Car Accident | ಮತ್ತೆ ಬೆಂಗಳೂರು ವಿವಿಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ; ಶಿಲ್ಪಶ್ರೀ ಸಾವಿನ ಬಳಿಕ ಒಂಬತ್ತನೇ ಅಪಘಾತ - Vistara News

ಕರ್ನಾಟಕ

Car Accident | ಮತ್ತೆ ಬೆಂಗಳೂರು ವಿವಿಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ; ಶಿಲ್ಪಶ್ರೀ ಸಾವಿನ ಬಳಿಕ ಒಂಬತ್ತನೇ ಅಪಘಾತ

ಬೆಂಗಳೂರು ವಿವಿಯ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದಾಗಿ ವಿದ್ಯಾರ್ಥಿಯೊಬ್ಬಳು ರಸ್ತೆ ಅಪಘಾತದಲ್ಲಿ (Car Accident) ಮೃತಪಟ್ಟಿದ್ದರು. ಇದೇ ಮಾರ್ಗದಲ್ಲೀಗ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

VISTARANEWS.COM


on

car accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಪಘಾತ ಪ್ರಕರಣಗಳು (Car Accident) ಮುಂದುವರಿದಿದ್ದು, ವಿದ್ಯಾರ್ಥಿನಿ ಶಿಲ್ಪಶ್ರೀ ಸಾವಿನ ಬಳಿಕ ಒಂಬತ್ತನೇ ಅಪಘಾತ ಸೋಮವಾರ (ನ.21) ಸಂಭವಿಸಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿವಿ ಕೇಂದ್ರ ಕಚೇರಿ ಮತ್ತು ನಾಗರಭಾವಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸ್ವಿಫ್ಟ್ ಮತ್ತು ಸ್ವಿಫ್ಟ್ ಡಿಸೈರ್ ನಡುವೆ ಅಪಘಾತ ನಡೆದಿದೆ.

Car Accident

ಬಯೋಟೆಕ್ ವಿಭಾಗದ ಪ್ರಾಧ್ಯಾಪಕಿಯೊಬ್ಬರು ಕ್ಯಾಬ್‌ ಬುಕ್ ಮಾಡಿದ್ದರು. ಈ ವೇಳೆ ವೇಗವಾಗಿ ಬಂದಂತಹ ಖಾಸಗಿ ವಾಹನವು ಕ್ಯಾಬ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ವಿವಿಯಲ್ಲಿ ಅಪಘಾತ ತಡೆಗೆ ಹಲವಾರು ಕ್ರಮಗಳನ್ನು ಕೈಗೊಂಡರೂ ಅಪಘಾತಗಳು ಮುಂದುವರಿದಿದೆ. ಸಂವಹನ ಮತ್ತು ಬಯೋಟೆಕ್ ವಿಭಾಗದ ಮುಂದೆ ರಸ್ತೆ ಉಬ್ಬುಗಳು ಇಲ್ಲದೇ ಇರುವುದೆ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಹಾಗೂ ವಾಹನ ಸವಾರರು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಕಾರ್ಯಕ್ರಮದಿಂದಾಗಿ ರಸ್ತೆ ಉಬ್ಬುಗಳನ್ನು ತೆರವು ಮಾಡಲಾಯಿತು. ಕಾರ್ಯಕ್ರಮ ಮುಗಿದು ನಾಲ್ಕು ತಿಂಗಳಾದರೂ ಉಬ್ಬುಗಳ ಮರು ನಿರ್ಮಾಣ ಮಾಡದ ಬಿಬಿಎಂಪಿ ವಿರುದ್ಧ ಕಿಡಿಕಾರಿದ್ದಾರೆ. ಹಲವಾರು ಬಾರಿ ಬಿಬಿಎಂಪಿ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸಿಲ್ಲ. ಬಿಬಿಎಂಪಿಯ ಬೇಜವಾಬ್ದಾರಿಯಿಂದ ರಸ್ತೆ ಸುರಕ್ಷತೆ ಕುಗ್ಗುತ್ತಿದೆ ಎಂಬ ಆರೋಪವು ಕೇಳಿಬಂದಿದೆ.

ಇದನ್ನೂ ಓದಿ | Road Accident | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ನೀರಿನ ಟ್ಯಾಂಕರ್; ಸ್ಥಳದಲ್ಲಿಯೇ ಚಾಲಕ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಕಾರ್ತಿಕ್‌ಗೆ ಹೇಗೆ ಸಿಕ್ತು? ಡೌನ್ಲೋಡ್‌ ಮಾಡಿದ್ದು ಯಾರು? ಈ ಬಗ್ಗೆ ದೇವರಾಜೇಗೌಡ ಹೇಳಿದ್ದೇನು?

Hassan Pen Drive Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ದೇಶಾದ್ಯಂತ ದೊಡ್ಡ ಸಂಚಲನ ಉಂಟು ಮಾಡುತ್ತಿದೆ. ಕಾರ್ತಿಕ್ 14-15 ವರ್ಷದಿಂದ ಪ್ರಜ್ವಲ್ ಹತ್ತಿರ ಕೆಲಸ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ. ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಸ್ಟೇ ಕೂಡ ತೆಗೆದುಕೊಂಡಿದ್ದಾರೆ. ತನ್ನ ಹೆಂಡತಿಯನ್ನು ಪ್ರಜ್ವಲ್‌ ಕಿಡ್ನಾಪ್‌ ಮಾಡಿ ಹಿಂಸೆ ಕೊಟ್ಟಿದ್ದ ಎಂದು ಸಹ ಕಾರ್ತಿಕ್‌ ಹೇಳಿಕೊಂಡಿದ್ದ. ಕಾಂಗ್ರೆಸ್‌ನವರ ಹತ್ತಿರ ಹೋಗಿದ್ದೆ. ನ್ಯಾಯ ಸಿಗಲಿಲ್ಲ ಅಂತಾ ಹೇಳಿದ್ದ. ನಾನು ವಕೀಲನಾಗಿ ಸತ್ಯಾಸತ್ಯತೆ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಕ್ಕೆ ಪೆನ್ ಡ್ರೈವ್ ಕೊಟ್ಟಿದ್ದ. ನಾನು ಯಾರಿಗೂ ಇದನ್ನು ಕೊಡಲ್ಲ, ಕೋರ್ಟ್‌ನಲ್ಲಿ ಜಡ್ಜ್ ಮುಂದೆ ಕೊಡುತ್ತೇನೆ ಎಂದು ಹೇಳಿದ್ದೆ ಎಂದು ದೇವರಾಜೇಗೌಡ ಸ್ಪಷ್ಟೀಕರಣ ನೀಡಿದ್ದಾರೆ.

VISTARANEWS.COM


on

Hassan Pen Drive Case How did Karthik get Prajwal video Devaraje Gowda questions
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ವಕೀಲ ದೇವರಾಜೇಗೌಡ ಸ್ಪಷ್ಟೀಕರಣ ನೀಡಿದ್ದಾರೆ. ವಿಡಿಯೊ ಲೀಕ್‌ ವಿಷಯವಾಗಿ ತಮ್ಮ ಮೇಲೆ ಬಂದ ಆರೋಪವನ್ನು ಅಲ್ಲಗಳೆದಿದ್ದಾರೆ. ಆದರೆ, ಅಶ್ಲೀಲ ವಿಡಿಯೊಗಳು ಕಾರ್ತಿಕ್ ಕೈಗೆ ಹೇಗೆ ಬಂತು? ಡೌನ್‌ಲೋಡ್ ಮಾಡಿದವರು ಯಾರು? ಪೆನ್ ಡ್ರೈವ್ ಎಲ್ಲಿಂದ ಬಂತು? ಎಂಬ ಪ್ರಶ್ನೆಯನ್ನಿಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಕೀಲ ದೇವರಾಜೇಗೌಡ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ದೇಶಾದ್ಯಂತ ದೊಡ್ಡ ಸಂಚಲನ ಉಂಟು ಮಾಡುತ್ತಿದೆ. ಕಾರ್ತಿಕ್ 14-15 ವರ್ಷದಿಂದ ಪ್ರಜ್ವಲ್ ಹತ್ತಿರ ಕೆಲಸ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ. ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಸ್ಟೇ ಕೂಡ ತೆಗೆದುಕೊಂಡಿದ್ದಾರೆ. ತನ್ನ ಹೆಂಡತಿಯನ್ನು ಪ್ರಜ್ವಲ್‌ ಕಿಡ್ನಾಪ್‌ ಮಾಡಿ ಹಿಂಸೆ ಕೊಟ್ಟಿದ್ದ ಎಂದು ಸಹ ಕಾರ್ತಿಕ್‌ ಹೇಳಿಕೊಂಡಿದ್ದ. ಕಾಂಗ್ರೆಸ್‌ನವರ ಹತ್ತಿರ ಹೋಗಿದ್ದೆ. ನ್ಯಾಯ ಸಿಗಲಿಲ್ಲ ಅಂತಾ ಹೇಳಿದ್ದ. ನಾನು ವಕೀಲನಾಗಿ ಸತ್ಯಾಸತ್ಯತೆ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಕ್ಕೆ ಪೆನ್ ಡ್ರೈವ್ ಕೊಟ್ಟಿದ್ದ. ನಾನು ಯಾರಿಗೂ ಇದನ್ನು ಕೊಡಲ್ಲ, ಕೋರ್ಟ್‌ನಲ್ಲಿ ಜಡ್ಜ್ ಮುಂದೆ ಕೊಡುತ್ತೇನೆ ಎಂದು ಹೇಳಿದ್ದೆ ಎಂದು ಸ್ಪಷ್ಟೀಕರಣ ನೀಡಿದರು.

ಆದರೆ, ಅಶ್ಲೀಲ ವಿಡಿಯೊ ಕಾರ್ತಿಕ್ ಕೈಗೆ ಹೇಗೆ ಬಂತು? ಡೌನ್‌ಲೋಡ್ ಮಾಡಿದವರು ಯಾರು? ಪೆನ್ ಡ್ರೈವ್ ಎಲ್ಲಿಂದ ಬಂತು? ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಇದ್ದ ವಿಡಿಯೊಗಳು ಕಾರ್ತಿಕ್‌ಗೆ ಸಿಕ್ಕಿದ್ದಾದರೂ ಹೇಗೆ? ಎಂದು ಪ್ರಶ್ನೆ ಮಾಡಿದ ದೇವರಾಜೇಗೌಡ, ದೃಶ್ಯ ಮತ್ತು ಪ್ರಿಂಟ್ ಮೀಡಿಯಾ ಮೇಲೆ ಇಂಜೆಕ್ಷನ್ ತಂದರು. ಆದರೆ, ಕಾರ್ತಿಕ್‌ನನ್ನು ಅಲ್ಲಿ ಪಾರ್ಟಿ ಮಾಡಿಲ್ಲ ಎಂದು ಹೇಳಿದರು.

ಕಾರ್ತಿಕ್‌ ಹೇಳಿದ್ದೆಲ್ಲವೂ ಸತ್ಯ, ಆದರೆ..!

ವಿಡಿಯೊವನ್ನು ಬಿಜೆಪಿಯವರು ಯಾಕೆ ಲೀಕ್ ಮಾಡುತ್ತಾರೆ? ಇನ್ನು ಜೆಡಿಎಸ್‌ನವರು ಅವರದ್ದನ್ನು ಲೀಕ್ ಮಾಡ್ತಾರಾ? ಇದರಿಂದ ಕಾಂಗ್ರೆಸ್‌ನವರಿಗೆ ಲಾಭ‌. ಕಾರ್ತಿಕ್ ಮೊದಲೇ ಹೇಳಿದ್ದ ಕಾಂಗ್ರೆಸ್‌ನಿಂದ ನ್ಯಾಯ ಸಿಕ್ಕಿಲ್ಲ ಅಂದಿದ್ದ. ಕಾರ್ತಿಕ್ ಹೇಳಿದ್ದು ಎಲ್ಲವೂ ಸತ್ಯ. ಆದರೆ, ನಾನು ಲೀಕ್‌ ಮಾಡಿರಬಹುದು ಎಂದು ಹೇಳಿದ್ದೊಂದು ಬಿಟ್ಟು ಎಂದು ದೇವರಾಜೇಗೌಡ ಹೇಳಿದರು.

ಇದು ನಮ್ಮ ಜಿಲ್ಲೆ, ರಾಜ್ಯದ ಹೆಣ್ಣು ಮಕ್ಕಳ ಮಾನ ಗೌರವದ ಪ್ರಶ್ನೆ. ಅವರ ಗೌರವಕ್ಕೆ ನಾನು ಧಕ್ಕೆ ತರಲ್ಲ‌. ಎಸ್ಐಟಿ ನನಗೆ ನೋಟಿಸ್ ಕೊಡಲಿ ಅಂತಾ ಕಾಯ್ತಾ ಇದ್ದೇನೆ. ನನ್ನ ಬಳಿ ಕೆಲವು ದಾಖಲೆಗಳು ಇವೆ ಕೊಡುತ್ತೇನೆ. ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸಲಿ. ಇಲ್ಲದೇ ಇದ್ದರೆ ಹೈಕೋರ್ಟ್‌ನಲ್ಲಿ ರಿಟ್ ಹಾಕುತ್ತೇನೆ. ಸಿಬಿಐಗೆ ವಹಿಸಬೇಕು ಅಂತಾ ಕೊರುತ್ತೇನೆ ಎಂದು ದೇವರಾಜೇಗೌಡ ಹೇಳಿದರು.

ಇದನ್ನೂ ಓದಿ: Hassan Pen Drive Case: ನಾನು ವಿಡಿಯೊ ಕೊಟ್ಟಿದ್ದು ದೇವರಾಜೇಗೌಡರಿಗೆ ಮಾತ್ರ; ಅವರೇ ಲೀಕ್‌ ಮಾಡಿರಬೇಕು ಎಂದ ಕಾರ್ತಿಕ್!

ಕಾರ್ತಿಕ್‌ ವಿಡಿಯೊವನ್ನು ಎಲ್‌ಇಡಿ ವಾಲ್‌ನಲ್ಲಿ ಹಾಕುತ್ತಿದ್ದನಂತೆ!

ಸ್ಟೇ ವೆಕೇಟ್ ಆದಲ್ಲಿ, ವಿಡಿಯೊದಲ್ಲಿರುವ ಹೆಣ್ಣು ಮಕ್ಕಳು ಅನುಮತಿ ಕೊಟ್ಟರೆ ಎಲ್ಇಡಿ ವಾಲ್ ಹಾಕಿ ವಿಡಿಯೊ ಪ್ಲೇ ಮಾಡುತ್ತೇನೆ ಎಂದು ಕಾರ್ತಿಕ್‌ ಹೇಳಿದ್ದ. 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಶ್ರೇಯಸ್ ಜತೆ ಇದೇ ಕಾರ್ತಿಕ್ ಇದ್ದ. ಹಲವು ಹಳ್ಳಿಗಳಲ್ಲಿ ಕಾರ್ಯಕ್ರಮ ಮಾಡಿದ್ದ. ಈ ವಿಡಿಯೊವನ್ನು ನಾನು ಚುನಾವಣೆ ವೇಳೆ ಬಿಡುಗಡೆ ಮಾಡಿದ್ದರೆ ಬಿಜೆಪಿ ಅಭ್ಯರ್ಥಿಯಾಗಿದ್ದ ನಾನು ಗೆಲ್ಲುತ್ತಿದ್ದೆ. ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಎಚ್.ಡಿ. ರೇವಣ್ಣ ಸೋಲುತ್ತಿದ್ದರು. ಆದರೆ, ನಾನು ಆ ನೀಚ ಕೆಲಸ ಮಾಡಲಿಲ್ಲ. ನನ್ನದು ನ್ಯಾಯಯುತ ಹೋರಾಟವಾಗಿದೆ. ಆದರೆ, ಲೋಕಸಭೆ ಚುನಾವಣೆ ಹೊತ್ತಲ್ಲಿ ರಿಲೀಸ್ ಆಗಿದೆ. ಅದನ್ನು ದೇವರಾಜೇಗೌಡ ಮಾಡಿದ್ದಾನೆ ಎಂದು ಹೇಳುತ್ತಾರೆ. ನಾನು ಲೀಕ್ ಮಾಡಿದ್ದಲ್ಲ,‌ ಬೇರೆಯವರಿಗೆ ಈ ವಿಡಿಯೊವನ್ನು ನೋಡುವುದಕ್ಕೂ ನಾನು ಕೊಟ್ಟಿಲ್ಲ ಎಂದು ದೇವರಾಜೇಗೌಡ ಸ್ಪಷ್ಟನೆ ನೀಡಿದರು.

Continue Reading

ಪ್ರಮುಖ ಸುದ್ದಿ

V Srinivas Prasad: ಮಣ್ಣಲ್ಲಿ ಮಣ್ಣಾದ ಸಂಸದ ಶ್ರೀನಿವಾಸ ಪ್ರಸಾದ್; ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

V Srinivas Prasad: ಮೈಸೂರಿನ ಅಶೋಕಪುರಂ ಬಳಿಯ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬೌದ್ಧ ಧರ್ಮ ಸಂಪ್ರದಾಯದಂತೆ ಸಂಸದ ಶ್ರೀನಿವಾಸ ಪ್ರಸಾದ್‌ ಅವರ ಅಂತ್ಯ ಸಂಸ್ಕಾರ ನೆರವೇರಿತು.

VISTARANEWS.COM


on

V Srinivas Prasad
Koo

ಮೈಸೂರು: ಬಿಜೆಪಿಯ ಹಿರಿಯ ನಾಯಕ, ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್‌ (V Srinivas Prasad) ಅವರು ಮಣ್ಣಲ್ಲಿ ಮಣ್ಣಾಗಿದ್ದಾರೆ. ನಗರದ ಅಶೋಕಪುರಂ ಬಳಿಯಿರುವ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬೌದ್ಧ ಧರ್ಮ ಸಂಪ್ರದಾಯದಂತೆ ಮಂಗಳವಾರ ಅಂತ್ಯಕ್ರಿಯೆ ನೆರವೇರಿತು. ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ ಸ್ವಾಭಿಮಾನಿ ಚಕ್ರವರ್ತಿಯ ನೆನೆದು ಕುಟುಂಬಸ್ಥರು ಸೇರಿ ಸಾವಿರಾರು ಅಭಿಮಾನಿಗಳು ಕಣ್ಣೀರಿಟ್ಟರು.

ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀನಿವಾಸ ಪ್ರಸಾದ್‌ ಅವರಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಅವರಿಂದ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. ಇದೇ ವೇಳೆ ರಾಷ್ಟ್ರಗೀತೆ ನುಡಿಸಿ, ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರುಗೌರವ ಸಲ್ಲಿಸಿದರು. ಶ್ರೀನಿವಾಸ್ ಪ್ರಸಾದ್ ಪತ್ನಿಗೆ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜ ಹಸ್ತಾಂತರ ಮಾಡಿದರು. ನಂತರ ಬೆಂಗಳೂರಿನ ಮಹಾಬೋದಿಯ ಶ್ರೀ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಶ್ರೀ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ಅಂತಿಮ ವಿಧಿವಿಧಾನ ನಡೆಯಿತು. ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳಿಂದ ಪ್ರಾರ್ಥನೆ ಸಲ್ಲಿಸಲಾಯಿತು.

ಬಂತೇಜಿಗಳಿಂದ ಬುದ್ಧವಂದನ, ದಮ್ಮವಂದನ, ಸಂಘ ವಂದನ, ಎಲ್ಲಾ ಜನರಿಗೆ ತ್ರಿಸರಣ, ಪಂಚಶೀಲ ಬೋಧನೆ, ಬಂತೇಜಿಗಳಿಂದ ರತನ ಸೂತ್ರ ಪಠಣ, ಎಲ್ಲ ಜನರಿಂದ ಧ್ಯಾನ ಪಠಣ, ತಿರೋಕುಡ್ಡ ಸೂತ್ರ ಪಠಣ, ಬೌದ್ಧ ಬಂತೇಜಿಗಳಿಗೆ ವಸ್ತ್ರದಾನ, ಹಣ್ಣುಗಳ ಅರ್ಪಣೆ, ನೀರು ಸುರಿಸಿ ಪುಣ್ಯಾನುಮೋದನೆ, ಕುಟುಂಬಸ್ಥರು ಗೌರವ ಸಲ್ಲಿಸಿದ ಬಳಿಕ ದೇಹ ಗುಂಡಿಗಿಳಿಸಿ ಮಂತ್ರ ಪಠಣ ಸೇರಿ ಹಲವು ವಿಧಿ ವಿಧಾನ ನಡೆಯಿತು.

ಇದಕ್ಕೂ ಮೊದಲು ಸೋಮವಾರ ಇಡೀ ರಾತ್ರಿ ಅಶೋಕಪುರಂ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಂಗಳ ಮಧ್ಯಾಹ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಸಾವಿರಾರು ಬೆಂಬಲಿಗರು, ಕಾರ್ಯಕರ್ತರ ಸಮ್ಮುಖದಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ಅಶೋಕಪುರಂ ಬಳಿಯಿರುವ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.

ಇದನ್ನೂ ಓದಿ | M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

ಅಂತ್ಯಕ್ರಿಯೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಟಿ.ಎಸ್.ಶ್ರೀವತ್ಸ, ಎ.ಆರ್.ಕೃಷ್ಣಮೂರ್ತಿ, ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕ ಎಲ್.ನಾಗೇಂದ್ರ, ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಎಚ್.ವಿ.ರಾಜೀವ್ ಸೇರಿದಂತೆ ಸಾವಿರಾರು
ಜನರು ಭಾಗಿಯಾಗಿದ್ದರು.

Continue Reading

ಸಿನಿಮಾ

Hassan Pen Drive Case: ಪ್ರಜ್ವಲ್ ರೇವಣ್ಣ ಮೃಗಕ್ಕಿಂತ ಕಡೆ; ಕಿಡಿ ಕಾರಿದ ಬಹುಭಾಷಾ ನಟಿ ಪೂನಂ ಕೌರ್

Hassan Pen Drive Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಇದೀಗ ಕನ್ನಡ ಸೇರಿದಂತೆ ವಿವಿಧ ಭಾಷೆಗಳ ಹಲವು ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಪೂನಂ ಕೌರ್ ಪ್ರತಿಕ್ರಿಯಿಸಿದ ಜೆಡಿಎಸ್‌ ಮುಖಂಡನ ವಿರುದ್ಧ ಕಿಡಿಕಾರಿದ್ದಾರೆ. ʼಈ ರೀತಿಯ ಕೃತ್ಯ ಎಸಗಿದ ಪ್ರಜ್ವಲ್ ರೇವಣ್ಣ ಅವರನ್ನು ಬಿಡಬೇಡಿʼʼ ಎಂದು ಅವರು ವಿಡಿಯೊ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ʼʼಪ್ರಜ್ವಲ್‌ ಬಳಿ ದುಡ್ಡು ಹಾಗೂ ಅಧಿಕಾರ ಇದೆ. ಹೀಗಾಗಿ ಅವರ ವಿರುದ್ಧ ಧ್ವನಿ ಎತ್ತಿದರೂ, ದೂರು ಕೊಟ್ಟರೂ ಶಿಕ್ಷೆಯಾಗುತ್ತದೆ ಎನ್ನುವ ಬಗ್ಗೆ ಗ್ಯಾರಂಟಿ ಇಲ್ಲʼʼ ಎಂದು ಅವರು ಹೇಳಿದ್ದಾರೆ.

VISTARANEWS.COM


on

Hassan Pen Drive Case
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಇದೀಗ ಈ ಬಗ್ಗೆ ಕನ್ನಡ ಸೇರಿದಂತೆ ವಿವಿಧ ಭಾಷೆಗಳ ಹಲವು ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಪೂನಂ ಕೌರ್ (Poonam Kaur) ಪ್ರತಿಕ್ರಿಯಿಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಕಿಡಿ ಕಾರಿದ್ದಾರೆ.

ʼʼಪ್ರಜ್ವಲ್ ರೇವಣ್ಣ ಮೃಗಕ್ಕಿಂತ ಕಡೆ. 2,900ಕ್ಕೂ ಹೆಚ್ಚು ವಿಡಿಯೊಗಳನ್ನು ಮಾಡಿದ್ದಾರೆ ಎಂದರೆ ಅವರೆಷ್ಟು ವಿಕೃತ ಮನೋಭಾವ ಹೊಂದಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ. ಪ್ರಾಣಿಗಳು ಕೂಡ ರೀತಿ ಮಾಡೋದಿಲ್ಲʼʼ ಎಂದು ಹೇಳಿದ್ದಾರೆ. ʼʼಈ ರೀತಿಯ ಕೃತ್ಯ ಎಸಗಿದ ಪ್ರಜ್ವಲ್ ರೇವಣ್ಣ ಅವರನ್ನು ಬಿಡಬೇಡಿʼʼ ಎಂದು ಅವರು ವಿಡಿಯೊ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ʼʼಪ್ರಜ್ವಲ್‌ ಬಳಿ ದುಡ್ಡು ಹಾಗೂ ಅಧಿಕಾರ ಇದೆ. ಹೀಗಾಗಿ ಅವರ ವಿರುದ್ಧ ಧ್ವನಿ ಎತ್ತಿದರೂ, ದೂರು ಕೊಟ್ಟರೂ ಶಿಕ್ಷೆಯಾಗುತ್ತದೆ ಎನ್ನುವ ಬಗ್ಗೆ ಗ್ಯಾರಂಟಿ ಇಲ್ಲʼʼ ಎಂದು ಪೂನಂ ಕೌರ್‌ ಅನುಮಾನ ವ್ಯಕ್ತಪಡಿಸಿದ್ದಾರೆ. ʼʼಹೀಗಾಗಿ ನಾನು ಕೈ ಮುಗಿದು ಬೇಡಿಕೊಳ್ತಿನಿ. ಪ್ರಜ್ಚಲ್‌ಗೆ ಯಾರು ವೋಟ್ ಹಾಕಬೇಡಿ. ಅಂತಹವರು ಅಧಿಕಾರಕ್ಕೆ ಬಂದರೆ ಹೆಣ್ಣು ಮಕ್ಕಳಿಗೆ ರಕ್ಷಣೆ ಇರೋದಿಲ್ಲʼʼ ಎಂದು ಹೇಳಿದ್ದಾರೆ.

ʼʼಹೆಣ್ಣು ಮಕ್ಕಳು ಎಚ್ಚೆತ್ತುಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ. ಪ್ರತಿ ಮನೆಯ ಹೆಣ್ಣು ಮಗಳು ಎಚ್ಚರವಾದಾಗ ಮಾತ್ರ ದೇಶದ ಹೆಣ್ಣು ಮಕ್ಕಳು ಬಚವಾಗಲು ಸಾಧ್ಯ. ನಮ್ಮ ದೇಶ ರಾವಣ ರಾಜ್ಯದ ಕಡೆ ಹೋಗುತ್ತಿದೆಯಾ ಅಥವಾ ರಾಮರಾಜ್ಯದ ಕಡೆ ಹೋಗುತ್ತಿದೆಯಾ ?ʼʼ ಎಂದೂ ಅವರು ಪ್ರಶ್ನಿಸಿದ್ದಾರೆ.

ಪೂನಂ ಕೌರ್‌ ಹಿನ್ನೆಲೆ

ಪೂನಂ ಕೌರ್‌ ಪಂಜಾಬಿ ಕುಟುಂಬಕ್ಕೆ ಸೇರಿದ ಹೈದರಾಬಾದ್ ಹುಡುಗಿ. ತೇಜ ನಿರ್ದೇಶನದ ‘ಒಕ್ಕ ವಿಚಿತ್ರಂ’ ತೆಲುಗು ಚಿತ್ರದ ಮೂಲಕ 2006ರಲ್ಲಿ ಸಿನಿರಂಗಕ್ಕೆ ಕಾಲಿಟ್ಟರು. ಬಳಿಕ ಕನ್ನಡ, ತಮಿಳು, ಹಿಂದಿ, ಮಲಯಾಳಂ ಚಿತ್ರಗಳಲ್ಲಿ ಅಭಿನಯಿಸಿದರು. 2008ರಲ್ಲಿ ತೆರೆಕಂಡ ಟಿ.ನಾಗಣ್ಣ ನಿರ್ದೇಶನದ, ಶಿವರಾಜಕುಮಾರ್ ಅಭಿನಯಿಸಿದ ‘ಬಂಧು-ಬಳಗ’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡರು. ತಮ್ಮ 15 ವರ್ಷದ ಸಿನಿಕೆರಿಯರ್‌ನಲ್ಲಿ ಸುಮಾರು 25 ಚಿತ್ರಗಳಲ್ಲಿ ನಟಿಸಿದ್ದಾರೆ. ಜತೆಗೆ ಕಿರುತೆರೆಯಲ್ಲಿಯೂ ಕಾಣಿಸಿಕೊಂಡಿದ್ದಾರೆ. 2022ರಲ್ಲಿ ತೆರೆಕಂಡ ʼನಾತಿಚರಾಮಿʼ ತೆಲುಗು ಚಿತ್ರದ ಬಳಿಕ ಪೂನಂ ಬಣ್ಣ ಹಚ್ಚಿಲ್ಲ.

ಸ್ಫೋಟಕ ಹೇಳಿಕೆ ನೀಡಿದ ಮಾಜಿ ಕಾರು ಚಾಲಕ

ಈ ಮಧ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್‌ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ವಿಡಿಯೊಗಳು ನನ್ನ ಬಳಿ ಇತ್ತು. ನಾನಿದನ್ನು ದೇವರಾಜೇಗೌಡ ಅವರಿಗೆ ಕೊಟ್ಟಿದ್ದೆ. ಅವರು ಇದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಏನೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

ಕಾರ್ತಿಕ್ ಅಜ್ಞಾತ ಸ್ಥಳದಲ್ಲಿದ್ದುಕೊಂಡು ವಿಡಿಯೊ ಮಾಡಿದ್ದು, ವಿಡಿಯೊ ಲೀಕ್ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಾನು ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದಿಂದ ಕೆಲಸವನ್ನು ಬಿಟ್ಟಿದ್ದೇನೆ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದರು. ಹಿಂಸೆ ಕೊಟ್ಟರು. ಆದ್ದರಿಂದ ಅವರ ಮನೆಯಿಂದ ಹೊರಬಂದೆ. ಆ ಸಮಯದಲ್ಲಿ ದೇವರಾಜೇಗೌಡ ಇವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೊ ರಿಲೀಸ್ ಮಾಡಬಾರದು ಎಂದು ಅಂದು ನನ್ನ ವಿರುದ್ಧ ಪ್ರಜ್ವಲ್‌ ರೇವಣ್ಣ ಸ್ಟೇ ತಂದಿದ್ದರು. ನಿನ್ನ ಬಳಿ ಇರುವ ವಿಡಿಯೊ, ಫೋಟೊಗಳನ್ನು ಕೊಡು. ನಾನು ಯಾರಿಗೂ ತೋರಿಸುವುದಿಲ್ಲ ಎಂದು ದೇವರಾಜೇಗೌಡ ಕೇಳಿದ್ದರು. ಅವರನ್ನು ನಂಬಿ ನನ್ನ ಬಳಿಯಿದ್ದ ವಿಡಿಯೊದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಏನೋ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ.

Continue Reading

ರಾಜಕೀಯ

Lok Sabha Election 2024: ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕಗೆ ಬೆಂಬಲಿಸಲು ವೆಂಕಟರೆಡ್ಡಿ ಮುದ್ನಾಳ ಮನವಿ

Lok Sabha Election 2024: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಪರ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಹಾಗೂ ಪಕ್ಷದ ಮುಖಂಡರು ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

VISTARANEWS.COM


on

Lok Sabha Election 2024 former MLA Venkatreddy Mudnala election campaign for Raichur Lok Sabha constituency BJP candidate Raja Amareshwar Nayaka
Koo

ಯಾದಗಿರಿ: ನರೇಂದ್ರ ಮೋದಿ (PM Narendra Modi) ಅವರು 10 ವರ್ಷಗಳ ಕಾಲ ಪಿಎಂ ಆಗಿ ದೇಶದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಮತ್ತೊಮ್ಮೆ ಮೋದಿ ಅವರನ್ನು ಪಿಎಂ ಮಾಡಲು ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಅವರನ್ನು ಗೆಲ್ಲಿಸಬೇಕು ಎಂದು ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಮನವಿ (Lok Sabha Election 2024) ಮಾಡಿದರು.

ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಪರ ಹಮ್ಮಿಕೊಂಡ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಲೋಕಸಭಾ ಚುನಾವಣೆಯು ತೀವ್ರ ಜಿದ್ದಾಜಿದ್ದಿನ ಚುನಾವಣೆಯಾಗಿದೆ. ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಇಲ್ಲಸಲ್ಲದ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ಪಿಎಂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡಜನರಿಗೆ ಪಡಿತರ ಅಕ್ಕಿ ನೀಡುವ ಮೂಲಕ ಬಡಜನರ ಹಸಿವು ನೀಗಿಸುವ ಕಾರ್ಯ ಮಾಡಿದೆ. ಸರ್ಕಾರವು ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಮಾಡುತ್ತಿಲ್ಲ. ಕೇಂದ್ರ ಸರಕಾರವು ಜೆಜೆಎಂ ಯೋಜನೆ ಜಾರಿಗೆ ತಂದು ಹಳ್ಳಿಯ ಜನರಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಿದೆ. ಮೋದಿ ಅವರು ಉತ್ತಮ ಆಡಳಿತ ನೀಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Toyota Kirloskar Motor: ಟೊಯೊಟಾ ರುಮಿಯಾನ್‌ G-AT ಬುಕ್ಕಿಂಗ್‌ ಶುರು! ಏನಿದರ ವಿಶೇಷ?

ಕೇಂದ್ರ ಸರ್ಕಾರವು ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ಅನುದಾನ ನೀಡಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಮಹತ್ವದ ಕೊಡುಗೆ ನೀಡಿದೆ. ನನ್ನ ಅಧಿಕಾರಾವಧಿಯಲ್ಲಿ ಯಾದಗಿರಿ ವಿಧಾನಸಭೆ ಕ್ಷೇತ್ರದಲ್ಲಿ ರಸ್ತೆ, ಶಾಲೆಗಳ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆ ಸೇರಿದಂತೆ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದೇನೆ ಎಂದ ಅವರು, ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಿ ತರಬೇಕು ಎಂದು ಮತದಾರರದಲ್ಲಿ ಮನವಿ ಮಾಡಿದರು.

ಬಿಜೆಪಿ ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿಗೆ ತಂದು ಸರ್ಕಾರವು ಯಾವುದೇ ಅಭಿವೃದ್ಧಿ ಮಾಡಿಲ್ಲ. ರಾಜ್ಯ ಸರ್ಕಾರವು ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆಗೆ ಕೊಡಮಾಡುವ 4 ಸಾವಿರ ರೂಪಾಯಿ ಸಹಾಯಧನವನ್ನು ಕಡಿತ ಮಾಡಿ, ರೈತರ ಹಿತ ಮರೆತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ಸಿದ್ದಣ್ಣಗೌಡ ಕಾಡಂನೋರ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ದೇವರಾಜ್ ನಾಯಕ ಮಾತನಾಡಿದರು.

ಇದನ್ನೂ ಓದಿ: Labour Day 2024: ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಉಪಯುಕ್ತ ಹಣಕಾಸು ಟಿಪ್ಸ್‌ ಇಲ್ಲಿದೆ

ಈ ಸಂದರ್ಭದಲ್ಲಿ ಮುಖಂಡರಾದ ಉಮಾರೆಡ್ಡಿ ವಡ್ಡವಡಗಿ, ಶರಣಗೌಡ ಬಟಗೇರಿ, ಸುರೇಶ್ ಗೌಡ, ಸಂತೋಷಗೌಡ ವಡ್ಡವಡಗಿ, ಡಾ.ಎಂ.ಡಿ. ಮೊಲ್ಲಾ ರಾಯಚೂರು, ಸತೀಶ್ ಗೌಡ, ಬಸವರಾಜ ಮೇತ್ರಿ, ಈಶೆಪ್ಪ ಕೊಲ್ಲುರು, ಮರಳ ಸಿದ್ದಪ್ಪ, ಮಹಿಪಾಲರೆಡ್ಡಿ, ಸುರೇಶ್‌ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Advertisement
Hassan Pen Drive Case How did Karthik get Prajwal video Devaraje Gowda questions
ರಾಜಕೀಯ13 mins ago

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಕಾರ್ತಿಕ್‌ಗೆ ಹೇಗೆ ಸಿಕ್ತು? ಡೌನ್ಲೋಡ್‌ ಮಾಡಿದ್ದು ಯಾರು? ಈ ಬಗ್ಗೆ ದೇವರಾಜೇಗೌಡ ಹೇಳಿದ್ದೇನು?

IPL 2024
ಪ್ರಮುಖ ಸುದ್ದಿ27 mins ago

IPL 2024 : ಐಪಿಎಲ್ ಪ್ಲೇಆಫ್​ ಹಂತಕ್ಕೆ ಇಂಗ್ಲೆಂಡ್ ಆಟಗಾರರು ಅಲಭ್ಯ; ಇದಕ್ಕೂ ಒಂದು ಕಾರಣವಿದೆ

Multivitamin Pill
ಆರೋಗ್ಯ28 mins ago

Multivitamin Pill: ಮಲ್ಟಿವಿಟಮಿನ್‌ ಮಾತ್ರೆಗಳ ಮೊರೆ ಹೋಗದೆ, ನೈಸರ್ಗಿಕವಾಗಿ ಪೋಷಣೆ ಪಡೆಯುವುದು ಹೇಗೆ?

Kannada New Movie
ಸ್ಯಾಂಡಲ್ ವುಡ್35 mins ago

Kannada New Movie: ‘ಕನ್ನಡ ಮಾಧ್ಯಮ’ ಸಿನಿಮಾಕ್ಕೆ ಹಿರಿಯ ಸಾಹಿತಿ ದೊಡ್ಡರಂಗೇಗೌಡರ ಸಾಥ್; ಮೋಷನ್ ಪೋಸ್ಟರ್ ರಿಲೀಸ್

V Srinivas Prasad
ಪ್ರಮುಖ ಸುದ್ದಿ50 mins ago

V Srinivas Prasad: ಮಣ್ಣಲ್ಲಿ ಮಣ್ಣಾದ ಸಂಸದ ಶ್ರೀನಿವಾಸ ಪ್ರಸಾದ್; ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

KL Rahul
ಕ್ರೀಡೆ58 mins ago

KL Rahul : ವಿಶ್ವ ಕಪ್​ ತಂಡಕ್ಕೆ ರಾಹುಲ್ ಕೈಬಿಟ್ಟ ಬಿಸಿಸಿಐಗೆ ಟಾಂಗ್​ ಕೊಟ್ಟ ಲಕ್ನೊ ಫ್ರಾಂಚೈಸಿ

Actress Summer Fashion
ಫ್ಯಾಷನ್58 mins ago

Actress Summer Fashion: ಬಾಲಿವುಡ್‌ನವರನ್ನು ಮೀರಿಸಿದ ನಟಿ ಶಿಲ್ಪಾ ಮಂಜುನಾಥ್‌ ಪೂಲ್‌ಸೈಡ್‌ ಹಾಟ್‌ ಲುಕ್‌!

Hassan Pen Drive Case
ಸಿನಿಮಾ1 hour ago

Hassan Pen Drive Case: ಪ್ರಜ್ವಲ್ ರೇವಣ್ಣ ಮೃಗಕ್ಕಿಂತ ಕಡೆ; ಕಿಡಿ ಕಾರಿದ ಬಹುಭಾಷಾ ನಟಿ ಪೂನಂ ಕೌರ್

Physical Abuse
ಕ್ರೈಂ1 hour ago

Physical Abuse: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 106 ವರ್ಷ ಜೈಲು ಶಿಕ್ಷೆ

Russia-Ukraine War
ರಷ್ಯಾ-ಉಕ್ರೇನ್‌ ಕದನ1 hour ago

Russia-Ukraine War: ಯುದ್ಧ ಭೂಮಿಯಿಂದ ಪಾರಾಗಲು 10 ಕಿ.ಮೀ ನಡೆದ 98 ವರ್ಷದ ವೃದ್ಧೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ13 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌