುಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಇಂಜಿನ್‌ ಹೊರಕ್ಕೆ ಬಂದಿದೆ.

ಕಾರು ಅಪಘಾತ ಅಭಿನವ ಸ್ವಾಮೀಜಿ ಸೇರಿದಂತೆ ಮೂವರು ಸೇಫ್‌

ಕಾರಿನಲ್ಲಿಂದ ಸ್ವಾಮೀಜಿ ಹಾಗೂ ಚಾಲಕ ಸೇರಿದಂತೆ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಗುಳೇದಗುಡ್ಡ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಅಭಿನವ ಸ್ವಾಮೀಜಿ ಮಠಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.  

ಇದನ್ನೂ ಓದಿ | ಹಾಸನದಲ್ಲಿ ವಿದ್ಯುತ್ ತಂತಿ ತುಳಿದು ವ್ಯಕ್ತಿಯ ಸಾವು

Exit mobile version