Site icon Vistara News

Koppal Accident: ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ 6 ಜನರ ದುರ್ಮರಣ; ಟಯರ್‌ ಸ್ಫೋಟವಾಗಿ ಅಪಘಾತ

Car accident in koppal

#image_title

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಲಾರಿಗೆ ಇಂಡಿಕಾ‌ ಕಾರ್ ಡಿಕ್ಕಿಯಾಗಿ ಆರು ಜನರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಕಾ ಕಾರು ಟಯರ್‌ ಸ್ಫೋಟಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಮತ್ತೊಂದು ಬದಿಯ ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ (Koppal Accident) ದುರಂತ ಸಂಭವಿಸಿದೆ.

ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ(4) , ರಶ್ಮಿಕಾ(2) ಮೃತರು. ವೇಗವಾಗಿ ಕಾರು ಲಾರಿಗೆ ಡಿಕ್ಕಿಹೊಡೆದಿದ್ದರಿಂದ ಮೃತದೇಹಗಳನ್ನು ಹೊರಗಡೆ ತೆಗೆಯಲು ಸ್ಥಳೀಯರು ಹಾಗೂ ಪೊಲೀಸರು ಹರಸಾಹಸಪಟ್ಟರು.

ಮೃತ ರಾಜಪ್ಪ ಬನಸೋಡೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಂದ್ಯಾಳ ಗ್ರಾಮದವರಾಗಿದ್ದು, ಅಕ್ಷಯ ಶಿರನಾಳ ಗ್ರಾಮದವರು. ರಾಘವೇಂದ್ರ ಕಾಂಬಳೆ ಹಾಗೂ ಜಯಶ್ರೀ ರಾಘವೇಂದ್ರ ಕಾಂಬಳೆ ಮಹಾರಾಷ್ಟ್ರದ ಲವಗಿ ಗ್ರಾಮದವರು ಎಂದು ತಿಳಿದುಬಂದಿದೆ. ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ | Drowned: ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋಗಿ ಯುವಕ ನೀರುಪಾಲು; ಕಾಡಾನೆ ದಾಳಿಗೆ ಮಹಿಳೆ ಬಲಿ

ಸ್ಕೂಟಿ-ಗೂಡ್ಸ್ ವಾಹನ ಡಿಕ್ಕಿಯಾಗಿ ಸವಾರ ಸಾವು

ಮಡಿಕೇರಿ: ನಗರದ ಸುದರ್ಶನ ವೃತ್ತದ ಬಳಿ ಸ್ಕೂಟರ್‌ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. 2ನೇ ಮೊಣ್ಣಂಗೇರಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯೆ ಪುಷ್ಪಾವತಿ ಅವರ ಪತಿ ಧನಂಜಯ್ (57) ಮೃತರು. ಸ್ಕೂಟರ್‌ನಲ್ಲಿ ಧನಂಜಯ್ ಅವರು ಸ್ನೇಹಿತನ ಮನೆಗೆ ಊಟಕ್ಕೆ ತೆರಳುವಾಗ ತಿರುವಿನಲ್ಲಿ ಮೈಸೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಗೂಡ್ಸ್‌ ವಾಹನಕ್ಕೆ ಡಿಕ್ಕಿಯಾಗಿದೆ. ಹೀಗಾಗಿ ಧನಂಜಯ್ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

Exit mobile version