Cauvery Dispute : ರಾಜ್ಯಕ್ಕೆ ಸುಪ್ರೀಂ ಕೋರ್ಟಲ್ಲೂ ಶಾಕ್‌; ಕಾವೇರಿ ಪ್ರಾಧಿಕಾರ ಆದೇಶವೇ ಸರಿ ಎಂದ ಪೀಠ, ನ್ಯಾಯ ಎಲ್ಲಿದೆ? - Vistara News

ಕರ್ನಾಟಕ

Cauvery Dispute : ರಾಜ್ಯಕ್ಕೆ ಸುಪ್ರೀಂ ಕೋರ್ಟಲ್ಲೂ ಶಾಕ್‌; ಕಾವೇರಿ ಪ್ರಾಧಿಕಾರ ಆದೇಶವೇ ಸರಿ ಎಂದ ಪೀಠ, ನ್ಯಾಯ ಎಲ್ಲಿದೆ?

Cauvery Dispute: ರಾಜ್ಯಕ್ಕೆ ಸುಪ್ರೀಂಕೋರ್ಟ್‌ನಲ್ಲೂ ನ್ಯಾಯ ಸಿಗಲಿಲ್ಲ. ಪ್ರಾಧಿಕಾರ ಹೇಳಿದ್ದೇ ಸರಿ ಎಂದಿದೆ ನ್ಯಾಯಾಲಯ. ಈಗ ನ್ಯಾಯ ಎಲ್ಲಿದೆ ಎಂದು ಹುಡುಕಬೇಕಾದ ಪರಿಸ್ಥಿತಿ ರಾಜ್ಯದ್ದು.

VISTARANEWS.COM


on

Cauvery KRS Dam and supreme court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ (Cauvery dispute) ಸಂಬಂಧಿಸಿ ರಾಜ್ಯಕ್ಕೆ ಸುಪ್ರೀಂಕೋರ್ಟ್‌ (Supreme Court) ಕೂಡಾ ನ್ಯಾಯ ಕೊಡಲಿಲ್ಲ. ತಮಿಳುನಾಡಿಗೆ ಪ್ರತಿ ದಿನ 5000 ಕ್ಯೂಸೆಕ್‌ ನೀರು ಬಿಡುಗಡೆ ಮಾಡಬೇಕು ಎಂಬ ಕಾವೇರಿ ನೀರು ನಿಯಂತ್ರಣ ಮಂಡಳಿ ಆದೇಶ ಮತ್ತು ಅದನ್ನು ಎತ್ತಿ ಹಿಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಗುರುವಾರ ನಡೆದ ಮಹತ್ವದ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ. ಜತೆಗೆ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿ ದಿನವೂ 5000 ಕ್ಯೂಸೆಕ್‌ ನೀರು ಬಿಡುಗಡೆ ಮಾಡುವಂತೆ ಆದೇಶ ನೀಡಿದೆ.

ಇದು ರಾಜ್ಯದ ಪಾಲಿಗೆ ಅತಿ ದೊಡ್ಡ ಹಿನ್ನಡೆಯಾಗಿತ್ತು. ಎಲ್ಲ ಹಂತಗಳಲ್ಲಿ ಹೊಡೆತ ಅನುಭವಿಸಿದ ರಾಜ್ಯ ಕಡೆಪಕ್ಷ ಸುಪ್ರೀಂಕೋರ್ಟ್‌ ಆದರೂ ರಾಜ್ಯದ ಪರ ನಿಲ್ಲಬಹುದು ಎಂಬ ಆಶಾವಾದದಿಂದ ಕಾಯುತ್ತಿತ್ತು. ಆದರೆ, ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಜಲ ತಜ್ಞರು, ನ್ಯಾಯ ತಜ್ಞರೇ ಇರುವ ಪ್ರಾಧಿಕಾರ ತೀರ್ಮಾನ ಸರಿಯಾಗಿಯೇ ಇರುತ್ತದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸುವ ಮೂಲಕ ಕರ್ನಾಟಕದ ಪಾಲಿಗೆ ನ್ಯಾಯದ ಬಾಗಿಲನ್ನು ಮುಚ್ಚಿದೆ.

ನ್ಯಾಯಮೂರ್ತಿ ಗವಾಯಿ ಅವರ ನೇತೃತ್ವದ ಕಾವೇರಿ ಪೀಠದಲ್ಲಿ ನಡೆದ ವಿಚಾರಣೆಗೂ ಮುನ್ನ ರಾಜ್ಯ ಸರಕಾರ ಬುಧವಾರವೇ ನೀರು ಬಿಡುಗಡೆ ಆದೇಶ ಪಾಲಿಸಲು ಯಾಕೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ವಿವರಿಸಿ ಅಫಿಡವಿಟ್‌ನ್ನು ಸಲ್ಲಿಸಿತ್ತು.

ತಮಿಳುನಾಡಿನ ಪರಿಸ್ಥಿತಿಯನ್ನು ಗಮನಕ್ಕೆ ತೆಗೆದುಕೊಂಡಿಲ್ಲ ಎಂದ ಕೇಂದ್ರ

ಕೇಂದ್ರದ ಪರವಾಗಿ ವಾದ ಮಾಡಿದ ಮುಕುಲ್‌ ರೋಹಟ್ಗಿ ಅವರು, ಕರ್ನಾಟಕದವರು ಕರ್ನಾಟಕದ ಪರಿಸ್ಥಿತಿ ಆದ್ಯತೆಗೆ ತೆಗೆದುಕೊಂಡಿದ್ದಾರೆ. ಆದರೆ ತಮಿಳುನಾಡಿ ಪರಿಸ್ಥಿತಿಯನ್ನು ಏಕೆ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಪ್ರಶ್ನಿಸಿದರು. ಮಾನ್ಸೂನ್‌ ವಿಫಲವಾಗಿದೆ ಎಂದರೆ ತಮಿಳುನಾಡಿಗೆ ಮಳೆ ತರುವ ಈಶಾನ್ಯ ಮುಂಗಾರು ಕೂಡಾ ಕೊರತೆಯಾಗಲಿದೆ ಎಂದು ವಾದಿಸಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಎಲ್ಲ ರಾಜ್ಯಗಳ ತಜ್ಞರು ಇದ್ದಾರೆ. ಇದು ತಜ್ಞರು ಕೈಗೊಳ್ಳುವ ನಿರ್ಧಾರ. ಸುಮ್ಮನೆ ಅಂಕಿ ಅಂಶಗಳ ಲೆಕ್ಕದಲ್ಲಿ ಆದೇಶ ನೀಡುತ್ತಿಲ್ಲ ಎಂದು ವಕೀಲೆ ಐಶ್ವರ್ಯ ಭಾಟಿ ಕೂಡಾ ಹೇಳಿದರು.

ಅವರಿಗೆ ನೀರಾವರಿ ಚಿಂತೆ, ನಮಗೆ ಕುಡಿಯುವ ನೀರಿನ ಚಿಂತೆ ಎಂದ ಕರ್ನಾಟಕ

ಈ ನಡುವೆ, ಕರ್ನಾಟಕದ ಪರ ವಾದ ಮಾಡಿದ ವಕೀಲ ಶ್ಯಾಂ ದಿವಾನ್‌, ತಮಿಳುನಾಡು ಸರ್ಕಾರ ನೀರಾವರಿಗೆ ಆದ್ಯತೆ ನೀಡುತ್ತಿದೆ. ಆದರೆ, ನಾವು ಕುಡಿಯುವ ನೀರಿನ ಬಗ್ಗೆ ಚಿಂತಿತರಾಗಿದ್ದೇವೆ. ನಾವು ಕುಡಿಯುವ ನೀರಿನ ಬಗ್ಗೆ ಯೋಚನೆ ಮಾಡ್ತಾ ಇದ್ದೇವೆ ಎಂದರು.

ʻʻನಮಗೆ ಈಶಾನ್ಯ ಮುಂಗಾರಿನ ಭಾಗ್ಯ ಇಲ್ಲ. ಆದರೆ ತಮಿಳುನಾಡಿಗೆ ಇನ್ನೂ ಈಶಾನ್ಯ ಮಳೆ ಬರುವುದು ಬಾಕಿ ಇದೆ. ನಮಗೆ ಕುಡಿಯೋ ನೀರಿನ ಅಗತ್ಯತೆ ಇದೆ. ಅದರ ಬಗ್ಗೆ ನಾವು ಯೋಚನೆ ಮಾಡ್ತಾ ಇದ್ದೇವೆʼʼ ಎಂದು ಹೇಳಿದರು. ವಕೀಲ ಶ್ಯಾಮ್ ದಿವಾನ್.

ರೈತರ ಅರ್ಜಿಗಳನ್ನು ಪರಿಗಣಿಸಲು ಒಪ್ಪದ ಸುಪ್ರೀಂಕೋರ್ಟ್‌

ಈ ನಡುವೆ, ಕರ್ನಾಟಕದ ರೈತರು ತಮ್ಮ ಸಮಸ್ಯೆಗಳನ್ನು ಮುಂದಿಟ್ಟು ಮಾಡಿದ ಮನವಿ, ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಪೀಠ ನಿರಾಕರಿಸಿತು. Sorry, ಕಂಟಿನ್ಯೂ ಎಂದು ನ್ಯಾಯಮೂರ್ತಿಗಳು ಹೇಳಿದರು.

ರಾಜ್ಯಕ್ಕೆ ಬರೆ ಎಳೆಯುವ ತೀರ್ಮಾನ

ಆದರೆ, ಯಾವ ಮಾತುಗಳನ್ನೂ ಕೇಳಲು ನಿರಾಕರಿಸಿದ ನ್ಯಾಯಮೂರ್ತಿ ಬಿ.ಆರ್‌. ಗವಾಯಿ ಅವರು ಅಂತಿಮವಾಗಿ ರಾಜ್ಯಕ್ಕೆ ಬರೆಯುವ ತೀರ್ಮಾನವನ್ನು ಪ್ರಕಟಿಸಿದರು.

CWRC ಮತ್ತು CWMA ಎರಡರಲ್ಲೂ ಜಲ, ಕೃಷಿ ತಜ್ಞರು ಇದ್ದಾರೆ. ಬರ, ಮಳೆ ಕೊರತೆ ಆಧರಿಸಿ ತೀರ್ಮಾನ ಕೈಗೊಂಡಿದ್ದಾರೆ. ಅಲ್ಲದೆ ಮತ್ತಿತರ ವಿಚಾರಗಳನ್ನು ಪರಿಗಣಿಸಿ ನೀರು ಬಿಡುಗಡೆ ತೀರ್ಮಾನ ಮಾಡಿದ್ದಾರೆ. ಸರಾಸರಿ ಒಳಹರಿವು ಕಡಿಮೆ ಆಗಿದೆ. ಸಂಕಷ್ಟ ಪರಿಸ್ಥಿತಿ ಈಗಲೂ ಇದೆ. ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಕೊರತೆ ಇದೆ. ಇದನ್ನೆಲ್ಲ ಕಾವೇರಿ ಸಮಿತಿ ಮತ್ತು ಪ್ರಾಧಿಕಾರ ಆದ್ಯತೆಗೆ ತೆಗೆದುಕೊಂಡಿದೆ. ಹಾಗಾಗಿ ಎರಡು ಸಮಿತಿ ಮತ್ತು ಪ್ರಾಧಿಕಾರಗಳ ಅದೇಶಗಳನ್ನ ತಡೆಹಿಡಿಯಲು ಸಾಧ್ಯ ಇಲ್ಲ ಎಂದು ನ್ಯಾಯಮೂರ್ತಿ ಗವಾಯಿ ಹೇಳಿದರು.

ಇತ್ತ ಮೇಕೆದಾಟು ಯೋಜನೆ ಅನುಮತಿ ಕೊಡಬೇಕು ಎಂದು ಕೇಳಿಕೊಂಡಾಗಲೂ ಅದನ್ನು ನೋಡಿಕೊಳ್ಳಲು ಪ್ರಾಧಿಕಾರ ಇದೆಯಲ್ಲ ಎಂಬ ಮಾತನ್ನೇ ನ್ಯಾಯಮೂರ್ತಿಗಳು ಹೇಳಿದರು.

ಅಂತಿಮವಾಗಿ ಇನ್ನು 15 ದಿನ ಪ್ರತಿ ದಿನವೂ 5000 ಕ್ಯೂಸೆಕ್ ನೀರು ಬಿಡಬೇಕು. ಬಳಿಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಗಳನ್ನು ನಡೆಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಪೀಠ ಹೇಳಿತು. ವಿಚಾರಣೆಯನ್ನು ಎರಡು ವಾರಗಳಿಗೆ ಮುಂದಕ್ಕೆ ಹಾಕಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Terrorist Arrested: ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಶಂಕಿತ ಉಗ್ರನ ಸೆರೆಯಾಗಿದೆ. ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

VISTARANEWS.COM


on

Terrorist Arrested
Koo

ಬೆಂಗಳೂರು: ನಗರದ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನು ಎನ್‌ಐಎ ಬಂಧಿಸಿದೆ. 2014ರಲ್ಲಿ ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಶಂಕಿತ ಉಗ್ರನ (Terrorist Arrested) ಸೆರೆಯಾಗಿದೆ.

ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಶಂಕಿತ ಉಗ್ರ. ಮೈಸೂರಿನ ರಾಜೀವ ನಗರದಲ್ಲಿ ಶಂಕಿತ ಉಗ್ರನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ 2014ರಲ್ಲಿ ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಟ್ರಿನಿಟಿ ಸರ್ಕಲ್ ಬಳಿ ಇರುವ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ.

ಇನ್ನು ಕೊಲಂಬೋದಲ್ಲಿರುವ ಪಾಕಿಸ್ತಾನಿ ಹೈ ಕಮೀಷನ್‌ ಕಚೇರಿನಲ್ಲಿ ಉದ್ಯೋಗಿಯಾಗಿರುವವನ ಜತೆ ಸಂಪರ್ಕ ಹೊಂದಿದ್ದ ಶಂಕಿತ ಉಗ್ರ, ಪಾಕಿಸ್ತಾನಿ ಪ್ರಜೆ ಅಮೀರ್ ಜುಬೇರ್ ಸಿದ್ಧಿಕಿಯ ಆಣತಿ ಮೇರೆಗೆ ಕಾರ್ಯ ನಿರ್ವಹಿಸುತ್ತಿದ್ದ. ಜತೆಗೆ ಪಾಕಿಸ್ತಾನಿ ಬೇಹುಗಾರರಿಗೆ ನೂರುದ್ದೀನ್ ಹಣ ಸಹಾಯ ಮಾಡುತ್ತಿದ್ದ. ಸದ್ಯ ಮೈಸೂರಿನಲ್ಲಿ ವಶಕ್ಕೆ ಪಡೆದ ಶಂಕಿತನಿಂದ ಒಂದು ಡ್ರೋನ್, ಮೊಬೈಲ್, ಲ್ಯಾಪ್ ಟಾಪ್, ಪೆನ್ ಡ್ರೈವ್ ವಶಕ್ಕೆ ಪಡೆಯಲಾಗಿದೆ.

ಈ ಹಿಂದೆ ಹೈದರಾಬಾದ್ ಬೇಹುಗಾರಿಕಾ ಪ್ರಕರಣದಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಶಂಕಿತ ಉಗ್ರ ನೂರುದ್ದೀನ್ ಸುಳಿವು ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) 5 ಲಕ್ಷ ಬಹುಮಾನ ಘೋಷಿಸಿತ್ತು. 2023ರ ಆಗಸ್ಟ್‌ನಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಚೆನ್ನೈನ NIA ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದಾಗ ನೂರುದ್ದೀನ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು.

ಇದನ್ನೂ ಓದಿ | Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಶ್ರೀಲಂಕಾದ ಪ್ರಜೆ ಮುಹಮ್ಮದ್‌ ಸಕೀರ್‌ ಹುಸೇನ್ ಮತ್ತು ಕೊಲಂಬೋದಲ್ಲಿನ ಪಾಕಿಸ್ತಾನ ಹೈಕಮೀಷನ್‌ ಕಚೇರಿ ಉದ್ಯೋಗಿ, ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ಧಿಕಿ ಸೇರಿ ಚೆನ್ನೈನ ಯುಎಸ್ ಕಾನ್ಸುಲೇಟ್‌ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು. ಆ ಸಂದರ್ಭದಲ್ಲಿ ಆರೋಪಿ ನೂರುದ್ದೀನ್‌, ಪಾಕಿಸ್ತಾನಿ ಪ್ರಜೆಯ ಆದೇಶದ ಮೇರೆಗೆ ನಕಲಿ ನೋಟುಗಳನ್ನು ಪೂರೈಸುವ ಮೂಲಕ ದೇಶ ವಿರೋಧಿ ಬೇಹುಗಾರಿಕೆ ಚಟುವಟಿಕೆಗಳಿಗೆ ಹಣಕಾಸು ನೆರವು ಒದಗಿಸುತ್ತಿದ್ದ ಎಂದು ಎನ್ಐಎ ತನಿಖೆಯಲ್ಲಿ ಬಹಿರಂಗವಾಗಿದೆ.

ನೂರುದ್ದೀನ್ ತಲೆಮರೆಸಿಕೊಂಡ ನಂತರ ಸ್ಥಗಿತಗೊಂಡಿದ್ದ ಆತನ ವಿರುದ್ಧದ ವಿಚಾರಣೆ ಈಗ ಪುನರಾರಂಭವಾಗಲಿದೆ ಎಂದು ಎನ್‌ಐಎ ಮಾಹಿತಿ ನೀಡಿದೆ.

Continue Reading

ಕ್ರೀಡೆ

DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

DP Manu: ಫೆಡರೇಷನ್ ಕಪ್‌ನಲ್ಲಿ (82.06 ಮೀ) ಭರ್ಜಿ ಎಸೆದು ಭರವಸೆ ಮೂಡಿಸಿರುವ 23 ವರ್ಷದ ಡಿ.ಪಿ. ಮನು ಅವರು ಹಾಸನ(D. P. Manu Hassan) ಜಿಲ್ಲೆ ಬೇಲೂರು ತಾಲೂಕು ಕುಪ್ಪಗೋಡು ಗ್ರಾಮದವರು. ಹೊಯ್ಸಳ ಶಾಲೆಯಲ್ಲಿ ಓದುವಾಗಲೇ ಭರ್ಜಿಯತ್ತ ಆಕರ್ಷಣೆ ಬೆಳೆಸಿಕೊಂಡ ಮನು ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ಕಠಿಣ ತರಬೇತಿ ಪಡೆದರು. ಇಲ್ಲಿ ತೋರಿದ ಪ್ರದರ್ಶನವು ಇಂದು ಚಿಗುರು ಮೀಸೆ ಹುಡುಗನನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದೆ.

VISTARANEWS.COM


on

DP Manu
Koo

ಬೆಂಗಳೂರು: ಬುಧವಾರ ನಡೆದ ಫೆಡರೇಷನ್ ಕಪ್‌ನಲ್ಲಿ(Federation Cup 2024) ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ(Neeraj Chopra) ಅವರಿಗೆ ಬೆವರಿಳಿಸುಂತೆ ಮಾಡಿ ಸಣ್ಣ ಅಂತರದಿಂದ ಚಿನ್ನದ ಪದಕದಿಂದ ವಂಚಿತರಾಗಿ ಬೆಳ್ಳಿ ಪದಕ ಗೆದ್ದ ಡಿ.ಪಿ ಮನು(DP Manu) ಅಪ್ಪಟ ಕನ್ನಡಿಗ. ಇವರ ಪೂರ್ಣ ಹೆಸರು ದೇವರಕೇಶವಿ ಪ್ರಕಾಶ ಮನು (ಡಿ.ಪಿ. ಮನು ಎಂದೇ ಖ್ಯಾತಿ). ಈಗಾಗಲೇ ಇವರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆಗೈದಿದ್ದಾರೆ. ಇದೇ ರೀತಿಯ ಪ್ರದರ್ಶನ ತೋರಿದರೆ ಮುಂದಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಇನ್ನೂ ಉತ್ತಮ ಸಾಧನೆ ಮಾಡುವುದರಲ್ಲಿ ಎರಡು ಮಾತಿಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ. 

ಡಿ.ಪಿ. ಮನು ಹಿನ್ನೆಲೆ


ಫೆಡರೇಷನ್ ಕಪ್‌ನಲ್ಲಿ (82.06 ಮೀ) ಭರ್ಜಿ ಎಸೆದು ಭರವಸೆ ಮೂಡಿಸಿರುವ 23 ವರ್ಷದ ಡಿ.ಪಿ. ಮನು ಅವರು ಹಾಸನ(D. P. Manu Hassan) ಜಿಲ್ಲೆ ಬೇಲೂರು ತಾಲೂಕು ಕುಪ್ಪಗೋಡು ಗ್ರಾಮದವರು. ತಂದೆ ಪ್ರಕಾಶ ಹಾಗೂ ತಾಯಿ ಸುಜಾತಾ. ಹೊಯ್ಸಳ ಶಾಲೆಯಲ್ಲಿ ಓದುವಾಗಲೇ ಭರ್ಜಿಯತ್ತ ಆಕರ್ಷಣೆ ಬೆಳೆಸಿಕೊಂಡ ಮನು ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ಕಠಿಣ ತರಬೇತಿ ಪಡೆದರು. ಇದೇ ವೇಳೆ ಮನು ಅವರು ಅಂತಾರಾಜ್ಯ, ಜೂನಿಯರ್‌ ರಾಷ್ಟ್ರೀಯ ಕೂಟಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡರು. ಆಳ್ವಾಸ್‌ ಕಾಲೇಜಿನಲ್ಲಿ ಅವರು ಪಡೆದ ತರಬೇತಿ, ನೀಡಿದ ಪ್ರದರ್ಶನವು ಚಿಗುರು ಮೀಸೆ ಹುಡುಗನನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದೆ.

ಕಳೆದ ವರ್ಷ ನಡೆದಿದ್ದ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಮನು (84.14 ಮೀ.) 6ನೇ ಸ್ಥಾನ ಪಡೆದು ಭಾರೀ ಸಂಚಲನ ಮೂಡಿಸಿದ್ದರು. ಅಲ್ಲದೆ 2023ರಲ್ಲಿ ನಡೆದ ಏಶ್ಯನ್​ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದರು. ಇಂದು ನಡೆದ ಫೆಡರೇಷನ್ ಕಪ್‌ನಲ್ಲಿ (82.06 ಮೀ) ಬೆಳ್ಳಿ ಗೆದ್ದಿದ್ದಾರೆ. ಮೂರನೇ ಸುತ್ತಿನ ವರೆಗೂ ಅಗ್ರಸ್ಥಾನ ಕಾಯ್ದುಕೊಂಡು ಅನುಭವಿ ನೀರಜ್​ಗೆ ಒಂದು ಕ್ಷಣ ಬೆವರಿಳಿಸುವಂತೆ ಮಾಡಿದ್ದು ನಿಜಕ್ಕೂ ಸಣ್ಣ ಮಾತಲ್ಲ. ನೀರಜ್​ ಗೆಲುವಿನ ಅಂತರ 82.27 ಮೀ.

ಇದನ್ನೂ ಓದಿ Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

ಕಾಶಿನಾಥ ನಾಯ್ಕ್ ಗರಡಿಯಲ್ಲಿ ಬೆಳೆದ ಪ್ರತಿಭೆ


ಮನು ಅವರು ಕಾಶಿನಾಥ ನಾಯ್ಕ್​ ಅವರ ಗರಡಿಯಲ್ಲಿ ಬೆಳೆದು ಬಂದ ಪ್ರತಿಭೆ. 2020ರಲ್ಲಿ ಡಿ.ಪಿ.ಮನು ಅವರಿಗೆ ಮಹತ್ವದ ತಿರುವು ಸಿಕ್ಕಿತು. ಅವರು ಪುಣೆಯಲ್ಲಿರುವ ಆರ್ಮಿ ಸ್ಪೋರ್ಟ್ಸ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಹವಾಲ್ದಾರ್‌ ಕೆಲಸಕ್ಕೆ ಸೇರಿದರು. ಇದೇ ವೇಳೆ ಕಾಶಿನಾಥ ನಾಯ್ಕ್​ ಅವರ ಪರಿಚಯವಾಯಿತು. ಕಾಶಿನಾಥ ಅವರ ಬಳಿ ಸತತ ತರಬೇತಿ ಪಡೆದ ಮನು, 65 ಮೀಟರ್‌ ದೂರ ಭರ್ಜಿ ಎಸೆತದಿಂದ 80 ಮೀಟರ್‌ ದಾಟುವಂತಾದರು. ಇದೀಗ ವಿಶ್ವ ಚಾಂಪಿಯನ್​ ನೀರಜ್​ಗೆ ತೀವ್ರ ಪೈಪೋಟಿ ನೀಡುವಷ್ಟರ ಮಟ್ಟಿಗೆ ಬೆಳೆದು ನಿಂತಿದ್ದಾರೆ. ನೀರಜ್​ ಕೂಡ ಕಾಶಿನಾಥ ನಾಯ್ಕ್ ಮಾರ್ಗದರ್ಶನದಲ್ಲೇ ಬೆಳೆದು ಬಂದ ಪ್ರತಿಭೆಯಾಗಿದ್ದಾರೆ. ಒಟ್ಟಿನಲ್ಲಿ ಕನ್ನಡಿಗರೊಬ್ಬರು ಜಾವೆಲಿನ್‌ ಥ್ರೋ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡುತ್ತಿದ್ದು, ಅವರು ಒಲಿಂಪಿಕ್ಸ್‌ಗೂ ಆಯ್ಕೆಯಾಗಲಿ, ಅಲ್ಲೂ ರಾಜ್ಯ, ದೇಶದ ಘನತೆ ಹೆಚ್ಚಿಸಲಿ ಎಂದು ಆಶಿಸೋಣ.


ಮನು ಮಾಡಿದ ಸಾಧನೆಗಳು

  1. 1. 2023ರ ಜುಲೈನಲ್ಲಿ ಬ್ಯಾಂಕಾಕ್‌ನಲ್ಲಿ ನಡೆದ ಏಷ್ಯನ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಬೆಳ್ಳಿ

    2. 2023ರಲ್ಲಿ ನಡೆದಿದ್ದ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ 6ನೇ ಸ್ಥಾನ
  2. 3. 2024ರಲ್ಲಿ ನಡೆದ ಫೆಡರೇಷನ್ ಕಪ್‌ನಲ್ಲಿ ಬೆಳ್ಳಿ ಪದಕ

    4. 2022ರ ಜೂನ್‌ನಲ್ಲಿ ನಡೆದ ರಾಷ್ಟ್ರೀಯ ಅಂತಾರಾಜ್ಯ ಹಿರಿಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಚಿನ್ನದ ಪದಕ
  3. 5. 2023ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್‌ ಗ್ರ್ಯಾಂಡ್‌ ಪ್ರಿಕ್ಸ್‌ನಲ್ಲಿ ಚಿನ್ನ
  4. 6. 2022ರ ಏಪ್ರಿಲ್‌ನಲ್ಲಿ ಕೇರಳದ ತಿರುವನಂಪುರಂನಲ್ಲಿ ನಡೆದ ಇಂಡಿಯನ್‌ ಗ್ರ್ಯಾಂಡ್‌ ಪ್ರಿಕ್ಸ್‌ನಲ್ಲಿ ಬಂಗಾರದ ಪದಕ
  5. 7. 2022ರ ಆಗಸ್ಟ್‌ನಲ್ಲಿ ನಡೆದ ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಐದನೇ ಸ್ಥಾನಕ್ಕೆ ತೃಪ್ತಿ
  6. 8. 2022ರ ಅಕ್ಟೋಬರ್‌ನಲ್ಲಿ ಗುಜರಾತ್‌ನಲ್ಲಿ ನಡೆದ ಇಂಡಿಯನ್‌ ನ್ಯಾಷನಲ್‌ ಗೇಮ್ಸ್‌ನಲ್ಲಿ ಚಿನ್ನ

Continue Reading

ಕರ್ನಾಟಕ

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Davanagere News: ದಾವಣಗೆರೆ ಸಮೀಪದ ಎಲೆಬೇತೂರಿನ ಕೆರೆಯಲ್ಲಿ ಲಕ್ಷಾಂತರ ಮೀನುಗಳು ಮೃತಪಟ್ಟಿವೆ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ ಪರಿಹಾರ ನೀಡುವಂತೆ ಮೀನು ಸಾಕಾಣಿಕೆದಾರರು ಮನವಿ ಮಾಡಿದ್ದಾರೆ.

VISTARANEWS.COM


on

Davanagere News
Koo

ದಾವಣಗೆರೆ: ಕೆರೆಯಲ್ಲಿ 1 ಲಕ್ಷಕ್ಕೂ ಅಧಿಕ ಮೀನುಗಳ ಮಾರಣ ಹೋಮವಾಗಿರುವ ಘಟನೆ ದಾವಣಗೆರೆ (Davanagere News) ಸಮೀಪದ ಎಲೆಬೇತೂರಿನ ಕೆರೆಯಲ್ಲಿ ನಡೆದಿದೆ. ಅಧಿಕ ಬಿಸಿಲಿನ ತಾಪಕ್ಕೆ ಮೀನುಗಳು ಮೃತಪಟ್ಟಿರಬಹುದಾ ಅಥವಾ ಹಳೇ ವೈಷಮ್ಯದಿಂದ ಯಾರಾದರೂ ಕೆರೆಗೆ ವಿಷ ಬೆರೆಸಿದ್ದರಿಂದ ಮೀನುಗಳು ಸಾವಿಗೀಡಾಗಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ.

ಕೆರೆಯಲ್ಲಿ 1.50 ಲಕ್ಷ ಮೀನುಗಳನ್ನು ಸಾಕಲಾಗಿತ್ತು. ಅದರಲ್ಲಿ 40 ಸಾವಿರ ಮೀನು ಹಿಡಿದು ಮಾರಲಾಗಿತ್ತು. ಇನ್ನುಳಿದ ಸುಮಾರು ಲಕ್ಷಕ್ಕೂ ಅಧಿಕ ಮೀನುಗಳು ಸಾವನ್ನಪ್ಪಿವೆ ಎನ್ನಲಾಗಿದೆ. ಬರೋಬ್ಬರಿ 5ರಿಂದ 10 ಕೆಜಿ ಇರುವ ಮೀನುಗಳು ಮೃತಪಟ್ಟು, ಕೆರೆಯಲ್ಲಿ ತೇಲುತ್ತಿವೆ. ಸತ್ತ ಮೀನುಗಳನ್ನು ನೋಡಿ ಮೀನು ಸಾಕಾಣಿಕೆದಾರರು ಕಂಗಾಲಾಗಿದ್ದು, ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ | Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ದಾವಣಗೆರೆ: ಕುರಿಗೆ ಮೇವು ತರಲು ಹೋಗಿದ್ದ ಯುವಕ‌ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ಬಿ.ಚಿತ್ತಾನಹಳ್ಳಿಯಲ್ಲಿ ನಡೆದಿದೆ. ಬಸವರಾಜ್ (18) ಮೃತ ದುರ್ದೈವಿ. ದಿವಂಗತ ಮಂಜುನಾಥ್, ಸೀತಮ್ಮ ದಂಪತಿಗಳ ದ್ವಿತೀಯ ಪುತ್ರ ಬಸವರಾಜ್ ಮುಂಜಾನೆ ಕುರಿಗಳಿಗೆ ಮೇವು ತರಲು ತೆರಳಿದ್ದ ವೇಳೆ ಅವಘಡ ನಡೆದಿದೆ.

ಮರ ಹತ್ತಿ ಸೊಪ್ಪು ಕತ್ತರಿಸುವ ವೇಳೆ ವಿದ್ಯುತ್ ತಗುಲಿ ಯುವಕ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕ್ರೀಡೆ

IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

IPL 2024: ಆರೋಗ್ಯ ಹದಗೆಡಲು ಸ್ಟೇಡಿಯಂನ ಕ್ಯಾಂಟಿನ್​ನಲ್ಲಿ ನೀಡಿದ ಆಹಾರವೇ ಕಾರಣ ಎಂದು ಚೈತನ್ಯ ಕೆಎಸ್​ಸಿಎ ಆಡಳಿತ ಮಂಡಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಕೆಎಸ್​ಸಿಎ ವಿರುದ್ಧ ಎಫ್ಐಆರ್ ದಾಖಲಾಗಿದೆ

VISTARANEWS.COM


on

IPL 2024
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​ನಲ್ಲಿ(IPL 2024) ಡೆಲ್ಲಿ ಮತ್ತು ಆರ್​ಸಿಬಿ(DC vs RCB) ನಡುವೆ ಮೇ 12ರಂದು ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ(M.Chinnaswamy Stadium) ನಡೆದಿದ್ದ ಪಂದ್ಯದ ವೇಳೆ ಪ್ರೇಕ್ಷಕರಿಗೆ ಕಳಪೆ ಆಹಾರ ನೀಡಿದ ಆರೋಪದಡಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ(Karnataka State Cricket Association) ಆಡಳಿತ ಮಂಡಳಿ (KSCA) ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೇ 12ರಂದು ಐಪಿಎಲ್ ವೀಕ್ಷಣೆ ಬಂದಿದ್ದ 23 ವರ್ಷದ ಚೈತನ್ಯ ಕತಾರ್ ಏರ್ ವೇಸ್ ಫ್ಯಾನ್ಸ್ ಟರೇಸ್ ಸ್ಟ್ಯಾಂಡಿನ ಕ್ಯಾಂಟಿನ್ ನಿಂದ ಊಟ ಸೇವಿಸಿದ್ದ ನಂತರ ಕೆಲವೇ ನಿಮಿಷಗಳಲ್ಲಿ ಆತನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತಾನು ಕುಳಿತುಕೊಂಡಿದ್ದ ಜಾಗದಲ್ಲಿಯೇ ಚೈತನ್ಯ ಕುಸಿದುಬಿದ್ದಿದ್ದಾನೆ. ತಕ್ಷಣ ಸ್ಟೇಡಿಯಂ ಸಿಬ್ಬಂದಿ ನೆರವಿನಿಂದ ಆತನಿಗೆ ಆ್ಯಂಬುಲೆನ್ಸ್ ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು‌. ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದಾಗ ಚೈತನ್ಯರನ್ನು ಪರೀಕ್ಷಿಸಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

ಈ ಸಂಬಂಧ ತಮ್ಮ ಆರೋಗ್ಯ ಹದಗೆಡಲು ಕ್ಯಾಂಟಿನ್​ನಲ್ಲಿ ನೀಡಿದ ಆಹಾರವೇ ಕಾರಣ ಎಂದು ಚೈತನ್ಯ ಕೆಎಸ್​ಸಿಎ ಆಡಳಿತ ಮಂಡಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಕೆಎಸ್​ಸಿಎ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದ ವೇಳೆ ಕಳಪೆ ಆಹಾರ ನೀಡುತ್ತಿರುವ ಆರೋಪ ಕೇಳಿಬರುತ್ತಿರುವುದು ಇದೇ ಮೊದಲೇನಲ್ಲ. ಹಲವು ಬಾರಿ ಇಲ್ಲಿ ಪಂದ್ಯ ವೀಕ್ಷಣೆಗೆ ಬಂದಿದ್ದ ಪ್ರೇಕ್ಷಕರು ಇಲ್ಲಿನ ಆಹಾರ ವಿತರಣೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಗಂಭೀರ ಆರೋಪ ಮಾಡಿದ್ದರು. ಇನ್ನಾದರೂ ಕೆಎಸ್​ಸಿಎ ಈ ಬಗ್ಗೆ ಎಚ್ಚೆತ್ತುಕೊಂಡು ಉತ್ತಮ ಆಹಾರ ನೀಡುವ ಕೆಲಸವನ್ನು ಮಾಡಬೇಕಿದೆ. ಡೆಲ್ಲಿ ವಿರುದ್ಧದ ಈ ಪಂದ್ಯವನ್ನು ಆರ್​ಸಿಬಿ 47 ರನ್​ ಅಂತರದಿಂದ ಗೆದ್ದು ಬೀಗಿತ್ತು.

ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲ ನೀರಿನ ಮೂಲದ ವಿವರ ಕೇಳಿದ ಎನ್‌ಜಿಟಿ!


ಬೆಂಗಳೂರಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದ್ದ ವೇಳೆಯೂ(bangalore water crisis) ಚಿನ್ನಸ್ವಾಮಿ(m chinnaswamy) ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) 17ನೇ ಆವೃತ್ತಿಯ ಐಪಿಎಲ್(IPL 2024) ಟೂರ್ನಿಯ​ ಪಂದ್ಯಾವಳಿಗಳನ್ನು ನಡೆಸಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. 3 ವಾರಗಳ ಹಿಂದೆ ನೀರಿನ ಬಳಕೆ ಕುರಿತು ರಾಷ್ಟ್ರೀಯ ಹಸಿರು ಪ್ರಾಧಿಕಾರ(ಎನ್‌ಜಿಟಿ) ವರದಿ ಕೇಳಿತ್ತು. ಪಂದ್ಯಗಳಿಗೆ ಬಳಸಿರುವ ನೀರಿನ ಮೂಲ ಹಾಗೂ ಕ್ರೀಡಾಂಗಣದಲ್ಲಿರುವ 400 ಅಡಿ ಆಳದ ನಾಲ್ಕು ಕೊಳವೆ ಬಾವಿಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಎನ್‌ಜಿಟಿ ಮುಖ್ಯಸ್ಥ ನ್ಯಾ. ಪ್ರಕಾಶ್ ಶ್ರೀವಾಸ್ತವ ಅವರಿದ್ದ ಪೀಠವು, ಕ್ರೀಡಾಂಗಣದಲ್ಲಿ ಬಳಕೆಯಾಗುತ್ತಿರುವ ನೀರಿನ ಎಲ್ಲಾ ಮೂಲ, ಕ್ರೀಡಾಂಗಣದಲ್ಲಿರುವ ಬೋರ್‌ವೆಲ್‌, ಒಳಚರಂಡಿ ಸಂಸ್ಕರಣಾ ಘಟಕದ ಬಳಕೆ ಬಗ್ಗೆ 4 ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್​ 13ಕ್ಕೆ ನಿಗದಿಪಡಿಸಿದೆ.

Continue Reading
Advertisement
Shyam Rangeela
ದೇಶ7 mins ago

Shyam Rangeela: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದ ಕಲಾವಿದನ ನಾಮಪತ್ರ ತಿರಸ್ಕಾರ!

Terrorist Arrested
ಕರ್ನಾಟಕ50 mins ago

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Monsoon 2024
ದೇಶ58 mins ago

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

DP Manu
ಕ್ರೀಡೆ1 hour ago

DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

Davanagere News
ಕರ್ನಾಟಕ2 hours ago

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Robert Fico
ವಿದೇಶ2 hours ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಮೇಲೆ ಗುಂಡಿನ ದಾಳಿ; ಭೀಕರ ವಿಡಿಯೊ ಇಲ್ಲಿದೆ

Federation Cup 2024
ಕ್ರೀಡೆ2 hours ago

Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

Tips For Healthy Skin
ಆರೋಗ್ಯ2 hours ago

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

Driving Tips
ಕ್ರೈಂ2 hours ago

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

Online scams
Latest3 hours ago

Online scams: ಹೆರಿಗೆ ರಜೆಯಲ್ಲಿದ್ದಾಗ ದುಡ್ಡು ಸಂಪಾದಿಸಲು ಹೋಗಿ 54 ಲಕ್ಷ ರೂ. ಕಳೆದುಕೊಂಡಳು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ15 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ17 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌