Site icon Vistara News

ಬೆಂಗಳೂರು-ಹಾಸನ ಹೈವೇಯಲ್ಲಿ ಟಿಟಿಗೆ ಡಿಕ್ಕಿ ಹೊಡೆದ ಇನೋವಾ, ವಾಹನಗಳು ನಜ್ಜುಗುಜ್ಜು, ಇಬ್ಬರ ಸಾವು

ತುಮಕೂರು: ಕುಣಿಗಲ್ ತಾಲೂಕಿನ ಬೇಗೂರು ಬ್ರಿಡ್ಜ್ ಬಳಿ ಇನೋವಾ ಕಾರು ಹಾಗೂ ಟೆಂಪೋ ಟ್ರಾವೆಲರ್ಸ್‌ ನಡುವೆ ಭೀಕರ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಿಟಿ ವಾಹನದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿ, ಆರು ಜನರಿಗೆ ಸಣ್ಣಪುಟ್ಟ ಗಾಯಳಾಗಿವೆ. ಇದೇ ವೇಳೆ ಬುಲೆಟ್‌ ಬೈಕ್‌ಗೂ ಈ ವಾಹನಗಳು ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರನಿಗೂ ಗಾಯವಾಗಿದೆ. ಬೆಂಗಳೂರು ಮೂಲದ ಸುನೀಲ್ ಮೃತ ದುರ್ದೈವಿ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ.

ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ಕಡೆಯಿಂದ ಹಾಸನ ಕಡೆಗೆ ತೆರಳುತ್ತಿದ್ದ ಇನೋವಾ ಕಾರು, ರಸ್ತೆ ಡಿವೈಡರ್ ದಾಟಿ ಟಿಟಿ ವಾಹನಕ್ಕೆ ಡಿಕ್ಕಿ‌ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇನೋವಾ ಸಂಪೂರ್ಣ ನಜ್ಜುಗುಜ್ಜಾಗಿ ಹೋಗಿದೆ.

ಇನೋವಾ ಕಾರು ಚಾಲನಕ ಅತಿವೇಗವಾಗಿ ಕಾರು ಚಲಾಯಿಸಿರುವುದೆ ಈ ಘಟನೆಗೆ ಕಾರಣವಾಗಿದೆ. ಗಾಯಾಳುಗಳನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡಿಸಿದ್ದಾರೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಕಾರು-ಲಾರಿ ಭೀಕರ ಅಪಘಾತದಲ್ಲಿ ನಾಲ್ವರ ಸಾವು

Exit mobile version