Site icon Vistara News

Gangavathi News: ಮಸೀದಿಗೆ ಮಂಗಳಾರತಿ ಮಾಡಿದ ಐವರ ವಿರುದ್ಧ ಕೇಸ್‌

mangala aarti to mosque

ಕೊಪ್ಪಳ: ಮಸೀದಿಗೆ ಮಂಗಳಾರತಿ ಮಾಡಿರುವ ಆರೋಪದಲ್ಲಿ ಐವರ ವಿರುದ್ಧ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗಂಗಾವತಿಯಲ್ಲಿ (Gangavathi News) ಸೆ. 28 ರಂದು ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮಂಗಳಾರತಿ ಮಾಡಿದ್ದ ಐವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಗಲಭೆ ಸೃಷ್ಟಿಸುವ ಹುನ್ನಾರ ಆರೋಪದಲ್ಲಿ ಶ್ರೀಕಾಂತ ಹೊಸಕೇರಿ, ಕುಮಾರ ಹೂಗಾರ, ಚನ್ನಬಸವ, ಸಂಗಮೇಶ ಅಯೋಧ್ಯೆ, ಯಮನೂರು ರಾಠೋಡ ಎಂಬುವವರ ವಿರುದ್ಧ ಸೆಪ್ಟೆಂಬರ್ 30ರಂದು ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.28ರಂದು ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿ ಬಳಿ ಬರುತ್ತಿದ್ದಂತೆಯೇ ಬಾಗಿಲಿಗೆ ಆರತಿ ಬೆಳಗಿದ್ದಾರೆ. ಗಲಭೆ ಮಾಡುವ ಉದ್ದೇಶದಿಂದ ಜೈ ಶ್ರೀರಾಮ್‌, ಭಾರತ ಮಾತಾಕೀ ಜೈ, ಗವಿ ಗಂಗಾಧರೇಶ್ವರ ಮಹಾರಾಜ್‌ ಕೀ ಜೈ ಎಂದು ಷೋಷಣೆಗಳನ್ನು ಕೂಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಂಗಳಾರತಿ ವಿಡಿಯೊಗಳು ಸಾಮಾಜಿಕ ಜಾಲತಣಗಳಲ್ಲಿ ಹರಿದಾಡಿದ್ದವು. ಮುಸ್ಲಿಮರ ಭಾವನೆಗಳಿಗೆ ಧಕ್ಕೆ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Kidnapping case : ಸುಲಿಗೆಕೋರನಾದ ಸ್ನೇಹಿತ; ಕಿಡ್ನ್ಯಾಪ್‌ ಮಾಡಿ 50 ಲಕ್ಷಕ್ಕೆ ಡಿಮ್ಯಾಂಡ್‌!

ಬೊಲೆರೋ ವಾಹನ ಹರಿದು ಏಳು ಕುರಿಗಳು ಸಾವು

ಕೋಲಾರ: ಬೊಲೆರೋ ವಾಹನ ಹರಿದು ಏಳು ಕುರಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಚಾಂಪಲ್ಲಿ ಗ್ರಾಮದಲ್ಲಿ ನಡೆದಿದೆ. ರೈತ ನಾಗರಾಜ್ ಹಾಗೂ ಸುಬ್ಬಮ್ಮ ಅವರ ಕುರಿಗಳು ಮೃತಪಟ್ಟಿವೆ.

ಮೇಯಿಸಿಕೊಂಡು ಸಂಜೆ ಮನೆಗೆ ಹಿಂತಿರುಗುವ ವೇಳೆ ಬೊಲೆರೋ ವಾಹನ ಹರಿದು 7 ಕುರಿಗಳು ಮೃತಪಟ್ಟಿವೆ. ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಅಪಘಾತಕ್ಕೆ ಚಾಲಕನ ಅತಿ ವೇಗವೇ ಕಾರಣವೆಂದು ರೈತರು ಆರೋಪಿಸಿದ್ದಾರೆ. ಕುರಿಗಳ ಸಾವಿನಿಂದ ರೈತರಿಗೆ ಸುಮಾರು 2 ಲಕ್ಷ ರೂ. ನಷ್ಟವಾಗಿದೆ.

ಶಿವಮೊಗ್ಗ ಗಲಭೆ; 24 ಎಫ್‌ಐಆರ್‌ ದಾಖಲು, 60 ಮಂದಿ ಅರೆಸ್ಟ್‌

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡೆಯಲ್ಲಿ ಭಾನುವಾರ ಈದ್‌ ಮಿಲಾದ್‌ ಮೆರವಣಿಗೆ (Eid Milad Procession) ಸಂದರ್ಭದಲ್ಲಿ ನಡೆದ ಗಲಭೆ (Shivamogga Violence), ಕಲ್ಲು ತೂರಾಟಕ್ಕೆ ಸಂಬಂಧಿಸಿ ಪೊಲೀಸರು ಇದುವರೆಗೆ 24 ಎಫ್‌ಐಆರ್‌ಗಳನ್ನು ದಾಖಲಿಸಿದ್ದು, 60 ಮಂದಿಯನ್ನು ಬಂಧಿಸಿದ್ದಾರೆ (60 Accuse arrested).

ಜಿಲ್ಲಾ ಎಸ್‌ಪಿ ಮಿಥುನ್‌ ಕುಮಾರ್‌ (SP Mithun Kumar) ಅವರು ಈ ವಿಷಯವನ್ನು ತಿಳಿಸಿದ್ದು, ಬಂಧಿತ ಆರೋಪಿಗಳಲ್ಲಿ ಕೆಲವರನ್ನು ಶಿವಮೊಗ್ಗ, ಇನ್ನು ಕೆಲವರನ್ನು ಚಿತ್ರದುರ್ಗ ಜೈಲಿಗೆ ಹಾಕಲಾಗುವುದು ಎಂದು ತಿಳಿಸಿದರು. ಗಲಭೆಯಲ್ಲಿ ಒಂದು ಕಾರು, ಒಂದು ತ್ರಿಚಕ್ರ ವಾಹನ, ಎರಡು ದ್ವಿಚಕ್ರ ವಾಹನಕ್ಕೆ ಹಾನಿಯಾಗದೆ. ಗಲಭೆಯಲ್ಲಿ 7 ಮನೆ ಗಾಜು ಪುಡಿಪುಡಿಯಾಗಿದೆ ಎಂದು ವಿವರ ನೀಡಿದರು.

ಸೋಮವಾರ ಬೆಳಗ್ಗೆಯಿಂದ ಇಲ್ಲಿಯವರೆಗೂ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ. 144 ಸೆಕ್ಷನ್ ಇರುವ ಕಾರಣ ಅಹಿತಕರ ಘಟನೆ ನಡೆಯುತ್ತಿಲ್ಲ ಎಂಧೂ ಶಿವಮೊಗ್ಗ ಎಸ್‌ಪಿ ವಿಥುನ್ ಕುಮಾರ್ ಜಿ.ಕೆ. ಹೇಳಿದರು.

ಹಮೀರ್ ಅಹಮದ್ ಸರ್ಕಲ್‌ನಲ್ಲಿದ್ದ ಟಿಪ್ಪು ಫ್ಲೆಕ್ಸ್ ತೆರವು

ಶಿವಮೊಗ್ಗ ನಗರ ಪಾಲಿಕೆ ಸಿಬ್ಬಂದಿ ಹಮೀರ್ ಅಹಮದ್ ಸರ್ಕಲ್‌ನಲ್ಲಿದ್ದ ವಿವಾದಿತ ಟಿಪ್ಪು ಫ್ಲೆಕ್ಸ್ ತೆರವು ಮಾಡಿದರು. ಟಿಪ್ಪು ಫ್ಲೆಕ್ಸ್‌ನಿಂದಾಗಿಯೇ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾವಾಗಿತ್ತು. ಹೀಗಾಗಿ ಫ್ಲೆಕ್ಸ್ ತೆರವಿಗೆ ಮಾಜಿ ಸಚಿವ ಈಶ್ವರಪ್ಪ ಆಗ್ರಹಿಸಿದ್ದರು. ಇದೀಗ ಫ್ಲೆಕ್ಸ್ ತೆರವಿಗೆ ಮುಂದಾದ ನಗರಪಾಲಿಕೆ ಫ್ಲೆಕ್ಸ್, ಬಾವುಟ, ಕಮಾನು ಎಲ್ಲವನ್ನೂ ತೆರವು ಮಾಡಿದೆ. ಹಿಂದೂ-ಮುಸ್ಲಿಂ ಎರಡೂ ಸಮುದಾಯಕ್ಕೆ ಸೇರಿದ ಬಾವುಟ, ಫ್ಲೆಕ್ಸ್ ತೆರವು ಮಾಡಲಾಗುತ್ತಿದೆ.

ಶಿವಮೊಗ್ಗದಲ್ಲಿ ಆಗಿದ್ದೇನು?

ಭಾನುವಾರ ಈದ್​ ಮಿಲಾದ್ ಮೆರವಣಿಗೆ ವೇಳೆ ರಾಗಿಗುಡ್ಡದಲ್ಲಿ ತಲ್ವಾರ್​ ಮಾದರಿ ಕಟೌಟ್ ವಿಚಾರಕ್ಕೆ ಗೊಂದಲ ಸೃಷ್ಟಿಯಾಗಿತ್ತು. ಕಟೌಟ್ ವಿಚಾರವಾಗಿ ಹಿಂದೂ-ಮುಸ್ಲಿಂ ಗದ್ದಲ ಎದ್ದಿತ್ತು. ರಾಗಿಗುಡ್ಡ ಮುಖ್ಯರಸ್ತೆಯಲ್ಲಿ ಕಟೌಟ್ ಹಾಕಲಾಗಿದ್ದು ಜನರು ಪ್ರತಿಭಟನೆ ಮಾಡಿದ್ದರು. ತಕ್ಷಣವೇ  ಎಸ್​ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದರು. ನಿಷೇಧಾಜ್ಞೆ ಜಾರಿ ಮಾಡಿ ಪರಿಸ್ಥಿತಿ ನಿಯಂತ್ರಿಸಲಾಗಿತ್ತು. ಶಿವಮೊಗ್ಗದ ರಾಗಿಗುಡ್-ಶಾಂತಿನಗರದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿದೆ. ಟಿಪ್ಪುವಿನ ಕಟೌಟ್​ನ ಕೆಳಭಾಗದಲ್ಲಿ ಆಕ್ಷೇಪಾರ್ಹ ಸಂಗತಿ ಇದ್ದ ಹಿನ್ನಲೆಯಲ್ಲಿ ಪೊಲೀಸರು ಬಿಳಿ ಬಣ್ಣವನ್ನು ಬಳಿದಿದ್ದರು. ಇದರಿಂದ ರೊಚ್ಚಿಗೆದ್ದ ರಾಗಿಗುಡ್ಡದ ಶಾಂತಿನಗರ ನಿವಾಸಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು.

Exit mobile version