Site icon Vistara News

Car Accident: ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮೂವರ ಸಾವು; ಹಬ್ಬದ ದಿನವೇ ಯಮನ ರೌದ್ರವ

Car Collides With Divider

Car Collides with divider in bangalore; 3 people died on spot

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ನೆಲಮಂಗದಲ್ಲಿ (Nelamangala) ಹಬ್ಬದ ದಿನವೇ ಯಮ ಅಟ್ಟಹಾಸ ಮೆರೆದಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್‌ಗೆ (Car Accident) ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರು ಗಾಯಗೊಂಡಿದ್ದು, ಅವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ನೆಲಮಂಗಲದ ಅಂಚೆಪಾಳ್ಯ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರಿನ ಚಾಲಕನ ನಿಯಂತ್ರಣ ತಪ್ಪಿದ್ದು, ತೀವ್ರವಾಗಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ನೆಲಮಂಗಲ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. ಆದಾಗ್ಯೂ, ಕಾರಿನಲ್ಲಿದ್ದವರು ಯಾರು, ಅವರು ಎಲ್ಲಿಗೆ ತೆರಳುತ್ತಿದ್ದರು ಎಂಬ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: Death News: ಮೂಲ್ಕಿ ಅಪಘಾತದಲ್ಲಿ 21ರ ಯುವತಿ ದಾರುಣ ಮೃತ್ಯು; ಬಾಗಲಕೋಟೆಯಲ್ಲಿ ವೈದ್ಯ ವಿದ್ಯಾರ್ಥಿನಿ ಶವ ಪತ್ತೆ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಕೆಲ ದಿನಗಳಿಂದ ಅಪಘಾತಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ ಬೆನ್ನಲ್ಲೇ ಮತ್ತೊಂದು ಅಪಘಾತ ಸಂಭವಿಸಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಬಳಿಯ ಹೆದ್ದಾರಿಯಲ್ಲಿ ಅಪರಚಿತ ವಾಹನಕ್ಕೆ ಕಾರು ಡಿಕ್ಕಿಯಾಗಿ ಒಬ್ಬ ಸ್ಥಳದಲ್ಲೇ ಮೃತಪಟ್ಟರೆ, ನಾಲ್ವರು ಗಾಯಗೊಂಡಿದ್ದಾರೆ.

Exit mobile version