CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ? - Vistara News

ಕರ್ನಾಟಕ

CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

CET 2024: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಿರುವುದು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿದೆ. ಇದರ ಬೆನ್ನಲ್ಲೇ, ತಜ್ಞರ ಸಮಿತಿಯ ವರದಿ ಆಧಾರದ ಮೇಲೆ ಸೋಮವಾರ ರಾಜ್ಯ ಸರ್ಕಾರವು ಅಂತಿಮ ನಿರ್ಧಾರ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ, ಎಲ್ಲರ ಗಮನವೀಗ ರಾಜ್ಯ ಸರ್ಕಾರದ ತೀರ್ಮಾನದ ಮೇಲಿದೆ.

VISTARANEWS.COM


on

CET
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಎಂಜಿನಿಯರಿಂಗ್‌ ಸೇರಿ ಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (CET 2024) ಔಟ್‌ ಆಫ್‌ ಸಿಲಬಸ್‌ (Out Of Syllabus) ಪ್ರಶ್ನೆಗಳನ್ನು ಕೇಳಿರುವ ಬಗ್ಗೆ ಪರಿಶೀಲನೆ ನಡೆಸಲು ರಚಿಸಿರುವ ತಜ್ಞರ ಸಮಿತಿಯು ರಾಜ್ಯ ಸರ್ಕಾರಕ್ಕೆ (Karnataka Government) ವರದಿ ಸಲ್ಲಿಸಿದೆ. ತಜ್ಞರ ಸಮಿತಿಯ ವರದಿ ಅನ್ವಯ ರಾಜ್ಯ ಸರ್ಕಾರವು ಸೋಮವಾರ (ಏಪ್ರಿಲ್‌ 29) ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದ್ದು, ಮರು ಪರೀಕ್ಷೆ ನಡೆಸಲಾಗುತ್ತದೆಯೋ ಅಥವಾ ಗ್ರೇಸ್‌ ಅಂಕಗಳನ್ನು ನೀಡಲಾಗುತ್ತದೆಯೋ ಎಂಬ ಕುತೂಹಲ ವಿದ್ಯಾರ್ಥಿಗಳಲ್ಲಿ ಮೂಡಿದೆ.

ಪಿಯು ಬೋರ್ಡ್‌ ಹಾಗೂ ಕೆಇಎ ನಡುವೆ ಪಠ್ಯಕ್ರಮದ ಕುರಿತು ಪತ್ರಗಳ ಸಮರ ನಡೆದಿದೆ. ಇದರ ಮಧ್ಯೆಯೇ, ಸಿಇಟಿ ಗೊಂದಲವೂ ವಿದ್ಯಾರ್ಥಿಗಳನ್ನು ಆತಂಕಕ್ಕೀಡು ಮಾಡಿದೆ. ಹಾಗಾಗಿ, ಸಿಇಟಿ ವೇಳೆ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಲು ಏನು ಕಾರಣ? ಎಲ್ಲಿ ಲೋಪವಾಯಿತು ಎಂಬುದರ ಕುರಿತು ವರದಿ ಆಧರಿಸಿ ರಾಜ್ಯ ಸರ್ಕಾರವು ಸೋಮವಾರವೇ ತೀರ್ಮಾನ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನವೀಗ ರಾಜ್ಯ ಸರ್ಕಾರದ ಮೇಲಿದೆ.

cet exam karnataka exam authority

ಎಂಜಿನಿಯರಿಂಗ್‌ ಸೇರಿ ಇನ್ನಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏಪ್ರಿಲ್‌ 18 ಮತ್ತು 19ರಂದು ಸಿಇಟಿ ಪರೀಕ್ಷೆಯಲ್ಲಿ ಔಟ್‌ ಆಫ್‌‌‌ ಸಿಲಬಸ್‌‌ ಪ್ರಶ್ನೆಗಳ ಕುರಿತಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರ ಆಕ್ರೋಶ ಈಗಾಗಲೇ ಭುಗಿಲೆದ್ದಿದೆ. 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ಆರೋಪ ಮಾಡಲಾಗಿದೆ. ಭೌತಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರದಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೇಳಲಾಗಿತ್ತು. ಹೀಗಾಗಿ ಪಿಯು ಬೋರ್ಡ್‌ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಡುವೆ ಪತ್ರ ಸಮರವೂ ನಡೆದಿತ್ತು. ಕೊನೆಗೆ ಎಚ್ಚೆತ್ತ ಸರ್ಕಾರ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿತ್ತು.

ಪ್ರತಿ ಪತ್ರಿಕೆಯೂ 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಎಷ್ಟು ಪ್ರಶ್ನೆಗಳು ಪಠ್ಯಕ್ಕೆ ಹೊರತಾಗಿವೆಯೋ ಅಷ್ಟು ಕೃಪಾಂಕ ನೀಡಬಹುದು. ಹಾಗೆ ನೀಡಿದರೆ ಪ್ರತಿಭಾವಂತರಿಗೆ ಅನ್ಯಾಯವಾಗುತ್ತದೆ. ಪಿಯು ಅಂಕಗಳನ್ನಷ್ಟೇ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಿದರೆ ಸಿಇಟಿ ಉದ್ದೇಶ, ಮಾಡಿದ ಖರ್ಚು ವ್ಯರ್ಥವಾಗುತ್ತದೆ. ಹಾಗಾಗಿ, ಮರು ಪರೀಕ್ಷೆ ನಡೆಸುವ ಅಥವಾ ಪಠ್ಯಕ್ಕೆ ಹೊರತಾದ ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳನ್ನಷ್ಟೇ ಮೌಲ್ಯಮಾಪನ ಮಾಡಿ ಶೇ.100ಕ್ಕೆ ಪರಿಗಣಿಸಿ ಫಲಿತಾಂಶ ಪ್ರಕಟಿಸಲು ಕೆಇಎ ಹಾಗೂ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಪದವಿ ಪೂರ್ಣ ಶಿಕ್ಷಣ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಕೈಬಿಟ್ಟಿರುವ ಪಾಠದ ಪ್ರಶ್ನೆಗಳನ್ನು ಕೇಳಿರುವ ಕುರಿತು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಆರೋಪಿಸಿದ್ದರು. ಹಾಗಾಗಿ, ರಾಜ್ಯ ಸರ್ಕಾರವು ಪರಿಶೀಲನೆ ನಡೆಸಲು ತಜ್ಞರ ಸಮಿತಿ ರಚಿಸಿತ್ತು. ತಜ್ಞರ ಸಮಿತಿಯು ಏಪ್ರಿಲ್‌ 25ರಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಇದನ್ನೂ ಓದಿ: UPSC EXAM-2023: ಲಕ್ಷಾಂತರ ರೂಪಾಯಿ ಸಂಬಳವಿದ್ದ ಉದ್ಯೋಗವನ್ನೇ ತೊರೆದಿದ್ದ ಯುಪಿಎಸ್‌ಸಿ ಟಾಪರ್ ಆದಿತ್ಯ ಶ್ರೀವಾಸ್ತವ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading
Advertisement
Latest1 day ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ1 day ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest1 day ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest1 day ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ3 days ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌