Site icon Vistara News

Car Fire | ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು; ಒಳಗೆ ಇದ್ದವರು ಪ್ರಾಣಾಪಾಯದಿಂದ ಪಾರು

car fire accident

ಚಾಮರಾಜನಗರ: ಬಂಡೀಪುರ, ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ ಗೋಪಾಲಪುರ ರಸ್ತೆಯಲ್ಲಿ ಕಾರೊಂದು ಧಗಧಗನೆ (Car Fire) ಹೊತ್ತಿ ಉರಿದಿದೆ.

ಹೊಸ ವರ್ಷಾಚರಣೆಗಾಗಿ ಕೇರಳದಿಂದ ಪ್ರವಾಸಿಗರು ಕಾರಿನಲ್ಲಿ ಬಂದಿದ್ದರು. ಈ ವೇಳೆ ಬೆಂಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದ ಏಳು ಜನ ಓಡಿ ಹೋಗಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ. ರಸ್ತೆಯಲ್ಲಿ ಹರಡಿದ್ದ ಹುರುಳಿ ಸೊಪ್ಪು ಕಾರಿನಡಿ ಸಿಲುಕಿ ಎಂಜಿನ್‌ಗೆ ತಗುಲಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

ಕೇರಳದ ಕಾಲಂಪುಂಜಾ ಮೂಲದ ಅಜಿತ್ ಸುಪ್ರಾನಾ ಎಂಬವರಿಗೆ ಸೇರಿದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ | Road Accident | ಬಸ್‌- ಕಾರು ನಡುವೆ ಭೀಕರ ಅಪಘಾತ; ಕಾರಿನಲ್ಲಿದ್ದವರಿಗೆ ಗಂಭೀರ ಗಾಯ

Exit mobile version