Site icon Vistara News

Car Fire | ಭದ್ರಾವತಿಯಲ್ಲಿ ಕಾರಿಗೆ ಬೆಂಕಿ ಹಾಕಿದ ಕಿಡಿಗೇಡಿಗಳು!

car fire

ಶಿವಮೊಗ್ಗ: ಇಲ್ಲಿನ ಭದ್ರಾವತಿ ತಾಲೂಕಿನ ತಿಪ್ಲಾಪುರ ಕ್ಯಾಂಪ್‌ನಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಕಾರಿಗೆ ಕಿಡಿಗೇಡಿಗಳು ಬೆಂಕಿ (Car Fire) ಹಾಕಿದ್ದಾರೆ. ಅಬ್ದುಲ್ ಬಷೀರ್ ಎಂಬುವವರಿಗೆ ಸೇರಿದ ಕಾರಿಗೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೆಂಕಿಯನ್ನು ಹಚ್ಚಲಾಗಿದೆ.

ಅಬ್ದುಲ್ ಬಷೀರ್ ಸೇರಿದ ರೆಡ್‌ ಕಾರ್‌

ಅಲಿಂ ಪಾಷಾ ಎಂಬುವವರು ಹಳೆ ದ್ವೇಷದಿಂದ ಈ ದುಷ್ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಕಾರಿಗೆ ಬೆಂಕಿ ಹಾಕಿದಾಗ ಕಾರಿನ ಸೈರನ್ ಕೂಗು ಕೇಳಿ ಅಬ್ದುಲ್‌ ಬಷೀರ್‌ ಮನೆಯಿಂದ ಹೊರಗೆ ಬಂದು ನೋಡಿದ್ದಾರೆ. ಈ ವೇಳೆ ಆರೋಪಿಗಳು ಓಡಿ ಹೋಗಿದ್ದಾರೆ. ಬಳಿಕ ಬೆಂಕಿಯಿಂದ ಸುಟ್ಟು ಹೋಗುತ್ತಿದ್ದ ಕಾರನ್ನು ಮನೆಯವರು ಸೇರಿ ನಂದಿಸಿದ್ದಾರೆ.

ಸ್ಥಳಕ್ಕೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವೈಯಕ್ತಿಕ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪರಾರಿ ಆಗಿರುವ ಆರೋಪಿಯ ಹುಡುಕಾಟವನ್ನು ಪೊಲೀಸರು ನಡೆಸುತ್ತಿದ್ದಾರೆ.

ಇದನ್ನೂ ಓದಿ | ಕಾಂಗ್ರೆಸ್‌ ಪ್ರತಿಭಟನೆ ವೇಳೆ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: 5 ಆರೋಪಿಗಳಿಗೆ ಜಾಮೀನು

Exit mobile version